ಭಯೋತ್ಪಾದನೆ, ಡ್ರಗ್ಸ್ ಮಾಫಿಯಾ ಮೂಲೋಚ್ಚಾಟನೆಗೆ ಕೇಂದ್ರ ಸಂಕಲ್ಪ; ‘ಮಲ್ಟಿ ಏಜೆನ್ಸಿ ಸೆಂಟರ್’ ಪರಿಪೂರ್ಣ ಬಲ, ಅಮಿತ್ ಶಾ ರಣತಂತ್ರ

ನವದೆಹಲಿ: ರಾಷ್ಟ್ರದ ಭದ್ರತೆ ವಿಚಾರದಲ್ಲಿ ಯಾವುದೇ ರಾಜಿ ಬೇಡ ಎಂದು ಪ್ರತಿಪಾದಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸರ್ಕಾರದ ಸಮಗ್ರ ದೃಷ್ಟಿಕೋಣವನ್ನು ಅಳವಡಿಸಿಕೊಂಡು ಭಯೋತ್ಪಾದಕ ಜಾಲಗಳನ್ನು ಮತ್ತು ಅವುಗಳ ಬೆಂಬಲಿತ ಪರಿಸರ ವ್ಯವಸ್ಥೆಯನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ. ಪ್ರಸ್ತುತ ಸಂದರ್ಭದಲ್ಲಿ ಈ ವಿಚಾರದಲ್ಲಿ ಎಲ್ಲಾ ಸಂಸ್ಥೆಗಳ ನಡುವೆ ಸಮನ್ವಯ ಇರಬೇಕಿದೆ ಎಂಬ ಸಲಹೆಯನ್ನೂ ಅವರು ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ದೆಹಲಿಯಲ್ಲಿ ದೇಶದ ಭದ್ರತಾ ಸವಾಲುಗಳನ್ನು […]

Continue Reading

ಮುಸ್ಲೀಮರನ್ನು ಕಟಕಟೆಯಲ್ಲಿ ನಿಲ್ಲಿಸಿದ್ರಾ ಪುರುಷೋತ್ತಮ ಬಿಳಿಮಲೆ.?

ಕನ್ನಡ ಓದಲು-ಬರೆಯಲು ಬಾರದ ಲಕ್ಷಾಂತರ ಜನ ಕರ್ನಾಟಕದಲ್ಲಿದ್ದಾರೆ. ಅದರಲ್ಲಿ ಮುಸ್ಲೀಮರ ಸಂಖ್ಯೆ ಅತ್ಯಲ್ಪ ಪ್ರಮಾಣದ್ದು. ಕನ್ನಡ ಮಾಧ್ಯಮ ಶಾಲೆ-ಕಾಲೇಜುಗಳಲ್ಲಿ ಶಿಕ್ಷಣ ಪಡೆಯದೇ ಇರುವುದೇ ಹೊರತು ಮದರಸಾವಲ್ಲ. ✍️. ನವೀನ್ ಸೂರಿಂಜೆ, ಪತ್ರಕರ್ತರು ಮದರಸಾದಲ್ಲಿ ‘ಕನ್ನಡ ಕಲಿಕೆ’ ಎಂಬ ಸರ್ಕಾರಿ ಕಾರ್ಯಕ್ರಮ ಯೋಜನೆಯನ್ನು ಕನ್ನಡ ಅಭಿವೃದ್ದಿ ಪ್ರಾಧಿಕಾರ ಯಾಕೆ ಕೈಬಿಟ್ಟಿತು ಎಂಬುದನ್ನು ಅಧ್ಯಕ್ಷರಾದ ಪುರುಷೋತ್ತಮ ಬಿಳಿಮಲೆಯವರು ಸ್ಪಷ್ಟವಾಗಿ ಹೇಳಬೇಕಿತ್ತು. “ವಿರೋಧ ಪ್ರಕಟವಾದ್ದರಿಂದ ಆ ವಿಷಯವನ್ನು ಕೈ ಬಿಡಲಾಗಿದೆ” ಎಂದು ಹೇಳಿ ಸುಮ್ಮನಾದರೆ “ಇದು ಅತಿಯಾಯ್ತು. ಕನ್ನಡ ಕಲಿಯುವುದಕ್ಕೂ ಮುಸ್ಲೀಮರ […]

Continue Reading

ಕೀರ್ತಿ ಅಡಿಯಲ್ಲಿ 100 ದಿನಗಳಲ್ಲಿ ಒಂದು ಲಕ್ಷ ಕ್ರೀಡಾಪಟುಗಳನ್ನು ಗುರುತಿಸಲಾಗುವುದು: ಮಾಂಡವೀಯ

ಹೊಸದಿಲ್ಲಿ: ಕ್ರೀಡಾ ಸಚಿವ ಮನ್ಸುಖ್ ಮಾಂಡವಿಯಾ ಅವರು 100 ದಿನಗಳಲ್ಲಿ ಒಂದು ಲಕ್ಷ ಯುವ ಅಥ್ಲೀಟ್‌ಗಳನ್ನು ಗುರುತಿಸುವ ಗುರಿಯೊಂದಿಗೆ ಕೀರ್ತಿ ಯೋಜನೆಯ ಎರಡನೇ ಹಂತಕ್ಕೆ ಶುಕ್ರವಾರ ಚಾಲನೆ ನೀಡಿದರು. ಖೇಲೋ ಇಂಡಿಯಾ ರೈಸಿಂಗ್ ಟ್ಯಾಲೆಂಟ್ ಐಡೆಂಟಿಫಿಕೇಶನ್ (ಕೀರ್ತಿ) ಅಡಿಯಲ್ಲಿ ರಾಷ್ಟ್ರವ್ಯಾಪಿ ಪ್ರತಿಭಾ ಹುಡುಕಾಟವು 2047 ರ ವೇಳೆಗೆ ಭಾರತವನ್ನು ಒಲಿಂಪಿಕ್ ಕ್ರೀಡಾಕೂಟದಲ್ಲಿ ಅಗ್ರ ಐದು ರಾಷ್ಟ್ರಗಳಲ್ಲಿ ಒಂದನ್ನಾಗಿ ಮಾಡಲು ಒಂದು ಮೆಟ್ಟಿಲು ಎಂದು ಅವರು ಭಾವಿಸಿದರು. ಇಲ್ಲಿನ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ಎರಡನೇ ಹಂತದ ಕಾರ್ಯಕ್ರಮಕ್ಕೆ ಚಾಲನೆ […]

Continue Reading

ಮದರಸಾಕ್ಕೆ ‘ನುಗ್ಗುವ ಸರ್ಕಾರಿ ಕನ್ನಡ ಕಾಳಜಿ’ಯ ಅಪಾಯಗಳು.!

ಮುಸ್ಲೀಮರಿಗೆ ಕನ್ನಡ ಬರಲ್ಲ ಎನ್ನುವುದಕ್ಕೂ ಮದರಸಾಕ್ಕೂ ಏನು ಸಂಬಂಧ.? ಕನ್ನಡ ಬಾರದೇ ಇದ್ದಾರೆ ಅದಕ್ಕೆ ಕಾರಣ ಶಿಕ್ಷಣದ ಕೊರತೆಯೇ ಹೊರತು ಮದರಸವಲ್ಲ. ✍️. ನವೀನ್ ಸೂರಿಂಜೆ,ಪತ್ರಕರ್ತ ‘ಮದರಸದಲ್ಲಿ ಕನ್ನಡ ಜಾರಿ’ ಇದು ಸರಕಾರವೊಂದು ಮಾಡಬೇಕಾದ ಆಧ್ಯತೆಯ ಕೆಲಸವಲ್ಲ. ಮದರಸ ಮಾತ್ರವಲ್ಲ, ಸಂಸ್ಕೃತ ವೇದ ಪಾಠ ಶಾಲೆ, ಕ್ರಿಶ್ಚಿಯನ್ನರ ಅಡಾರೇಷನ್ ಸೆಂಟರ್ ಗಳಲ್ಲೂ ಕನ್ನಡ ಕಡ್ಡಾಯ ಮಾಡುವುದು ಸರ್ಕಾರಿ ಪ್ರಾಧಿಕಾರದ ಕೆಲಸವಲ್ಲ. ಮುಸ್ಲೀಮರ ಮೇಲಿನ ಸಾವಿರಾರು ಆರೋಪಗಳಿಗೆ ಮದರಸಾ ಕಾರಣವಾಗಿರುವಂತೆ ಮುಸ್ಲೀಮರಿಗೆ ಕನ್ನಡ ಬರಲ್ಲ ಎಂಬ ಆರೋಪಕ್ಕೂ ಮದರಸಾವೇ […]

Continue Reading

ಹಿಂದೂ ಧರ್ಮ ವಿರೋಧಿ ಧೋರಣೆ ಜಗದೀಶ್ ಶೆಟ್ಟರ್ ಸರ್ಕಾರವೇ ಹೊರತು ಕಾಂಗ್ರೆಸ್ ಸರ್ಕಾರವಲ್ಲ

ಪೂಂಜಾರಿಗೆ ತಾಕತ್ತಿದ್ದರೆ 2013 ರ ಬಿಜೆಪಿ ನೇತೃತ್ವದ ಜಗದೀಶ್ ಶೆಟ್ಟರ್ ಅವರ ಸರ್ಕಾರವನ್ನು ಟೀಕಿಸಿ‌ ಗಂಡಸ್ತನ ತೋರಿಸಲಿ: ಶೇಖರ್ ಎಲ್. ಸಿಪಿಐ(ಎಂ) ಮುಖಂಡರು ಶಾಲಾ ಮೈದಾನ ಸೇರಿದಂತೆ ಆವರಣದಲ್ಲಿ ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದ ಯಾವುದೇ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ನೇತೃತ್ವದ ಬಿಜೆಪಿ ಸರ್ಕಾರ ದಿನಾಂಕ 7-2-2013 ರಂದು ಆದೇಶ ಹೊರಡಿಸಿದರೂ ಕೂಡ 6 ವರ್ಷಗಳ ಕಾಲ ಶಾಸಕನಾಗಿರುವ ಶಾಸಕ ಹರೀಶ್ ಪೂಂಜಾರಿಗೆ ಇನ್ನೂ ತಿಳಿಯದಿರುವುದು ಜಗತ್ತಿನ ಅತ್ಯಂತ […]

Continue Reading

ಪುತ್ತೂರು: ಕೂರ್ನಡ್ಕ ಜಂಕ್ಷನ್ ನಲ್ಲಿ ಅಪಾಯಕಾರಿ ಮರ; ತೆರವುಗೊಳಿಸಲು ಆಗ್ರಹ

ಪುತ್ತೂರು: ಕೂರ್ನಡ್ಕ ಜಂಕ್ಷನ್ ಬಳಿ ಇರುವ ಅಪಾಯಕಾರಿ ಮರವೊಂದು ಇವತ್ತೋ, ನಾಳೆಯೋ ಬೀಳುವ ಪರಿಸ್ಥಿತಿಯಲ್ಲಿದೆ. ಒಂದು ವೇಳೆ ಇದನ್ನು ತೆರವುಗೊಳಿಸದೇ ಹೋದರೆ ದೊಡ್ಡ ಅನಾಹುತ ಸಂಭವಿಸಬಹುದು ಎಂಬ ಆತಂಕದಲ್ಲಿದ್ದಾರೆ ಸ್ಥಳೀಯರು. ಕೂಡಲೇ ಈ ಮರವನ್ನು ತೆರವುಗೊಳಿಸಿದ್ದಲ್ಲಿ ಇದೇ ಮಾರ್ಗದಲ್ಲಿ ದಿನನಿತ್ಯ ಹೋಗುವ ಶಾಲಾ ಮತ್ತು ಮದ್ರಸಾ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಅಪಾಯ ಕಟ್ಟಿಟ್ಟ ಬುತ್ತಿ. ಈ ರಸ್ತೆಯಲ್ಲಿ ವಾಹನ ಸಂಚಾರದ ದಟ್ಟಣೆ ಇರುವುದರಿಂದ ವಾಹನದ ಮೇಲೆಯೂ ಮರ ಬೀಳುವ ಅಪಾಯ ಇದೆ. ಮರದ ಬಳಿಯೇ ವಿದ್ಯುತ್ ತಂತಿಗಳು […]

Continue Reading

ಬೆಳಗ್ಗೆ ಹಾಗೂ ಸಾಯಂಕಾಲ ಐದು ಗಂಟೆ ಸಮವಸ್ತ್ರದಲ್ಲಿ ಪೊಲೀಸರು ಕಡ್ಡಾಯವಾಗಿ ಗಸ್ತು ತಿರುಗಬೇಕು: ಪೊಲೀಸ್ ಮಹಾ ನಿರ್ದೇಶಕರು

ಸಾರ್ವಜನಿಕ ಪ್ರದೇಶಗಳಲ್ಲಿ ಬೆಳಗ್ಗೆ ಹಾಗೂ ಸಾಯಂಕಾಲ ಐದು ಗಂಟೆ ಸಮವಸ್ತ್ರದಲ್ಲಿ ಪೊಲೀಸರು ಕಡ್ಡಾಯವಾಗಿ ಗಸ್ತು ತಿರುಗಬೇಕು ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಡಾ. ಅಲೋಕ್ ಮೋಹನ್ ಆದೇಶಿಸಿದ್ದಾರೆ. ರಾಜ್ಯದ ಪೊಲೀಸರ ಕಾರ್ಯನಿರ್ವಹಣೆ ಕುರಿತು 20 ಸ್ಪಷ್ಟ ಸೂಚನೆಗಳನ್ನು ನೀಡಿರುವ ಡಿಜಿಪಿ, ಕಾನೂನು ಸುವ್ಯವಸ್ಥೆ ಹಾಗೂ ಅಪರಾಧ ತಡೆಯುವ ಸಲುವಾಗಿ ಸಾರ್ವಜನಿಕ ಪ್ರದೇಶದಲ್ಲಿ ಪ್ರತಿನಿತ್ಯ ಬೆಳಗ್ಗೆ 9 ರಿಂದ 11 ಹಾಗೂ ಸಂಜೆ 6 ರಿಂದ ರಾತ್ರಿ 9 ರವರೆಗೆ ಸಮವಸ್ತ್ರ ಧರಿಸಿ ಗಸ್ತು ತಿರುಗಬೇಕು ಎಂದು ನಿರ್ದೇಶಿಸಿದ್ದಾರೆ. […]

Continue Reading

ಬಂಟ್ವಾಳ: ಕೊಳ್ನಾಡು ಗ್ರಾಮದ ಖಂಡಿಗ-ಸುರಿಬೈಲು ಸಂಪರ್ಕದ ಕಾಂಕ್ರೀಟ್ ರಸ್ತೆ ಕುಸಿತ; ಕಳಪೆ ಕಾಮಗಾರಿ ಕಾರಣ

ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ-ಸುರಿಬೈಲು ಸಂಪರ್ಕದ ಕಾಂಕ್ರೀಟ್ ರಸ್ತೆ ಕುಸಿತವಾಗಿದೆ. ಪ್ರತಿನಿತ್ಯ ನೂರಾರು ಸಾರ್ವಜನಿಕ ವಾಹನಗಳು, ಶಾಲಾ ಮಕ್ಕಳ ವಾಹನಗಳು ಮಂಚಿ, ಸುರಿಬೈಲು ಕಡೆಗೆ ಇದೇ ರಸ್ತೆ ಮೂಲಕ ಸಾಗುತ್ತಿದ್ದುವು. ಮೂರು ವರ್ಷಗಳ ಹಿಂದಷ್ಟೇ ಕಾಂಕ್ರಿಟೀಕರಣ ಮಾಡಿದ್ದ ಸುರಿಬೈಲು-ಖಂಡಿಗ ಏಕೈಕ ಸಂಪರ್ಕ ರಸ್ತೆ ಕುಸಿತವಾಗಿದೆ. ಇದರಿಂದಾಗಿ ಇನ್ಮುಂದೆ ಇಲ್ಲಿನ ಶಾಲಾ ಮಕ್ಕಳು, ಸಾರ್ವಜನಿಕರು ನಾಲ್ಕು ಕಿಲೋ ಮೀಟರ್ ಸುತ್ತು ಬಳಸಿ ಮಂಚಿ ತಲುಪಬೇಕಾದ ಅನಿವಾರ್ಯತೆ ಎದುರಾಗಿದೆ. ರಸ್ತೆ ಕುಸಿಯುತ್ತಿರುವ ದೃಶ್ಯ ಸಾಮಾಜಿಕ ತಾಣಗಳಲ್ಲಿ ವೈರಲಾಗುತ್ತಿದ್ದು ಮೋರಿ […]

Continue Reading

ಆನ್ ಲೈನ್ ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ದೃಶ್ಯ ವೀಕ್ಷಿಸುವುದು ಮಾಹಿತಿ ತಂತ್ರಜ್ಞಾನದ ಕಾಯ್ದೆಯಡಿ ಅಪರಾಧ ಹೊರಿಸಲಾಗದು: ಹೈಕೋರ್ಟ್

ಆನ್ ಲೈನ್ ನಲ್ಲಿ ಮಕ್ಕಳ ಅಶ್ಲೀಲ ವಿಡಿಯೋ ದೃಶ್ಯ ವೀಕ್ಷಿಸಿದ ವ್ಯಕ್ತಿಯ ಮೇಲೆ ಮಾಹಿತಿ ತಂತ್ರಜ್ಞಾನದ ಕಾಯ್ದೆಯಡಿ ಅಪರಾಧ ಹೊರಿಸಲಾಗದು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಮಕ್ಕಳ ಅಶ್ಲೀಲ ಚಿತ್ರ ವೀಕ್ಷಣೆ ಅಪರಾಧವಲ್ಲ, ಅಪ್ ಲೋಡ್, ಪ್ರಸರಣ ಮಾಡುವುದು ಅಪರಾಧವೆಂದು ಹೇಳಿ ಪ್ರಕರಣ ರದ್ದುಪಡಿಸಲಾಗಿದೆ. ವೆಬ್ ಸೈಟ್ ನಲ್ಲಿ ಮಕ್ಕಳ ಅಶ್ಲೀಲ ಫೋಟೋ ಮತ್ತು ವಿಡಿಯೋ ವೀಕ್ಷಿಸಿದ ಆರೋಪದ ಮೇಲೆ ತನ್ನ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಿಇಎನ್ ಪೊಲೀಸ್ ಠಾಣೆ ಪೊಲೀಸರು ದಾಖಲಿಸಿದ ಎಫ್‌ಐಆರ್ ರದ್ದು […]

Continue Reading

ಐಷಾರಾಮಿ ಕಾರುಗಳನ್ನು ಕಳವು ಮಾಡಿ, ನಕಲಿ ಎನ್‌ಒಸಿ ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ಸಿಸಿಬಿ ಪೊಲೀಸರು

ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ, 2.56 ಕೋಟಿ ರೂಪಾಯಿ ಮೌಲ್ಯದ 17 ಕಾರುಗಳ ವಶ ನಗರ ಪ್ರದೇಶದಲ್ಲಿ ಕಳವು ಮಾಡಿದ ವಿವಿಧ ಮಾದರಿಯ ಕಾರುಗಳಿಗೆ ನಕಲಿ ಎನ್‌ಒಸಿ ಸೃಷ್ಟಿಸಿ ಅಮಾಯಕ ಜನರಿಗೆ ಕಾರುಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಭೇದಿಸಿ ಇಬ್ಬರು ಅಂತಾರಾಜ್ಯ ಕಳ್ಳರನ್ನು ಬಂಧಿಸಿ 2.56 ಕೋಟಿ ರೂಪಾಯಿ ಮೌಲ್ಯದ 17 ಕಾರುಗಳನ್ನು ವಶಪಡಿಸಿ ಕೊಂಡಿದ್ದಾರೆ. ಗೋವಾದ ಆಸ್ಟಿನ್ ಕರೋಡ ಅಲಿಯಾಸ್ ಚಿಂಟು ಮತ್ತು ಪೇಜರ್ ಟೌನ್ ನಿವಾಸಿ ಸಯ್ಯದ್ ರಿಯಾಜ್ ಬಂಧಿತ ಆರೋಪಿಗಳು. […]

Continue Reading