ಸುರತ್ಕಲ್: ಅಜ್ಞಾನಿ ಪೋಷಕ, ಮುಗ್ಧ ಮಗು, ಬಲಿಪಶು ಸಮಾಜ ‘ಖಳನಾಯಕ’ ಯಾರು.?

ಸಮುದಾಯವನ್ನು ಕಟಕಟೆಯಲ್ಲಿ ನಿಲ್ಲಿಸಿದ ಮೂರು ಪ್ರಶ್ನೆಗಳು ಕಳೆದ ವಾರ ಮಂಜನಾಡಿಯ ಉರುಮಣೆ ಅಶ್ರಫ್ ಮಾಲಿಕಿ ಉಸ್ತಾದ್ ಸುಸೈಡ್ ಕೇಸ್ ಸಮುದಾಯದಲ್ಲಿ ಭಾರೀ ತಲ್ಲಣ ಸೃಷ್ಟಿಸಿತ್ತು. ಅವರು ಆತ್ಮಹತ್ಯೆಗೈದರು ಅನ್ನುವ ಕಾರಣಕ್ಕಾಗಿ ಅಲ್ಲ. ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ಸಮುದಾಯದೊಳಗಡೆ ವ್ಯಾಪಕ ಚರ್ಚೆಗೆ ಕಾರಣವಾದವು. ಬ್ಯಾಂಕ್ ಸಾಲದ ಕರಾಳ ಮುಖ, ಮದರಸ ಅಧ್ಯಾಪಕರನ್ನು ಜಮಾಅತ್ ಕಮಿಟಿ ಕಡಿಮೆ ಸಂಬಳದಲ್ಲಿ ದುಡಿಸಿಕೊಳ್ಳುತ್ತಿರುವುದು ಈ ಬಗ್ಗೆ ಚರ್ಚೆಗಳು ನಡೆದವು. ಇವತ್ತು ಮಸೀದಿಗೆ ಅನಗತ್ಯವಾಗಿ ಕೋಟಿಗಟ್ಟಲೆ ದುಡ್ಡು ಸುರಿಸಿ ಬಿಲ್ಡಪ್ ಕೊಡುವ ಕೆಲವು […]

Continue Reading

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಅಪರಾದಿಗೆ 20 ವರ್ಷ ಕಠಿಣ ಸಜೆ; ಅಫ್ರಿದಿ ಯಾನೆ ಅಪ್ಪಿ ಶಿಕ್ಷೆಗೊಳಗಾದ ಅಪರಾಧಿ

ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಗುರುಪುರ ಅಡ್ಡೂರು ಕೆಳಗಿನಕೆರೆಮನೆ ನಿವಾಸಿ ಅಫ್ರಿದಿ (20) ಎಂಬಾತನಿಗೆ 20 ವರ್ಷ ಕಠಿಣ ಸಜೆ ಮತ್ತು ಒಟ್ಟು 50 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ಪೋಕ್ಸೊ ವಿಶೇಷ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. ಬಂಟ್ವಾಳ ತಾಲೂಕಿನ 17 ವರ್ಷದ ಅಪ್ರಾಪ್ತ ಬಾಲಕಿ ಪ್ಯಾಶನ್ ಡಿಸೈನಿಂಗ್ ಕೋರ್ಸ್‌ ಕಲಿಯುತ್ತಿದ್ದಳು. ಈ ಸಂದರ್ಭ ಬಾಲಕಿಗೆ ಇನ್‌ಸ್ಟಾಗ್ರಾಂ ಮೂಲಕ ಕಾರು ಚಾಲಕ ಅಡ್ಡೂರಿನ […]

Continue Reading

ಬಡವರ ಹಸಿವಿನ ಅರಿವಿಲ್ಲದ ಜನರಿಂದ ಬೀದಿ ವ್ಯಾಪಾರಿಗಳ ಮೇಲಿನ ದಬ್ಬಾಳಿಕೆ ಸಂವಿಧಾನ ವಿರೋಧಿ ಕೃತ್ಯ: ಮುನೀರ್ ಕಾಟಿಪಳ್ಳ ತೀವ್ರ ಆಕ್ರೋಶ

ಮಂಗಳೂರು: ಬಡವರ ಬದುಕಿನ ಬವಣೆಯ ಅರಿಯದೆ ಬಡ ಬೀದಿ ವ್ಯಾಪಾರಿಗಳ ಮೇಲೆ ದಬ್ಬಾಳಿಕೆ ನಡೆಸುವುದು ಸಂವಿಧಾನ ವಿರೋಧಿ ಕೃತ್ಯವಾಗಿದೆ ಎಂದು ಸಿಪಿಐಎಂ ದ.ಕ ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಬೀದಿಬದಿ ವ್ಯಾಪಾರಿಗಳ ಮೇಲೆ ಮುಂದುವರಿದ ಧಾಳಿ ಖಂಡಿಸಿ, ಸಂಡೆ ಬಜಾರ್ ವ್ಯಾಪಾರಕ್ಕೆ ಮುಕ್ತ ಅವಕಾಶಕ್ಕೆ ಒತ್ತಾಯಿಸಿ, ದ.ಕ ಜಿಲ್ಲಾ ಬೀದಿಬದಿ ವ್ಯಾಪಾರಸ್ಥರ ಸಂಘ CITU ನೇತೃತ್ವದಲ್ಲಿ ಇಂದು ಆರಂಭಗೊಂಡಿರುವ ಹಗಲು ರಾತ್ರಿ ಧರಣಿ ಸತ್ಯಾಗ್ರಹವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ರಾಜ್ಯದ […]

Continue Reading

ಬೆಳ್ತಂಗಡಿ : ‘ಮೋಕ್ಷ’ ದರ್ಶನ: ಜನ ಹೈರಾಣು!

ಬೆಳ್ತಂಗಡಿಗೆ ನಗರಾಭಿವೃದ್ಧಿ ಪ್ರಾಧಿಕಾರ ಇಲ್ಲ. ಬೆಳ್ತಂಗಡಿ ಜನರಿಗೆ ಸದ್ಯಕ್ಕೆ ಮೂಡಬಿದಿರೆ ನಗರಾಭಿವೃದ್ಧಿ ಪ್ರಾಧಿಕಾರ ಗತಿಯಂತಾಗಿದೆ. ಬೆಳ್ತಂಗಡಿ ದೊಡ್ಡ ತಾಲೂಕು. ಆದರೆ ತಾಲೂಕು ಹೆಡ್ ಕ್ವಾಟರ್ಸ್ ಇನ್ನೂ ಪಟ್ಟಣ ಪಂಚಾಯಿತಿ ಲೆವೆಲ್‍ನಲ್ಲೇ ಇದೆ. ತಾಲೂಕು ಹೆಡ್ ಕ್ವಾಟರ್ಸ್‍ನ ಸಿಟಿ ಲಿಮಿಟ್ಸ್ ಕೂಡಾ ದೊಡ್ಡದಿದ್ದರೂ ಬೆಳ್ತಂಗಡಿಗೆ ನಗರಾಭಿವೃದ್ಧಿ ಪ್ರಾಧಿಕಾರ (ಬೂಡಾ) ಇಲ್ಲ. ಬೆಳ್ತಂಗಡಿ ಜನರಿಗೆ ಸದ್ಯಕ್ಕೆ ಮೂಡಾವೇ (ಮೂಡಬಿದಿರೆ ನಗರಾಭಿವೃದ್ಧಿ ಪ್ರಾಧಿಕಾರ) ಗತಿಯಂತಾಗಿದೆ. ಏಕೆಂದರೆ ಬೆಳ್ತಂಗಡಿಯನ್ನು ಮೂಡುಬಿದಿರೆಯೊಂದಿಗೆ ಲಿಂಕ್ ಮಾಡಲಾಗಿದೆ. ಇದು ಎತ್ತಿಂದೆತ್ತನ ಸಂಬಂಧ ಎಂದೇ ಅರ್ಥವಾಗುತ್ತಿಲ್ಲ. ಒಬ್ಬರು ನಸುಕಿನ […]

Continue Reading

ಅನಿವಾಸಿ ಕನ್ನಡಿಗರಿಗೆ ಪ್ರತ್ಯೇಕ ಸಚಿವಾಲಯ ಸದ್ಯಕ್ಕಿಲ್ಲ; ಆರತಿ ಮಂತ್ರ ಜಪಿಸಿದ ಸೂಟು ಬೂಟು ಕಾ..ಕಾ.. ಗಳ ಕನಸು ಭಗ್ನ

ಬೆಂಗಳೂರು: ಕರ್ನಾಟಕದಲ್ಲಿ ಅನಿವಾಸಿ ಕನ್ನಡಿಗರಿಗಾಗಿ NRI ಪ್ರತ್ಯೇಕ ಸಚಿವಾಲಯ ಅಥವಾ ಇಲಾಖೆಯನ್ನು ಸ್ಥಾಪಿಸುವ ವಿಚಾರದಲ್ಲಿ ಆಡಳಿತಾರೂಢ ಸಚಿವ ಸಂಪುಟದಲ್ಲಿ ‘ಅಪಸ್ವರ’ ಉಂಟಾಗಿದೆ. ಅಸ್ತಿತ್ವದಲ್ಲಿರುವ ಕೈಗಾರಿಕೆ ಹಾಗೂ ಐಟಿ-ಬಿಟಿ ಇಲಾಖೆಗಳ ಕೆಲಸಗಳಲ್ಲಿ ಇದು ಮರುಕಳಿಕೆ (overlap) ಆಗಬಹುದೆಂಬ ಆತಂಕದಿಂದಾಗಿ, ಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಪ್ರಸ್ತಾವನೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ಪ್ರತ್ಯೇಕ ಎನ್ಆರ್‌ಐ ಇಲಾಖೆಯ ಪ್ರಸ್ತಾವನೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅನಿವಾಸಿ ಕನ್ನಡಿಗರಿಗೆ ನೆರವಾಗಲು ಮತ್ತು ರಾಜ್ಯಕ್ಕೆ ವಿದೇಶಿ ಹೂಡಿಕೆಯನ್ನು ಆಕರ್ಷಿಸಲು ಪ್ರತ್ಯೇಕ ಸಚಿವಾಲಯವನ್ನು ರಚಿಸಲು ಮುಂದಾಗಿದ್ದರು. […]

Continue Reading

ಗುರುಪುರ ಹೋಬಳಿಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಸಿಪಿಎಂ ನಿಯೋಗ ಬೇಟಿ

ಗುರುಪುರ ಹೋಬಳಿಯಲ್ಲಿರುವ ನಾಲ್ಕು ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಮತ್ತು ಸಿಬ್ಬಂದಿಗಳ ಕೊರತೆ, ಆರೋಗ್ಯ ಕೇಂದ್ರಗಳ ಔಷಧಿ ಮೂಲಭೂತ ಸೌಕರ್ಯಗಳ ಕೊರತೆಗೆ ಸಂಬಂಧಿಸಿದ ಅಧ್ಯಯನಕ್ಕಾಗಿ ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್ ವಾದಿ ಗುರುಪುರ ವಲಯ ಸಮಿತಿಯು ಸಮಿತಿಯನ್ನು ರಚಿಸಿದ್ದು, ಈ ನಿಯೋಗವು ಗುರುಪುರ ಹೋಬಳಿಯಲ್ಲಿರುವ ಕುಪ್ಪೆಪದವು, ಗಂಜಿಮಠ, ಕೊಂಪದವು, ಕುಡುಪು ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಗಳ ಕುರಿತು ಮಾಹಿತಿ ಸಂಗ್ರಹಿಸಿತು. ಗುರುಪುರ ಹೋಬಳಿಯಲ್ಲಿರುವ ನಾಲ್ಕು ಆರೋಗ್ಯ ಕೇಂದ್ರಗಳ ಪೈಕಿ ಕುಡುಪು ಮತ್ತು ಗಂಜಿಮಠ ಪ್ರಾಥಮಿಕ […]

Continue Reading

ಬೆಳ್ತಂಗಡಿಯಲ್ಲೊಂದು ಅಮಾನವೀಯ ಘಟನೆ: ಪರಿಶಿಷ್ಟ ಜಾತಿ ಬಿ.ಎಲ್.ಒ ಗೆ ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿ

ನ್ಯಾಯಕ್ಕಾಗಿ ತಹಶೀಲ್ದಾರ್, ಪೊಲೀಸ್ ಮೊರೆ ಹೋದ ಬೂತ್ ಮಟ್ಟದ ಅಧಿಕಾರಿ ಚುನಾವಣಾ ಆಯೋಗದ ಆದೇಶದಂತೆ ಸರಕಾರದ ಸೂಚನೆಯಂತೆ ಮತದಾರರ ಪಟ್ಟಿ ಪರಿಷ್ಕರಿಸುವ ಕ್ಷೇತ್ರ ಕಾರ್ಯದಲ್ಲಿದ್ದ ಕರ್ತವ್ಯ ನಿರತ ದಲಿತ ಬಿ.ಎಲ್.ಒ ಒಬ್ಬರಿಗೆ ‌ಜಾತಿವಾದಿ ಮಹಿಳೆಯೊಬ್ಬರು ಜಾತಿಯ ಕಾರಣಕ್ಕಾಗಿಯೇ ಅವಮಾನಿಸಿ ಅಂಗಳದಲ್ಲೇ ನಿಲ್ಲಿಸಿದ ಅಮಾನವೀಯ ಘಟನೆ ಶಿರ್ಲಾಲು ಗ್ರಾಮದಲ್ಲಿ ಜುಲೈ 6 ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಬಿ.ಎಲ್.ಒ ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಅವಮಾನಗೊಂಡ ಅಂಗನವಾಡಿ ಕಾರ್ಯಕರ್ತೆಯಾಗಿದ್ದಾರೆ. 2025 ರಲ್ಲಿ ಶಿರ್ಲಾಲು ಗ್ರಾಮದ ಅಂಗನವಾಡಿ […]

Continue Reading

ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ; ವಿದ್ಯಾರ್ಥಿಗೆ ಹೊಡೆದಿದ್ದ ಶಿಕ್ಷಕಿ ವಿರುದ್ದದ ವಿಚಾರಣೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದನ್ನು ಸಹಿಸುವುದಿಲ್ಲ’ ಎಂದು ಕಟುವಾಗಿ ನುಡಿದಿರುವ ಹೈಕೋರ್ಟ್, ‌ಯುಕೆಜಿ ವಿದ್ಯಾರ್ಥಿನಿಗೆ‌ ಕೋಲಿನಿಂದ ಹೊಡೆದ ಪ್ರಕರಣವೊಂದರಲ್ಲಿ ಶಿಕ್ಷಕಿ ವಿರುದ್ಧದ ಅಧೀನ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಲು ನಿರಾಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ‌ಮಂಗಳೂರಿನ 2ನೇ ಜೆಎಂಎಫ್‌‌ಸಿ ಕೋರ್ಟ್‌ನಲ್ಲಿರುವ ವಿಚಾರಣೆ ರದ್ದುಪಡಿಸಬೇಕು ಎಂದು ಕೋರಿ ಸುರತ್ಕಲ್‌ನ ಹೋಲಿ ಫ್ಯಾಮಿಲಿ ಶಾಲೆಯ‌ ಶಿಕ್ಷಕಿ ಆಶಾ ಕ್ರಾಸ್ತಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರಿಗೆ […]

Continue Reading

ಗ್ರಾಮ ಪಂಚಾಯತ್ ಚುನಾವಣೆ ನಡೆಸುವ ಪ್ರಕ್ರಿಯೆಗೆ ಅಧಿಕೃತವಾಗಿ ವೇಗ; ರಾಜ್ಯ ಚುನಾವಣಾ ಆಯೋಗದಿಂದ ಸಿದ್ಧತೆ, ಮಹತ್ವದ ಸುತ್ತೋಲೆ

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ ನಡೆಸುವ ಪ್ರಕ್ರಿಯೆಗೆ ಈಗ ಅಧಿಕೃತವಾಗಿ ವೇಗ ಸಿಕ್ಕಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಚುನಾವಣಾ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಮಹತ್ವದ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಗ್ರಾಮೀಣ ಭಾಗದಲ್ಲಿ ಈಗಿನಿಂದಲೇ ರಾಜಕೀಯ ಕಾವೇರತೊಡಗಿದೆ. 2027ರ ಮಾರ್ಚ್ ಅಂತ್ಯದೊಳಗೆ ಅವಧಿ ಮುಕ್ತಾಯಗೊಳ್ಳಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳು ಹಾಗೂ ಹೊಸದಾಗಿ ಪುನರ್‌ರಚಿತವಾಗಿರುವ 42 ಗ್ರಾಮ ಪಂಚಾಯಿತಿಗಳಿಗೆ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸುವ ಉದ್ದೇಶದಿಂದ ಜಿಲ್ಲಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಯೋಗ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಚುನಾವಣಾ ಪ್ರಕ್ರಿಯೆಯನ್ನು ಅತ್ಯಂತ […]

Continue Reading

ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡಲು ಒತ್ತಾಯಿಸಿ, ಹೋರಾಟ ಸಮಿತಿಯಿಂದ ಬಜ್ಪೆಯಲ್ಲಿ ಬೃಹತ್ ಮಾನವ ಸರಪಳಿ

ಜಿಲ್ಲೆಯ ಶಾಸಕರು ಕಾರ್ಪೊರೇಟ್ ವೈದ್ಯಕೀಯ ಲಾಬಿಯ ಸೂತ್ರದ ಗೊಂಬೆಗಳು: ಮುನೀರ್ ಕಾಟಿಪಳ್ಳ ಆರೋಪ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆದೇಶ ರದ್ದುಗೊಳಿಸಬೇಕು, ಮಂಗಳೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು, ಬಜ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ‘ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬಜ್ಪೆ ಪೇಟೆಯಲ್ಲಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಮಾನವ ಸರಪಳಿಗೆ […]

Continue Reading