ಅಕ್ರಮ ಜಾನುವಾರು ಸಾಗಾಟ ಪ್ರಕರಣ: ವಾಹನ ಚಾಲಕ ಚಂದ್ರು, ಕ್ಲೀನರ್ ಮೋಹನ ಇಬ್ಬರ ಬಂಧನ; ಜಾನುವಾರು ವಶ

ಕಡಬ: ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ-ಬಿಸ್ಲೆ ರಸ್ತೆಯ ಡಿಪ್ಪೋ ಎಂಬಲ್ಲಿ, ದಿನಾಂಕ:13.06.2026 ರಂದು ಬೆಳಗ್ಗಿನ ಜಾವ ಪಿಕಪ್ ವಾಹನವೊಂದು ಆಯತಪ್ಪಿ ಬಿದ್ದಿರುವ ವಾಹನದಲ್ಲಿ ಅಕ್ರಮ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಉಪ-ನಿರೀಕ್ಷಕರಿಗೆ ಬಂದ ಮಾಹಿತಿ ಆಧರಿಸಿ, ಪಿಕಪ್ ವಾಹನದ ಚಾಲಕ ಹಾಸನ ಅರಕಲಗೂಡು ನಿವಾಸಿಗಳಾದ ಚಂದ್ರು @ ಚಂದ್ರಶೇಖರ ಮತ್ತು ಕ್ಲೀನರ್ ಮೋಹನ ಎಂಬವರುಗಳನ್ನು ಪೊಲೀಸರು ವಿಚಾರಣೆಗಾಗಿ ಠಾಣೆಗೆ ಕರೆತಂದು ಕೂಲಂಕುಷವಾಗಿ ವಿಚಾರಣೆಗೊಳಪಡಿಸಿದಾಗ ಸದ್ರಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಬಗ್ಗೆ ಚಾಲಕ ಹಾಗೂ […]

Continue Reading

ಜೂನ್ 16 ರಂದು ಸಂಜೆ 4.30 ಕ್ಕೆ ಸುರತ್ಕಲ್ ನಲ್ಲಿ ಸರಕಾರಿ ಆಸ್ಪತ್ರೆಗಳನ್ನು ಉಳಿಸಿ, ಬಲಗೊಳಿಸಲು ಒತ್ತಾಯಿಸಿ ಮಾನವ ಸರಪಳಿ

ಸರಕಾರಿ ಆಸ್ಪತ್ರೆಗಳನ್ನು ಉಳಿಸುವುದು, ಬಲಗೊಳಿಸಲು ಒತ್ತಾಯಿಸುವುದು ಇಂದಿನ ತುರ್ತು. ಬನ್ನಿ ಸುರತ್ಕಲ್ ನಲ್ಲಿ ನಡೆಯುವ ಮಾನವ ಸರಪಳಿಗೆ ಕೊಂಡಿಯಾಗಿ, ಹೋರಾಟಕ್ಕೆ ಬಲ ತುಂಬಿ. ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವುವ ಆರೋಗ್ಯ ಇಲಾಖೆಯ ಆದೇಶ ಅತ್ಯಂತ ಆಘಾತಕಾರಿ. ಖಾಸಗಿ ವೈದ್ಯಕೀಯ ಸೇವೆಯು ವ್ಯಾಪಾರವನ್ನು ದಾಟಿ ದಂಧೆಯಾಗಿರುವ ಈ ಕಾಲದಲ್ಲಿ ಸರಕಾರಿ ಆಸ್ಪತ್ರೆಗಳ ಬಲವರ್ಧನೆಯೆ ಜನಸಾಮಾನ್ಯರ ಪಾಲಿಗೆ ಆಶಾಕಿರಣ.ಸರಕಾರಿ ಆರೋಗ್ಯ ಸೇವೆಯ ಖಾಸಗೀಕರಣದ ವಿರುದ್ಧ ದೊಡ್ಡ ಪ್ರತಿರೋಧವನ್ನು ನಾವು ತೋರಬೇಕಿದೆ. ಜೊತೆಗೆ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು […]

Continue Reading

ಜೈಪುರ: ಲಂಚ ಪ್ರಕರಣ; ಜೈಪುರದ ಭ್ರಷ್ಟಾಚಾರ ನಿಗ್ರಹ ದಳದ (ACB) ಬಲೆಗೆ ಬಿದ್ದ ಬೆಂಗಳೂರು ಪೊಲೀಸರು

ರಾಜಸ್ಥಾನದ ಜೈಪುರದಲ್ಲಿ ಬೆಂಗಳೂರು ಮೂಲದ ಪೊಲೀಸ್ ಸಿಬ್ಬಂದಿಯೇ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ ಬಿದ್ದಿರುವ ಘಟನೆಯೊಂದು ಬೆಳಕಿಗೆ ಬಂದಿದೆ. ದೂರುದಾರರೊಬ್ಬರಿಂದ 40 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯ ಮೂವರು ಪೊಲೀಸರು ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತರನ್ನು ಬೆಂಗಳೂರಿನ ಎಚ್‌ಎಎಲ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಅನಿತಾ ಹಾಗೂ ಮುಖ್ಯ ಪೇದೆಗಳಾದ ಯತೀಶ್ ಕುಮಾರ್ ಮತ್ತು ಉಳುವಪ್ಪ ಎಂದು ಗುರುತಿಸಲಾಗಿದೆ. ಕರ್ತವ್ಯದ ನಿಮಿತ್ತ ಜೈಪುರಕ್ಕೆ ತೆರಳಿದ್ದ ಈ ಮೂವರು ಪೊಲೀಸ್ ಅಧಿಕಾರಿಗಳು ಅಲ್ಲಿಯೇ […]

Continue Reading

ಇಲ್ಲಿ ಗುಂಡಿ ದಾಟಲು ಗುಂಡಿಗೆ ಬೇಕು.! ಸರಲಿಕಟ್ಟೆ ಪ್ರಮುಖ ರಸ್ತೆಯಲ್ಲಿ ಸಂಚರಿಸಿದರೆ ನಟ್ಟು ಬೋಲ್ಟು ಲೂಸು-ಲೂಸು

ದಪ್ಪ ಚರ್ಮದ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೈಗನ್ನಡಿ ಈ ರಸ್ತೆ ಸರ್ವ ಧರ್ಮೀಯ ಬಾಂಧವರಿಗೆ ನನ್ನ ನಮಸ್ಕಾರಗಳು. ನನ್ನನ್ನು ನೀವು ರಾತ್ರಿ-ಹಗಲು ಅನ್ನದೆ ಉಪಯೋಗಿಸಿ, ತನ್ನ ಎದೆಯ ಮೇಲೆ ನೀವು ವಾಹನ ಓಡಿಸಿ ಇದೀಗ ನನಗೆ ಪ್ರಾಯವಾಗಿದೆ. ಮಳೆ ಗಾಳಿ, ಬಿಸಿಲು ಎನ್ನದೆ ನಿಮಗೆ ಮೈಯೊಡ್ಡಿ ಸೇವೆ ನೀಡಿದೆ. ಇದೀಗ ನನ್ನ ದೇಹದ ಹಲವು ಭಾಗಗಳಲ್ಲಿ ಗುಂಡಿ ಎಂಬ ಹುಣ್ಣಿನ ರೋಗ ಬಾಧಿಸಿದೆ. ಬಿಳಿ ಬಟ್ಟೆಯ ಖಾಧಿದಾರಿಗಳು ಗಿರ್ ಗೀಟ್ಲೆ ಹೊಡೆಯುವ ಲೈಟ್ ಹಾಕಿ, ನನ್ನ ಎದೆಯ ಮೇಲೆಯೇ […]

Continue Reading

ರಸ್ತೆ ದುರಸ್ತಿಗೆ ಆಗ್ರಹ: ಬೆಳ್ತಂಗಡಿ ತಾಲೂಕಿನ ಗ್ರಾಮಸ್ಥರಿಂದ ಮುಂಬರುವ ಚುನಾವಣೆಗಳ ಬಹಿಷ್ಕಾರದ ಎಚ್ಚರಿಕೆ

ಬೆಳ್ತಂಗಡಿ ತಾಲೂಕಿನ ಪುತ್ತಿಲ-ಬಾರ್ಯ-ತೆಕ್ಕಾರು-ಸರಳಿಕಟ್ಟೆ ನಾಗರಿಕರ ಗೋಳು ಕೇಳುವವರಾರು.? ಬೆಳ್ತಂಗಡಿ: ತಾಲೂಕಿನ ಪುತ್ತಿಲ ಗ್ರಾಮದಿಂದ ಸರಳಿಕಟ್ಟೆವರೆಗಿನ ಹಾಗೂ ಸುತ್ತಮುತ್ತಲಿನ ಒಳರಸ್ತೆಗಳ ಅತ್ಯಂತ ಶೋಚನೀಯ ಸ್ಥಿತಿಯನ್ನು ಖಂಡಿಸಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರಂತರ ನಿರ್ಲಕ್ಷ್ಯದ ವಿರುದ್ಧ ಆಕ್ರೋಶಗೊಂಡಿರುವ ಗ್ರಾಮಸ್ಥರು ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ. ಪ್ರಮುಖ ರಸ್ತೆಗಳ ದುಸ್ಥಿತಿ ಮತ್ತು ಸಾರ್ವಜನಿಕರ ಗೋಳು ಕೇಳುವವರಿಲ್ಲಾಂತಗಿದೆ. ಸಂಪೂರ್ಣ ಹದಗೆಟ್ಟ ಸಂಪರ್ಕ ಕೊಂಡಿಪುತ್ತಿಲದಿಂದ ಸರಳಿಕಟ್ಟೆವರೆಗಿನ ಪ್ರಮುಖ ಸಂಪರ್ಕ ರಸ್ತೆಗಳು ಸಂಪೂರ್ಣವಾಗಿ ಕಿತ್ತುಹೋಗಿದ್ದು, ಸಂಚಾರಕ್ಕೆ ಅಯೋಗ್ಯವಾಗಿವೆ. ಬಹುತೇಕ ಒಳರಸ್ತೆಗಳು ಅಭಿವೃದ್ಧಿ ಕಾಣದೆ ವರ್ಷಗಳೇ […]

Continue Reading

ಮನೆ ಹಾಗೂ ಕುಟುಂಬದ ಜವಾಬ್ದಾರಿ ನಿರ್ವಹಿಸುವ ಗೃಹಿಣಿಯರು ರಾಷ್ಟ್ರ ನಿರ್ಮಾಣಕಾರರು

ಗೃಹಿಣಿಯರ ಕೆಲಸ ಪ್ರತಿ ತಿಂಗಳ 30,000 ರೂಪಾಯಿ ವೇತನಕ್ಕೆ ಸಮ: ಸುಪ್ರೀಂ ಕೋರ್ಟ್ ಮನೆ ಹಾಗೂ ಕುಟುಂಬದ ಜವಾಬ್ದಾರಿ ನಿರ್ವಹಿಸುವ ಗೃಹಿಣಿಯರ ಕೆಲಸ ಸಮಾಜ ಮತ್ತು ರಾಷ್ಟ್ರ ನಿರ್ಮಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇಂತಹ ಮಹತ್ವದ ಕಾರ್ಯ ನಿರ್ವಹಿಸುವ ಮಹಿಳೆಯರನ್ನು ಗೃಹಿಣಿ ಬದಲು ರಾಷ್ಟ್ರ ನಿರ್ಮಾಣಕಾರರು ಎಂದು ಪರಿಗಣಿಸುವುದು ಉತ್ತಮ ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಗೃಹಿಣಿಯರ ಕೆಲಸ ಪ್ರತಿ ತಿಂಗಳು 30 ಸಾವಿರ ರೂಪಾಯಿ ಸಂಬಳಕ್ಕೆ ಸಮ ಎಂದು ತೀರ್ಪು ನೀಡಿದೆ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ […]

Continue Reading

ಪಣಂಬೂರು ಪೊಲೀಸರ ಕಾರ್ಯಾಚರಣೆ: ಬಿಹಾರ ಮೂಲದ ಚಂದನ್ ಚೌಹಾನ್ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ 62 ನೇ ತೋಕೂರು ಗ್ರಾಮದ ಜೋಕಟ್ಟೆ ಅರಿಕೆರೆ ಎಂಬಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯಕ್ಕೆ (MSEZ) ಸೇರಿದ ನೀರು ಹರಿಯುವ ತೋಡಿನಲ್ಲಿ ದಿನಾಂಕ: 10-06-2026 ರಂದು ಬೆಳಗ್ಗೆ 8:00ರ ಸಮಯಕ್ಕೆ, ಸರಿ-ಸುಮಾರು 40 ವರ್ಷದ ಆಸುಪಾಸಿನ ಅಪರಿಚಿತ ಗಂಡಸಿನ ಮೃತದೇಹವು ಕುತ್ತಿಗೆ ಕೊಯ್ದು ಕೊಲೆ ಮಾಡಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಈ ಬಗ್ಗೆ ಕಿಶೋರ್ ಎಂಬವರು ನೀಡಿದ ದೂರಿನಂತೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.ಸಂ: 82/2026 ರಂತೆ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ […]

Continue Reading

ಶಿರ್ತಾಡಿ: ಸರಕಾರಿ ಆಸ್ಪತ್ರೆಗೆ ಖಾಯಂ ರೋಗಿಗಳಿದ್ದಾರೆ; ಖಾಯಂ ವೈದ್ಯಾಧಿಕಾರಿಗಳಿಲ್ಲ.!

ಆರೋಗ್ಯ ಸಚಿವರು ಜಿಲ್ಲೆಯವರು, ಆಸ್ಪತ್ರೆಗೆ ಬಡಿದಿರುವ ರೋಗವ ವಾಸಿ ಮಾಡಿಯಾರಾ.? ಇದು ನಮ್ಮ ಆರೋಗ್ಯ ಮಂತ್ರಿ ಮಹೋದಯರ ಜಿಲ್ಲೆಯ ಪಕ್ಕದ ಊರು ಶಿರ್ತಾಡಿ. ಇಲ್ಲಿ ಬಹಳ ಹಳೇ ಕಾಲದ ಸರಕಾರಿ ಆಸ್ಪತ್ರೆವೊಂದಿದೆ. ಈ ಆಸ್ಪತ್ರೆ ಸರಿ-ಸುಮಾರು ಹನ್ನೆರಡು ಊರುಗಳಿಗೆ ಕೇಂದ್ರವಾಗಿರುವ ಬಡವರ ಸರಕಾರಿ ಆಸ್ಪತ್ರೆ. ಶಿರ್ತಾಡಿ ಆಸುಪಾಸಿನ ಹಲವು ಗ್ರಾಮಗಳಿಗೆ ಸರಕಾರಿ ಆಸ್ಪತ್ರೆ ಅಂತ ಇರುವುದು ಇದೊಂದೇ ಆರೋಗ್ಯ ಮಂತ್ರಿಗಳೇ.. ಸುಮಾರು ವರ್ಷಗಳ ಇತಿಹಾಸ ಹೊಂದಿರುವ ಈ ಆಸ್ಪತ್ರೆ ಈಗ ಈ ನಾಡಿನ ನಾಗರಿಕರಿಗೆ ಬೇಕು. ಆದರೆ.. […]

Continue Reading

ಗಂಜಿಮಠ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ನಿರಂತರ ಅತ್ಯಾಚಾರ; ನೆರೆಮನೆಯ ಜಲೀಲ್ ಎಂಬಾತನ ದುಷ್ಕೃತ್ಯ ಬಯಲು

ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯ ಗಂಜಿಮಠ ನಾರ್ಲಪದವು ಎಂಬಲ್ಲಿ ಹತ್ತನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಈ ಸಂಬಂಧ ಬಾಲಕಿ ಮೇಲೆ ನಿರಂತರ ಅತ್ಯಾಚಾರಗೈದ ನೆರೆಮನೆಯ ಆರೋಪಿ ಜಲೀಲ್ ಎಂಬಾತನ ಮೇಲೆ ಪೋಸ್ಕೋ ಪ್ರಕರಣ ದಾಖಲಾಗಿದೆ. ಅಪ್ರಾಪ್ತ ಬಾಲಕಿಗೆ (ಹೆಸರು ಬದಲಿಸಲಾಗಿದೆ) ಆರು ವರ್ಷ ತುಂಬುವಾಗಲೇ ತಾಯಿಯನ್ನು ಕಳೆದುಕೊಂಡಿದ್ದು, ತಂದೆ ಬಿಟ್ಟು ಹೋಗಿದ್ದಾರೆ. ಈಕೆ ತನ್ನ ತಾಯಿಯ ತಂಗಿ (ಚಿಕ್ಕಮ್ಮ) ಯೊಂದಿಗೆ ಗಂಜಿಮಠ ಸಮೀಪದ ನಾರ್ಲಪದವು […]

Continue Reading

ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು: ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು, ರಾಜ್ಯ ಸರ್ಕಾರಕ್ಕೆ ಮಹತ್ವದ ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು, ಯುನಿಸೆಕ್ಸ್ ಸಲೂನ್‌ಗಳು ಹಾಗೂ ಜಿಮ್ನೇಷಿಯಂಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಕರ್ನಾಟಕ ಕಾನೂನು ಆಯೋಗ ಸರ್ಕಾರಕ್ಕೆ ಮಹತ್ವದ ಶಿಫಾರಸು ಮಾಡಿದೆ. ಮಂಗಳೂರಿನ ಮಾಜಿ ಸರ್ಕಾರಿ ವಕೀಲ ಮನೋರಾಜ್ ರಾಜೀವ ಅವರು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿ ಆಯೋಗ ತನ್ನ 76ನೇ ವರದಿಯಲ್ಲಿ ಈ ಶಿಫಾರಸುಗಳನ್ನು ನೀಡಿದೆ. ಪ್ರಸ್ತುತ ರಾಜ್ಯದಲ್ಲಿ ಸ್ಪಾ ಮತ್ತು ಮಸಾಜ್ ಕೇಂದ್ರಗಳ ಕಾರ್ಯನಿರ್ವಹಣೆಯನ್ನು ನೇರವಾಗಿ ನಿಯಂತ್ರಿಸುವ ಸ್ಪಷ್ಟ ಕಾನೂನು ಇಲ್ಲ. ಈ ಹಿನ್ನೆಲೆಯಲ್ಲಿ […]

Continue Reading