ಬೆಳ್ತಂಗಡಿ: ಚಿನ್ನದ ಕರಿಮಣಿ ಸರ ಕಳ್ಳತನ ಪ್ರಕರಣ: ಆರೋಪಿ ಉಮೇಶ್ ಗೌಡನಿಗೆ ಮೂರು ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, 5,000 ಸಾವಿರ ರೂ. ದಂಡ

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯೋಬ್ಬರ ಕುತ್ತಿಗೆಯಿಂದ ಚಿನ್ನದ ಕರಿಮಣಿ ಸರ ಎಳೆದು ತುಂಡರಿಸಿ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯ ನಿರೀಕ್ಷಕರಾದ ಸುಬ್ಬಾಪುರ್ ಮಠ್ ದೋಷರೋಪಣ ಪಟ್ಟಿಯನ್ನು ಮಾನ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಸಂದೇಶ್ ರವರು ಆರೋಪಿಯ ಮೇಲೆ ಆರೋಪ ಸಾಬೀತಾದ ಕಾರಣ, ಆರೋಪಿ ಉಮೇಶ್ ಗೌಡ ಎಂಬವರಿಗೆ ಮೂರು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ, ಹಾಗೂ 5,000 […]

Continue Reading

ವಾಹನಗಳ ನಂಬರ್ ಪ್ಲೇಟ್​ ಮೇಲೆ ಯಾವುದೇ ಸಂಘಸಂಸ್ಥೆಗಳ ಹೆಸರು, ಲಾಂಛನ ಹಾಕುವಂತಿಲ್ಲ; ಹೆಸರು, ಲಾಂಛನ ಹಾಕಿಸಿದ್ರೆ ಬೀಳುತ್ತೆ ಭಾರಿ ದಂಡ

ಬೆಂಗಳೂರಿನಲ್ಲಿ ಕಾರು, ಬೈಕ್ ನಂಬರ್ ಪ್ಲೇಟ್ ಮೇಲೆ ಸಂಘ-ಸಂಸ್ಥೆಗಳ ಹುದ್ದೆಗಳ ಹೆಸರು, ಲಾಂಛನ ಹಾಕಿದರೆ ಮೊದಲ ಸಲ 500 ರೂ. ಎರಡನೇ ಸಲ 1000 ರೂಪಾಯಿ ದಂಡ ವಿಧಿಸಲು ಮುಂದಾಗಿದೆ. ನಿಯಮಗಳ ಪ್ರಕಾರ ಕಾರು, ಬೈಕ್ ಅಥವಾ ಇತರ ವಾಹನಗಳ ನಂಬರ್ ಪ್ಲೇಟ್ ಮೇಲೆ ಯಾವುದೇ ಸಂಘ ಸಂಸ್ಥೆಗಳ ಹೆಸರು, ಲಾಂಛನ ಹಾಕುವಂತಿಲ್ಲ. ಸರ್ಕಾರದ ಅಧಿಕೃತ ವಾಹನಗಳಲ್ಲಿ ಮಾತ್ರ ಹೆಸರು ಹಾಗೂ ಲಾಂಛನ ಬಳಸಬಹುದಾಗಿದೆ. ಒಂದು ವೇಳೆ ವಾಹನಗಳ ನಂಬರ್ ಪ್ಲೇಟ್ ಮೇಲೆ, ನಾನು ಆ ಸಂಘದ […]

Continue Reading

ಸರ್ಕಾರದ ವಿರುದ್ಧ ‘ಕ್ರೈಸ್ತ’ರ ರೊಚ್ಚು; ಸಿದ್ದ ನಿರ್ಧಾರಕ್ಕೆ CSS ಆಕ್ರೋಶ, ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ; ಸರ್ಕಾರದ ನಡೆಗೆ CSS ಆಕ್ಷೇಪ

ಜಾತಿ ಸೃಷ್ಟಿ; ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ; ಜಾತಿ ಸಂಘರ್ಷ ಬೇಡ; ಸಿಎಂಗೆ ವಕೀಲ ಶಾಜಿ ವರ್ಗೀಸ್ ಪತ್ರ ಕ್ರಿಶ್ಚಿಯನ್ ಸೇವಾ ಸಂಘ (CSS) ಪತ್ರದ ಸಂಚಲನ; ಹೀಗಿದೆ ಶಾಜಿ ಸಲಹೆ ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ […]

Continue Reading

ಯೋಗದ ಹೆಸರಲ್ಲಿ ಭೋಗ.!ಯೋಗ ಗುರುವಿನಿಂದ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಆರೋಪಿ ನಿರಂಜನಾ ಮೂರ್ತಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಯೋಗ ದ ಹೆಸರಲ್ಲಿ ಯೋಗಗುರುವಿನ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಕಿರುಕುಳ ನೀಡಿದ ಪ್ರಕರಣ ದಾಖಲಾಗಿದೆ. ರಾಜರಾಜೇಶ್ವರಿ ನಗರ ಪೊಲೀಸರಿಂದ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ಬಂಧನವಾಗಿದೆ.ಆರೋಪಿ ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತಿದ್ದ ಎನ್ನಲಾಗಿದೆ. ಯೋಗ ಸೆಂಟರ್ ಗೆ ಯೋಗದ ಕ್ಲಾಸಿಗೆ ಬರುತ್ತಿದ್ದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದ ಅಡಿಯಲ್ಲಿ ಬಂಧನ ಮಾಡಲಾಗಿದೆ. ಹದಿನೇಳು ವರ್ಷದ ಬಾಲಕಿಗೆ […]

Continue Reading

ಯತ್ನಾಳ್ ಹೇಳಿಕೆ ಸನಾತನ ಹಿಂದುತ್ವದ ಅಪಾಯಕಾರಿ ಸಿದ್ಧಾಂತದ ದ್ಯೋತಕವಾಗಿದೆ: ಶೇಖರ್ ಲಾಯಿಲ

ನಾಡಹಬ್ಬ ಮೈಸೂರು ದಸರಾವನ್ನು ವಿವಾದಾತ್ಮಕ ವಿಷಯವನ್ನಾಗಿಸಿದ ಬಿಜೆಪಿ, ಸಂಘಪರಿವಾರಕ್ಕೆ ರಾಜ್ಯ ಹೈಕೋರ್ಟ್ ತೀರ್ಪು ತೀವ್ರ ಹಿನ್ನಡೆಯಾದ ಹಿನ್ನೆಲೆಯಲ್ಲಿ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದೆ. ಚಾಮುಂಡೇಶ್ವರಿಗೆ ದಲಿತ ಮಹಿಳೆಯರು ಹೂವು ಹಾಕಲು ಅರ್ಹರಲ್ಲ ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನ ಹೇಳಿಕೆ ಸನಾತನ ಹಿಂದುತ್ವದ ನಿಜವಾದ ರೂಪ. ಇದು ಹಿಂದೂ ಧರ್ಮದ ಅಸಮಾನತೆಯನ್ನು ಮತ್ತೊಮ್ಮೆ ಬಹಿರಂಗ ಪಡಿಸಿದಂತಾಗಿದೆ. ದಸರಾ ಉತ್ಸವವನ್ನು ನಾಡಿನ ಹಿರಿಯ ಸಾಹಿತಿ, ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಬಾನು ಮುಷ್ತಾಕ್ ಅವರು ಉದ್ಘಾಟಿಸುತ್ತಿರುವುದನ್ನು ರಾಜ್ಯ ಹೈಕೋರ್ಟ್ […]

Continue Reading

ನಕಲಿ ವೈದ್ಯಕೀಯ ದಾಖಲೆ ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನ

ಆರೋಪಿಗಳಿಂದ ನಕಲಿ ದಾಖಲೆ ಪತ್ರ, ನಕಲಿ ದಾಖಲೆ ಸೃಷ್ಟಿಸಲು ಬಳಸುತ್ತಿದ್ದ ಉಪಕರಣಗಳ ಜಪ್ತಿ ನಕಲಿ ವೈದ್ಯಕೀಯ ದಾಖಲೆಗಳನ್ನು ಸಲ್ಲಿಸಿ, ಅಂಗವಿಕಲ ಕೋಟಾದ ಮೀಸಲಾತಿ ಅಡಿ ಸರ್ಕಾರಿ ವೈದ್ಯಕೀಯ ಸೀಟು ಪಡೆಯಲು ಯತ್ನಿಸಿದ್ದವರಿಗೆ ನೆರವು ನೀಡಿದ್ದ ಮೂವರು ಆರೋಪಿಗಳನ್ನು ಮಲ್ಲೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ನಂದಿನಿ ಲೇಔಟ್‌ನ ನಿವಾಸಿ ಭರಮಪ್ಪ, ಹೊಸಪೇಟೆಯ ಉಮೇಶ್ ಚೌಧರಿ ಹಾಗೂ ಕುಕನೂರು ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಾಯಕ ಸುಧಾಕರ್ ಬಂಧಿತ ಆರೋಪಿಗಳು. ಆರೋಪಿಗಳಿಂದ ನಕಲಿ ದಾಖಲೆಗಳು ಹಾಗೂ ನಕಲಿ ದಾಖಲೆ […]

Continue Reading

ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಾಗಾಟ ಪತ್ತೆ. ಡೈವರ್ ಪೊಲೀಸರು ವಶ; ಕಾರಿನಲ್ಲಿದ್ದ ಮೂವರು ಆರೋಪಿಗಳು ಪರಾರಿ

ಕಾರಿನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿ ಎಲೆಕ್ಟ್ರಾನಿಕ್ ಸಿಟಿ ನಿವಾಸಿ ನಹೀಮ್ ಅಹ್ಮದ್ ಎಂಬಾತನನ್ನು ಗಿರಿನಗರ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿ ನಹೀಮ್ ವಶವಿದ್ದ 22 ಕೆ.ಜಿ. ಗಾಂಜಾ, ರೂ. 2.90 ಸಾವಿರ ನಗದು, 88 ಗ್ರಾಂ ಚಿನ್ನಾಭರಣ, ಐದು ಮೊಬೈಲ್ ಫೋನ್‌ಗಳು, ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಮೂರು ಮಂದಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. 16-09-2025 ರಂದು ಸಂಜೆ 5ರ ಸುಮಾರಿಗೆ ಬನಶಂಕರಿ ಸಂಚಾರ ಠಾಣೆ ಪೊಲೀಸರು […]

Continue Reading

ಪುತ್ತೂರು: ಮೊಬೈಲ್ ಟವರಿಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ ಪ್ರಕರಣ: ಆರೋಪಿಯ ಬಂಧನ, ಬ್ಯಾಟರಿ ವಶ

ಪುತ್ತೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯ ನರಿಮೊಗರು ಗ್ರಾಮದ ಪುರುಷರಕಟ್ಟೆ ಎಂಬಲ್ಲಿ ಮೊಬೈಲ್ ಟವರಿಗೆ ಅಳವಡಿಸಿದ್ದ ಬ್ಯಾಟರಿಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ದಿನಾಂಕ 13.09.2025 ರಂದು ಅ ಕ್ರ: 79/2025 ಕಲಂ: 331(3), 331(4), 305 BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪುತ್ತೂರು ಠಾಣಾ ಪೊಲೀಸರು ಕೇರಳದ ಕೊಲ್ಲಂ ಮೂಲದ ನಿವಾಸಿ ಇಟ್ಟಿ ಫನಿಕ್ಕರ್ ಎಂಬಾತನನ್ನು ಬಂಧಿಸಿದ್ದಾರೆ. ವಶಕ್ಕೆ ಪಡೆದೆ ಆರೋಪಿ ಪನಿಕ್ಕರ್ ನನ್ನು ವಿಚಾರಣೆ ನಡೆಸಿ, ಆರೋಪಿಯು ಕಳವುಗೈದ ಬ್ಯಾಟರಿಗಳನ್ನು ಪೊಲೀಸರು […]

Continue Reading

ಸರಕಾರಿ ಡಿಪ್ಲೋಮಾ ಕೋರ್ಸ್ ಗಳತ್ತ ಕಣ್ಣು ಹಾಯಿಸುತ್ತಿಲ್ಲ ವಿದ್ಯಾರ್ಥಿಗಳು

ಈ ವರ್ಷ 9000 ಕ್ಕೂ ಅಧಿಕ ಸೀಟುಗಳು ವಿದ್ಯಾರ್ಥಿಗಳಿಲ್ಲದೆ ಖಾಲಿ..ಖಾಲಿ ರಾಜ್ಯದ ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಳೆದ ಮೂರು ವರ್ಷಗಳಿಂದ ಡಿಪ್ಲೋಮಾ ಕೋರ್ಸ್ ಗಳಿಗೆ ವರ್ಷದಿಂದ ವರ್ಷಕ್ಕೆ ಬೇಡಿಕೆ ಕಡಿಮೆಯಾಗುತ್ತಿದ್ದು, ಈ ವರ್ಷ 9,349 ಕ್ಕೂ ಹೆಚ್ಚು ಸೀಟುಗಳು ಖಾಲಿ ಉಳಿದಿವೆ. ಕಟ್ಟಡಗಳು, ಪ್ರಯೋಗಾಲಯಗಳು ಮತ್ತು ಪೂರ್ಣ ಪ್ರಮಾಣದ ಅಧ್ಯಾಪಕರು ಸೇರಿದಂತೆ ಮೂಲಸೌಕರ್ಯಗಳ ಕೊರತೆಯಿಂದಾಗಿ ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳು ವಿದ್ಯಾರ್ಥಿಗಳನ್ನು ಆಕರ್ಷಿಸುವಲ್ಲಿ ವಿಫಲವಾಗುತ್ತಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಜ್ಯಾದ್ಯಂತ ಒಟ್ಟು 109 ಸರಕಾರಿ ಪಾಲಿಟೆಕ್ನಿಕ್ ಕಾಲೇಜುಗಳಿದ್ದು, […]

Continue Reading

ಕಾಸರಗೋಡು: 14 ಮಂದಿ ಪುರುಷರಿಂದ 16 ರ ಅಪ್ರಾಪ್ತ ಬಾಲಕನಿಗೆ ಲೈಂಗಿಕ ದೌರ್ಜನ್ಯ, ಪ್ರಕರಣ ದಾಖಲು.

ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ನಾಚಿಕೆಗೇಡಿನ ಘಟನೆ ಕಾಸರಗೋಡು ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಲ್ಲಿ 16 ವರ್ಷದ ಬಾಲಕನ ಮೇಲೆ 14 ಮಂದಿ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಹಾಯಕ ಶಿಕ್ಷಣ ಅಧಿಕಾರಿ, ರೈಲ್ವೆ ಪೊಲೀಸ್ ಪಡೆಯ ಸದಸ್ಯ ಸೇರಿದಂತೆ ಈ ಪ್ರಕರಣದಲ್ಲಿ ಪೊಲೀಸರು ಒಂಬತ್ತು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಲಿಪಶು ಬಾಲಕನ ತಾಯಿ ತನ್ನ ಮಗನ ಚಟುವಟಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಂತರ ತಾಯಿ ಚೈಲ್ಡ್ ಲೈನ್ […]

Continue Reading