ವಿಧಾನಪರಿಷತ್ ಸದಸ್ಯರಾಗುತ್ತಾರಾ ಕಟೀಲು.? ಕೋಟಾ ತೆರವಿನ ಸ್ಥಾನ ಯಾರಿಗೆ.?

ವಿಧಾನಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಆಯ್ಕೆಗೊಳ್ಳುವ ಮೂಲಕ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರಿಂದ ತೆರವಾದ ಸ್ಥಾನಕ್ಕೆ ಶ್ರೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಕರಾವಳಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿರೋಧದಿಂದ ಸಂಸದ ಟಿಕೆಟ್ ಕಳೆದುಕೊಂಡಿದ್ದ ಹ್ಯಾಟ್ರಿಕ್ ಸಂಸದ ನಳಿನ್ ಕುಮಾರ್ ಕಟೀಲ್ ಪಕ್ಷದೊಂದಿಗೆ ಮುನಿಸಿಕೊಳ್ಳದೆ ಕಾಸರಗೋಡು ಭಾಗದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯಿಂದ ಈ ಬಾರಿ ಹೊಸ ಅಭ್ಯರ್ಥಿ ಬ್ರಿಜೇಶ್ […]

Continue Reading

ಕರ್ನಾಟಕ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಹೆಚ್ಚಿದ ಬೇಡಿಕೆ

ಬ್ಯಾರಿ ಸಮುದಾಯದ ನಾಯಕರಿಂದ ವಿಧಾನಸಭಾಧ್ಯಕ್ಷರಲ್ಲಿ ಒತ್ತಾಯ ಕರ್ನಾಟಕ ರಾಜ್ಯದಾದ್ಯಂತ 25 ಲಕ್ಷಕ್ಕಿಂತಲೂ ಅಧಿಕ ಜನಸಂಖ್ಯೆ ಹೊಂದಿರುವ ಬ್ಯಾರಿ ಭಾಷಿತರ ಸಮಗ್ರ ಔದ್ಯೋಗಿಕ, ಸಾಂಸ್ಕೃತಿಕ, ಸಾಮಾಜಿಕ, ಸಮುದಾಯಿಕ, ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ಕರ್ನಾಟಕ ಬ್ಯಾರಿ ಅಭಿವೃದ್ಧಿ ನಿಗಮದ ಅವಶ್ಯಕತೆಯಿದ್ದು ಮಂಜೂರುಗೊಳಿಸುವಂತೆ ಆಗ್ರಹಿಸಿ ನಗರದ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಅಖಿಲ ಭಾರತ ಬ್ಯಾರಿ ಮಹಾಸಭಾ ಮಂಗಳೂರು ವತಿಯಿಂದ ಗೌರವ ಸಲಹೆಗಾರರು ಹಾಗೂ ಅತಿಥಿಗಳ ಸಮಾಲೋಚನಾ ಸಭೆಯು ಜರುಗಿತು. ರಾಜ್ಯದಲ್ಲಿ ಪ್ರತಿಯೊಂದು ಸಮುದಾಯಕ್ಕೂ ಒಂದೊಂದು ಅಭಿವೃದ್ಧಿ ನಿಗಮಗಳಿವೆ. ಆದರೆ ಬ್ಯಾರಿ ಸಮುದಾಯಕ್ಕೆ […]

Continue Reading

ಮಂಗಳೂರು ಮೀನುಗಾರಿಕಾ ಧಕ್ಕೆ ಪ್ರದೇಶದ ಅಭಿವೃದ್ಧಿಯ ಭಗೀರಥ ಅಶ್ರಫ್ ಕಂದಕ್

ಗುಜರಿ ವಾಹನಕ್ಕೆ ಮುಕ್ತಿ ಎಂದು.? ಟ್ರಾಫಿಕ್ ಇಲಾಖೆ, ಆರೋಗ್ಯ ಇಲಾಖೆ ಇತ್ತ ಕಣ್ಣಾಡಿಸಲಿ.! ಮಂಗಳೂರಿನ ಸದಾ ಜಿನುಗುಡುವ ರಸ್ತೆ ಅದು. ದಿನಕ್ಕೆ ಕೋಟ್ಯಂತರ ಆದಾಯ ತರುವ ಹೆಬ್ಬಾಗಿಲು ಅದು. ಸರಕಾರದ ಖಜಾನೆ ತುಂಬಿಸುವ ಆ ಸುತ್ತಮುತ್ತಲಿನ ಪ್ರದೇಶದ ಅವ್ಯವಸ್ಥೆ ಹೇಳತೀರದು. ಜನರು ಮೂಗು ಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ, ಬಿಝಿ ಟ್ರಾಫಿಕ್ ಇರುವುದರಿಂದ ವಾಹನ ಸವಾರರು ಅಲ್ಲಿ ಓಡಾಡುವುದೆಂದರೆ ಬಾವಿಗೆ ಬಿದ್ದು ಮೇಲೆ ಎದ್ದ ಅನುಭವ. ಇದು ಸ್ಮಾರ್ಟ್ ಸಿಟಿ ಎಂದು ಹೇಳಿಕೊಳ್ಳುವ ಮಂಗಳೂರಿನ ಪರಿಸ್ಥಿತಿ. ಅಷ್ಟಕ್ಕೂ ಈ […]

Continue Reading

ಕಲ್ಲಡ್ಕ: ಜಿಲ್ಲಾಧಿಕಾರಿ ಬಂದು ಹತ್ತು ದಿನ ಕಳೆದರೂ, ಕಲ್ಲಡ್ಕ-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಯಾಗಿಲ್ಲ.!

ಬಡ ಕೃಷಿಕರ ನೆಮ್ಮದಿಯ ಬದುಕಿಗೆ ಕೊಳ್ಳಿಯಿಟ್ಟ NHAI ಅಧಿಕಾರಿಗಳು. ಕಲ್ಲಡ್ಕ: ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಅವ್ಯವಸ್ಥೆ ನೋಡಲು ಜಿಲ್ಲಾಧಿಕಾರಿ ಬಂದು ಹತ್ತು ದಿನ ಕಳೆದರೂ ಕಲ್ಲಡ್ಕ-ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ ಸರಿಯಾಗಿಲ್ಲ. ಬಡ ಕೃಷಿಕರ ನೆಮ್ಮದಿಯ ಬದುಕಿಗೆ ಕೊಳ್ಳಿಯಿಟ್ಟ NHAI ಅಧಿಕಾರಿಗಳು. ಹೆದ್ದಾರಿ ಇಲಾಖೆಯ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಪರಿಸರದ ರೈತರು ನರಕಯಾತನೆ ಅನುಭವಿಸುತ್ತಿದ್ದಾರೆ. ಪೆರ್ನೆ, ಬಿಳಿಯೂರು ಗ್ರಾಮಗಳಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಬದಿಯ ಬಡ ರೈತರು ಗೊತ್ತುಗುರಿಯಿಲ್ಲದ ಅವ್ಯವಸ್ಥೆಯ ಕಾಮಗಾರಿಯಿಂದಾಗಿ ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭ ಎದುರಾಗಿದೆ. […]

Continue Reading

ರಾಜ್ಯ ಶಿಕ್ಷಣ ನೀತಿ (SEP) ಕುರಿತು ಇಂದು ಮುಸ್ಲಿಂ ಮುಖಂಡರ ಸಮಾಲೋಚನಾ ಸಭೆ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಗಾಂಧಿನಗರ, ಫ್ರೀಡಂ ಪಾರ್ಕ್ ಹಿಂಭಾಗ, ಬೆಂಗಳೂರು. ಜುಲೈ 6 ರಂದು ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಡೆಯಲಿದೆ ಕರ್ನಾಟಕ ಸರ್ಕಾರ ರೂಪಿಸುತ್ತಿರುವ ರಾಜ್ಯ ಶಿಕ್ಷಣ ನೀತಿಗಳ ನಿರೂಪಣೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯಗಳ ಮಕ್ಕಳು ಶಿಕ್ಷಣದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳನ್ನು ಕುರಿತು ಚರ್ಚಿಸಲು ಸಮುದಾಯದ ಪ್ರತಿನಿದಿಗಳೊಂದಿಗೆ ಚರ್ಚಿಸಲು ಇದೇ ಜುಲೈ 6 ರಂದು ಸಮಾಲೋಚನಾ ಸಭೆ ನಡೆಯಲಿದೆ ಎಂದು ಖಾಸಿಂ ಸಾಬ್. ಎ ಮತ್ತು ಸಂಶೋಧಕರಾದ ಡಾ. […]

Continue Reading

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ‌ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಇವುಗಳ ಜಂಟಿ ಆಶ್ರಯದಲ್ಲಿ ಇಂದು(05-07-2024) ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ […]

Continue Reading

ಮಂಗಳೂರು ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್

ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್ ಆನಂದ್ ಅವರಿಗೆ ವರ್ಗಾವಣೆಯಾಗಿದ್ದು, ನೂತನ ಆಯುಕ್ತರಾಗಿ ರವಿಚಂದ್ರ ನಾಯಕ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ರವಿಚಂದ್ರ ನಾಯಕ್ ಅವರು ಶಿವಮೊಗ್ಗ ತುಂಗಾ ಮೇಲ್ದಂಡೆ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದರು. ಮಂಗಳೂರಿನಲ್ಲಿ ಈ ಹಿಂದೆ ಸೇವೆ ಸಲ್ಲಿಸಿದ್ದ ರವಿಚಂದ್ರ ನಾಯಕ್ ಅವರು ಮಂಗಳೂರು ಸ್ಮಾರ್ಟ್ ಸಿಟಿ ಜಂಟಿ ವ್ಯವಸ್ಥಾಪಕ ನಿರ್ದೇಶಕರಾಗಿ, ಮಂಗಳೂರು ಉಪವಿಭಾಗಾಧಿಕಾರಿ, ತಹಶೀಲ್ದಾರ್ ಆಗಿಯೂ ಸೇವೆ ಸಲ್ಲಿಸಿದ್ದರು. ಇವರು ಕರ್ತವ್ಯದಲ್ಲಿ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ ಹಾಗೂ ಸರಳತೆಗೆ […]

Continue Reading

ಪೊಲೀಸರ ಕರ್ತವ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರ ಮಾಡಿದರೆ ಕರ್ತವ್ಯಕ್ಕೆ ಅಡ್ಡಿಯಲ್ಲ: ಹೈಕೋರ್ಟ್‌

ಪೊಲೀಸರ ಕರ್ತವ್ಯವನ್ನು ನೇರಪ್ರಸಾರ ಮಾಡಿದರೆ ಕರ್ತವ್ಯಕ್ಕೆ ಅಡ್ಡಿಯಾಗದು.‌ ಸಂಚಾರಿ ಪೊಲೀಸರು ಸೇರಿದಂತೆ ಕರ್ತವ್ಯ ನಿರತ ಪೊಲೀಸರ ಕ್ರಮವನ್ನು ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಿದರೆ ಅದು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಎನ್ನಲಾಗದು ಎಂದು ಹಿಮಾಚಲ ಪ್ರದೇಶದ ಹೈಕೋರ್ಟ್ ತೀರ್ಪು ನೀಡಿದೆ. ವಾಹನ ತಪಾಸಣೆ ಮಾಡುತ್ತಿದ್ದ ಸಂಚಾರಿ ವಿಭಾಗದ ಪೊಲೀಸರು ಕರ್ತವ್ಯ ನಿರತರಾಗಿದ್ದಾಗ ದಾಖಲೆ ತೋರಿಸಲು ಹೇಳಿಸಿಕೊಂಡ ವ್ಯಕ್ತಿಯೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರು. ಲೈವ್ ಸಂದರ್ಭದಲ್ಲಿ ಕೆಲ ಟೀಕೆಗಳನ್ನು ಮಾಡಿದ್ದ ಚಾಲಕರೊಬ್ಬರ ವಿರುದ್ಧ ಪ್ರಕರಣ […]

Continue Reading

ಬಲ್ಮಠ ಕಟ್ಟಡ ಕಾಮಗಾರಿ ವೇಳೆ ಭೂ ಕುಸಿತ – ಮನಪಾ ಆಯುಕ್ತರ ಮೇಲೆ ಕ್ರಮಕ್ಕೆ ಒತ್ತಾಯ- ಡಿವೈಎಫ್ಐ

ಬಲ್ಮಠ ಕಟ್ಟಡ ಸಂಕೀರ್ಣದ ಕಾಮಗಾರಿ ವೇಳೆ ತಳಪಾಯದ ತಡೆಗೋಡೆ ಪಕ್ಕ ಕುಸಿದ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ ಉತ್ತರ ಪ್ರದೇಶದ ಕಾರ್ಮಿಕನ ಸಾವಿಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ನೇರಹೊಣೆಯಾಗಲಿದ್ದಾರೆ. ಇಂತಹ ದುರ್ಘಟನೆ ಸಂಭವಿಸಿದ ನಂತರವಷ್ಟೇ ಕಾಮಗಾರಿಗಳ ನಿಲ್ಲಿಸಲು ಸೂಚನೇ ನೀಡುವುದು ಆಡಳಿತದ ಬೇಜವಾಬ್ದಾರಿಯ ಪರಮಾವಧಿ. ಪಾಲಿಕೆಯ ನಿಯಮಗಳನ್ನು ಮೀರಿ ನಡೆಯುವ ಕಾಮಗಾರಿಯನ್ನು ನಿಲ್ಲಿಸಲು ಕ್ರಮಕೈಗೊಳ್ಳದ ಮ.ನ.ಪಾ ಆಯುಕ್ತರ ವಿರುದ್ದ ಸರಕಾರ ಮತ್ತು ಜಿಲ್ಲಾಡಳಿತ ಕ್ರಮಕೈಗೊಳ್ಳಬೇಕು. ಪ್ರಾಣ ಕಳೆದುಕೊಂಡ ಕಾರ್ಮಿಕನಿಗೆ ಗರಿಷ್ಟ ಪ್ರಮಾಣದ ಆರ್ಥಿಕ ಪರಿಹಾರ ನೀಡಬೇಕೆಂದು ಡಿವೈಎಫ್ಐ […]

Continue Reading

ಸತ್ಸಂಗ ಕಾಲ್ತುಳಿತಕ್ಕೆ ಮಡಿದ ಭಕ್ತರು.. ಸ್ವಯಂ ಘೋಷಿತ ದೇವಮಾನವ ಬೋಲೆ ಬಾಬಾ ಎಸ್ಕೇಪ್.!

ಪೊಲೀಸ್ ಇಲಾಖೆಯಲ್ಲಿ ಗುಪ್ತಚರ ಘಟಕದಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಬೋಲೆ ಬಾಬಾ ಅತ್ರಾಸ್ ದುರಂತಕ್ಕೆ ಇಡೀ ದೇಶವೇ ಮಮ್ಮಲ ಮರಗುತ್ತಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 116 ಜನರು ಸಾವನ್ನಪ್ಪಿದ್ದಾರೆ. ಕೆಲವರು ಇನ್ನೂ ಸಾವು- ನೋವಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಜನರು ಸೇರಿದ್ದರಿಂದ ಗದ್ದಲ ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಸತ್ಸಂಗ ಕಾರ್ಯಕ್ರಮದ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ. ಈ ವ್ಯಕ್ತಿ ಹಿಂದೆ ಗುಪ್ತಚರ […]

Continue Reading