ಮಂಗಳೂರು ನಿವಾಸಿಗಳಿಂದ ಚಿಕ್ಕಮಗಳೂರು ಬಿಂದಿಗೆ ಪೀಕ್ ರೆಸಾರ್ಟ್ ನಲ್ಲಿ ನಡೆದಿದ್ದ ಮದುವೆ, ಹೆಚ್ಚುವರಿ ಹಣ ಪಡೆದ ಆರೋಪ

ಬಡ್ಡಿ ಸಹಿತ ಮರುಪಾವತಿಸಲು ಗ್ರಾಹಕ ವೇದಿಕೆ ಆದೇಶ ರೆಸಾರ್ಟ್ ನಲ್ಲಿ ನಡೆದ ಮದುವೆ ಕಾರ್ಯಕ್ರಮದ ವೆಚ್ಚಕ್ಕಿಂತ ಹೆಚ್ಚುವರಿ ಹಣ ಪಡೆದ ಆರೋಪದಲ್ಲಿ ರೆಸಾರ್ಟ್ ಆಡಳಿತ ಮಂಡಳಿ ಆ ಮೊತ್ತವನ್ನು ಬಡ್ಡಿ ಸಮೇತ ಮರು ಪಾವತಿ ಮಾಡಬೇಕೆಂದು ಮಂಗಳೂರಿನ ಗ್ರಾಹಕ ವೇದಿಕೆ ಆದೇಶ ನೀಡಿದೆ. ಮಂಗಳೂರು ಕುಲಶೇಖರ ಕಲ್ಪನೆ ನಿವಾಸಿಗಳಾದ ಗಣೇಶ ಕೃಷ್ಣ ಮತ್ತು ಶೃಂಗ ಅವರ ವಿವಾಹ 2013 ರ ನವೆಂಬರ್ 27 ರಿಂದ 30 ರವರೆಗೆ ಚಿಕ್ಕಮಗಳೂರಿನ ಕರ್ಕ್ ನಳ್ಳಿ ಬಿಂದಿಗೆ ಗ್ರಾಮದ ಬಿಂದಿಗೆ ಪೀಕ್ […]

Continue Reading

ಮಂಗಳೂರು: ಮನೆಗಾಗಿ ಸಾಲ ಪಡೆದಿದ್ದ ಮಹಿಳೆ; ಮೂಲ ದಾಖಲೆ ಹಿಂದಿರುಗಿಸದ ಬ್ಯಾಂಕ್ ಗೆ 53.14 ಲಕ್ಷ ದಂಡ ವಿದಿಸಿದ ದ.ಕ ಜಿಲ್ಲಾ ಗ್ರಾಹಕರ ವೇದಿಕೆ

ಸಾಲಕ್ಕೆ ಭದ್ರತೆಯಾಗಿ ನೀಡಿದ ಮೂಲ ದಾಖಲೆ ಹಿಂದಿರುಗಿಸದ ಪ್ರಕರಣದಲ್ಲಿ ಬ್ಯಾಂಕ್ 53.14 ಲಕ್ಷ ರೂಪಾಯಿ ಪಾವತಿಸಬೇಕು ಎಂದು ದ.ಕ ಜಿಲ್ಲಾ ಗ್ರಾಹಕರ ವೇದಿಕೆ ಆದೇಶ ನೀಡಿದೆ. ಮಂಗಳೂರು ತಾಲೂಕು ಕೆಂಜಾರಿನ ಸುನೀತಾ ಲಕ್ಷ್ಮಣ್ ಪೂಜಾರಿ ಅವರು ಕಂಕನಾಡಿಯಲ್ಲಿರುವ ಐಡಿಬಿಐ ಬ್ಯಾಂಕ್ ನಿಂದ 12 ಲಕ್ಷ ರೂಪಾಯಿ ಗೃಹಸಾಲ ಪಡೆದಿದ್ದರು. ಸಾಲದ ಬಾಬ್ತು ತಮ್ಮ ಮನೆಯ ಎಲ್ಲ ಮೂಲ ದಾಖಲೆಗಳನ್ನು ಬ್ಯಾಂಕ್ ನಲ್ಲಿ ಜಮೆ ಮಾಡಿದ್ದರು. ಸಾಲದ ಮರುಪಾವತಿಯನ್ನು ನಿಗದಿತ ಅವಧಿಯ ಮುಂಚಿತವಾಗಿಯೇ ಮರುಪಾವತಿ ಮಾಡಿದ‌ ನೆಲೆಯಲ್ಲಿ ತನ್ನ […]

Continue Reading

ಜನಪ್ರತಿನಿಧಿಗಳ ಬೆಂಬಲದ ಖಾಸಗೀ ಶಿಕ್ಷಣ ಸಂಸ್ಥೆಗಳ ಲಾಭಿಗೆ ಸರಕಾರಿ ಕಾಲೇಜುಗಳನ್ನು ಬಲಿಯಾಗಿಸಲಾಗುತ್ತಿದೆ: ಮುನೀರ್ ಕಾಟಿಪಳ್ಳ.

ಬಡವರ ಮನೆಯ ಮಕ್ಕಳು ಪದವಿ ಶಿಕ್ಷಣ ಪಡೆಯಬೇಕಾದರೆ ಸರಕಾರಿ ಶಾಲಾ, ಕಾಲೇಜುಗಳು ಉಳಿಯಬೇಕು ಬಡವರ ಮನೆಯ ಮಕ್ಕಳು ತಮ್ಮ ಆಯ್ಕೆಯ ಪದವಿ ಶಿಕ್ಷಣ ಪಡೆಯಬೇಕಾದರೆ ಸರಕಾರಿ ಶಾಲಾ, ಕಾಲೇಜುಗಳು ಉಳಿಯಬೇಕು, ಬಲಗೊಳ್ಳಬೇಕು. ಹಣಕಾಸು, ಅನುದಾನದ ಕೊರತೆಯನ್ನು ಮುಂದಿಟ್ಟು ಕೊಣಾಜೆ, ಬನ್ನಡ್ಕ, ನೆಲ್ಯಾಡಿ ಸಹಿತ ನಾಲ್ಕು ಕಾಲೇಜು ಮುಚ್ಚಲು ಹೊರಟಿರುವುದು ನೆಪ ಮಾತ್ರ. ವಿವಿ ಆಡಳಿತದ ನಡೆಯನ್ನು ನಾಗರೀಕ ಸಮಾಜ ತೀವ್ರವಾಗಿ ವಿರೋಧಿಸಿದೆ. ವಿ.ವಿಯಲ್ಲಿ ಆರ್ಥಿಕ ಮುಗ್ಗಟ್ಟ ಅದಕ್ಕೆ ವಿ.ವಿ ಅಡಳಿತದ ಭ್ರಷ್ಟಾಚಾರ, ಇದನ್ನೆಲ್ಲ ಕಂಡು ಕಣ್ಣು ಮುಚ್ಚಿ […]

Continue Reading

ಮುಸ್ಲಿಮರ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ್ದ ಉಡುಪಿ ವೈದ್ಯನಿಗೆ ಬಿತ್ತು ಕೇಸು

ಕರಾವಳಿಯಲ್ಲಿ ಪ್ರತಿಯೊಂದು ಬಾರಿಯೂ ಧರ್ಮ ದ್ವೇಷ ವಿಜೃಂಭಿಸುತ್ತಲೇ ಇರುತ್ತದೆ. ಸಾಮಾಜಿಕ ಜಾಲತಾಣಗಳು ಕರಾವಳಿಯ ಸೌಹಾರ್ದ ವಾತಾವರಣಕ್ಕೆ ಧಕ್ಕೆ ಬರುವ ಪ್ರಸಂಗಗಳು ಪ್ರತಿ ಬಾರಿಯೂ ನಡೆಯುತ್ತಲೇ ಇರುತ್ತದೆ. ಇದೀಗ ಸಾಮಾಜಿಕ ಜಾಲತಾಣ ‘X’ ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿ ಯಾಗಿ ಕಾಮೆಂಟ್ ಮಾಡಿದ ಆರೋಪದಡಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಲ್ಯಾಪ್ರೋಸ್ಕೋಪಿ ಶಸ್ತ್ರ ಚಿಕಿತ್ಸಾ ತಜ್ಞ ಡಾ. ಕೀರ್ತನ್ ಉಪಾಧ್ಯ ಲಾನ್ಲಿ […]

Continue Reading

ಆಪದ್ಬಾಂಧವನ ‘ಮುಸೀಬತ್’ ಒಂದೊಂದೇ ಹೊರ ಬರತೊಡಗಿದೆ

ಮಗಳ ಖಾಸಗಿ ವೀಡಿಯೊ ತುಣುಕುಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿಬಿಟ್ಟಿ ಖತರ್ನಾಕ್ ಸಮಾಜಸೇವೆಯ ಸೋಗಿನಲ್ಲಿದ್ದ ಆಪದ್ಬಾಂಧವನ ‘ಮುಸೀಬತ್’ ಒಂದೊಂದೇ ಹೊರಗೆ ಬರತೊಡಗಿದೆ. ಸ್ವತಹ: ತನ್ನ ಮಗಳ ಖಾಸಗಿ ವೀಡಿಯೊ ತುಣುಕುಗಳನ್ನು ಸೋಷಿಯಲ್‌ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದು, ಇದರಿಂದ ಮನನೊಂದ ಪುತ್ರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪಡುಬಿದ್ರಿಯಲ್ಲಿ ಸಂಭವಿಸಿದೆ. ಆಪದ್ಭಾಂಧವ ಆಸಿಫ್ ಎಂದೇ ಗುರುತಿಸಿಕೊಂಡಿರುವ ಪಡುಬಿದ್ರಿ ಸಮೀಪದ ಕಂಚಿನಡ್ಕ ನಿವಾಸಿ ಆಸಿಫ್ ಆರೋಪಿಯಾಗಿದ್ದಾನೆ. ಮಗಳ ವೀಡಿಯೊಗಳನ್ನು ವಾಟ್ಸಪ್ ಗ್ರೂಪ್‌ಗಳಲ್ಲಿ ಹಂಚಿಕೊಂಡಿರುವುದಕ್ಕೆ ತಾಯಿ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. […]

Continue Reading

ಬಜಪೆ ಫೈನಾನ್ಸ್ ಸೊಸೈಟಿಯಲ್ಲಿ ಆಸಿಡ್ ದಾಳಿ ನಡೆಸಿ, ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಯತ್ನಿಸಿದ ಆರೋಪಿಗಳ ಹೆಡೆಮುರಿ ಕಟ್ಟಿದ ಬಜಪೆ ಪೊಲೀಸರು

ಬಜಪೆ ಫೈನಾನ್ಸ್ ಸೊಸೈಟಿಯಲ್ಲಿ ಬುರ್ಖಾ ಹಾಕಿಕೊಂಡು ಬಂದು ಮಹಿಳೆಯರ ಮೇಲೆ ಆಸಿಡ್ ದಾಳಿ ನಡೆಸಿ ಚಿನ್ನಾಭರಣಗಳನ್ನು ಸುಲಿಗೆ ಮಾಡಲು ಯತ್ನಿಸಿದ ಮೂವರು ಆರೋಪಿಗಳನ್ನು ಮತ್ತು 15 ಲಕ್ಷ ರೂ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಜಪೆ ಗ್ರಾಮದ ನಿವಾಸಿ ಲೆಸ್ಲಿ ಡಿ ಕುನ್ಹ ಎಂಬವರ ಮಾಲಕತ್ವದ ಬಜಪೆ ಫೈನಾನ್ಸ್ ಕಾರ್ಪೊರೇಷನ್ (ರಿ) ಸೊಸೈಟಿಗೆ ದಿನಾಂಕ 04.07.2024 ರಂದು ಸಂಜೆ 4 ರ ಸಮಯಕ್ಕೆ ಕಪ್ಪು ಬಣ್ಣದ ಸ್ಕೂಟರ್ ನಲ್ಲಿ ಬುರ್ಖಾ ಧರಿಸಿದ ಮಹಿಳೆ ಮತ್ತು […]

Continue Reading

ಗರುಡ ಗ್ಯಾಂಗ್ ಸದಸ್ಯರಿಗೆ ಹಣಕಾಸಿನ ನೆರವು, ಕರ್ವೇಲು ನಿವಾಸಿ ಸಫಾರ ಯಾನೆ ಸಾಜಿದ ಬಂಧನ

ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ. ಗರುಡ ಗ್ಯಾಂಗ್‌ ಸದಸ್ಯರಿಗೆ ಸಫಾರ ಆರ್ಥಿಕ ನೆರವು ಮತ್ತು ಆಶ್ರಯ ವ್ಯವಸ್ಥೆ ಮಾಡಿದ್ದಳು. ಗ್ಯಾಂಗ್ ಸದಸ್ಯರಿಗೆ ಮೊಬೈಲ್‌ ಫೋನ್ ನೀಡಿ ಹಣ ವರ್ಗಾವಣೆ ಮಾಡಿರುವ ಆರೋಪವೂ ಸಫಾರ ಯಾನೆ ಸಾಜಿದ […]

Continue Reading

ಡಾ. ಭರತ್ ಶೆಟ್ರೆ.. ತಾವೊಬ್ಬ ಪೆದ್ದ ಶಾಸಕ.! ಕಾವೂರು ಪ್ರತಿಭಟನಾ ಸಭೆಯಲ್ಲಿ ಇನಾಯತ್ ಆಲಿ ಠಕ್ಕರ್

ಪ್ರತಿಭಟನಾ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಜಯಷೋಷ ‘ನಾನೂ ಹಿಂದೂ’ ಕಾಂಗ್ರೆಸ್ ನಾಯಕ, ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಅಸಂಬದ್ಧ ಪದ ಬಳಕೆ ಮಾಡಿರುವ ಮಂಗಳೂರು ಉತ್ತರ ಶಾಸಕರಾದ ಭರತ್ ಶೆಟ್ಟಿ ವಿರುದ್ಧ ಸುರತ್ಕಲ್, ಗುರುಪುರ ಬ್ಲಾಕ್ ವತಿಯಿಂದ ಇನಾಯತ್ ಆಲಿ ನೇತೃತ್ವದಲ್ಲಿ ಕಾವೂರಿನಲ್ಲಿ ಇಂದು ಸಂಜೆ ಬೃಹತ್ ಪ್ರತಿಭಟನಾ ಸಭೆ ನಡೆಯಿತು. ನೂರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭರತ್ ಶೆಟ್ಟಿ ವಿರುದ್ಧ ಧಿಕ್ಕಾರ ಕೂಗಿ ಬಂಧಿಸುವಂತೆ ಆಗ್ರಹಿಸಿದರು. ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ […]

Continue Reading

ಮಾಜಿ ಸಚಿವ ರಮಾನಾಥ ರೈ ಆಪ್ತನ ರಹಸ್ಯ ಮೀಟಿಂಗ್.! ಕದ್ರಿ ಗೆಸ್ಟ್ ಹೌಸ್ ನಲ್ಲಿ ನಡೆದಿದ್ದೇನು.?

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಎಲ್ಲವೂ ಸರಿ ಇಲ್ಲ ಅನ್ನುವುದಕ್ಕೆ ಇದೊಂದು ಘಟನೆ ಸಾಕು. ಜಿಲ್ಲಾ ಕಾಂಗ್ರೆಸ್ಸಿನಲ್ಲಿ ಐದಾರು ಬಣಗಳಿದ್ದು, ಒಬ್ಬ ನಾಯಕರನ್ನು ಕಂಡರೆ ಇನ್ನೊಬ್ಬರಿಗೆ ಆಗಲ್ಲ. ಬಿಜೆಪಿಯನ್ನು ಸೋಲಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಕ್ಕಿಂತ ಇಲ್ಲಿನ ನಾಯಕರು ಇನ್ನೊಬ್ಬರ ಕಾಲೆಳೆಯುವುದೇ ದೊಡ್ಡ ಸಾಧನೆ ಎಂದು ತಿಳಿದುಕೊಂಡು ಬಿಟ್ಟಿದ್ದಾರೆ. ಇದೇ ಕಾರಣದಿಂದ ಕಳೆದ ಮೂವತ್ತು ವರ್ಷಗಳಿಂದ ಕರಾವಳಿಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲುತ್ತಲೇ ಇದೆ. ಸೋತರೂ ಇವರಿಗೆ ಬುದ್ಧಿ ಬಂದಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆ ಬಗ್ಗೆ […]

Continue Reading

ಮುಸ್ಲಿಂ ಮಹಿಳೆಯರ ವಿರುದ್ದ ಅವಹೇಳನಕಾರಿ ಹೇಳಿಕೆ; ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡ ಡಾ.ಪ್ರಭಾಕರ ಭಟ್‌ ಕಲ್ಲಡ್ಕ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಈಚೆಗೆ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. 2023ರ ಡಿಸೆಂಬರ್ 24ರ ಮಧ್ಯಾಹ್ನ ಮಂಡ್ಯ […]

Continue Reading