ಆಪರೇಷನ್ ವೇಳೆ ಮಹಿಳೆ ಮೃತ್ಯು: ಕಾರ್ಕಳ ಖಾಸಗಿ ಆಸ್ಪತ್ರೆಯ ವೈದ್ಯರ ವಿರುದ್ಧ ಪ್ರಕರಣ ದಾಖಲು

ವೈದ್ಯರ ನಿರ್ಲಕ್ಷ್ಯದಿಂದ ಶಸ್ತ್ರಚಿಕಿತ್ಸೆ ಸಂದರ್ಭದಲ್ಲೇ ವ್ಯಕ್ತಿಯೊಬ್ಬರು ಮೃತಪಟ್ಟ ಪ್ರಕರಣದ ಕುರಿತು ಕಾರ್ಕಳದ ಖಾಸಗಿ ಆಸ್ಪತ್ರೆಯ ವೈದ್ಯರಾದ ನಾಗರತ್ನ, ರಹಮತ್ತುಲ್ಲಾ ಮತ್ತು ತುಷಾರ್ ಎಂಬವರ ವಿರುದ್ಧ ಕರ್ತವ್ಯಲೋಪ ಆರೋಪದಲ್ಲಿ ಪ್ರಕರಣ ದಾಖಲಾಗಿದೆ. ಸಾಣೂರು ಗ್ರಾಮದ ಝುಬೈದಾ ಎಂಬವರು 2025 ಮೇ 10 ರಂದು ಹೊಟ್ಟೆನೋವಿನ ಚಿಕಿತ್ಸೆಗೆಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮಧ್ಯಾಹ್ನ 1.30 ರ ಸುಮಾರಿಗೆ ಆಸ್ಪತ್ರೆಯ ವೈದ್ಯಾಧಿಕಾರಿ ನಾಗರತ್ನ ಅವರು ತಕ್ಷಣ ಆಪರೇಷನ್ ಆಗದಿದ್ದರೆ ಜೀವಕ್ಕೆ ಅಪಾಯವಿದೆ ಎಂದು ಹೇಳಿ ಆಪರೇಷನ್ ಥಿಯೇಟರ್ ಗೆ ಕರೆದೊಯ್ದಿದ್ದರು. […]

Continue Reading

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಅನುಷ್ಠಾನಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ

ರಾಜ್ಯದ ಎಲ್ಲಾ ಗ್ರಾಮ ಪಂಚಾಯತ್ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಅನುಷ್ಠಾನಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಭವಿಷ್ಯ ನಿಧಿ ಸೌಲಭ್ಯವನ್ನು ಅರ್ಹರಿರುವ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿ ಸಿಬ್ಬಂದಿಗಳಿಗೆ ಒದಗಿಸುವ ಕುರಿತು ಮುಂದಿನ 15 ದಿನಗಳೊಳಗಾಗಿ ಕ್ರಮವಹಿಸಿ, ಆಯುಕ್ತಲಯಕ್ಕೆ ಮಾಹಿತಿ ನೀಡುವಂತೆ ಹಾಗೂ ಈ ವಿಷಯವನ್ನು ಜಿಲ್ಲಾ ಪಂಚಾಯಿತಿ ಹಂತದಿಂದ ಮೇಲ್ವಿಚಾರಣೆ ನಡೆಸುವಂತೆ ಈ ಮೂಲಕ ತಿಳಿಸಲಾಗಿದೆ. ಸರ್ಕಾರದ ಆದೇಶ ಸಂಖ್ಯೆ:ಗ್ರಾಅಪ 30 ಗ್ರಾಪಂಸಿ 2008, ದಿನಾಂಕ: 31.10.2008ರನ್ವಯ ರಾಜ್ಯದಲ್ಲಿನ ಎಲ್ಲಾ ಗ್ರಾಮ […]

Continue Reading

ಸಾಲ ವಸೂಲಾತಿ ನೆಪದಲ್ಲಿ ವೃದ್ದೆ ಮೇಲೆ ದರ್ಪ; ಮಂಗಳೂರಿನ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಮತ್ತೊಂದು ಪ್ರಕರಣ

ಮಂಗಳೂರು: ಹಣಕಾಸು ವಹಿವಾಟು ಹೆಸರಿನಲ್ಲಿ ಅಮಾಯಕರನ್ನು ಪೀಡಿಸದಂತೆ ರಾಜ್ಯ ಸರ್ಕಾರ ಕಠಿಣ ಕಾನೂನನ್ನು ಜಾರಿಗೆ ತಂದಿದ್ದರೂ ಸಹಕಾರಿ ಸಂಘಗಳು ತಮ್ಮ ಚಾಳಿಯನ್ನು ಬಿಟ್ಟಿಲ್ಲ. ಸಾಲ ವಸೂಲಾತಿ ಹೆಸರಲ್ಲಿ ಅಮಾಯಕ (ಸಾಲವನ್ನೇ ಪಡೆಯದ) ವೃದ್ಧೆಯನ್ನು ಪೀಡಿಸಿರುವ ಅಮಾನವೀಯ ಕೃತ್ಯವೊಂದು ಮಂಗಳೂರು ಬಳಿ ನಡೆದಿದೆ. ಈ ಸಂಬಂಧ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣ ಸಿಎಂ ಸಿದ್ದರಾಮಯ್ಯ ಅವರ ಸಚಿವಾಲಯವನ್ನೇ ಮುಜುಗರಕ್ಕೀಡು ಮಾಡಿದೆ. ಪೊಳಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಾಹಕ ಅಧಿಕಾರಿ ವಿಜಯ ಫೆರ್ನಾಂಡೀಸ್ […]

Continue Reading

ಪುತ್ತೂರು: ಹೆಲ್ಮೇಟ್ ಧರಿಸಿ ಮನೆ ದರೋಡೆಗೆ ಯತ್ನ, ದಂಪತಿ ಅರೆಸ್ಟ್; ಆರೋಪಿ ಕಾರ್ತಿಕ್ ರಾವ್ ಅರ್ಚಕ

ಪುತ್ತೂರು ಕಸಬಾ ನಿವಾಸಿ , ನಿವೃತ್ತ ಪ್ರಾಂಶುಪಾಲರಾದ ಎ.ವಿ ನಾರಾಯಣ (84) ಎಂಬವರ ಮನೆಯಲ್ಲಿ ಮಧ್ಯರಾತ್ರಿ ನಡೆದ ದರೋಡೆ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಪೊಲೀಸರು ದಂಪತಿಗಳ ಹೆಡೆಮುರಿ ಕಟ್ಟುವಲ್ಲಿ ಸಫಲರಾಗಿದ್ದಾರೆ. ಡಿಸೆಂಬರ್ 17 ,2025 ರಂದು ಮಧ್ಯರಾತ್ರಿ, ಯಾರೋ ಇಬ್ಬರು ಅಪರಿಚಿತ ವ್ಯಕ್ತಿಗಳು, ಹೆಲ್ಮೆಟ್ ಧರಿಸಿಕೊಂಡು, ಮುಖಚಹರೆಯನ್ನು ಮರೆಮಾಚಿ, ನಾರಾಯಣ ಅವರ ಮನೆಯಿಂದ ಬೆಲೆ ಬಾಳುವ ಸೊತ್ತುಗಳನ್ನು ಕಳ್ಳತನ ಮಾಡಲು ಮನೆಯ ಹಿಂಬಾಗಿಲಿನಿಂದ ಮನೆಗೆ ಪ್ರವೇಶಿಸಿದ್ದರು . ಈ ಸಂದರ್ಭ ದರೋಡೆಕೋರರು ನಾರಾಯಣ ಹಾಗೂ ಅವರ […]

Continue Reading

ಸುಳ್ಯ: ರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಅಸಹಜ ಸಾವಲ್ಲ; ಕೊಲೆ: ವೈದ್ಯಕೀಯ ವರದಿಯಲ್ಲಿ ದೃಢ. ಆರೋಪಿಗಳಾದ ರಫೀಕ್ ಪಡು, ಮನು ಬಂಧನ

ಸುಳ್ಯ ತಾಲೂಕಿನಲ್ಲಿ ಸಾಕಷ್ಟು ಸುದ್ಧಿಗೆ ಕಾರಣವಾಗಿದ್ದ ರಿಕ್ಷಾ ಚಾಲಕ ಅಬ್ದುಲ್ ಜಬ್ಬಾರ್ ಅವರದ್ದು ಅಸಹಜ ಸಾವಲ್ಲ, ಕೊಲೆ ಎಂಬುವುದಾಗಿ ಕೃತ್ಯ ನಡೆದ ಮೂರು ತಿಂಗಳ ನಂತರ ದೃಢವಾಗಿದ್ದು, ವೈದ್ಯಕೀಯ ವರದಿಯಲ್ಲಿ ಹಲ್ಲೆ ನಡೆಸಿದ ಪರಿಣಾಮ ಸಾವು ಸಂಭವಿಸಿದೆ ಎಂದು ದೃಡಪಡಿಸಿದೆ. ಅಕ್ಟೋಬರ್ 16 ರಂದು ಬಾಡಿಗೆ ನೆಪದಲ್ಲಿ ಮೊಹಮ್ಮದ್ ರಫೀಕ್ ಹಾಗೂ ಇತರರು ದುಗ್ಗಲಡ್ಕಕ್ಕೆ ಕರೆಸಿಕೊಂಡಿದ್ದರು. ಬಾಡಿಗೆಗೆಂದು ಹೊರಟ ಅಬ್ದುಲ್ ಜಬ್ಬಾರ್ ಅವರನ್ನು ಸುಳ್ಯ ಕಲ್ಲಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ ಬಿಟ್ಟಿದ್ದರು. ಮರುದಿನ ಹಲ್ಲೆಯಿಂದ ಅನಾರೋಗ್ಯಕ್ಕೀಡಾದ […]

Continue Reading

ಬಿಎಂಆರ್ ಲಕ್ಕಿ ಸ್ಕೀಂ: ಲಬೋ ಲಬೋ ಗ್ರಾಹಕರು. ಬಡ-ಮಧ್ಯಮ ವರ್ಗದವರಿಗೆ ಆಮಿಷ ತೋರಿಸಿ ಪಂಗನಾಮ.!

ಪ್ರಭಾವಿ ನಾಯಕರೊಂದಿಗೂ ಸಖ್ಯ. ಗಡುವು ಮುಗಿದು ಗ್ರಾಹಕರಿಗೆ ಉಂಡೆನಾಮ.! ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಅಣಬೆಗಳಂತೆ ಹುಟ್ಟಿಕೊಂಡ ಲಕ್ಕಿ ಸ್ಕೀಂ ಗಳು ಬಾಗಿಲು ಮುಚ್ಚಿ ಗ್ರಾಹಕರು ಲಬೋ ಲಬೋ ಅನ್ನುವಂತಾಗಿದೆ. ಈಗಾಗಲೇ ಹತ್ತಾರು ಲಕ್ಕಿ ಸ್ಕೀಂ ಗಳು ಗೋತಾ ಹೊಡೆದು ಕೋಟಿ ಕೋಟಿ ದುಡ್ಡು ಬಾಚಿ ಎಸ್ಕೇಪ್ ಆಗಿದೆ. ಕೆಲವರು ಜೈಲು ಕಂಬಿ ಎಣಿಸಿದ್ದು ಇದೆ. ಅದರಲ್ಲೂ ಸುರತ್ಕಲ್ ಭಾಗದ ಪ್ರಭಾವಿಯೊಬ್ಬನ ಬಿಎಂಆರ್ ಲಕ್ಕಿ ಸ್ಕೀಂ ಕೂಡ ಮುಳುಗಡೆಯಾಗಿದೆ.ದುಡ್ಡು ಕಟ್ಟಿದ ಗ್ರಾಹಕರು ಬಿಎಂಆರ್ ಕಚೇರಿಗೆ ನುಗ್ಗಿ […]

Continue Reading

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದು ಬಾಂಬ್ ಸಿಡಿಸಿದ್ದ ದೇವೇಗೌಡರು 24 ಗಂಟೆಯೊಳಗೆ ಯು-ಟರ್ನ್

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜತೆ ಮೈತ್ರಿ ಇಲ್ಲ ಎಂದು ಬಾಂಬ್ ಸಿಡಿಸಿದ್ದ ಜೆಡಿಎಸ್ ವರಿಷ್ಠ ದೇವೇಗೌಡರು 24 ಗಂಟೆಯೊಳಗೆ ತಮ್ಮ ಹೇಳಿಕೆಯಿಂದ ಯು-ಟರ್ನ್ ಹೊಡೆದು ಅಚ್ಚರಿ ಮೂಡಿಸಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜೆಡಿಎಸ್ ಯಾವುದೇ ಪಕ್ಷದ ಹಂಗಿಲ್ಲದೆ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಘೋಷಿಸಿದ ದೊಡ್ಡ ಗೌಡರ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಲೋಕಸಭೆ ಚುನಾವಣೆಯ ಬಳಿಕ ಮೈತ್ರಿ ಮುಂದುವರಿಯುವುದಿಲ್ಲವೇ ಎಂಬ ಅನುಮಾನಗಳನ್ನು ಇದು ಹುಟ್ಟುಹಾಕಿತ್ತು. ಜೆಡಿಎಸ್ ಕಾರ್ಯಕರ್ತರು ಮತ್ತು ಬಿಜೆಪಿ […]

Continue Reading

ಪೊಲೀಸರಿಗೆ ಬ್ಲಾಕ್ಮೇಲ್: ಖಾಸಗಿ ಸುದ್ದಿವಾಹಿನಿಯ ಪತ್ರಕರ್ತ ಅರೆಸ್ಟ್

ಡ್ರಗ್ಸ್ ದಂಧೆ ಶಾಮೀಲಾತಿಯ ಸ್ಟೋರಿ; ಹದಿನೈದು ಲಕ್ಷ ರೂಪಾಯಿ ಡಿಮ್ಯಾಂಡ್ ಮೂವರು ಪೊಲೀಸ್ ಇನ್ಸ್ ಪೆಕ್ಟರ್ ಗಳಿಗೆ ವಾಟ್ಸಾಪ್ ಕರೆ ಮಾಡಿ ತಲಾ 5 ಲಕ್ಷ ರೂಪಾಯಿ ನೀಡುವಂತೆ ಬ್ಲ್ಯಾಕ್ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಸುದ್ದಿ ವಾಹಿನಿಯ ಪತ್ರಕರ್ತನೊಬ್ಬನನ್ನು ಬಾಗಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪತ್ರಕರ್ತ ಶರತ್ ಶರ್ಮಾ ಕಲಗಾರು ಎಂಬಾತನೇ ಬಂಧಿತ ಆರೋಪಿ. ಬಾಗಲೂರು ಠಾಣೆ ಸಬ್ ಇನ್ಸ್ ಪೆಕ್ಟರ್ ರಮೇಶ್ ಎಂಬುವರ ದೂರಿನನ್ವಯ ಪ್ರಕರಣ ದಾಖಲಿಸಲಾಗಿದೆ. ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ […]

Continue Reading

ಬೆಂಗಳೂರು: ಎನ್‌ಸಿಬಿ ಅಧಿಕಾರಿಗಳು ಮತ್ತು ಬೆಂಗಳೂರು ಪೊಲೀಸರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿದ ಪರಿಣಾಮ ಡ್ರಗ್ಸ್ ದಂಧೆ ಬಯಲಿಗೆ

ಬೆಂಗಳೂರಿನ ಹೊರವಲಯದಲ್ಲಿ ಪತ್ತೆಯಾಗಿರುವ ಡ್ರಗ್ ಫ್ಯಾಕ್ಟರಿ ಇದೀಗ ಭಾರೀ ಸುದ್ದಿಗೆ ಗ್ರಾಸವಾಗಿದೆ. ಮಹಾರಾಷ್ಟ್ರದಲ್ಲಿನ ಡ್ರಗ್ ದಂಧೆ ಕರ್ನಾಟದತ್ತ ತನ್ನ ಕಬಂಧ ಬಾಹುವನ್ನು ಚಾಚಿರುವ ಬಗ್ಗೆ ಸುಳಿವರಿತ ಬೆಂಗಳೂರು ಪೊಲೀಸರೇ ಭಾರೀ ಕಾರ್ಯಾಚರಣೆಗೆ ತಯಾರಿ ನಡೆಸಿದ್ದರು. ಆ ಹೊತ್ತಿಗೆ ಮಹಾರಾಷ್ಟ್ರ ANTF ಮತ್ತು ಎನ್‌ಸಿಬಿ ಅಧಿಕಾರಿಗಳು ಬೆಂಗಳೂರು ಪೊಲೀಸರ ಜೊತೆ ಚರ್ಚಿಸಿ, ಬೆಂಗಳೂರು ಪೊಲೀಸರ ಜೊತೆ ಎನ್‌ಸಿಬಿ ಅಧಿಕಾರಿ ಸಾಥ್ ನೀಡಿ, ಜಂಟಿಯಾಗಿ ಬೆಂಗಳೂರು ಪೊಲೀಸರ ನೇತೃತ್ವದಲ್ಲೇ ಭರ್ಜರಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ಜಾಲ ಪತ್ತೆ ಹಚ್ಚಿದರು. ಕೇಂದ್ರ […]

Continue Reading

ಮಂಗಳೂರು: ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಸುಲಿಗೆ ಮಾಡಿದ ಆರೋಪಿಯ ಬಂಧನ; 32 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ವಶ.

ದಿನಾಂಕ: 25-12-2025 ರಂದು ಸಂಜೆ ಗುರುನಗರ ನಿವಾಸಿಯಾದ ಮಹಿಳೆಯೊಬ್ಬರು ತಮ್ಮ ಮಗಳೊಂದಿಗೆ ಯೆಯ್ಯಾಡಿಯಲ್ಲಿರುವ ತಮ್ಮ ಅಂಗಡಿಯಿಂದ ಮನೆಯ ಕಡೆಗೆ ಶಂಕರಭವನ ಹೊಟೇಲ್ ಬಳಿಯ ಕೊಪ್ಪಳಕಾಡು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ, ಸಂಜೆ ಸುಮಾರು 6.30 ಗಂಟೆಗೆ ಹಿಂದಿನಿಂದ ಬಂದ ಓರ್ವ ಅಪರಿಚಿತ ವ್ಯಕ್ತಿ ಏಕಾಏಕಿ ರತ್ನಾವತಿಯವರ ಕುತ್ತಿಗೆಯಲ್ಲಿದ್ದ 32 ಗ್ರಾಂ ತೂಕದ ಬೆಲೆ ಬಾಳುವ ಚಿನ್ನದ ಕರಿಮಣಿ ಸರವನ್ನು ಕಸಿದುಕೊಂಡು ಓಡಿ ಹೋಗಿರುತ್ತಾನೆ. ಈ ಬಗ್ಗೆ ಅದೇ ದಿನ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಕ್ರಮಾಂಕ: 128/2025 ರಂತೆ […]

Continue Reading