ಅನ್ ಲೈನ್ ಪ್ರಕರಣದ ಸೈಬರ್ ವಂಚಕರ ಬಂಧನ. 150 ಕೋಟಿ ರೂ. ವಂಚನೆ, 127 ಪ್ರಕರಣಗಳು ದಾಖಲು, ಮೊದಲ ಬಾರಿಗೆ ಸಿಕ್ಕಿಬಿದ್ದ ಆರೋಪಿ.

ಸೈಬರ್ ಅಪರಾಧ ಠಾಣೆ ಪೊಲೀಸರು ಆನ್‌ಲೈನ್‌ ವಂಚನೆ ಪ್ರಕರಣದಲ್ಲಿ ಅಂತರರಾಜ್ಯ ಆರೋಪಿಯೊಬ್ಬನನ್ನು ದಾವಣಗೆರೆ ಪೊಲೀಸರು ಬಂಧಿಸಿದ್ದಾರೆ. ಬಂದಿತ ಆರೋಪಿ ನೂರಾರು ಕೋಟಿ ರೂ. ವಂಚಿಸಿದ್ದಾನೆ ಎನ್ನಲಾಗಿದ್ದು, ಈತನ ಬ್ಯಾಂಕ್‌ ಖಾತೆಯಲ್ಲಿ 18 ಕೋಟಿ ರೂ. ಪತ್ತೆಯಾಗಿದೆ. ಹಾಸನ ಬೇಲೂರಿನ ಶಾಂತಿನಗರದ ನಿವಾಸಿ ಸೈಯದ್ ಅರ್ಫಾತ್ ಪಾಷ ಬಂಧಿತ. ಪ್ರಮುಖ ಆರೋಪಿ ಹೈದರಾಬಾದ್‌ ಮೂಲದ ಉಬೇದ್‌ ತಲೆಮರೆಸಿಕೊಂಡಿದ್ದಾನೆ. ದಾವಣಗೆರೆಯ ಉದ್ಯಮಿಯ ಬ್ಯಾಂಕ್‌ ಖಾತೆಯಲ್ಲಿದ್ದ ರೂ. 52.60 ಲಕ್ಷ ಹಣವನ್ನು ಆರೋಪಿಗಳು ನೆಟ್‌ ಬ್ಯಾಂಕಿಂಗ್‌ ಮೂಲಕ ತಮ್ಮ ಖಾತೆಗೆ ವರ್ಗಾಯಿಸಿಕೊಂಡಿದ್ದರು. […]

Continue Reading

ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಮಂಗಳೂರು ನ್ಯಾಯಾಲಯಕ್ಕೆ ಶರಣು

ಮಂಗಳೂರು: ಹಲವಾರು ಕ್ರಿಮಿನಲ್ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ನ್ಯಾಯಾಲಯಕ್ಕೆ ಶರಣು. ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2017ರಲ್ಲಿ ನಡೆದ ಅಶ್ರಫ್ ಕಲಾಯಿ ಹತ್ಯೆ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಭರತ್ ಕುಮ್ಡೇಲು ಶುಕ್ರವಾರ ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಶರಣಾಗಿದ್ದಾನೆ. ನ್ಯಾಯಾಲಯವು ಆರೋಪಿ ಭರತ್ ಕುಮ್ಡೇಲು ಗೆ ಅ.25ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. 2025ರ ಮೇ 27ರಂದು ಕೊಳತ್ತಮಜಲಿನ ಪಿಕಪ್ ಚಾಲಕ ಅಬ್ದುಲ್ ರಹ್ಮಾನ್ ಕೊಲೆ […]

Continue Reading

ಅಕ್ಟೋಬರ್ 10 ರಿಂದ ಅಕ್ಟೋಬರ್ 18 ರ ತನಕ ರಾಜ್ಯಾದ್ಯಂತ ಸೌಜನ್ಯ ನ್ಯಾಯ ಸಪ್ತಾಹ ಆಚರಿಸಲು ಕರೆ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ , ಕೊಲೆ ಪ್ರಕರಣಕ್ಕೆ ಅಕ್ಟೋಬರ್ 9 ರಂದು 13 ವರ್ಷಗಳು ತುಂಬಿದ್ದು, ಆ ದಿನ ನ್ಯಾಯಕ್ಕಾಗಿ ಜನಾಗ್ರಹ ದಿನವನ್ನಾಗಿ ಧರ್ಮಸ್ಥಳ ದೌರ್ಜನ್ಯ ವಿರೋಧಿ ವೇದಿಕೆ ರಾಜ್ಯಾದ್ಯಂತ 100 ಕ್ಕೂ ಹೆಚ್ಚು ಕಡೆ ಯಶಸ್ವಿಯಾಗಿ ಆಚರಿಸಿದೆ. ಹೋರಾಟದ ಮುಂದುವರಿದ ಭಾಗವಾಗಿ ಅಕ್ಟೋಬರ್ 10 ರಿಂದ ಅಕ್ಟೋಬರ್ 18 ರ ತನಕ ರಾಜ್ಯಾದ್ಯಂತ ಸೌಜನ್ಯ ನ್ಯಾಯ ಸಪ್ತಾಹ ಆಚರಿಸಲು ಕರೆ ನೀಡಿದೆ. ಅಕ್ಟೋಬರ್ 9 ರಂದು ರಾಜ್ಯದಾದ್ಯಂತ ತಾಲೂಕು, ಜಿಲ್ಲಾ, ಹೋಬಳಿ, ಗ್ರಾಮ ಮಟ್ಟದಲ್ಲಿ ವಿವಿಧ […]

Continue Reading

ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣ: ಮಹಾರಾಷ್ಟ್ರ ಮೂಲದ ಆರೋಪಿ ಹಾಗೂ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಮೂವರ ಬಂಧನ. ಒಟ್ಟು 9.01 ಕೆ.ಜಿ ಚಿನ್ನಾಭರಣ, ರೂ. 86,31,220 ನಗದು ವಶ.

ಚಡಚಣ ಪಟ್ಟಣದ ಎಸ್‌ಬಿಐ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಮೂಲದ ಒಬ್ಬ ಆರೋಪಿ ಹಾಗೂ ಈ ಪ್ರಕರಣದಲ್ಲಿ ಆರೋಪಿಗಳಿಗೆ ಅಕ್ರಮ ಶಸ್ತ್ರಾಸ್ತ್ರ ಪೂರೈಸಿದ ಬಿಹಾರದ ಮೂವರನ್ನು ಬಂಧಿಸಲಾಗಿದೆ. ಚಡಚಣ ಎಸ್‌ಬಿಐ ಬ್ಯಾಂಕ್‌ ದರೋಡೆ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು 9.01 ಕೆ.ಜಿ ಬಂಗಾರ ಹಾಗೂ ರೂ. 86,31,220 ನಗದನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಪ್ರಕರಣದಲ್ಲಿ ಪರಾರಿಯಾಗಿರುವ ಇನ್ನುಳಿದ ಆರೋಪಿಗಳ ಗುರುತು ಪತ್ತೆಯಾಗಿದ್ದು, ದರೋಡೆ ಮಾಡಿದ್ದ ಇನ್ನುಳಿದ ಚಿನ್ನಾಭರಣ, ನಗದು ಹಣ ವಶಪಡಿಸಿಕೊಳ್ಳುವ ಕಾರ್ಯ ಪ್ರಗತಿಯಲ್ಲಿದೆ. ಬಂಧಿತ ಮಹಾರಾಷ್ಟ್ರದ […]

Continue Reading

ಅಬಕಾರಿ ಇಲಾಖೆಯವರ ಕಣ್ಣು ತಪ್ಪಿಸಿ ಪರಾರಿಯಾದ ಗಾಂಜಾ ಆರೋಪಿಗಳನ್ನು ಮಾಲು ಸಹಿತ ಲಾಕ್ ಮಾಡಿದ ಬಂಟ್ವಾಳ ನಗರ ಪೊಲೀಸರು

ಇತ್ತೀಚೆಗೆ ಕೆಎ-70, 6904 ಸಂಖ್ಯೆ ಹೊಂದಿರುವ ಬೊಲೋರೋ ಪಿಕಪ್ ವಾಹನದಲ್ಲಿ ಮಾಧಕ ವಸ್ತು(ಗಾಂಜಾ) ಸಾಗಾಟ ಮಾಡುತ್ತಿದ್ದ ಸಮಯ ಅಬಕಾರಿ ಇಲಾಖೆಯವರು ಪಿಕ್ ಅಪ್ ವಾಹನವನ್ನು ಬೆನ್ನಟ್ಟಿಕೊಂಡು ಬಂದಿದ್ದು, ಆರೋಪಿಗಳು ಅವರಿಗೆ ಸಿಗದೆ ಪಿಕ್ ಅಪ್ ನ್ನು ಚಲಾಯಿಸಿಕೊಂಡು ಪರಾರಿಯಾಗಿ ನಂದಾವರದ ರೈಲ್ವೆ ಇಲಾಖೆಗೆ ಸಂಬಂದಿಸಿದ ಖಾಲಿ ಜಾಗದಲ್ಲಿ ಪಿಕಪ್ ವಾಹನ ಬಿಟ್ಟು, ಗಾಂಜಾದ ಸಮೇತ ಪರಾರಿಯಾಗಿ, ಗಾಂಜಾವನ್ನು ತಮ್ಮ ಸ್ನೇಹಿತನಾದ ಮಜೀದ ಎಂಬವರ ಮನೆಯಲ್ಲಿ ಬಚ್ಚಿಟ್ಟು ಅಬಕಾರಿ ಅಧಿಕಾರಿಗಳ ಕಣ್ಣು ತಪ್ಪಿ ಭೂಗತರಾಗಿದ್ದರು. ದಿನಾಂಕ 08-10-2025 ರಂದು […]

Continue Reading

ಕಳೆದ ಎರಡು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಮೊಹಮ್ಮದ್ ಸಿನಾನ್ ಬಂಧನ

ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿ, ತಲೆ ಮರೆಸಿಕೊಂಡಿರುವ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲು ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021 ರಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿ ಕುದ್ರೋಳಿ ನಿವಾಸಿ ಮೊಹಮ್ಮದ್ ಸಿನಾನ್, ಎಂಬಾತನು ಕಳೆದ ಎರಡು ವರ್ಷಗಳಿಂದ ಘನ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಈತನ ವಿರುದ್ದ ಘನ ನ್ಯಾಯಾಲಯವು ವಾರೆಂಟ್ ಹೊರಡಿಸಿದ್ದು, ವಾರೆಂಟ್ ಜ್ಯಾರಿಗೊಳಿಸುವ ಸಲುವಾಗಿ ಈತನ ವಿರುದ್ದ ಬ್ಯೂರೋ ಆಫ್ ಇಮಿಗ್ರೇಶನ್ ನವದೆಹಲಿ, ಭಾರತ ಸರಕಾರ ಇವರಿಂದ ಎಲ್.ಓ.ಸಿ ತೆರೆಯಲಾಗಿತ್ತು. ದಿನಾಂಕ […]

Continue Reading

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ರಾಜಕೀಯ ಬಿರುಗಾಳಿ, ಸಿಎಂ ಹೇಳಿಕೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಸಕ್ರಿಯ, ತೆರೆಮರೆಯಲ್ಲಿ ಲಾಬಿ

ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ದೊಡ್ಡ ರಾಜಕೀಯ ಬಿರುಗಾಳಿಯನ್ನೇ ಎಬ್ಬಿಸಿದೆ. ಸಿಎಂ ಹೇಳಿಕೆ ಬೆನ್ನಲ್ಲೇ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಸಕ್ರಿಯರಾಗಿದ್ದು, ತೆರೆಮರೆಯಲ್ಲಿ ಲಾಬಿ ಚಟುವಟಿಕೆಗಳು ಗರಿಗೆದರಿವೆ. ಒಂದು ಕಡೆ ಹಾಲಿ ಸಚಿವರಿಗೆ ತಮ್ಮ ಸ್ಥಾನ ಉಳಿಸಿಕೊಳ್ಳುವ ತವಕವಾದರೆ, ಮತ್ತೊಂದೆಡೆ ಸಚಿವ ಸ್ಥಾನ ವಂಚಿತ ಶಾಸಕರು ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಸಿಎಂ ಸಿದ್ದರಾಮಯ್ಯ, ಸಂಪುಟ ಪುನಾರಚನೆಯ ಬಗ್ಗೆ ಪರೋಕ್ಷವಾಗಿ ಪ್ರಸ್ತಾಪಿಸಿದ್ದರು. ಇದುವರೆಗೂ ಸೈಲೆಂಟ್ ಆಗಿದ್ದ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಈ ಹೇಳಿಕೆ […]

Continue Reading

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಯಶಸ್ವಿನಿ ಕಾರ್ಡ್ ದಾರರು ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ

ಕರ್ನಾಟಕದ ಸಹಕಾರ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಯಶಸ್ವಿನಿ ಯೋಜನೆಯ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ ನೀಡಲಾಗಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಯಶಸ್ವಿನಿ ಯೋಜನೆಯಡಿಯಲ್ಲಿ ಫಲಾನುಭವಿಗಳಾಗಿರುವ ABARK ಯೋಜನೆಯ ಫಲಾನುಭವಿಗಳಿಗೆ ಯಶಸ್ವಿನಿ ಯೋಜನೆಯಲ್ಲೇ ಪ್ರಯೋಜನವನ್ನು ಪಡೆಯಲು ಸೂಕ್ತ ಹಿಂಬರಹವನ್ನು ನೀಡಬಹುದೆಂದು ಈ ಮೂಲಕ ಆದೇಶಿಸಲಾಗಿದೆ. ಈ ಹಿಂಬರಹವನ್ನು ಖಾಸಗಿ ಆಸ್ಪತ್ರೆಗಳಲ್ಲಿನ ಚಿಕಿತ್ಸೆಯ SAST ರೆಫರಲ್ ನೀಡುವ ಹಂತದಲ್ಲಿ ನೀಡಬಹುದಾಗಿದೆ ಎಂದು ತಿಳಿಸಿದೆ. ಸರ್ಕಾರಿ ಆಸ್ಪತ್ರೆಗಳು […]

Continue Reading

ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಗಂಗಾವತಿಯಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಅವರನ್ನು ಸಿನಿಮೀಯ ರೀತಿಯಲ್ಲಿ ಕಾರು ಡಿಕ್ಕಿ ಹೊಡೆಸಿ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಗಂಗಾವತಿ ನಗರದ ಕೊಪ್ಪಳ ರಸ್ತೆಯ ಲೀಲಾವತಿ ಆಸ್ಪತ್ರೆಯ ಮುಂದುಗಡೆ ಬುಧವಾರ ಬೆಳಿಗ್ಗೆ ಈ ಘಟನೆ ನಡೆದಿದ್ದು, ಜನರನ್ನು ಬೆಚ್ಚಿಬೀಳಿಸಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಲೀಲಾವತಿ ಆಸ್ಪತ್ರೆ ಬಳಿ ತಡರಾತ್ರಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ವೆಂಕಟೇಶ್ ಕುರುಬರ ಎಂಬುವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಲೀಲಾವತಿ ಆಸ್ಪತ್ರೆಯ ಮುಂಭಾಗ ಮಧ್ಯರಾತ್ರಿ ಈ […]

Continue Reading

ಅಂತರ್ ರಾಜ್ಯ ಕುಖ್ಯಾತ ವಾಹನ ಜೋರನ ಬಂಧನ: ಕಳವುಗೈದ ಪಿಕಪ್ ವಾಹನ, ಮತ್ತು ಬೈಕ್ ಪೊಲೀಸ್ ವಶಕ್ಕೆ

ಸುರತ್ಕಲ್ ಪೊಲೀಸ್‌ ಠಾಣೆ ಮತ್ತು ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಾಹನ ಕಳವು ಗೈದಿದ್ದ ಅಂತರ್ ರಾಜ್ಯ ಕಳವು ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ತಿರುವನಂತಪುರಂ ಜಿಲ್ಲೆಯ ರಾತಿಕ್ಕಲ್ ವರ್ಕಲಾ ಗ್ರಾಮದ ನಿವಾಸಿ ಹಂಝ ಕುಪ್ಪಿಕಂಡ ಯಾನೆ ಹಂಝ ಯಾನೆ ಹಂಝ ಪೊನ್ನನ್ (29) ಎಂದು ತಿಳಿದು ಬಂದಿದೆ. ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ ಸಮಯ ಆತನು ಚಲಾಯಿಸುತ್ತಿದ್ದ ಬೈಕ್‌ಗೆ ಯಾವುದೇ ದಾಖಲಾತಿಗಳಿಲ್ಲದೇ ಇದ್ದು, ಬೈಕ್‌ನ್ನು ಮಂಗಳೂರು ದಕ್ಷಿಣ ಪೊಲೀಸ್‌ ಠಾಣಾ […]

Continue Reading