ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರುತ್ತಿದೆ. 6,900ಕ್ಕೂ ಹೆಚ್ಚು ಜನ ಟೆಸ್ಟ್​ಗೆ ಒಳಗಾಗಿದ್ದಾರೆ. 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರುತ್ತಿದ್ದು, ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್​ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ ಹಾಗೂ ಓರ್ವ ಯುವಕನನ್ನು ಡೆಂಗ್ಯೂ ಬಲಿ ಪಡೆದಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕ ಮೂಡಿಸಿದೆ. ರೋಗವನ್ನು ತ್ವರಿತವಾಗಿ ಪತ್ತೆ ಹಚ್ಚಲು […]

Continue Reading

ಮಣ್ಣು ಕುಸಿತದಲ್ಲಿ ಕಾರ್ಮಿಕರಿಬ್ಬರ ಜೀವನ್ಮರಣ ಹೋರಾಟ ; ಕಾರ್ಮಿಕರ ಸಾವಿಗೆ ಬಿಲ್ಡರ್ ಹಾಗೂ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ಕಾರಣ : ಪರಿಹಾರಕ್ಕೆ ಕಟ್ಟಡ ಕಾರ್ಮಿಕರ ಸಂಘಟನೆ ಆಗ್ರಹ

ಮಂಗಳೂರು ನಗರದ ಬಲ್ಮಠ ವಾಸುಲೇನ್ ಬಳಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಬಹುಮಹಡಿ ಕಟ್ಟಡದ ನಿರ್ಮಾಣ ಕಾರ್ಯದಲ್ಲಿ ನಿರತರಾದ ಉತ್ತರಭಾರತ ಮೂಲದ ಕಾರ್ಮಿಕರಿಬ್ಬರು ಮಣ್ಣು .ಕುಸಿತದಿಂದಾಗಿ ಮಣ್ಣಿನ ಅಡಿಯಲ್ಲಿ ಸಿಲುಕಿ ಜೀವನ್ಮರಣ ಸ್ಥಿತಿಯಲ್ಲಿದ್ದಾರೆ. ಇದಕ್ಕೆ ಬಿಲ್ಡರ್ ಹಾಗೂ ಜಿಲ್ಲಾಡಳಿತದ ಪ್ರಜ್ಞಾಪೂರ್ವಕ ನಿರ್ಲಕ್ಷ್ಯವೇ ನೇರ ಕಾರಣ. ಈ ದುರಂತದ ಹೊಣೆ ಹೊತ್ತು ಕಾರ್ಮಿಕರಿಗೆ ಸರಕಾರದ ವತಿಯಿಂದ ದೊರಕುವ ವಿಪತ್ತು ಪರಿಹಾರ ನಿಧಿ ಮಾತ್ರವಲ್ಲದೆ, ಸಾವು ಸಂಭವಿಸಿದ್ದಲ್ಲಿ ಬಹುಮಹಡಿ ಕಟ್ಟಡ ನಿರ್ಮಾಣ ಕಂಪೆನಿ, ಗುತ್ತಿಗೆದಾರರ ಕಡೆಯಿಂದಲೂ ತಲಾ 50 ಲಕ್ಷ ರೂ.ಪರಿಹಾರ ಕೊಡಿಸಬೇಕೆಂದು CITUಗೆ […]

Continue Reading

ಸಿದ್ದರಾಮಯ್ಯ ಕುಟುಂಬಕ್ಕೆ ‘ಮೂಡಾ’ ಉರುಳು.? ಮುಖ್ಯ ಕಾರ್ಯದರ್ಶಿಗೆ ‘ಸಿಟಿಜನ್ ರೈಟ್ಸ್’ ದೂರು

ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ₹5 ಸಾವಿರ ಕೋಟಿಗೂ ಅಧಿಕ ಮೊತ್ತದ ಭ್ರಷ್ಟಾಚಾರ ನಡೆದಿದೆ’ ಎಂಬ ಆರೋಪ ಕುರಿತು ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕೆಂದು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ. ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ನಂಟು ಇರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು ಈ ವಿಚಾರದಲ್ಲಿ ರಾಜ್ಯ ರಾಜಕೀಯ ಪಕ್ಷಗಳ ನಡುವೆ ಜಟಾಪಟಿ ನಡೆಯುತ್ತಿದೆ. ಅದೇ ಹೊತ್ತಿಗೆ , ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಕಾರ್ಯದರ್ಶಿ ಬಿ.ಟಿ.ರಾಧಾಕೃಷ್ಣಅವರು ರಾಜ್ಯ ಸರ್ಕಾರದ […]

Continue Reading

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್.

ರಾಜ್ಯ ಸರಕಾರ ಜುಲೈ 2 ರಂದು ಹಲವು ಪೊಲೀಸ್ ಅಧಿಕಾರಿಗಳನ್ನು(IPS) ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಯತೀಶ್ ಎನ್. ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ (SP) ನೇಮಿಸಲಾಗಿದೆ. ಸಿ.ಬಿ.ರಿಷ್ಯಂತ್ ಅವರನ್ನು ಬೆಂಗಳೂರಿನ ವೈರ್‌ಲೆಸ್ ಎಸ್ ಪಿ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. 2016 ರ ಕರ್ನಾಟಕ ಕೇಡರ್‌ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

Continue Reading

ಕಾಂಗ್ರೆಸ್ ನಲ್ಲಿ ನಾಯಕತ್ವದ ಬದಲಾವಣೆ ಬೇಡಿಕೆ ಹೆಚ್ಚಾಗುತ್ತಿದ್ದಂತೆ ಬಿಜೆಪಿಯಲ್ಲೂ ವಿಪಕ್ಷ ನಾಯಕನ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು.!

ಡಿ.ಕೆ. ಶಿವಕುಮಾರ್‌ ಅವರಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಳ್ಳಬೇಕೆಂಬ ಕಾರಣಕ್ಕೆ ಸಮುದಾಯವಾರು ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕೆಂಬ ಕೂಗು ಎಬ್ಬಿಸಲಾಗಿದೆ ಎಂಬ ಚರ್ಚೆ ಕಾಂಗ್ರೆಸ್‌ನಲ್ಲಿ ಬಲವಾಗುತ್ತಿದೆ.‘ಒಬ್ಬರಿಗೆ ಒಂದೇ ಹುದ್ದೆ’ ಎಂಬುದು ಕಾಂಗ್ರೆಸ್‌ ನೀತಿ. ಆದರೆ, ರಾಜ್ಯದಲ್ಲಿ ಪಕ್ಷದ ಹೊಣೆಗಾರಿಕೆ ಹೊತ್ತಿರುವವರೇ ಈ ನೀತಿಯನ್ನು ಒಡೆದು ಆಳುತ್ತಿದ್ದಾರೆ. ಇದು ಸರಿಯಲ್ಲ. ಹೀಗಾಗಿ, ಡಿ.ಕೆ. ಶಿವಕುಮಾರ್‌ ಅವರು ಉಪ ಮುಖ್ಯಮಂತ್ರಿ ಹುದ್ದೆ ಇಲ್ಲವೇ ಪಕ್ಷದ ಅಧ್ಯಕ್ಷರ ಹುದ್ದೆ ಯಾವುದಾದರು ಒಂದರಲ್ಲಿ ಮಾತ್ರ ಮುಂದುವರಿಯಬೇಕು ಎನ್ನುವುದು ಸಿದ್ದರಾಮಯ್ಯ ಆಪ್ತ ಬಣದ ಸಚಿವರು, […]

Continue Reading

ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ

ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಾರಕ್ಕೆ ಒಂದು ದಿನ ಪೂರ್ತಿ ರಜೆ ನೀಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. ಈ ವರೆಗೆ ಪೌರಕಾರ್ಮಿಕರಿಗೆ ವಾರದಲ್ಲಿ ಎರಡು ಬಾರಿ ಅರ್ಧ ದಿನದ ರಜೆ ನೀಡಲಾಗುತ್ತಿತ್ತು. ಈಗ ನಿತ್ಯದ ಕೆಲಸಕ್ಕೆ ತೊಂದರೆ ಆಗದಂತೆ ವ್ಯವಸ್ಥೆ ಮಾಡಿಕೊಂಡು ಇಡೀ ದಿನದ ರಜೆ ನೀಡಲು ಆದೇಶಿಸಲಾಗಿದೆ. ಶೇ.85% ರಷ್ಟು ಹಾಜರಾತಿ ಖಚಿತಪಡಿಸಿಕೊಂಡು ದೈನಂದಿನ ಸ್ವಚ್ಛತಾ ಕೆಲಸಗಳಿಗೆ ಸಮಸ್ಯೆಯಾಗದಂತೆ ವಾರಕ್ಕೆ ಒಂದು ದಿನ ರಜೆಯನ್ನು ನೀಡಲಾಗಿದೆ. ಒಂದು ವಾರದ ಒಂದು […]

Continue Reading

ವಿದ್ಯುತ್ ತಂತಿಗೆ ಅಡ್ಡಿ ನೆಪದಲ್ಲಿ ತೆರವುಗೊಳಿಸಿದ ಮರಗಳ ಅಕ್ರಮ ಸಾಗಾಟ ಮಾಡಿದ ಕನ್ಯಾನ ವಲಯ ಅರಣ್ಯಾಧಿಕಾರಿ.

ಅಕ್ರಮದ ವಿರುದ್ಧ ಮಾಹಿತಿ ನೀಡಿದರೂ ಎಚ್ಚೆತ್ತುಕೊಳ್ಳದ ಹಿರಿಯ ಅಧಿಕಾರಿಗಳು. ಬಂಟ್ವಾಳ: ಕೇರಳ ಗಡಿಭಾಗದ ಕರೋಪಾಡಿ ಗ್ರಾಮದ ಆನೆಕಲ್ಲು ಮದರಮೂಲೆ ರಸ್ತೆ ಬದಿಯಲ್ಲಿದ್ದ ಮರಗಳನ್ನು ವಿದ್ಯುತ್ ತಂತಿಗಳಿಗೆ ತಾಗುತ್ತಿರುವ ಕಾರಣಕ್ಕಾಗಿ ಸ್ಥಳೀಯರು ಅರಣ್ಯಾಧಿಕಾರಿಯ ನೇತೃತ್ವದಲ್ಲಿ ತೆರವುಗೊಳಿಸಿದ್ದರು. ತೆರವುಗೊಳಿಸಿದ ಮರಗಳನ್ನು ಕನ್ಯಾನ ವಲಯ ಅರಣ್ಯ ಕಛೇರಿಯ ಆವರಣದಲ್ಲಿ ಶೇಖರಿಸಬೇಕಾಗಿತ್ತು. ಆದರೆ ಇಲ್ಲಿನ ಫಾರೆಸ್ಟರ್ ಬೆಲೆಬಾಳುವ ಅಕೇಶಿಯಾ ಮರಗಳ ದಿಮ್ಮಿಗಳನ್ನು ಪಿಕಪ್ ವಾಹನದಲ್ಲಿ ಕೇರಳಕ್ಕೆ ಅಕ್ರಮವಾಗಿ ಸಾಗಾಟ ಮಾಡಿರುವ ಬಗ್ಗೆ ಸ್ಥಳೀಯರು ಪುತ್ತೂರು ಎಸಿಎಫ್ ಮತ್ತು ರೇಂಜರ್ ಅವರಿಗೆ ಮಾಹಿತಿ ನೀಡಿದರು. […]

Continue Reading

ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳಿಗೆ ಅದೇ ಶಾಲೆಯ ಶಿಕ್ಷಕನೊಬ್ಬನಿಂದ ಲೈಂಗಿಕ ಕಿರುಕುಳ; ಕೇಸು ದಾಖಲು

ಪ್ರೌಢ ಶಾಲೆಯ ವಿದ್ಯಾರ್ಥಿನಿಯೊಬ್ಬಳಿಗೆ ಶಿಕ್ಷಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಕಮಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಾಮುಕ ಶಿಕ್ಷಕನನ್ನು ಪೋಕ್ಸೋ ಕಾಯ್ದೆಯಡಿ ಬಂಧನ ಮಾಡಲಾಗಿದೆ. ಮಾಧವ್ ಲಾಂಚಕರ್ ಎಂಬುವನೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ.ಬಾಲಕಿಯ ದೂರಿನ ಮೇರೆಗೆ ಶಿಕ್ಷಕನ ವಿರುದ್ಧ ಪೋಕ್ಸೋ ಮತ್ತು ಐಪಿಸಿ 354(a) ಪ್ರಕಾರ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ. ಹೇಯ ಕೃತ್ಯ ಎಸಗಿದ ಶಿಕ್ಷಕನ ಜತೆಗೆ ಇದಕ್ಕೆ ಸಹಕರಿಸಿದ ಓರ್ವ ಶಿಕ್ಷಕಿಯನ್ನು […]

Continue Reading

ಮರ್ಯಾದೆ ಇಲ್ಲ ಅಂದ ಮೇಲೆ ಅಂತಹ ಕಡೆ ನಾವ್ಯಾಕೆ ಇರಬೇಕು. ರಾಜಿನಾಮೆಗೆ ಮುಂದಾದ ಶಾಸಕ ವಿನಯ್ ಕುಲಕರ್ಣಿ.!

ನಮಗೆ ಮರ್ಯಾದೆ ಇಲ್ಲ ಅಂದ ಮೇಲೆ ಅಂತಹ ಕಡೆ ನಾವ್ಯಾಕೆ ಇರಬೇಕು ಎಂದು ಶಾಸಕ ವಿನಯ್ ಕುಲಕರ್ಣಿಯವರು ನಗರಾಭಿವೃದ್ದಿ ಸಚಿವ ಬೈರತಿ ಸುರೇಶ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ಅವರು ರಾಜೀನಾಮೆ ನೀಡುವ ಇಂಗಿತವನ್ನು ಪರೋಕ್ಷವಾಗಿ ವ್ಯಕ್ತಪಡಿಸಿದ್ದಾರೆ. ಸಚಿವರಾದ ನಂತರದಲ್ಲಿ ಬೈರತಿ ಸುರೇಶ್ ಅವರು ಎಲ್ಲದರಲ್ಲಿಯೂ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ನೇರವಾಗಿ ಆರೋಪಿಸಿದ್ದಾರೆ. ಈ ಸಂಬಂಧ ಈ ಹಿಂದೆಯೂ ಹೈಕಮಾಂಡ್ ಗೆ ದೂರು ನೀಡಿದ್ದಾಗಿ ತಿಳಿಸಿದ್ದಾರೆ. ವಿನಯ್ ಕುಲಕರ್ಣಿ ನಗರಾಭಿವೃದ್ದಿ ಇಲಾಖೆಯ ವ್ಯಾಪ್ತಿಗೆ ಬರುವ ನೀರು […]

Continue Reading

ಮಹಾಕಾಳಿಪಡ್ಪು ಅಂಡರ್ ಪಾಸ್ ಕಾಮಗಾರಿ ವಿಳಂಬ ; ಶಾಸಕ ವೇದವ್ಯಾಸ ಕಾಮತರಿಗೆ ಕಪ್ಪು ಬಾವುಟ ಪ್ರದರ್ಶನ – ಸುನೀಲ್ ಕುಮಾರ್ ಬಜಾಲ್ ಎಚ್ಚರಿಕೆ

ಜಪ್ಪು ಮಹಾಕಾಳಿ ಪಡ್ಪು ರೈಲ್ವೇ ಕೆಳಸೇತುವೆಯ ನಿಧಾನಗತಿಯ ಕಾಮಗಾರಿಯಿಂದ ಈ ರಸ್ತೆಯನ್ನು ಅವಲಂಭಿಸುವ ಜನ ಪರದಾಡುವುದು ಮಾತ್ರವಲ್ಲದೆ ನಗರದಲ್ಲಿ ವಾಹನ ದಟ್ಟನೆ ಹೆಚ್ಚಾಗಿ ಅಡಚಣೆಯುಂಟಾಗಿದೆ. ರೈಲ್ಚೇ ಕಾಮಗಾರಿಯ ಪರಿಶೀಲಿಸಬೇಕಾಗಿದ್ದ ಶಾಸಕ ವೇದವ್ಯಾಸ ಕಾಮತರ ಬೇಜವಾಬ್ದಾರಿಯಿಂದಾಗಿ ಒಂದು ಊರಿಗೆ ಸಂಪರ್ಕಿಸುವ ಮುಖ್ಯರಸ್ತೆಯೇ ಮುಚ್ವಿಹೋಗಿದೆ.ಇದಕ್ಕೆ ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಆಡಳಿತದ ಮಂಗಳೂರು ಮಹಾನಗರ ಪಾಲಿಕೆ ನೇರ ಜವಾಬ್ದಾರಿಯಾಗಿದೆ. ರೈಲ್ವೇ ಕೆಳಸೇತುವೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳ್ಳದಿದ್ದಲ್ಲಿ ಶಾಸಕ ವೇದವ್ಯಾಸ ಕಾಮತರ ಕಚೇರಿಗೆ ಮುತ್ತಿಗೆ ಹಾಕಿ ಕಪ್ಪು ಬಾವುಟ ಪ್ರದರ್ಶಿಸಲಿದ್ದೇವೆ […]

Continue Reading