ಫರಂಗಿಪೇಟೆ: ಸಂಬಂಧಿಕರ ಮನೆಗೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು; 3.5 ಲಕ್ಷ ಮೌಲ್ಯದ ನಗ-ನಗದು ಕಳವು

ಬಂಟ್ವಾಳ ತಾಲೂಕಿನ ಪುದು ಗ್ರಾಮದ ಪೆರಿಯಾರ್ ನ ಬಾಲ್ಪಬೊಟ್ಟು ನಿವಾಸಿ ಮುಹಮ್ಮದ್ ಇಕ್ಬಾಲ್ ಮನೆಗೆ ಸೆಪ್ಟೆಂಬರ್ 8 ರಂದು ಮನೆಗೆ ನುಗ್ಗಿದ ಕಳ್ಳರು ಮನೆಯ ಬಾಗಿಲಿನ ಚಿಲಕ ಮುರಿದು 3.54 ಲಕ್ಷ ರೂ. ಮೌಲ್ಯದ ನಗ-ನಗದು ಕಳವು ಮಾಡಿದ ಘಟನೆ ವರದಿಯಾಗಿದೆ. ವೃತ್ತಿಯಲ್ಲಿ ಕ್ಯಾಟರಿಂಗ್ ಕೆಲಸ ಮಾಡುತ್ತಿದ್ದ ಇಕ್ಬಾಲ್ ಸೆಪ್ಟೆಂಬರ್ 8 ರಂದು ಮನೆಗೆ ಬೀಗ ಹಾಕಿ ಕುಟುಂಬ ಸಮೇತ ಬೆಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು. ಸೆಪ್ಟೆಂಬರ್ 12 ರಂದು ಮನೆಗೆ ವಾಪಸ್ ಬಂದಾಗ ಮನೆಯ ಮುಂದಿನ […]

Continue Reading

ರಾಹುಲ್ ಗೆ ‘ವಿಲನ್’ ಪಟ್ಟ ಕಟ್ಟಲು ಬಿಜೆಪಿ, ಕೆಲಮಾಧ್ಯಮಗಳ ಹರ ಸಾಹಸ.! ಸತ್ಯವನ್ನು ಸುಳ್ಳು ಎಂದು ನಂಬಿಸಲು ದೇಶದ ಜನ ಮೂರ್ಖರಲ್ಲ

ಲೋಕಸಭೆ ವಿರೋಧ ಪಕ್ಷದ ನಾಯಕರಾದ ನಂತರ ಇದೇ ಮೊದಲ ಬಾರಿಗೆ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ ರಾಹುಲ್ ಗಾಂಧಿ. ರಾಹುಲ್ ಅಮೆರಿಕಾ ಭೇಟಿ ರಾಜಕೀಯ ವಲಯಗಳಲ್ಲಿ ಭಾರೀ ಸಂಚಲನವನ್ನು ಸೃಷ್ಟಿಸಿದೆ. ಅಮೆರಿಕಾ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಭಾರತೀಯ ಮೂಲದ ಕಮಲಾ ಹ್ಯಾರಿಸ್ ರವರನ್ನು ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಅಮೇರಿಕಾದಲ್ಲಿ ರಾಹುಲ್ ಗಾಂಧಿ ಅನೇಕ ವಿಶ್ವವಿದ್ಯಾಲಯಗಳು, ಅನಿವಾಸಿ ಭಾರತೀಯರ ಸಭೆಯಲ್ಲಿ ಭಾಗವಹಿಸಿ ಸಂವಾದದಲ್ಲಿ ಮೋದಿಯನ್ನು, ಬಿಜೆಪಿಯನ್ನು, ಆರ್ ಎಸ್ ಎಸ್ ಅನ್ನು ಕೆಣಕುತ್ತಿದ್ದಾರೆ. ರಾಹುಲ್ ಗಾಂಧಿ ಭಾಷಣ […]

Continue Reading

ಮೇರಮಜಲು ಗುಂಡಿ ದಾಟಲು ಗುಂಡಿಗೆ ಬೇಕು.!

ಜನಪ್ರತಿನಿಧಿಗಳ ನಿರ್ಲಕ್ಷ್ಯ ಕ್ಕೆ ತುತ್ತಾದ ಅರ್ಕುಳ ದ್ವಾರ -ಮೇರಮಜಲು ರಸ್ತೆ .. ಸಾರ್ವಜನಿಕರು, ರಿಕ್ಷಾ ಯೂನಿಯನ್ ವತಿಯಿಂದ ಪ್ರತಿಭಟನೆಗೆ ಸಿದ್ಧತೆ ಬಂಟ್ವಾಳ ತಾಲೂಕಿನ ಅರ್ಕುಳ ದ್ವಾರ -ಮೇರಮಜಲು ಜಿಲ್ಲಾ ಪಂಚಾಯತ್ ಮುಖ್ಯ ರಸ್ತೆಯ ದಾರುಣ ಕಥೆಯಿದು. ಇಲ್ಲಿ ಗುಂಡಿಗೆ ಇದ್ದವರಷ್ಟೇ ಪ್ರಯಾಣ ನಡೆಸಬಹುದು. ಅಷ್ಟೊಂದು ಮಟ್ಟಿಗೆ ಈ ರಸ್ತೆ ಹದೆಗೆಟ್ಟಿದೆ. ಗುಂಡಿಗಳದ್ದೇ ಕಾರುಬಾರು. ವಾಹನ ಸವಾರರು ಗುಂಡಿಗಳ ಮಧ್ಯೆ ರಸ್ತೆಯನ್ನು ಹುಡುಕುವಂತಾಗಿದೆ. ರಸ್ತೆಯನ್ನೇ ನುಂಗಿದ ಹೊಂಡ ಗುಂಡಿಗಳಲ್ಲಿ ವಾಹನ ಚಲಾಯಿಸುವ ಸಾಹಸವನ್ನು ಈಗ ಮಾಡಬೇಕಾಗಿದೆ. ಇಂತಹದ್ದೊಂದು ನರಕಯಾತನೆಗೆ […]

Continue Reading

ಹೆಲ್ಮೆಟ್‌, ದಾಖಲೆ ಇಲ್ಲದಿದ್ದರೆ ಪೊಲೀಸರು ದಂಡ ವಿಧಿಸುತ್ತಾರೆ. ರಸ್ತೆ ಗುಂಡಿಗಳನ್ನು ಮುಚ್ಚಲು ಕ್ರಮ ಕೈಗೊಳ್ಳದ ಅಧಿಕಾರಿಗಳಿಗೆ ದಂಡ ವಿಧಿಸುವವರು ಯಾರು.?

ರಸ್ತೆ ಗುಂಡಿಯಿಂದಾಗಿ ಅಪಘಾತ ಸಂಭವಿಸಿದರೆ, ಆ ರಸ್ತೆಯ ನಿರ್ವಹಣೆಯ ಹೊಣೆ ಹೊತ್ತ ಇಲಾಖೆಯೇ ಸಂತ್ರಸ್ತರಿಗೆ ಪರಿಹಾರ ನೀಡಬೇಕು: ಹೈಕೋರ್ಟ್‌ ರಸ್ತೆಯ ಗುಂಡಿ- ಹೊಂಡಗಳಿಗೆ ಬಿದ್ದು ಸತ್ತರೂ ಪೊಲೀಸರು ಮಾತ್ರ ಅಜಾಗರೂಕತೆಯ ಚಾಲನೆ ಎಂದು ಷರಾ ಬರೆಯುತ್ತಾರೆ. ಮಳೆಗಾಲ ಆರಂಭವಾಗುತ್ತಿದ್ದಂತೆ ಹಲವು ಕಡೆ ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಎದ್ದು ಅಪಘಾತಕ್ಕೆ ಕಾರಣವಾಗುತ್ತಿದೆ. ಮಳೆ ಬರುವ ಮುಂಚೆ ರಸ್ತೆಗಳ ಪ್ಯಾಚ್‌ ವರ್ಕ್ ಕೆಲಸ ಮಾಡದ ಹಿನ್ನೆಲೆಯಲ್ಲಿ ಆಗ ಸಣ್ಣ ಪ್ರಮಾಣದಲ್ಲಿದ್ದ ಗುಂಡಿಗಳು ಮಳೆಯ ಕಾರಣದಿಂದ ಇದೀಗ ಬೃಹತ್‌ ಹೊಂಡಗಳಾಗಿದೆ. […]

Continue Reading

ಕಮ್ಯೂನಿಸ್ಟ್ ಪಕ್ಷದ ಹಿರಿಯ ನಾಯಕ ಸೀತಾರಾಂ ಯೆಚೂರಿ ವಿಧಿವಶ

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ, ಹಿರಿಯ ನಾಯಕ ಸೀತಾರಾಮ್ ಯೆಚೂರಿ ಅವರು ಗುರುವಾರ ನಿಧನರಾಗಿದ್ದಾರೆ. 72 ವರ್ಷ ಪ್ರಾಯದ ಸೀತಾರಾಂ ಯೆಚೂರಿ ಅವರು ತೀವ್ರ ಉಸಿರಾಟದ ಸೋಂಕಿನಿಂದಾಗಿ ಏಮ್ಸ್ ನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ. ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ (SFI) ಸದಸ್ಯರಾದ ಒಂದು ವರ್ಷದ ನಂತರ 1975 ರಲ್ಲಿ ಸೀತಾರಾಮ್ ಯೆಚೂರಿ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಗೆ ಸೇರಿದರು. ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದಲ್ಲಿ […]

Continue Reading

ಬೆಂಗಳೂರು ಹಿಟ್ ಆ್ಯಂಡ್ ರನ್ ಗೆ ಮೂವರು ವಿದ್ಯಾರ್ಥಿಗಳು ಬಲಿ

ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಿಟ್ ಆ್ಯಂಡ್ ರನ್ ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ತಾಲೂಕಿನ ಚಿಕ್ಕಜಾಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ರೋಹಿತ್ (22), ಸುಚಿತ್ (22) ಹಾಗೂ ಹರ್ಷ (22) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ […]

Continue Reading

ವಿವಾಹವೇ ದಂಧೆ.! ಚಾಲಾಕಿ ಮಹಿಳೆ ಬಗ್ಗೆ ಜಾಗ್ರತೆ ವಹಿಸಲು ಕೋರ್ಟ್ ಸೂಚನೆ

ಹತ್ತು ಪ್ರಕರಣ ದಾಖಲು, ಹನ್ನೊಂದನೇ ಪ್ರಕರಣ ದಾಖಲಾಗುವುದನ್ನು ತಡೆಯಬೇಕಿದೆ: ಹೈಕೋರ್ಟ್ ಹಲವಾರು ಪುರುಷರ ವಿರುದ್ಧ ಕ್ರಿಮಿನಲ್‌ ಪ್ರಕರಣ ಹೂಡಿರುವ ಮಹಿಳೆಯ ಕುರಿತಾದ ಮಾಹಿತಿ ಒಳಗೊಂಡ ದತ್ತಾಂಶವನ್ನು ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳು ರವಾನಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಕ್ರಮಕೈಗೊಳ್ಳುವಂತೆ ನಿರ್ದೇಶಿಸಿರುವ ಕರ್ನಾಟಕ ಹೈಕೋರ್ಟ್‌, ಮತ್ತೊಬ್ಬ ಪುರುಷನ ವಿರುದ್ಧ ಆಕೆ ದೂರು ನೀಡಲು ಬಂದಾಗ ಠಾಣೆಯ ಅಧಿಕಾರಿ ಎಚ್ಚರವಹಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ದೂರುದಾರೆಯಾಗಿರುವ ಕೊಡಗಿನ ಕುಶಾಲನಗರದ ದೀಪಿಕಾಳಿಂದ ನೊಂದ ಹತ್ತನೇ ಪತಿ ಹಾಸನ ಜಿಲ್ಲೆಯ ಸಕಲೇಶಪುರದ ಪಿ.ಕೆ […]

Continue Reading

ಗುರುತುಗಳ ಹೊರೆ ಹೊತ್ತುಕೊಂಡವರ ವರ್ತಮಾನದ ಕತೆ

ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ” ನಾಟಕದಲ್ಲಿ ಶ್ರೀರಾಮ್ ಸ್ವೀಟ್ ಬಾಕ್ಸ್ ಎಂಬ ಹೆಸರಿನಲ್ಲಿ ಬೀಫ್ ಬಾಕ್ಸ್ ಇಟ್ಟಿರುವ ಸಂದೇಶ ಏನು.? ನಗರ ಮತ್ತು ಹಳ್ಳಿಗಳಲ್ಲಿನ ಫ್ಯೂಡಲ್-ಬ್ರಾಹ್ಮಣ್ಯದ ಜಾತಿ ದೌರ್ಜನ್ಯಕ್ಕೆ ಪರಿಹಾರ ಏನು.? ✍️. ನವೀನ್ ಸೂರಿಂಜೆ. ಪತ್ರಕರ್ತರು “ಬಾಬ್ ಮಾರ್ಲಿ ಫ್ರಂ ಕೋಡಿಹಳ್ಳಿ” ನಾಟಕದಲ್ಲಿ ಶ್ರೀರಾಮ್ ಸ್ವೀಟ್ ಬಾಕ್ಸ್ ಎಂಬ ಹೆಸರಿನಲ್ಲಿ ಬೀಫ್ ಬಾಕ್ಸ್ ಅನ್ನು ಇಟ್ಟಿದ್ದರು. ದಲಿತರ ನೋವುಗಳನ್ನು ಪ್ರತಿಬಿಂಬಿಸುವ ನಾಟಕದಲ್ಲಿ ಈ ದೃಶ್ಯ ಅವಶ್ಯಕತೆ ಇತ್ತೆ ?  ಇದರಿಂದ ಅನಾವಶ್ಯಕವಾಗಿ ಒಂದು ಸಮುದಾಯದ ಭಾವನೆಗೆ […]

Continue Reading

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಆರೋಪಿ ಸಂಜಯ್ ರಾಯ್‌ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೊಗಳು ಆತನ ಮೊಬೈಲ್‌ನಲ್ಲಿ ಪತ್ತೆ

ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ತನಿಖೆಯನ್ನು ಸಿಬಿಐ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೊಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಜಯ್ ರಾಯ್‌ ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿರುವ ಇತರೆ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಪತ್ತೆಯಾಗಿವೆ ಎಂದು ತನಿಖಾಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಆಗಸ್ಟ್‌ 9ರಂದು ಆರ್‌.ಜಿ ಕರ್‌ ವೈದ್ಯಕೀಯ […]

Continue Reading

2028 ಕ್ಕೆ ದ.ಕ ಜಿಲ್ಲೆಯಲ್ಲಿ 10 ವಿಧಾನಸಭಾ ಕ್ಷೇತ್ರಗಳು.!

ಮೂಲ್ಕಿ, ಕಡಬ ಹೊಸ ವಿಧಾನಸಭಾ ಕ್ಷೇತ್ರಗಳು.? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 8 ವಿಧಾನಸಭಾ ಕ್ಷೇತ್ರಗಳಿದ್ದು, 2028 ರ ವಿಧಾನಸಭಾ ಚುನಾವಣೆ ವೇಳೆಗೆ ಈ ಸಂಖ್ಯೆ 10 ಕ್ಕೇರಳಿದೆ ಎಂಬ ಮಾಹಿತಿಯೊಂದು ಅಧಿಕಾರಿ ವಲಯಗಳಲ್ಲಿ ಹರಿದಾಡುತ್ತಿದ್ದು, ‌ಶಾಸಕರ ಎದೆಗಳಲ್ಲಿ ಢವ ಢವ ಉಂಟು ಮಾಡಿದೆ. ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಸಂದರ್ಭ ಬಹುತೇಕ ಕ್ಷೇತ್ರಗಳು ಪುನರ್ವಿಂಗಡನೆಯಾಗಲಿದ್ದು, ಹಲವು ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಹೊಸದಾಗಿ ಸೇರ್ಪಡೆಯಾಗಲಿದೆ. ಇದರ ಜೊತೆಗೆ ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಕ್ಷೇತ್ರ […]

Continue Reading