ರಾಜ್ಯ ಪೊಲೀಸ್ ಇಲಾಖೆಯಲ್ಲಿ ಬಿಗ್ ಸರ್ಜರಿಗೆ ತಯಾರಿ, ಆಯಕಟ್ಟಿನ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ಧತೆ

ಕಾನೂನು ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡಲು ಡಿಕೆ ಚಿಂತನೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು ಮುಂದಾಗಿರುವ ಸಿಎಂ ಡಿ.ಕೆ. ಶಿವಕುಮಾರ್ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಮಟ್ಟದ ಬದಲಾವಣೆ ತರಲು ಸಜ್ಜಾಗಿದ್ದಾರೆ. ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಪ್ರಮುಖವಾಗಿ ಗೃಹ ಇಲಾಖೆಗೆ ಮೇಜರ್ ಸರ್ಜರಿ ನಡೆಸಲು ಸಿಎಂ ತೀರ್ಮಾನಿಸಿದ್ದು, ಆಯಾಕಟ್ಟಿನ ಹುದ್ದೆಗಳಲ್ಲಿರುವ ಪ್ರಮುಖ ಐಪಿಎಸ್ ಅಧಿಕಾರಿಗಳ ವರ್ಗಾವಣೆಗೆ ಸಿದ್ಧತೆ ನಡೆದಿದೆ ಎಂದು ಗೃಹ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಮುಖ್ಯವಾಗಿ ಪೊಲೀಸ್ […]

Continue Reading

ಮನೆ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಕಳವುಗೈದ ಸೊತ್ತು ವಶ.

ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳ್ಪಾಡಿ ಎಂಬಲ್ಲಿ, ಮನೆಯೊಂದರಲ್ಲಿ ನಡೆದ ಚಿನ್ನಾಭರಣ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಅ.ಕ್ರ. 71/2026 ಕಲಂ: 303(2) ಬಿ ಎನ್‌ ಎಸ್‌ -2023 ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸರು ಆರೋಪಿಗಳಾದ ಬಂಟ್ವಾಳ ಬಾಳ್ತಿಲ ನಿವಾಸಿ ಕುಮಾರಿ ಪೃಥ್ವಿ ಹಾಗೂ ಮಂಗಳೂರು ಸುರತ್ಕಲ್‌ ನಿವಾಸಿ ಕಿಶಾನ್‌ ಎಂಬವರುಗಳನ್ನು ಬಂಧಿಸಿ, ಆರೋಪಿಗಳು ಕಳವುಗೈದಿರುವ ಒಟ್ಟು ರೂ 2,50,000. ರೂ. ಮೌಲ್ಯದ 21 ಗ್ರಾಂ ಚಿನ್ನಾಭರಣ ಮತ್ತು ಆರು ನೂರು ರೂಪಾಯಿ ನಗದನ್ನು […]

Continue Reading

ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿಯ ಅಪಹರಿಸಿ, ಮೂರು ಕೋಟಿ ಬೇಡಿಕೆ.

ಮಾಜಿ ವಿಧಾನ ಪರಿಷತ್ ಸದಸ್ಯ ದಯಾನಂದ ರೆಡ್ಡಿಯವರನ್ನು ಅಪಹರಿಸಿ ಮೂರು ಕೋಟಿ ಹಣಕ್ಕೆ ಬೇಡಿಕೆ ಇಟ್ಟು, ಕೊನೆಗೆ ಎರಡು ಕೋಟಿಗೆ ಡೀಲ್ ಮಾಡಿಕೊಂಡಿರುವ ಅಪಹರಣಕಾರರು ಅವರನ್ನು ಬಿಟ್ಟು ಕಳುಹಿಸಿರುವ ಘಟನೆ ಬೆಂಗಳೂರಿನ ಆನೇಕಲ್ ಬಳಿ ನಡೆದಿದೆ. ತಡರಾತ್ರಿ 12:15ರ ಸುಮಾರಿಗೆ ಗೋಲ್ಡ್ ಕಾಯಿನ್ ಕ್ಲಬ್‌ನಿಂದ ಹೊರಟಿದ್ದ ಮಾಜಿ ಎಂಎಲ್‌ಸಿ ದಯಾನಂದರೆಡ್ಡಿ ಅವರ ಕಾರನ್ನು ಹಿಂಬಾಲಿಸಿ ಸಮೀಪ ಬೈಕ್‌ನಲ್ಲಿ ಬಂದ ಇಬ್ಬರು ಅವರನ್ನು ಅಡ್ಡಗಟ್ಟಿದ್ದಾರೆ. ನಿಮಗೆ ಗಿಫ್ಟ್ ಬಂದಿದೆ ಎಂದು ಹೇಳಿ ಕಾಟನ್ ಬಾಕ್ಸ್ ತೋರಿಸಿದ್ದಾರೆ. ಕಾರಿನ ಡೋರ್ […]

Continue Reading

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ ಆರರಂದು ನೀಟ್ ಪರೀಕ್ಷೆ ಅವ್ಯವಸ್ಥೆ ವಿರುದ್ದ CJP ಯಿಂದ ಪ್ರತಿಭಟನೆ

ದೆಹಲಿ: ಪರೀಕ್ಷಾ ಸಂಬಂಧಿತ ಲೋಪದೋಷ, ವಿವಾದಗಳ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಜೂನ್ 6 ರಂದು ಭಾರತಕ್ಕೆ ಮರಳುವುದಾಗಿ ಹಾಗೂ ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ‘ಕಾಕ್ರೋಚ್ ಜನತಾ ಪಾರ್ಟಿ’ಯ ಸ್ಥಾಪಕ ಅಭಿಜೀತ್ ದಿಪ್ಕೆ ಸೋಮವಾರ ಘೋಷಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆ ಮಾಡಿದ ವಿಡಿಯೋದಲ್ಲಿ, ಪರೀಕ್ಷಾ ಸಂಬಂಧಿತ ಗೊಂದಲಗಳು ಮತ್ತು ವಿವಾದಗಳು ವಿದ್ಯಾರ್ಥಿಗಳಲ್ಲಿ ಆತಂಕ ಮೂಡಿಸಿವೆ ಮತ್ತು ಸರ್ಕಾರವು ಇದಕ್ಕೆ ಹೊಣೆಗಾರಿಕೆಯನ್ನು ಹೊರಬೇಕು ಎಂದು ಹೇಳುತ್ತಾ, ವಿದ್ಯಾರ್ಥಿಗಳು ಮತ್ತು ಬೆಂಬಲಿಗರು ಈ ಅಭಿಯಾನದಲ್ಲಿ […]

Continue Reading

ಬೆಳ್ತಂಗಡಿ: ಯುವಕನ ಹತ್ಯೆ ಪ್ರಕರಣ: ಮೂವರು ಅಂದರ್

ಬೆಳ್ತಂಗಡಿ ಗುರುವಾಯನಕೆರೆ, ಅಲಾದಿಕೊಟ್ಟಿಗೆ ಎಂಬಲ್ಲಿ ನಡೆದಿದ್ದ ಹತ್ಯೆ ಪ್ರಕರಣವನ್ನು ಕೊನೆಗೂ ಬೆಳ್ತಂಗಡಿ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಮೃತ ಯುವಕನನ್ನು ಬಂಟ್ವಾಳ ಗ್ರಾಮದ ಪೆರ್ನೆ ನಿವಾಸಿ ಯತೀಶ್ ಗೌಡ ಎಂದು ಗುರುತಿಸಲಾಗಿದೆ. ಜೂನ್ 1 ರಂದು ಗುರುವಾಯನಕೆರೆ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಮೃತದೇಹ ಇರುವ ಬಗ್ಗೆ ಭಾವಚಿತ್ರ ಸಹಿತ ಮಾಹಿತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಇದನ್ನು ಗಮನಿಸಿದ ಮೃತನ ಸಹೋದರ ನಿತಿನ್ ಅವರು, ಮೃತ ವ್ಯಕ್ತಿಯು ತನ್ನ ಸಹೋದರ […]

Continue Reading

ಘನತಾಜ್ಯ ನಿರ್ವಹಣೆ: ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ರೂಪಿಸುವಂತೆ ಡಾ. ಶಾಲಿನಿ ರಜನೀಶ್ ಅಧಿಕಾರಿಗಳಿಗೆ ಮನವಿ

ಘನತಾಜ್ಯ ನಿರ್ವಹಣೆಯಲ್ಲಿ ಕರ್ನಾಟಕವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ರೂಪಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ವಿಧಾನ ಸೌಧದಲ್ಲಿ ನಡೆದ ರಾಜ್ಯ ಮಟ್ಟದ ಕಾರ್ಯಾಗಾರ ಉದ್ದೇಶಿಸಿ ಅವರು ಮಾತನಾಡಿ, ಅಧಿಕಾರಿಗಳು ಮತ್ತು ಸಾರ್ವಜನಿಕರು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ ಘನ ತ್ಯಾಜ್ಯ ನಿರ್ವಹಣೆಯಲ್ಲಿ ರಾಜ್ಯವನ್ನು ದೇಶದಲ್ಲೇ ಮಾದರಿ ರಾಜ್ಯವನ್ನಾಗಿ ಕೊಂಡೊಯ್ಯಬೇಕು. ಈಗಾಗಲೇ ಸುಮಾರು 4,000 ಗ್ರಾ. ಪಂಗಳಲ್ಲಿ ಮಹಿಳಾ ಸ್ವ-ಸಹಾಯ ಗುಂಪುಗಳನ್ನು ‘ಸ್ವಚ್ಛತಾ ವಾಹಿನಿ’ಗಳನ್ನಾಗಿ ಯಶಸ್ವಿಯಾಗಿ ನಿಯೋಜಿಸಲಾಗಿದೆ. ಇದನ್ನು ರಾಜ್ಯದ ಎಲ್ಲ 6,000 ಗ್ರಾಪಂಗಳಿಗೂ […]

Continue Reading

ಸಿದ್ದು ವಿದಾಯದ ಅಂತಿಮ ಕ್ಷಣಗಳು; ರಾಜ್ಯಸಭೆ ಸೀಟಿಗೆ ಪೈಪೋಟಿ

ಜಾರಕಿಹೊಳಿ ಪಟ್ಟು ಏನು.?; ಬಿಜೆಪಿಯಲ್ಲಿ ಎಮ್ಮೆಲ್ಸಿ ದಂಗಲ್ ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ರಾಹುಲ್ ಗಾಂಧಿ ಅವರ ಆಹ್ವಾನದ ಮೇರೆಗೆ ದಿಲ್ಲಿಗೆ ಹೊರಟ ಸಿಎಂ ಸಿದ್ದರಾಮಯ್ಯನವರಿಗೆ ಎರಡು ವಿಷಯಗಳು ಪಕ್ಕಾ ಆಗಿದ್ದವು. ಮೊದಲ ವಿಷಯ, ರಾಹುಲ್ ಗಾಂಧಿ ಅವರು ತಮ್ಮ ರಾಜೀನಾಮೆ ಕೇಳಲಿದ್ದಾರೆ ಎಂಬುದು. ಎರಡನೆಯ ವಿಷಯ, ತಮ್ಮ ಸುತ್ತ ನಿಂತು ಆರ್ಭಟಿಸುತ್ತಿದ್ದ ಬಹುತೇಕ ಬೆಂಬಲಿಗರು ಅದಾಗಲೇ ಡಿ.ಕೆ. ಶಿವಕುಮಾರ್ ಅವರ ಕ್ಯಾಂಪಿಗೆ ಸೇರಿಕೊಂಡಿದ್ದಾರೆ ಎಂಬುದು.ಹೀಗಾಗಿ ಮೇ ಇಪ್ಪತ್ತಾರರ ಮಂಗಳವಾರ ದಿಲ್ಲಿಗೆ ಹೋದ ಸಿದ್ದರಾಮಯ್ಯ ಅವರು ರಾಹುಲ್ […]

Continue Reading

ರಾಜ್ಯದಲ್ಲಿ ಡಿಕೆಶಿ ಪರ್ವ; ಜಿಲ್ಲೆಯಲ್ಲಿ ಇನಾಯತ್ ಆಲಿ ಪರ್ವ; ನಂಬಿಕಸ್ಥ ಬಂಟನಿಗೆ ‘ಪವರ್’ ನಿರೀಕ್ಷೆ.!

ಕೊನೆಗೂ ರಾಜ್ಯ ರಾಜಕಾರಣದಲ್ಲಿ ಮಹತ್ತರ ಬದಲಾವಣೆಗೆ ವೇದಿಕೆ ಸಿದ್ಧವಾಗಿದೆ. ಪಕ್ಷ ನಿಷ್ಠೆ ಡಿಕೆ ಶಿವಕುಮಾರ್ ಅವರನ್ನು ಕೈ ಹಿಡಿದಿದೆ. ರಾಜ್ಯದ ಮುಖ್ಯಮಂತ್ರಿಯಾಗಿ ಪಟ್ಟಕ್ಕೇರಲು ದಿನ ಮುಹೂರ್ತ ಆಗಿದೆ. ರಾಜಕಾರಣದಲ್ಲಿ ಕನಕಪುರದ ಬಂಡೆಯಾಗಿ ಕಾಂಗ್ರೆಸ್ ಪಕ್ಷಕ್ಕೆ ಚೈತನ್ಯ ತುಂಬಿ ಸೋಲುವ ಹಾದಿಯಲ್ಲಿದ್ದ ಪಕ್ಷವನ್ನು ಫೀನಿಕ್ಸ್ ನಂತೆ ಎದ್ದೇಳುವಂತೆ ಮಾಡಿದ ಸಮರ್ಥ ಸೇನಾನಿ ಆಗಿದ್ದಾರೆ ಡಿಕೆ ಶಿವಕುಮಾರ್. ಡಿಕೆಶಿ ಗೆ ಜಿಲ್ಲೆಯಲ್ಲಿ ಹಲವಾರು ಆಪ್ತರು ಇರಬಹುದು. ಆದರೆ ಅದರಲ್ಲಿ ಡಿಕೆಶಿ ಪಾಳೆಯದಲ್ಲಿ ನಂಬಿಕಸ್ಥ ಬಂಟನಾಗಿ ಗುರುತಿಸಿಕೊಂಡವರು ಇನಾಯತ್ ಆಲಿ. ತನ್ನ […]

Continue Reading

‘ಕರ್ನಾಟಕ ಅಸೋಷಿಯೇಷನ್ ಆಫ್ ಸ್ಮಾಲ್ ಅಂಡ್ ಮೀಡಿಯಂ ನ್ಯೂಸ್ ಪೇಪರ್ಸ್’ (KASMN) ಅಸ್ತಿತ್ವಕ್ಕೆ

ರಾಜ್ಯಾಧ್ಯಕ್ಷರಾಗಿ ಷಡಾಕ್ಷರಪ್ಪ ಜಿ.ಆರ್., ಉಪಾಧ್ಯಕ್ಷರಾಗಿ ಕೃಷ್ಣಮೂರ್ತಿ ಹೆಬ್ಬಾರ್ ಆಯ್ಕೆ ಬೆಂಗಳೂರು: ರಾಜ್ಯದ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರು ಮತ್ತು ಪ್ರಕಾಶಕರನ್ನು ಒಳಗೊಂಡ ‘ಕರ್ನಾಟಕ ಅಸೋಷಿಯೇಷನ್ ಆಫ್ ಸ್ಮಾಲ್ ಅಂಡ್ ಮೀಡಿಯಂ ನ್ಯೂಸ್ ಪೇಪರ್ಸ್’ (KASMN) (ಕರ್ನಾಟಕ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಘ) ಅಸ್ತಿತ್ವಕ್ಕೆ ಬಂದಿದ್ದು, ಸಂಘದ ರಾಜ್ಯಾಧ್ಯಕ್ಷರಾಗಿ ಶಿವಮೊಗ್ಗದ ಸುದ್ದಿಸಾರ ದಿನಪತ್ರಿಕೆಯ ಪ್ರಕಾಶಕ ಷಡಾಕ್ಷರಪ್ಪ ಜಿ.ಆರ್. ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಬೆಂಗಳೂರು ಜಯನಗರದಲ್ಲಿರುವ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಉಪಾಧ್ಯಕ್ಷರಾಗಿ ಹೊನ್ನಾವರದ (ಉತ್ತರ ಕನ್ನಡ ಜಿಲ್ಲೆ) […]

Continue Reading

ಮಂಗಳೂರು: ಬೀದಿ ಬದಿ ವ್ಯಾಪಾರಿಗಳ ವಿರುದ್ಧ ದ್ವೇಷ ಪೂರಿತ ಅವಹೇಳನ ಪ್ರಕರಣ; ಮಹಿಳೆ ವಿರುದ್ಧ ಎಫ್ ಐ ಆರ್

ಮಂಗಳೂರಿನ ಸ್ಟೇಟ್‌ಬ್ಯಾಂಕ್ ಸಮೀಪ ನಡೆದಿದ್ದ ಬೀದಿ ಬದಿ ವ್ಯಾಪಾರಿಯ ಮೇಲಿನ ಅವಹೇಳನಕಾರಿ ವರ್ತನೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದ ವಿಡಿಯೊ ಸಂಬಂಧ ಇದೀಗ ಮಹಿಳೆಯೊಬ್ಬರ ವಿರುದ್ಧ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮ, ಭಾಷೆ ಹಾಗೂ ಇತರ ಗುರುತುಗಳ ಆಧಾರದ ಮೇಲೆ ದ್ವೇಷ ಮತ್ತು ವೈಷಮ್ಯ ಉಂಟುಮಾಡುವ ರೀತಿಯಲ್ಲಿ ಮಾತುಕತೆ ನಡೆಸಿದ ಆರೋಪದಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ನಗರದ ಸ್ಟೇಟ್‌ಬ್ಯಾಂಕ್ ಪ್ರದೇಶದಲ್ಲಿ ಮಹಿಳೆಯೊಬ್ಬರು ಬೀದಿ ಬದಿ […]

Continue Reading