ಆಧುನಿಕ ಸೌಲಭ್ಯ, ಉನ್ನತ ವಿಧಾನ, ನುರಿತ ಅಧ್ಯಾಪಕರನ್ನು ನಿಯೋಜಿಸಲಾಗಿದೆ, ಸಾಧನೆ ಮಾಡುವ ಇಚ್ಛಾಶಕ್ತಿ ಮತ್ತು ಶ್ರಮ ವಿದ್ಯಾರ್ಥಿಗಳಲ್ಲಿ ಇರಬೇಕು: ನಿವೃತ್ತ ಡಿಸಿಪಿ. ಜಿ. ಎ ಬಾವಾ

ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆರಂಭದ ಹಂತದಲ್ಲೇ ಸರಿಯಾದ ಶೈಕ್ಷಣಿಕ ಮಾರ್ಗದರ್ಶನ ಮತ್ತು ಉತ್ತೇಜನ ನೀಡುವ ಉದ್ದೇಶದಿಂದ ಇಂದು ವಿ.ಕೆ. ಒಬೇದುಲ್ಲಾ ಸ್ಕೂಲ್ ನಲ್ಲಿ ಹೆತ್ತವರ ಜೊತೆ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಗಾರ ನಡೆಯಿತು. ವಿದ್ಯಾರ್ಥಿಗಳಲ್ಲಿ ಕಲಿಕೆಯ ಶಿಸ್ತು, ಕಲಿಕೆಯ ವಿಧಾನ ಮತ್ತು ಕಲಿಯ ಗುರಿಯ ಸಲಹೆ ಮತ್ತು ಸೂಚನೆಗಳನ್ನು ನೀಡಲಾಯಿತು. ಹೆತ್ತವರು ತಮ್ಮ ಮಕ್ಕಳ ಕುರಿತ ಕಾಳಜಿ ಮತ್ತು ಪಾತ್ರಗಳನ್ನು ನಿರ್ವಹಿಸುವ ಬಗ್ಗೆಯೂ ಮನಮುಟ್ಟುವ ಹಿತವಚನ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಡಿಸಿಪಿ ಜಿ. ಎ. ಬಾವಾರವರು […]

Continue Reading

ಧರ್ಮಸ್ಥಳದಲ್ಲಿ ಸರಣಿ ಹತ್ಯೆ ಆರೋಪ: ನಿಷ್ಪಕ್ಷಪಾತ ತನಿಖೆ, ದೂರುದಾರ ಹಾಗು ನ್ಯಾಯವಾದಿಗಳಿಗೆ ರಕ್ಷಣೆ ಒದಗಿಸಲು ಸಿಪಿಐಎಂ ಆಗ್ರಹ

“ದಶಕಗಳ ಅವಧಿಯಲ್ಲಿ ಧರ್ಮಸ್ಥಳದಲ್ಲಿ ಹತ್ಯೆಗಳು, ಅತ್ಯಾಚಾರಗಳು ಸರಣಿಯಾಗಿ ನಡೆದಿದೆ, ನನ್ನಿಂದಲೆ ಈ ಶವಗಳನ್ನು ಹೂತು ಹಾಕಿಸಿದ್ದಾರೆ, ವಿಲೆವಾರಿ ಮಾಡಿಸಿದ್ದಾರೆ. ನಾನು ಧರ್ಮಸ್ಥಳ ದೇವಸ್ಥಾನದ ಆಡಳಿತದಡಿ ಆ ಸಂದರ್ಭ ನೈರ್ಮಲ್ಯ ಕಾರ್ಮಿಕನಾಗಿದ್ದೆ” ಎಂದು ಗುರುತು ಮರೆಮಾಚಲ್ಪಟ್ಟ ವ್ಯಕ್ತಿಯೋರ್ವ ವಕೀಲರುಗಳ ಉಪಸ್ಥಿತಿಯಲ್ಲಿ ದೂರು ದಾಖಲಿಸಿರುವ ಪ್ರಕರಣ ಸಾರ್ವಜನಿಕ ವಲಯದಲ್ಲಿ ಕಂಪನಗಳನ್ನು ಎಬ್ಬಿಸಿದೆ. ಭೀತಿಗೆ ಕಾರಣವಾಗಿದೆ. ಈ ಹಿಂದೆ ಧರ್ಮಸ್ಥಳದ ನೇತ್ರಾವತಿ ನದಿ ಹಾಗು ಆಸುಪಾಸು ಪತ್ತೆಯಾಗಿದ್ದ ಅನುಮಾನಾಸ್ಪದ, ಸಾಲು ಸಾಲು ಅನಾಥ ಶವಗಳು, ಆ ಕುರಿತು ಸಾರ್ವಜನಿಕವಾಗಿ ವ್ಯಕ್ತವಾಗಿದ್ದ ಅನುಮಾನಗಳಿಗೆ […]

Continue Reading

ಭಾರತದಲ್ಲಿ ಬಡತನ ಮತ್ತು ಅಸಮಾನತೆ ಕುರಿತು ವಿಶ್ವಬ್ಯಾಂಕ್ ವರದಿಯ ಬಗ್ಗೆ ಕಾಂಗ್ರೆಸ್ ಕಳವಳ ವ್ಯಕ್ತಪಡಿಸಿದೆ

ನವದೆಹಲಿ: (ಜುಲೈ 6) ಭಾರತದಲ್ಲಿ ಬಡತನ ಮತ್ತು ಅಸಮಾನತೆ ತುಲನಾತ್ಮಕವಾಗಿ ಹೆಚ್ಚಾಗಿದೆ ಎಂದು ಹೇಳುವ ಇತ್ತೀಚಿನ ವಿಶ್ವಬ್ಯಾಂಕ್ ವರದಿಯ ಬಗ್ಗೆ ಕಾಂಗ್ರೆಸ್ ಭಾನುವಾರ ಕಳವಳ ವ್ಯಕ್ತಪಡಿಸಿದೆ ಮತ್ತು ಜಿಎಸ್‌ಟಿ ಸುಧಾರಣೆಗಳನ್ನು ತರುವುದು ಮತ್ತು ಕಾರ್ಪೊರೇಟ್ ಪಕ್ಷಪಾತವನ್ನು ಕೊನೆಗೊಳಿಸುವುದು ಸೇರಿದಂತೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ವಿನಂತಿಸಿದೆ. ಏಪ್ರಿಲ್ 2025 ರಲ್ಲಿ ಭಾರತಕ್ಕಾಗಿ ವಿಶ್ವಬ್ಯಾಂಕ್‌ನ ಬಡತನ ಮತ್ತು ಇಕ್ವಿಟಿ ಸಂಕ್ಷಿಪ್ತ ವರದಿಯನ್ನು ಉಲ್ಲೇಖಿಸಿ, ಕಾಂಗ್ರೆಸ್ ಸಂಪರ್ಕ ವಿಭಾಗದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, ಅದು ಬಿಡುಗಡೆಯಾದ ಮೂರು ತಿಂಗಳ ನಂತರ, […]

Continue Reading

ಮೋದಿ ಕೈಗೆ ತಲುಪಿದೆ ಸೀಕ್ರೆಟ್ ರಿಪೋರ್ಟು.?, ರಾಹುಲ್ ಕಿವಿಗೆ ಸಿದ್ಧು ಸಂದೇಶ.?

ರೆಡಿ ಆಗುತ್ತಿದೆ ಸುರ್ಜೇವಾಲ ರಿಪೋರ್ಟು?. ಕೆಪಿಸಿಸಿ ಪಟ್ಟಕ್ಕೆ ಜಾರ್ಕಿ ಏಕೆ ಬೇಕು.? ✍️. ಆರ್.ಟಿ.ವಿಠ್ಠಲಮೂರ್ತಿ ಕೆಲ ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕ ಬಿಜೆಪಿಯ ಇಬ್ಬರು ನಾಯಕರಿಗೆ ಒಂದು ಟಾಸ್ಕ್ ಕೊಟ್ಟಿದ್ದಾರೆ. ಹೀಗೆ ಮೋದಿ ಅವರಿಂದ ಟಾಸ್ಕ್ ಪಡೆದ ನಾಯಕರ ಪೈಕಿ ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ಒಬ್ಬರಾದರೆ, ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಮತ್ತೊಬ್ಬರು. ಅಂದ ಹಾಗೆ ಈ ಇಬ್ಬರು ನಾಯಕರಿಗೆ ಮೋದಿಯವರು ಟಾಸ್ಕ್ ಕೊಡಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರಣ. […]

Continue Reading

ಠಾಕ್ರೆ ಸೋದರಸಂಬಂಧಿಗಳ ಒಗ್ಗಟ್ಟಿನ ಪ್ರದರ್ಶನವು ಫಡ್ನವೀಸ್ ಮತ್ತು ಇತರ ಮಹಾಯುತಿ ನಾಯಕರನ್ನು ಬೆಚ್ಚಿಬೀಳಿಸಿದೆ: ರೌತ್

ಮುಂಬೈ: (ಜುಲೈ 6) ಮಹಾರಾಷ್ಟ್ರ ನವನಿರ್ಮಾಣ ಸೇನಾ ಅಧ್ಯಕ್ಷ ರಾಜ್ ಠಾಕ್ರೆ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಒಗ್ಗಟ್ಟು ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಆಡಳಿತಾರೂಢ ಮಹಾಯುತಿ ನಾಯಕರನ್ನು ಕೆರಳಿಸಿದೆ ಎಂದು ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಭಾನುವಾರ ಹೇಳಿದ್ದಾರೆ. ಶಿವಸೇನೆ (ಯುಬಿಟಿ)ಗೆ ಸೇರಿದ ರೌತ್, ಬಿಜೆಪಿ ನೇತೃತ್ವದ ಸರ್ಕಾರವು ಹಿಂದಿ ಭಾಷೆಯ ಜಿಆರ್‌ಗಳನ್ನು (ಸರ್ಕಾರಿ ನಿರ್ಣಯಗಳು) ಹಿಂದಕ್ಕೆ ಪಡೆದಿದ್ದನ್ನು ಆಚರಿಸಲು ಶನಿವಾರ ಠಾಕ್ರೆ ಸೋದರಸಂಬಂಧಿಗಳು ತಮ್ಮ “ವಿಜಯ” ರ್ಯಾಲಿಯನ್ನು ನಡೆಸಿದ ನಂತರ […]

Continue Reading

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ವೀಸಾ ಕೊಡಿಸುವುದಾಗಿ ವಂಚನೆ- ಅಬ್ದುಲ್ ಸತ್ತಾರ್ ಖಾನ್, ಕಿಶೋರ್ ಕುಮಾರ್ ಅರೆಸ್ಟ್‌

ಬೆಂದೂರ್‌ವೆಲ್‌ನಲ್ಲಿ ಹೈರ್‌ಗ್ಲೋ ಎಲಿಗಂಟ್ ಓವರ್‌ಸೀಸ್ ಇಂಟರ್‌ನ್ಯಾಷನಲ್ (ಪ್ರೈ) ಲಿಮಿಟೆಡ್ ಎಂಬ ಕಚೇರಿ, 286 ಜನರಿಗೆ ಮೋಸ, 4.5 ಕೋಟಿ ರೂ. ವಂಚನೆ ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ಹೇಳಿ ನಂಬಿಸಿ ಮಂಗಳೂರು ಸಾರ್ವಜನಿಕರಿಂದ ಹಣ ಪಡೆದು ವಂಚಿಸಿದ ಮುಂಬೈನ ಇಬ್ಬರು ಆರೋಪಿಗಳನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಂಬೈ ನಿವಾಸಿಗಳಾದ ದಿಲ್ಶಾದ್ ಅಬ್ದುಲ್ ಸತ್ತಾರ್ ಖಾನ್ (45), ಹಾಗೂ ಸಾಹುಕಾರಿ ಕಿಶೋರ್ ಕುಮಾರ್ ಯಾನೆ ಅನಿಲ್ ಪಾಟೀಲ್ (34) ಬಂಧಿತ ಆರೋಪಿಗಳು. ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿ ಹೈರ್‌ಗ್ಲೋ ಎಲಿಗಂಟ್ […]

Continue Reading

ಪಾಣೆಮಂಗಳೂರು ಸೇತುವೆ ಧಾರಣಾ ಸಾಮರ್ಥ್ಯ; ಎನ್ಐಟಿಕೆ ತಂಡದಿಂದ ವರದಿ ಸಲ್ಲಿಕೆ.

ತಾತ್ಕಾಲಿಕವಾಗಿ ಲಘ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ಬಂಟ್ವಾಳ : ಬಿ.ಸಿ ರೋಡಿನಿಂದ ಪಾಣೆಮಂಗಳೂರು ಪೇಟೆಗೆ ಸಂಪರ್ಕ ಕಲ್ಪಿಸುವ ಹಳೆ ನೇತ್ರಾವತಿ ಸೇತುವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಸುರತ್ಕಲ್ಲಿನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ ಕರ್ನಾಟಕ (ಎನ್ ಐ ಟಿ ಕೆ) ಇದರ ಅಧಿಕಾರಿಗಳು ಜೂನ್ 26 ರಂದು ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಅವರ ಉಪಸ್ಥಿತಿಯಲ್ಲಿ ಸೇತುವೆಯ ಧಾರಣಾ ಸಾಮಥ್ರ್ಯವನ್ನು ಪರಿಶೀಲನೆ ನಡೆಸಿದ್ದು, ಈ ಬಗ್ಗೆ ಜುಲೈ 3 ರಂದು ತಾತ್ಕಾಲಿಕ ವರದಿ ನೀಡಿದ್ದಾರೆ. ಧಾರಣಾ ಸಾಮಥ್ರ್ಯ […]

Continue Reading

ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಪ್ರದಾನ

ಉಡುಪಿ : ಖ್ಯಾತ ವಿದ್ವಾಂಸ, ಶತಾವಧಾನಿ ಡಾ. ಆರ್. ಗಣೇಶ್ ಅವರಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರು ತಮ್ಮ ಮಾತಪಿತರ ಸ್ಮರಣಾರ್ಥ ಯಕ್ಷಗಾನ ಕಲಾರಂಗದ ಮೂಲಕ ಕೊಡ ಮಾಡುವ ಪ್ರತಿಷ್ಠಿತ ತಲ್ಲೂರು ಕನಕ ಅಣ್ಣಯ್ಯ ಶೆಟ್ಟಿ ಪ್ರಶಸ್ತಿಯನ್ನು ಶುಕ್ರವಾರ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ, ಖ್ಯಾತ ವಿದ್ವಾಂಸ, ಚಿಂತಕ ಲಕ್ಷ್ಮೀಶ ತೋಳ್ಪಾಡಿ, ವಿದ್ವಾನ್ ಗುಂಡಿಬೈಲು […]

Continue Reading

ರಾಶಿ ರಾಶಿ ಸೆಕ್ಸ್ ವಿಡಿಯೋ.. ತನ್ನದೇ ಭಂಗಿಯಾಟದ ವಿಡಿಯೋ ರೆಕಾರ್ಡ್ ಮಾಡಿಕೊಂಡಿದ್ದ ಕಾಮುಕ ‘ಧರ್ಮ ರಕ್ಷಕ’ ಧರೆಗುಡ್ಡೆ.!

ಹೊರಗಡೆ ಹಿಂದುತ್ವದ ‘ಜಾಗರಣೆ’.. ಒಳಗಡೆ ‘ಕಾಮ ಕಸರತ್ತು’.. ಸಿಂಗಂ ಏಟಿಗೆ ಹೊರಬಂತು ಹಿಂದೂ ರಕ್ಷಕನ ಅಸಲಿ ಹಕೀಕತ್ತು.! ಅಬ್ಬಬ್ಬಾ.. ವೇದಿಕೆ ಸಿಕ್ಕರೆ ಸಾಕು ಧರ್ಮ ರಕ್ಷಣೆಯ ಪುಂಖಾನುಪುಂಖ ಮಾತು, ಉದ್ದುದ್ದದ ನಾಮ, ಕೇಸರಿ ಶಾಲು ಹೆಗಲೇರಿಸಿಕೊಂಡು ಗೋರಕ್ಷಣೆ, ಧರ್ಮದ ಜಾಗರಣೆ ಹೆಸರಿನಲ್ಲಿ ಮಾಡುವುದು ಹಲಾಲುಕೋರತನದ ಕೆಲಸ. ಅಂತಹ ಕಾಮ ಪಿಶಾಚಿಯೊಬ್ಬನ ಅಸಲಿ ಹಕೀಕತ್ತು ಇದೀಗ ಬಯಲಿಗೆ ಬಂದಿದೆ. ಮೂಡಬಿದ್ರೆ ಬಿಜೆಪಿ ನಾಯಕನ ಲೆಫ್ಟ್ ರೈಟ್ ಗಳಲ್ಲಿ ಗುರುತಿಸಿಕೊಂಡಿದ್ದ ಕಟ್ಟರ್ ಹಿಂದುತ್ವವಾದಿ ಸಮಿತ್ ರಾಜ್ ಧರೆಗುಡ್ಡೆಯ ಅಸಲಿ ಕಾಮಕಾಂಡ […]

Continue Reading

ಅತೀ ವೇಗ, ಅಜಾಗರೂಕತೆಯಿಂದ ವಾಹನ ಚಲಾಯಿಸಿ ಸವಾರ ಮೃತಪಟ್ಟರೆ, ಮೋಟಾರು ವಾಹನ ಕಾಯ್ದೆಯಡಿ ವಿಮಾ ಕಂಪನಿಯು ಪರಿಹಾರ ನೀಡಬೇಕಿಲ್ಲ: ಸುಪ್ರೀಂ ಕೋರ್ಟ್

ಅತೀ ವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ ಸವಾರ ಮೃತಪಟ್ಟರೆ ಅವರ ಕುಟುಂಬಕ್ಕೆ ಮೋಟಾರು ವಾಹನ ಕಾಯ್ದೆಯಡಿ ವಿಮಾ ಕಂಪನಿಯು ಪರಿಹಾರ ನೀಡಬೇಕಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ.ಅತಿವೇಗದಲ್ಲಿ ಕಾರು ಚಾಲನೆ ಮಾಡಿ ಮೃತಪಟ್ಟ ವ್ಯಕ್ತಿಯ ಪತ್ನಿ, ಮಗ ಮತ್ತು ಪೋಷಕರು ಕೋರಿದ ರೂಪಾಯಿ 80 ಲಕ್ಷ ಪರಿಹಾರ ನೀಡಲು ನ್ಯಾಯಮೂರ್ತಿಗಳಾದ ಪಿ.ಎಸ್. ನರಸಿಂಹ ಮತ್ತು ಆರ್. ಮಹಾದೇವನ್ ಅವರ ಪೀಠ ನಿರಾಕರಿಸಿತು. ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಮೇಲ್ಮನವಿದಾರರು ಸುಪ್ರೀಂ ಕೋರ್ಟ್‌ಗೆ ವಿಶೇಷ ಮೇಲ್ಮನವಿ […]

Continue Reading