ಜಿಲ್ಲೆಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯಕ್ಕೆ ಅಗತ್ಯ ಸಿಬ್ಬಂದಿ ಸೇಮಿಸುವಂತೆ ಉಸ್ತುವಾರಿ ಸಚಿವರಿಗೆ ಮನವಿ

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ಪ್ರಕರಣಗಳ ಪೊಲೀಸ್ ಠಾಣೆಯಾಗಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ದ.ಕ ಇಲ್ಲಿಗೆ ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಜಿಲ್ಲಾ ಕೆಡಿಪಿ ಸದಸ್ಯ, ನ್ಯಾಯವಾದಿ ಸಂತೋಷ್ ಕುಮಾರ್ ಮಂಗಳೂರಿನಲ್ಲಿ ದಿನಾಂಕ 18-04-26 ರಂದು ಭೇಟಿಯಾಗಿ ಮನವಿ ಸಲ್ಲಿಸಿದರು. ದ.ಕ ಜಿಲ್ಲೆಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಮಂಗಳೂರು ಇದರ ವ್ಯಾಪ್ತಿಗೆ ಜಿಲ್ಲೆಯ 42 ಪೊಲೀಸ್ ಠಾಣೆಗಳು ಒಳಪಡುತ್ತಿದ್ದು , ಘೋಷಣೆಯಾಗಿರುವ ಇನ್ನೂ […]

Continue Reading

ದಾವಣಗೆರೆ ಗೆದ್ದರೆ ಸಮರ್ಥ್‌ಗಿಂತ ಸಲೀಂ, ರಿಜ್ವಾನ್ʼಗೆ ಲಾಭ; ಸೋತರೆ, ಸಮುದಾಯದ ಮೇಲೆ ಜಮೀರ್ ಹಿಡಿತ ಯಶಸ್ವಿ

ದಾವಣಗೆರೆಯಲ್ಲಿ ಮುಕ್ತಾಯಗೊಂಡ ಉಪಚುನಾವಣೆಯಲ್ಲಿ ಸೀಟು ಹಂಚಿಕೆಯ ವಿಷಯದಲ್ಲಿ ಜಾತಿ-ಧರ್ಮದ ಬಗ್ಗೆ ಶುರುವಾದ ಗದ್ದಲ, ಗಲಾಟೆ ಇದೀಗ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಜ್ವಾಲೆಯಾಗಿ ಉರಿಯುತ್ತಿದೆ. ಆರಂಭದಲ್ಲಿ ಮುಸ್ಲಿಂ ನಾಯಕರೆಲ್ಲ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ಸಿಗಬೇಕೆಂದು ಹಠಕ್ಕೆ ಬಿದ್ದರೂ, ಸಮರ್ಥ್‌ಗೆ ಟಿಕೆಟ್ ನೀಡುತ್ತಿದ್ದಂತೆ ಜಮೀರ್ ಅಹ್ಮದ್, ನಾಸೀರ್ ಅಹ್ಮದ್ ಹಾಗೂ ಅಬ್ದುಲ್ ಜಬ್ಬರ್ ಹೊರತುಪಡಿಸಿ ಬಹುತೇಕ ಮುಸ್ಲಿಂ ನಾಯಕರು ಸಮರ್ಥ್ ಪರ ಪ್ರಚಾರಕ್ಕೆ ಇಳಿದಿದ್ದರು. ಕಾಂಗ್ರೆಸ್ ಮುಸ್ಲಿಂ ನಾಯಕರಲ್ಲಿ ‘ಅಸಮಾಧಾನ’ ಬಹುದೊಡ್ಡ ಪ್ರಮಾಣದಲ್ಲಿ ಸೃಷ್ಟಿಯಾಗಿತ್ತು ಎನ್ನುವುದು ಸತ್ಯ. ದಾವಣಗೆರೆ ದಕ್ಷಿಣ ಕ್ಷೇತ್ರದ […]

Continue Reading

ರಾಜ್ಯ ಕಾಂಗ್ರೆಸ್ ನಲ್ಲಿ ಡಿಕೆಶಿ ಯದ್ದೇ ಪ್ರಾಬಲ್ಯ.! ಸಿದ್ದು ಆಪ್ತ ಮುಸ್ಲಿಂ ನಾಯಕರ ಖೇಲ್ ಖತಂ..!

ಸ್ಪೀಕರ್ ಖಾದರ್ ಸೈಡ್ ಲೈನಿಗೆ ನಡೆಯುತ್ತಿದೆ ಭರ್ಜರಿ ತಯಾರಿ.! ಏನಿದು ಹೊಸ ಬೆಳವಣಿಗೆ.? ಇಲ್ಲಿದೆ ಡೀಟೈಲ್ಸ್ ದಾವಣಗೆರೆ ಉಪಚುನಾವಣೆ ರಾಜ್ಯ ಹಾಗೂ ದೇಶದಾದ್ಯಂತ ಭಾರೀ ಸುದ್ದಿ ಮಾಡಿದೆ. ಮುಸ್ಲಿಂ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಮುಸ್ಲಿಮರನ್ನು ಕಡೆಗಣಿಸಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಿರುವುದು ಒಂದು ಕಡೆಯಾದರೆ, ಕಾಂಗ್ರೆಸ್ ಅಭ್ಯರ್ಥಿ ಶಾಮನೂರು ಕುಟುಂಬದ ಕುಡಿಯನ್ನು ಮಣ್ಣು ಮುಕ್ಕಿಸಲು ಕಾಂಗ್ರೆಸ್ ಪಕ್ಷದಲ್ಲಿರುವ ಮುಸ್ಲಿಂ ನಾಯಕರ ಗುಂಪೊಂದು ಪ್ರಯತ್ನಿಸಿದ್ದು, ಅದಕ್ಕೆ ಪ್ರತಿಯಾಗಿ ಪಕ್ಷ ವಿರೋಧಿ ಚಟುವಟಿಕೆಯ ಕಾರಣವೊಡ್ಡಿ ಅಬ್ದುಲ್ ಜಬ್ಬಾರ್ ಹಾಗೂ ನಸೀರ್ ಅಹಮ್ಮದ್ […]

Continue Reading

ಬಂಟ್ವಾಳ ಪುರಸಭೆಗೆ ಖಡಕ್ ಚೀಫ್ ಆಫೀಸರ್: ದಿನಗೂಲಿ ನೌಕರರಿಗೆ ಗೇಟ್ ಪಾಸ್

ಬಂಟ್ವಾಳ ಪುರಸಭೆಯಲ್ಲಿ ದಿನಗೂಲಿ ನೌಕರರ ಕಾರುಬಾರು ಎಂಬ ಶೀರ್ಷಿಕೆಯಡಿಯಲ್ಲಿ ಸೃಷ್ಟಿ 238 ರಲ್ಲಿ ಸಮಗ್ರ ವರದಿಯನ್ನು ಪ್ರಕಟಿಸಿತ್ತು. ಬಂಟ್ವಾಳ ಪುರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡಲು ಮೂಲ ಕಾರಣವೇ ದಿನಗೂಲಿ ನೌಕರರು. ಇವರನ್ನು ಹದ್ದುಬಸ್ತಿನಲ್ಲಿಡಬೇಕಾದ ಅಧಿಕಾರಿ ವರ್ಗ ಇವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದು, ದಿನಗೂಲಿ ನೌಕರರ ಅಂಧಾ ದರ್ಬಾರ್ ಮೇಳೈಸುತ್ತಿದೆ. ಬಂಟ್ವಾಳ ಪುರಸಭೆ ಒಳಹೊಕ್ಕರೆ ಯಾವೊಂದು ಕೆಲಸವೂ ಸಲೀಸಾಗಿ ನಡೆಯುತ್ತಿಲ್ಲ. ಇಲ್ಲಿ ಖಾತಾ, ಜನನ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಲೈಸೆನ್ಸ್ ಯಾವ ಕೆಲಸವೂ ಇಲ್ಲಿ ನಡೆಯುತ್ತಿಲ್ಲ. ಜನಸಾಮಾನ್ಯರ […]

Continue Reading

ನಿಷೇದಿತ ಮಾದಕವಸ್ತು ಮಾರಾಟ ಪ್ರಕರಣದ ಆರೋಪಿಗೆ ಶಿಕ್ಷೆ ಮತ್ತು ದಂಡ ವಿಧಿಸಿದ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ

ಬೆಳ್ತಂಗಡಿ ಉಜಿರೆ ರಥಬೀದಿ ಎಂಬಲ್ಲಿ, ದಿನಾಂಕ: 08-03-2009 ರಂದು ಅಂದಾಜು 50 ಸಾವಿರ ರೂ. ಬೆಲೆಬಾಳುವ 1.500 ಕಿ.ಗ್ರಾಂ ತೂಕದ ನಿಷೇದಿತ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಬೆಳ್ತಂಗಡಿ ಠಾಣಾ ಅ.ಕ್ರ 60/09 ರಂತೆ ದಾಖಲಾಗಿದ್ದ ಪ್ರಕರಣದ ಆರೋಪಿ ಬೆಳ್ತಂಗಡಿ ಚಾರ್ಮಾಡಿ ನಿವಾಸಿ ಟಿ.ಇ ಜೋಸೆಫ್ ಎಂಬಾತನಿಗೆ ಜಿಲ್ಲಾ ವಿಶೇಷ ಪ್ರಧಾನ ಮತ್ತು ಸತ್ರ ನ್ಯಾಯಾಲಯ ಮಂಗಳೂರು ಇದರ ನ್ಯಾಯಾಧೀಶರು ದಿನಾಂಕ 10-04- 2026 ರಂದು ಟಿ.ಇ ಜೋಸೆಫ್ ಎಂಬವರನ್ನು ದೋಷಿ ಎಂದು ಪರಿಗಣಿಸಿ ಶಿಕ್ಷೆ […]

Continue Reading

ಸಚಿವ ಜಮೀರ್ ಅಹ್ಮದ್ ಅವರ ಹೆಸರನ್ನು ಹಾಳು ಮಾಡಲು ಸಂಚು, ಮುಸ್ಲಿಮರನ್ನು ಕೆಣಕಿದರೆ ಕಾಂಗ್ರೆಸಿಗೆ ತಕ್ಕ ಪಾಠ

2028ರ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 20 ಸೀಟು ಬರುವುದು ಕೂಡ ಕಷ್ಟ: ವಿಶ್ವ ಮುಸ್ಲಿಂ ಪರಿಷತ್ ದಾವಣಗೆರೆ ಉಪ ಚುನಾವಣೆಯ ಕುರಿತಾಗಿ ಕಾಂಗ್ರೆಸ್ ಹೈಕಮಾಂಡ್‌ಗೆ ಸಲ್ಲಿಕೆಯಾದ ವರದಿಯಲ್ಲಿ ಸಚಿವ ಜಮೀರ್ ಅಹ್ಮದ್ ಅವರ ಹೆಸರನ್ನು ಹಾಳು ಮಾಡಲು ಸಂಚು ನಡೆಯುತ್ತಿದೆ. ಒಂದು ವೇಳೆ ಜಮೀರ್ ಅಹ್ಮದ್ ಅವರ ತಲೆದಂಡ ಮಾಡಿದರೆ ಅಥವಾ ಅವರನ್ನು ಕೆಣಕಿದರೆ, 2028ರ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 20 ಸೀಟು ಬರುವುದು ಕೂಡ ಕಷ್ಟವಾಗಲಿದೆ’ ವಿಶ್ವ ಮುಸ್ಲಿಂ ಪರಿಷತ್ ಎಚ್ಚರಿಕೆ ರವಾನಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗೋಷ್ಠಿ […]

Continue Reading

ಪೊಲೀಸ್ ಮುಖ್ಯಸ್ಥರಾದ ಎಂ.ಎ.ಸಲೀಂ ರವರ ಸೇವಾವಧಿ ವಿಸ್ತರಿಸಿ ರಾಜ್ಯ ಸರಕಾರ ಆದೇಶ

ರಾಜ್ಯ ಪೊಲೀಸ್ ಮುಖ್ಯಸ್ಥರಾದ ಎಂ.ಎ.ಸಲೀಂ ರವರ ಸೇವಾವಧಿಯನ್ನು ವಿಸ್ತರಣೆ ಮಾಡಲಾಗಿದೆ. 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಎಂ.ಎ. ಸಲೀಂ ರವರ ಸೇವಾವಧಿಯನ್ನು 2027ರ ಆ. 29ರವರೆಗೆ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 1993ರ ಬ್ಯಾಚ್ IPS ಅಧಿಕಾರಿಯಾಗಿರುವ ಎಂ.ಎ.ಸಲೀಂ ಅವರು 2025ರ ಮೇನಲ್ಲಿ ಪ್ರಭಾರ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕರಾಗಿದ್ದರು. ಬಳಿಕ 2025ರ ಆಗಸ್ಟ್ ನಲ್ಲಿ ಪೂರ್ಣಾವಧಿಗೆ ನೇಮಕ ಮಾಡಲಾಗಿದ್ದು, ಈ ವರ್ಷದ ಜೂನ್​ನಲ್ಲಿ ನಿವೃತ್ತಿಯಾಗಬೇಕಿತ್ತು. ಸುಪ್ರೀಂಕೋರ್ಟ್​ ತೀರ್ಪಿನ ಅನುಸಾರ ಎಂ.ಎ.ಸಲೀಂ […]

Continue Reading

ರಾಜ್ಯದಲ್ಲಿ ನಡೆಯುವ ಸ್ಥಳೀಯ ಸಂಸ್ಥೆಗಳ ಚುನಾವಣೆ: ಇವಿಎಂ ಯಂತ್ರ ಪೇಲು; ಬ್ಯಾಲೆಟ್ ಪೇಪರ್ ಪಾಸು: ರಾಜ್ಯಪಾಲರ ಅಸ್ತು

ರಾಜ್ಯ ಸರ್ಕಾರವು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆಯನ್ನು ಕೈಬಿಟ್ಟು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಯನ್ನು ಮರುಪರಿಚಯಿಸುವ ಮಹತ್ವದ ನಿರ್ಧಾರವನ್ನು ಅಧಿಕೃತಗೊಂಡಿದೆ. ವಿಧೇಯಕಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅಸ್ತು ಎಂದಿದ್ದಾರೆ. ಇವಿಎಂಗಳ ಕಾರ್ಯನಿರ್ವಹಣೆ ಬಗ್ಗೆ ಕಳವಳ ವ್ಯಕ್ತವಾಗುತ್ತಿದ್ದು, ವಿಶ್ವಾಸಾರ್ಹತೆ ಮತ್ತು ಮತದಾರರ ಗೌಪ್ಯತೆ ಬಗ್ಗೆ ಅನುಮಾನಗಳು ಸೃಷ್ಟಿಯಾಗಿವೆ. ಹಾಗಾಗಿ ಗೌಪ್ಯತೆ ಮತ್ತು ಪಾರದರ್ಶಕತೆಗೆ ಒತ್ತು ನೀಡಲು ಕಾಗದದ ಮತಪತ್ರಗಳಿಗೆ ಮರಳಲು ಕಾಯಿದೆ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿತ್ತು. ಅಂತೆಯೇ ಪೂರಕ ಕಾನೂನು ತಿದ್ದುಪಡಿಗಾಗಿ […]

Continue Reading

ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಸಜ್ಜು; ಲೋಕಸಭೆಯಲ್ಲಿರುವ 543 ಸದಸ್ಯರ ಬಲವನ್ನು 850ಕ್ಕೆ ಏರಿಸಲು ಸರ್ಕಾರ ಪ್ರಸ್ತಾವನೆ

ಭಾರತೀಯ ಸಂಸದೀಯ ಇತಿಹಾಸದಲ್ಲೇ ಅತ್ಯಂತ ಮಹತ್ವದ ಬದಲಾವಣೆಗೆ ಕೇಂದ್ರ ಸರ್ಕಾರ ಸಜ್ಜಾಗಿದೆ. ಪ್ರಸ್ತುತ ಲೋಕಸಭೆಯಲ್ಲಿರುವ 543 ಸದಸ್ಯರ ಬಲವನ್ನು ಬರೋಬ್ಬರಿ 850ಕ್ಕೆ ಏರಿಸಲು ಸರ್ಕಾರ ಪ್ರಸ್ತಾವನೆ ಸಲ್ಲಿಸಿದೆ. ಈ ಮೂಲಕ ದಶಕಗಳಿಂದ ಬಾಕಿ ಉಳಿದಿರುವ ‘ಮಹಿಳಾ ಮೀಸಲಾತಿ’ ಕಾನೂನನ್ನು ಜಾರಿಗೊಳಿಸಲು ಮತ್ತು ಹೊಸ ಕ್ಷೇತ್ರ ಪುನರ್ ವಿಂಗಡಣೆಗೆ ಹಾದಿ ಸುಗಮಗೊಳಿಸಲು ಮೋದಿ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಕೇಂದ್ರ ಸರ್ಕಾರದ ಈ ಪ್ರಸ್ತಾವನೆಯಂತೆ ಲೋಕಸಭೆಯ ಒಟ್ಟು ಬಲ 850 ಆಗಲಿದೆ. ಇದರಲ್ಲಿ 815 ಸ್ಥಾನಗಳನ್ನು ವಿವಿಧ ರಾಜ್ಯಗಳಿಗೆ […]

Continue Reading

ಬೆಳ್ತಂಗಡಿ: ಮುಖ್ಯ ಭಾಷಣಕಾರನಿಗೆ ಎಚ್ಚರಿಕೆ, ಶಾಸಕರ ಸುಳ್ಳುಗಳ ನಡುವೆ ಸಾಂಗವಾಗಿ ನಡೆದ ಅಂಬೇಡ್ಕರ್ ಜಯಂತಿ.

ಹಲವು ಗೊಂದಲಗಳ ನಡುವೆ ಇಂದು ಬೆಳ್ತಂಗಡಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಅಂಬೇಡ್ಕರ್ ಜಯಂತಿ ಸಾಂಗವಾಗಿ ನಡೆಯಿತು. ಆದರೂ ಶಾಸಕ ಹರೀಶ್ ಪೂಂಜಾ ಎಂದಿನಂತೆ ರಾಜಕೀಯ ಮಾತನಾಡುವ ಮೂಲಕ ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ತನ್ನ ರಾಜಕೀಯ ಲಾಭಕ್ಕಾಗಿ ಬಳಸಿಕೊಂಡರು. ಸಭೆಯ ಆರಂಭಕ್ಕೆ ಮೊದಲೇ ಸಭಾಂಗಣಕ್ಕೆ ಆಗಮಿಸಿದ್ದ ಮುಖ್ಯ ಭಾಷಣಕಾರ ಶಿವಪ್ರಸಾದ್ ಸುರ್ಯರನ್ನು ಸುತ್ತುವರಿದ ದಲಿತ ನಾಯಕರ ಗುಂಪು ನಾಲ್ಕೈದು ದಿನಗಳಿಂದ ನಡೆದ ಬೆಳವಣಿಗೆಯನ್ನು ವಿವರಿಸಿ, ಸಭೆಯಲ್ಲಿ ಅಂಬೇಡ್ಕರ್ ಚಿಂತನೆ, ಜೀವನ ಚರಿತ್ರೆ ಹೊರತುಪಡಿಸಿ ಬೇರೆ […]

Continue Reading