ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರಕರಣ: ರೌಡಿಶೀಟರ್ ಟೊಪ್ಪಿ ನೌಫಾಲ್ ಸಹೋದರನ ಬಂಧನ.

ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಉಚ್ಚಿಲ್ ಮುಳ್ಳುಗುಡ್ಡೆ ನಿವಾಸಿ ಆರೀಫ್ ಹುಸೈನ್ ಅಲಿಯಾಸ್ “ಟ್ಯಾಬ್ಲೆಟ್ ಆರೀಫ್” ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊರ್ವ ಆರೋಪಿ ಮೊಹಮ್ಮದ್ ಇಬ್ರಾಹಿಂ ಸಿನಾನ್ @ ಚಿನ್ನು, ಎಂಬಾತನನ್ನು ದಿನಾಂಕ 25-05-2026 ರಂದು ಸಿಸಿಬಿ ಪೊಲೀಸರು ಬಂಧಿಸಿರುತ್ತಾರೆ. ತೊಕ್ಕೊಟ್ಟು ಪ್ಲೈಓವರ್ ಮೇಲಿಂದ ಬೈಕ್ನಲ್ಲಿ ಸಂಚರಿಸುತ್ತಿದ್ದ ಆರೀಫ್ ನನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಕೆಡವಿ, ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಬಳಿಕ ಕೃತ್ಯಕ್ಕೆ ಬಳಸಿದ ಕಾರನ್ನು ಬಂಟ್ವಾಳ ತಾಲೂಕಿನ ಬುಡೋಳಿ ಪ್ರದೇಶದಲ್ಲಿ ಬಿಟ್ಟು […]

Continue Reading

ರೆಡಿಯಾಗುತ್ತಿದೆ ಅಮಿತ ಯುದ್ದ ಸೂತ್ತ; ರಾಜ್ಯ ಬಿಜೆಪಿ ಅಣಿಯಾಗಬೇಕು, ಅಮಿತ್ ಶಾ ಸುಪಾರಿ

ಚನ್ನಿ-ವೀಡಿಗೆ ಡಿಕೆಶಿ ಫೆವಿಕಾಲ್.?, ಒಗ್ಗಟ್ಟಿನ‌ ಮಹತ್ವ ವಿವರಿಸಿದ ಡಿಕೆಶಿ ✍️. ಆರ್.ಟಿ.ವಿಠ್ಟಲಮೂರ್ತಿ ಕಳೆದ ವಾರ ರಾಜ್ಯ ಕಾಂಗ್ರೆಸ್ ನ ಹಿರಿಯ ನಾಯಕರೊಬ್ಬರು ಕೇರಳಕ್ಕೆ ಹೋಗಿದ್ದರು. ಹೀಗೆ‌ ಹೋದವರು ವಿ.ಡಿ.ಸತೀಶನ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಭಾಗಿಯಾಗಿದ್ದರು. ಇದಾದ ನಂತರ ಸಮಾರಂಭಕ್ಕೆ ದಿಲ್ಲಿಯಿಂದ ಬಂದಿದ್ದ ಹಿರಿಯ ನಾಯಕರೊಬ್ಬರ ಜತೆ ಅವರು ಒನ್ ಟು ಒನ್ ಮಾತನಾಡಿದ್ದಾರೆ.ಹೀಗೆ ಮಾತನಾಡುವ ಸಂದರ್ಭದಲ್ಲಿ ಕರ್ನಾಟಕದ ರಾಜಕಾರಣದ ಬಗ್ಗೆ ಪ್ರಸ್ತಾಪಿಸಿ: ‘ಸಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ […]

Continue Reading

ಒಂದೇ ಕುಟುಂಬದ ಹತ್ತು ಮಂದಿ ಜಲ ಸಮಾಧಿ. ಕಪ್ಪೆ ಚಿಪ್ಪು ತಂದ ಆಪತ್ತು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭೀಕರ ಜಲ ದುರಂತವೊಂದು ಸಂಭವಿಸಿದ್ದು, ಕಪ್ಪೆಚಿಪ್ಪು ಆರಿಸಲು ನದಿಗೆ ಇಳಿದಿದ್ದ ಒಂದೇ ಕುಟುಂಬಕ್ಕೆ ಸೇರಿದ ಹತ್ತು ಜನ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ​ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ತಟ್ಟಿಹಕ್ಕಲ ಕಳಿನಟ್ಟಿ ಹೊಳೆಯಲ್ಲಿ ಭಾನುವಾರ ಈ ಭೀಕರ ದುರಂತ ಸಂಭವಿಸಿದೆ. ಕಪ್ಪೆಚಿಪ್ಪು ಆರಿಸಲು ಇಳಿದವರು ಒಬ್ಬರ ಕೈಯನ್ನು ಮತ್ತೊಬ್ಬರು ಹಿಡಿದು ಸಾಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಹತ್ತು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ನದಿಯಲ್ಲಿ ನೀರಿನ […]

Continue Reading

ಆತ್ಮಹತ್ಯೆ ಗೈಯ್ಯಲು ಯತ್ನಿಸಿದ ಕೃಷಿಕನ ಜೀವ ರಕ್ಷಿಸಿದ ಪಣಂಬೂರು ಪೊಲೀಸರು

ಇನ್ಸ್ ಪೆಕ್ಟರ್ ಸಲೀಂ ಅಬ್ಬಾಸ್ ವಳಾಲ್ ನೇತೃತ್ವದ ತಂಡದ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ಪೊಲೀಸರೆಂದರೆ ಸಾಕು ನಾಗರೀಕರು ಭಯ ಬೀಳುವ ಪ್ರಸಂಗವೇ ಹೆಚ್ಚು. ಅಪರಾಧಿಗಳ ಹೆಡೆಮುರಿ ಕಟ್ಟಿ ಜೈಲು ಕಂಬಿಗೆ ದೂಡುವುದೇ ಪೊಲೀಸರ ಕೆಲಸ ಅಂದುಕೊಂಡವರೆ ಹೆಚ್ಚು. ಆದರೆ ಪಣಂಬೂರು ಪೊಲೀಸರು ಇದಕ್ಕಿಂತ ಭಿನ್ನ.‌ ಮಾನವೀಯ ಕಾಳಜಿಗೆ ಪಣಂಬೂರು ಪೊಲೀಸರು ಎತ್ತಿದ ಕೈ ಅನ್ನುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಕಳೆದ ಆರು ತಿಂಗಳ ಹಿಂದೆ ಪಣಂಬೂರು ಇನ್ಸ್ ಪೆಕ್ಟರ್ ಸಲೀಂ ಅಬ್ಬಾಸ್ ವಳಾಲ್ ನೇತೃತ್ವದ ಪೊಲೀಸ್ ತಂಡ […]

Continue Reading

ಪುತ್ತೂರು: ಎರಡು ಪ್ರತ್ಯೇಕ ಪೋಕ್ಸೋ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು

ಬದಿಯಡ್ಕದ ಪೃಥ್ವಿರಾಜ್, ಜಾರ್ಖಂಡ್ ಮೂಲದ ರೇಮುಂಡಾ ನಿಗೆ ಜಾಮೀನು ಪೋಕ್ಸೋ ಪ್ರಕರಣದಲ್ಲಿ ಬಂಧಿತನಾಗಿದ್ದ ಬದಿಯಡ್ಕದ ನಿವಾಸಿ ಪ್ರಥ್ವಿರಾಜ್ ಹಾಗೂ ಮತ್ತೊಂದು ಪೋಕ್ಸೋ ಪ್ರಕರಣದ ಆರೋಪಿ ಜಾರ್ಖಂಡ್ ಮೂಲದ ರೇಮುಂಡಾ ಎಂಬಾತನಿಗೂ ಪುತ್ತೂರು ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ಸರಿತಾ. ಡಿ ರವರು ಎರಡೂ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು ಮಾಡಿ ಆದೇಶ ನೀಡಿರುತ್ತಾರೆ. ಆರೋಪಿ ಪ್ರಥ್ವಿರಾಜ್ ಸಂತ್ರಸ್ಥೆಯೊಂದಿಗೆ ಪ್ರೀತಿಯ ನಾಟಕವಾಡಿ, ಆಕೆಯನ್ನು ಪುಸಲಾಯಿಸಿ ತನ್ನ ಜೊತೆ ಕರೆದುಕೊಂಡು ಹೋಗುತ್ತಿದ್ದ. ಸಂತ್ರಸ್ಥೆಯ ತಾಯಿಯ […]

Continue Reading

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ:

ಉಪ್ಪಿನಂಗಡಿ ಠಾಣಾ ಅ.ಕ್ರ.ಸಂ: 158/2015ರ ಪ್ರಕರಣದಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಸರಿ ಸುಮಾರು ಏಳು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಂಗಳೂರು ಕಸಬಾ ಬೇಂಗ್ರೆ ನಿವಾಸಿ ಅಕ್ರಂ @ ಬೋಜ ಅಕ್ರ ಎಂಬಾತನನ್ನು ದಿನಾಂಕ: 22-05-2026 ರಂದು, ಉಪ್ಪಿನಂಗಡಿ ಪೊಲೀಸ್ ಠಾಣಾ ಪಿಎಸೈ ಕೌಶೀಕ್ ಬಿ.ಸಿ, ನೇತ್ರತ್ವದ ತಂಡ ಆರೋಪಿಯನ್ನು ಮಂಗಳೂರಿನ ಪಣಂಬೂರು ಎಂಬಲ್ಲಿ ಬಂಧಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿ ಅಕ್ರಂ @ ಬೋಜ ಅಕ್ರ ನಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿರುತ್ತದೆ. ಆರೊಪಿಯ ವಿರುದ್ಧ ಪಣಂಬೂರು […]

Continue Reading

ನೆಲ್ಲಿಕಾರು ಪಂಚಾಯತ್ ಗೆ ಹಿಡಿಶಾಪ; ಕಂದಾಯ ಇಲಾಖೆಯ ಬೇಜವಾಬ್ದಾರಿತನ

ಅನುದಾನ ಮಂಜೂರು ಆದರೂ ರಸ್ತೆಗಿಲ್ಲ ಕಾಯಕಲ್ಪ; ಮೂಡಬಿದ್ರೆ ಮಾಂಟ್ರಾಡಿ ನಾಗರಿಕರ ನರಕಯಾತನೆ.! ಇನ್ನೇನೂ ಕೆಲವೇ ದಿನಗಳಲ್ಲಿ ಮುಂಗಾರು ಮಳೆ ತೀವ್ರತೆ ಪಡೆದುಕೊಳ್ಳಲಿದೆ. ಸುಸ್ಥಿತಿಯಲ್ಲಿರುವ ರಸ್ತೆಯಲ್ಲೇ ವಾಹನ ಓಡಿಸುವುದು ಕಷ್ಟ. ಅಂತಹದರಲ್ಲಿ ಹೊಂಡ ಗುಂಡಿಗಳಿರುವ ರಸ್ತೆಯಲ್ಲಿ ವಾಹನ ಚಲಾಯಿಸುವುದು ಹೇಗೆ ಸಾಧ್ಯ.? ಇಂತಹದ್ದೊಂದು ನರಕಯಾತನೆ ಮಾಂಟ್ರಾಡಿ ಕ್ರಾಸ್ ರಸ್ತೆಯಲ್ಲಿ ಕಂಡುಬಂದಿದೆ. ಮೂಡಬಿದ್ರೆ ತಾಲೂಕಿನ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕ್ರಾಸ್ (ಕೈಕಂಬ) ರಸ್ತೆ ಅಷ್ಟೊಂದು ಹದಗೆಟ್ಟಿದೆ. ವಾಹನ ಸಂಚಾರ ಬಿಡಿ ಕಾಲ್ನಡಿಗೆಯಲ್ಲಿ ತೆರಳುವುದಕ್ಕೂ ಅಯೋಗ್ಯವಾದ ಸ್ಥಿತಿಯಲ್ಲಿದೆ. ಒಂದು […]

Continue Reading

ರಾಜ್ಯಸಭೆಗೆ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಲು ವರಿಷ್ಠರಿಗೆ ರಾಜ್ಯ ನಾಯಕರ ಶಿಫಾರಸು

ವಿಧಾನ ಪರಿಷತ್ತಿಗೆ ಬಿಜೆಪಿಗೆ 2 ಸ್ಥಾನ, ಆಕಾಂಕ್ಷಿಗಳ ದಂಡು.! ರಾಜ್ಯಸಭೆಯ ಸ್ಥಾನಗಳಿಗೆ ಮುಂದಿನ ತಿಂಗಳು ನಡೆಯುವ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರನ್ನು ಪರಿಗಣಿಸಬೇಕು ಎಂದು ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ ನಡೆದಿದೆ. ಪಕ್ಷದ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಶಿವಪ್ರಕಾಶ್, ರಾಜ್ಯ ಉಸ್ತುವಾರಿ ರಾಧಾ ಮೋಹನದಾಸ್ ಅಗರ್‌ವಾಲ್, ರಾಜ್ಯ ಘಟಕದ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಮ್ಮುಖದಲ್ಲಿ ಪ್ರಮುಖರ ಸಭೆ ಗುರುವಾರ ನಡೆಯಿತು. ಸದಾನಂದ ಗೌಡ ಅವರು ಬಿಜೆಪಿ […]

Continue Reading

ಜಿಲ್ಲೆಯ ಸರಕಾರಿ ಆಸ್ಪತ್ರೆಗಳ ಖಾಸಗೀಕರಣ; ಮೇ 26 ರಂದು ಮಂಗಳೂರಿನಲ್ಲಿ ದುಂಡು ಮೇಜಿನ ಸಭೆ

ದಕ್ಷಿಣ ಕನ್ನಡ ಜಿಲ್ಲೆಯ ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ, ಆರೋಗ್ಯ ಕ್ಷೇತ್ರದ ಖಾಸಗೀಕರಣದ ನೀತಿಯ ಕುರಿತು ಚರ್ಚಿಸಲು, ಮುಂದಿನ ಹೋರಾಟವನ್ನು ತೀರ್ಮಾನಿಸಲು ಸಿಪಿಐಎಂ ದ.ಕ. ಜಿಲ್ಲಾ ಸಮಿತಿಯು ಮೇ 26 ರಂದು ಸಂಜೆ ನಾಲ್ಕು ಗಂಟೆಗೆ ಮಂಗಳೂರು ನಗರದ ಸಹೋದಯ ಸಭಾಂಗಣದಲ್ಲಿ ದುಂಡು ಮೇಜಿನ ಸಭೆಯನ್ನು ಆಯೋಜಿಸಿದೆ. ಸಭೆಯಲ್ಲಿ ಎಡಪಕ್ಷಗಳು, ರೈತ, ದಲಿತ, ಕಾರ್ಮಿಕ, ಯುವಜನ, ಮಹಿಳಾ ಸಂಘಟನೆಗಳ ಪ್ರತಿನಿಧಿಗಳು, ಬರಹಗಾರರು, ಚಿಂತಕರು ಭಾಗವಹಿಸಲಿದ್ದಾರೆ ಎಂದು ಸಿಪಿಐಎಂ ಪ್ರಕಟನೆ ತಿಳಿಸಿದೆ. ಇಂದು ಜಿಲ್ಲಾ ಪ್ರವಾಸದಲ್ಲಿದ್ದ […]

Continue Reading

ಬೆಳ್ತಂಗಡಿ: ಮಡಿವಾಳ ಕುಟುಂಬದ ಪಡಿತರ ಚೀಟಿಯಲ್ಲಿ ಬಂಟ ಸಮುದಾಯದ ಹೆಸರು ಸೇರ್ಪಡೆ..!

ವಿಕಲಚೇತನ ಹೆಸರಿನಲ್ಲಿ ಮಂಜೂರಾಗಿರುವ ನ್ಯಾಯಬೆಲೆ ಅಂಗಡಿ ಮುಕ್ಕಲು ಷಡ್ಯಂತ್ರ.. ಆಹಾರ ಇಲಾಖೆ ಅಧಿಕಾರಿಗಳು ಸಾಥ್. ಬೆಳ್ತಂಗಡಿ ತಾಲೂಕಿನ ಕೋಡಿಬೆಟ್ಟು ನಿವಾಸಿಯಾಗಿರುವ ತ್ಯಾಂಪಣ್ಣ ಮಡಿವಾಳರ ಪತ್ನಿಯಾಗಿರುವ ಅಮಿತಾ ಎಂಬವರು ನಂ. 110100157404 ನ ಆದ್ಯತಾ ಕುಟುಂಬಕ್ಕೆ ಮೀಸಲಾಗಿರುವ ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿದ್ದು, ಪಡಿತರ ಚೀಟಿಯಲ್ಲಿ ಅವರ ಮಗಳಾದ ಕೆ.ನಿಕ್ಷಿತಾ ಳ ಹೆಸರು ಇದೆ . ಕೆ. ನಿಕ್ಷಿತಾ ಎಂಬಾಕೆ ವಿಕಲಚೇತನಳಾಗಿದ್ದು , ಮನೆಯಲ್ಲಿಯೇ ಇರುತ್ತಾಳೆ. ಆಕೆಯ ಹೆಸರಿನಲ್ಲಿ 21 ಎಂವಿಎಸ್ಎಸ್ ಗುರುವಾಯನಕೆರೆ ನ್ಯಾಯಬೆಲೆ ಅಂಗಡಿಯ ಪರವಾನಗಿ ಇರುತ್ತದೆ. […]

Continue Reading