ಅಂಬ್ಯುಲೆನ್ಸ್-ಕಂಟೈನರ್ ಲಾರಿ ಆಕ್ಸಿಡೆಂಟ್..ಐವರಿಗೆ ಗಾಯ.ಮಾಣಿ-ಮೈಸೂರು ಹೆದ್ದಾರಿಯ ಕುಂಬ್ರ ಬಳಿ ಅಪಘಾತ.

ಮಗುವನ್ನು ಚಿಕಿತ್ಸೆಗಾಗಿ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ ಗೆ ಇಂದು ಸಂಜೆ ಮಾಣಿ-ಮೈಸೂರು ಹೆದ್ದಾರಿಯ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜು ಬಳಿ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ. ಆಂಬ್ಯುಲೆನ್ಸ್‌ನಲ್ಲಿದ್ದ ಐವರು ಗಾಯಗೊಂಡಿದ್ಜಾರೆ. ಜಯಪ್ರಕಾಶ್ ಎಂಬವರು ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವೊಂದನ್ನು ಚಿಕಿತ್ಸೆಗೆ ಕರೆದುಕೊಂಡು ಹೋಗುತ್ತಿದ್ದ ಆಂಬ್ಯುಲೆನ್ಸ್(ಕೆಎ 21, ಬಿ 1971) ಗೆ ಪುತ್ತೂರು ಕಡೆಯಿಂದ ಮೈಸೂರಿನತ್ತ ಸಂಚರಿಸುತ್ತಿದ್ದ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದೆ. ಆಂಬ್ಯುಲೆನ್ಸ್ ನಲ್ಲಿದ್ದ ಮಗು ಸಹಿತ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಇನ್ನೊಂದು ಆಂಬ್ಯುಲೆನ್ಸ್‌ ಮೂಲಕ […]

Continue Reading

ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ ತಾಲೂಕು ಅಧ್ಯಕ್ಷ ಪ್ರದೀಪ್ ಕುಮಾರ್ ನಿಧನ

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯೋಭಿವೃದ್ಧಿ ಸಂಘ (RDPR) ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷ, ಪಡುಪೆರಾರ ಗ್ರಾಮ ಪಂಚಾಯತ್ ಸಹಾಯಕ ಪ್ರದೀಪ್ ಕುಮಾರ್ ನಿನ್ನೆ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ನೌಕರರ ಶ್ರೇಯೋಭಿವೃದ್ಧಿ ಸಂಘದ ತಾಲೂಕು ಅಧ್ಯಕ್ಷರಾಗಿ ಕ್ರಿಯಾಶೀಲರಾಗಿದ್ದು, ಸಂಘದ ಬೆಳವಣಿಗೆಗೆ ಆಹೋರಾತ್ರಿ ಸ್ಪಂದಿಸುತ್ತಿದ್ದರು.

Continue Reading

ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷರಾಗಿ ಕರುಣಾಕರ ನಾಯ್ತೊಟ್ಟು, ಉಪಾಧ್ಯಕ್ಷೆಯಾಗಿ ಸಂಗೀತಾ ಜಗದೀಶ್ ಆಯ್ಕೆ.

ಚುನಾವಣೆ ಮುಗಿದು ಮೂರು ವರ್ಷಗಳ ಬಳಿಕ ವಿಟ್ಲ ಪಟ್ಟಣ ಪಂಚಾಯತಿನ ಆಡಳಿತ ನಡೆಸುವ ಭಾಗ್ಯ ಬಿಜೆಪಿಗೆ ಒಲಿಯಿತು. 18 ಸದಸ್ಯ ಬಲದ ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ-12, ಕಾಂಗ್ರೆಸ್-5, ಎಸ್ಡಿಪಿಐ ಒಬ್ಬ ಸದಸ್ಯರನ್ನು ಹೊಂದಿದೆ. ಮೀಸಲಾತಿ ಪಟ್ಟಿ ಆಧಾರದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಕರುಣಾಕರ ನಾಯ್ತೊಟ್ಟು, ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ಸಂಗೀತಾ ಜಗದೀಶ್ ಪನೆಮಜಲು ನಾಮಪತ್ರ ಸಲ್ಲಿಸಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಾರ ಅಭ್ಯರ್ಥಿಯಿಲ್ಲದ ಕಾರಣ ಚುನಾವಣೆಯಿಂದ ಹಿಂದೆ ಸರಿದಿದೆ. ಚುನಾವಣಾ ಅಧಿಕಾರಿಯಾಗಿ […]

Continue Reading

ರಾಜ್ಯದಲ್ಲಿ ಎಚ್ ಐ ಸೋಂಕು ಗಣನೀಯ ಪ್ರಮಾಣದಲ್ಲಿ ಏರಿಕೆ

MBBS, ಇಂಜಿನಿಯರಿಂಗ್, ವೃತ್ತಿಪರ ಕೋರ್ಸ್ ಅಧ್ಯಯನ ಮಾಡುವವರಲ್ಲೇ ಎಚ್ಐವಿ ಸೋಂಕು ಅಧಿಕ.! ರಾಜ್ಯದಲ್ಲಿ ಎಚ್ ಐ ವಿ ಸೋಂಕು ಮತ್ತೆ ಜನರನ್ನು ಕಾಡುತ್ತಿದ್ದು, ಸೋಂಕಿನ ಸುಳಿಗೆ ಸುಶಿಕ್ಷಿತರು ಹಾಗೂ ಯುವ ಜನಾಂಗ ಹೆಚ್ಚಾಗಿ ಸಿಲುಕಿರುವುದು ಕಂಡುಬಂದಿದೆ. ರಾಜ್ಯದಲ್ಲಿ ಒಟ್ಟು 4,23,369 ಜನರಲ್ಲಿ ಸೋಂಕು ಇರುವುದು ಬೆಳಕಿಗೆ ಬಂದಿದೆ. ಇದರಲ್ಲಿ ಪುರುಷರು 1,82,973, ಮಹಿಳೆಯರು 2,15,519, ಯುವಕರು 87,266 ಹಾಗೂ 10,376 ಯುವತಿಯರಲ್ಲಿ ಸೋಂಕು ಕಂಡುಬಂದಿದೆ. ಎಂಬಿಬಿಎಸ್, ಎಂಜಿನಿಯರಿಂಗ್ ಹಾಗೂ ವೃತ್ತಿಪರ ಕೋರ್ಸ್ ಅಧ್ಯಯನ ಮಾಡುವವರಲ್ಲೇ ಎಚ್ ಐ […]

Continue Reading

ಮಗು ಅಪಹರಣ ಪ್ರಕರಣ: ದೂರು ಬಂದ ಕೆಲವೇ ಗಂಟೆಯೊಳಗೆ ಪ್ರಕರಣ ಭೇದಿಸಿ, ಮಗುವನ್ನು ಹೆತ್ತವರ ಮಡಿಲು ಸೇರಿಸಿದ ಮಂಗಳೂರು ಪೊಲೀಸರು

ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಮಗು ಅಪಹರಣ ಪ್ರಕರಣವನ್ನು ದೂರು ಬಂದ ಕೆಲವೇ ಗಂಟೆಯೊಳಗೆ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿ, ಮಗುವನ್ನು ಪೋಷಕರಿಗೆ ಒಪ್ಪಿಸಿದ್ದಾರೆ. ‘ಆರೋಪಿಯನ್ನು ಕೇರಳ ಎರ್ನಾಕುಳಂ ಜಿಲ್ಲೆಯ ಪರವೂರ್‌ನ ಅನೀಶ್ ಕುಮಾರ್ ( 49) ಎಂದು ಗುರುತಿಸಲಾಗಿದೆ. ಮೂರು ಗಂಡು ಮಕ್ಕಳನ್ನು ಹೊಂದಿರುವ ಆತ ಹೆಣ್ಣು ಮಗು ಸಾಕಬೇಕೆಂಬ ಉದ್ದೇಶದಿಂದ ಮಗುವನ್ನು ಕರೆದುಕೊಂಡು ಹೋಗಿದ್ದೇನೆ’ ಎಂದು ತಿಳಿಸಿದ್ದಾನೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್‌ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ. ‘ಅಳಪೆ […]

Continue Reading

ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ನಂಬಿಕೆ ದ್ರೋಹ, ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು

ಪುತ್ತಿಲ ಪರಿವಾರ ಸಂಘಟನೆಯ ಸಂಸ್ಥಾಪಕ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ನಂಬಿಕೆ ದ್ರೋಹ, ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಸಾಮೆತ್ತಡ್ಕದ ನಿವಾಸಿ 47 ವರ್ಷದ ಮಹಿಳೆ ಪುತ್ತಿಲ ವಿರುದ್ದ ಲೈಂಗಿಕ ದೌರ್ಜನ್ಯ ಕೇಸು ದಾಖಲಿಸಿದ್ದಾರೆ. ಕಳೆದ ವರ್ಷ 2023ರ ಜೂನ್ ತಿಂಗಳಲ್ಲಿ ಬೆಂಗಳೂರಿನ ಹೋಟೆಲ್ ಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ನಡೆಸಿದ್ದರು. ಆ ಬಳಿಕ ಬ್ಲಾಕ್ ಮೇಲ್ ಮಾಡಿಕೊಂಡು ಅವರಿರುವ ಪ್ರದೇಶಕ್ಕೆ ಕರೆಸಿಕೊಂಡು ಅವರ ಕೆಲಸ ಮಾಡುತ್ತಿದ್ದರು ಎಂದು ಮಹಿಳೆ ದೂರಿದ್ದಾರೆ. […]

Continue Reading

ನೆಲ ನಮ್ಮದು, ಜಲ ನಮ್ಮದು, ಉದ್ಯೋಗವೂ ನಮ್ಮದೆ

ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಕೈಗಾರಿಕೆಗಳು, ಉದ್ಯಮ, ಬ್ಯಾಂಕಿಂಗ್ ಕ್ಷೇತ್ರ, ವ್ಯಾಪಾರಿ ಸಂಸ್ಥೆಗಳಲ್ಲಿ ಸ್ಥಳೀಯ ಯುವಜನತೆಯನ್ನು ಹೊರಗಿಡುತ್ತಿರುವ ವಿದ್ಯಮಾನಗಳು ಹಾಗೂ ಈ ಕ್ಷೇತ್ರಗಳಲ್ಲಿ ಉದ್ಯೋಗ ನೇಮಕಾತಿಯಲ್ಲಿ ಸ್ಥಳೀಯರಿಗೆ ಕಡ್ಡಾಯ ಅವಕಾಶಗಳಿಗೆ ನಡೆಸ ಬೇಕಾದ ಪ್ರಯತ್ನಗಳಿಗೆ ಸಂಬಂಧಿಸಿ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೋ. ಪುರುಷೋತ್ತಮೆ ಬಿಳಿಮಲೆಯವರೊಂದಿಗೆ ಮಂಗಳೂರು ಸರ್ಕ್ಯೂಟ್ ಹೌಸ್ ನಲ್ಲಿ ಚರ್ಚಾಗೋಷ್ಟಿ ನಡೆಸಲಾಯಿತು. ತುಳುನಾಡಿನ ಉದ್ಯಮಗಳಲ್ಲಿ ಸ್ಥಳೀಯರ ಉದ್ಯೋಗದ ಸ್ಥಿತಿಗತಿಗಳ ಕುರಿತಾದ ಆಗ್ರಹ ಪತ್ರವನ್ನು ಪ್ರಾಧಿಕಾರದ ಅಧ್ಯಕ್ಷರಿಗೆ ಸಲ್ಲಿಸಲಾಯಿತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಹಲವು […]

Continue Reading

ಕುಮಾರಸ್ವಾಮಿ ಆಟ; ಬಿಜೆಪಿಗೆ ಪ್ರಾಣಸಂಕಟ.!

ಚನ್ನಪಟ್ಟಣದಲ್ಲಿ ಗರಿಗೆದರಿದ ‘ಗಣೇಶ ರಾಜಕಾರಣ’.. ಆಪ್ತಮಿತ್ರನ ಪರ ‘HDK’ , ಬಿಜೆಪಿ ‘ಸೈನಿಕ’ ಕಂಗಾಲು.! ಚನ್ನಪಟ್ಟಣ ಉಪ ಚುನಾವಣಾ ಪಾಲಿಟಿಕ್ಸ್ ರಂಗೇರುತ್ತಿದೆ. ದೋಸ್ತಿ ಪಕ್ಷ ಜೆಡಿಎಸ್ ನ ರಾಜಕೀಯ ಪಟ್ಟು ಆಟಗಳಿಗೆ ಬಿಜೆಪಿ ಅಕ್ಷರಶಃ ನಲುಗಿ ಹೋಗಿದೆ. ಹೈಕಮಾಂಡ್ ಮಟ್ಟದಲ್ಲಿ ಮೋದಿ -ಶಾ ರೊಂದಿಗೆ ದೋಸ್ತಿ ಮಾಡಿ ಎರಡು ಸ್ಥಾನ ಪಡೆದರೂ ಕುಮಾರಸ್ವಾಮಿ ಮಿನಿಸ್ಟರ್ ಪಡೆಯುವ ಮೂಲಕ ಬಂಪರ್ ಲಾಟ್ರಿ ಪಡೆದಿದ್ದರು. ಕುಮಾರಸ್ವಾಮಿ ಸಂಸದರಾಗುತ್ತಿದ್ದಂತೆ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ಗುಡ್ ಬೈ ಹೇಳಿದ್ದರು. ಇನ್ನು ಕೆಲವೇ ತಿಂಗಳಲ್ಲಿ […]

Continue Reading

ಬಿಜೆಪಿ ಅವಧಿಯಲ್ಲಿ ಕೊರೋನಾ ಹೆಸರಿನಲ್ಲಿ ಸಾವಿರಾರು ಕೋಟಿ ಅಕ್ರಮ; ‘ದಾಖಲೆ’ ಸಮೇತ ಮಧ್ಯಂತರ ವರದಿ ಸಲ್ಲಿಕೆ

ಬರೋಬ್ಬರಿ 7,223 ಕೋಟಿ ರೂ. ಮೊತ್ತದ ಖರೀದಿಗೆ ನಕಲಿ ಬಿಲ್.!ಬಿಜೆಪಿ ವಿರುದ್ಧದ ಹೋರಾಟಕ್ಕೆ ಬ್ರಹ್ಮಾಸ್ತ್ರ ಕೊರೋನಾ ಅವಧಿಯಲ್ಲಿ ಆರ್ಥಿಕವಾಗಿ ರಾಜ್ಯ ಸರಕಾರ ಜರ್ಜರಿತವಾಗಿದ್ದರೂ, ಬರೋಬ್ಬರಿ 7,223 ಕೋಟಿ ರೂಪಾಯಿ ಹೆಚ್ಚು ಮೊತ್ತದ ಖರೀದಿಗೆ ನಕಲಿ ಬಿಲ್ ಗಳನ್ನು ಒದಗಿಸಲಾಗಿದೆ ಎನ್ನುವ ಗಂಭೀರ ಆರೋಪ ಇದೀಗ ಕೇಳಿಬಂದಿದೆ. ಬಿಜೆಪಿ ಅವಧಿಯಲ್ಲಿ ಕರೋನಾ ಅವಧಿಯಲ್ಲಿ ಸಾವಿರಾರು ಕೋಟಿ ಅಕ್ರಮ ನಡೆದಿರುವ ಆರೋಪ ಮಾಡಿದ್ದ ಕಾಂಗ್ರೆಸ್ ನಾಯಕರಿಗೆ ಇದೀಗ ಅಕ್ರಮ ನಡೆದಿರುವುದಕ್ಕೆ ‘ದಾಖಲೆ’ ಸಮೇತ ಮಾಹಿತಿ ಸಿಕ್ಕಿರುವುದು ಬಿಜೆಪಿ ವಿರುದ್ಧದ ಹೋರಾಟಕ್ಕೆ […]

Continue Reading

ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ಎಂದು ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ಆದೇಶ

“ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ದೇಶವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ” ಎಂದು ಆರೋಪಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರ ಪತ್ನಿ ತಬಸ್ಸುಮ್‌ ದಿನೇಶ್‌ ರಾವ್‌ ದಾಖಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿರುವ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶ ಕೆ. ಎಂ. ಶಿವಕುಮಾರ್ ಅವರು ಆರೋಪಿ ಯತ್ನಾಳ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಲು ಆದೇಶಿಸಿದ್ದಾರೆ. “ನನ್ನನ್ನು […]

Continue Reading