ಸೂರಲ್ಪಾಡಿ ಮಸೀದಿಯ ಮಾಜಿ ಅಧ್ಯಕ್ಷರು, ಧಾರ್ಮಿಕ ಮುಂದಾಳು ಕೆ. ಶೇಖ್ ಅಬ್ಬಾಸ್ (ಬಾವಾಕ) ವಿಧಿವಶ

ಮಂಗಳೂರು: ಸೂರಲ್ಪಾಡಿ ಮಲ್ಹರುಲ್ ಅವಾಕಿಫ್ ಜುಮಾ ಮಸ್ಜಿದ್ ಸುರಲ್ಪಾಡಿ ಇದರ ಮಾಜಿ ಅಧ್ಯಕ್ಷರು, ಮಸೀದಿಯ ದೀರ್ಘ ಕಾಲ ಸದಸ್ಯರಾಗಿ ಸೇವೆ ಸಲ್ಲಿಸಿದ ಕೆ. ಶೇಖ್ ಅಬ್ಬಾಸ್ ಇಂದು ನಿಧನರಾಗಿದ್ದಾರೆ. ಸ್ಥಳೀಯವಾಗಿ ಬಾವಾಕ ಎಂದೇ ಚಿರಪರಿಚಿತರಾಗಿದ್ದರು. ಸೂರಲ್ಪಾಡಿ ಮಸೀದಿ ಅಭಿವೃದ್ಧಿ ಕಾರ್ಯದಲ್ಲಿ ಮುಂಚೂಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶೇಖ್ ಅಬ್ಬಾಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು. ಚಿರ ಯುವಕರಂತೆ ಧಾರ್ಮಿಕ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳುತ್ತಿದ್ದರು. ಅವರಿಗೆ ಆರು ಗಂಡು, ಒಂದು ಹೆಣ್ಣು ಮಕ್ಕಳಲ್ಲಿ ಖ್ಯಾತ […]

Continue Reading

ಧರ್ಮಸ್ಥಳ ಪ್ರಕರಣದ ತಡೆಯಾಜ್ಞೆ ತೆರವು ಸಂಬಂಧ ಸಿಟಿ ಸಿವಿಲ್ ಕೋರ್ಟ್ ನಲ್ಲಿ ವಾದ ಮಂಡನೆ

ಪತ್ರಕರ್ತ, ಹೋರಾಟಗಾರರ ಪರವಾಗಿ ಹಿರಿಯ ವಕೀಲ ಎಸ್ ಬಾಲನ್ ವಾದ ತಡೆಯಾಜ್ಞೆ ಪ್ರಶ್ನಿಸಿದ ನವೀನ್ ಸೂರಿಂಜೆ, ಮುನೀರ್ ಕಾಟಿಪಳ್ಳ, ಬೈರಪ್ಪ ಹರೀಶ್ ಕುಮಾರ್ ಬೆಂಗಳೂರು : ಧರ್ಮಸ್ಥಳದ ಬಗೆಗಿನ ಮಾನಹಾನಿ ಸುದ್ದಿ ಪ್ರಸಾರ ಮಾಡದಂತೆ ಬೆಂಗಳೂರಿನ 26 ನೇ ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ತಡೆಯಾಜ್ಞೆಗೆ ಆಕ್ಷೇಪಣೆ ಸಲ್ಲಿಸಿ, ತಡೆಯಾಜ್ಞೆ ತೆರವುಗೊಳಿಸುವಂತೆ ಹಿರಿಯ ವಕೀಲ ಎಸ್ ಬಾಲನ್ ಅರ್ಜಿ ಸಲ್ಲಿಸಿದ್ದಾರೆ. 338 ಪತ್ರಕರ್ತರು, ಹೋರಾಟಗಾರರು, ಸಂಸ್ಥೆಗಳು ಮತ್ತು ಅಧೃಶ್ಯ ವ್ಯಕ್ತಿ ಸೇರಿದಂತೆ ಒಟ್ಟು 339 ಪ್ರತಿವಾದಿಗಳ ವಿರುದ್ಧ […]

Continue Reading

ಮಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ; ಆರೋಪಿ ಮನ್ಸೂರ್ ನಿಗೆ 20 ವರ್ಷ ಜೈಲು ಶಿಕ್ಷೆ

16 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಬೆದರಿಕೆ ಹಾಕಿ ವಿಡಿಯೋ ಚಿತ್ರೀಕರಿಸಿದ ಆರೋಪದಲ್ಲಿ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಯನ್ನು ವಿಧಿಸಲಾಗಿದೆ. ದಿನಾಂಕ 30-05-2023 ರಂದು ಸಜಿಪನಡು ನಿವಾಸಿ ಅಬ್ದುಲ್ ಅಝೀಝ್ ರವರ ಮಗ ಮೊಹಮ್ಮದ್ ಮನ್ಸೂರ್ ಯಾನೆ ಜಾಬೀರ್ ಈ ಕೃತ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿತ್ತು. ಈ ಸಂಬಂಧ ದಿನಾಂಕ 23-12-2023 ರಂದು ಮಂಗಳೂರು ಮಹಿಳಾ ಪೊಲೀಸ್ ಠಾಣಾ ಅ.ಕ್ರ 128/2023 ಕಲಂ: 363, […]

Continue Reading

ಅನ್ನದಾತರ ಬದುಕಿಗೆ ‘ಗ್ಯಾರಂಟಿ’ ಯೇ ಇಲ್ಲ.! ವರ್ಷದಲ್ಲಿ ರಾಜ್ಯದಲ್ಲಿ ಬರೋಬ್ಬರಿ 981 ರೈತರ ಆತ್ಮಹತ್ಯೆ

ಹಾವೇರಿಯಲ್ಲಿ ಅತೀ ಹೆಚ್ಚು 128 ಪ್ರಕರಣ, ಉಡುಪಿಯಲ್ಲಿ ಶೂನ್ಯ. ಕಳೆದ ಐದು ವರ್ಷಕ್ಕೆ ಹೋಲಿಸಿದರೆ ಈ ಬಾರಿ ಅತೀ ಹೆಚ್ಚು ಆತ್ಮಹತ್ಯೆ ಪ್ರಕರಣ..ಪಂಚ ಗ್ಯಾರಂಟಿ ರೈತರ ಬದುಕಿನಲ್ಲಿ ಬದಲಾವಣೆ ತಂದಿಲ್ಲ ರಾಜ್ಯದಲ್ಲಿ ಒಂದು ವರ್ಷದಲ್ಲಿ ಬರೋಬ್ಬರಿ 981 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯುತ್, ಶಕ್ತಿ, ಶೂನ್ಯ ಬಡ್ಡಿದರದಲ್ಲಿ ಸಾಲ, ಸರಕಾರದ ಗ್ಯಾರಂಟಿಗಳೂ ಸಹ ರೈತರ ಆತ್ಮಹತ್ಯೆಗೆ ತಡೆಯಲು ಆಗದಂತೆ ಆಗಿದೆ. ಕಳೆದ 2024 ರ ಏಪ್ರಿಲ್ ಒಂದರಿಂದ 2025 ಮೇ 25 ರವರೆಗೆ ರಾಜ್ಯದಲ್ಲಿ 981ರೈತರು ಆತ್ಮಹತ್ಯೆ […]

Continue Reading

ಮಂಗಳೂರು ಮಹಾ ನಗರ ಪಾಲಿಕೆಯಲ್ಲಿ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಠಿ ಮತ್ತು ವಂಚನೆ ಪ್ರಕರಣದ ಆರೋಪಿ ಪೃಥ್ವಿರಾಜ್ ಶೆಟ್ಟಿ ಯಾನೆ ಮುನ್ನ ಬಂಧನ

ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿಯ ನಕಲಿ ರಶೀದಿ ಸೃಷ್ಟಿಸಿದ ಆರೋಪದಲ್ಲಿ ಉಜ್ಜೋಡಿ ನಿವಾಸಿ ಪೃಥ್ವಿರಾಜ್ ಶೆಟ್ಟಿ ಯಾನೆ ಮುನ್ನಾ ಎಂಬಾತನನ್ನು ಕಂಕನಾಡಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. “ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್” ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ಮಾನ್ಯ ನ್ಯಾಯಾಲಯದ ಪ್ರಕರಣ ದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳಲು ಮಂಗಳೂರು ಮಹಾ ನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭ ಅವರ ಉದ್ದಿಮೆ ಪರವಾನಿಗೆ ಹಾಗೂ […]

Continue Reading

ಕರಾವಳಿಗೆ ಪ್ರತ್ಯೇಕ ಮರಳು ನೀತಿ, ಸರಳೀಕೃತ ಪರವಾನಿಗೆ, ಕೇರಳ ಮಾದರಿ ನೀತಿ ಜಾರಿಗೊಳಿಸುವಂತೆ ಒತ್ತಾಯ

ಸಂಸದ ಬ್ರಿಜೇಶ್ ಚೌಟ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದ ಜಿಲ್ಲಾ ಬಿಜೆಪಿ ನಿಯೋಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ತಿಂಗಳಿಂದ ಕೆಂಪು ಕಲ್ಲು ಮತ್ತು ಮರಳು ಗಣಿಗಾರಿಕೆ ಸ್ತಬ್ದಗೊಂಡು ಕರಾವಳಿಯ ಆರ್ಥಿಕ ಪರಿಸ್ಥಿತಿಗೆ ತೀವ್ರ ಹಿನ್ನಡೆಯಾಗಿದ್ದು, ಸಾವಿರಾರು ಕಾರ್ಮಿಕರು ಕೆಲಸವಿಲ್ಲದೆ ಬದುಕಿನ ಬಂಡಿ ದೂಡುವುದು ಕಷ್ಟವಾಗಿದೆ. ರಾಜ್ಯ ಸರಕಾರದ ಅಸಮರ್ಪಕ ಹಾಗೂ ಅವೈಜ್ಞಾನಿಕ ಮರಳು ನೀತಿಯಿಂದಾಗಿ ಜಿಲ್ಲೆಯಲ್ಲಿ ಮರಳಿನ ಪೂರೈಕೆ ಸಂಪೂರ್ಣ ಸ್ತಬ್ದವಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಗೃಹ ನಿರ್ಮಾಣ ಕಾರ್ಯ, ಕಟ್ಟಡ ಕಾಮಗಾರಿ ಸಂಪೂರ್ಣ ನಿಂತಿದೆ. […]

Continue Reading

ಆಸ್ತಿ ವರ್ಗಾವಣೆಗೆ GPA ನೋಂದಣಿ ಮಾಡಬೇಕು. GPA ಕೊಡುವವರು ಬದುಕಿರುವ ಪುರಾವೆ ಹಾಜರುಪಡಿಸಬೇಕು.

ಕರ್ನಾಟಕ ಅಧಿನಿಯಮ 2025 ಕ್ಕೆ ರಾಷ್ಟ್ರಪತಿಗಳು ಅಂಕಿತ ಆಸ್ತಿ ನೋಂದಣಿಗೆ ಜನರಲ್ ಪವರ್ ಆಟಾರ್ನಿಕಡ್ಡಾಯಗೊಳಿಸುವ ನೋಂದಣಿ ಕರ್ನಾಟಕ ಅಧಿನಿಯಮ 2025 ಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಸೋಮವಾರ ಅಧಿಕೃತ ರಾಜ್ಯ ಪತ್ರ ಹೊರಡಿಸಿದ್ದು, ರಾಜ್ಯ ಪತ್ರ ಹೊರಡಿಸಿದ ದಿನದಿಂದಲೇ ಈ ಮಸೂದೆ ಜಾರಿಗೆ ಬರಲಿದೆ. ನೋಂದಣಿ ಅಧಿನಿಯಮ 19008(1908ರ ಕೇಂದ್ರ ಅಧಿನಿಯಮ 16) ಅನ್ನು ಮತ್ತಷ್ಟು ತಿದ್ದುಪಡಿ ಮಾಡಿ ಕೆಲವು ಬದಲಾವಣೆ ಒಳಗೊಂಡ ಮಸೂದೆ ಇದಾಗಿದೆ. ಆಸ್ತಿ ನೋಂದಣಿಯನ್ನು ಸಂಪೂರ್ಣ ಡಿಜಿಟಲೀಕರಿಸುವ, […]

Continue Reading

ನಾಗರ ಪಂಚಮಿ ಹೆಸರಿನಲ್ಲಿ ಹಾಲನ್ನು ಸುರಿದು ಪೋಲು ಮಾಡುವ ಬದಲು ರೋಗಿಗಳಿಗೆ ನೀಡುವ ವಿನೂತನ ಕಾರ್ಯಕ್ರಮಕ್ಕೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆ ಸಾಕ್ಷಿಯಾಯಿತು.

ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉಚಿತವಾಗಿ ಹಾಲು, ಹಣ್ಣು ಹಂಪಲು ವಿತರಣೆ ನಾಗರ ಪಂಚಮಿ ಹೆಸರಿನಲ್ಲಿ ಮೌಢ್ಯಕ್ಕೆ ಒಳಗಾಗಿ ಜನರು ಹಾಲನ್ನು ನಾಗರ ಹುತ್ತಗಳಿಗೆ , ಕಲ್ಲಿಗೆ ಸುರಿದು ಅಪಾರ ಪೌಷ್ಟಿಕಾಂಶಯುಳ್ಳ ಹಾಲನ್ನು ಪೋಲು ಮಾಡುವ ಬದಲಾಗಿ ರೋಗಿಗಳಿಗೆ ನೀಡುವ ವಿನೂತನ ಕಾರ್ಯಕ್ರಮಕ್ಕೆ ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆ ಇಂದು ಸಾಕ್ಷಿಯಾಯಿತು. ನಾಗರ ಪಂಚಮಿ ದಿನದಂದು ಮಂಗಳವಾರ ಬೆಳ್ತಂಗಡಿ ತಾಲೂಕು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಬೆಳ್ತಂಗಡಿ ತಾಲೂಕು […]

Continue Reading

ಉಡುಪಿಯಲ್ಲಿ ಸಂಸ್ಕೃತಿ ಸಂಭ್ರಮ ಸಮಾರೋಪ. ನಮ್ಮ ಸಂಸ್ಕೃತಿ, ಸಂಸ್ಕಾರ, ಪದ್ಧತಿಗಳು ನಮಗೆ ಭೂಷಣ: ಮಾಜಿ ಸಚಿವ ಸೊರಕೆ

ಉಡುಪಿ : ಒಬ್ಬ ವ್ಯಕ್ತಿಗೆ ಬಂಗಾರ, ವಜ್ರ ಇವೆಲ್ಲಾ ಎಷ್ಟು ಭೂಷಣವೋ ಹಾಗೆಯೇ ನಮ್ಮ ಸಂಸ್ಕೃತಿ, ಸಂಸ್ಕಾರ, ಪದ್ಧತಿಗಳು ಕೂಡಾ ಭೂಷಣವಾಗಿರುತ್ತದೆ. ಕರಾವಳಿ ಪ್ರದೇಶ ಅತ್ಯುನ್ನತ ಸಂಸ್ಕೃತಿ, ಸಂಸ್ಕಾರಕ್ಕೆ ಹೆಸರುವಾಸಿಯಾಗಿದೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಶನಿವಾರ ಎಂಜಿಎo ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಜಾನಪದ ಅಕಾಡೆಮಿ, ನಾಟಕ ಅಕಾಡೆಮಿ ಹಾಗೂ ರಂಗಭೂಮಿ ಉಡುಪಿ ಇವರ ಸಹಯೋಗದಲ್ಲಿ ಗೊಂಬೆಯಾಟ, ಜಾನಪದ ಕಲೆ, […]

Continue Reading

ಮತಾಂತರವಾಗದೆ ನಡೆಯುವ ವಿವಾಹಗಳು ಕಾನೂನು ಬಾಹಿರ; ಆರ್ಯ ಸಮಾಜ, ದೇವಸ್ಥಾನಗಳು ನೀಡುವ ನಕಲಿ ವಿವಾಹ ಪ್ರಮಾಣಪತ್ರ ಪ್ರಕರಣಗಳ ಬಗ್ಗೆ ಗಂಭೀರ ಕಳವಳ: ಅಲಹಾಬಾದ್ ಹೈಕೋರ್ಟ್

ಅಂತರಧರ್ಮದ ಜನರಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡುತ್ತಿರುವ ಆರ್ಯ ಸಮಾಜ ಸಂಘಗಳನ್ನು ಡಿಸಿಪಿ, ಐಪಿಎಸ್ ಮಟ್ಟದ ಅಧಿಕಾರಿಯಿಂದ ತನಿಖೆಗೆ ಆದೇಶ ಮತಾಂತರವಿಲ್ಲದೆ ಬೇರೆ ಬೇರೆ ಧರ್ಮಗಳನ್ನು ಅನುಸರಿಸುವ ಜನರ ನಡುವಿನ ವಿವಾಹವನ್ನು ಕಾನೂನುಬಾಹಿರವೆಂದು ಪರಿಗಣಿಸಲಾಗುತ್ತದೆ ಎಂದು ಅಲಹಾಬಾದ್ ನ್ಯಾಯಾಲಯ ಸ್ಪಷ್ಟಪಡಿಸಿದೆ. ಆರ್ಯ ಸಮಾಜದಂತಹ ಸಂಸ್ಥೆಗಳು ವಿವಾಹ ಪ್ರಮಾಣಪತ್ರಗಳನ್ನು ನೀಡುವ ಮತ್ತು ವಿವಾಹ ವಿಧಿವಿಧಾನದ ನಿಗದಿತ ಶುಲ್ಕ ಮತ್ತು ದಕ್ಷಿಣೆಯನ್ನು ತೆಗೆದುಕೊಂಡು ಯಾರಿಗಾದರೂ ವಿವಾಹ ಪ್ರಮಾಣಪತ್ರಗಳನ್ನು ನೀಡುವ ಸಂಸ್ಥೆಗಳನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ನೀಡಲಾಗಿದೆ. ಅಂದರೆ, ಅಂತಹ ವಿವಾಹಗಳು ಕಾನೂನಿನ […]

Continue Reading