ಬಜಪೆ ಫೈನಾನ್ಸ್ ಸೊಸೈಟಿಯಲ್ಲಿ ಆಸಿಡ್ ದಾಳಿ ನಡೆಸಿ, ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳ ಹೆಡೆಮುರಿ ಕಟ್ಟಿದ ಬಜಪೆ ಪೊಲೀಸರು

ಬಜಪೆ ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಹಾಕಿಕೊಂಡು ಬಂದು ಮಹಿಳೆಯರ ಮೇಲೆ ಆಸಿಡ್ ದಾಳಿ ನಡೆಸಿ ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಮತ್ತು 15 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹ ಎಂಬವರ ಮಾಲಕತ್ವದ ಬಜಪೆ ಫೈನಾನ್ಸ್ ಕಾರ್ಪೊರೇಷನ್ (ರಿ) ಸೊಸೈಟಿಗೆ ದಿನಾಂಕ 04.07.2024 ರಂದು ಸಂಜೆ 4 ರ ಸಮಯಕ್ಕೆ ಕಪ್ಪು ಬಣ್ಣದ ಸ್ಕೂಟರ್ ನಲ್ಲಿ ಬುರ್ಖಾ ಧರಿಸಿದ ಮಹಿಳೆ ಮತ್ತು […]

Continue Reading

2060 ರ ದಶಕದ ಹೊತ್ತಿಗೆ ಭಾರತದ ಜನಸಂಖ್ಯೆ 170 ಕೋಟಿ ತಲುಪಿ, ನಂತರ ಶೇಕಡಾ 12 ರಷ್ಟು ಕುಸಿತ ದಾಖಲಿಸಲಿದೆ. ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ದೇಶವಾಗಿ ಗುರುತಿಸಿಕೊಳ್ಳಲಿದೆ

2060 ರ ದಶಕದ ಹೊತ್ತಿಗೆ ಭಾರತದ ಜನಸಂಖ್ಯೆಯು ಸುಮಾರು 170 ಕೋಟಿ ತಲುಪಲಿದ್ದು, ನಂತರ ಶೇಕಡಾ 12 ರಷ್ಟು ಕುಸಿತ ದಾಖಲಿಸಿದೆ. ಆದಾಗ್ಯೂ ಶತಮಾನದುದ್ದಕ್ಕೂ ಭಾರತವು ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ದೇಶವಾಗಿ ಗುರುತಿಸಿಕೊಳ್ಳಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ‘ವರ್ಲ್ಡ್ ಪಾಪ್ಯುಲೇಷನ್ ಪ್ರಾಸ್ಪೆಕ್ಟಸ್-2024 ರ ವರದಿಯನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದೆ. “ಮುಂಬರುವ 50-60 ವರ್ಷಗಳಲ್ಲಿ ಜಗತ್ತಿನ ಜನಸಂಖ್ಯಾ ಬೆಳವಣಿಗೆ ಹೀಗೆಯೇ ಮುಂದುವರಿಯುವ ನಿರೀಕ್ಷೆ ಇದೆ. 2080 ರ ದಶಕದ ಮಧ್ಯಭಾಗದಲ್ಲಿ ವಿಶ್ವದ ಜನಸಂಖ್ಯೆ ಸುಮಾರು 10.3 […]

Continue Reading

ಹೊಂದಾಣಿಕೆ ರಾಜಕೀಯ, ಸಮನ್ವಯದ ಕೊರತೆ, ಭ್ರಷ್ಟಾಚಾರ ಆರೋಪ, ಕುಟುಂಬ ರಾಜಕರಣ, ರಾಜ್ಯದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣಗಳು.

ಹೊಂದಾಣಿಕೆ ರಾಜಕೀಯ, ಪಕ್ಷ ಮತ್ತು ಸರ್ಕಾರ ಮಧ್ಯೆ ಸಮನ್ವಯದ ಕೊರತೆ, ಸರ್ಕಾರ ಅಧಿಕಾರಕ್ಕೆ ಬಂದು ವರ್ಷ ತುಂಬುವ ಮೊದಲೇ ಗಂಭೀರವಾಗಿ ಕೇಳಿ ಬಂದ ಭ್ರಷ್ಟಾಚಾರ ಆರೋಪ, ಅಂಕೆ ದಾಟಿದ ಕುಟುಂಬ ರಾಜಕರಣವೇಲೋಕಸಭೆ ಚುನಾವಣೆಯ ಸೋಲಿಗೆ ಕಾಂಗ್ರೆಸ್‌ ನಾಯಕರು ಮುಂದಿಟ್ಟ ಕಾರಣಗಳು. ಸೋಲಿನ ಪರಾಮರ್ಶೆ ಎಐಸಿಸಿ ನಾಯಕ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ರಚಿಸಲಾದ ಸತ್ಯ ಶೋಧನಾ ಸಮಿತಿ ಮುಂದೆ ಕಾಂಗ್ರೆಸ್‌ ನಾಯಕರು ತಮ್ಮ ಅಭಿಪ್ರಾಯವನ್ನು ಮಂಡಿಸಿದರು. ಸಚಿವರು, ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು ಅಭಿಪ್ರಾಯ ಹಂಚಿಕೊಂಡರು. ವಿಧಾನಸಭೆ […]

Continue Reading

ನಾಮದ ಸೆಕ್ಸ್ ಮತ್ತು ಬಿ ಎಸ್ ವೈ ಸೆಕ್ಸುವಲ್ ಕ್ರೈಂ ಕೇಸ್ | ನಿನ್ನೆ ಕಲ್ಲಡ್ಕ, ಇಂದು ಬಿಎಸ್ ವೈಗೆ ಹೈಕೋರ್ಟ್ ರಿಲೀಫ್.!

ಬಾಲಕಿಗೆ ಸೆಕ್ಸುವಲ್ ಹೆರಾಸ್ಮೆಂಟ್ ಕೊಡುವುದಕ್ಕಿಂತ ನಾಮಕ್ಕೆ ಸೆಕ್ಸ್ ಎನ್ನುವುದು ಗಂಭೀರ ಅಪರಾಧವೇ.? ✍️. ನವೀನ್ ಸೂರಿಂಜೆ, ಪತ್ರಕರ್ತ ಮಗುವಿಗೆ ಲೈಂಗಿಕ ದೌರ್ಜನ್ಯ ಎಸಗಿ ಪೋಕ್ಸೋ ಪ್ರಕರಣ ಎದುರಿಸುತ್ತಿರುವ ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ಮತ್ತೆ ರಿಲೀಫ್ ನೀಡಿದೆ‌. ಈ ಹಿಂದೆ ಯಡಿಯೂರಪ್ಪರನ್ನು ಬಂಧಿಸದಂತೆ ಆದೇಶಿಸಿದ್ದ ಹೈಕೋರ್ಟ್, ಶುಕ್ರವಾರ ಯಡಿಯೂರಪ್ಪ ವಿಚಾರಣಾ ನ್ಯಾಯಾಲಯಕ್ಕೆ ಹಾಜರಾಗುವುದರಿಂದಲೂ ವಿನಾಯಿತಿ ನೀಡಿದೆ. “ಬಿ ಎಸ್ ಯಡಿಯೂರಪ್ಪ ವಿಚಾರಣೆಗೆ ಹಾಜರಾಗುತ್ತಾರೆ. ಹಾಗಾಗಿ ಬಂಧಿಸಬಾರದು. ವಿಚಾರಣೆ ನಡೆಯಲಿ” ಎಂದು ಬಿ ಎಸ್ ಯಡಿಯೂರಪ್ಪ ಪರ ವಕೀಲರು […]

Continue Reading

ಗರುಡ ಗ್ಯಾಂಗ್ ಸದಸ್ಯರಿಗೆ ಹಣಕಾಸಿನ ನೆರವು, ಕರ್ವೇಲು ನಿವಾಸಿ ಸಫಾರ ಯಾನೆ ಸಾಜಿದ ಬಂಧನ

ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ. ಗರುಡ ಗ್ಯಾಂಗ್‌ ಸದಸ್ಯರಿಗೆ ಸಫಾರ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್‌ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಸಫಾರ ಯಾನೆ ಸಾಜಿದ […]

Continue Reading

ಎಂಟು ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು 13 ವರ್ಷದ ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರಗೈದು ಹತ್ಯೆ

ಹೈದರಾಬಾದ್: ಎಂಟು ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ 13 ವರ್ಷದ ಮೂವರು ಅಪ್ರಾಪ್ತರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಮುಚ್ಚುಮರ್ರಿ ಎಂಬಲ್ಲಿ ನಡೆದಿದೆ. ಅತ್ಯಾಚಾರ ನಡೆಸಿ, ನಂತರ ಬಾಲಕಿಯನ್ನು ಕೊಲೆ ಮಾಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ವೇಳೆ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬಾಲಕಿಯ ಶವವನ್ನು ಕಾಲುವೆಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದ್ದು, ಬಾಲಕಿಯ ಶವ ಇನ್ನೂ ಪತ್ತೆಯಾಗಿಲ್ಲ. ಬಾಲಕಿ ಭಾನುವಾರ ಮುಚ್ಚುಮರ್ರಿ ಪಾರ್ಕ್‍ನಲ್ಲಿ ಆಟವಾಡುತ್ತಿದ್ದಳು. […]

Continue Reading

ಡಾ. ಭರತ್ ಶೆಟ್ರೆ.. ತಾವೊಬ್ಬ ಪೆದ್ದ ಶಾಸಕ.! ಕಾವೂರು ಪ್ರತಿಭಟನಾ ಸಭೆಯಲ್ಲಿ ಇನಾಯತ್ ಆಲಿ ಠಕ್ಕರ್

ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜಯಷೋಷ ‘ನಾನೂ ಹಿಂದೂ’ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಅಸಂಬದ್ಧ ಪದ ಬಳಕೆ ಮಾಡಿರುವ ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ವಿರುದ್ಧ ಸುರತ್ಕಲ್, ಗುರುಪುರ ಬ್ಲಾಕ್ ವತಿಯಿಂದ ಇನಾಯತ್ ಆಲಿ ನೇತೃತ್ವದಲ್ಲಿ ಕಾವೂರಿನಲ್ಲಿ ಇಂದು ಸಂಜೆ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರತ್ ಶೆಟ್ಟಿ ವಿರುದ್ಧ ಧಿಕ್ಕಾರ ಕೂಗಿ ಬಂಧಿಸುವಂತೆ ಆಗ್ರಹಿಸಿದರು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ […]

Continue Reading

ಮಾಜಿ ಸಚಿವ ರಮಾನಾಥ ರೈ ಆಪ್ತನ ರಹಸ್ಯ ಮೀಟಿಂಗ್.! ಕದ್ರಿ ಗೆಸ್ಟ್ ಹೌಸ್ ನಲ್ಲಿ ನಡೆದಿದ್ದೇನು.?

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಎಲ್ಲವೂ ಸರಿ ಇಲ್ಲ ಅನ್ನುವುದಕ್ಕೆ ಇದೊಂದು ಘಟನೆ ಸಾಕು. ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಐದಾರು ಬಣಗಳಿದ್ದು, ಒಬ್ಬ ನಾಯಕರನ್ನು ಕಂಡರೆ ಇನ್ನೊಬ್ಬರಿಗೆ ಆಗಲ್ಲ. ಬಿಜೆಪಿಯನ್ನು ಸೋಲಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಕ್ಕಿಂತ ಇಲ್ಲಿನ ನಾಯಕರು ಇನ್ನೊಬ್ಬರ ಕಾಲೆಳೆಯುವುದೇ ದೊಡ್ಡ ಸಾಧನೆ ಎಂದು ತಿಳಿದುಕೊಂಡು ಬಿಟ್ಟಿದ್ದಾರೆ. ಇದೇ ಕಾರಣದಿಂದ ಕಳೆದ ಮೂವತ್ತು ವರ್ಷಗಳಿಂದ ಕರಾವಳಿಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತಲೇ ಇದೆ. ಸೋತರೂ ಇವರಿಗೆ ಬುದ್ಧಿ ಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ […]

Continue Reading

ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ; ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಈಚೆಗೆ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. 2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ […]

Continue Reading

ಒಂದೇ ವರ್ಷದಲ್ಲಿ ಬರೋಬ್ಬರಿ 326 ಬಾಲೆಯರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದಾರೆ ಎಂಬ ಅಘಾತಕಾರಿ ಸಂಗತಿಯೊಂದು ಹೊರಬಿದ್ದಿದೆ.

ತುಮಕೂರು ಜಿಲ್ಲೆಯಿಂದ ಆಘಾತಕಾರಿ ಅಂಶವೊಂದು ಹೊರ ಬಿದ್ದಿದ್ದು, ಒಂದೇ ವರ್ಷದಲ್ಲಿ ಬರೋಬ್ಬರಿ 326 ಬಾಲೆಯರು ಮದುವೆಗೂ ಮುನ್ನವೇ ಗರ್ಭಿಣಿಯಾಗಿದ್ದಾರೆ ಎಂಬ ಅಘಾತಕಾರಿ ಸಂಗತಿಯೊಂದು ಹೊರಬಿದ್ದಿದೆ. ಇವರಲ್ಲಿ ನಾಲ್ವರು ಬಾಲಕಿಯರು 11 ವರ್ಷಕ್ಕಿಂತಲೂ ಚಿಕ್ಕವರು ಎಂಬ ವಿಲಕ್ಷಣ ಅಂಶ ಸಮಾಜವನ್ನು ಆತಂಕಕ್ಕೆ ಹೂಡುವಂತೆ ಮಾಡಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯೇ ಈ ಅಂಕಿ-ಅಂಶವನ್ನು ಬಹಿರಂಗೊಳಿಸಿದೆ. ಇಂತಹ ಅನಾಹುತಕ್ಕೆ ಕಾರಣವಾಗುತ್ತಿರುವುದೇನು.?ಜನರಲ್ಲಿ ಶಿಕ್ಷಣದ ಕೊರತೆ, ಮೊಬೈಲ್ ಬಳಕೆ, ತಂದೆ ತಾಯಿಗಳ ನಿರ್ಲಕ್ಷ್ಯದಿಂದ ಮಕ್ಕಳು ತಪ್ಪು ದಾರಿ ತುಳಿದಿದ್ದು ಚಿಕ್ಕವಯಸ್ಸಿನಲ್ಲೇ ಅನೈತಿಕವಾಗಿ […]

Continue Reading