ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ, ಅವೈಜ್ಞಾನಿಕ ಕಾಮಗಾರಿ, ಅಕ್ರಮ ಕಟ್ಟಡ, ಮೂಲಭೂತ ಸೌಕರ್ಯದ ಕೊರತೆಯೇ ಇಂದಿನ ಸ್ಥಿತಿಗೆ ಕಾರಣ.

ಬೆಂಗಳೂರು ಗಾರ್ಡನ್ ಸಿಟಿ ಬದಲಿಗೆ ಗಾರ್ಬೇಜ್ ಸಿಟಿ ಎಂಬ ಮಾತಿಗೆ ಪೂರಕವಾದಂತಿದೆ. ✍️. ಕೆ. ಎ ಹನೀಫ್ ಬೆಂಗಳೂರಿನಲ್ಲಿ ಕೆರೆಗಳ ಒತ್ತುವರಿ ಸೇರಿದಂತೆ ಅವೈಜ್ಞಾನಿಕ, ಅಕ್ರಮ ಕಟ್ಟಡಗಳಿಂದ ಕೂಡಿ ಚರಂಡಿಗಳ ಮೂಲಕ ಸರಿಯಾಗಿ ನೀರಿನ ಹರಿಯುವಿಕೆ ಇಲ್ಲದೆ ಪ್ರತಿ ಮಳೆಗಾಲದ ಸಂದರ್ಭ ಬೆಂಗಳೂರಿನ ಪರಿಸ್ಥಿತಿ ಶೋಚನೀಯವಾಗಿದ್ದು, ಇಂದು ಬೆಂಗಳೂರು ಗಾರ್ಡನ್ ಸಿಟಿ ಬದಲಿಗೆ ಗಾರ್ಬೇಜ್ ಸಿಟಿ ಎಂಬ ಮಾತಿಗೆ ಪೂರಕವಾದಂತಿದೆ. ಹಾಗೆಯೇ ದೇಶದಲ್ಲಿ ನಮ್ಮ ರಾಜ್ಯ ಹೆಚ್ಚಿನ ತೆರಿಗೆ ನೀಡುವ ರಾಜ್ಯಗಳಲ್ಲಿ ಒಂದಾಗಿದೆ. ಕೇಂದ್ರ ಸರ್ಕಾರದಲ್ಲಿ ಹೆಚ್ಚಿನ […]

Continue Reading

ಬ್ಯಾರಿ ಜಾನಪದ ಕಥೆಗಳ ಇಂಗ್ಲಿಷ್ ಅನುವಾದಿತ ಕೃತಿ ಬಿಡುಗಡೆ

ಬ್ಯಾರಿ ಭಾಷೆಯಲ್ಲಿ ಪ್ರಕಟಗೊಂಡ ಜಾನಪದ ಕತೆಗಳ ಸಂಕಲನವೊಂದು ಇದೇ ಮೊದಲ ಬಾರಿಗೆ ಇಂಗ್ಲಿಷ್‌ಗೆ ಅನುವಾದಗೊಂಡಿವೆ. ಕರಾವಳಿ ಕರ್ನಾಟಕದ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೆಲೆಸಿರುವ ಬ್ಯಾರಿ ಮುಸ್ಲಿಂ ಜನಾಂಗಕ್ಕೆ ಸುಮಾರು 1400ಕ್ಕೂ ಅಧಿಕ ವರ್ಷಗಳ ಇತಿಹಾಸವಿದೆ. ಈ ಜನರು ಆಡುವ ಮಾತೃಭಾಷೆಯು ಬ್ಯಾರಿಯಾಗಿದೆ. ಈ ಭಾಷೆಯ ಅಭಿವೃದ್ಧಿಗಾಗಿ 2007ರಲ್ಲೇ ರಾಜ್ಯ ಸರಕಾರ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯನ್ನು ಸ್ಥಾಪಿಸಿದೆ. 2017ರಲ್ಲೇ ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿ ಬ್ಯಾರಿ ಅಧ್ಯಯನ ಪೀಠವನ್ನು ಸ್ಥಾಪಿಸಿದೆ. ಇಂತಹ ಬ್ಯಾರಿ ಭಾಷೆ, ಸಾಹಿತ್ಯ, ಸಂಸ್ಕೃತಿ, […]

Continue Reading

ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಕುರಿತು ನ್ಯಾಯಕ್ಕೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಭೇಟಿಯಾದ “ಜಸ್ಟಿಸ್ ಫಾರ್ ಅಶ್ರಫ್ ಯಾಕ್ಷನ್ ಕಮಿಟಿ” ಮತ್ತು ಸಿಪಿಐಎಂ ನಾಯಕರು

ಕೇರಳದ ವಯನಾಡ್ ನ ಸಿಪಿಐಎಂ ಪಕ್ಷಕ್ಕೆ ಸಾಧ್ಯವಾಗುವುದು, ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕತ್ವಕ್ಕೆ ಯಾಕೆ ಸಾಧ್ಯವಾಗುವುದಿಲ್ಲ: ಮುನೀರ್ ಕಾಟಿಪಳ್ಳ ಮಂಗಳೂರಿನಲ್ಲಿ ಮತಾಂಧ ಮನಸ್ಥಿತಿಯ ಗುಂಪಿನಿಂದ ಸಾಮೂಹಿಕ ಹಲ್ಲೆಗೊಳಗಾಗಿ ಮೃತ ಪಟ್ಟ ವಯನಾಡ್ ಅಶ್ರಫ್ ಗುಂಪು ಹತ್ಯೆ ಪ್ರಕರಣದಲ್ಲಿ ನ್ಯಾಯಕ್ಕಾಗಿ ವಯನಾಡ್ ನಲ್ಲಿ ಹೋರಾಟ ಬಲಗೊಳ್ಳುತ್ತಿದೆ. ಇಂದು (ಮೇ 21, 2025) ಕೇರಳ ಸಿಪಿಐಎಂ ಸರಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ವಯನಾಡ್ ಜಿಲ್ಲಾ ಪ್ರವಾಸದಲ್ಲಿ ಇದ್ದರು. ಅವರ ವಯನಾಡ್ ಪ್ರವಾಸ ನಿಗದಿಯಾದ ತಕ್ಷಣವೆ, ಸಿಪಿಐಎಂ ವಯನಾಡ್ ಜಿಲ್ಲಾ […]

Continue Reading

ಹಣ ಅಕ್ರಮ ವರ್ಗಾವಣೆ ಪ್ರಕರಣ: ಜಾಮೀನು ಪಡೆಯಲು ಒಂದು ವರ್ಷ ಜೈಲಿನಲ್ಲಿರಬೇಕು ಎಂಬ ನಿಯಮವಿಲ್ಲ: ಸುಪ್ರೀಂ ಕೋರ್ಟ್‌

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಆರೋಪಿಯು ಜಾಮೀನು ಪಡೆಯಲು ಒಂದು ವರ್ಷ ಜೈಲಿನಲ್ಲಿ ಇರಬೇಕು ಎಂಬ ನಿಯಮ ಇಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿ ಅಭಯ್‌ ಎಸ್‌.ಓಕಾ ಮತ್ತು ಉಜ್ಜಲ್‌ ಭುಯಾನ್ ಅವರನ್ನು ಒಳಗೊಂಡ ನ್ಯಾಯಪೀಠವು, ರೂಪಾಯಿ 2,000 ಕೋಟಿ ಮದ್ಯ ಹಗರಣ ಪ್ರಕರಣದಲ್ಲಿ ಉದ್ಯಮಿ ಅನ್ವರ್‌ ಧೇಬರ್‌ ಅವರಿಗೆ ಜಾಮೀನು ನೀಡಿತು. ಈ ಸಂದರ್ಭದಲ್ಲಿ ಆರೋಪಿಯು ಜಾಮೀನು ಪಡೆಯಲು ಒಂದು ವರ್ಷ ಜೈಲಿನಲ್ಲಿರಬೇಕು ಎಂಬ ನಿಯಮ ಇಲ್ಲ ಎಂದು ಸ್ಪಷ್ಟಪಡಿಸಿತು. ಅನ್ವರ್ ಅವರನ್ನು ಕಳೆದ […]

Continue Reading

ಕಂತ್ರಿ ಬ್ಯಾರಿಗಳು” ಎಂದಿದ್ದ ಶಾಸಕ ಹರೀಶ್ ಪೂಂಜಾ ವಿರುದ್ದ ದಾಖಲಾದ ಎಫ್ಐಆರ್ ರದ್ದತಿ ಕೋರಿದ್ದ ಅರ್ಜಿ ಇಂದು ವಿಚಾರಣೆ ನಡೆಯಿತು

ಹರೀಶ್ ಪೂಂಜಾ ಓರ್ವ ಹೆಬಿಚ್ಯುವಲ್ ಅಫೆಂಡರ್ ದ.ಕ ಜಿಲ್ಲೆಯ ಸೌಹಾರ್ದ ಜನತೆಯ ಪರವಾಗಿ ಉಚಿತವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್. ಬಾಲನ್ ✍️. ನವೀನ್ ಸೂರಿಂಜೆ, ಪತ್ರಕರ್ತರು “ಕಂತ್ರಿ ಬ್ಯಾರಿಗಳು” ಎಂದಿದ್ದ ಶಾಸಕ ಹರೀಶ್ ಪೂಂಜಾ ವಿರುದ್ದ ದಾಖಲಾದ ಎಫ್ಐಆರ್ ರದ್ದತಿ ಕೋರಿದ್ದ ಅರ್ಜಿ ವಿಚಾರಣೆ ಇಂದು ನಡೆಯಿತು‌. ಹಿರಿಯ ವಕೀಲ ಎಸ್ ಬಾಲನ್ ಅವರು ದೂರುದಾರ ಬಿ ಎಸ್ ಇಬ್ರಾಹಿಂ ಪರವಾಗಿ ವಕಾಲತ್ತು ಹಾಕಿ ವಾದ ಮಂಡಿಸಿದರು. ಅದಕ್ಕೂ ಮೊದಲು ನಾವು ಒಂದು ಸಣ್ಣ […]

Continue Reading

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ‌ ನೌಷಾದ್ ಮೇಲೆ ಮಂಗಳೂರು ಜೈಲಿನಲ್ಲಿ ಹಲ್ಲೆ. ಅಪಾಯದಿಂದ ಪಾರು.

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ‌ ನೌಷಾದ್ ಮೇಲೆ ಸೋಮವಾರ ಸಂಜೆ ಹಲ್ಲೆಗೆ ಯತ್ನ ನಡೆದಿದೆ. ನೌಷಾದ್ ಅಪಾಯದಿಂದ ಪಾರಾಗಿದ್ದಾನೆ. ಸೋಮವಾರದಂದು ನೌಷಾದ್ ನ ಪೊಲೀಸ್ ಕಸ್ಟಡಿ ಅಂತ್ಯವಾದ ಕಾರಣ ಪೊಲೀಸರು ಆತನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನ್ಯಾಯಾಲಯ ನೌಶಾದ್ ನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿದ ಹಿನ್ನಲೆಯಲ್ಲಿ ಆತನನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲು ಪೊಲೀಸರು ಉದ್ದೇಶಿಸಿದ್ದರು. ಈ ಮದ್ಯೆ ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದು ನೌಷಾದ್ ಹೇಳಿದ್ದ ಎನ್ನಲಾಗಿದೆ. […]

Continue Reading

ವಿದ್ಯಾರ್ಥಿಗಳ ಕುಚ್..ಕುಚ್.. ವಿದ್ಯಾರ್ಥಿನಿ ಗರ್ಭಿಣಿ, ಠಾಣಾ ಮೆಟ್ಟಿಲೇರಿದ ಪೋಷಕರು, ದೂರು ದಾಖಲು.

ಪುತ್ತೂರು: ಎಂಜಿನಿಯರಿಂಗ್ ಓದುತ್ತಿರುವ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ನಡುವಿನ ಸುದೀರ್ಘ ಕಾಲದ ಪ್ರೇಮ ವಿವಾದಾತ್ಮಕ ತಿರುವು ಪಡೆದಿದೆ. ಇದೀಗ ವಿದ್ಯಾರ್ಥಿ ನಿ ಗರ್ಭವತಿಯಾಗಿದ್ದು ಮನೆಯವರು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ. ಪುತ್ತೂರಿನ ಪ್ರಮುಖ ರಾಜಕೀಯ ಪಕ್ಷವೊಂದರ ಮುಖಂಡರ ಮಗ ಎಂಜಿನಿಯರಿಂಗ್ ಓದುತ್ತಿದ್ದು, ಅನೇಕ ವರ್ಷಗಳಿಂದ ವಿದ್ಯಾರ್ಥಿನಿ ಒಬ್ಬಳನ್ನು ಪ್ರೀತಿಸುತ್ತಿದ್ದ ಎಂದು ತಿಳಿದು ಬಂದಿದೆ. ಇಬ್ಬರ ಪ್ರೀತಿ, ಪ್ರೇಮವು ಪ್ರಣಯಕ್ಕೆ ತಿರುಗಿದ ಪರಿಣಾಮ ವಿದ್ಯಾರ್ಥಿನಿ ಗರ್ಭಧರಿಸಿದ್ದಾಳೆ. ವಿಷಯ ತಿಳಿಯುತ್ತಲೇ ಹುಡುಗಿ ಕಡೆಯವರು ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.ದೂರು ಸ್ವೀಕರಿಸಿದ ಪೊಲೀಸರು […]

Continue Reading

ಶುರುವಾಗಲಿದೆ ನಿಖಿಲ್ ಪಟ್ಟಾಭಿಷೇಕ ಯಾತ್ರೆ; ಅಗರ್ವಾಲ್ ಅವರಿಗೇಕೆ ಕೋಪ.?

ಕರ್ನಾಟಕ ಉಸ್ತುವಾರಿ ಅಗರ್ವಾಲ್ ಗೆ ಅಮಿತ್ ಷಾ ಕ್ಲಾಸು; ಕುಮಾರಣ್ಣನಿಗೆ ರೆಡ್ಡಿಗಾರು ಟಾನಿಕ್ ✍️. ಆರ್.ಟಿ.ವಿಠ್ಠಲಮೂರ್ತಿ ಅಳೆದು-ಸುರಿದು ಮೊಮ್ಮಗ ನಿಖಿಲ್ ಕುಮಾರಸ್ವಾಮಿಯವರ ಪಟ್ಟಾಭಿಷೇಕ ಯಾತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಗ್ರೀನ್ ಸಿಗ್ನಲ್ ತೋರಿಸಿದ್ದಾರಂತೆ.ಹಾಗೆಂಬ ವರ್ತಮಾನ ಪಕ್ಷದ ಹೆಡ್ಡಾಫೀಸಿನಿಂದ ಹೊರಬೀಳುತ್ತಿದ್ದಂತೆಯೇ ಜೆಡಿಎಸ್ ಪಾಳಯದಲ್ಲಿ ಸಂಚಲನ ಶುರುವಾಗಿದೆ. ಅಂದ ಹಾಗೆ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಕುಮಾರಸ್ವಾಮಿ ದಿಲ್ಲಿಗೆ ಹೋದ ನಂತರ ಕರ್ನಾಟಕದಲ್ಲಿ ಪಕ್ಷದ ಅಧ್ಯಕ್ಷ ಸ್ಥಾನವನ್ನು ನಿಖಿಲ್ ಕುಮಾರಸ್ವಾಮಿಯವರಿಗೆ ನೀಡಬೇಕು ಎಂಬ ಲೆಕ್ಕಾಚಾರ ಪದ್ಮನಾಭ ನಗರದ ಗೌಡರ ನಿವಾಸದಲ್ಲಿ ಶುರುವಾಗಿತ್ತು. […]

Continue Reading

ಅಮೆರಿಕಾದ ನ್ಯೂಯಾರ್ಕ್ ವಿವಿಯಲ್ಲಿ ಸಚಿವ ಎಂ.ಬಿ ಪಾಟೀಲ್ ಮಗ ಧ್ರುವ ಎಂ. ಪಾಟೀಲ್ ಟಾಫರ್‌

ಬಿಎಲ್‌ಡಿಇ ಸಂಸ್ಥೆ ಅಧ್ಯಕ್ಷ ಹಾಗೂ ರಾಜ್ಯ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ ಅವರ ಕಿರಿಯ ಪುತ್ರ ಧ್ರುವ ಎಂ. ಪಾಟೀಲ ಅಮೆರಿಕಾದ ನ್ಯೂಯಾರ್ಕ್ ವಿಶ್ವವಿದ್ಯಾಲಯಕ್ಕೆ ಟಾಫ್ 5 ವಿದ್ಯಾರ್ಥಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದ್ದಾರೆ. ನ್ಯೂಯಾರ್ಕ್ ವಿವಿಯಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವದಲ್ಲಿ ಅವರಿಗೆ ಬ್ಯಾಚುಲರ್‌ ಆಫ್ ಸೈನ್ಸ್ ಪದವಿಯನ್ನು ಪ್ರದಾನ ಮಾಡಲಾಯಿತು. ಘಟಿಕೋತ್ಸವದಲ್ಲಿ ಸಚಿವ ಎಂ. ಬಿ. ಪಾಟೀಲ ಹಾಗೂ ಕುಟುಂಬದ ಸದಸ್ಯರು ಭಾಗವಹಿಸಿ, ಧ್ರುವ ಎಂ. ಪಾಟೀಲ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವನ್ಯ ಜೀವಿ ರಕ್ಷಣೆ, ಪರಿಸರ ಜಾಗೃತಿ, ಬೀದಿ […]

Continue Reading

ಪಾಕಿಸ್ತಾನದ ಐಎಸ್‌ಐಗೆ ಮಾಹಿತಿ ರವಾನೆ, ಹರಿಯಾಣದ ಯೂಟ್ಯೂಬರ್​ ಸೇರಿದಂತೆ ಆರು ಜನರ ಬಂಧನ

ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್‌ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್​ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.ಈ ಪ್ರಕರಣದಲ್ಲಿ ಹರಿಯಾಣ ಮೂಲದ ಟ್ರಾವೆಲ್ ವ್ಲಾಗರ್ ಜ್ಯೋತಿ ಮಲ್ಹೋತ್ರಾ, ಮಸ್ತ್‌ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್​ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಟ್ರಾವೆಲ್ ವಿಥ್ ಜೋ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ, 2023ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಳು. ಆ ಭೇಟಿ […]

Continue Reading