ಬೆಳ್ತಂಗಡಿ ಲಾಯಿಲ ಗ್ರಾಮದ ದಲಿತ ಕುಟುಂಬಗಳು ವಾಸಿಸುವ ಊರಿನ ರಸ್ತೆಯ ಕಥೆ ವ್ಯಥೆ ಇದು

ಪರಿಶಿಷ್ಟರ ಬಗ್ಗೆ ಮೊಸಳೆ ಕಣ್ಣೀರು ಹಾಕುವ ಸರಕಾರಗಳು; ಪರಿಶಿಷ್ಟ ಕುಟುಂಬಗಳು ವಾಸಿಸುವ ರಸ್ತೆಯ ಯಾತನೆಗೆ ಇನ್ನಾದರೂ ಕಿವಿ ಕೊಡುತ್ತಾ..? ಇದು ತಾಲೂಕು ಕೇಂದ್ರದಿಂದ ಕೂಗಳತೆಯ ದೂರದಲ್ಲಿರುವ ಲಾಯಿಲ ಗ್ರಾಮದ ಅತ್ಯಂತ ಹೆಚ್ಚು ಪರಿಶಿಷ್ಟ ಜಾತಿ ಜನಸಂಖ್ಯೆಯನ್ನು ಹೊಂದಿರುವ ರಸ್ತೆಯ ಕರುಣಾಮಯ ಕಥೆ. ಇಲ್ಲಿ 80 ಕ್ಕೂ ಹೆಚ್ಚು ಕೇವಲ ದಲಿತ ಕುಟುಂಬಗಳೇ ಇವೆ. ಆದರೆ ಇಲ್ಲಿನ ರಸ್ತೆ ಮಾತ್ರ ಇಂದಿಗೂ ಡಾಮರೀಕರಣವನ್ನೇ ಕಂಡಿಲ್ಲ. ಒಂದು ಕಿ.ಮೀ. ಡಾಮರೀಕರಣಗೊಂಡ ರಸ್ತೆಯಲ್ಲಿ ಡಾಮರೀಕರಣದ ಅಸ್ತಿಪಂಜರಗಳು ಕಾಣಸಿಗುತ್ತದೆ. ಲಾಯಿಲ ಗ್ರಾಮದ ಲಾಯಿಲ […]

Continue Reading

ಉಡುಪಿ: ಯುವಕನ ಅಪಹರಣ; ಹಣಕ್ಕೆ ಬೇಡಿಕೆ, ಕೋಕಾ ಕಾಯ್ದೆಯಡಿ ಏಳು ಆರೋಪಿಗಳ ಬಂಧನ

ಮನೋಜ್ ಕೋಡಿಕೆರೆ, ಚೇತನ್ ಪಡೀಲ್ ಬಗ್ಗೆ ಮಾಹಿತಿ ನೀಡಿದವರಿಗೆ 50 ಸಾವಿರ ಬಹುಮಾನ ಘೋಷಣೆ ಸಾಸ್ತಾನದಲ್ಲಿ ಯುವಕನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಏಳು ಮಂದಿಯನ್ನು ಆರೋಪಿಗಳನ್ನು ಬಂಧಿಸಿರುತ್ತಾರೆ. ದೇವಿ ಪ್ರಸಾದ್ ಶೆಟ್ಟಿ ಯಾನೆ ದೀಕ್ಷಿತ್ ಹಿರಿಯಡ್ಕದ ಸುಜಿತ್, ಕಾಟಿಪಳ್ಳದ ಸುದೀಪ್, ಕೃಷ್ಣಾಪುರ ಶ್ರೀಷಾ ಆನಂದ ಶೆಟ್ಟಿ, ಮಿಥುನ್ ಕೈಕಂಬ, ಕೆಮ್ಮಣ್ಣು, ಹೂಡೆ ಮನೋಜ್ ವಿ. ಕೊಟ್ಯಾನ್ ಬಂಧಿತರು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಸಿದ್ದಾಪುರ ಮೋಹನ […]

Continue Reading

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿತರಕ್ಷಣಾ ಸಭೆ: ಹಣ ದುರುಪಯೋಗ ಮಾಡಿದ ಅಧಿಕಾರಿ ವಿರುದ್ಧ ಅಟ್ರಾಸಿಟಿ ಕೇಸ್ ಹಾಕಲು ಒತ್ತಾಯ

ಬೆಳ್ತಂಗಡಿ: ಸುಲ್ಕೇರಿ ಗ್ರಾಮದ ಅಟ್ರಿಂಜೆ ಕೊರಗ ಕಾಲೋನಿಗೆ ಕೇಂದ್ರ ಸರಕಾರದ ವಿಶೇಷ ಅನುದಾನದಲ್ಲಿ ಪಿ.ಎಂ.ಜನ್ ಮನ್ ಯೋಜನೆಯಡಿ ರಸ್ತೆ ಮತ್ತು ಸೇತುವೆ ನಿರ್ಮಾಣಕ್ಕಾಗಿ ಮಂಜೂರಾದ ಒಂಬತ್ತು ಕೋಟಿ ರೂ. ಹಣವನ್ನು ಬೇರೆ ಕಡೆ ಕೊಟ್ಟಿದ್ದೀರಿ. ಅಟ್ರಿಂಜೆ ಕೊರಗ ಕಾಲೋನಿ ಸೇತುವೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಿದ್ದೀರಿ. ಆದರೆ ಇನ್ನೂ ಕೂಡ ಅನುದಾನ ಬಿಡುಗಡೆ ಆಗಿಲ್ಲ. ಈ ಬಾರಿ ಮಳೆಗಾಲದಲ್ಲಿ ಈ ಸೇತುವೆಯಲ್ಲಿ ಹೇಗೆ ಹೋಗುವುದು? ಇದಕ್ಕೆ ಏನಾದರೂ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ […]

Continue Reading

ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ನ್ಯಾಯಾಲಯಕ್ಕೂ ಹಾಜರಾಗದೆ ಭೂಗತನಾಗಿದ್ದ ವಾರಂಟ್ ಆರೋಪಿಯ ಬಂಧನ.

ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ಪೊಲೀಸರ ಕಣ್ಣು ತಪ್ಪಿಸಿ ನ್ಯಾಯಾಲಯಕ್ಕೂ ಹಾಜರಾಗದೆ, ಭೂಗತನಾಗಿದ್ದ ಸುಹಾನ್ @ ಸೋನು, ಬಿರಾ ಪೂಜಾರಿ ಕಂಪೌಂಡ್, ಅಶೋಕ ನಗರ ಮಂಗಳೂರು ಎಂಬಾತನನ್ನು ದಿನಾಂಕ 29-03-2026 ರಂದು ಮುಂಬೈಯಲ್ಲಿ ಉರ್ವಾ ಪೊಲೀಸ್ ಪತ್ತೆಹಚ್ಚಿ, ಆರೋಪಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಈತನ ವಿರುದ್ದ ಮಂಗಳೂರು ನಗರ ಉರ್ವಾ ಪೊಲೀಸ್ ಠಾಣಾ ಅ.ಕ್ರ. 62/2016, ಕಲಂ. 399, 120(B) ಐಪಿಸಿ, ಉರ್ವಾ ಪೊಲೀಸ್ ಠಾಣಾ ಅ.ಕ್ರ 126/2017, ಕಲಂ 120(B), 399, 402, 188 ಐಪಿಸಿ, ಮಂಗಳೂರು […]

Continue Reading

ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ನ್ಯಾಯಾಲಯಕ್ಕೂ ಹಾಜರಾಗದೆ ಭೂಗತನಾಗಿದ್ದ ವಾರಂಟ್ ಆರೋಪಿಯ ಬಂಧನ.

ಹಲವಾರು ವರ್ಷಗಳಿಂದ ತಲೆಮರೆಸಿಕೊಂಡು, ಪೊಲೀಸರ ಕಣ್ಣು ತಪ್ಪಿಸಿ ನ್ಯಾಯಾಲಯಕ್ಕೂ ಹಾಜರಾಗದೆ, ಭೂಗತನಾಗಿದ್ದ ಸುಹಾನ್ @ ಸೋನು, ಬಿರಾ ಪೂಜಾರಿ ಕಂಪೌಂಡ್, ಅಶೋಕ ನಗರ ಮಂಗಳೂರು ಎಂಬಾತನನ್ನು ದಿನಾಂಕ 29-03-2026 ರಂದು ಮುಂಬೈಯಲ್ಲಿ ಉರ್ವಾ ಪೊಲೀಸ್ ಪತ್ತೆಹಚ್ಚಿ, ಆರೋಪಿಯನ್ನು ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಈತನ ವಿರುದ್ದ ಮಂಗಳೂರು ನಗರ ಉರ್ವಾ ಪೊಲೀಸ್ ಠಾಣಾ ಅ.ಕ್ರ. 62/2016, ಕಲಂ. 399, 120(B) ಐಪಿಸಿ, ಉರ್ವಾ ಪೊಲೀಸ್ ಠಾಣಾ ಅ.ಕ್ರ 126/2017, ಕಲಂ 120(B), 399, 402, 188 ಐಪಿಸಿ, ಮಂಗಳೂರು […]

Continue Reading

ಬಜಪೆ ಪೊಲೀಸರ ಕಾರ್ಯಾಚರಣೆ: ರಾಮಾಂಜನೇಯ ದೇವಸ್ಥಾನದ ಹುಂಡಿ ಕಳ್ಳತನ ಪ್ರಕರಣದ ಆರೋಪಿಯ ಬಂಧನ

ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಜಾರು ಗ್ರಾಮದ ಶ್ರೀ ರಾಮಾಂಜನೇಯ ದೇವಸ್ಥಾನದ ಬಾಗಿಲು ಮುರಿದು, ದೇವಸ್ಥಾನಕ್ಕೆ ಒಳನುಗ್ಗಿ, 3 ಕಾಣಿಕೆ ಹುಂಡಿಗಳಲ್ಲಿದ್ದ ಸರಿ-ಸುಮಾರು 25 ಸಾವಿರ ರೂ. ಹಣ ಕಳ್ಳತನವಾಗಿರುವ ಕುರಿತು ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕಳ್ಳತನ ಪ್ರಕರಣದ ಆರೋಪಿಗಳ ಪತ್ತೆಗೆ ತಂಡವನ್ನು ರಚಿಸಿ, ಪ್ರಕರಣಕ್ಕೆ ಸಂಬಂಧಿಸಿದಂತೆ ಶಬಿಕ್ ಅಹಮ್ಮದ್ ಶೇಖ್ ಅಬ್ದುಲ್ ಖಾದರ್, ದಿಂಡಿಗುಲ್ ಜಿಲ್ಲೆ, ತಮಿಳುನಾಡು ನಿವಾಸಿ ಎಂಬಾತನನ್ನು ಬಜಪೆ ಪೊಲೀಸರು ಖಚಿತ ಮಾಹಿತಿಯ ಆಧಾರದ ಮೇಲೆ ದಿನಾಂಕ: 31-03-2026 ರಂದು […]

Continue Reading

ಭಾರತ ಸರ್ಕಾರದ ಮಹತ್ವದ ಜನಗಣತಿ ಯೋಜನೆ ನಾಳೆಯಿಂದ ಚಾಲನೆ; ಡಿಜಿಟಲ್ ರೂಪದಲ್ಲಿ ಮಾಹಿತಿ ನೀಡಲು ಅವಕಾಶ

ಭಾರತ ಸರ್ಕಾರದ ಮಹತ್ವದ ಯೋಜನೆಗಳಾದ ಜನಗಣತಿ ಪ್ರಕ್ರಿಯೆಗೆ ನಾಳೆಯಿಂದ ಚಾಲನೆ ದೊರೆಯಲಿದೆ.ಡಿಜಿಟಲ್ ರೂಪದಲ್ಲಿ ಮಾಹಿತಿ ನೀಡಲು ಸಾರ್ವಜನಿಕರಿಗೆ ವಿಶೇಷ ಅವಕಾಶ ಕಲ್ಪಿಸಲಾಗಿದ್ದು, ಜನಗಣತಿ ಮಾಡುವವರು ಮನೆಗೆ ಬಂದಾಗ ಅವರಿಗೆ ಕೇವಲ ರೆಫರೆನ್ಸ್ ನಂಬರ್ ನೀಡುವ ಮೂಲಕ ಜವಾಬ್ದಾರಿಯನ್ನು ಪೂರ್ಣಗೊಳಿಸಬಹುದಾಗಿದೆ. ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ: ಮೊದಲು https://test.census.gov.in/se/ ಜಾಲತಾಣಕ್ಕೆ ಲಾಗಿನ್ ಆಗಿ ಸೆನ್ಸಸ್ ನಲ್ಲಿ ಭಾಗವಹಿಸಬಹುದಾಗಿದೆ. ಮೊದಲಿಗೆ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ, ಬರುವ OTP ಬಳಸಿ ಲಾಗಿನ್ ಆಗಿ, ಅಲ್ಲಿ ಕಾಣಿಸುವ ‘ಸ್ವಯಂ ಗಣತಿ’ ಐಕಾನ್ […]

Continue Reading

ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕೆ ಡಾಕ್ಟ್ರು ಬರುತ್ತಾರೆ; ಒಂಭತ್ತಕ್ಕೆ ಡಿಕೆಶಿ ದಿಲ್ಲಿಗೆ.?, ಶಾಮನೂರು ಕೋಟೆ ಸೇಫ್ ಆಗಲಿದೆ.?

ಕುಮಾರಸ್ವಾಮಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಟಿಫಿಕೇಟು ✍️. ಅರ್.ಟಿ.ವಿಠ್ಟಲಮೂರ್ತಿ ಇತ್ತೀಚೆಗೆ ಹಿರಿಯ ಲಿಂಗಾಯತ ನಾಯಕ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಅವರ ಜತೆ ಸಿಎಂ ಸಿದ್ದರಾಮಯ್ಯ ಚರ್ಚಿಸಿದ್ದಾರೆ. ಈ ಚರ್ಚೆಯ ಸಂದರ್ಭದಲ್ಲಿ: ‘ಡಾಕ್ಟ್ರೇ, ನೀವು ಕೆಪಿಸಿಸಿ ಅಧ್ಯಕ್ಷರಾಗಲು ರೆಡಿಯಾಗಿ’ ಎಂದಿದ್ದಾರೆ. ಸಿದ್ದರಾಮಯ್ಯ ಅವರು ಈ ಮಾತು ಹೇಳಿದಾಗ ಪ್ರತಿಕ್ರಿಯಿಸಿದ ಶರಣ ಪ್ರಕಾಶ್ ಪಾಟೀಲ್ ಅವರು: ‘ಸಾರ್ ನಾನು ಮಂತ್ರಿಯಾಗಿದ್ದುಕೊಂಡೇ ಕೆಪಿಸಿಸಿ ಅಧ್ಯಕ್ಷನಾಗಲು ತಯಾರಿದ್ದೇನೆ’ ಎಂದಾಗ: ಹಾಗೇ ಆಗಲಿ ಡಾಕ್ಟ್ರೇ ಅದಕ್ಕೇನು? ‘ಅಂತ […]

Continue Reading

ಸಂವಿದಾನ ಬದ್ಧ ರಾಜಕೀಯ ವ್ಯವಸ್ಥೆಯಲ್ಲಿ ಕುಟುಂಬ ರಾಜಕಾರಣವೆಂಬ ಕಳಂಕ

“ವಂಶಪಾರಂಪರ್ಯ ಜಾಗೀರು”ಗಳಂತಾಗಿರುವ ಕ್ಷೇತ್ರಗಳು ಮುಕ್ತವಾಗಿ, ಸಾಮಾನ್ಯ ನಾಗರಿಕನೂ ದೇಶದ ಉನ್ನತ ಪೀಠವನ್ನೇರಲು ಸಾಧ್ಯವಾಗಬೇಕು ✍️. ಇಸ್ಮಾಯಿಲ್ ಎಸ್. ನ್ಯಾಯವಾದಿಗಳು, ಮಂಗಳೂರು. ಮೊದಲ ಪುಲಕೇಶಿ, ಎರಡನೇ ಪುಲಕೇಶಿ… ಒಂದನೇ ಕೃಷ್ಣದೇವರಾಜ, ಎರಡನೇ ಕೃಷ್ಣದೇವರಾಜ, ಮೂರನೇ …. ಹೀಗೆಯೇ ಈ ಪಟ್ಟಿ ಮುಂದುವರಿಯುತ್ತದೆ. ಇತಿಹಾಸದ ಪುಟಗಳನ್ನು ತಿರುವುತ್ತಾ ಸಾಗಿದಲ್ಲಿ ಇಂತಹ ಸಾವಿರಾರು ಉದಾಹರಣೆಗಳು ಸಿಗುತ್ತವೆ. ಜಗತ್ತಿನ ವಿವಿಧ ಭಾಗಗಳಲ್ಲಿ ಆಳಿದ ರಾಜ ವಂಶಗಳು ಹಾಗೂ ಸದ್ರಿ ರಾಜವಂಶಗಳಿಂದ ಬಂದಿರುವ ಹಿರಿ-ಕಿರಿಯ ರಾಜರುಗಳ ಬಹುದೊಡ್ಡ ಉದಾಹರಣೆಗಳಿವೆ. ಆದರೆ ಆಧುನಿಕ ಜನಗತ್ತಿನಲ್ಲಿ ರಾಜರುಗಳಿಗೆ […]

Continue Reading

ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷದ ಕಮೆಂಟ್ಸ್ ಆರೋಪಿಯ ಬಂಧನ

2026 ನೇ ಜನವರಿ ತಿಂಗಳಿನಲ್ಲಿ ಮಂಗಳೂರು ನಗರದ ಇಂಡಿಯಾನಾ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ ಕಿರಾತ್ (ಕುರಾನ್ ಸ್ಫಟಿಸುವ) ಸ್ಪರ್ದೆಯ ವಿಡಿಯೋ ಸಾಮಾಜಿಕ ಜಾಲತಾಣವಾದ ಉದಯವಾಣಿ ಫೇಸ್ ಬುಕ್ ಪುಟದಲ್ಲಿ ಪ್ರಸಾರವಾಗುತ್ತಿದ್ದಾಗ ಗಣೇಶ್ ಪ್ರಸಾದ್ ಎಂಬಾತನು ತನ್ನ ಅಕೌಂಟ್ ನಲ್ಲಿ” ಮಕ್ಕಳ ತಲೆಯನ್ನು ಬ್ರೈನ್ ವಾಶ್ ಮಾಡಿ ನಾಳೆ ದೇಶಕ್ಕೆ ಬಾಂಬ್ ಇಡೋಕೆ ಕಳಿಸೋದು ಅಷ್ಟೇ” ಎಂದು ಪ್ರಚೋದನಕಾರಿಯಾಗಿ ಕಮೆಂಟ್ ಹಾಕಿದ ಬಗ್ಗೆ ಕಂಕನಾಡಿ ನಗರ ಪೊಲೀಸ್ ಠಾಣಾ ಅ.ಕ್ರ. 15/2026ರಂತೆ ಪ್ರಕರಣ ದಾಖಲಾಗಿ ತನಿಖೆಯ ನಡೆಯುತ್ತಿತ್ತು. […]

Continue Reading