ಸಂತ್ರಸ್ತ ಕೈದಿಗಳ ಬಿಡುಗಡೆಗೆ ಏಕರೂಪ ನೀತಿ ರೂಪಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಸುಪ್ರೀಂ ಕೋರ್ಟ್ ನಿರ್ದೇಶನ

ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿ ಈವರೆಗೂ ಜೈಲಿನಲ್ಲಿ ಕೊಳೆಯುತ್ತಿರುವ ವೃದ್ಧರು ಹಾಗೂ ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ಕೈದಿಗಳ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ಮೂರು ತಿಂಗಳ ಒಳಗಾಗಿ ಸೂಕ್ತ ನೀತಿ ರೂಪಿಸುವಂತೆ ಸುಪ್ರೀಂ ಕೋರ್ಟ್​ ಗುರುವಾರ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳಿಗೆ ನಿರ್ದೇಶನ ನೀಡಿದೆ. ನ್ಯಾಯಮೂರ್ತಿಗಳಾದ ವಿಕ್ರಮ್​ ನಾಥ್​ ಮತ್ತು ಸಂದೀಪ್​ ಮೆಹ್ತಾ ಅವರಿದ್ದ ಪೀಠ ಈ ಮಹತ್ವದ ತೀರ್ಪು ನೀಡಿದೆ. ಈ ನೀತಿಯು ಕೈದಿಗಳ ಬಿಡುಗಡೆಗೆ ಇರಬೇಕಾದ ಅರ್ಹತಾ ಮಾನದಂಡಗಳು ಮತ್ತು ಕಾರ್ಯವಿಧಾನದ ಚೌಕಟ್ಟನ್ನು ಸ್ಪಷ್ಟವಾಗಿ […]

Continue Reading

ಉಪ್ಪಿನಂಗಡಿ ಪೊಲೀಸರ ಕಾರ್ಯಾಚರಣೆ: ಖೋಟಾ ನೋಟು ಮುದ್ರಣ ಜಾಲ ಪತ್ತೆ. ಏಳು ಮಂದಿ ಆರೋಪಿಗಳ ಬಂಧನ; ಪ್ರಿಂಟಿಗ್ ಸಾಮಾಗ್ರಿ ವಶ

ಬೆಳ್ತಂಗಡಿ: ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು ಭಾರತೀಯ ನಕಲಿ ನೋಟುಗಳನ್ನು ಮುದ್ರಿಸುತ್ತಿರುವ ಬಗ್ಗೆ, ಉಪ್ಪಿನಂಗಡಿ ಠಾಣಾ ಪೊಲೀಸರಿಗೆ ಬಂದ ಖಚಿತ ಮಾಹಿತಿ ಬಂದ ಮೇರೆಗೆ, ದಿನಾಂಕ: 16.07.2026 ರಂದು ಬೆಳಗ್ಗಿನ ಜಾವ ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿ, 500 ರೂ. ಮುಖಬೆಲೆಯ ನೋಟು, ಗಣಕಯಂತ್ರ, ಝರಾಕ್ಸ್ ಮೆಷಿನ್, ಸೀಲ್ ಗಳು ಸೇರಿದಂತೆ ಇತರ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2026 […]

Continue Reading

ರಾಹುಲ್‌ ಅನುಪಸ್ಥಿತಿಯಲ್ಲಿ ಪೂರ್ವಭಾವಿ ಸಭೆ: ಸೋಮವಾರ ಸಂಪುಟ ವಿಸ್ತರಣೆ ನಡೆಯುವ ಸಾಧ್ಯತೆಯಿದೆ; ಹೊಸ ಮುಖಗಳಿಗೆ ಅವಕಾಶ

ಸಚಿವ ಸಂಪುಟ ವಿಸ್ತರಣೆ ಕುರಿತ ಚರ್ಚೆಗಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಬುಧವಾರ ದೆಹಲಿಗೆ ತೆರಳಿದ್ದು, ಗುರುವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್‌, ರಣದೀಪ್‌ಸಿಂಗ್‌ ಸುರ್ಜೇವಾಲಾ ಅವರ ಜತೆಗೆ ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಡಿ.ಕೆ. ಶಿವಕುಮಾರ್‌ ಅವರ ಸಭೆ ನಡೆಸಲಿದ್ದಾರೆ. ಈ ಸಭೆಯ ನಂತರ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್‌ ಅವರು ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ ನಾಯಕರಿಗೆ ನೀಡುವ […]

Continue Reading

ಮಂಗಳೂರು ತಾಲೂಕು ಆಡಳಿತ ಸೌಧ: ಲಂಗರು ಹಾಕಿದ ನುಂಗಾಸುರರು

ಆನೆ ನಡೆದದ್ದೇ ದಾರಿ ಅನ್ನುವಂತೆ ಇಲ್ಲಿನ ಕೆಲವೊಂದು ಸ್ಟಾಪ್‍ಗಳದ್ದು ಧಿಮಾಕು.! ಮಂಗಳೂರು ಆಡಳಿತ ಸೌಧಕ್ಕೆ ಹಿಡಿದ ಸಡೇಸಾತ್ ಬಿಡುವ ಲಕ್ಷಣ ಕಾಣುತ್ತಿಲ್ಲ. ಇಲ್ಲಿ ಲಂಗರು ಹಾಕಿದ ನುಂಗಾಸುರರ ಕಥೆಯನ್ನು ಹೇಳ ಹೊರಟರೆ ಅದೊಂದು ದೊಡ್ಡ ಕಾದಂಬರಿಯಾದೀತು. ಹತ್ತಾರು ವರ್ಷಗಳಿಂದ ಝಂಡಾ ಊರಿ ಕುಳಿತಿರುವ ಕೆಲವೊಂದು ಅಧಿಕಾರಿಗಳು, ನೌಕರರು ಮುಂಡಾ ಮೋಚಿದ್ದೆ. ಲಂಚ ಕಂಡರೆ ಕಣ್ಣು, ಬಾಯಿ ಬಿಡುತ್ತಾರೆ. ಲಂಚ ಇಲ್ಲದೆ ಇಲ್ಲಿ ಕೆಲಸವೇ ಆಗಲ್ಲ. ಕೆಲವೊಂದು ಅಧಿಕಾರಿಗಳು ಲಂಚ ಪಡೆಯಲೇ ಕಚೇರಿಯಲ್ಲಿ ನೌಕರರನ್ನು ಇಟ್ಟಿರುತ್ತಾರೆ. ಅವರ ಮೂಲಕವೇ […]

Continue Reading

ಕಾರ್ಕಳ: ನಾಲ್ಕು ಬಾರಿ ಗೆದ್ದ ಶಾಸಕರ ಕ್ಷೇತ್ರದಲ್ಲಿ ರಸ್ತೆ ಸಂಚಾರವೇ ಸಂಚಿಕಾರ.. ಇಲ್ಲಿ ರಸ್ತೆ ದಾಟಲು ಗುಂಡಿಗೆ ಬೇಕು!

ಶಾಸಕರ ಕನಸಿನ ಸ್ವರ್ಣ ನಗರಿಯಲ್ಲಿ ಹೊಂಡಗಳ ಸಾಮ್ರಾಜ್ಯ! ಮುಂಗಾರು ಮಳೆ ತೀವ್ರತೆ ಪಡೆದುಕೊಂಡಿದೆ. ಸುಸ್ಥಿತಿಯಲ್ಲಿರುವ ರಸ್ತೆಯಲ್ಲೇ ವಾಹನ ಓಡಿಸುವುದು ಕಷ್ಟ. ಅಂತಹದರಲ್ಲಿ ರಸ್ತೆಯನ್ನೇ ನುಂಗಿದ ಹೊಂಡ ಗುಂಡಿಗಳಲ್ಲಿ ಸಂಚಾರವೇ ಸಂಚಿಕಾರ. ಇಂತಹದ್ದೊಂದು ನರಕಯಾತನೆ ಇರುವುದು ಯಾವುದೋ ಒಂದು ಕುಗ್ರಾಮದ ರಸ್ತೆಯಲ್ಲಿ ಅಲ್ಲ. ಬದಲಾಗಿ ಕಾರ್ಕಳ ಪೇಟೆಯ ಹೃದಯ ಭಾಗವಾದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ದುರಂತ ಚಿತ್ರಣ ಇದು. ಈ ಭಾಗದಲ್ಲಿ ಸತತ ನಾಲ್ಕು ಬಾರಿ ಹಿಂದುತ್ವದ ಅಲೆಯಲ್ಲಿ ಗೆದ್ದು ಬೀಗುತ್ತಿರುವ ಸುನೀಲ್ […]

Continue Reading

ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ನೇಮಕಾತಿ ಆದೇಶ ರದ್ದು

ಮುಖ್ಯಮಂತ್ರಿಯವರ ಸಚಿವಾಲಯದ ಮೂರನೇ ಮಾಧ್ಯಮ ಕಾರ್ಯದರ್ಶಿ ಹುದ್ದೆಗೆ ನೇಮಕಗೊಂಡಿದ್ದ ರಾಘವೇಂದ್ರ ಭಟ್ ಅವರ ಆದೇಶವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ಸರ್ಕಾರ ಅಮಾನತುಗೊಳಿಸಿದೆ. ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿಯವರು ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸಿದ್ದಾರೆ. ಕಳೆದ ಜುಲೈ 8, 2026 ರಂದು ರಾಘವೇಂದ್ರ ಭಟ್ ಅವರನ್ನು ಈ ಹುದ್ದೆಗೆ ನೇಮಿಸಿ ಆದೇಶ ಹೊರಡಿಸಲಾಗಿತ್ತು. ಆದರೆ, ಈ ನೇಮಕಾತಿ ಪ್ರಕಟವಾಗುತ್ತಿದ್ದಂತೆ ತೀವ್ರ ವಿವಾದ ಸೃಷ್ಟಿಯಾಗಿತ್ತು. ಹಿಂದೆ ಸಾಮಾಜಿಕ ಜಾಲತಾಣಗಳಲ್ಲಿ […]

Continue Reading

‘ಸಿರಾ-ಶಿಕು’ ಸೇತುವೆಗೆ ‘ಡಿಕೆ’ ಸಿಮೆಂಟು; ಆಷಾಡಕ್ಕೆ ಸಂಪುಟ ವಿಸ್ತರಣೆ, ಸಿದ್ದು ಫಿಟ್ನೆಸ್ ಸೆಂಟರ್; ಬಿಕೆ ಹೆಗಲಿಗೆ ಹೊಸ ಜವಾಬ್ದಾರಿ

✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ತಮ್ಮ ಪತ್ನಿ ಹಾಗೂ ಸಹೋದರನ ಜತೆಗೂಡಿ ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಹೋಗಿದ್ದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಒಂದು ಮಹತ್ವದ ವಿಷಯವನ್ನು ಪ್ರಸ್ತಾಪಿಸಿದರಂತೆ. ಅಂದ ಹಾಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಈ ಮಹತ್ವದ ವಿಷಯವನ್ನು ಪ್ರಸ್ತಾಪಿಸಲು ಡಿ.ಕೆ.ಶಿವಕುಮಾರ್ ಅವರಿಗಿದ್ದ ಫೀಡ್ ಬ್ಯಾಕೇ ಕಾರಣ. ಅದೆಂದರೆ, ಇತ್ತೀಚೆಗೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಪಕ್ಷದ ಕೆಲ ಶಾಸಕರು: ‘ಡಿಕೆ ಫುಲ್ಲು ಚೇಂಜ್ ಆಗಿದ್ದಾರೆ. ಸರ್ಕಾರದ ಮಟ್ಟದಲ್ಲಿ ತಮಗೆ ಬೇಕಾದಂತೆ […]

Continue Reading

ಅಕ್ಟೋಬರ್-ನವೆಂಬರ್‌ ನಡುವೆ ರಾಜ್ಯದಲ್ಲಿ ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ

ಅಕ್ಟೋಬರ್-ನವೆಂಬರ್‌ ನಡುವೆ ಪಂಚಾಯತ್ ಚುನಾವಣೆ ನಡೆಯುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ 5,927 ಗ್ರಾಮ ಪಂಚಾಯಿತಿಗಳಿದ್ದು, ಅವುಗಳಲ್ಲಿ 90% ಕ್ಕಿಂತ ಹೆಚ್ಚು ಗ್ರಾಮ ಪಂಚಾಯಿತಿಗಳ ಅಧಿಕಾರಾವಧಿ ಮುಗಿದಿದ್ದು, ಪ್ರಸ್ತುತ ಆಡಳಿತಾಧಿಕಾರಿಗಳು ಉಸ್ತುವಾರಿ ವಹಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ಮತ್ತು ಮೀಸಲಾತಿ ಮ್ಯಾಟ್ರಿಕ್ಸ್ ನಿಗದಿ ಪೂರ್ಣಗೊಂಡ ತಕ್ಷಣ, ಪ್ರಸ್ತಾವನೆಯನ್ನು ರಾಜ್ಯ […]

Continue Reading

ಇಲ್ಲಿ ನದಿ ದಾಟುವುದು ನಿಷೇಧ; ಮೂಲ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿದ ಇಲಾಖೆ

ಆದಿವಾಸಿ ಮಲೆಕುಡಿಯ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ವಿಫಲವಾದ ಜಿಲ್ಲಾಢಳಿತ ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಸವಣಾಲು ಗ್ರಾಮದ ಹಿತ್ತಿಲಪೇಲ ಎಂಬಲ್ಲಿ ಕಳೆದ ವರ್ಷ ಜೂನ್ 15 ರಂದು ದ್ವಿಚಕ್ರ ವಾಹನದ ಮೂಲಕ ನದಿ ನೀರಿನಲ್ಲಿ ಕೊಚ್ಚಿಕೊಂಡು ಹೋದ ಪ್ರದೇಶದಲ್ಲಿ ನದಿ ತುಂಬಿ ಹರಿಯುತ್ತಿದೆ. ಇಲ್ಲಿ ನದಿ ದಾಟುವುದು ನಿಷೇಧಿಸಲಾಗಿದೆ ಎಂಬ ಬ್ಯಾನರ್ ಹಾಕುವ ಮೂಲಕ ಮೂಲನಿವಾಸಿಗಳಿಗೆ ದಿಗ್ಬಂಧನ ವಿಧಿಸುವ ಕಾರ್ಯವನ್ನು ಇಲಾಖೆಗಳು ಮಾಡಿದೆ. ಸವಣಾಲು ಗ್ರಾಮದ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಹಿತ್ತಿಲಪೇಲ ಎಂಬಲ್ಲಿ […]

Continue Reading

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಗೊಂದಲಗಳಿಗೆ ತೆರೆ; ಹೊಸ ಮಾರ್ಗಸೂಚಿ

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಪ್ರಕ್ರಿಯೆಯಲ್ಲಿ ಉಂಟಾಗುತ್ತಿದ್ದ ಗೊಂದಲಗಳಿಗೆ ರಾಜ್ಯ ಸರ್ಕಾರ ತೆರೆ ಎಳೆದಿದ್ದು, ಹೊಸ ಮಾರ್ಗಸೂಚಿ ಹೊರಡಿಸಿದೆ. ಸರ್ಕಾರದ ಯಾವುದೇ ಅಧಿಕಾರಿಗಳು, ನೌಕರರನ್ನು ವರ್ಗಾವಣೆ ಮಾಡುವಾಗ ಮುಂದಿನ ಹುದ್ದೆ ಸೂಚಿಸುವುದು ಕಡ್ಡಾಯವಾಗಿರುತ್ತದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರಿಗೆ ಸ್ಥಳ ನಿಯುಕ್ತಿ ಮಾಡದೆ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಸರ್ಕಾರ ಕಳೆದ ಮಾರ್ಚ್ 30 ರಂದು ಸುತ್ತೋಲೆ ಹೊರಡಿಸಿತ್ತು. ಆದರೆ, ಕೆಲವು ಸಂದರ್ಭದಲ್ಲಿ […]

Continue Reading