ಪೋಷಕರು ಹೈರಾಣು.. ಕಾಲೇಜಿಗೆ ಹೋಗುವ ಉದ್ಯಮಪತಿಗಳ ಪುತ್ರಿಯರೇ ಟಾರ್ಗೆಟ್

ಮಂಗಳೂರಿನಲ್ಲಿ ಕಾರ್ಯಾಚರಿಸುತ್ತಿದೆ ನಕಲಿ ಲೂಟಿ ಗ್ಯಾಂಗ್.! ಮಂಗಳೂರಿನಲ್ಲಿ ವಂಚಕರು ವಿವಿಧ ವೇಷ ತೊಟ್ಟು ಫೀಲ್ಡಿಗಿಳಿಯುತ್ತಿರುವುದು ಇದೀಗ ಮಾಮೂಲಿಯಾಗಿ ಬಿಟ್ಟಿದೆ. ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದಂತೆ ಅದನ್ನು ದುರುಪಯೋಗಪಡಿಸುತ್ತಿರುವ ನಕಲಿ ಜಾಲಗಳು ಇದೀಗ ಸಕ್ರೀಯವಾಗಿದೆ. ಉದ್ಯಮಿಗಳು, ದುಡ್ಡಿರುವ ಮಂದಿಗಳ ಪುತ್ರಿಯರನ್ನು ಕಿಡ್ನಾಪ್, ಡ್ರಗ್ಸ್ ದಂಧೆ ಹೆಸರಲ್ಲಿ ಬೆದರಿಸುವ, ಸರಕಾರಿ ಅಧಿಕಾರಿಗಳೆಂದು ನಂಬಿಸಿ ದುಡ್ಡು ಪೀಕಿಸುವ ದಂಧೆಗಳು ಜೋರಾಗಿದೆ. ಇವರ ಆರ್ಭಟಕ್ಕೆ ಕೆಲವೊಂದು ವಿಧ್ಯಾರ್ಥಿನಿಯರ ಪೋಷಕರು ಹೈರಾಣಾಗಿ ಬಿಟ್ಟಿದ್ದಾರೆ. ವಿದ್ಯಾರ್ಥಿನಿಯರ ಪೋನ್ ನಂಬರ್, ಅವರ ಪೋಷಕರ ಪೋನ್ ನಂಬರ್ ಪಡೆದು ವಿದ್ಯಾರ್ಥಿನಿಯರ […]

Continue Reading

ವೇಶ್ಯಾಗೃಹ ನಡೆಸಲು ರಕ್ಷಣೆ ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ ವಕೀಲ!

ಇಂತಹ ಅರ್ಜಿಗಳಿಂದ ಸಮಾಜದಲ್ಲಿ ವಕೀಲರ ಘನತೆಗೆ ಧಕ್ಕೆ ಉಂಟಾಗುತ್ತದೆ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯಲ್ಲಿ ವೇಶ್ಯಾಗೃಹ ನಡೆಸಲು ಅಗತ್ಯ ರಕ್ಷಣೆ ನೀಡುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿದ್ದ ಮನವಿ ಅರ್ಜಿಯ ವಿಚಾರಣೆ ವೇಳೆ ಮದ್ರಾಸ್ ಹೈಕೋರ್ಟ್ ನ ನ್ಯಾಯಮೂರ್ತಿ ಗಲಿಬಿಲಿಗೊಂಡಿದ್ದಾರೆ. ತನ್ನ ವಿರುದ್ಧ ಪೊಲೀಸರು ದಾಖಲಿಸಿರುವ ಎಫ್ ಐ ಆರ್ ಅನ್ನು ಕೂಡ ರದ್ದುಗೊಳಿಸುವಂತೆ ವಕೀಲ ರಾಜಾ ಮುರುಗನ್ ಅವರು ಹೈಕೋರ್ಟ್ ಗೆ ಮನವಿ ಮಾಡಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ. ಪುಗಳೇಂದಿ ಅವರಿದ್ದ ನ್ಯಾಯಪೀಠವು ಅರ್ಜಿದಾರರ ಮನವಿಗೆ […]

Continue Reading

ವಿಟ್ಲ-ಕೋಡಪದವು: ನಿರಾಶ್ರಿತ ಮೂರು ಮಕ್ಕಳ ವಿದವೆ ಮಹಿಳೆಯ ಕುಟುಂಬಕ್ಕೆ ನೂತನ ಮನೆ ಕೀ ಹಸ್ತಾಂತರ

ಎಮರ್ಜೆನ್ಸಿ ಟೀಂ ಕೋಡಪದವು ಹಾಗೂ MNG ಫೌಂಡೇಶನ್ ಮಂಗಳೂರು ಇದರ ವತಿಯಿಂದ ದಿ.ಅಬೂಬಕ್ಕರ್ ಕುಕ್ಕಿಲ ಕುಟುಂಬಕ್ಕೆ ನಿರ್ಮಿಸಿದ ನೂತನ ಮನೆಯ ಕೀ ಹಸ್ತಾಂತರ ಮತ್ತು ಗೃಹಪ್ರವೇಶ ಕಾರ್ಯಕ್ರಮ ಇಂದು ಕೋಡಪದವು ಸಮೀಪದ ವೀರಕಂಬ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊನ್ಯಕುಕ್ಕು ಎಂಬಲ್ಲಿ ಜರುಗಿತು. ಇತ್ತೀಚೆಗೆ ಹಠತ್ತಾಗಿ ಮಾರಕ ಕಾಯಿಲೆಯೊಂದಕ್ಕೆ ತುತ್ತಾದ ವಿಟ್ಲಪಡ್ನೂರು ಗ್ರಾಮದ ಕುಕ್ಕಿಲ ಎಂಬಲ್ಲಿ ಪುಟ್ಟ ಮೂರು ಮಕ್ಕಳ ತಂದೆ ಅಬೂಬಕ್ಕರ್ ಎಂಬುವವರು ನಿಧನ ಹೊಂದಿದ್ದು,ಹೆಂಡತಿಯ ತವರು ಮನೆಯಲ್ಲಿ ವಾಸಿಸುತ್ತಿದ್ದರು.ರೋಗಕ್ಕೆ ತುತ್ತಾಗಿ ಲಕ್ಷಾಂತರ ರೂಪಾಯಿಗಳನ್ನು ಖರ್ಚುಮಾಡಿ ಹೈರಣಾಗಿದ್ದ […]

Continue Reading

ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡುತ್ತಿದ್ದವರಿಗೆ ಜನ ಪಾಠ ಕಲಿಸಿದ್ದಾರೆ: ಪವಾರ್

ಮಹಾರಾಷ್ಟ್ರ: ಸಂವಿಧಾನ ಬದಲಿಸುವ ಬಗ್ಗೆ ಮಾತನಾಡುತ್ತಿರುವವರಿಗೆ ದೇಶ ತಕ್ಕ ಪಾಠ ಕಲಿಸಿದೆ ಎಂದು ಎನ್‌ಸಿಪಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಶುಕ್ರವಾರ ಹೇಳಿದ್ದಾರೆ. ಶೇಷರಾವ್ ಚವ್ಹಾಣ್ ಅವರ ಉರ್ದು ಅನುವಾದದ ಇಂಗ್ಲಿಷ್ ಪುಸ್ತಕ “ಪದ್ಮವಿಭೂಷಣ ಶರದ್ ಪವಾರ್ – ದಿ ಗ್ರೇಟ್ ಎನಿಗ್ಮಾ” ಅನಾವರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ದೇಶದ ರಾಜಕೀಯ ಪರಿಸ್ಥಿತಿ ಬದಲಾಗಬೇಕು ಎಂದ ಪವಾರ್, “ನಾವು ಎಲ್ಲಿಗೆ ಹೋಗುತ್ತಿದ್ದೇವೆ ಎಂದು ಯೋಚಿಸಬೇಕು. ದೇಶವು ತಪ್ಪು ಕೈಗೆ ಬೀಳದಂತೆ ನೋಡಿಕೊಳ್ಳಬೇಕು” ಎಂದು ಹೇಳಿದರು.

Continue Reading

ಬೆಳ್ತಂಗಡಿ: ಶೈಕ್ಷಣಿಕ ಸಮಾಲೋಚನೆ ಮತ್ತು ಪ್ರೋತ್ಸಾಹ ಕೇಂದ್ರ ‘ಉಜಿರೆ ಕಮ್ಯೂನಿಟಿ ಸೆಂಟರ್’ ಉದ್ಘಾಟನೆ

ಹುಟ್ಟೂರಿನ ಮಕ್ಕಳ ಭವಿಷ್ಯಕ್ಕೆ ನೆರಳಾಗಲು ಸೆಂಟರಿಗೆ ಕಟ್ಟಡ ದಾನ ಮಾಡಿದ ಉಧ್ಯಮಿ ಶಾಹುಲ್ ಹಮೀದ್ ಉಜಿರೆ ಬೆಳ್ತಂಗಡಿ ತಾಲೂಕನ್ನು ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಅಭಿವೃದ್ದಿಗೊಳಿಸುವ ಮಹತ್ವದ ಕನಸಿನೊಂದಿಗೆ ಉಜಿರೆ ಕಮ್ಯೂನಿಟಿ ಸೆಂಟರನ್ನು ನಿರ್ಮಿಸಲಾಗಿದೆ. ಭವಿಷ್ಯದ ತಲೆಮಾರಿಗೆ ಉನ್ನತ ಶಿಕ್ಷಣ ಮತ್ತು ಉತ್ತಮ ಉಧ್ಯೋಗ ಸಿಗಲು ಅವರಿಗೆ ಬೇಕಾದ ಪ್ರೇರಣೆ, ಸಲಹೆ, ಪ್ರೋತ್ಸಾಹ ಮತ್ತು ಅವಕಾಶಗಳನ್ನು ಕಮ್ಯೂನಿಟಿ ಸೆಂಟರ್ ಒದಗಿಸಲಿದೆ ಎಂದು ಅನಿವಾಸಿ ಉಧ್ಯಮಿ,ವೆಲ್ಡನ್ ಅರೇಭಿಯಾ ಕಂಪೆನಿಯ ಮಾಲಕರಾದ ಶಾಹುಲ್ ಹಮೀದ್ ಉಜಿರೆ ಹೇಳಿದರು. ಉಜಿರೆಯ ಟಿ.ಬಿ. ರೋಡ್ […]

Continue Reading

ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾವಣೆಗೆ ಮುಂದಾದ ಕೇಂದ್ರ ಸರಕಾರ

ಕರ್ನಾಟಕದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾವಣೆ ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ ನಾಗರಿಕ ವಿಮಾನಯಾನ ಸಚಿವಾಲಯವು ಕರ್ನಾಟಕದಲ್ಲಿರುವ ನಾಲ್ಕು ವಿಮಾನ ನಿಲ್ದಾಣಗಳಿಗೆ ಗಣ್ಯ ವ್ಯಕ್ತಿಗಳ ಹೆಸರನ್ನು ಇಡುವಂತೆ ರಾಜ್ಯ ಸರ್ಕಾರದಿಂದ ಮನವಿಯನ್ನು ಸ್ವೀಕರಿಸಿದೆ. ವಿಜಯಪುರ ವಿಮಾನ ನಿಲ್ದಾಣ, ಹುಬ್ಬಳ್ಳಿ ವಿಮಾನ ನಿಲ್ದಾಣ, ಬೆಳಗಾವಿ ವಿಮಾನ ನಿಲ್ದಾಣ ಮತ್ತು ಶಿವಮೊಗ್ಗ ವಿಮಾನ ನಿಲ್ದಾಣ. ಇವುಗಳಿಗೆ ರಾಜ್ಯ ಸರ್ಕಾರದ ಪ್ರಸ್ತಾವಿತ ಹೆಸರುಗಳು ಜಗಜ್ಯೋತಿ ಬಸವೇಶ್ವರ ವಿಮಾನ ನಿಲ್ದಾಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ, ಕಿತ್ತೂರು […]

Continue Reading

ಜ್ವರದಿಂದ ಬಳಲುತ್ತಿದ್ದ ನೇರಳಕಟ್ಟೆಯ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತ್ಯು

ವಿಟ್ಲ: ಜ್ವರದಿಂದ ಬಳಲುತ್ತಿದ್ದ ನೇರಳಕಟ್ಟೆಯ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನೇರಳಕಟ್ಟೆ ಸಮೀಪದ ಪಂತಡ್ಕ ನಿವಾಸಿ ಅಟೋ ರಿಕ್ಷಾ ಮೆಕ್ಯಾನಿಕ್ ವೃತ್ತಿಯ ಸಿ.ಎಚ್. ಹನೀಫ್ ಅವರ ಪುತ್ರ ಬಾತಿಷಾ(22) ಮೃತಪಟ್ಟವರು. ಮಂಗಳೂರಿನ ಬಟ್ಟೆ ಅಂಗಡಿಯೊಂದರಲ್ಲಿ ಸೇಲ್ಸ್ ಮೆನ್ ಆಗಿ ಕೆಲಸ ಮಾಡುತ್ತಿದ್ದ ಬಾತಿಷಾಗೆ ವಾರದ ಹಿಂದೆ ಜ್ವರ ಬಂದಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಬೆಳಿಗ್ಗೆ ಮತ್ತೆ ಜ್ವರ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ವೇಳೆಗೆ […]

Continue Reading

ಜನರ ತೀವ್ರ ಆಕ್ಷೇಪದ ನಡುವೆಯೂ ಬಿಲ್ಡರ್ ಲಾಭಿಯ ವಿವಾದಿತ ಜಮೀನಿಗೆ ಟಿಡಿಆರ್ ಅನುಮೋದನೆ

ರಾಜ್ಯ ಸರಕಾರದ ಮಧ್ಯ ಪ್ರವೇಶಿಸಿ ತನಿಖೆ ನಡೆಸಬೇಕು. ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ಆಗ್ರಹ: ಸಂಚಾಲಕರು ಮುನೀರ್ ಕಾಟಿಪಳ್ಳ ನಗರದ ಹೊರವಲಯದ ಮರಕಡದಲ್ಲಿರುವ ಜನ ವಿರೋಧದಿಂದ ತಡೆ ಹಿಡಿಯಲ್ಪಟ್ಟಿದ್ದ ಹತ್ತು ಎಕರೆ ವಿವಾದಿತ ಜಮೀನಿನ ಟಿಡಿಆರ್ ಕಡತಕ್ಕೆ ಬಿಜೆಪಿ ಅಡಳಿತದ ಮಂಗಳೂರು ನಗರ ಪಾಲಿಕೆಯು ಇಂದಿನ ಮಾಸಿಕ ಸಭೆಯಲ್ಲಿ ಏಕಾಏಕಿ ಅನುಮೋದನೆ ನೀಡಿರುವದಕ್ಕೆ ಮಂಗಳೂರಿನ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟ ತೀವ್ರ ಆಕ್ರೋಶ ವ್ಯಕ್ತ ಪಡಿಸಿದೆ. ರಾಜ್ಯ ಸರಕಾರ ತಕ್ಷಣವೇ ಮಧ್ಯ ಪ್ರವೇಶಿಸಿ ಈ ವಿವಾದಿತ ಕಡತವನ್ನು […]

Continue Reading

ಬಡ ಬೀದಿಬದಿ ವ್ಯಾಪಾರಸ್ಥರ ಮೇಲೆ ಹೆದ್ದಾರಿ ಪ್ರಾಧಿಕಾರ ನಡೆಸಿದ ಅಮಾನವೀಯ ದಬ್ಬಾಳಿಕೆಗೆ ತಕ್ಕ ಉತ್ತರ ನೀಡುವೆವು: ಬಿ.ಕೆ.ಇಮ್ತಿಯಾಜ್

ಬಡಪಾಯಿ ಬೀದಿಬದಿ ವ್ಯಾಪಾರಸ್ಥರು ಜೀವನೋಪಾಯಕ್ಕಾಗಿ ತಲಪಾಡಿ ಟೋಲ್ ಗೇಟ್ ಪರಿಸರದಲ್ಲಿ ವ್ಯಾಪಾರ ನಡೆಸುತ್ತಿದ್ದು,ಅವರ ಮೇಲೆ ಏಕಾಏಕಿ ಧಾಳಿ ನಡೆಸಿದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕ್ರಮ ತೀರಾ ಖಂಡನೀಯವಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯಲ್ಲಿ ಎಕರೆಗಟ್ಟಲೆ ಭೂಮಿಯನ್ನು ಕಬಳಿಸಿದ ಅತಿಕ್ರಮಣದಾರರ ವಿರುದ್ಧ ಎಳ್ಳಷ್ಟೂ ಕ್ರಮ ವಹಿಸದ ಹೆದ್ದಾರಿ ಪ್ರಾಧಿಕಾರ ಬಡಪಾಯಿಗಳ ಮೇಲೆ ಧಾಳಿ ನಡೆಸಿರುವುದು ಎಷ್ಟು ಸರಿ….?ಬೀದಿಬದಿ ವ್ಯಾಪಾರದ ಮೂಲಕ ಬದುಕು ಕಟ್ಟಿಕೊಂಡ ವ್ಯಾಪಾರಸ್ಥರ ಬದುಕನ್ನೇ ನಾಶ ಮಾಡಲು ಹೊರಟ ಹೆದ್ದಾರಿ ಪ್ರಾಧಿಕಾರದ ದುರಂಹಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರವನ್ನು […]

Continue Reading

ಮೂಡುಬಿದಿರೆ: ಸಾಲ ಮರುಪಾವತಿ ಮಾಡದ ಹಿನ್ನಲೆ; ಪಂಡಿತ್ ರೆಸಾರ್ಟ್ ಗೆ ಬೀಗ.!

ಮೂಡಬಿದಿರೆ ಅಲಂಗಾರು ನಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿದ್ದ ಪಂಡಿತ್ ರೆಸಾರ್ಟ್ ಗೆ ಬೀಗ ಜಡಿಯಲಾಗಿದೆ. ಮಂಗಳೂರಿನ ಎಂ.ಸಿ.ಸಿ.ಬ್ಯಾಂಕ್ ನಲ್ಲಿ ಸುಮಾರು 14 ಕೋಟಿ ರೂ.ಸಾಲ ಪಡೆದಿದ್ದು ಸಾಲವನ್ನು ಮರುಪಾವತಿ ಮಾಡುವಲ್ಲಿ ವಿಳಂಬವಾಗಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದ ಮೇರೆಗೆ ಬೀಗ ಜಡಿಯಲಾಗಿದೆ. ಬುಧವಾರ ಬ್ಯಾಂಕ್, ಪೊಲೀಸ್ ಅಧಿಕಾರಿಗಳ ಸಮಕ್ಷಮದಲ್ಲಿ ಪಂಡಿತ್ ರೆಸಾರ್ಟ್ ಗೆ ಬೀಗಮುದ್ರೆ ಹಾಕಲಾಗಿದೆ.

Continue Reading