ಬೆಳ್ಳಾರೆ: ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಉನ್ಮೇಶನ ದಸ್ತಗಿರಿ

ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ. ಸಂಖ್ಯೆ: 56/2020, ಕಲಂ: 457, 380 r/w 34 ಐ.ಪಿ.ಸಿ (ಕಳವು) ಪ್ರಕರಣದಲ್ಲಿ ಆರೋಪಿಯಾಗಿ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ, ವಾರೆಂಟ್ ಜಾರಿಯಾಗಿದ್ದರೂ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ಆರೋಪಿ ಉನ್ಮೇಶ ಎಂಬಾತನನ್ನು, ಬೆಳ್ಳಾರೆ ಠಾಣಾ ಪೊಲೀಸರು ಕೇರಳ ರಾಜ್ಯದಲ್ಲಿ ದಸ್ತಗಿರಿ ಮಾಡಿ, ದಿನಾಂಕ: 17.08.2025ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಮಾನ್ಯ ನ್ಯಾಯಾಲಯವು ಆರೋಪಿ ಉನ್ಮೇಶನಿಗೆ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.

Continue Reading

ಬುದ್ಧಿವಂತರ ಜಿಲ್ಲೆಯಲ್ಲಿ ಲಕ್ಕಿ ಸ್ಕೀಮ್ ಉಂಡೆನಾಮ.!

ಲಕ್ಕಿ ಸ್ಕೀಮ್‌ ಗೋಲ್‌ಮಾಲ್‌ ಬಟಾಬಯಲಾಗಿದೆ.ಪ್ರಸಿದ್ಧ ಸತ್ಯವಂತ ಸಂಸ್ಥೆ ನಮ್ಮದು ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿರುವ ಕೆಲ ಲಕ್ಕೀ ಸ್ಕೀಮ್‌ ಕಂಪೆನಿಗಳ ಉಂಡೆನಾಮ ಪುರಾಣ ಹೊರಬಂದಿದೆ. ಅಮಾಯಕರಿಗೆ ಮೋಸ ಮಾಡಿ ಅವರ ಬದುಕು ಬೀದಿಗೆ ತರುವ ಈ ಲಕ್ಕೀ ಸ್ಕೀಮ್‌ಗಳ ಬಗ್ಗೆ ಬುದ್ಧಿವಂತರ ಜಿಲ್ಲೆಯ ಜನ ಇನ್ನಾದರೂ ಎಚ್ಚೆತ್ತುಕೊಳ್ಳಲಿ. ಲಕ್ಕಿ ಸ್ಕೀಮ್ ನಂಬಿದ್ರೆ ಉಂಡೆನಾಮ ಗ್ಯಾರಂಟಿ ಈ ಹಿಂದೆ ಡ್ರೀಮ್ ಹೆಸರಿನ ಲಕ್ಕಿ ಸ್ಕೀಮ್ ವೊಂದು ಲೈವಲ್ಲೇ ತಮಗೆ ಬೇಕಾದವರ ಹೆಸರಿನ ಚೀಟಿಯನ್ನು ಬೆರಳಿನ ಸಂಧಿಯಲ್ಲಿ ಬಚ್ಚಿಟ್ಟು ಅವರಿಗೆ ಲಕ್ಕಿ […]

Continue Reading

ನೇರ ನಡೆ ನುಡಿಯ, ಅಪರೂಪದ ದಕ್ಷ, ನಿಷ್ಠಾವಂತ ಪೊಲೀಸ್ ಅಧಿಕಾರಿ ಡಿವೈಎಸ್ಪಿ ಬೆಳ್ಳಿಯಪ್ಪ

ಪೊಲೀಸ್ ಅನ್ನುವ ಪದಕ್ಕೆ ಗೌರವ, ಪ್ರಾಮಾಣಿಕತೆಯ ಹೆಸರು ತಂದುಕೊಟ್ಟವರು ಕೆ.ಯು. ಬೆಳ್ಳಿಯಪ್ಪ ಅವರು. ತನ್ನ ದಕ್ಷ, ಸಮರ್ಥ ಕಾರ್ಯ ನಿರ್ವಹಣೆಯ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಜನರ ಮನಸ್ಸಿನಲ್ಲಿ ಬೇರೂರಿರುವ ಅಪರೂಪದ ಪೊಲೀಸ್ ಅಧಿಕಾರಿ ಆಗಿದ್ದಾರೆ ಡಿವೈಎಸ್ಪಿ ಬೆಳ್ಳಿಯಪ್ಪ. ನೇರ ನಡೆ ನುಡಿಯ ದಕ್ಷ ಪೊಲೀಸ್ ಅಧಿಕಾರಿ ಆಗಿರುವ ಬೆಳ್ಳಿಯಪ್ಪ ತಮ್ಮ ಸೇವಾವಧಿಯನ್ನು ಹೆಚ್ಚಿನ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಸಿದರು. ಕಳೆದ ಹಲವು ವರ್ಷಗಳಿಂದ ಜಿಲ್ಲೆಯ ಹಲವು ಠಾಣೆಗಳಲ್ಲಿ ಸೇವೆ ಸಲ್ಲಿಸಿ ಉತ್ತಮ ಅಧಿಕಾರಿ ಎಂದು […]

Continue Reading

ಹೈಕೋರ್ಟ್ ಗಳಿಗಿಂತ ಸುಪ್ರೀಂ ಕೋರ್ಟ್ ಶ್ರೇಷ್ಠವಲ್ಲ

ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್ ಎರಡೂ ಸಂವಿಧಾನಿಕ ನ್ಯಾಲಯಗಳು. ಎರಡರ ಪೈಕಿ ಶ್ರೇಷ್ಠ ಅಥವಾ ಕೀಳು ಎಂಬುದಿಲ್ಲ: ಸಿಜೆಐ ಗವಾಯಿ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ಕೊಲಿಜಿಯಂ ಎರಡೂ ಸಾಂವಿಧಾನಿಕ ಸಂಸ್ಥೆಗಳು. ಇವುಗಳಲ್ಲಿ ಯಾವುದೂ ಮೇಲಲ್ಲ, ಯಾವುದೂ ಕೀಳಲ್ಲ ಎಂದು ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಬಿ.ಆರ್‌.ಗವಾಯಿ ಅವರುಸುಪ್ರೀಂ ಕೋರ್ಟ್ ಬಾರ್‌ ಅಸೋಸಿಯೇಷನ್‌ ಅಯೋಜಿಸಿದ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಜರುಗಿದ ಕಾರ್ಯಕ್ರಮದಲ್ಲಿ ಅವರು ಅಭಿಪ್ರಾಯಪಟ್ಟರು ಈ ಸಂದರ್ಭದಲ್ಲಿ SCBA ಇದರ ಅಧ್ಯಕ್ಷ ವಿಕಾಸ್‌ ಸಿಂಗ್‌ ಅವರು, […]

Continue Reading

ಇನ್ಸ್ ಪೆಕ್ಟರ್ ಶಾಂತರಾಮ್, ಸಿಸಿಬಿ ಎ.ಎಸ್.ಐ ಸುಜನ್ ಶೆಟ್ಟಿ ರವರಿಗೆ ರಾಷ್ಟ್ರಪತಿ ಪದಕ ಗೌರವ

ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಪೊಲೀಸ್ ಇಲಾಖೆಯಲ್ಲಿ ಸಮರ್ಥ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ನೀಡುವ ರಾಷ್ಟ್ರಪತಿ ಪದಕ ಗೌರವಕ್ಕೆ ರಾಜ್ಯದಿಂದ 19 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದು, ಮಂಗಳೂರು ಸಿಸಿಬಿ ಯಲ್ಲಿ ಎ.ಎಸ್.ಐ ಆಗಿರುವ ಸುಜನ್ ಶೆಟ್ಟಿ ಹಾಗೂ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಲವು ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ಇನ್ಸ್ ಪೆಕ್ಟರ್ ಶಾಂತರಾಮ್ ಈ ಗೌರವಕ್ಕೆ ಪಾತ್ರರಾಗಿದ್ದಾರೆ. ಇನ್ಸ್ ಪೆಕ್ಟರ್ ಶಾಂತರಾಮ್ ಈ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಕದ್ರಿ, ಪಣಂಬೂರು, ಸಿಸಿಬಿ ಸೇರಿದಂತೆ ಹಲವು […]

Continue Reading

ಅಕ್ರಮ ಬೆಟ್ಟಿಂಗ್ ದಂಧೆ: 110 ಕೋಟಿ ರೂಪಾಯಿ, 1,200 ಕ್ರೆಡಿಟ್ ಕಾರ್ಡ್‌ ಇ.ಡಿ ವಶ

ಸೈಪ್ರಸ್ ಮೂಲದ ‘ಅಕ್ರಮ’ ಆನ್‌ಲೈನ್ ಬೆಟ್ಟಿಂಗ್ ವೇದಿಕೆಯಾದ ಪ್ಯಾರಿಮ್ಯಾಚ್‌ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಇತ್ತೀಚೆಗೆ ಶೋಧ ನಡೆಸಿದೆ. ಅಕ್ರಮಕ್ಕೆ ಬಳಸಿಕೊಂಡಿದ್ದ ಬ್ಯಾಂಕ್ ಖಾತೆಗಳಲ್ಲಿ ಇರಿಸಲಾಗಿದ್ದ 110 ಕೋಟಿ ರೂಪಾಯಿಯನ್ನು, 1,200 ಕ್ರೆಡಿಟ್ ಕಾರ್ಡ್‌ಗಳನ್ನು ಇ.ಡಿ ವಶಪಡಿಸಿಕೊಂಡಿದೆ. ಪ್ಯಾರಿಮ್ಯಾಚ್ ಕಾರ್ಯಾಚರಣೆಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್‌ಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣದ ಭಾಗವಾಗಿ ಆಗಸ್ಟ್ 12 ರಂದು ಮುಂಬೈ, ನೋಯ್ಡಾ, ಜೈಪುರ, ಸೂರತ್, ಮಧುರೈ, ಕಾನ್ಪುರ ಮತ್ತು ಹೈದರಾಬಾದ್‌ನ 17 ಸ್ಥಳಗಳಲ್ಲಿ ಇಡಿ ದಾಳಿ ನಡೆಸಿತ್ತು. […]

Continue Reading

ಜಾತಿ-ಧರ್ಮಗಳ ಎಲ್ಲೆ ಮೀರಿ ಬ್ರಿಟಿಷರೊಂದಿಗೆ ಹೋರಾಡಿದ ಭಾರತೀಯರು ಅದೇ ಸೌಹಾರ್ದತೆಯನ್ನು ಮುಂದುವರಿಸಿದಾಗ ಮಾತ್ರ ಸ್ವಾತಂತ್ರ್ಯೋತ್ಸವಕ್ಕೆ ನಿಜಾರ್ಥ ಬರಲಿದೆ!

✍️ – ಪಿ.ಎಂ.ಎ. ಪಾಣೆಮಂಗಳೂರು. ಭಾರತದ ಹೇರಳ ಸಂಪತ್ತನ್ನು ಕಂಡು ವ್ಯಾಪಾರದ ಉದ್ದೇಶವನ್ನಿಟ್ಟುಕೊಂಡು ಭಾರತಕ್ಕೆ ಬಂದ ಬ್ರಿಟಿಷರು ತಮ್ಮ ಜಾಣ್ಮೆ, ದಬ್ಬಾಳಿ-ಕ್ರೌರ್ಯದಿಂದ ಇಡೀ ದೇಶದ ಅಧಿಪತ್ಯವನ್ನು ಸ್ಥಾಪಿಸಿದ ಕತೆ ಪ್ರತೀ ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲೂ ಭಾಷಣದ ರೂಪದಲ್ಲಿ ಮೊಳಗುತ್ತಲೇ ಇದೆ. ಈ ರೀತಿಯಾಗಿ ಭಾರತಕ್ಕೆ ಬಂದ ಬ್ರಿಟಿಷರು ಬಳಿಕ ಸಮಸ್ತ ಭಾರತೀಯರನ್ನು ಗುಲಾಮರನ್ನಾಗಿಸಿ ದೇಶವನ್ನಾಳಿದ ಬಿಳಿಯರನ್ನು ಒದ್ದೋಡಿಸಲು ಭಾರತೀಯರು ಸುದೀರ್ಘ ಕಾಲದ ಹೋರಾಟವನ್ನು ನಡೆಸಬೇಕಾಗಿ ಬಂದಿರುವುದೆಲ್ಲವೂ ಇತಿಹಾಸ. ವರ್ಷಾನುಗಟ್ಟಲೆ ಬ್ರಿಟಿಷರ ದಾಸ್ಯದಲ್ಲಿ ಜೀವಿಸಿದ ಭಾರತೀಯರಿಗೆ ಕಾಲಕ್ರಮೇಣ ಇವರ ದಬ್ಬಾಳಿಕೆ, […]

Continue Reading

ಕಂಕನಾಡಿ ನಗರ ಪೊಲೀಸ್ ಠಾಣೆ ಮತ್ತು ಮಂಗಳೂರು ಗ್ರಾಮಾಂತರ (ವಾಮಂಜೂರು) ಠಾಣೆಗಳ ವ್ಯಾಪ್ತಿಯ ಗ್ರಾಮಗಳು ಮರುವಿಂಗಡನೆ

ಯಾವ್ಯಾವ ಗ್ರಾಮಗಳು ಯಾವ ಪೊಲೀಸ್ ಠಾಣಾ ವ್ಯಾಪ್ತಿಗೆ ಸೇರಲಿದೆ; ಇಲ್ಲಿದೆ ಪುಲ್ ಡೀಟೇಲ್ಸ್ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಗ್ರಾಮಾಂತರ (ವಾಮಂಜೂರು) ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಅಡ್ಯಾರ್ ಮತ್ತು ಅರ್ಕುಳ ಗ್ರಾಮಗಳನ್ನು ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಹಾಗೂ ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಪದವು ಗ್ರಾಮವನ್ನು ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಗೆ ಮರುವಿಂಗಡಿಸಿ ಸರಕಾರ ಅಧಿಸೂಚನೆಯನ್ನು ಹೊರಡಿಸಿದೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಪದವು ಗ್ರಾಮಕ್ಕೆ ಒಳಪಡುವ […]

Continue Reading

ಸಾಮಾಜಿಕ ಜಾಲತಾಣದಲ್ಲಿ ಅವಮಾನಕಾರಿ‌ ಸಂದೇಶ ಪ್ರಸಾರ; 5 ಮಂದಿ ವಿರುದ್ದ ಪ್ರಕರಣ ದಾಖಲು

ದ.ಕ: ಹುಬ್ಬಳ್ಳಿ ಚಬ್ಬಿ ಗ್ರಾಮದ ನಿವಾಸಿ ಅಜಿತ್ ನಾಗಪ್ಪ ಬಸಾಪುರ್ (32) ಎಂಬವರ ದೂರಿನಂತೆ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಎಂಬಲ್ಲಿ, ಪ್ರಕರಣದ ಆರೋಪಿತನಾದ ಗಿರೀಶ ಮಟ್ಟೆಣ್ಣ ಎಂಬವರು ಜೈನ ಧರ್ಮಕ್ಕೆ ಮತ್ತು ಜೈನ ಧರ್ಮೀಯರ ಭಾವನೆಗಳಿಗೆ ಅವಮಾನಪಡಿಸುವ ಉದ್ದೇಶದಿಂದ ಕುಡ್ಲ ರಾಂಪೇಜ್ ಯೂಟ್ಯೂಬ್ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ, ಜೈನರು ಹಾಗೂ ಜೈನ ಧರ್ಮದವರ ಬಗ್ಗೆ ತುಚ್ಚವಾಗಿ ಮಾತನಾಡಿರುತ್ತಾರೆ ಹಾಗೂ ಪ್ರಕರಣದ ಮತ್ತೋರ್ವ ಆರೋಪಿ ಕುಡ್ಲ ರಾಂಪೇಜ್ ಚಾನೆಲ್ ಮಾಲೀಕನು ಸದ್ರಿ ಸಂದರ್ಶನದ […]

Continue Reading

ಸಂಬಂಧಿಕ ಯುವಕನಿಂದಲೇ ಲೈಂಗಿಕ ದೌರ್ಜನ್ಯ; ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ: ಮಗು ಸಾವು

ಅಪ್ರಾಪ್ತೆಯೊಬ್ಬಳು ಮಗುವಿಗೆ ಜನ್ಮ ನೀಡಿದ ಹಾಗೂ ಮಗು ಜನನವಾದ ಒಂದು ದಿನದ ಬಳಿಕ ಮೃತಪಟ್ಟ ಘಟನೆ ಸುಬ್ರಹ್ಮಣ್ಯ ಠಾಣೆ ವ್ಯಾಪ್ತಿಯ ಕೊಲ್ಲಮೊಗ್ರುವಿನಲ್ಲಿ ನಡೆದಿದೆ. ಅಪ್ರಾಪ್ತೆಯೊಬ್ಬಳನ್ನು ಸಂಬಂಧಿಕನೇ ಗರ್ಭವತಿ ಮಾಡಿದ್ದ ಪ್ರಕರಣ ಇದಾಗಿತ್ತು. ಅಪ್ರಾಪ್ತೆ ಬಾಲಕಿ ಕಂದ್ರಪ್ಪಾಡಿ ಸಂಬಂಧಿಕರ ಮನೆಗೆ ಬಂದಿದ್ದಾಗ ಸಂಬಂಧಿಕ ಯುವಕ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪರಿಣಾಮ ಆಕೆ ಗರ್ಭವತಿಯಾಗಿದ್ದಳು. ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅಲ್ಲದೇ ಆರೋಪಿ ಯುವಕನನ್ನು ಬಂಧಿಸಲಾಗಿತ್ತು. ಗರ್ಭವತಿಯಾಗಿದ್ದ ಯುವತಿ ಸೋಮವಾರ […]

Continue Reading