ಸುಳ್ಯ: ಕ್ರಿಕೆಟ್ ವಿಚಾರದಲ್ಲಿ ಯುವಕನಿಗೆ ಹಲ್ಲೆ ಪ್ರಕರಣ; ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

ಸುಳ್ಯದ ಮರ್ಕಂಜದಲ್ಲಿ ಕ್ರಿಕೆಟ್ ವಿಚಾರವಾಗಿ ವಾಟ್ಸಪ್‌ನಲ್ಲಿ ಅವಾಚ್ಯ ಶಬ್ದ ಪ್ರಯೋಗವಾಗಿ ವಿಚಾರಿಸಲು ಮನೆಗೆ ಹೋಗಿ ಯುವಕನಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಮರ್ಕಂಜದ ಅಂಗಡಿಮಜಲು ಎಂಬಲ್ಲಿ ಘಟನೆ ನಡೆದಿದ್ದು,. ಸ್ಥಳೀಯವಾಗಿ ಗಾರೆ ಕೆಲಸ ಮಾಡಿಕೊಂಡಿದ್ದ ನಯನಕುಮಾರ್ ರೈ ಎಂಬವರ ಮೇಲೆ ಪ್ರಶಾಂತ್ ಆರ್ನಡ್ಕ, ಪ್ರಮೋದ್ ಬೊಳ್ಳಾಜೆ, ಚೇತನ್ ಜೋಗಿಮೂಲೆ, ಪ್ರಜ್ಞೇಶ್ ದೇಶಕೋಡಿ ಎಂಬವರು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ಪೊಲೀಸರಿಗೆ ದೂರು […]

Continue Reading

ಕೋಚಿಂಗ್ ಸೆಂಟರ್ ಮಾಫಿಯಾಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಾಥ್.!

ನಾಯಿಕೊಡೆಗಳಂತೆ ಹುಟ್ಟುತ್ತಿರುವ ಟ್ಯೂಶನ್ ಸೆಂಟರ್ ಗಳಿಗೆ ಕಡಿವಾಣ ಹಾಕಲು ಮುಂದಾದ ಪದವಿಪೂರ್ವ ಶಿಕ್ಷಣ ಇಲಾಖೆ; ರಾಜ್ಯದಲ್ಲಿ ಶಿಕ್ಷಣ ಇಲಾಖೆಯಲ್ಲಿ ನಡೆಯುವಷ್ಟು ಮಾಫಿಯಾ ಬಹುಶಃ ಬೇರೆ ಯಾವುದೇ ಇಲಾಖೆಗಳಲ್ಲಿ ನಡೆಯುತ್ತಿಲ್ಲ ಅನ್ನುವಷ್ಟು ಹಗರಣಗಳು ಬೃಹದಾಕಾರವಾಗಿ ಬೆಳೆದಿದೆ. ಲಕ್ಷ ಲಕ್ಷ ಡೊನೇಷನ್ ಪೀಕಿಸುವ ಶಿಕ್ಷಣ ಸಂಸ್ಥೆಗಳು ಒಂದು ಕಡೆಯಾದರೆ, ನಮ್ಮ ಕೋಚಿಂಗ್ ಸೆಂಟರ್ ನಲ್ಲಿ ಟ್ಯೂಶನ್ ಪಡೆದವರು ಉನ್ನತ ಮಾರ್ಕ್ಸ್ ಪಡೆದಿದ್ದಾರೆ ಅನ್ನುವ ಜಾಹೀರಾತು ಬಿತ್ತರಿಸಿ ಪೋಷಕ ವರ್ಗವನ್ನು ಆಮಿಷಕ್ಕೆ ಒಳಪಡಿಸಿ ದುಡ್ಡು ಪೀಕಿಸುವ ದಂಧೆ ಕೂಡ ನಡೆಯುತ್ತಿರುವುದು ಸುಳ್ಳಲ್ಲ. […]

Continue Reading

ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದೊಯ್ದು ದೈಹಿಕ ಸಂಪರ್ಕ, ಬಂಧಿತ ಆರೋಪಿಗೆ ಜಾಮೀನು ಮಂಜೂರು

ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಮನೆಗೆ ಕರೆದೊಯ್ದು ದೈಹಿಕ ಸಂಪರ್ಕ ಮಾಡಿದ್ದ ಆರೋಪದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವ್ಯಕ್ತಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕೋಡಿಂಬಾಡಿ ನಿವಾಸಿ ಸುಧಾಕರ್ ಯಾನೆ ಸುಧೀರ್ ಎಂಬಾತ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದ ಆರೋಪಿ. ದೂರದ ಸಂಬಂಧಿ ಉಮೇಶ್ ಎಂಬವರ ಮೆಹಂದಿ ಕಾರ್ಯಕ್ರಮದಲ್ಲಿ ಬಾಲಕಿಗೆ ಆರೋಪಿಯ ಪರಿಚಯವಾಗಿತ್ತು. ಈ ಸಂದರ್ಭ ಆಕೆ ಆತನಿಗೆ ತನ್ನ ತಾಯಿಯ ಮೊಬೈಲ್ ಫೋನ್ ನಂಬರನ್ನು ನೀಡಿದ್ದು, ತಾಯಿ ಕೆಲಸದಿಂದ ಬಂದ ನಂತರ ಬಾಲಕಿಯು ತಾಯಿಯ ಮೊಬೈಲ್‌ನಿಂದ […]

Continue Reading

ಮಂಗಳೂರು RTO: ಸೂಪರಿಟೆಂಡೆಂಟ್ ರೇಖಾ ಏನಿದು ನಿನ್ನ ದೋಖಾ.! ಭ್ರಷ್ಟ ಅಧಿಕಾರಿಗಳ ಬಗ್ಗೆ ಈ ಹಿಂದೆ ಇಂಚಿಂಚೂ ವರದಿ ಮಾಡಿದ್ದ ಸ್ಪೆಷಲ್ ನ್ಯೂಸ್ ಮೀಡಿಯಾ

ಮೂವರು ಭ್ರಷ್ಟ ಖದೀಮರು ಸಸ್ಪೆಂಡ್; ಹೆಗ್ಗಣಗಳು ಸೇಫ್ ಝೋನ್.! ಮಂಗಳೂರು RTO ಕಚೇರಿಯ ಲಂಚವತಾರದ ವೆರೈಟಿ ವೆರೈಟಿ ಕಥೆಗಳನ್ನು ಸ್ಪೆಷಲ್ ನ್ಯೂಸ್ ಮೀಡಿಯಾ ಈ ಹಿಂದೆ ಹಲವು ಬಾರಿ ಪ್ರಕಟಿಸಿತ್ತು. ಆದರೆ ಈವರೆಗೂ ಯಾವುದೇ ಕ್ರಮ ಕೈಗೊಳ್ಳದೆ ಭ್ರಷ್ಟ ಖದೀಮರು ಸೇಫಾಗಿ ಇನ್ನಷ್ಟು ಅನಾಹುತಕಾರಿ ಕೆಲಸ ಮಾಡಲು ಅವಕಾಶ ನೀಡುವಂತಾಗಿತ್ತು. ಆದರೆ ಈ ಬಾರಿ ಮಾತ್ರ ಭ್ರಷ್ಟರ ಆಟ ನಡೆಯಲಿಲ್ಲ. ಕೋಟಿ ಕೋಟಿ ಡೀಲಿಂಗ್ ಗೆ ಇಳಿದು ಅಮಾನತ್ತಾಗಿ ಹೋಗಿದ್ದಾರೆ. ಮಂಗಳೂರು ಆರ್ ಟಿ ಓ ಕಚೇರಿಯಲ್ಲಿ […]

Continue Reading

ಕುಡುಪು ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿ ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ಬಿಡುಗಡೆ

ಪಹಲ್ಗಾಮ್ ದಾಳಿಯ ನಂತರ ಮುಸ್ಲಿಮರನ್ನು ದುಷ್ಟರನ್ನಾಗಿ ಬಿಂಬಿಸಲಾಗಿದೆ: ವಿಶ್ವಸಂಸ್ಥೆಯ ವರದಿಗಾರ ಕೆ.ಪಿ ಅಶ್ವಿನಿ ಇದೇ ಕೊನೆಯ ಗುಂಪು ಹತ್ಯೆಯಾಗಬೇಕು”: ಅಶ್ರಫ್ ಇದು ಕೇವಲ ಕೊಲೆಯಲ್ಲ, ಬದಲಿಗೆ ದ್ವೇಷ ಅಪರಾಧ: ಮೈತ್ರೇಯೆ ಕೃಷ್ಣನ್ ಬೆಂಗಳೂರು: ಪಿಯುಸಿಎಲ್ ಕರ್ನಾಟಕ, ಐಲಾಜ್ ಕರ್ನಾಟಕ ಹಾಗೂ ಎಪಿಸಿಆರ್ ಕರ್ನಾಟಕ ಇವುಗಳು ಜಂಟಿಯಾಗಿ ಸಿದ್ದಪಡಿಸಿದ ಕುಡುಪು ಗುಂಪು ಹತ್ಯೆಯ ಕುರಿತ ಸತ್ಯಶೋಧನಾ ವರದಿಯನ್ನು ಬೆಂಗಳೂರಿನ ಪ್ರೆಸ್ ಕ್ಲಬ್‍ನಲ್ಲಿ ಶನಿವಾರ ಬಿಡುಗಡೆ ಮಾಡಲಾಯಿತು. ರಾಜ್ಯ ಆಡಳಿತವು, ಶೋಷಿತ ಸಮುದಾಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ನಿಷ್ಪಕ್ಷಪಾತ ತನಿಖೆ ನಡೆಸುವಲ್ಲಿ […]

Continue Reading

ಮಂಗಳೂರು ವಿವಿಯಿಂದ ಯಕ್ಷ ಮಂಗಳ ಪ್ರಶಸ್ತಿ ಪ್ರದಾನ

ಪಡುವಲಪಾಯ ಯಕ್ಷಗಾನಕ್ಕೆ ಉತ್ತಮ ಭವಿಷ್ಯ : ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ವಿಶ್ವಾಸ ಉಡುಪಿ : ಕರಾವಳಿಯ ಯಕ್ಷಗಾನಕ್ಕೆ ವೈದ್ಯರು, ಇಂಜಿನಿಯರ್‌ಗಳು, ಶಿಕ್ಷಕರು ಸೇರಿದಂತೆ ಉನ್ನತ ಶಿಕ್ಷಣ ಪಡೆದ ಮಂದಿ ಹೆಚ್ಚಿನ ಸಂಖ್ಯೆಯಲ್ಲಿ ಹವ್ಯಾಸಿ ಕಲಾವಿದರಾಗಿ ಬರುತ್ತಿದ್ದಾರೆ. ಅಲ್ಲದೆ ಉತ್ಸಾಹಿ ಯುವ ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ವೃತ್ತಿ ಮೇಳಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದರಿoದ ಇಲ್ಲಿನ ಯಕ್ಷಗಾನ ಕಲೆಗೆ ಉತ್ತಮ ಭವಿಷ್ಯವಿದೆ ಎಂದು ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಅವರು ಶುಕ್ರವಾರ ಮಂಗಳೂರು ವಿಶ್ವವಿದ್ಯಾಲಯದ ಡಾ.ಯು.ಆರ್.ರಾವ್ […]

Continue Reading

ಬಿ.ಸಿ ರೋಡ್-ಪಾಣೆಮಂಗಳೂರು ಹಳೆ ನೇತ್ರಾವತಿ ಸೇತುವೆಯ ಸಾಮರ್ಥ್ಯ ಪರಿಶೀಲನೆ

ಎನ್ ಐ ಟಿ ಕೆ ಅಧಿಕಾರಿಗಳ, ಪುರಸಭಾಧ್ಯಕ್ಷರ ಉಪಸ್ಥಿತಿಯಲ್ಲಿ ಸೇತುವೆಯ ಧಾರಣಾ ಸಾಮರ್ಥ್ಯ ಪರಿಶೀಲನೆ ಬಂಟ್ವಾಳ: ಬಿ.ಸಿ ರೋಡಿನಿಂದ ಪಾಣೆಮಂಗಳೂರು ಪೇಟೆಗೆ ಸಂಪರ್ಕ ಕಲ್ಪಿಸುವ ಹಳೆ ನೇತ್ರಾವತಿ ಸೇತುವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಸುರತ್ಕಲಿನ ರಾಷ್ಟ್ರೀಯ ತಾಂತ್ರಿಕ ಮಹಾ ವಿದ್ಯಾಲಯದ (ಎನ್ ಐ ಟಿ ಕೆ) ಅಧಿಕಾರಿಗಳು ಗುರುವಾರ ಪುರಸಭಾಧ್ಯಕ್ಷ ಬಿ. ವಾಸು ಪೂಜಾರಿ ಲೊರೆಟ್ಟೊ ಅವರ ಉಪಸ್ಥಿತಿಯಲ್ಲಿ ಸೇತುವೆಯ ಧಾರಣಾ ಸಾಮರ್ಥ್ಯವನ್ನು ಪರಿಶೀಲನೆ ನಡೆಸಿದ್ದಾರೆ. ಎನ್ ಐ ಟಿ ಕೆ ಪ್ರೊಫೆಸರ್ ಡಾ ಪಲಿನಿ ಸ್ವಾಮಿ ವಿಜಯನ್ […]

Continue Reading

ಹೈಸ್ಕೂಲಿನಲ್ಲಿ ಲವ್, ಕಾಲೇಜಿನಲ್ಲಿ ಡೆಲಿವರಿ.! ಬಿಜೆಪಿ ಮುಖಂಡನ ಪುತ್ರ ಭೂಗತ

ಪುತ್ತೂರು ಲವ್, ಸೆಕ್ಸ್, ದೋಖಾ ಕಹಾನಿ.! ಪ್ರತಿಷ್ಠಿತ ಕುಟುಂಬದ ಪ್ರೇಮ ಕಹಾನಿ ಕೊನೆಗೂ ಬೀದಿಗೆ ಬಿದ್ದಿದೆ. ಮಾತೃ ದೇವೋ ಭವ ಅನ್ನುವ ಬಿಜೆಪಿ ಮುಖಂಡನ ಪುತ್ರನೇ ಯುವತಿಯೊಬ್ಬಳಿಗೆ ಗರ್ಭದಾರಣೆ ಮಾಡಿ ವಂಚಿಸಿ ಪರಾರಿಯಾಗಿದ್ದಾನೆ. ಹೈಸ್ಕೂಲಿನಲ್ಲಿ ಉಂಟಾಗಿದ್ದ ಪ್ರೇಮ ಕಹಾನಿ ಕಾಲೇಜಿನಲ್ಲಿ ಮಗುವಿಗೆ ಜನ್ಮ ನೀಡುವ ಹಂತಕ್ಕೆ ಬಂದು ತಲುಪಿದೆ. ಪುತ್ತೂರು ಲವ್, ಸೆಕ್ಸ್, ದೋಖಾ ಕಹಾನಿ ಇದೀಗ ದೊಡ್ಡ ಸುದ್ಧಿಯಾಗುತ್ತಿದೆ. ಎಂಜಿನಿಯರಿಂಗ್ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ಸಹಪಾಠಿ ತರುಣಿಯನ್ನು ಪ್ರೀತಿಸಿ ಆಕೆಯನ್ನು ಗರ್ಭವತಿ ಮಾಡಿದ ಪ್ರಕರಣಕ್ಕೆ ಇದೀಗ ರೋಚಕ […]

Continue Reading

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಬ್ಯಾಂಕ್‌ವೊಂದರ ದರೋಡೆ ಪ್ರಕರಣ: ಆರೋಪಿಗಳನ್ನು ಬಂಧಿಸಿ ಕೆಜಿಗಟ್ಟಲೆ ಚಿನ್ನ, ನಗದು ವಶ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ರಾಷ್ಟ್ರೀಕೃತ ಬ್ಯಾಂಕ್‌ವೊಂದರಲ್ಲಿನ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ವಿಜಯಪುರ ಪೊಲೀಸರು ಆರೋಪಿಗಳನ್ನು ಬಂಧಿಸಿ ಕೆಜಿಗಟ್ಟಲೆ ಚಿನ್ನ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ. ಕಳೆದ ಮೇ ತಿಂಗಳ 29 ರಂದು ಮನಗೂಳಿ ಪಟ್ಟಣದ ಕೆನರಾ ಬ್ಯಾಂಕ್‌ನಲ್ಲಿ ನಡೆದಿದ್ದ ಬಹುದೊಡ್ಡ ಕಳ್ಳತನ ಪ್ರಕರಣದಲ್ಲಿ ಲಾಕರ್‌ನಲ್ಲಿ ಇರಿಸಿದ್ದ 53.26 ಕೋಟಿ ರೂಪಾಯಿ ಮೌಲ್ಯದ 58.97 ಕೆಜಿ ಚಿನ್ನಾಭರಣ ಹಾಗೂ 5,20,450 ರೂ.ನಗದು ಕಳ್ಳತನವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸ್ ಇಲಾಖೆ ಒಟ್ಟು ಎಂಟು ತನಿಖಾ ತಂಡಗಳನ್ನು ರಚಿಸಿ ವಿವಿಧ ಆಯಾಮಗಳಲ್ಲಿ […]

Continue Reading

ಜಾತಿ ನಿಂದನೆ ಪ್ರಕರಣ: ತಂದೆ, ಮಗ ದೋಷಮುಕ್ತ; ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ

ಜಾತಿ ನಿಂದನೆ ಆರೋಪ ಎದುರಿಸುತ್ತಿದ್ದ ನೆಲ್ಯಾಡಿ ನಿವಾಸಿಗಳಾದ ಗಣಪಯ್ಯ ಗೌಡ ಹಾಗೂ ಮಗ ಸೋಮಶೇಖರ ಗೌಡರನ್ನು ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತಗೊಳಿಸಿ ಆದೇಶ ನೀಡಿದೆ. ನೆಲ್ಯಾಡಿ ಗ್ರಾಮದ ನಿವಾಸಿ ಅಣ್ಣು ಎಂಬವರು 22-2-2017ರಂದು ರಾತ್ರಿ ಮನೆಯಲ್ಲಿದ್ದ ಸಮಯ ನೆರೆ ಮನೆಯ ಗಣಪಯ್ಯ ಗೌಡ, ಮಗ ಸೋಮಶೇಖರ ಏಕಾಏಕಿಯಾಗಿ ಅಣ್ಣು ಅವರ ಮನೆಯ ಅಂಗಳಕ್ಕೆ ಅಕ್ರಮ ಪ್ರವೇಶ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಜಾತಿ ನಿಂದನೆ ಮಾಡಿ ಕೈ ಹಾಗೂ ಕತ್ತಿಯಿಂದ ಹಲ್ಲೆ […]

Continue Reading