ತೂತುಕುಡಿ ಲಾಕಪ್ ಡೆತ್ ಪ್ರಕರಣ: ಐತಿಹಾಸಿಕ ತೀರ್ಪು; 9 ಮಂದಿ ಪೊಲೀಸರಿಗೆ ಮರಣದಂಡನೆ

ಅಧಿಕಾರ ದುರುಪಯೋಗದ ಪರಮಾವಧಿ: ನ್ಯಾಯಾಲಯ; “ಅಪರೂಪದಲ್ಲಿ ಅತ್ಯಪರೂಪದ” ಪ್ರಕರಣ ಎಂದು ಪರಿಗಣಿಸಿದ್ದ ಸಿಬಿಐ ಆರು ವರ್ಷಗಳ ಹಿಂದೆ ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ತಮಿಳುನಾಡಿನ ತೂತುಕುಡಿ ಜಿಲ್ಲೆಯ ವ್ಯಾಪಾರಸ್ಥ ಜಯರಾಜ್ ಮತ್ತು ಆತನ ಪುತ್ರ ಬೆನಿಕ್ಸ್ ಈ ಇಬ್ಬರ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ಜಿಲ್ಲಾ ನ್ಯಾಯಾಲಯವು ಸೋಮವಾರ ಐತಿಹಾಸಿಕ ತೀರ್ಪನ್ನು ನೀಡಿದೆ. ಪೊಲೀಸರಿಗೆ ಮರಣದಂಡನೆ ವಿಧಿಸಿರುವ ಕೋರ್ಟ್ ಈ ಭೀಕರ ಹತ್ಯಾಕಾಂಡದಲ್ಲಿ ಭಾಗಿಯಾಗಿದ್ದ ಇನ್ಸ್ಪೆಕ್ಟರ್ ಶ್ರೀಧರ್, ಸಬ್ ಇನ್ಸ್ಪೆಕ್ಟರ್‌ಗಳಾದ ಬಾಲಕೃಷ್ಣನ್, ರಘು ಗಣೇಶ್ ಸೇರಿದಂತೆ ಒಟ್ಟು […]

Continue Reading

ಸುರ್ಜೇವಾಲಾ ವಿರುದ್ಧ ಶುರುವಾಗಲಿದೆ ದಂಗೆ.?; ಸಂಪುಟಕ್ಜೆ ಖಾದರ್, ಸ್ಪೀಕರ್ ಸ್ಥಾನಕ್ಕೆ ದಿನೇಶ್.?

ಕಡಲ ತೀರಕ್ಕೆ ಅರೆಸ್ಸೆಸ್ ಲಗ್ಗೆ; ಆಪರೇಷನ್ 2028 ಗೆ ಸಿದ್ದತೆ ✍️. ಅರ್.ಟಿ. ವಿಠ್ಠಲಮೂರ್ತಿ ಮೊನ್ನೆ ದಾವಣಗೆರೆ ಮತ್ತು ಬಾಗಲಕೋಟೆಯ ಉಪಚುನಾವಣೆಗೆ ಅಂತ ಹೋಗಿದ್ದ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಹೊಸ ಹೋರಾಟವೊಂದಕ್ಕೆ ಸ್ಕೆಚ್ ಹಾಕಿದ್ದಾರೆ. ರಾಜ್ಯ ಕಾಂಗ್ರೆಸ್ ನ ಉಸ್ತುವಾರಿ ವಹಿಸಿಕೊಂಡಿರುವ ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನು ಎತ್ತಂಗಡಿ ಮಾಡಿಸುವುದು ಈ ಹೋರಾಟದ ಮೂಲ ಉದ್ದೇಶ.ಅಂದ ಹಾಗೆ ಸುರ್ಜೇವಾಲಾ ಅವರು ಕರ್ನಾಟಕದಲ್ಲಿ ಪಕ್ಷದ ಉಸ್ತುವಾರಿ ವಹಿಸಿಕೊಂಡ ನಂತರ ರಾಜ್ಯದಲ್ಲಿ ಕೈ ಪಾಳಯ ಗುಂಪುಗಾರಿಕೆಯಿಂದ ತತ್ತರಿಸುತ್ತಿದೆ. ಎಲ್ಲಕ್ಕಿಂತ […]

Continue Reading

ಬಂಟ್ವಾಳ: ಅಕ್ರಮ ಗಾಂಜಾ‌ ಮಾರಾಟ ಪ್ರಕರಣ: ಆರೋಪಿಗೆ 7 ವರ್ಷಗಳ ಶಿಕ್ಷೆ; 70 ಸಾವಿರ ರೂ. ದಂಡ

ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಮೇಲ್ಕಾರ್ ಬಸ್‌ ನಿಲ್ಲಾಣದ ಬಳಿ ದಿನಾಂಕ: 10.11.2020 ರಂದು ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ, ಆಗಿನ ಬಂಟ್ವಾಳ ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಚೆಲುವರಾಜ್ ರವರು ಧಾಳಿ ನಡೆಸಿ ರೂ 49,000/- ಮೌಲ್ಯದ 1.480 ಕಿ.ಗ್ರಾಂ ಗಾಂಜಾ ಹಾಗೂ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಟ್ವಾಳ ನಗರ ಠಾಣೆಯಲ್ಲಿ ಅಕ್ರ 126/2020ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ, ಆಗಿನ ಬಂಟ್ವಾಳ ವೃತ್ತ ನಿರೀಕ್ಷಕರಾಗಿದ್ದ ಟಿ. ಡಿ. […]

Continue Reading

ಸ್ಥಳೀಯ ಟೈಲರ್‌ಗಳ ಹಿತರಕ್ಷಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಆಗ್ರಹ: ಉಡುಪಿ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ಅಂಗಡಿಗಳಿಗೆ ಭೇಟಿ ನೀಡಿ ಎಚ್ಚರಿಕೆ

​ಉಡುಪಿ: ಜಿಲ್ಲೆಯಲ್ಲಿ ಹೊರರಾಜ್ಯದ ವ್ಯಾಪಾರಿಗಳಿಂದ ಸ್ಥಳೀಯ ಟೈಲರ್‌ಗಳಿಗೆ (ಹೊಲಿಗೆ ವೃತ್ತಿ ಮಾಡುವವರಿಗೆ) ಆಗುತ್ತಿರುವ ಅನ್ಯಾಯವನ್ನು ಖಂಡಿಸಿ, ಕರ್ನಾಟಕ ರಕ್ಷಣಾ ವೇದಿಕೆಯ ಉಡುಪಿ ಜಿಲ್ಲಾ ಘಟಕ ಇಂದು ಬೃಹತ್ ಪ್ರತಿಭಟನಾತ್ಮಕ ಅಭಿಯಾನವನ್ನು ಹಮ್ಮಿಕೊಂಡಿತ್ತು. ​ಉಡುಪಿ ಜಿಲ್ಲೆಯಲ್ಲಿ ಹೊರರಾಜ್ಯಗಳಿಂದ ಬಂದ ವ್ಯಾಪಾರಿಗಳು ಬಟ್ಟೆ ಹಾಗೂ ಇತರ ಸಾಮಗ್ರಿಗಳನ್ನು ಮಾರಾಟ ಮಾಡುವುದರ ಜೊತೆಗೆ, ಸ್ಥಳದಲ್ಲೇ ಟೈಲರಿಂಗ್ ಕೆಲಸವನ್ನೂ ವಹಿಸಿಕೊಂಡು ಮಾಡುತ್ತಿದ್ದಾರೆ. ಇದರಿಂದಾಗಿ ದಶಕಗಳಿಂದ ಈ ವೃತ್ತಿಯನ್ನೇ ನಂಬಿಕೊಂಡಿರುವ ಸ್ಥಳೀಯ ಟೈಲರ್‌ಗಳ ಬದುಕಿಗೆ ಪೆಟ್ಟು ಬಿದ್ದಿದೆ. ಈ ಕುರಿತು ನೊಂದ ಟೈಲರ್‌ಗಳು ಉಡುಪಿ […]

Continue Reading

ಅಕ್ರಮ ಜಾನುವಾರು ಸಾಗಾಟ ಪತ್ತೆ: 20 ಜಾನುವಾರುಗಳ ರಕ್ಷಣೆ ಹಾಗೂ ಮೂವರ ವಿರುದ್ಧ ಪ್ರಕರಣ ದಾಖಲು.

ದಿನಾಂಕ:03.04.2026 ರಂದು ಮುಂಜಾನೆ, ಪೆರಿಯಶಾಂತಿ ಕಡೆಯಿಂದ ಮರ್ಧಾಳ ಕಡೆಗೆ ಒಂದು ಕಂಟೈನರ್ ಲಾರಿಯಲ್ಲಿ ಅಕ್ರಮವಾಗಿ ಜಾನುವಾರು ತುಂಬಿಸಿಕೊಂಡು ಸಾಗಾಟ ಮಾಡುತ್ತಿರುವುದಾಗಿ ಜಂಬುರಾಜ್ ಮಹಾಜನ್ ಪೊಲೀಸ್ ಉಪನಿರೀಕ್ಷಕರು ಕಡಬ ಪೊಲೀಸ್ ಠಾಣೆರವರಿಗೆ ಮಾಹಿತಿ ಬಂದ ಮೇರೆಗೆ, ಸಿಬ್ಬಂದಿಗಳೊಂದಿಗೆ ನೂಜಿಬಾಳ್ತಿಲ ಗ್ರಾಮದ ಕನ್ವರೆ ಎಂಬಲ್ಲಿ KA-11 B-9413 ನೇ ನೋಂದಣಿಯ ಕಂಟೇನರ್ ಲಾರಿಯನ್ನು ಪರಿಶೀಲಿಸಿದಾಗ ಲಾರಿಯಲ್ಲಿ 20 ಜಾನುವಾರುಗಳನ್ನು ಹಿಂಸಾತ್ಮಕವಾಗಿ ತುಂಬಿಸಿರುವುದು ಕಂಡುಬಂದಿರುತ್ತದೆ. ಲಾರಿಯಲ್ಲಿದ್ದಾತನಲ್ಲಿ ವಿಚಾರಿಸಲಾಗಿ ಹಾಸನ ಬೇಲೂರು ನಿವಾಸಿ ಇರ್ಫಾನ್ (26) ಎಂಬುದಾಗಿ ತಿಳಿಸಿರುತ್ತಾನೆ . ಸದ್ರಿ ಜಾನುವಾರುಗಳನ್ನು […]

Continue Reading

‘ಸಿಟಿ ಹೈಲೈಟ್ಸ್’ ಪತ್ರಿಕೆಯ ಮುಖ್ಯಸ್ಥ ಎಂ.ಪಿ ಅರುಣ್ ಕುಮಾರ್ ರವರಿಗೆ KUJW 2024 ನೇ ಸಾಲಿನ ಗಣೇಶ್ ಜಿ. ದತ್ತಿ ಪ್ರಶಸ್ತಿ

ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUJW) ದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಬೀದರ್ ನಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಿಟಿ ಹೈಲೈಟ್ಸ್ ಇಂಗ್ಲಿಷ್ ಪತ್ರಿಕೆಯ ಶಿವಮೊಗ್ಗ ಮುಖ್ಯಸ್ಥ (ಬ್ಯೂರೋ ಛೀಪ್), ಪತ್ರಿಕೋದ್ಯಮದಲ್ಲಿ ವೃತ್ತಿ ನೈಫುಣ್ಯತೆ ಮತ್ತು ವೃತ್ತಿಪರತೆಯನ್ನು ಕಾಯ್ದುಕೊಂಡಿರುವ ಅರುಣ್ ಕುಮಾರ್ […]

Continue Reading

ಮಂಗಳೂರು: ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಕಮಿಷನ್‌ ಪಡೆದು ಮೋಸ; ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ

ಬ್ಯಾಂಕುಗಳಿಂದ ಕೋಟ್ಯಂತರ ರೂಪಾಯಿ ಸಾಲ ಕೊಡಿಸುವುದಾಗಿ ನಂಬಿಸಿ ಕಮಿಷನ್‌ ಪಡೆದು 40 ಕೋಟಿ ರೂ. ವಂಚನೆ ಮಾಡಿದ್ದಾರೆ ಎನ್ನಲಾದ ಮಂಗಳೂರು ಮೂಲದ ರೋಶನ್ ಸಲ್ಡಾನಾ ಮತ್ತು ಆತನ ಪತ್ನಿ ಹಾಗೂ ಚಿತ್ರದುರ್ಗದ ಚಂದ್ರಶೇಖರ್, ಈ ಪ್ರಕರಣದ ಮೂವರು ಆರೋಪಿಗಳ ವಿರುದ್ಧದ 11 ಎಫ್‌ಐಆರ್ ಗಳನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಸಂಬಂಧ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ. ಪ್ರಕರಣದ ಅಪರಾಧದ ಆರೋಪಗಳು ತನಿಖಾ […]

Continue Reading

ಮಂಗಳೂರು: ಪೊಲೀಸ್ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಸೇವೆ ಸಲ್ಲಿಸಿದ ಸತೀಶ್, ಜಯಾನಂದ ರವರಿಗೆ ಪ್ರತಿಷ್ಠಿತ ಮುಖ್ಯಮಂತ್ರಿ ಪದಕ ಪ್ರದಾನ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಉತ್ತಮ ಸೇವೆ ಸಲ್ಲಿಸಿದ 153 ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 2025ನೇ ಸಾಲಿನ “ಮುಖ್ಯಮಂತ್ರಿ ಪದಕ” ಲಭಿಸಿದೆ. ಏಪ್ರಿಲ್ 2 ರಂದು ಬೆಂಗಳೂರಿನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಪದಕ ಪ್ರದಾನ ಮಾಡಿದ್ದಾರೆ. ಕುರಿಯ ಗ್ರಾಮದ ಮಾವಿನಕಟ್ಟೆ ನಿವಾಸಿ ಸತೀಶ್ ಅವರು ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ರೌಡಿನಿಗ್ರಹ ದಳ, ಅಪರಾಧ ಪತ್ತೆ ದಳ, ಸೈಬರ್ ಅಪರಾಧ ಪತ್ತೆ ದಳ, ಜಿಲ್ಲಾ ವಿಶೇಷ ತನಿಖಾ ತಂಡ ಸೇರಿದಂತೆ ಹಲವು ಪ್ರಮುಖ ವಿಭಾಗಗಳಲ್ಲಿ […]

Continue Reading

ಅನಾಗರಿಕರಿಗೆ ಗುಂಡಿ ತೋಡಿದ ಪಟ್ಟಣ ಪಂಚಾಯತ್; ಸೋಮಾವತಿ ನದಿ ಉಳಿಸಲು ಪಣ.

ನಾಗರಿಕ ಸಮಾಜ ವಿಕಸನಗೊಳ್ಳುತ್ತಿದ್ದಂತೆಯೇ ಅನಾಗರಿಕತನವೂ ಹೆಚ್ಚುತ್ತಿದೆ ಬೆಳ್ತಂಗಡಿ ತಾಲೂಕಿನ ಪ್ರಮುಖ ನದಿಗಳಲ್ಲಿ ಒಂದಾಗಿ ಬೆಳ್ತಂಗಡಿ ಪಟ್ಟಣ ವ್ಯಾಪ್ತಿಯಲ್ಲಿ ಜೀವನದಿಯಾಗಿ ಹರಿಯುತ್ತಿರುವ ಸೋಮಾವತಿಯ ಒಡಲನ್ನು ಡಂಪಿಂಗ್ ಯಾರ್ಡ್ ಮಾಡಲು ಹೊರಟ ಖದೀಮರಿಗೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ಗುಂಡಿ ತೋಡಿದ ಅಪರೂಪದ ಸಂಗತಿ ಬೆಳಕಿಗೆ ಬಂದಿದೆ. ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಜೀವನಾಡಿಯಾಗಿ ಜನರಿಗೆ ಕುಡಿಯುವ ನೀರು ಒದಗಿಸುವ ಏಕೈಕ ನದಿ ಸೋಮಾವತಿ. ಸಾವಿರಾರು ಜನರ ಜೀವ ಉಳಿಸಿದ ಈಕೆಯ ಮೇಲೆ ಮನುಷ್ಯ ಪ್ರಾಣಿ ದಿನನಿತ್ಯ ಅತ್ಯಾಚಾರ ನಡೆಸುತ್ತಿದ್ದಾನೆ. ಇದು […]

Continue Reading

ಕೇರಳ ವಿಧಾನಸಭಾ ಚುನಾವಣೆ; ಎಡರಂಗದ ವೋಟುಗಳ ಮೇಲೆ ಬಿಜೆಪಿ ಪ್ರಭಾವ ಬೀರಲಿದೆ: ಸಿ ವೋಟರ್

ದೇವರನಾಡು ಕೇರಳದ ವಿಧಾನಸಭಾ ಚುನಾವಣೆಯಲ್ಲಿ ಎಡರಂಗದ ವೋಟುಗಳ ಮೇಲೆ ಬಿಜೆಪಿ ಪ್ರಭಾವ ಬೀರಲಿದ್ದು, ಈ ಮೂಲಕ ಯುಡಿಎಫ್‌ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ಭವಿಷ್ಯ. ಪಂಚ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ಘೋಷಣೆಯಾಗಿ ಪಕ್ಷಗಳು ಗೆಲುವಿಗೆ ತಯಾರಿ ನಡೆಸುತ್ತಿವೆ. ತಮಿಳುನಾಡು, ಕೇರಳದಲ್ಲಿ ಚುನಾವಣೆ ನಡೆಯುತ್ತಿದ್ದು, ಆಡಳಿತ ಪಕ್ಷಗಳು ಮತ್ತೆ ಚುಕ್ಕಾಣಿ ಹಿಡಿಯಲು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿವೆ. ಇತ್ತ ವಿರೋಧ ಪಕ್ಷಗಳು ತೀವ್ರ ಪೈಪೋಟಿ ನೀಡುತ್ತಿದ್ದು, ಕೇರಳದಲ್ಲಿ ನೇರ ನೇರ ಹಣಾಹಣಿ ಇರಲಿದೆ ಎಂದು ಚುನಾವಣಾ ಪೂರ್ಣ ಸಮೀಕ್ಷೆಗಳು ಹೇಳುತ್ತಿವೆ. […]

Continue Reading