ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ಎಂದು ಹೇಳಿಕೆ ನೀಡಿದ್ದ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ನ್ಯಾಯಾಲಯ ಆದೇಶ

“ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನೇಲಿ ಅರ್ಧ ಪಾಕಿಸ್ತಾನವಿದೆ. ದೇಶವಿರೋಧಿ ಹೇಳಿಕೆ ನೀಡುವುದು ಚಟವಾಗಿದೆ” ಎಂದು ಆರೋಪಿಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ ಅವರ ಪತ್ನಿ ತಬಸ್ಸುಮ್‌ ದಿನೇಶ್‌ ರಾವ್‌ ದಾಖಲಿಸಿದ್ದ ಖಾಸಗಿ ದೂರನ್ನು ಪರಿಗಣಿಸಿರುವ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ನ್ಯಾಯಾಧೀಶ ಕೆ. ಎಂ. ಶಿವಕುಮಾರ್ ಅವರು ಆರೋಪಿ ಯತ್ನಾಳ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಲು ಆದೇಶಿಸಿದ್ದಾರೆ. “ನನ್ನನ್ನು […]

Continue Reading

ಕಾರಾಗೃಹ ಎಡಿಜಿಯಾಗಿ ನೇಮಕ ಆಗುತ್ತಾರಾ.. ರಫ್ ಆ್ಯಂಡ್ ಟಫ್ ಅಧಿಕಾರಿ ಅಲೋಕ್ ಕುಮಾರ್.? ಭ್ರಷ್ಟ ಜೈಲಾಧಿಕಾರಿಗಳಿಗೆ ಶುರುವಾಯ್ತು ನಡುಕ.!

ಕಾರಾಗೃಹ ಎಡಿಜಿಯಾಗಿ ನೇಮಕ ಆಗುತ್ತಾರಾ.. ರಫ್ ಆ್ಯಂಡ್ ಟಫ್ ಆಫೀಸರ್ ಅಲೋಕ್ ಕುಮಾರ್.? ಹೀಗಾಗಿ ಭ್ರಷ್ಟ ಅಧಿಕಾರಿಗಳಿಗೆ ಶುರುವಾಯ್ತು ನಡುಕ ಜೈಲಿನ ಅವ್ಯವಾಹರದಿಂದ ಮುಜಗರಕ್ಕಿಡಾಗಿರೋ ಸರ್ಕಾರ. ಹೀಗಾಗಿ ಎಡಿಜಿಪಿ ಅಲೋಕ್ ಕುಮಾರ್ ನೆನಪಾಗಿದ್ದಾರೆ ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ. ರಸ್ತೆ ಸುರಕ್ಷಿತೆ ಮತ್ತು ಸಂಚಾರ ರಾಜ್ಯ ಎಡಿಜಿಪಿಯಾಗಿರೋ ಅಲೋಕ್ ಕುಮಾರ್ ಅವರನ್ನು ಕಾರಾಗೃಹ ಎಡಿಜಿಪಿಯಾಗಿ‌ ವರ್ಗಾವಣೆ ಮಾಡಲು ಸರ್ಕಾರದಲ್ಲಿ ಚಿಂತನೆ ನಡೆಸುತ್ತಿದೆ. ಅಲೋಕ್ ಕುಮಾರ್ ಸಿಸಿಬಿ ಮುಖ್ಯಸ್ಥರಾಗಿ, ಕಮಿಷನರ್ ಆಗಿದ್ದ ಸಮಯದಲ್ಲಿ ದೊ ನಂಬರ್ ದಂಧೆಕೋರರನ್ನು, ಬೆಂಗಳೂರಿನ […]

Continue Reading

ಗುರುಪುರ ಹೋಬಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಹೋರಾಟ ಸಮಿತಿ ನಿಯೋಗ ಭೇಟಿ, ಸ್ಥಿತಿಗತಿಗಳ ಮಾಹಿತಿ ಸಂಗ್ರಹ

” ಸರಕಾರಿ ಆಸ್ಪತ್ರೆಗಳನ್ನು ಉಳಿಸಿ ಹೋರಾಟ ಸಮಿತಿ, ಗುರುಪುರ ಹೋಬಳಿ” ಇದರ ಪ್ರಮುಖರ ನಿಯೋಗ ಹೋಬಳಿ ವ್ಯಾಪ್ತಿಯ ಕುಪ್ಪೆಪದವು, ಕೊಂಪದವು, ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಆರೋಗ್ಯ ಕೇಂದ್ರಗಳ ಸ್ಥಿತಿಗತಿಗಳ ಕುರಿತು ಮಾಹಿತಿ ಸಂಗ್ರಹಿಸಿತು. ಮಂಜೂರಾಗಿರುವ ವೈದ್ಯಕೀಯ ಸಿಬ್ಬಂದಿಗಳ ನೇಮಕಾತಿ ನಡೆಯದಿರುವುದು, ಇರುವ ಸಿಬ್ಬಂದಿಗಳಿಗೆ ಒಂದಕ್ಕಿಂತ ಹೆಚ್ಚು ಆರೋಗ್ಯ ಕೇಂದ್ರಗಳಲ್ಲಿ ಹೆಚ್ಚುವರಿ ನಿಯೋಜನೆ ಹೊಂದಿರುವುದು, ಕೊರತೆ, ವೈದ್ಯರ ಕೊರತೆಗಳು ಸಮಿತಿಯ ಗಮನಕ್ಕೆ ಬಂದವು. ಇದು ಈಗಿರುವ ವೈದ್ಯಕೀಯ ಸಿಬ್ಬಂದಿಗಳ ಮೇಲೆ ಒತ್ತಡ ಉಂಟುಮಾಡಿರುವುದನ್ನು ಸಮಿತಿ […]

Continue Reading

ಮೆಲ್ಕಾರ್-ಮುಡಿಪು ಹೆದ್ದಾರಿಯ ಮಾರ್ನಬೈಲು ಬಳಿ ಲಾರಿ ಮತ್ತು ಕಾರು ಮುಖಾಮುಖಿಯಾಗಿ; ಚಾಲಕನ ಸ್ಥಿತಿ ಗಂಭೀರ

ಮೆಲ್ಕಾರ್-ಮುಡಿಪು ಹೆದ್ದಾರಿಯ ಮಾರ್ನಬೈಲು ಬಳಿ ಲಾರಿ ಮತ್ತು ಕಾರು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ಗುರುತು ಹಚ್ಚಲಾರದಷ್ಟು ಜಖಂಗೊಂಡ ಕಾರು ಚಾಲಕನ ಸ್ಥಿತಿ ಗಂಭೀರ. ಸಜಿಪ ಎಂಬಲ್ಲಿ ಅಂಗಡಿ ಹೊಂದಿರುವ ಬೋಳಂಗಡಿ ಮುಸ್ತಫಾ ಎಂಬವರು ಚಲಾಯಿಸುತ್ತಿದ್ದ ಕ್ರೆಟಾ ಕಾರಿಗೆ ಮಾರ್ನಬೈಲು ಎಂಬಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ಜಖಂಗೊಂಡಿದ್ದು ಗಾಯಾಳುವನ್ನು ತಕ್ಷಣವೇ ಸ್ಥಳೀಯರು ಮಂಗಳೂರಿನ ಹೈಲೇಂಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಾಗಿದೆ.

Continue Reading

ವಿದ್ಯಾಭ್ಯಾಸದ ನೆಪವೊಡ್ಡಿ, ಮನೆಯವರನ್ನು ನಂಬಿಸಿ ವಿದೇಶ ನಾಟಕ.! ಅನ್ಯಕೋಮಿನ ಯುವಕನೊಂದಿಗೆ ಸಿಕ್ಕಿಬಿದ್ದ ಯುವತಿ

ಸವಣೂರಿನ ಕಾಲೇಜೊಂದರಲ್ಲಿ ಪಿಯುಸಿ ಮುಗಿಸಿ, ಮುಂದಿನ ವಿದ್ಯಾಭ್ಯಾಸಕ್ಕೆಂದು ವಿದೇಶಕ್ಕೆ ತೆರಳುವ ನೆಪವೊಡ್ಡಿದ 18ರ ಹರೆಯದ ಯುವತಿ ದೀಕ್ಷಾ ಮನೆಯವರನ್ನು ನಂಬಿಸಿ ಕಳೆದ ಆಗಸ್ಟ್ 25 ರಂದು ಮನೆ ಬಿಟ್ಟಿದ್ದಳು. ಇಬ್ಬರು ಹೆಣ್ಣು ಮಕ್ಕಳು ಹಾಗೂ ಒಬ್ಬ ಪುತ್ರನನ್ನು ಹೊಂದಿರುವ ಮೂರು ಮಕ್ಕಳ ಪೋಷಕರಾಗಿರುವ ದೀಕ್ಷಾ ತಂದೆ ತಾಯಿ ಅವಿದ್ಯಾವಂತರಾದ ಕಾರಣ ಮಗಳು ಹೇಳುವ ಕತೆಯನ್ನು ನಿಜವೆಂದೇ ನಂಬಿದ್ದರು. ತನ್ನ ಜೊತೆ ಕಲಿತ ಇಬ್ಬರು ಸ್ನೇಹಿತೆಯರು ಬೆಂಗಳೂರಿನಲ್ಲಿದ್ದು, ಅವರು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ತನ್ನನ್ನು ಬೀಳ್ಕೊಡಲು ಬಂದಿರುವುದಾಗಿಯೂ […]

Continue Reading

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಲು ರಾಜ್ಯ ಸರಕಾರ ಮುಂದಾಗಿದೆ

ಪೊಲೀಸ್ ನೇಮಕಕ್ಕೆ ವಯೋಮಿತಿ ಕನಿಷ್ಠ 16 ಕ್ಕೆ ಇಳಿಸುವಂತೆ, ಗರಿಷ್ಠ 40ಕ್ಕೆ ಹೆಚ್ಚಿಸುವಂತೆ ಬೇಡಿಕೆ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಲು ಮುಂದಾಗಿದ್ದು, ಪೊಲೀಸ್ ನೇಮಕಕ್ಕೆ ವಯೋಮಿತಿ 16 ವರ್ಷಕ್ಕೆ ಇಳಿಸುವ ಸಂಬಂಧ ಚರ್ಚೆ ನಡೆಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಇತ್ತೀಚೆಗೆ ತಿಳಿಸಿದ್ದಾರೆ. ಪೊಲೀಸ್ ನೇಮಕಾತಿಗೆ ಕನಿಷ್ಠ ವಯೋಮಿತಿಯನ್ನು 16 ವರ್ಷಕ್ಕೆ ಇಳಿಸುವುದು ಹಾಗೂ ಗರಿಷ್ಠ ವಯೋಮಿತಿಯನ್ನು 40 ವರ್ಷಗಳಿಗೆ ಹೆಚ್ಚಿಸುವಂತೆ ಯುವಕರು ಬೇಡಿಕೆ ಇಟ್ಟಿದ್ದಾರೆ.ಈ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಅವರು […]

Continue Reading

ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ; ಸರಕಾರಕ್ಕೆ ಹೈಕೋರ್ಟ್ ಖಡಕ್ ತಾಕೀತು

ಏಕ ನಿವೇಶನಕ್ಕೆ ಅನುಮೋದನೆ ನೀಡುವಾಗ ರಸ್ತೆಗೆ ಜಮೀನು ಬೇಕಿದ್ದರೆ ಪರಿಹಾರ ನೀಡಿಯೇ ಸ್ವಾಧೀನ ಮಾಡಿ ಎಂದು ಹೈಕೋರ್ಟ್ ಸರ್ಕಾರಕ್ಕೆ ಖಡಕ್ ತಾಕೀತು ಮಾಡಿದೆ. ಏಕ ನಿವೇಶನವನ್ನು ಮಂಜೂರು ಮಾಡುವಾಗ ನಗರಾಭಿವೃದ್ಧಿ ಪ್ರಾಧಿಕಾರ ಅಥವಾ ಇಲಾಖೆಗಳು ರಸ್ತೆ ವಿಸ್ತರಣೆಗೆ ಉಚಿತವಾಗಿ ಜಮೀನು ಕೊಡಬೇಕು ಎಂದು ಆದೇಶ ನೀಡುವುದು ಸಮರ್ಪಕವಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಯಮೂರ್ತಿ ಅಶೋಕ ಎಸ್. ಕಿಣಗಿ ಅವರಿದ್ದ ಏಕಸದಸ್ಯ ಪೀಠದಿಂದ ತೀರ್ಪು ನೀಡಲಾಗಿದೆ. ರಸ್ತೆ ವಿಸ್ತರಣೆಗಾಗಿ ನಿಗದಿಪಡಿಸಲಾದ ಜಮೀನನ್ನು ಸೂಕ್ತ ಪರಿಹಾರ ನೀಡಿ […]

Continue Reading

ದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಶುಕ್ರದೆಸೆ.! ಎಎಪಿ ಮತ್ತು ಬಿಜೆಪಿಯಿಂದ ಹಲವಾರು ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಪಕ್ಷಾಂತರ

ವಿಧಾನಸಭಾ ಚುನಾವಣೆ ನಡೆಯಲಿರುವ ದೆಹಲಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಶುಕ್ರದೆಸೆ ಆರಂಭವಾಗಿದೆ. ಆಡಳಿತಾರೂಢ ಎಎಪಿ ಹಾಗೂ ಬಿಜೆಪಿಯ ಹಲವಾರು ನಾಯಕರುಗಳು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಕಾಂಗ್ರೆಸ್ ನ ದೆಹಲಿ ಘಟಕದ ಪ್ರಧಾನ ಕಛೇರಿ ರಾಜೀವ್‌ ಭವನದಲ್ಲಿ ನಡೆದ ಸಮಾರಂಭದಲ್ಲಿ ಆಮ್‌ ಆದಿ ಪಕ್ಷ ಮತ್ತು ಭಾರತೀಯ ಜನತಾ ಪಕ್ಷ ನಾಯಕರು ಔಪಚಾರಿಕವಾಗಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡಿದ್ದಾರೆ. ಮತ್ತು ಅವರನ್ನು ದೆಹಲಿ ಕಾಂಗ್ರೆಸ್ ಮುಖ್ಯಸ್ಥ ದೇವೇಂದ್ರ ಯಾದವ್‌ ಸ್ವಾಗತಿಸಿದರು. ಪಕ್ಷದ ಪ್ರಗತಿಪರ ನೀತಿಗಳು ಮತ್ತು ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ […]

Continue Reading

ಉಪ್ಪಿನಂಗಡಿ: ಇಂದ್ರಪ್ರಸ್ಥ ಕಾಲೇಜಿನ ವಿದ್ಯಾರ್ಥಿ ಮಹಮ್ಮದ್‌ ಮುಝಾಮಿಲ್‌ ಕರ್ವೇಲ್ ರಾಷ್ಟ್ರೀಯ ಆಹಾರ ತಂತ್ರಜ್ಞಾನ (NIFTEM) ಸಂಸ್ಥೆಗೆ ಆಯ್ಕೆ

ಉಪ್ಪಿನಂಗಡಿ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾಬ್ಯಾಸ ಮಾಡಿರುವ ಕರ್ವೇಲ್ ನಿವಾಸಿ ಮಹಮ್ಮದ್‌ ಮುಝಾಮಿಲ್‌ ರಾಷ್ಟ್ರೀಯ ಆಹಾರ ತಂತ್ರಜ್ಞಾನ ಸಂಸ್ಥೆಗೆ (NIFTEM) ಆಯ್ಕೆಯಾಗಿದ್ದಾರೆ. ತಂಜಾವೂರಿನ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮ ಶೀಲತೆ ಮತ್ತು ಉದ್ಯೋಗ (NIFT) ದೇಶದ ಪ್ರತಿಷ್ಠಿತ ಸಂಸ್ಥೆಯಾಗಿದೆ. ಇದು ಭಾರತ ಸರಕಾರದ ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ಅಡಿಯಲ್ಲಿ ಸಂಶೋಧನೆ ಮತ್ತು ಶಿಕ್ಷಣಕ್ಕಾಗಿರುವ ಪ್ರಮುಖ ಸಂಸ್ಥೆಯಾಗಿದೆ. ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ನಿರಂತರ ವರ್ಷಗಳಲ್ಲಿ ದೇಶದ ಹಲವಾರು ಪ್ರತಿಷ್ಠಿತ ಶಿಕ್ಷಣ […]

Continue Reading

ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದು ಒದೆ ತಿಂದ ಡ್ರಗ್ಸ್ ಪೆಡ್ಲರ್ ಸಮದ್ ಪರಾರಿ.!

ವಿಟ್ಲ ಠಾಣಾ ವ್ಯಾಪ್ತಿಯ ಉರಿಮಜಲು ಪರಿಸರದಲ್ಲಿ ಕಳೆದ ಕೆಲ ಸಮಯಗಳಿಂದ ಗಾಂಜಾ, ಎಂಡಿಎಂಎ ಮಾದಕ ದ್ರವ್ಯಗಳ ನಶೆಯಲ್ಲಿ ತೂರಾಡುತ್ತಿರುವ ಕೆಲ ಪುಂಡರು ಹಲ್ಲೆ-ಗಲಾಟೆ ನಡೆಸುತ್ತಾ ಸಾರ್ವಜನಿಕರ ಪಾಲಿಗೆ ಕಂಠಕರಾಗಿದ್ದರು. ಅಶಾಂತಿಗೆ ಕಾರಣವಾಗುವ ಯುವಕರಿಗೆ ಡ್ರಗ್ಸ್ ವಿತರಣೆ ಮಾಡುವುದು ಯಾರೆಂಬ ಬಗ್ಗೆ ಸ್ಥಳೀಯರು ಸಾಕಷ್ಟು ತಲೆಕೆಡಿಸಿಕೊಂಡಿದ್ದರು. ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಅಳಕೆಮಜಲು ಫ್ಲ್ಯಾಟ್ ನಲ್ಲಿರುವ ಮಾಜಿ ಬಸ್ ಚಾಲಕ ಸಮದ್ ಎಂಬವನನ್ನು ಗುರುವಾರ ಮುಸ್ಸಂಜೆ ಸ್ಥಳೀಯ ಯುವಕರ ತಂಡ ಉರಿಮಜಲು ಜಂಕ್ಷನ್ ಗೆ ಆಕ್ಟಿವಾದಲ್ಲಿ […]

Continue Reading