ಸರಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈ ಬಿಡಲು ಒತ್ತಾಯಿಸಿ, ಹೋರಾಟ ಸಮಿತಿಯಿಂದ ಬಜ್ಪೆಯಲ್ಲಿ ಬೃಹತ್ ಮಾನವ ಸರಪಳಿ

ಜಿಲ್ಲೆಯ ಶಾಸಕರು ಕಾರ್ಪೊರೇಟ್ ವೈದ್ಯಕೀಯ ಲಾಬಿಯ ಸೂತ್ರದ ಗೊಂಬೆಗಳು: ಮುನೀರ್ ಕಾಟಿಪಳ್ಳ ಆರೋಪ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ಆದೇಶ ರದ್ದುಗೊಳಿಸಬೇಕು, ಮಂಗಳೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ, ಜಯದೇವ ಹೃದಯದ ಆಸ್ಪತ್ರೆಯ ಘಟಕಗಳನ್ನು ಸ್ಥಾಪಿಸಬೇಕು, ಬಜ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ‘ಸರಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ’ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಬಜ್ಪೆ ಪೇಟೆಯಲ್ಲಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಮಾನವ ಸರಪಳಿಗೆ […]

Continue Reading

ಗುರುಪುರ ಬೆಳ್ಳಿಬೆಟ್ಟುವಿನಲ್ಲಿ ಕುಸಿಯುವ ಭೀತಿಯಲ್ಲಿ ಐದಾರು ಮನೆಗಳು.. ದುರಂತ ನಡೆದರೆ ಯಾರು ಹೊಣೆ.?

ಮಂಜನಾಡಿ, ನಾಗುರಿ ರೀತಿಯ ದುರಂತ ನಡೆಯುವ ಮುನ್ನ ಜಿಲ್ಲಾಡಳಿತ ಎಚ್ಚೆತ್ತು ಕೊಳ್ಳಲಿ ಮಂಗಳೂರು ಭಾಗದಲ್ಲಿ ನಿರಂತರ ಮಳೆಯಾಗುತ್ತಿದ್ದು, ಮಳೆಯ ತೀವ್ರತೆಗೆ ಹಲವು ಅನಾಹುತಗಳು ನಡೆದಿದೆ. ಜಿಲ್ಲಾಡಳಿತ ಅನಾಹುತ ನಡೆಯುವ ಮುನ್ನ ಎಚ್ಚೆತ್ತುಕೊಳ್ಳದೆ ಇರುವುದರಿಂದ ಹಲವು ಸಾವು ನೋವುಗಳು ಸಂಭವಿಸಿದೆ. ಜನಪ್ರತಿನಿಧಿಗಳು ದುರಂತ ನಡೆದ ನಂತರ ತಂಡೋಪತಂಡವಾಗಿ ಬಂದು ಕಣ್ಣೀರು ಸುರಿಸಿ ಸಹಾಯಧನ ನೀಡುತ್ತಾ ತಮ್ಮ ಕರ್ತವ್ಯ ಮುಗಿಯಿತು ಅನ್ನುವ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅಪಾಯ ನಡೆಯಲಿದೆ ಅನ್ನುವ ಖಾತರಿ ಇದ್ದಾಗ ಸಂಬಂಧಪಟ್ಟ ಅಧಿಕಾರಿ ವರ್ಗ, ಜನಪ್ರತಿನಿಧಿಗಳು ಪರ್ಯಾಯ ವ್ಯವಸ್ಥೆ […]

Continue Reading

ರಿವಾಲ್ವರ್, ಲಾಠಿ ಪ್ರಯೋಗಿಸದೇ ಮಂಗಳೂರಿನಲ್ಲಿ ಅಕ್ರಮ ದಂಧೆ, ಕೋಮುವಾದವನ್ನು ಮಟ್ಟಹಾಕಿದ್ದೇ ಕಮೀಷನರ್ ಸುಧೀರ್ ರೆಡ್ಡಿ, ಎಸ್ಪಿ ಅರುಣ್

ಗುಂಡು ಹಾರಿಸಿ ಸದೆಬಡಿಯಿರಿ. ಸಚಿವ ಖಾದರ್ ಸಲಹೆ ಪ್ರಜಾಪ್ರಭುತ್ವ ವಿರೋಧಿ, ದಕ್ಷ ಅಧಿಕಾರಿಗಳ ನೈತಿಕ ಸ್ಥೈರ್ಯ ಕುಸಿಯುವಂತೆ ಮಾಡುವ ಹುನ್ನಾರ: ಮುನೀರ್ ಕಾಟಿಪಳ್ಳ ಆಕ್ರೋಶ ಜಿಲ್ಲೆಯ ವಿಪತ್ತು ನಿರ್ವಹಣಾ ಸಭೆಯಲ್ಲಿ ಆರೋಗ್ಯ ಸಚಿವ ಯು ಟಿ ಖಾದರ್ ಅವರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಅವರಲ್ಲಿ, ಮಂಗಳೂರಿನಲ್ಲಿ ನಡೆದಿರುವ ಕೊಲೆ, ಸುಲಿಗೆ, ಗಡೀಪಾರು ಮುಂತಾದವುಗಳ ಲೆಕ್ಕ (ಅಂಕಿ ಅಂಶ) ಕೇಳುವ, ಕ್ರಿಮಿನಲ್‌ ಗಳ ಕಾಲಿಗೆ ಗುಂಡು ಹಾರಿಸುವಂತೆ ಸಲಹೆ ನೀಡುವ, ಕಾನೂನು ಸುವ್ಯವಸ್ಥೆ ಕುರಿತಾಗಿ […]

Continue Reading

ಅನಿವಾಸಿ ಕನ್ನಡಿಗರಿಗೊಂದು ಸಚಿವಾಲಯ; ಸೂಟು-ಬೂಟು ಕಾಕಾಗಳ ಆರತಿ ಮಂತ್ರ.!

ಸಾಮಾನ್ಯ ಕನ್ನಡಿಗರ ಸಂಕಷ್ಟಕ್ಕೆ ಮಿಡಿಯುವ ಸಚಿವಾಲಯ ರಚನೆಯಾಗಲಿ ಕಾರ್ಮಿಕರ ಬೆವರಿನ ಮೂಲಕವೇ ಕೋಟ್ಯಾಧಿಪತಿಗಳಾದ ಕೆಲವು ಅನಿವಾಸಿ ಉದ್ಯಮಿಗಳು ಸೂಟು ಬೂಟು ಧರಿಸಿ ಅನಿವಾಸಿ ಕನ್ನಡಿಗರಿಗೆ ಹೊಸ ಸಚಿವಾಲದ ಬೇಡಿಕೆಗಳನ್ನು ಇಟ್ಟಿದ್ದು, ಸಚಿವಾಲಯಕ್ಕೆ ಆರತಿ ಮಾಡಿ, ಗೂಟದ ಕಾರು ಕೊಡಿಸಲು ಪ್ರಯತ್ನ ಪಡುತ್ತಿದ್ದಾರೆ. ಅನಿವಾಸಿ ಕನ್ನಡಿಗರಿಗೆ ಸಚಿವಾಲಯ ಖಂಡಿತ ಬೇಕು. ಅದಕ್ಕೆ ಆರತಿ ಬೇಕೇ.? ಎಂಬುದೇ ಈಗಿನ ಪ್ರಶ್ನೆ. ದೀರ್ಘ ಕಾಲ ಅನಿವಾಸಿ ಕನ್ನಡಿಗರ ಉಸ್ತುವಾರಿಯಾಗಿ ಬಡ ಹಾಗೂ ಮಧ್ಯಮ ವರ್ಗದ ಅನಿವಾಸಿಗಳ ಉದ್ಧಾರಕ್ಕಾಗಿ ಏನು ಕೆಲಸ ಮಾಡಿದ್ದಾರೆ. […]

Continue Reading

ಅಲ್ರೀ, ಬಿಕೆ-ಪಿಕೆ ಚಿಂತೆ ನಿಮಗೇಕ್ರೀ.?, ಆಪರೇಷನ್ ವಿಜಯೇಂದ್ರ ಮುಂದಕ್ಕೆ?

ಧನ್ಯವಾದ ಹೇಳಿದ್ರು ಕುಮಾರದ್ವಾಮಿ.?, ಡಿಕೆ ಮುಂದಿದೆ ರಿಯಲ್ ಸವಾಲು ✍️. ಆರ್.ಟಿ.ವಿಠ್ಢಲಮೂರ್ತಿ ಕಳೆದ ವಾರ ಬಿಜೆಪಿಯ ಪ್ರಮುಖರನ್ನು ಕರೆಸಿಕೊಂಡಿದ್ದ ರಾಜ್ಯದ ಆರೆಸ್ಸೆಸ್ ನಾಯಕರು ಹಲವು ವಿಷಯಗಳ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಈ ಪೈಕಿ ಮುಖ್ಯವಾದುದು ಬಿಕೆ-ಪಿಕೆ ಚಿಂತೆ ನಿಮಗೇಕೆ.? ಎಂಬುದು. ಇದೇ ರೀತಿ ಅವರು ಆಕ್ಷೇಪ ವ್ಯಕ್ತಪಡಿಸಿದ ಎರಡನೇ ಸಂಗತಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ್ದು.ಅಂದ ಹಾಗೆ ಆರೆಸ್ಸೆಸ್ ನಾಯಕರ ಆಕ್ಷೇಪಕ್ಕೆ ಕಾರಣವಾದ ಮೊದಲ ವಿಷಯವಿದೆಯಲ್ಲ? ಆ್ಯಕ್ಚುವಲಿ, ಈ ವಿಷಯದ ಬಗ್ಗೆ ಬಿಜೆಪಿಯ ರಾಜ್ಯ ನಾಯಕರು […]

Continue Reading

ಸ್ವಪಕ್ಷೀಯರಿಂದಲೇ ವಿರೋಧ; ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬೆಂಗಳೂರಿಗೆ ಒಳ್ಳೆಯದಾಗುತ್ತದೆ ಎಂದರೆ ವಿರೋಧ ಕಟ್ಟಿಕೊಳ್ಳಲು ಸಿದ್ಧ: ಕೃಷ್ಣ ಬೈರೇಗೌಡ

ಪಾದಚಾರಿ ಮಾರ್ಗಗಳ ಮೇಲೆ ಬೆಳೆದು ನಿಂತಿರುವ ಅಕ್ರಮ ಕಟ್ಟಡಗಳು ಮತ್ತು ಒತ್ತುವರಿಗಳನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ಭರ್ಜರಿ ಕಾರ್ಯಾಚರಣೆಗೆ ಇಳಿದಿದೆ. ಈ ಪ್ರಕ್ರಿಯೆಯಲ್ಲಿ ರಾಜಕೀಯ ಒತ್ತಡಗಳು ಮತ್ತು ಸ್ವಪಕ್ಷೀಯರಿಂದಲೇ ವಿರೋಧಗಳು ವ್ಯಕ್ತವಾಗುತ್ತಿದ್ದರೂ ಸಹ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ. ಜಿಬಿಎ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಗರದ ಸುಧಾರಣೆಗಾಗಿ ನಾನು ಎಷ್ಟೇ ನಿಷ್ಠುರವಾದಿಯಾಗಲು ಸಿದ್ಧ ಎಂದು ಘೋಷಿಸಿದರು. ಫುಟ್ಪಾತ್ ತೆರವು […]

Continue Reading

ಮಂಗಳೂರು: ಸಂಡೆ ಬಜಾರ್ ಮೇಲೆ ಮುಂದುವರಿದ ನಗರಪಾಲಿಕೆ ಧಾಳಿ; ಸಿಐಟಿಯು ನೇತೃತ್ವದಲ್ಲಿ ರಸ್ತೆ ತಡೆದು ಪ್ರತಿಭಟನೆ

ಮಂಗಳೂರು: ನಗರದ ಪುರಭವನದ ಬಳಿ ಭಾನುವಾರ ರಜಾದಿನ ವ್ಯಾಪಾರ ಮಾಡುವ ಸಂಡೆ ಬಜಾರ್ ವ್ಯಾಪಾರಿಗಳ ವಿರುದ್ಧ ನಗರಪಾಲಿಕೆ ಕಾರ್ಯಾಚರಣೆ ಮುಂದುವರಿಸಿದೆ. ಇಂದು ಬೀದಿವ್ಯಾಪಾರಿಗಳು ವ್ಯಾಪಾರ ಆರಂಭಿಸಲು ಮುಂದಾಗುತ್ತಿದ್ದಂತೆ ನಗರಪಾಲಿಕೆ ಆಯುಕ್ತರು ಕಾರ್ಯಾಚರಣೆ ಆರಂಭಿಸಲು ಆದೇಶ ನೀಡಿದರು. ಪಾಲಿಕೆ ಆಯುಕ್ತರ ಆದೇಶಕ್ಕೆ ಬೀದಿ ವ್ಯಾಪಾರಿಗಳು ಆಕ್ಷೇಪ ವ್ಯಕ್ತಪಡಿಸಿ ಪಾದಚಾರಿಗಳ ಓಡಾಟಕ್ಕೆ ಬೇಕಾದಷ್ಟು ಜಾಗ ಇದ್ದರೂ ತೆರವುಗೊಳಿಸುವುದು ಸರಿಯಲ್ಲ ಎಂದು ಆಯುಕ್ತರನ್ನು ತರಾಟೆಗೆ ತೆಗೆದುಕೊಂಡರು. ಆಯುಕ್ತರು ಧಾಳಿ ಮುಂದುವರಿಸಿದಾಗ ಬೀದಿಬದಿ ವ್ಯಾಪಾರಿಗಳು ಘೋಷಣೆ ಕೂಗುತ್ತ ರಸ್ತೆ ತಡೆಸಿ ಪ್ರತಿಭಟನೆ ನಡೆಸಿದರು. […]

Continue Reading

ಮಲ್ಪೆ ಉದ್ಯಮಿ ಸಂದೀಪ್​ ಸಾಲಿಯಾನ್​ ನಿಗೂಢ ಸಾವಿನ ಪ್ರಕರಣ; ಗೋವಾ ಪೊಲೀಸರ ಕಾರ್ಯಚರಣೆ; ಮಂಗಳೂರು ಮೂಲದ ಅಕ್ಷತಾ ಬಂಧನ

ಮಲ್ಪೆ ಉದ್ಯಮಿ ಸಂದೀಪ್​ ಸಾಲಿಯಾನ್​ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಪ್ರಮುಖ ಆರೋಪಿ ಮಂಗಳೂರು ಮೂಲದ ಅಕ್ಷತಾ ಎಂ.ಕೆ. ಅಲಿಯಾಸ್​ ರೂಪಶ್ರೀ ಎಂಬ ಮಹಿಳೆಯನ್ನು ಗೋವಾ ಪೊಲೀಸರು ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದಾರೆ. ಜಲಕ್ರೀಡಾ ದೋಣಿಗಳ ಉದ್ಯಮಿಯಾಗಿದ್ದ ಸಂದೀಪ ಸಾಲಿಯಾನ್​ ಮಲ್ಪೆ ನಿವಾಸಿಯಾಗಿದ್ದು, ಈ ಹಿಂದೆ ಮಾಜಿ ಸಚಿವರೊಬ್ಬರ ಕಾರು ಚಾಲಕರಾಗಿದ್ದರು. ನಂತರ ಚಾಲಕ ವೃತ್ತಿ ತೊರೆದು ಮಲ್ಪೆಯಲ್ಲಿ ಜಲಕ್ರೀಡಾ ದೋಣಿಯ ವ್ಯವಹಾರ ಆರಂಭಿಸಿದ್ದರು. ಜಲಕ್ರೀಡೆ ವ್ಯವಹಾರದಲ್ಲಿ ಉತ್ತಮ ಯಶಸ್ಸು ಸಾಧಿಸಿ ಪ್ರಮುಖ ಉದ್ಯಮಿಯಾಗಿ […]

Continue Reading

ವಿಟ್ಲ ಪೊಲೀಸರ ಕಾರ್ಯಾಚರಣೆ: ಅಕ್ರಮ ಬಾಕ್ಸೈಟ್ ಗಣಿಗಾರಿಕೆ ಸ್ಥಳಕ್ಕೆ ಧಾಳಿ; ಆರೋಪಿಗಳು ಪರಾರಿ, ಯಂತ್ರೋಪಕರಣಗಳ ವಶ.

ವಿಟ್ಲ ಪೊಲೀಸ್ ಠಾಣೆಯ ವ್ಯಾಪ್ತಿಯ ಕರೋಪಾಡಿ ಮುಗುಳಿ ಎಂಬಲ್ಲಿ ಅಕ್ರಮ ಗಣಿಗಾರಿಕೆಯ ನಡೆಸುತ್ತಿರುವ ಬಗ್ಗೆ, ವಿಟ್ಲ ಪೊಲೀಸರಿಗೆ ಬಂದ ಖಚಿತ ಮಾಹಿತಿ ಮೇರೆಗೆ, ಅಕ್ರಮ ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಪೊಲೀಸರ ಆಗಮನ ಆಗುತ್ತಿದ್ದಂತೆ, ಪೊಲೀಸರ ವಾಹನವನ್ನು ಕಂಡು ಅಕ್ರಮ ಗಣಿಗಾರಿಕೆ ಮಾಡುತ್ತಿದ್ದ ಆರೋಪಿಗಳು ಅಲ್ಲಿಂದ ಪರಾರಿಯಾಗಿರುತ್ತಾರೆ. ಸದ್ರಿ‌ ಸ್ಥಳವನ್ನುಪೊಲೀಸರು ಪರಿಶೀಲನೆ ನಡೆಸಿದಾಗ ಅಕ್ರಮ ಕೆಂಪು ಕಲ್ಲು ಹಾಗೂ ಬಾಕ್ಸೈಟ್ ಗಣಿಗಾರಿಕೆ ಮಾಡುತ್ತಿರುವುದು ಕಂಡುಬಂದಿದ್ದು, ಕೃತ್ಯಕ್ಕೆ ಬಳಸಿದ ಯಂತ್ರೋಪಕರಣಗಳು, ಸ್ಥಳದ‌ ಸಮೀಪದಲ್ಲೇ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಸುತ್ತಿರುವುದು ಹಾಗೂ […]

Continue Reading

ಬೈಕಂಪಾಡಿ ಹೈವೇ ದರೋಡೆ ಗ್ಯಾಂಗ್ ಲಾಕ್.. ಮಂಗಳೂರನ್ನು ಬೆಚ್ಚಿಬೀಳಿಸಿದ ಪ್ರಕರಣ ಭೇದಿಸಿದ ಮಂಗಳೂರು ಪೊಲೀಸರು

ಮಂಗಳೂರನ್ನು ಬೆಚ್ಚಿಬೀಳಿಸಿದ ಹೈವೇ ದರೋಡೆ ಪ್ರಕರಣದ ಆರೋಪಿಗಳನ್ನು ಹೆಡೆಮುರಿ ಕಟ್ಟುವಲ್ಲಿ ಮಂಗಳೂರಿನ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯದ ತಲಶ್ಶೇರಿ ಮಂಬರಮ್, ಪತಿರಿಯಾಡ್ ಗ್ರಾಮದ ಕಾಯಲೋಡೆ ನಿವಾಸಿ ನಾರಾಯಣ ಸ್ವಾಮಿ ಎಂಬವರ ಪುತ್ರ ನಿಮಿಲ್ ಆರ್ ಕೆ , ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಹಕ್ಕತ್ತೂರು-ತೊಬ್ಬೊಟ್ಟು ನಿವಾಸಿ ಅಬ್ಬಾಸ್ ಎಂಬವರ ಪುತ್ರ ಇರ್ಷಾದ್ ಹಾಗೂ ಮಡಿಕೇರಿ ಮಾರ್ಕೆಟ್ ಸ್ಟುಡಿಯೋ ಬಳಿ ನಿವಾಸಿ ದಿವಂಗತ ಭಾಷಾ ಎಂಬವರ ಪುತ್ರ ಮುಸ್ತಾಫ ಬಂಧಿತ ಆರೋಪಿಯಾಗಿದ್ದಾರೆ. ಜೂನ್ 29 ರಂದು ಬೈಕಂಪಾಡಿ ದ್ವಾರ […]

Continue Reading