ಮಂಗಳೂರು ಕೋಟಿ ಮೌಲ್ಯದ ಚಿನ್ನದ ಗಟ್ಟಿ ದರೋಡೆ: ಪರಿಚಿತರಿಂದಲೇ ನಡೆದ ಕೃತ್ಯ, ಮಹತ್ವದ ಸುಳಿವು ಲಭ್ಯ

ಮಂಗಳೂರು ನಗರದ ಚಿನ್ನದ ಅಂಗಡಿಯೊಂದರ ಕೆಲಸಗಾರ ಮುಸ್ತಫಾ ಎಂಬವರನ್ನು ದರೋಡೆಕೋರರು ಅಪಹರಿಸಿ 1.5 ಕೋಟಿ ರೂ. ಮೌಲ್ಯದ 1650 ಗ್ರಾಂ ಚಿನ್ನದ ಗಟ್ಟಿಯನ್ನು ದರೋಡೆ ಮಾಡಿದ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.26ರಂದು ರಾತ್ರಿ 8:30ರ ವೇಳೆಗೆ ಅಂಗಡಿಯಿಂದ ಸುಮಾರು 1.5 ಕೋಟಿ ರೂ.ಮೌಲ್ಯದ 1,650 ಗ್ರಾಂ ತೂಕದ ಮೆಲ್ಟ್ ಮಾಡಿದ ಚಿನ್ನವನ್ನು ಶುದ್ಧ ಚಿನ್ನವಾಗಿ ಪರಿವರ್ತಿಸಲು ನಗರದ ರಥಬೀದಿಯ ಸಂತೋಷ್ ಎಂಬವರ ಚಿನ್ನದ ಅಂಗಡಿಗೆ ಮುಸ್ತಫಾ ತನ್ನ ಸ್ಕೂಟರ್‌ನ ಸೀಟಿನ ಅಡಿಯ ಬಾಕ್ಸ್ ನಲ್ಲಿಟ್ಟು […]

Continue Reading

ಹೊಸ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸ್ವೀಕಾರ, ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡ್ ರದ್ದು ಮಾಡುವುದಿಲ್ಲ: ಸಚಿವ ಕೆ.ಎಚ್ ಮುನಿಯಪ್ಪ

ಹೊಸ ಬಿಪಿಎಲ್ ಕಾರ್ಡುಗಳಿಗೆ ಅರ್ಜಿ ಸ್ವೀಕಾರ, ವಿತರಣೆ ಪ್ರಕ್ರಿಯೆ ತಿಂಗಳಲ್ಲಿ ಆರಂಭಿಸಲಾಗುತ್ತದೆ ಎಂದು ಗ್ರಾಹಕ ವ್ಯವಹಾರಗಳ ಸಚಿವ ಕೆ. ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಈಗಾಗಲೇ ರಾಜ್ಯದಲ್ಲಿ 13 ಲಕ್ಷ ಅನರ್ಹ ಕಾರ್ಡುಗಳನ್ನು ಹುಡುಕಿ, ಪಟ್ಟಿ ಸಿದಪಡಿಸಿದೇವೆ. ಅನರ್ಹ ಬಿಪಿಎಲ್ ಕಾರ್ಡುದಾರರಿದ್ದರೆ ಮುಂದೆ ಬಂದು ಕಾರ್ಡುಗಳನ್ನು ಎಪಿಎಲ್ ಮಾಡಿಸಬೇಕು. ಇದರಿಂದ ಅರ್ಹ ಬಿಪಿಎಲ್ ಫಲಾನುಭವಿಗಳಿಗೆ ಸಹಾಯವಾಗುತ್ತದೆ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಕಾರ್ಡುಗಳನ್ನು ರದ್ದು ಮಾಡುವುದಿಲ್ಲ. ಒಟ್ಟು 1.28 ಕೋಟಿ ಬಿಪಿಎಲ್ ಕಾರ್ಡ್ ಗಳು ರಾಜ್ಯದಲ್ಲಿವೆ. ಈ ಪೈಕಿ […]

Continue Reading

ವಿಶ್ವಸಂಸ್ಥೆಯಲ್ಲಿ ಇಸ್ರೇಲಿ ನಾಯಕ ಮಾತನಾಡುತ್ತಿದ್ದಂತೆ ಸಭಾಂಗಣದಲ್ಲಿ ಕೂಗಾಟ, ಧಿಕ್ಕಾರ, ಬಹಿಷ್ಕಾರದ ಘೋಷಣೆ.

ಗಾಜಾದಲ್ಲಿ ಹಮಾಸ್ ವಿರುದ್ಧ ಇಸ್ರೇಲ್ ತನ್ನ ಕೆಲಸವನ್ನು ಮುಗಿಸಬೇಕಾಗಿದೆ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಶುಕ್ರವಾರ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಹೇಳಿದ್ದಾರೆ. ಗಾಜಾದಲ್ಲಿ ವಿನಾಶಕಾರಿ ಯುದ್ಧವನ್ನು ಕೊನೆಗೊಳಿಸಲು ಒಪ್ಪದ ಹಿನ್ನೆಲೆಯಲ್ಲಿ ವಿವಿಧ ರಾಷ್ಟ್ರಗಳ ಪ್ರತಿಭಟನೆ ನಡುವೆಯೂ ವಿಶ್ವಸಂಸ್ಥೆಯಲ್ಲಿ ಉದ್ಧಟತನದಿಂದ ಭಾಷಣ ಮಾಡಿದ್ದಾರೆ. ವಿಶ್ವಸಂಸ್ಥೆಯಲ್ಲಿ ಅವರು ಭಾಷಣ ಮಾಡಲು ತಯಾರಾಗುತ್ತಿದ್ದಂತೆಯೇ ಡಜನ್ ಗಟ್ಟಲೇ ರಾಷ್ಟ್ರಗಳ ಪ್ರತಿನಿಧಿಗಳು ವಿಶ್ವಸಂಸ್ಥೆ ಸಾಮಾನ್ಯ ಸಭೆಯಿಂದ ಹೊರನಡೆದಿದ್ದಾರೆ. ನಂತರ ನೆತನ್ಯಾಹು ಭಾಷಣ ಮಾಡಿದ್ದಾರೆ. ಇಸ್ರೇಲಿ ನಾಯಕ ಮಾತನಾಡುತ್ತಿದ್ದಂತೆ ಸಭಾಂಗಣದಲ್ಲಿ ಕೂಗಾಟ, ಧಿಕ್ಕಾರದ […]

Continue Reading

ಬಿಜೆಪಿ ಶೀತಲ ಸಮರಕ್ಕೆ ಬ್ರೇಕ್ ಹಾಕಲು ಮುಂದಾದ ಬಿಜೆಪಿ ಹೈಕಮಾಂಡ್.. ಹಾರ್ಡ್ ಕೋರ್ ಹಿಂದುತ್ವವಾದಿ ಯತ್ನಾಳ್ ಮರಳಿ ಬಿಜೆಪಿ ಸೇರ್ಪಡೆಗೆ ರಂಗ ಸಜ್ಜು.!

ಮೋದಿ -ಶಾ ಕೊಟ್ಟ ಟಾಸ್ಕ್ ಏನಿದು.? ರಾಜ್ಯದಲ್ಲಿ ಬಿಜೆಪಿ ಮೂರು ಹೋಳಾಗಿದೆ. ಮನೆಯೊಂದು ಮೂರು ಬಾಗಿಲು ಅನ್ನುವಂತೆ ಬಿಜೆಪಿ ನಾಯಕರೊಳಗೆ ನಡೆಯುತ್ತಿರುವ ಹಗ್ಗಜಗ್ಗಾಟ ಕೇಂದ್ರದ ಬಿಜೆಪಿ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. 2028 ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಏರಬೇಕಾದರೆ ಬಿಜೆಪಿಯೊಳಗೆ ನಡೆಯುತ್ತಿರುವ ಬಣ ರಾಜಕಾರಣಕ್ಕೆ ಅಂತ್ಯ ಹಾಡಬೇಕಿದೆ. ಈ ನಿಟ್ಟಿನಲ್ಲಿ ಕೇಂದ್ರ ಬಿಜೆಪಿ ಹೈಕಮಾಂಡ್ ಕಸರತ್ತು ಆರಂಭಿಸಿದೆ. ಕಾಂಗ್ರೆಸ್ ಪಕ್ಷದೊಳಗೆ ನಡೆಯುತ್ತಿರುವ ಆಂತರಿಕ ಕಚ್ಚಾಟದ ಲಾಭ ಪಡೆಯಲು ಬಿಜೆಪಿ ಯಶಸ್ವಿಯಾಗುತ್ತಿಲ್ಲ ಅನ್ನುವುದು ಕೇಂದ್ರದ […]

Continue Reading

ಪುತ್ತೂರಿಗೆ ಆಡಳಿತ ಪಕ್ಷದ ಎಂಎಲ್ಎ ಇದ್ದಾರೆ. ಆದರೆ ತಹಶೀಲ್ದಾರ್ ನಾಪತ್ತೆ.

ಪುತ್ತೂರಿನ ವಾಸ್ತುವಿಗೂ ಕೂಡಲಗಿ ಜಾತಕಕ್ಕೂ ಯಾಕೋ ಕೂಡಿ ಬರುತ್ತಿಲ್ಲ. ಇದು ಪುತ್ತೂರಿಗೆ ಅಂಟಿದ ಶನಿಕಾಟವೋ ಏನೋ..? ಪುತ್ತೂರು ತಹಶೀಲ್ದಾರ್ ಸೀಟು ಖಾಲಿ ಇದೆ. ಪುತ್ತೂರಿಗೆ ಆಡಳಿತ ಪಕ್ಷದ ಎಂಎಲ್ಎ ಇದ್ದಾರೆ. ಆದರೆ ತಹಶೀಲ್ದಾರ್ ಇಲ್ಲ. ಇತ್ತೀಚೆಗೆ ನಾಪತ್ತೆಯಾಗಿದ್ದಾರೆ. ಪುರಂದರ ಹೆಗ್ಡೆ ಮನೆಗೆ ಹೋದ ಮೇಲೆ ಪುತ್ತೂರು ತಹಶೀಲ್ದಾರ್ ಚೇಂಬರಿನಲ್ಲಿ ಕೂತವರು ಕೂಡಲಗಿ ಎಂಬವರು. ಪುತ್ತೂರಿನ ವಾಸ್ತುವಿಗೂ ಕೂಡಲಗಿ ಜಾತಕಕ್ಕೂ ಯಾಕೋ ಕೂಡಿ ಬರುತ್ತಿಲ್ಲ. ಇದು ಪುತ್ತೂರಿಗೆ ಅಂಟಿದ ಶನಿಕಾಟವೋ ಏನೋ..? ದಂಡಾಧಿಕಾರಿ ಪರಾರಿಯಾಗಿದ್ದಾರೆ! ಪುತ್ತೂರು ಶಾಸಕರಾಗಿ ಅಶೋಕ್ […]

Continue Reading

ಲಂಚ ಪ್ರಕರಣದ ಆರೋಪಿ ಪುತ್ತೂರು ತಹಶೀಲ್ದಾರ್ ಎಸ್.ಬಿ ಕೂಡಲಗಿಗೆ ಲಭಿಸದ ಜಾಮೀನು.

ಲೋಕಾಯುಕ್ತ ಪರವಾಗಿ ವಾದ ಮಂಡಿಸಿದ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ಪುತ್ತೂರು: ಲಂಚ ಪಡೆದ ಪ್ರಕರಣದಲ್ಲಿ ಆರೋಪಿಯಾಗಿದ್ದು, ತಲೆಮರೆಸಿಕೊಂಡಿರುವ ಪುತ್ತೂರು ತಾಲೂಕು ತಹಶೀಲ್ದಾರ್‌ ಎಸ್‌.ಬಿ. ಕೂಡಲಗಿಗೆ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಜಾಮೀನು ನಿರಾಕರಿಸಿದೆ. ಸೆಪ್ಟಂಬರ್ 25ರಂದು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯ ಅವರ ವಿಚಾರಣೆ ನಡೆಸಿ ಜಾಮೀನು ನಿರಾಕರಿಸಿರುತ್ತದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದ ಮಂಡಿಸಿದ್ದರು. ಜಮೀನಿನ ನಿರಾಕ್ಷೇಪಣ […]

Continue Reading

ಹಿಂದೂ ವಿಧವೆಯ ಮರಣ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಸಂದುತ್ತದೆ: ಸುಪ್ರೀಂ ಕೋರ್ಟ್

ಮಕ್ಕಳಿಲ್ಲದ ಹಿಂದೂ ವಿಧವೆಯ ಮರಣ ನಂತರ, ಆಕೆಯ ಆಸ್ತಿ ಆಕೆಯ ಹೆತ್ತವರ ಬದಲು ಆಕೆಯ ಗಂಡನ ಕುಟುಂಬಕ್ಕೆ ಸಂದುತ್ತದೆ ಎಂದು ಹೇಳುವ ಹಿಂದೂ ಉತ್ತರಾಧಿಕಾರ ಕಾಯ್ದೆಯ ನಿಬಂಧನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಹಿಂದೂ ಕಾನೂನಿನಡಿಯಲ್ಲಿ ಮಹಿಳೆ ಮದುವೆಯಾದಾಗ, ಆಕೆಯ ಗೋತ್ರವೂ ಬದಲಾಗುತ್ತದೆ ಎಂದು ಹೇಳಿದೆ. ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ಹಿಂದೂ ಸಮಾಜ ಕನ್ಯಾದಾನ ಎಂಬ ಪರಿಕಲ್ಪನೆಯನ್ನು ಹೊಂದಿದೆ, ಅದರ ಅಡಿಯಲ್ಲಿ ಒಬ್ಬ ಮಹಿಳೆ ಮದುವೆಯಾದಾಗ, ಅವಳ […]

Continue Reading

ಅಹಂಭಾವವಿಲ್ಲದ, ಜನಪರ ಅಧಿಕಾರಿ ರವಿಚಂದ್ರ ನಾಯಕ್; ಮಂಗಳೂರು ಮಹಾನಗರ ಪಾಲಿಕೆಯ ಹೆಮ್ಮೆಯ ಅಧಿಕಾರಿ

ಮಂಗಳೂರು ಮಹಾನಗರ ಪಾಲಿಕೆಯ ಕಮೀಷನರ್ ರವಿಚಂದ್ರ ನಾಯಕ್ ಅವರ ಇತ್ತೀಚಿನ ನಡವಳಿಕೆಯೊಂದು ಭಾರೀ ಸುದ್ಧಿಗೆ ಕಾರಣವಾಗಿದೆ. ಸರಕಾರಿ ಸಣ್ಣ ಪುಟ್ಟ ಹುದ್ದೆಯಲ್ಲಿರುವವರು ನಾಗರೀಕರನ್ನು, ಸಿಬ್ಬಂದಿಗಳನ್ನು ಅಸಡ್ಡೆಯಿಂದ ನೋಡುವ ಈ ಕಾಲಘಟ್ಟದಲ್ಲಿ ಮಹಾನಗರ ಪಾಲಿಕೆಯ ಉನ್ನತ ಹುದ್ದೆಯಲ್ಲಿರುವ ರವಿಚಂದ್ರ ನಾಯಕ್ ಅವರು ಇತ್ತೀಚೆಗಷ್ಟೇ ಪೌರ ಕಾರ್ಮಿಕರಿಂದ ಸನ್ಮಾನ ಪಡೆಯುತ್ತಿದ್ದ ಸಂದರ್ಭದಲ್ಲಿ ಪೌರ ಕಾರ್ಮಿಕರು ಆಯುಕ್ತರ ಕಾಲಿಗೆ ನಮಸ್ಕರಿಸಿದಾಗ ಕೂಡಲೇ ಪೌರ ಕಾರ್ಮಿಕರ ಕಾಲು ಹಿಡಿದು ಕೈ ಮುಗಿದ ವಿದ್ಯಮಾನ ನಡೆದಿದೆ. ಪೌರ ಕಾರ್ಮಿಕರು ನಮ್ಮ ನಿಮ್ಮಂತಹ ಮನುಷ್ಯರು, ಅವರ […]

Continue Reading

ಬಂಟ್ವಾಳ ಪುರಸಭೆಯಲ್ಲಿ ದಿನಗೂಲಿ ನೌಕರರದ್ದೇ ಕಾರುಬಾರು. ಬಂಟ್ವಾಳ ಶಾಸಕರೇ ಎಲ್ಲಿದ್ದೀರಾ.?

ಇದು ಬಂಟ್ವಾಳ ಪುರಸಭೆಯ ಕಥೆ ವ್ಯಥೆ . ಇಲ್ಲಿ ಅಧಿಕಾರಿಗಳು ಅನ್ನಿಸಿಕೊಂಡವರು ನಾಮ್ ಕಾವಸ್ತೆ ಮಾತ್ರ. ಆದರೆ ಕಾರುಬಾರು ನಡೆಯುತ್ತಿರುವುದೆಲ್ಲವೂ ದಿನಗೂಲಿ ನೌಕರರದ್ದೇ. ಬಂಟ್ವಾಳ ಪುರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡಲು ಮೂಲ ಕಾರಣವೇ ಈ ದಿನಗೂಲಿ ನೌಕರರು. ಇವರನ್ನು ಹದ್ದುಬಸ್ತಿನಲ್ಲಿಡಬೇಕಾದ ಅಧಿಕಾರಿ ವರ್ಗ ಇವರ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಮಾತ್ರ ಅಚ್ಚರಿ ಪಡುವಂತದ್ದು. ಬಂಟ್ವಾಳ ಪುರಸಭೆಯ ಒಳಹೊಕ್ಕರೆ ಯಾವೊಂದು ಕೆಲಸವೂ ಸಲೀಸಾಗಿ ನಡೆಯುತ್ತಿಲ್ಲ. ಖಾತಾ, ಜನನ ಪ್ರಮಾಣ ಪತ್ರ, ಮರಣ ಪ್ರಮಾಣ ಪತ್ರ, ಲೈಸೆನ್ಸ್ ಯಾವ ಕೆಲಸವೂ ಇಲ್ಲಿ […]

Continue Reading

ಸುಹಾಸ್ ಶೆಟ್ಟಿ ಮರ್ಡರ್: ಎನ್ ಐಎ ತನಿಖೆ ಠುಸ್!

ಕರಾವಳಿಯ ಆ ಎರಡು ಹತ್ಯೆಗಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ದೊಡ್ಡ ಸುದ್ದಿ ಮಾಡಿತ್ತು. ಆ ಇಬ್ಬರು ಯಾರು ಗೊತ್ತೆ? ಹಿಂದೂ ಕಾರ್ಯಕರ್ತ ಕಂ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್, ಮತ್ತೊಬ್ಬ ಹಿಂದೂ ಕಾರ್ಯಕರ್ತ ಕಂ ರೌಡಿಶೀಟರ್ ಸುಹಾಸ್ ಶೆಟ್ಟಿ. ಕರಾವಳಿಯಲ್ಲಿ ನಿತ್ಯ ನಿರಂತರವಾಗಿ ಧರ್ಮ ದಂಗಲ್ ಗೆ ಸರಣಿ ಹತ್ಯೆ ನಡೆಯುತ್ತಿತ್ತು. ಕೊಳತ್ತಮಜಲಿನ ರಹೀಂ ಹತ್ಯೆಯ ನಂತರ ಜಿಲ್ಲೆಯಲ್ಲಿ ಖಡಕ್ಕ್ ಪೋಲಿಸ್ ಆಫೀಸರ್ಸ್ ಚಾರ್ಜ್ ತೆಗೆದುಕೊಂಡ ನಂತರ ಕರಾವಳಿ ಒಂಥರಾ ತಣ್ಣನೆ ಮಲಗಿತ್ತು. 2022 ಜುಲೈ 19 ರಂದು […]

Continue Reading