ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ; ಡ್ರಗ್ ಪೆಡ್ಲರ್ ಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ತಂಡದ ಬಂಧನ.

ಬೆಂಗಳೂರಿನಿಂದ ಮಾದಕ ವಸ್ತು (MDMA) ತಂದು ಮಂಗಳೂರಿನ ಡ್ರಗ್ ಪೆಡ್ಲರ್ ಗಳಿಗೆ ಸರಬರಾಜು ಮಾಡುತ್ತಿದ್ದ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದ ಪೊಲೀಸರು ಬಂಧಿಸಿದ್ದಾರೆ. ದಿನಾಂಕ:13.12.2025 ರಂದು ಕಾರಿನಲ್ಲಿ ಬರುತ್ತಿದ್ದ ತಂಡವನ್ನು ಹಾಗೂ ಮಾದಕ ವಸ್ತುವನ್ನು ಅರ್ಕುಳ ಬಳಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿರುತ್ತಾರೆ. ಆರೋಪಿಗಳಾದ ಅಹಮ್ಮದ್ ಶಾಬೀತ್, ಬದ್ರಿಯಾ ನಗರ ಮಲ್ಲೂರು, ಇದೀಗ ವಾಸ: ಬಾಡಿಗೆ ಮನೆ ಶಾಂತಿ ಅಂಗಡಿ, ಜೋಡು ಮಾರ್ಗ ಬಿ.ಸಿ.ರೋಡ್. ಮಹಮ್ಮದ್ ಶಂಶೀರ್ ಮದ್ದ ಪರ್ಲಿಯಾ, ಜೋಡುಮಾರ್ಗ, ಬಂಟ್ವಾಳ. ಶ್ರೀಮತಿ ನೌಶೀನ, […]

Continue Reading

ಅನ್ನದಾತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ. 30 ತಿಂಗಳಲ್ಲಿ 2809 ರೈತರು ಆತ್ಮಹತ್ಯೆ

ದೇಶದಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿ ಮುಂದುವರೆದಿದೆ. ಕಳೆದ ಎರಡೂವರೆ ವರ್ಷದಲ್ಲಿ ಒಟ್ಟು 2809 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿ ಇಲಾಖೆ ಪ್ರಕಾರ 2023-24 ರಲ್ಲಿ 1,254 ರೈತರು, 2024-25 ರಲ್ಲಿ 1178 ರೈತರು, 2025 ನವೆಂಬರ್ ವರೆಗೆ 377 ರೈತರ ಆತ್ಮಹತ್ಯೆ ಕೇಸು ವರದಿಯಾಗಿದೆ. ದೇಶದಲ್ಲಿ ಇದೀಗ ಕರ್ನಾಟಕ ರಾಜ್ಯ ಅನ್ನದಾತರ ಆತ್ಮಹತ್ಯೆಯಲ್ಲಿ ಎರಡನೇ ಸ್ಥಾನ ಪಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲಾವಾರು ನೋಡುವುದಾದರೆ ಕಳೆದ ಎರಡೂವರೆ ವರ್ಷಗಳಲ್ಲಿ ಹಾವೇರಿ ಜಿಲ್ಲೆ […]

Continue Reading

ಬಂಟ್ವಾಳ: ಗಾಂಜಾ ಮಾರಾಟಕ್ಕೆ ಯತ್ನ, ಇಬ್ಬರ ಬಂಧನ, 810 ಗ್ರಾಂ ಗಾಂಜಾ ವಶ. ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲು.

ಬಂಟ್ವಾಳ: ತುಂಬೆ ಗ್ರಾಮದ ಹನಮನಗರ ಎಂಬಲ್ಲಿ, ರಾಷ್ಟ್ರೀಯ ಹೆದ್ದಾರಿ ಬಳಿ ಯಾರೋ ವ್ಯಕ್ತಿಗಳು ಅಕ್ರಮವಾಗಿ ನಿಷೇದಿತ ಮಾದಕ ವಸ್ತುವನ್ನು ಮಾರಾಟ ಮಾಡಲು ವಶದಲ್ಲಿಟ್ಟುಕೊಂಡಿರುವ ಬಗ್ಗೆ ದಿನಾಂಕ: 13.12.2025 ರಂದು ಸಂಜೆ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಬಂಟ್ವಾಳ ಪೊಲೀಸ್ ಉಪ-ನಿರೀಕ್ಷಕರು ಹಾಗೂ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ರಾಷ್ಟ್ರೀಯ ಹೆದ್ದಾರಿಯ ಪಕ್ಕ ನಿರ್ಜನ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು KA-19-MN-3664 ನೊಂದಣಿ ಸಂಖ್ಯೆಯ ಕಾರು ಮತ್ತು KA-19-AE-0166 ನೇ ನೊಂದಣಿ ಸಂಖ್ಯೆಯ […]

Continue Reading

ಮೂಡುಶೆಡ್ಡೆಯಲ್ಲಿ ಸರಕಾರಿ ಜಯದೇವ ಹೈದ್ರೋಗ ಘಟಕ, ಕಿದ್ವಾಯಿ ಆಸ್ಪತ್ರೆ ಸ್ಥಾಪನೆಗೆ ಆರೋಗ್ಯ ಮಂತ್ರಿಯಿಂದ ಮುಖ್ಯಮಂತ್ರಿಯವರಿಗೆ ಪ್ರಸ್ತಾವನೆ

ಖಾಸಗಿ ಮೆಡಿಕಲ್ ಲಾಬಿಗೆ ಮಣಿದು ಘಟಕ ಸ್ಥಾಪಿಸಲು ಹಿಂದೇಟು ಹಾಕಿದ್ದ ಸರಕಾರ; ಇನ್ನಾದರೂ ಬಡ-ಮಧ್ಯಮ ವರ್ಗದವರ ನೆರವಿಗೆ ಧಾವಿಸುತ್ತಾ ಸರಕಾರ.? ಖಾಸಗಿ ಮೆಡಿಕಲ್ ಕಾಲೇಜುಗಳ ಹಬ್ ಆಗಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರಿ ಆರೋಗ್ಯ ಆಸ್ಪತ್ರೆಗಳ ಬಲಪಡಿಸುವಿಕೆ ಗಗನಕುಸುಮವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಕಾರಿ ಆರೋಗ್ಯ ರಂಗವನ್ನು ಬಲಪಡಿಸುವಂತೆ ಕಮ್ಯುನಿಸ್ಟ್ ಪಕ್ಷ, ಸಮಾನ ಮನಸ್ಕ ಸಂಘಟನೆಗಳು ನಿರಂತರ ಹೋರಾಟ ಮಾಡುತ್ತಾ ಬಂದಿದೆ. ಇತ್ತೀಚೆಗೆ ಸುರತ್ಕಲ್ ನಲ್ಲಿ ಹೋರಾಟ ಸಮಿತಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ ಘಟಕ, ಜಯದೇವ ಹೃದಯದ […]

Continue Reading

ಕುಂದಾಪುರ: ಕೋಟೇಶ್ವರ ಪಂಚಾಯತಿನಲ್ಲಿ ನುಂಗಿದ್ದೆಷ್ಟು.? ಅಭಿವೃದ್ದಿ ಅಧಿಕಾರಿಯ ಹಗಲು ದರೋಡೆ; ಕಮಾಯಿಯ ವಾಸನೆ ಬಡಿಯುತ್ತಿದೆ.

ಗ್ರಾಮಗಳ ಅಭಿವೃದ್ಧಿಯೇ ದೇಶದ ಅಭಿವೃದ್ಧಿ ಎಂದು ಮಹಾತ್ಮ ಗಾಂಧಿಯವರು ಹೇಳಿದ್ದು ಈಗ ಬಹಳಷ್ಟು ಜನರಿಗೆ ನೆನಪುಳಿದಿಲ್ಲ. ಕೇವಲ ನಗರ ಕೇಂದ್ರಿತ ನಾಗರೀಕತೆ ಅಭಿವೃದ್ಧಿ ಹೊಂದುತ್ತಿರುವುದು ಒಂದು ಕಡೆಯಾದರೆ, ಯುವ ಸಮುದಾಯ ನಗರದ ದಿಕ್ಕಿಗೆ ಮುಖ ಮಾಡಿದ ಕಾರಣ ಬಹುತೇಕ ಹಳ್ಳಿಗಳು ವೃದ್ಧಾಶ್ರಮಗಳಾಗುತ್ತಿದೆ. ಹಾಗಂತ ಸರಕಾರಗಳಿಂದ ಗ್ರಾಮಗಳಿಗೆ ಹರಿದುಬರುತ್ತಿರುವ ಅನುದಾನ ಪ್ರಮಾಣವೇನೂ ಕಡಿಮೆಯಾಗಿಲ್ಲ. ಗ್ರಾಮಗಳ ಅಮೂಲಾಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿಗಳು ನಿರ್ಮಾಣಗೊಂಡು, ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಶಕ್ತವಾಗಿದೆ. ಮೇಲಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸಾಧ್ಯವಾದಷ್ಟು ವಿವಿಧ ಮೂಲಗಳಿಂದ […]

Continue Reading

ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚು

ಅಸುರಕ್ಷಿತ ನಡೆನುಡಿಗೆ ಒಳಗಾಗಿ 22 ವರ್ಷ ಒಳಗಿನ ಯುವ ಜನತೆ ಎಚ್‌ಐವಿ ಬಲೆಗೆ ಬೀಳುತ್ತಿದ್ದಾರೆ ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚಾಗುತ್ತಿರುವ ಆತಂಕಕಾರಿ ಸಂಗತಿಯೊಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಿಂದ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ತಾಲೂಕಿನಲ್ಲಿ 2025ನೇ ಸಾಲಿನ ಶೇ.66.33 ರಷ್ಟು ಪ್ರಕರಣದಲ್ಲಿ ಯುವ ಜನತೆಯಲ್ಲೆ ಎಚ್‌ಐವಿ ಸೋಂಕು ದೃಢಪಟ್ಟಿದೆ. ಇದರಲ್ಲಿ 22 ವರ್ಷದ ಒಳಗಿನ ವಯಸ್ಸಿನ ಯುವ ಜನತೆ ಎನ್ನುವುದು ವಿಶೇಷವಾಗಿ ಗಮನ ಸೆಳೆದಿದೆ. ಅಂಕೋಲಾ ತಾಲೂಕಿನಲ್ಲಿ ಒಟ್ಟು […]

Continue Reading

ರಾಜ್ಯಾದ್ಯಂತ ಏಕರೂಪದ ರಿಯಾಯಿತಿ. ಅನಧಿಕೃತ ವಸತಿ ಕಟ್ಟಡಗಳಿಗೆ ಪಂಚಾಯತ್ ವ್ಯಾಪ್ತಿಯಲ್ಲೂ ‘ಓಸಿ’ ನಿಯಮದಿಂದ ವಿನಾಯಿತಿ; ಸಚಿವ ಸಂಪುಟ ತೀರ್ಮಾನ

ನಗರ ಪ್ರದೇಶಗಳ ಮಾದರಿಯಲ್ಲಿಯೇ ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಅನಧಿಕೃತ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಕಡ್ಡಾಯವಾಗಿದ್ದ ‘ಸ್ವಾಧೀನಾನುಭವ ಪ್ರಮಾಣಪತ್ರ’ (OC) ನಿಯಮದಿಂದ ವಿನಾಯಿತಿ ನೀಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇದರಿಂದ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1200 ಚದರ ಅಡಿ (30×40 ಅಡಿ) ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ […]

Continue Reading

ಮುಸ್ಲಿಂ ಸಮುದಾಯದ ಪರ ಧ್ವನಿ ಎತ್ತಿದರೆ ಜೋಕೆ. ಕಾಂಗ್ರೆಸ್ ನಿಂದ ಔಟ್

ಅಂದು ಅಶ್ರಫ್, ಇಂದು ಸಿರಾಜ್, ನಾಳೆ ನೀವು.! ಕಾಂಗ್ರೆಸ್ ಪಕ್ಷದಲ್ಲಿ ನಾಯಕರ ಹಿಂಬಾಲಕರಾಗಿ ಜೈಕಾರ ಕೂಗುವುದು, ನಾಯಕರ ಹಿಂದೆ ಮುಂದೆ ನಿಂತು ಸೆಲ್ಫಿ ತೆಗೆಯುವುದು, ನಾಯಕರ ಮುಂದೆ ಕೈ ಕಟ್ಟಿ ನಿಲ್ಲುವುದು.. ಬ್ಯಾನರ್, ಬಂಟಿಂಗ್ಸ್ ಕಟ್ಟುವುದು ಇವಿಷ್ಟೇ ಸದ್ಯ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರ, ಎರಡನೇ ಹಂತದ ನಾಯಕರ ಪರಿಸ್ಥಿತಿ. ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಉಸಿರಾಡುವುದು ಮುಸ್ಲಿಂ ಸಮುದಾಯದ ಮತಗಳಿಂದ. ಕೋಮುವಾದಿಗಳು ಅಧಿಕಾರಕ್ಕೆ ಏರುತ್ತಾರೆ, ಬಿಜೆಪಿ ಬರುತ್ತದೆ ಎಂದು ಚುನಾವಣಾ ಸಮಯದಲ್ಲಿ […]

Continue Reading

ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 2026ರ ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತ್, ತಾಲೂಕು ಪಂಚಾಯಿತ್ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗ್ರಾಮ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಪಂಚಾಯತ್, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿ ದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್ ತಿಂಗಳಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆದಿರಲಿಲ್ಲ. […]

Continue Reading

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ, ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್: ಸಾರಿಗೆ ಸಚಿವರು

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್​​ಟಿಒ) ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್​ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್​ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆದಾಗ್ಯೂ ಆರ್​ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರಿಯನ್ನಾಗಿ ಮಾಡಿ […]

Continue Reading