ಕೂಳೂರು ಘಾಲ್ಗುಣಿ ನದಿಯ ಬಳಿ ಗಾಂಜಾ ಹಾಗೂ ಎಂ.ಡಿ.ಎಂ ಮಾರಾಟ ಯತ್ನ ಪ್ರಕರಣ; ಆರೋಪಿಗಳ ಬಂಧನ

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರ-ಕೂಳೂರು ಎಂಬಲ್ಲಿಯ ಘಾಲ್ಗುಣಿ ನದಿ ಬಳಿ ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿಯಂತೆ ದಾಳಿ ನಡೆಸಿ, ಆರೋಪಿಗಳಾದ ಶಾಫಿ ಅಹ್ಮದ್ (40) ತಂದೆ: ದಿ. ಅಜೀಜ್ ಖಾನ್, 13 ನೇ ಕ್ರಾಸ್, ಪಿ.ಹೆಚ್. ಕಾಲೋನಿ, ತುಮಕೂರು ಮತ್ತು ಮೊಹಮ್ಮದ್ ಸಮೀರ್ (20) ತಂದೆ: ಮೊಹಮ್ಮದ್ ರಫೀ, ಅಪೋಲೋ ಮೆಡಿಕಲ್ ರಸ್ತೆ, ಕೋತಿಪುರ, ತುಮಕೂರು ಎಂಬವರನ್ನು ಬಂಧಿಸಿ, ಅವರ ಬಳಿಯಿದ್ದ ಸುಮಾರು 12 ಗ್ರಾಂ ಎಂ.ಡಿ.ಎಂ, ಹಾಗೂ 275 ಗ್ರಾಂ ಗಾಂಜಾ (ಮಾದಕ […]

Continue Reading

ಭಾರತದ ಜೇಮ್ಸ್ ಬಾಂಡ್ ದೋವಲ್ ಹೇಳಿಕೆ ಸಿಕ್ರೇಟ್ ರಿವೀಲ್.!

ಪಾಕಿಸ್ತಾನ ಪರ ಗೂಢಾಚಾರಿಕೆ ಯಲ್ಲಿ ಹಿಂದುಗಳ ಸಂಖ್ಯೆಯೇ ಅಧಿಕ.! ಪಾಕಿಸ್ತಾನದ ಗುಪ್ತಚಾರ ಸಂಸ್ಥೆ ಐ.ಎಸ್.ಐ ಪರವಾಗಿ ಭಾರತದಲ್ಲಿ ಕೆಲಸ ಮಾಡಿದವರ ಪೈಕಿ 80 ಪರ್ಸೆಂಟ್ ಹಿಂದುಗಳಿದ್ದಾರೆ, ಕೇವಲ 20 ಪರ್ಸೆಂಟ್ ಮುಸ್ಲಿಮರಿದ್ದಾರೆ ಎಂದು ಹೇಳಿದ ಅಜಿತ್ ದೋವಲ್ ರವರ ಒಂದು ಹಳೆಯ ವೀಡಿಯೊ ತುಣುಕು ಸಾಮಾಜಿನ ಜಾಲತಾಣದಲ್ಲಿ ಹರಿದಾಡಿತ್ತು. ಇದು ಎಡಿಟಿಂಗ್ ವಿಡಿಯೋ ಎಂದು ಸೃಷ್ಟೀಕರಣ ನೀಡಿದ್ದಾರೆ. ಆದರೆ ಇದರ ಸತ್ಯಾಸತ್ಯತೆಯನ್ನು ಮಾಧ್ಯಮದ ಪ್ರತಿನಿಧಿರೊಬ್ಬರು ಬೆನ್ನು ಹತ್ತಿದಾಗ ವಿಡಿಯೋ ಎಡಿಟಿಂಗ್ ಮಾಡಿದ್ದಲ್ಲ, ವಿಡಿಯೋ ಮಾಡಿರುವ ಸಮಯದಲ್ಲಿ ಎಐ […]

Continue Reading

ದೇವಸ್ಥಾನದ ಬಳಿ ಪಾರ್ಕ್ ಮಾಡಿದ್ದ ವಾಹನ ಕಳವು ಪ್ರಕರಣ: ಕೇರಳ ಮೂಲದ ಇಬ್ಬರು ಅಂತ‌ರಾಜ್ಯ ಕದೀಮರನ್ನು ಬಂಧಿಸಿದ ಮಂಗಳೂರು ಪೊಲೀಸರು

ಮಂಗಳೂರಿನ ನಾಗುರಿ, ಜಪ್ಪಿನಮೊಗರು ದೇವಸ್ಥಾನದ ಬಳಿ ಪಾರ್ಕ್ ಮಾಡಿದ್ದ ದ್ವಿಚಕ್ರ ವಾಹನವನ್ನು ಕಳವು ಮಾಡಿದ ಪ್ರಕರಣದಲ್ಲಿ ಇಬ್ಬರು ಅಂತ‌ರಾಜ್ಯ ಕದೀಮರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ವೆಲ್ಲಾಡ್‌ ಅಲೆಕ್ಸ್‌ ಡೊಮಿನಿಕ್‌, ಕೋಯಿಕೋಡ್ ಕುರಚೂರು ನಿವಾಸಿ ಅಮಲ್‌ ಕೃಷ್ಣ ಬಂಧಿತ ಆರೋಪಿಗಳು. ನವಂಬರ್ 14ರಂದು ಆರೋಪಿಗಳು ಸ್ನೇಹಿತರನ್ನು ಭೇಟಿ ಮಾಡಲು ಮಂಗಳೂರಿಗೆ ಬಂದು ನಗರದ ಮಂಗಳೂರು ಜಂಕ್ಷನ್‌ ರೈಲ್ವೇ ನಿಲ್ದಾಣ ಪ್ರದೇಶದಲ್ಲಿ ಸುತ್ತಾಡಿದ್ದಾರೆ. ಬಳಿಕ ನಾಗುರಿಯ ಬಸ್‌ ತಂಗುದಾಣ ಬಳಿ ಪಾರ್ಕ್ ಮಾಡಿದ್ದ ಸ್ಕೂಟರ್‌ ಹಾಗೂ ಜೆಪ್ಪಿನಮೊಗರು ಆದಿಮಾಯೆ […]

Continue Reading

ಕೋಟೇಶ್ವರ ದೇವಳ ಕೊಡಿ ಹಬ್ಬ : ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ; ಭಗವಂತನ ಆರಾಧನೆಯಿಂದ ಬದುಕಿನಲ್ಲಿ ಉನ್ನತಿ: ಡಾ. ತಲ್ಲೂರು

ಉಡುಪಿ: ಕಲಾರಾಧಾನೆ ಭಗವಂತನ ಸಾಕ್ಷಾತ್ಕಾರಕ್ಕೆ ದಾರಿ. ಭಗವಂತನಿಗೆ ಅತೀ ಪ್ರಿಯವಾದದ್ದು ಕಲಾ ಸೇವೆ. ಅದು ನೃತ್ಯ, ಯಕ್ಷಗಾನ ಅಥವಾ ಇನ್ನಾವುದೇ ರೂಪದಲ್ಲಿ ಇರಬಹುದು. ಕಲಾ ಸೇವೆಯಿಂದ ಮನುಷ್ಯ ಅತೀ ಉನ್ನತ ಸ್ಥಾನವನ್ನು ಏರ ಬಲ್ಲ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಭಾನುವಾರ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ರಥೋತ್ಸವ ( ಕೊಡಿ ಹಬ್ಬ) ಪ್ರಯುಕ್ತ ದೇವಸ್ಥಾನದ ಶಾಂತಾರಾಮ ರಂಗಮಂಟಪದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಗವಂತ ಶ್ರೀಕೃಷ್ಣನಿಗೆ […]

Continue Reading

ಸಮುದಾಯ ಆಸ್ಪತ್ರೆಗೆ ಆಗ್ರಹಿಸಿ ಸುರತ್ಕಲ್ ನಲ್ಲಿ12 ತಾಸುಗಳ ಸಾಮೂಹಿಕ ಧರಣಿ

ಸುರತ್ಕಲ್ ನಲ್ಲಿ ಸಮುದಾಯ ಆಸ್ಪತ್ರೆ ನಿರ್ಮಾಣ ಆಗದೆ ವಿರಮಿಸುವುದಿಲ್ಲ: ಮುನೀರ್ ಕಾಟಿಪಳ್ಳ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿ “ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ, ಸುರತ್ಕಲ್” ನೇತೃತ್ವದಲ್ಲಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಸಾಮೂಹಿಕ ಧರಣಿ ನಡೆಯಿತು. ಹಲವು ಜನಪರ ಸಂಘಟನೆಗಳು, ಸ್ಥಳೀಯ ಸಂಘಸಂಸ್ಥೆಗಳ ಪದಾಧಿಕಾರಿಗಳು ಧರಣಿಯಲ್ಲಿ ಭಾಗಿಗಳಾದರು. ಸಾಮೂಹಿಕ ಧರಣಿಯನ್ನು ಮುನೀರ್ ಕಾಟಿಪಳ್ಳ ಉದ್ಘಾಟಿಸಿ ಮಾತಾಡಿದರು. ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ ಮೂರು ದಶಕದ ಹಿಂದೆ […]

Continue Reading

ಹನ್ನೆರಡು ರಾಜ್ಯಗಳ, ಕೇಂದ್ರಾಡಳಿತ ಪ್ರದೇಶಗಳ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಒಂದು ವಾರ ವಿಸ್ತರಿಸಿದ ಚುನಾವಣಾ ಆಯೋಗ

ಭಾರತದ ಚುನಾವಣಾ ಆಯೋಗ 12 ರಾಜ್ಯಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಒಂದು ವಾರ ವಿಸ್ತರಿಸಿದೆ. ಮುಂಬರುವ ಚುನಾವಣೆಗಳಿಗೆ ಮೊದಲು ಮತದಾರರ ಪಟ್ಟಿಯಲ್ಲಿ ತಮ್ಮ ವಿವರಗಳನ್ನು ಪರಿಶೀಲಿಸಲು ಮತ್ತು ನವೀಕರಿಸಲು ಮತದಾರರಿಗೆ ಹೆಚ್ಚುವರಿ ಸಮಯವನ್ನು ನೀಡಿದೆ. ಕರಡು ಮತದಾರರ ಪಟ್ಟಿಯನ್ನು ಡಿಸೆಂಬರ್ 9 ರಂದು ಪ್ರಕಟಿಸಲಾಗುತ್ತಿದ್ದು, ಡಿಸೆಂಬರ್ 16 ರ ಅಂತಿಮ ಮತದಾರರ ಪಟ್ಟಿ ಫೆಬ್ರವರಿ 7 ರಂದು ಪ್ರಕಟವಾಗಲಿದ್ದು, ಫೆಬ್ರವರಿ 14, 2026 ರಂದು ಅಂತಿಮ ಮತದಾರರ ಪಟ್ಟಿ ಬಿಡುಗಡೆಯಾಗಲಿದೆ. ಭಾರತದ […]

Continue Reading

ಅಬಲೆಯರ ಗಟ್ಟಿ ಧ್ವನಿ ಈ ಮಂಡ್ಯದ ಹೆಣ್ಣು.!, ಸಕ್ಕರೆ ನಾಡಿನಲ್ಲಿ ಮಹಿಳಾ ಪರ ಹೋರಾಟದ ಮುಂಚೂಣಿ ನಾಯಕಿ ರಜನಿರಾಜ್

ಮಣಿಪುರಕ್ಕೆ ದಾವಿಸಿ ಗಡಿ ಕಾಯುವ ಯೋಧನಿಂದ ವಂಚನೆಗೊಳಗಾದ ಹೆಣ್ಣಿಗೆ ನ್ಯಾಯ ಒದಗಿಸಿದ ಗಟ್ಟಿಗಿತ್ತಿ.! ಹೆಣ್ಣು ಅಬಲೆಯಲ್ಲ..ಈ ಮಾತನ್ನು ಪ್ರತಿ ನಿತ್ಯ ಕೇಳುತ್ತಿದ್ದೇವೆ. ಆದರೆ ಭಾರತದಂತಹ ದೇಶದಲ್ಲಿ ಒಂದಲ್ಲ ಒಂದು ಕಾರಣಕ್ಕೆ ಹೆಣ್ಣು ಲೈಂಗಿಕ ಶೋಷಣೆ, ಅನ್ಯಾಯಕ್ಕೆ ಒಳಗಾಗುತ್ತಿದ್ದಾಳೆ. ಮಧ್ಯರಾತ್ರಿ ಹೆಣ್ಣೊಬ್ಬಳು ನಿರ್ಭೀತಿಯಿಂದ ಓಡಾಡುವ ಗಳಿಗೆ ಬಂದಾಗಲಷ್ಟೇ ಭಾರತಕ್ಕೆ ಸ್ವಾತಂತ್ರ್ಯ ದೊರಕಿದಂತಾಗುತ್ತದೆ ಎಂದು ಮಹಾತ್ಮರು ಹೇಳಿದ್ದರು. ಮಧ್ಯರಾತ್ರಿ ಬಿಡಿ ಮಟ ಮಟ ಮಧ್ಯಾಹ್ನ ಹೊತ್ತಿನಲ್ಲೇ ಮಹಿಳೆಯರು ಓಡಾಡುತ್ತಿದ್ದರೆ ಕೀಚಕರ ಗುಂಪು ಮಹಿಳೆಯರನ್ನು ಶೋಷಣೆಗೆ ಒಳಪಡಿಸುವ ಅನೇಕ ಸಂಗತಿಗಳು ನಡೆದಿದೆ. […]

Continue Reading

ಚಿನ್ನದ ವ್ಯಾಪಾರಿಯೊಬ್ಬರಿಂದ 31 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ತು ಪಡೆದು ಪರಾರಿಯಾಗಿದ್ದ ಅಂತರಾಜ್ಯ ವಂಚಕ ಪುಗಲ್ ಅರುಣ್ ಬಂಧನ

ತಮಿಳುನಾಡು ಮೂಲದ ವಂಚಕನ ಹೆಡೆಮುರಿ ಕಟ್ಟಿದ ಮಂಗಳೂರು ಪೊಲೀಸರು ಮಂಗಳೂರಿನ ಚಿನ್ನದ ವ್ಯಾಪಾರಿಯೊಬ್ಬರಿಂದ 31 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್ತು ಪಡೆದು ಪರಾರಿಯಾಗಿದ್ದ ಅಂತರಾಜ್ಯ ವಂಚಕ ತಮಿಳುನಾಡು ಮೂಲದ ಅರುಣ್ ಎಂಬಾತನನ್ನು ಮಂಗಳೂರಿನ ಉರ್ವ ಪೊಲೀಸರು ಕೊಯಂಬತ್ತೂರಿನಲ್ಲಿ ಬಂಧಿಸಿ, ಮಂಗಳೂರಿಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ. ಈತ ವಂಚಿಸಿದ 240 ಗ್ರಾಂ ತೂಕದ ಚಿನ್ನದ ಬಿಸ್ಕೀಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ನವಂಬರ್ 21 ರಂದು ಅರುಣ್ ಎಂದು ಪರಿಚಯ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬ ಉರ್ವಾದ ಗುಜ್ಜಾಡಿ ಚೇಂಬರ್ಸ್‌ನಲ್ಲಿರುವ ಸ್ವರ್ಣ ಜುವೆಲರ್ಸ್‌ಗೆ ಭೇಟಿ ನೀಡಿ, […]

Continue Reading

ಏಳು ವರ್ಷದಿಂದ ದುಡಿಸಿ, ಸಂಬಳ ನೀಡದ ಬೀಡಿ ಮಾಲಕರ ವಿರುದ್ಧ ಮತ್ತು ಕನಿಷ್ಟ ಕೂಲಿ ಜಾರಿ ಮಾಡದಿದ್ದರ ವಿರುದ್ಧ ಬೀಡಿ ಕಾರ್ಮಿಕರ ಪ್ರತಿಭಟನೆ

01.04.2024 ರಿಂದ ಸರಕಾರ ನಿಗದಿ ಪಡಿಸಿ ಆದೇಶ ಮಾಡಿದ ಕನಿಷ್ಠ ಕೂಲಿಯನ್ನು ಕೂಡಾ ಬೀಡಿ ಮಾಲಕರು ನೀಡದೆ ವಂಚಿಸುತ್ತಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಬೀಡಿ ಕಾರ್ಮಿಕರ ಫೆಡರೇಶನ್ ಅಧ್ಯಕ್ಷರಾದ ಜೆ. ಬಾಲಕೃಷ್ಣ ಶೆಟ್ಟಿ ಆರೋಪಿಸಿದರು. ಅವರು ಇಂದು ಮಂಗಳೂರು ಸಹಾಯಕ ಕಾರ್ಮಿಕ ಇಲಾಖೆಯಲ್ಲಿ ನಡೆದ ಬೀಡಿ ಕಾರ್ಮಿಕರ ಧೃಹತ್ ಪ್ರತಿಭಟನೆಯನ್ನು ಉದ್ಘಾಟಿಸಿ ಮಾತಾಡುತ್ತಿದ್ದರು. ಕಾರ್ಮಿಕರಿಗೆ ಈಗ ಇದ್ದ ವೇತನವನ್ನು ಹಿಮ್ಮುಖ ಗೊಳಿಸಿ, ಸರಕಾರ ಮಾಲಕರ ಪರವಾಗಿ ಆದೇಶ ಮಾಡಿದ್ದರೂ ಬೀಡಿ ಮಾಲಕರು ಆ ಕೂಲಿಯನ್ನೂ ಕೂಡಾ […]

Continue Reading

ನಕಲಿ ದಾಖಲೆಗಳ ಸೃಷ್ಟಿಸಿ, ಸರ್ಕಾರಿ ಜಮೀನು ಕಬಳಿಸಲು ಸಹಕರಿಸಿದ ಆರೋಪದ 16 ಮಂದಿ ಸರ್ಕಾರಿ ನೌಕರರ ವಿರುದ್ಧ ಪ್ರಕರಣ ದಾಖಲು

ನಕಲಿ ದಾಖಲೆಗಳ ಸೃಷ್ಟಿ ಮಾಡುವ ಮೂಲಕ ಸರ್ಕಾರಿ ಜಮೀನು ಕಬಳಿಸಲು ಸಹಕರಿಸಿದ ಆರೋಪದ ಮೇಲೆ ಆನೇಕಲ್ ತಾಲೂಕಿನ ಭೂ ದಾಖಲೆಗಳ ವಿಭಾಗದ 16 ಮಂದಿ ಸರ್ಕಾರಿ ನೌಕರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಉಪ ತಹಸೀಲ್ದಾರ್, ಮೂರು ಮಂದಿ ಶಿರಸ್ತೇದಾರರು, ಮೂರು ಮಂದಿ ಪ್ರಥಮ ದರ್ಜೆ ಸಹಾಯಕರು, ಇಬ್ಬರು ದ್ವಿತೀಯ ದರ್ಜೆ ಸಹಾಯಕರು, ಏಳು ಮಂದಿ ಡಿ. ದರ್ಜೆ ನೌಕರರು, ಒಟ್ಟು 16 ಮಂದಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮೂಲ ಮಂಜೂರಾತಿ ಕಡತ, ದರಖಾಸ್ತು ವಹಿ, ಸಾಗುವಳಿ ಚೀಟಿ, […]

Continue Reading