ಕನಿಷ್ಠ ವೇತನದ ಪುನರ್ ವಿಮರ್ಶೆ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ರಕ್ಷಿಸಲು ಒತ್ತಾಯಿಸಿ ಸಹಿ ಸಂಗ್ರಹ ಚಳುವಳಿ

ಕನಿಷ್ಠ ವೇತನ ಪುನರ್ ವಿಮರ್ಶೆಗೆ ಆಗ್ರಹಿಸಿ ಹಾಗೂ ಕಾರ್ಮಿಕರ ಮೂಲಭೂತ ಹಕ್ಕುಗಳ ಸಂರಕ್ಷಿಸಲು ಒತ್ತಾಯಿಸಿ ನಗರದಲ್ಲಿಂದು ಸಾರ್ವಜನಿಕರ ಮಧ್ಯೆ ಸಹಿ ಸಂಗ್ರಹ ಚಳುವಳಿಯನ್ನು ನಡೆಸಲಾಯಿತು. ಕಾರ್ಮಿಕ ವರ್ಗದ ಆಶಾಕಿರಣವಾದ ಡಾ.ಬಿ ಆರ್ ಅಂಬೇಡ್ಕರ್ ರವರ ಜನ್ಮದಿನಾರಣೆಯ ದಿನದಂದು ಕರ್ನಾಟಕ ರಾಜ್ಯಾದ್ಯಂತ ಸಹಿ ಸಂಗ್ರಹ ಚಳುವಳಿಯನ್ನು ನಡೆಸಬೇಕೆಂಬ CITU ಕರೆಯ ಮೇರೆಗೆ CITU ದ.ಕ.ಜಿಲ್ಲಾ ಸಮಿತಿಯ ನೇತ್ರತ್ವದಲ್ಲಿ ಈ ಕಾರ್ಯಕ್ರಮವನ್ನು‌ ಆಯೋಜಿಸಲಾಯಿತು. ಸಹಿ ಸಂಗ್ರಹ ಚಳುವಳಿಯನ್ನು ಉದ್ಘಾಟಿಸಿದ ದ.ಕ.ಜಿಲ್ಲೆಯ ಕಾರ್ಮಿಕ ಚಳುವಳಿಯ ಹಿರಿಯ ನೇತಾರರಾದ ಜೆ ಬಾಲಕೃಷ್ಣ ಶೆಟ್ಟಿಯವರು […]

Continue Reading

ಡಾ. ಕೆ. ಗೋವಿಂದ ಭಟ್ ಸೂರಿಕುಮೇರು ಅವರಿಗೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆ; ಗೋವಿಂದ ಭಟ್ ಇಂದಿನ ಕಲಾವಿದರಿಗೆ ಮಾದರಿ, ಆದರ್ಶಪ್ರಾಯರು: ಡಾ.ತಲ್ಲೂರು

ಉಡುಪಿ : ಸುದೀರ್ಘ ಕಾಲ ಕಲಾ ಸೇವೆಯನ್ನು ಮಾಡಿದ ಡಾ.ಕೆ.ಗೋವಿಂದ ಭಟ್ ಅವರಿಗಿದ್ದ ಯಕ್ಷಗಾನದ ಮೇಲಿನ ಪ್ರೀತಿ, ಕಲಾರಾಧನೆಯೇ ಅವರನ್ನು ಪ್ರೇಕ್ಷಕರ ಮನದಲ್ಲಿ ಚಿರಸ್ಥಾಯಿಯಾಗುವಂತೆ ಮಾಡಿದೆ. ಕಲಾವಿದ ಹೇಗೆ ಇರಬೇಕು ಎನ್ನುವುದಕ್ಕೆ ಗೋವಿಂದ ಭಟ್ ಇಂದಿನ ಕಲಾವಿದರಿಗೆ ಮಾದರಿಯಾಗಿದ್ದಾರೆ, ಆದರ್ಶಪ್ರಾಯರಾಗಿದ್ದಾರೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಬಂಟ್ವಾಳ ಬಿ.ಸಿ.ರೋಡ್‌ನ ಸ್ಪರ್ಶಾ ಕಲಾಮಂದಿರದಲ್ಲಿ ಸೋಮವಾರ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ಸಂಪಾಜೆ ವತಿಯಿಂದ ನಡೆದ ಇತ್ತೀಚಿಗೆ ಅಗಲಿದ ಯಕ್ಷಗಾನದ ಮೇರುನಟ […]

Continue Reading

ಉಜ್ವಲ ಭವಿಷ್ಯ ರೂಪಿಸಲು ಶಿಕ್ಷಣ ಅನಿವಾರ್ಯ: ಕೆ.ಪಿ. ಅಹ್ಮದ್ ಹಾಜಿ

ಆಧುನಿಕ ಕಾಲಘಟ್ಟದ ಅಗತ್ಯತೆಗಳಿಗೆ ಅನುಗುಣವಾಗಿ ಹೊಸ ಪಠ್ಯಕ್ರಮ, ವಿವಿಧ ಶೈಕ್ಷಣಿಕ ಯೋಜನೆಗಳನ್ನು ರೂಪಿಸುತ್ತಿರುವ ‘ಸಮಸ್ತ’ ಸಂಸ್ಥೆಯ ಶೈಕ್ಷಣಿಕ ಸಾಧನೆ ಪ್ರಶಂಸನೀಯ ಪುತ್ತೂರು: ಇಂದಿನ ಆಧುನಿಕ ಯುಗದಲ್ಲಿ ಪ್ರತಿಯೊಬ್ಬರ ಜೀವನದಲ್ಲಿ ಶಿಕ್ಷಣವು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತಿದೆ. ವ್ಯಕ್ತಿಯ ಉಜ್ವಲ ಭವಿಷ್ಯವನ್ನು ರೂಪಿಸಲು ಶಿಕ್ಷಣ ಅನಿವಾರ್ಯ ಆದ್ದರಿಂದ ಪ್ರತಿಯೊಬ್ಬರೂ ಇದರ ಮಹತ್ವವನ್ನು ಅರಿತು ಕಾರ್ಯಪ್ರವೃತ್ತರಾಗಬೇಕು ಎಂದು ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಪಿ. ಅಹ್ಮದ್ ಹಾಜಿ ಆಕರ್ಷಣ್ ಅವರು ಹೇಳಿದರು. ಅವರು ಸಾಲ್ಮರ ದಾರುಲ್ […]

Continue Reading

ಗೊಂದಲದ ಗೂಡಾದ ಬೆಳ್ತಂಗಡಿ ಅಂಬೇಡ್ಕರ್ ಜಯಂತಿ: ದಿನಕ್ಕೊಬ್ಬ ಮುಖ್ಯ ಭಾಷಣಕಾರರ ಬದಲಾವಣೆ

ಪ್ರತಿವರ್ಷದಂತೆ ನಡೆಯುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಈ ವರ್ಷ ಗೊಂದಲದ ಗೂಡಾಗಿ ಪರಿಣಮಿಸಿದೆ. ದಿನಕ್ಕೊಬ್ಬರಂತೆ ಮುಖ್ಯ ಭಾಷಣಕಾರರು ಬದಲಾವಣೆಗೊಂಡು ಇದೀಗ ಕೊನೆಗಳಿಗೆಯಲ್ಲಿಯೂ ಬದಲಾವಣೆಯಾದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲು ಇತ್ತೀಚೆಗೆ ದಲಿತ ನಾಯಕರ ಸಭೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ದಲಿತ ನಾಯಕರು ಸರ್ವಾನುಮತದಿಂದ ಹಿರಿಯ ತುಳು ಸಾಹಿತಿ ಆತ್ರಾಡಿ ಅಮೃತ ಶೆಟ್ಟಿಯವರ ಹೆಸರನ್ನು ಸೂಚಿಸಿದರು. ಆದರೆ […]

Continue Reading

ಮಂಗಳೂರು: ಪಿಯುಸಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಕುಮಾರಿ ದಿಶಾ ರವರಿಗೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಸನ್ಮಾನ

ಮಂಗಳೂರು: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಮಂಗಳೂರು ಇದರ ವತಿಯಿಂದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಕಾಲೇಜಿ ವಿದ್ಯಾರ್ಥಿನಿ ಕುಮಾರಿ ದಿಶಾ ಮೂಡಬಿದ್ರಿ ಅವರನ್ನು ಅದ್ಧೂರಿಯಾಗಿ ಸನ್ಮಾನಿಸಲಾಯಿತು. ಮಲಬಾರ್ ಗೋಲ್ಡ್ ಮಂಗಳೂರು ಇದರ ಗ್ರಾಹಕರಾದ ಗಂಗಾಧರ ಪೂಜಾರಿ ಮತ್ತು ರಶ್ಮಿ ಜಿ ಪೂಜಾರಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸನ್ಮಾನ ಸ್ವೀಕರಿಸಿದ ಕು. ದಿಶಾರವರು ಮಾತನಾಡಿ, ನನಗೆ ತುಂಬಾ ಖುಷಿಯಾಗುತ್ತದೆ ಹಾಗೂ ತನ್ನ ಸಾಧನೆಗೆ ಶ್ರಮಿಸಿದ ಎಲ್ಲರಿಗೂ ಧನ್ಯವಾದಗಳನ್ನು ಹೇಳಿದರು. ದಿಶಾ ಅವರ ಪಾಲಕರಾದ […]

Continue Reading

ಗಂಜಿಮಠ: ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ; ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ಮಾಲಿಕರ ಮತ್ತು ಆಯೋಜಕರ ವಿರುದ್ದ ಪ್ರಕರಣ ದಾಖಲು.

ಗಂಜಿಮಠ: ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಉಂಟು ಮಾಡಿದ ಗಂಜಿಮಠ ಒಂಡೇಲಾ ಬಳಿಯ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ನ ಮಾಲಿಕರು ಮತ್ತು ಆಯೋಜಕರ ವಿರುದ್ದ ಪ್ರಕರಣ ದಾಖಲು. ದಿನಾಂಕ 12-04-2026 ರಂದು ಮದ್ಯಾಹ್ನ 12 ಗಂಟೆಯಿಂದ 2-00 ಗಂಟೆಯ ಮಧ್ಯೆ ಗಂಜಿಮಠದ ಮುಚ್ಚೂರು ಕ್ರಾಸ್ ಬಳಿ ರಾಯಲ್ ಪ್ಯಾಲೇಸ್ ಮತ್ತು ಒಂಡೆಲಾ ಹಾಲ್ ನ ಮಾಲಿಕರು ಮದುವೆಗೆ ಕಾರ್ಯಕ್ರಮಕ್ಕೆ ಬಂದ ವಾಹನಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳದೆ ಮದುವೆ ಕಾರ್ಯಕ್ರಮಕ್ಕೆ ಹಾಲ್ ನ್ನು ಬಾಡಿಗೆ […]

Continue Reading

ಶಾಮನೂರು ಕೋಟೆಯಲ್ಲಿ ‘ಸಂಪತ್ತಿಗೆ ಸವಾಲ್’; ವಿಜಯೇಂದ್ರ ಪಾಳಯದ ಲೆಕ್ಜಾಚಾರ; ಸಲೀಂ-ಹ್ಯಾರೀಸ್ ಹೊಸ ಜೋಡೆತ್ತುಗಳು.?

✍️. ಆರ್.ಟಿ.ವಿಠ್ಠಲಮೂರ್ತಿ ಅವತ್ತು ರಾಜ್ಯದಲ್ಲಿ ಜೆ.ಹೆಚ್.ಪಟೇಲ್ ನೇತೃತ್ವದ ಜನತಾದಳ ಸರ್ಕಾರ ಅಸ್ತಿತ್ವದಲ್ಲಿತ್ತು. ಜನತಾದಳದ ಸುಪ್ತಿಮೋ ದೇವೇಗೌಡರು ಪ್ರಧಾನಿ ಗದ್ದುಗೆ ಏರಿ ವಾಪಸ್ಸು ಬಂದಿದ್ದರು. ಈ ಸಂದರ್ಭದಲ್ಲೇ ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಎದುರಾಯಿತು.ಹೀಗೆ ಉಪಚುನಾವಣೆ ನಡೆದ ಎರಡು ಕ್ಷೇತ್ರಗಳ ಪೈಕಿ ಒಂದು ರಾಮನಗರ. ಮತ್ತೊಂದು ಮೊಳಕಾಲ್ಮೂರು.ಅವತ್ತು ರಾಜಕೀಯ ಬಲಾಬಲದ ದೃಷ್ಟಿಯಿಂದ ಜನತಾದಳ ಭರ್ಜರಿ ಗೆಲುವು ಸಾಧಿಸವೇಕಿತ್ತು. ಆದರೆ ಉಪಚುನಾವಣೆಯಲ್ಲಿ ಜನತಾದಳದ ಲೆಕ್ಕಾಚಾರ ಉಲ್ಟಾ ಆಗಿ ಪ್ರತಿಪಕ್ಷ ಕಾಂಗ್ರೆಸ್ಸಿನ ಅಭ್ಯರ್ಥಿಗಳು ಗೆಲುವು ಸಾಧಿಸಿದರು. ಅವತ್ತು ರಾಮನಗರ ಕ್ಷೇತ್ರದಲ್ಲಿ […]

Continue Reading

ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನ; ಸದ್ಯಕಿಲ್ಲ ಕಾಮಗಾರಿ ಭಾಗ್ಯ

ಒಟ್ಟಾರೆ ಕಾನೂನು, ಸರ್ಕಾರ, ಇಲಾಖೆಗಳ ನಡುವೆ ಅಮಾಯಕ ಆದಿವಾಸಿ ಕಾಡಿನ ಮಕ್ಕಳು ಹೈರಾಣು ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದ ಕಾಡಬಾಗಿಲು ಸೇತುವೆ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಂಡು, ಶಂಕುಸ್ಥಾಪನೆಯಾದರೂ, ಕಾಮಗಾರಿಗೆ ಬ್ರೇಕ್ ಬಿದ್ದಿದ್ದು, ಸದ್ಯ ಕಾಮಗಾರಿ ನಿಲ್ಲಿಸಲಾಗಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಶತಮಾನಗಳಿಂದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದ ಅಭಿವೃದ್ಧಿಗಾಗಿ ಜನರ ನಿರಂತರ ಮೂರು ದಶಕಗಳ ಹೋರಾಟ ನಡೆಸುತ್ತಿದ್ದಾರೆ. ಸ್ವಾತಂತ್ರ್ಯ ಲಭಿಸಿ 79 ವರ್ಷ ಕಳೆದರೂ ಇಂದಿಗೂ ಇಲ್ಲಿ ವಿದ್ಯುತ್, […]

Continue Reading

ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು; KIADB ಭೂಸ್ವಾಧೀನ ರದ್ದು, ದಯಾನಂದ್ ಪೈಗೆ ಭಾರೀ ದಂಡ, ಸಿಬಿಐ ತನಿಖೆಗೆ ನಿರ್ದೇಶನ

ಬೆಂಗಳೂರು: ಕೈಗಾರಿಕೆ ಹೆಸರಲ್ಲಿ ಭೂಸ್ವಾಧೀನ ಮಾಡಿಸಿ ವೈಯಕ್ತಿಕ ಬ್ಯುಸಿನೆಸ್ ನಡೆಸುವ ರಿಯಲ್ ಎಸ್ಟೇಟ್ ಉದ್ಯಮಿ ದಯಾನಂದ್ ಪೈ ಪ್ರಯತ್ನಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಮಹತ್ವದ ಆದೇಶವೊಂದರಲ್ಲಿ ಬೆಂಗಳೂರಿನ ಹೆಬ್ಬಾಳ ಬಳಿ ಲೇಕ್ ವ್ಯೂ ಪ್ರವಾಸೋದ್ಯಮ ನಿಗಮಕ್ಕೆ ನೂರಾರು ಕೋಟಿ ಬೆಲೆಬಾಳುವ ಜಾಮೀನು ಸ್ವಾಧೀನ ಅಧಿಸೂಚನೆಯನ್ನೇ ಹೈಕೋರ್ಟ್ ರದ್ದುಪಡಿಸಿದೆ. ಅಷ್ಟೇ ಅಲ್ಲ ಉದ್ಯಮಿ ದಯಾನಂದ್ ಪೈ ಅವರಿಗೆ ಬರೋಬ್ಬರಿ 10 ಲಕ್ಷ ರೂಪಾಯಿ ದಂಡ ವಿಧಿಸಿದ್ದಲ್ಲದೆ, ಸಿಬಿಐ ತನಿಖೆಗೂ ಆದೇಶಿಸಿ ಶುಕ್ರವಾರ ತೀರ್ಪು ಪ್ರಕಟಿಸಿದೆ. ಹೆಬ್ಬಾಳದಲ್ಲಿ ಸ್ಥಳೀಯರ ಆಕ್ಷೇಪದ […]

Continue Reading

ಬ್ಯಾರಿ ಮುಸ್ಲಿಂ ಸಮಾಜದಲ್ಲಿ ಶಿಕ್ಷಣ ಅಸಮಾನತೆ, ಕುಟುಂಬ ವ್ಯವಸ್ಥೆಯ ಶಿಥಿಲತೆ ಮತ್ತು ವಿವಾಹ ಬಿಕ್ಕಟ್ಟು; ಒಂದು ಆಳವಾದ ಸಾಮಾಜಿಕ ಅಧ್ಯಯನ ಪ್ರಾಸ್ತಾವಿಕ

✍️. ಇಸ್ಮಾಯಿಲ್ ಎಸ್. ವಕೀಲರು, ಲೇಖಕರು. ಮಂಗಳೂರು ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳ ಕರಾವಳಿ ನಾಡಿನಲ್ಲಿ ಶತಮಾನಗಳ ಕಾಲ ವ್ಯಾಪಾರ ಮತ್ತು ಸಂಸ್ಕೃತಿಯ ಕ್ಷೇತ್ರದಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಬ್ಯಾರಿ ಮುಸ್ಲಿಂ ಸಮಾಜ ಇಂದು ಒಂದು ನಿರ್ಣಾಯಕ ಸಂಕ್ರಮಣ ಕಾಲದಲ್ಲಿ ನಿಂತಿದೆ. ಈ ಸಮಾಜ ಹಿಂದೊಮ್ಮೆ ವರದಕ್ಷಿಣೆ ಎಂಬ ಪಿಡುಗು ಅನುಭವಿಸಿ, ಧಾರ್ಮಿಕ ಮತ್ತು ಸಾಮಾಜಿಕ ನೇತೃತ್ವದ ಮೂಲಕ ಅದರಿಂದ ಹೊರಬಂದ ಇತಿಹಾಸ ಹೊಂದಿದೆ. ಆ ಗೆಲುವು ನಿಜಕ್ಕೂ ಅಭಿಮಾನಾರ್ಹ. ಆದರೆ ಹಳೆಯ ಒಂದು […]

Continue Reading