ಹುಬ್ಬಳ್ಳಿ: ಇಡಿ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯಿಂದ ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

ಕೇರಳ ಮೂಲದ ಚಿನ್ನಾಭರಣದ ವ್ಯಾಪಾರಿಗಳೇ ದರೋಡೆಕೋರರ ಟಾರ್ಗೆಟ್ ಇಡಿ ಅಧಿಕಾರಿಗಳ ಸೋಗಿನಲ್ಲಿ ಮೂರು ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಇಡಿ ಅಧಿಕಾರಿಗಳು ಎಂದು ಹೇಳಿಕೊಂಡ ಐವರ ತಂಡ, ಕೇರಳ ಮೂಲದ ಚಿನ್ನಾಭರಣ ವ್ಯಾಪಾರಿಯನ್ನು ವಿಚಾರಣೆ ನಡೆಸುವ ನೆಪದಲ್ಲಿ, 2 ಕೆಜಿ 942 ಗ್ರಾಂ ಚಿನ್ನಾಭರಣ ಹಾಗೂ ರೂ.2 ಲಕ್ಷ ನಗದು ದೋಚಿದ ಘಟನೆ ಕಳೆದ ಗುರುವಾರ ನಡೆದಿದೆ. ವ್ಯಾಪಾರಿ ಸುದೀನ್ ಎಂ.ಆರ್ ಅವರು ಚಿನ್ನಾಭರಣ ಅಂಗಡಿಗಳಿಗೆ ಆಭರಣ […]

Continue Reading

ಕಬಡ್ಡಿ ಕ್ಷೇತ್ರದಲ್ಲಿ ಭರವಸೆ ಮೂಡಿಸಿದ ಗ್ರಾಮೀಣ ಪ್ರತಿಭೆ ಶಶಿಕಾಂತ್ ಸುಲ್ಕೇರಿ; ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ರಾಜ್ಯ ಮಟ್ಟದ 17 ವರ್ಷ ವಯೋಮಾನ ವಿಭಾಗದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈಗಾಗಲೇ ತಾಲೂಕು , ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ , ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ. ಈತ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇಲ್ಲಿ 10 […]

Continue Reading

‘ದುಬೈ ರನ್’ ನಲ್ಲಿ ಮಿಂಚಿದ ಬ್ಯಾರಿಗಳು; ಅತೀ ಉದ್ದನೆಯ ಯುಎಇ ಧ್ವಜದ ದೃಶ್ಯವನ್ನು ಹಂಚಿಕೊಂಡ ದುಬೈ ರಾಜಕುಮಾರ ಶೇಖ್ ಹಮ್ದಾನ್

ದುಬೈ: ಆರೋಗ್ಯ, ಫಿಟ್‌ನೆಸ್ ಮತ್ತು ಮನರಂಜನೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ರವಿವಾರ ದುಬೈಯ ಶೇಖ್ ಝಾಯೆದ್ ರಸ್ತೆಯಲ್ಲಿ ನಡೆದ ಐತಿಹಾಸಿಕ ‘ದುಬೈ ರನ್–2025’ ಕಾರ್ಯಕ್ರಮದಲ್ಲಿ ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಅನಿವಾಸಿ ಸಮುದಾಯವು ಅದ್ಭುತ ಹಾಜರಾತಿ ನೀಡಿ ಎಲ್ಲರ ಗಮನ ಸೆಳೆದಿದೆ. ಲಕ್ಷಾಂತರ ಮಂದಿ ಪಾಲ್ಗೊಂಡಿದ್ದ ಈ ಕಾರ್ಯಕ್ರಮದಲ್ಲಿ, ಯುಎಇ ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರೀಸ್ (BCCI) ಅಧ್ಯಕ್ಷ ಹಿದಾಯತ್ ಅಡ್ಡೂರು ಅವರ ನೇತೃತ್ವದಲ್ಲಿ ಸಾವಿರಾರು ಬ್ಯಾರಿಗಳು ‘ದುಬೈ ಬ್ಯಾರೀಸ್’ ಎಂದು ಮುದ್ರಿತ ಟೀ–ಶರ್ಟ್‌ಗಳನ್ನು ಧರಿಸಿ, […]

Continue Reading

ಚಿನ್ನದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕೊಟ್ಯಾಂತರ ಮೌಲ್ಯದ ಚಿನ್ನ ದರೋಡೆ ಪ್ರಕರಣ

ಗಡಿ ಜಿಲ್ಲೆಗಳಲ್ಲಿ ನಟೋರಿಯಸ್ ಕೇರಳಿಯನ್ ಗ್ಯಾಂಗ್ ಮತ್ತೆ ಆಕ್ಟಿವ್ ಬೆಂಗಳೂರಲ್ಲಿ ನಡೆದ ಏಳು ಕೋಟಿಗೂ ಅಧಿಕ ಮೊತ್ತದ ದರೋಡೆ ಪ್ರಕರಣದ ನೆನಪು ಮಾಸುವ ಮುನ್ನವೇ ರಾಜ್ಯದಲ್ಲಿ ಮತ್ತೊಂದು ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕೋಟ್ಯಂತರ ಮೌಲ್ಯದ ಚಿನ್ನದ ಗಟ್ಟಿಯನ್ನು ದರೋಡೆಕೋರರು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಚಾಮರಾಜನಗರದ ಬಂಡಿಪುರ ಅರಣ್ಯ ಪ್ರದೇಶದ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಚಿನ್ನದ ವ್ಯಾಪಾರಿಯೊಬ್ಬರು ಕೇರಳಕ್ಕೆ ತೆರಳಿದ್ದರು. ಈ ವೇಳೆ ಕಾರನ್ನು ಅಡ್ಡಗಟ್ಟಿದ ದರೋಡೆಕೋರರು ಮಾರಕಾಸ್ತ್ರ […]

Continue Reading

ಕೇಂದ್ರ ಸರಕಾರ ಜಾರಿ ಮಾಡಿದ ಕಾರ್ಮಿಕ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಪ್ರತಿಭಟನಾ ಪ್ರದರ್ಶನ

ಕೇಂದ್ರದ ನರೇಂದ್ರ ಮೋದಿ ಸರಕಾರ ಜಾರಿ ಮಾಡಿದ ಕಾರ್ಮಿಕ ವಿರೋಧಿಯಾದ ಸಂಹಿತೆಗಳ ಅಧಿಸೂಚನೆಯನ್ನು ವಿರೋಧಿಸಿ ಹಾಗೂ ಕರ್ನಾಟಕ ರಾಜ್ಯ ಸರಕಾರ ಈ ಸಂಹಿತೆಗಳಿಗೆ ನಿಯಮಗಳನ್ನು ರೂಪಿಸಬಾರದು ಎಂದು ಒತ್ತಾಯಿಸಿ ಇಂದು ದೇಶಾದ್ಯಂತ ಕಾರ್ಮಿಕರಿಂದ ಸ್ವಯಂಪ್ರೇರಿತ ಪ್ರತಿಭಟನೆ ನಡೆಸಬೇಕೆಂದು CITU ಕರೆ ನೀಡಿದ ಹಿನ್ನೆಲೆಯಲ್ಲಿ ಮಂಗಳೂರಿನ ಕ್ಲಾಕ್ ಟವರ್ ಬಳಿಯಲ್ಲಿ ಪ್ರತಿಭಟನಾ ಪ್ರದರ್ಶನ ನಡೆಯಿತು. ನೂರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು, ಕಾರ್ಪೊರೇಟ್ ಗಳ ಹಿತಾಸಕ್ತಿಗಳನ್ನು ಕಾಪಾಡುವ ಕೇಂದ್ರದ ನರೇಂದ್ರ ಮೋದಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗುವ ಮೂಲಕ ಆಕ್ರೋಶ […]

Continue Reading

ಇನ್ಮುಂದೆ ಗಡಿ ಜಿಲ್ಲೆಗಳ ಕ್ರಿಮಿನಲ್ ಗಳ ಎದೆಯಲ್ಲಿ ಢವ..ಢವ; ಮಂಗಳೂರು ಕಮೀಷನರ್ ಕಚೇರಿಯಲ್ಲಿ ಬಾರ್ಡರ್ ಕ್ರೈಂ ಮೀಟಿಂಗ್

ಅಪರಾಧ ಕೃತ್ಯಗಳನ್ನು ಮಟ್ಟ ಹಾಕಲು ಕಾನೂನನ್ನು ಬಿಗಿಯಾಗಿ ಜಾರಿಗೊಳಿಸಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಶಸ್ವಿಯಾಗಿರುವ ಮಂಗಳೂರು ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಹಾಗೂ ಜಿಲ್ಲಾ ಎಸ್ಪಿ ಡಾ. ಅರುಣ್ ಕೆ ಇದೀಗ ಮತ್ತೊಂದು ಮೈಲಿಗಲ್ಲು ಸೃಷ್ಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಗಡಿ ಭಾಗದ ಲಾಭ ಪಡೆದು ಕ್ರಿಮಿನಲ್ ಗಳು ಬಚವಾಗಲು ಯತ್ನಿಸುತ್ತಿದ್ದರು. ಆದರೆ ಇದೀಗ ಅದಕ್ಕೆ ಅಂಕುಶ ಬಿದ್ದಿದೆ. ನವೆಂಬರ್ 22 ರಂದು ಕೇರಳ ರಾಜ್ಯದ ಕಣ್ಣೂರು ವಲಯದ ಡಿಐಜಿಪಿ ಯತೀಶ್ಚಂದ್ರ ಜಿ.ಹೆಚ್, ಕಾಸರಗೋಡು ಎಸ್ ಪಿ […]

Continue Reading

ಕೊಲೆ ಆರೋಪಿಗೆ ಆಶ್ರಯ ನೀಡಿ, ಹಣಕಾಸಿನ ನೆರವು, ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ್ ಬಂಧನ

ಜೆಡಿಎಸ್ ನಾಯಕ ಟಿ. ಅಸ್ಗರ್ ಎಂಬವರ ಕೊಲೆಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಅಜಾದ್ ನಗರ ಠಾಣೆಯ ಪೊಲೀಸರು, ಮಾಯಕೊಂಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ನಾಯಕಿ ಸವಿತಾ ಮಲ್ಲೇಶ್ ನಾಯ್ಕ ಅವರನ್ನು ಬಂಧಿಸಿದ್ದಾರೆ. ಸವಿತಾ ಅವರನ್ನು ಶುಕ್ರವಾರ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಾಷಾ ನಗರದಲ್ಲಿ ನವೆಂಬರ್ 10ರಂದು ಆಯೋಜಿಸಿದ್ದ ಟಿಪ್ಪು ಜಯಂತಿಯಲ್ಲಿ ಪಾಲ್ಗೊಂಡಿದ್ದ ಅಸ್ಗರ್ ಮೇಲೆ ಕಾಂಗ್ರೆಸ್ ಮುಖಂಡ ಖಾಲೀದ್ ಪೈಲ್ವಾನ್ ದಾಳಿ […]

Continue Reading

ಬಡಪಾಯಿ ಬೀಡಿ ಕಾರ್ಮಿಕರಿಗೆ ಭಾರೀ ವಂಚನೆ ಮಾಡಿದ ಬೀಡಿ ಮಾಲಕರ ವಿರುದ್ದ ನಿರ್ಣಾಯಕ ಹೋರಾಟಕ್ಕಿಳಿದ ಬೀಡಿ ಕಾರ್ಮಿಕರು

ಸಮಾನ ಮನಸ್ಕ ಸಂಘಟನೆಗಳಿಂದ ಸಂಪೂರ್ಣ ಬೆಂಬಲ ಬೀಡಿ ಕಾರ್ಮಿಕರಿಗೆ ಕನಿಷ್ಠ ಕೂಲಿ ತುಟಿಭತ್ತೆಯನ್ನು ಕಳೆದ 7 ವರ್ಷಗಳಿಂದ ನಿರಂತರವಾಗಿ ವಂಚಿಸುತ್ತಾ ಬಂದಿರುವ ಬೀಡಿ ಮಾಲಕರ ವಿರುದ್ಧ ಹಾಗೂ ಕನಿಷ್ಠ ಕೂಲಿ ಜಾರಿ ಮಾಡಲು ವಿಳಂಬ ನೀತಿ ಅನುಸರಿಸುತ್ತಿರುವ ಕಾರ್ಮಿಕ ಇಲಾಖೆಯ ಬೇಜವಾಬ್ದಾರಿತನವನ್ನು ವಿರೋಧಿಸಿ ಬೀಡಿ ಕಾರ್ಮಿಕರು ನವೆಂಬರ್ 24 ರಿಂದ ಅನಿರ್ದಿಷ್ಟಾವಧಿ ರಾತ್ರಿ ಹಗಲು ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದು, ಇಂತಹ ನ್ಯಾಯಪರ ಹೋರಾಟವನ್ನು ಸಂಪೂರ್ಣವಾಗಿ ಬೆಂಬಲಿಸಲು ದ.ಕ.ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ನಿರ್ಧರಿಸಿವೆ. ಕೇಂದ್ರ ಕಾರ್ಮಿಕ […]

Continue Reading

ಮೋ.. ಶಾ.. ಆಟ ಬಲ್ಲವರ್ಯಾರು.?

ಮುಂದಿನ ಟಾರ್ಗೆಟ್ ಪಶ್ಚಿಮ ಬಂಗಾಳ, ತಮಿಳುನಾಡು; ಪ್ರಾದೇಶಿಕ ಪಕ್ಷಗಳ ವಿನಾಶ.. ಬಿಜೆಪಿ ಜಯಭೇರಿಯ ರಹಸ್ಯ.! ಪ್ರಾದೇಶಿಕ ಪಕ್ಷಗಳು ಉಸಿರಾಡುತ್ತಿರುವ ಕಾರಣ ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರ ಇದ್ದರೂ ಭಾರತ ಗೆಲ್ಲಲು ಸಾಧ್ಯವಾಗಿಲ್ಲ. ಪ್ರಾದೇಶಿಕ ಪಕ್ಷಗಳ ವಿನಾಶವೊಂದೇ ಬಿಜೆಪಿಯ ಅಜೆಂಡಾ ಬಿಹಾರದಲ್ಲಿ ಮತದಾರ ಎನ್ ಡಿಎ ಕೂಟಕ್ಕೆ ಜೈ ಅಂದಿದ್ದಾನೆ. ಮಹಾ ಘಟಬಂದನ್ ಅನ್ನು ಮಕಾಡೆ ಮಲಗಿಸಿದ್ದಾರೆ. 2014 ರ ನಂತರ ಬಿಜೆಪಿ ಮುಟ್ಟಿದ್ದೆಲ್ಲವೂ ಚಿನ್ನ ಆಗುತ್ತಿದೆ. ಮೋದಿ -ಶಾ ಜುಗಲ್ ಬಂಧಿ ಬಿಜೆಪಿಗೆ ಬೂಸ್ಟ್ ಕೊಟ್ಟಿದೆ. ವೋಟ್ ಚೋರಿ, […]

Continue Reading

14 ವರ್ಷಗಳಿಂದ ದಂಡ ಕಟ್ಟಲು ಸಾಧ್ಯವಾಗದೇ, ಕಾರಾಗೃಹದಲ್ಲಿ ಬಂಧಿಯಾಗಿದ್ದ ಬಿಜಾಪುರದ ಖೈದಿಗೆ ನೆರವಾದ ಮಂಗಳೂರಿನ ಸಮಾಜಸೇವಕ

ಜೈಲೇ ಶಾಶ್ವತ ಎಂದು ನಂಬಿ ಕೂತಿದ್ದ ಅಪರಾಧಿಯ ಬಾಳಿಗೆ ಬೆಳಕಾಗಿ ಬಂದ ಮಂಗಳೂರಿನ ಗಿರೀಶ್ ಕೊಟ್ಟಾರಿಯ ಮಾನವೀಯ ಕಾಳಜಿಗೆ ವ್ಯಾಪಕ ಶ್ಲಾಘನೆ ಕಳೆದ ಹದಿನಾಲ್ಕು ವರ್ಷಗಳಿಂದ ಕಾರಾಗೃಹದಲ್ಲಿ ಬಂಧಿಯಾಗಿರುವ ಖೈದಿ. ಬಿಡುಗಡೆಯ ಭಾಗ್ಯವಿದ್ದರೂ ದಂಡದ ಹಣ ಕಟ್ಟಲಾಗದೆ ಜೈಲು ಕಂಬಿಯನ್ನೇ ಎಣಿಸಬೇಕಾದ ದುಸ್ಥಿತಿ. ಕುಟುಂಬಸ್ಥರು ಯಾರೂ ಈ ಖೈದಿಯ ನೆರವಿಗೆ ಬಾರದೇ ಇದ್ದುದರಿಂದ ಜೈಲೇ ಶಾಶ್ವತ ಎಂದು ನಂಬಿ ಕೂತಿದ್ದ ಬಿಜಾಪುರದ ಅಪರಾಧಿಯ ಬಾಳಿಗೆ ಬೆಳಕಾಗಿ ಬಂದಿದ್ದು ಮಂಗಳೂರಿನ ಸಮಾಜ ಸೇವಕ. ಎಲ್ಲಿಯ ಬಿಜಾಪುರ, ಎಲ್ಲಿಯ ಮಂಗಳೂರು. […]

Continue Reading