ಮದುವೆಯಾಗುವುದಾಗಿ ನಂಬಿಸಿ ಬೆಳ್ತಂಗಡಿಯ ಉದ್ಯಮಿಗೆ 87 ಲಕ್ಷ ರೂ. ವಂಚನೆ, ಪ್ರಕರಣ ದಾಖಲು

ಮ್ಯಾಟ್ರಿಮೋನಿ ವೆಬ್‌ಸೈಟ್ ಮೂಲಕ ಪರಿಚಯವಾಗಿ ಮದುವೆಯಾಗುವುದಾಗಿ ನಂಬಿಸಿ, ಬೆಳ್ತಂಗಡಿಯ ಉದ್ಯಮಿಯೊಬ್ಬರಿಂದ 87 ಲಕ್ಷ ರೂ. ಪಡೆದು ವಂಚಿಸಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಯ್ಯೂರು ಗ್ರಾಮದ ಉದ್ಯಮಿ ಅನನ್ಯ ಕೃಷ್ಣ ಎಂಬವರಿಗೆ 2024ರ ಮೇ ತಿಂಗಳಲ್ಲಿ ಮ್ಯಾಟ್ರಿಮೋನಿ ಮೂಲಕ ಶಿವಮೊಗ್ಗ ಮೂಲದ ಅನಿಷಾ ಪಾಲನ್ನ ಎಂಬ ಯುವತಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಇನ್‌ ಸ್ಟಾಗ್ರಾಂ ಹಾಗೂ ಮೊಬೈಲ್ ಮೂಲಕ ಸಂಪರ್ಕ ದಲ್ಲಿದ್ದು, ಮದುವೆಯಾಗುವ ಕುರಿತು ಮೊಬೈಲ್ ನಲ್ಲಿ ಮಾತುಕತೆ ನಡೆಸುತ್ತಿದ್ದರು. ಈ ವೇಳೆ ಆರೋಪಿ […]

Continue Reading

ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ, ನಗದು ಬಹುಮಾನ

ಅಪರಾಧ ಪತ್ತೆ, ಸೈಬರ್ ಕ್ರೈಂ, ಎನ್ಡಿಪಿಎಸ್ ಹಾಗೂ ಕಾನೂನು ಸುವ್ಯವಸ್ಥೆಯಲ್ಲಿ ಸಾಧನೆ ಮಾಡಿದ ಪೊಲೀಸ್ ಸಿಬ್ಬಂದಿಗಳಿಗೆ ಸನ್ಮಾನ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆಯನ್ನು ಮೆರೆದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಗುರುತಿಸಿ, ದಿನಾಂಕ 20-07-2026 ರಂದು ಮಾನ್ಯ ಪೊಲೀಸ್ ಆಯುಕ್ತರು 29 ಪೊಲೀಸ್ ಅಧಿಕಾರಿಗಳಿಗೆ ಹಾಗೂ 118 ಸಿಬ್ಬಂದಿಗಿಗೆ ನಗದು ಬಹುಮಾನ […]

Continue Reading

ಸಿಜೆಪಿ ಜೊತೆ ಮಾತುಕತೆಗೆ ಮುಂದಾದ ಕೇಂದ್ರ ಸರಕಾರ; ಸಚಿವ ಜೆ.ಪಿ. ನಡ್ಡಾ ಜೊತೆ ಮಾತುಕತೆ

ದೇಶದಲ್ಲಿ ನಡೆಯುತ್ತಿರುವ ಪರೀಕ್ಷಾ ಅಕ್ರಮಗಳನ್ನು ಪ್ರಶ್ನಿಸಿ ಕಾಕ್ರೋಜ್​ ಜನತಾ ಪಾರ್ಟಿಯ ನೇತೃತ್ವದಲ್ಲಿ ದೆಹಲಿಯಲ್ಲಿ ಇಂದು ಸಂಸತ್ ಚಲೋ ಎಂಬ ಪ್ರತಿಭಟನಾ ರ‍್ಯಾಲಿ ನಡೆಯುತ್ತಿದೆ. ಈ ಪ್ರತಿಭಟನೆಗೆ ದೆಹಲಿ ಪೊಲೀಸರ ಅನುಮತಿ ಇರದ ಕಾರಣ ಕೆಲ ಕಡೆಗಳಲ್ಲಿ ಲಾಠಿ ಚಾರ್ಜ್​ ಕೂಡ ಆಗಿದೆ ಎಂದು ವರದಿಯಾಗಿದೆ. ಇದರ ನಡುವೆ ಪ್ರತಿಭಟನೆಯ ತೀವ್ರತೆಯನ್ನು ಅರಿತ ಕೇಂದ್ರ ಸರ್ಕಾರವು ಸಿಜೆಪಿಯೊಂದಿಗೆ ಮಾತುಕತೆಗೆ ಮುಂದಾಗಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಜೆ.ಪಿ. ನಡ್ಡಾ ಅವರೊಂದಿಗೆ ಕಾಕ್ರೋಚ್ ಜನತಾ ಪಕ್ಷದ ಪ್ರತಿನಿಧಿಗಳು […]

Continue Reading

ಸಂಪುಟ ಸರ್ಕಸ್ಸು ಏಕೆ ಮುಗಿಯುತ್ತಿಲ್ಲ?; ಇನ್ನೆಷ್ಟು ದಿನ ಸಂಪುಟ ಸರ್ಕಸ್?

ಮೋದಿ ಸಂಪುಟಕ್ಕೆ ಯಾರು ಸೇರುತ್ತಾರೆ.?, ಬಿಜೆಪಿ-ಜೆಡಿಎಸ್ ಮೈತ್ರಿಯ ಕತೆ? ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ಶನಿವಾರ ರಾಜ್ಯ ಬಿಜೆಪಿ ಪಾಳಯದಲ್ಲಿ ಕುತೂಹಲಕಾರಿ ಸುದ್ದಿಯೊಂದು ತೇಲಿ ಬಂತು. ಕರ್ನಾಟಕದಲ್ಲಿ ಪಕ್ಷದ ವಿದ್ಯಮಾನಗಳನ್ನು ಗಮನಿಸಲು ವರಿಷ್ಟರು ವೀಕ್ಷಕರ ತಂಡವನ್ನು ಕಳಿಸಲು ನಿರ್ಧರಿಸಿದ್ದಾರೆ ಎಂಬುದು ಈ ಸುದ್ದಿ. ಜುಲೈ ಇಪ್ಪತ್ತೈದರ ಹೊತ್ತಿಗೆ ಕರ್ನಾಟಕಕ್ಕೆ ಆಗಮಿಸಲಿರುವ ಈ ವೀಕ್ಷಕರ ಪಡೆ ಇಲ್ಲಿ ವಿವಿಧ ಹಂತದ ನಾಯಕರ ಅಭಿಪ್ರಾಯ ಸಂಗ್ರಹಿಸಿ, ಆನಂತರ ದಿಲ್ಲಿಗೆ ಮರಳಲಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತೀನ್ ನಬಿನ್ ಅವರಿಗೆ ವರದಿ ಸಲ್ಲಿಸಲಿದೆ […]

Continue Reading

ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ; ದಾಳಿಯನ್ನು ಮುಂದುವರಿಸಿದರೆ, ತಕ್ಕಪಾಠ: ಖಮೇನಿ ಎಚ್ಚರಿಕೆ

ಅಮೇರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಹಿಗೆ ಯಾವುದೇ ಬೆಲೆ ಇಲ್ಲ, ಯುದ್ಧ ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು 14 ಅಂಶಗಳ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಂದು ವೇಳೆ ಅಮೆರಿಕ ದಾಳಿಯನ್ನು ಮುಂದುವರಿಸಿದರೆ, ಎಂದಿಗೂ ಮರೆಯಲಾಗದ ಪಾಠ ಕಲಿಸುವುದಾಗಿ ಖಮೇನಿ ಎಚ್ಚರಿಕೆ ನೀಡಿದ್ದಾರೆ. ಇರಾನ್ ದೇಶವನ್ನು ಉದ್ದೇಶಿಸಿ ಸಂದೇಶ ರವಾನಿಸಿರುವ ಖಮೇನಿ, ಅಮೆರಿಕ ಪದೇ ಪದೇ ಒಪ್ಪಂದಗಳ ನಿಯಮವನ್ನು ಉಲ್ಲಂಘಿಸುತ್ತಿದೆ ಎಂದು ಆರೋಪಿಸಿದರು. ಇದರಿಂದ ಅಮೆರಿಕದ ನೈಜ ಬಣ್ಣ ಬಯಲಾಗಿದೆ. ಒಪ್ಪಂದವನ್ನು ಉಲ್ಲಂಘಿಸುವ ಹಳೇ ಚಾಳಿಯನ್ನು ಅಮೆರಿಕ […]

Continue Reading

ಮಂಗಳೂರು: ಕಾರ್ಪೊರೇಷನ್ ಆರೋಗ್ಯ ಇಲಾಖೆಯಲ್ಲಿ ಸಡೇಸಾತ್ ಗಳು; ಜನನ-ಮರಣದಲ್ಲೂ ಭ್ರಷ್ಟಾಚಾರ.!

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಆರೋಗ್ಯ ಇಲಾಖೆ ಎಂಬುವುದೊಂದು ಇದೆ. ಯಾವ ಕರ್ಮಕ್ಕೆ ಈ ಇಲಾಖೆ ಅನ್ನುವುದು ಗೊತ್ತಿಲ್ಲ. ಆರೋಗ್ಯ ಇಲಾಖೆಯ ಅಧಿಕಾರಿಗಳೇ ಅನಾರೋಗ್ಯ ಪೀಡಿತರಾದರೆ ಆ ಇಲಾಖೆಯ ಬಗ್ಗೆ ನಾಗರೀಕರಿಗೆ ಯಾವ ರೇಂಜಿನಲ್ಲಿ ಅಸಡ್ಡೆ ಇರಬಹುದು ಅಲ್ಲವೇ. ಆರೋಗ್ಯ ಇಲಾಖೆಗೊಬ್ಬರು ಮುಖ್ಯಾಧಿಕಾರಿ. ಹತ್ತು ಹದಿನೈದು ಇನ್ಸ್ ಪೆಕ್ಟರ್ ಗಳು. ಇಪ್ಪತ್ತೈದಕ್ಕೂ ಅಧಿಕ ಸಿಬ್ಬಂದಿಗಳು. ಮಾತ್ರವಲ್ಲ ವಾರ್ಡ್ ವಾರ್ಡ್ ಗಳಿಗೆ ಆರೋಗ್ಯ ನಿರೀಕ್ಷಕ ಕಚೇರಿಗಳು. ಸರಕಾರದ ದುಡ್ಡನ್ನು ಬಾಚಿ ತಿನ್ನುವ ಕಾರ್ಪೊರೇಷನ್ ಆರೋಗ್ಯ ಕುಳಗಳು ಸಾರ್ವಜನಿಕರಿಗೆ ಒಂದು ನಯಾಪೈಸೆಯ […]

Continue Reading

ಚುನಾವಣಾ ಆಯೋಗವು ಪೌರತ್ವವನ್ನು ನಿರ್ಧರಿಸುವ ಸಾಂವಿಧಾನಿಕ ಸಂಸ್ಥೆಯಲ್ಲ: ಸುಪ್ರೀಂ ಕೋರ್ಟ್

ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸಲು ಚುನಾವಣಾ ಆಯೋಗಕ್ಕೆ ವಿಶೇಷ ಅಧಿಕಾರವಿದೆ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರು ಹೆಗೆದುಹಾಕಿದ ಮಾತ್ರಕ್ಕೆ ವ್ಯಕ್ತಿಯ ಪೌರತ್ವ ಸ್ವಯಂಚಾಲಿತವಾಗಿ ರದ್ದಾಗುವುದಿಲ್ಲ. ಚುನಾವಣಾ ಆಯೋಗವು ಪೌರತ್ವವನ್ನು ನಿರ್ಧರಿಸುವ ಸಾಂವಿಧಾನಿಕ ಸಂಸ್ಥೆಯಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ಗೆ (SIR) ಸಂಬಂಧಿಸಿದಂತೆ ಶುಕ್ರವಾರ ನಡೆದ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಈ ಹೇಳಿಕೆ ನೀಡಿದೆ. ಬಿಹಾರ SIR ಪ್ರಕರಣದಲ್ಲಿ ಈಗಾಗಲೇ ನೀಡಿರುವ ತೀರ್ಪನ್ನ ಉಲ್ಲೇಖಿಸಿದ ನ್ಯಾಯಾಲಯ, ಪೌರತ್ವವನ್ನ […]

Continue Reading

ನೀಟ್ ಫಲಿತಾಂಶ: ಕಮ್ಯೂನಿಟಿ ಸೆಂಟರ್ ನ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ; ಹದಿನೈದಕ್ಕಿಂತ ಹೆಚ್ಚು ವಿದ್ಯಾರ್ಥಿಗಳಿಗೆ MBBS

ನೀಟ್ ಎದುರಿಸಿದ 108 ವಿದ್ಯಾರ್ಥಿಗಳ ಪೈಕಿ, ಪ್ರತಿ ವಿದ್ಯಾರ್ಥಿಯು ಸರಕಾರಿ ಪ್ರಾಯೋಜಿತ ಮೆಡಿಕಲ್ ಕೋರ್ಸ್ ಗೆ ಅರ್ಹತೆ; 100% ಫಲಿತಾಂಶ ಕಳೆದ ಐದು ವರ್ಷಗಳಿಂದ ಕಮ್ಯೂನಿಟಿ ಸೆಂಟರಿನ ನಿರಂತರ ಜಾಗೃತಿ, ಪ್ರೋತ್ಸಾಹ ಮತ್ತು ಪ್ರಯತ್ನದ ಫಲ, ನೀಟ್ ಪರೀಕ್ಷೆಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಿದ್ಯಾರ್ಥಿಗಳಿಗೆ ಬೇರೆ ಬೇರೆ ಸಂಘ ಸಂಸ್ಥೆ, ಶಿಕ್ಷಣ ಸಂಸ್ಥೆಗಳ ಬೆಂಬಲ, ಮಾರ್ಗದರ್ಶನ ಮತ್ತು ನೆರವು ಒದಗಿ ಬರುತ್ತಿದೆ. ಸಮುದಾಯದಲ್ಲೂ ಹಲವು ಶಿಕ್ಷಣ ಸಂಸ್ಥೆಗಳು ಸ್ಪರ್ಧಾತ್ಮಕ ಪರೀಕ್ಷಾ ತರಬೇತಿಯನ್ನು ಉನ್ನತ ಶ್ರೇಣಿಯಲ್ಲಿ ಆರಂಭಿಸಿದೆ. […]

Continue Reading

ಮಂಗಳೂರು ನಗರ ಪೊಲೀಸರ ಕಾರ್ಯಾಚರಣೆ: ನೇಪಾಳ ಮೂಲದ ಕುಖ್ಯಾತ ಮನೆಗಳ್ಳರ ಬಂಧನ 10 ಲಕ್ಷ ಮೌಲ್ಯದ ಆಭರಣ ವಶ

ಮಂಗಳೂರು ನಗರದ, ಉರ್ವ ಮಾರ್ಕೆಟ್ ಬಳಿಯ ಮಠದಕಣಿ ಎಂಬಲ್ಲಿಯ ಮನೆಯವರು ದಿನಾಂಕ 11-07-2026 ರಂದು ಸಂಜೆ ಮನೆಗೆ ಲಾಕ್ ಮಾಡಿ, ಬಂಟ್ವಾಳದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಹೋಗಿ ದಿನಾಂಕ 12-07-2026 ರಂದು ವಾಪಾಸು ಬಂದು ನೋಡಿದಾಗ ಮನೆಯ ಹಿಂಬದಿಯ ಬಾಗಿಲು ಒಡೆದು ಯಾರೋ ಕಳ್ಳರು ಒಳ ನುಗ್ಗಿ ಮನೆಯಲ್ಲಿದ್ದ ಸುಮಾರು 64 ಗ್ರಾಂ ತೂಕದ ಚಿನ್ನಾಭರಣ ಹಾಗೂ 25 ಸಾವಿರ ರೂ. ಸೇರಿದಂತೆ ಒಟ್ಟು 8 ಲಕ್ಷದ 57 ಸಾವಿರ ಮೌಲ್ಯದ ವಸ್ತುಗಳನ್ನು ಕಳ್ಳತನ ಮಾಡಿರುವ ಬಗ್ಗೆ […]

Continue Reading

ಮಂಗಳೂರಿನಲ್ಲಿ ಮತ್ತೆ ಚಾಕು, ಚೂರಿಯ ಆರ್ಭಟ.. ಈ ಬಾರಿ ಟಾರ್ಗೆಟ್ ಮಾತ್ರ ಅಮಾಯಕ ಹೆಣ್ಮಕ್ಕಳು.. ಏನಾಗುತ್ತಿದೆ ಮಂಗಳೂರಿನಲ್ಲಿ..?

ಪುರುಷರ ಕಟ್ಟೆಯಲ್ಲಿ ಪೌರುಷ ತೋರಿಸಿದ ದರ್ಮ ರಕ್ಷಕರು ಪುಲ್ ಸೈಲೆಂಟ್.. ಸಂಘಟನೆಗಳ ಉಸ್ಕು ದಮ್ಮಿಲ್ಲ.. ಹಂತಕ, ಸಂತ್ರಸ್ತೆ ಒಂದೇ ಧರ್ಮೀಯರಾದರೆ ಅದು ಅಪರಾಧ ಅಲ್ಲವೇ.. ಒನ್ಸ್ ಎಗೈನ್.. ಮಂಗಳೂರಿನಲ್ಲಿ ಮತ್ತೆ ಚಾಕು,ಚೂರಿಗಳದ್ದೇ ಸದ್ದು. ಮರ್ಡರ್ ಸಿಟಿ ಅಂತ ಕಳಂಕ ಹೊತ್ತಿದ್ದ ಮಂಗಳೂರಿನಲ್ಲಿ ಈ ಬಾರಿ ಮತೀಯ ಸಂಘರ್ಷ, ಮತೀಯ ಹತ್ಯೆಯ ಕಾರಣಕ್ಕಾಗಿ ಸುದ್ದಿ ಮಾಡುತ್ತಿಲ್ಲ. ಬದಲಾಗಿ ಉಭಯ ಧರ್ಮದ ಅಮಾಯಕ ಹೆಣ್ಮಕ್ಕಳು ಟಾರ್ಗೆಟ್ ಆಗುತ್ತಿದ್ದಾರೆ. ಅಸಲಿಗೆ ಹಂತಕರು ಮತ್ತು ಸಂತ್ರಸ್ತೆಯರು ಒಂದೇ ಧರ್ಮಕ್ಕೆ ಸೇರಿರುವುದರಿಂದ ಸಣ್ಣ ಸಣ್ಣ […]

Continue Reading