ಬೆಳ್ತಂಗಡಿಯ ಸಾಹುಲ್ ಮತ್ತು ಇಸಾಕ್, ಶಿರ್ಲಾಲಿನ ಇಮ್ತಿಯಾಝ್ ಕಾರಿನೊಳಗೆ ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆ.

ತುಮಕೂರಿನ ಕುಚ್ಚಂಗಿ ಕೆರೆಯ ಬಳಿ ಸುಟ್ಟ ಸ್ಥಿತಿಯಲ್ಲಿ ಮೂರು ಶವಗಳು ಪತ್ತೆಯಾಗಿದ್ದು, ಕಾರಿನಲ್ಲಿದ್ದ ಮೂರು ಶವಗಳ ಪೈಕಿ ಒಂದು ಕಾರ್ಕಳದ ಶಿರ್ಲಾಲು ಮೂಲದ ಯುವಕ, ಬೆಳ್ತಂಗಡಿಯ ಸಾಹುಲ್(26) ಇಸಾಕ್ (25) ಹಾಗೂ ಶಿರ್ಲಾಲಿನ ಇಮ್ತಿಯಾಝ್ (34) ಕಾರಿನೊಳಗೆ ಸುಟ್ಟುಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತುಮಕೂರಿನ ಕೋರ ಹೋಬಳಿಯ ಕುಚ್ಚಂಗಿ ಕೆರೆ ಬಳಿ ಕಾರು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಕಾರಿನ ಮಾಹಿತಿ ದೊರೆತು ತನಿಖೆ ನಡೆಸಿದಾಗ ಬೆಳ್ತಂಗಡಿಯ ರಫೀಕ್‌ ಎಂಬವರಿಗೆ ಸೇರಿದ್ದಾಗಿದ್ದು, ಕಾರಿನ ಢಿಕ್ಕಿಯಲ್ಲಿ ಎರಡು ಮೃತದೇಹಗಳು ಹಾಗೂ ಹಿಂಬದಿಯ […]

Continue Reading

ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ: ಬಶೀರ್ ಮದನಿ

ಎಲ್ಲಾ ಧರ್ಮಗಳ ಭೋದನೆಗಳು ಸತ್ಯದ ಹಾದಿಯಲ್ಲಿದ್ದು,ಮನುಷ್ಯ ಕುಲದ ಏಳಿಗೆಗಾಗಿ ಅವುಗಳು ಶ್ರಮಿಸುತ್ತಿದೆಯೇ ಹೊರತು ಮನುಕುಲದ ನಾಶಕ್ಕಾಗಿ ಅಲ್ಲ.ಆದರೆ ಕೆಲವೊಂದು ಸ್ಥಾಪಿತ ಹಿತಾಸಕ್ತಿಗಳು ಧರ್ಮವನ್ನು ತನ್ನ ಸ್ವಾರ್ಥಕ್ಕಾಗಿ ದುರ್ಬಳಕೆ ಮಾಡಿ,ಸಮಾಜದಲ್ಲಿ ದ್ವೇಷಪೂರಿತ ವಾತಾವರಣವನ್ನು ಸ್ರಷ್ಠಿಸಿ ತಮ್ಮ ಬೇಳೆಯನ್ನು ಬೇಯಿಸುತ್ತಿದ್ದಾರೆ. ಸಮಾಜದಲ್ಲಿ ಇಂತಹ ಕಂದಕ ಸ್ರಷ್ಠಿಸುವವರನ್ನು ಹಿಮ್ಮೆಟ್ಟಿಸಬೇಕಾದರೆ ಸರ್ವ ಧರ್ಮಗಳ ಜನತೆ ಒಂದುಗೂಡುವ ಸೌಹಾರ್ದ ಕಾರ್ಯಕ್ರಮಗಳು ಹೆಚ್ಚೆಚ್ಚು ನಡೆಯುವ ಮೂಲಕ ಸ್ವಾಸ್ಥ್ಯ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ ಎಂದು ಸುನ್ನಿ ವಿದ್ವಾಂಸರೂ,SYS ಜಿಲ್ಲಾ ಉಪಾಧ್ಯಕ್ಷರಾದ ಬಹುಮಾನ್ಯ ಬಶೀರ್ ಮದನಿಯವರು ಅಭಿಪ್ರಾಯಪಟ್ಟರು. […]

Continue Reading

ಪಾರ್ಲಿಮೆಂಟ್ ಚುನಾವಣೆ ಮತ ಚಲಾಯಿಸುವ ಮುನ್ನ ವಿನಾಯಕ ಬಾಳಿಗಾನನ್ನು ನೆನಪಿಸಿ: ನರೇಂದ್ರ ನಾಯಕ್

ಆರ್ ಎಸ್ ಎಸ್ ಕಾರ್ಯಕರ್ತ ವಿನಾಯಕಾ ಬಾಳಿಗಾ ಹತ್ಯೆಯಾಗಿ 8 ವರುಷ ಸಂದರೂ ಬಿಜೆಪಿಯ ಒಬ್ಬನೇ ಒಬ್ಬ ಜನಪ್ರತಿನಿಧಿಗಳು ಕೊಲೆಯನ್ನು ಈವರೆಗೆ ಕನಿಷ್ಠ ಖಂಡಿಸಲೂ ಇಲ್ಲ ನ್ಯಾಯಕ್ಕಾಗಿ ಆಗ್ರಹಿಸಲೂ ಇಲ್ಲ. ಇದೀಗ ಪಾರ್ಲಿಮೆಂಟ್ ಚುನಾವಣೆ ಘೋಷಣೆಯಾಗಿದೆ ಧರ್ಮ ದೇವರ ಹೆಸರಲ್ಲಿ ರಾಜಕಾರಣ ಮಾಡುವ ಜನಪ್ರತಿನಿಧಿಗಳಿಗೆ ಮತ ಚಲಾಯಿಸುವ ವೇಳೆ ದೇವಸ್ಥಾನದ ಅಕ್ರಮದ ವಿರುದ್ಧ ಧ್ವನಿಯೆತ್ತಿ ಕೊಲೆಯಾದ ವಿನಾಯಕ ಬಾಳಿಗಾನನ್ನು ಜನ ನೆನಪಿಸಿಕೊಳ್ಳಬೇಕೆಂದು ಹಿರಿಯ ವಿಚಾರವಾದಿ ಪ್ರೋ ನರೇಂದ್ರನಾಯಕ್ ಆರ್.ಟಿ.ಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆಗೆ ಎಂಟು ವರುಷ […]

Continue Reading

ಸೌದಿ ಅರೇಬಿಯದ ತಾಯಿಫ್ ಬಳಿ ಕಾರು ಅಪಘಾತ: ಹಳೆಯಂಗಡಿ ಮೂಲದ ನಾಲ್ವರು ವಿಧಿವಶ

ಮದೀನಕ್ಕೆ ಉಮ್ರಾ ನಿರ್ವಹಿಸಲು ತೆರಳುತ್ತಿದ್ದಾಗ ಮೂರು ತಿಂಗಳ ಹಸುಗೂಸು ಸಹಿತ ಒಂದೇ ಕುಟುಂಬದ ನಾಲ್ವರು ರಿಯಾದ್ ಸಮೀಪದ ಝಲ್ಪಾ ಎಂಬಲ್ಲಿ ಕಾರು ಅಪಘಾತವಾಗಿ ಮೃತಪಟ್ಟಿರುವ ಘಟನೆ ಬುಧವಾರ ರಾತ್ರಿ ವರದಿಯಾಗಿದೆ. ಮೃತರನ್ನು ಹಳೆಯಂಗಡಿ ತೋಕೂರು ನಿವಾಸಿ ಶಮೀಮ್‌ ಮತ್ತು ಝರೀನಾ ದಂಪತಿಯ ಪುತ್ರಿ ಹಿಬಾ, ಆಕೆಯ ಪತಿ ಮುಹಮ್ಮದ್‌ ರಮೀಝ್‌, ಮಕ್ಕಳಾದ ಆರೂಶ್‌ ಮತ್ತು ರಾಹ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಹಿಬಾ ಅವರ ಸಹೋದರಿ ಶಬ್ನಮ್‌ ಎಂಬವರ ಮಗಳು ಫಾತಿಮಾ ಗಂಭೀರ ಗಾಯಗೊಂಡಿದ್ದು, ಆಕೆಯನ್ನು ರಿಯಾದ್ ನ […]

Continue Reading

ಫಲ್ಗುಣಿ ನದಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ mrpl ನ ಅಕ್ರಮ ಪೈಪ್ ಲೈನ್ ಪತ್ತೆ ಹಚ್ಚಿದ ಹೋರಾಟ ಸಮಿತಿ, ಜಿಲ್ಲಾಡಳಿತ ಇನ್ನಾದರು ಮೌನ ಮುರಿದು ಕಠಿಣ ಕ್ರಮ ಕೈಗೊಳ್ಳಲು ಆಗ್ರಹ

ಕಳೆದ ಮೂರು ವಾರಗಳಿಗೂ ಅಧಿಕ ದಿನಗಳಿಂದ ಫಲ್ಗುಣಿ ನದಿಗೆ ತೋಕೂರು ಹಳ್ಳದ ಮೂಲಕ mrpl ಕಂಪೆನಿ ವಿಷಕಾರಿ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುತ್ತಿದೆ ಎಂದು ನಾಗರಿಕ ಹೋರಾಟ ಸಮಿತಿ ಆರೋಪಿಸುತ್ತಾ ಬಂದಿದೆ. ಇದಕ್ಕೆ ಸಾಕ್ಷಿ ಎಂಬಂತೆ mrpl ಕಡೆಯಿಂದ ಹರಿದು ಬರುವ ತೋಕೋರು ಹಳ್ಳದ ನೀರು ಕಪ್ಪು ಬಣ್ಣಕ್ಕೆ ತಿರುಗಿ ಪೆಟ್ರೋಲ್ ವಾಸನೆಯಿಂದ ನಾರುತ್ತಿತ್ತು. ಈ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದು, ಪ್ರತಿದಿನ ಆಧಾರ ಸಹಿತ ತೋಕೂರು ಹಳ್ಳದ ಹೀನಾಯ ಸ್ಥಿತಿಯನ್ನು ಸಾಮಾಜಿಕ ಜಾಲತಾಣ, ಸುದ್ದಿ ಮಾಧ್ಯಮಗಳ […]

Continue Reading

ಮೋದಿ ಬೇಕು.. ಬಿಲ್ಲವರೂ ಬೇಕು..! ಮಂಗಳೂರು ರಣಾಂಗಣದಲ್ಲಿ ‘ಕಮಲ’ಕ್ಕೆ ಸವಾಲಾದ ‘ಪದ್ಮ’ರಾಜ್

✍️. ಶಿವಾನಿ ಮಂಗಳೂರು: ರಾಜ್ಯದಲ್ಲಿ ಕೇಸರಿ ಭದ್ರಕೋಟೆ ಎಂದೇ ಗುರುತಾಗಿರುವ ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿಗೆ ಹಿಂದೂ ಕಾರ್ಯಕರ್ತರೇ ಸವಾಲು. ‘ಹಿಂದೂತ್ವ ಉಳಿದರೆ ದೇಶ ಉಳಿದೀತು’ ಎಂಬ ಘೋಷಣೆ ಒಂದೆಡೆಯಾದರೆ, ‘ಬಿಲ್ಲವರು ಉಳಿದರೆ ಮಾತ್ರ ಹಿಂದೂತ್ವ ಉಳಿದೀತು’ ಎಂಬ ಘೋಷಣೆ ಇನ್ನೊಂದೆಡೆ ಮಾರ್ಧನಿಸಿದೆ. ಹಾಗಾಗಿ ಅತೀ ಹೆಚ್ಚು ಮತದಾರರನ್ನು ಹೊಂದಿರುವ ಬಿಲ್ಲವರ ಮತಗಳೇ ದಕ್ಷಿಣಕನ್ನಡದಲ್ಲಿ ನಿರ್ಣಾಯಕ. ಪ್ರಸಕ್ತ ಲೋಕಸಭಾ ಕ್ಷೇತ್ರದ ಚುನಾವಣೆ ಹಿಂದಿನ ಚುನಾವಣೆಗಳಿಗಿಂತ ಭಿನ್ನ ಎಂಬುದು ರಾಜಕೀಯ ವಿಶ್ಲೇಷಕರ ಅಭಿಮತ. ಬಿಜೆಪಿಯಿಂದ ಮಾಜಿ […]

Continue Reading

ಕಮೀಷನರ್ ವ್ಯಾಪ್ತಿಯ ರೌಡಿಶೀಟರ್ ಗಳ ಗಡಿಪಾರು

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ 19 ಮಂದಿ ರೌಡಿ ಶೀಟರ್ ಗಳನ್ನು ಗಡಿಪಾರುಗೊಳಿಸಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಆದೇಶಿಸಿದ್ದಾರೆ. ಮೂಡುಬಿದಿರೆಯ ಅತ್ತೂರು ನಸೀಬ್, ಕಾಟಿಪಳ್ಳದ ಶ್ರೀನಿವಾಸ್ ಎಚ್, ಬಜಪೆ ಶಾಂತಿಗುಡ್ಡದ ಮುಹಮ್ಮದ್ ಸಫ್ವಾನ್, ಬೋಂದೆಲ್ ನ ಜಯೇಶ್ ಯಾನೆ ಸಾಚು, ನೀರುಮಾರ್ಗ ಭಟ್ರಕೋಡಿಯ ವರುಣ್ ಪೂಜಾರಿ, ಅಶೋಕನಗರದ ಮುಹಮ್ಮದ್ ಅಝೀಝ್, ಸುರತ್ಕಲ್ ಇಡ್ಯಾದ ಕಾರ್ತಿಕ್ ಶೆಟ್ಟಿ, ಕೈಕಂಬ ಗಣೇಶಪುರದ ದೀಕ್ಷಿತ್ ಪೂಜಾರಿ, ಕೃಷ್ಣಾಪುರದ ಲಕ್ಷ್ಮೀಶ ಉಳ್ಳಾಲ, ಬೊಂಡಂತಿಲದ ಕಿಶೋರ್ ಸನಿಲ್, ಉಳ್ಳಾಲ ಕೋಡಿಯ […]

Continue Reading

ದೇಶದ ಉಳಿವು ಬಿಜೆಪಿಯ ಸೋಲಿನಲ್ಲಿದೆ. ಬಿಜೆಪಿ ಸೋಲಿಸಲು ಸಿಪಿಐಎಂ ಕಾರ್ಯಕರ್ತರು ಶಕ್ತಿ ಮೀರಿ ಶ್ರಮಿಸಬೇಕು : ಕೆ. ಯಾದವ ಶೆಟ್ಟಿ

ಹತ್ತು ವರ್ಷಗಳ ಕಾಲ ದೇಶವನ್ನು ಆಳಿದ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಧ್ವಂಸಗೊಳಿಸಿದೆ. ಸಂವಿಧಾನವನ್ನು ಅಪ್ರಸ್ತುತಗೊಳಿಸಲು ಯತ್ನಿಸುತ್ತಿದೆ.ಕಾರ್ಮಿಕರ ಹಕ್ಕುಗಳನ್ನು ಪೂರ್ತಿಯಾಗಿ ನಾಶಗೊಳಿಸಿ ದುಡಿಯುವ ಜನತೆಯನ್ನು ಜೀತದಾಳುಗಳ ಮಟ್ಟಕ್ಕೆ ತಳ್ಳಲಾಗಿದೆ. ಇಲೊಕ್ಟ್ರೋಬಾಂಡ್ ಹಗರಣ ಮೋದಿ ಸರಕಾರದ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅನಾವರಣಗೊಳಿಸಿದೆ. ಈ ಭಾರಿಯ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸದಿದ್ದಲ್ಲಿ ಭಾರತದ ಪ್ರಜಾಪ್ರಭುತ್ವ ಅವಸಾನಗೊಳ್ಳುವ ಭೀತಿ ಎದುರಾಗಿದೆ. ಇಂತಹ ಗಂಭೀರ ಅಪಾಯದಿಂದ ದೇಶವನ್ನು ಪಾರುಮಾಡುವುದು ಪ್ರತಿಯೊಬ್ಬ ದೇಶಪ್ರೇಮಿಯ ಕರ್ತವ್ಯ.CPIMನ ಪ್ರತಿಯೊಬ್ಬ ಕಾರ್ಯಕರ್ತರು ಆ ನಿಟ್ಟಿನಲ್ಲಿ ಶಕ್ತಿ […]

Continue Reading

ಮುನ್ನೂರು, ಬೆಳ್ಮ, ಅಂಬ್ಲಮೊಗರು ಗ್ರಾಮಗಳಲ್ಲಿ ಬಲಾಢ್ಯ ವ್ಯಕ್ತಿಗಳಿಂದ ಭೂ ಕಬಳಿಕೆ; ಭೂ ಮಾಫಿಯಾದ ಹಿಂದೆ ಕಾಣದ ಕೈಗಳು: ಜಿಲ್ಲಾಧಿಕಾರಿಗಳಿಗೆ ದೂರು

ಮುನ್ನೂರು, ಬೆಳ್ಮ, ಅಂಬ್ಲಮೊಗರು ಗ್ರಾಮಗಳಲ್ಲಿ ಖಾಸಗಿ ವ್ಯಕ್ತಿಗಳಿಂದ ಕಳೆದ ಹಲವು ಸಮಯಗಳಿಂದ ವ್ಯಾಪಕ ಭೂಸ್ವಾಧೀನ ನಡೆಯುತ್ತಿದ್ದು, ಆ ಪ್ರದೇಶಗಳಲ್ಲಿ ಉಂಟಾಗಿರುವ ತೊಂದರೆ, ಆತಂಕಗಳ ಕುರಿತು ಕೃಷಿ ಭೂಮಿ ಸಂರಕ್ಷಣಾ ಹೋರಾಟ ಸಮಿತಿಯ ನೇತ್ರತ್ವದಲ್ಲಿ 18-04-2024 ರಂದು ದ.ಕ. ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಉಳ್ಳಾಲ ತಾಲೂಕಿನ ಮುನ್ನೂರು, ಬೆಳ್ಮ, ಅಂಬ್ಲಮೊಗರು ಗ್ರಾಮಗಳು ಕೃಷಿ ಪ್ರಧಾನ ಗ್ರಾಮಗಳಾಗಿರುವುದು ಮಾತ್ರವಲ್ಲ, ಕೃಷಿ ಬಿಕ್ಕಟ್ಟಿನ ಈ ಸಂದರ್ಭದಲ್ಲಿಯೂ ವ್ಯಾಪಕ ಕೃಷಿ ಚಟುವಟಿಕೆಗಳು ಇಂದಿಗೂ ನಡೆಯುತ್ತಿದೆ. ಕಳೆದ ಕೆಲವು ವರ್ಷಗಳಲ್ಲಿ ಈ ಗ್ರಾಮದ […]

Continue Reading

ಕೋಮು ಸಾಮರಸ್ಯಕ್ಕೆ ಸಾಕ್ಷಿಯಾದ ಎಡಪದವು-ಕೋರ್ಡೇಲು ವ್ಯಾಘ್ರ ಚಾಮುಂಡಿ ದೈವಸ್ಥಾನದ ಪದಾಧಿಕಾರಿಗಳು

ತುಳುನಾಡು ಪರಮಪಾವನವಾದ ಪುಣ್ಯಭೂಮಿ. ಅದೆಷ್ಟೋ ಜಾತಿ, ಧರ್ಮ, ಭಾಷೆಗಳ ನೆಲೆಬೀಡು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಸನಾತನ ಸಾಂಸ್ಕೃತಿಕ ಪರಂಪರೆಯ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ತೆಂಕ ಎಡಪದವು ಗ್ರಾಮದ ಕೊಂದೋಡಿ ಗಡುಸ್ಥಳ ವ್ಯಾಘ್ರ ಚಾಮಂಡಿ ಮೈಸಂದಾಯ ಹಾಗೂ ಮಹಮ್ಮಾಯಿ ಅಮ್ಮನವರ ಪುಣ್ಯ ಕ್ಷೇತ್ರ. ಕೋರ್ಡೆಲ್ ಬಲ್ಲಾಳ್ ಮನೆತನದಿಂದ ಭಂಡಾರ ಬಂದು, ವರ್ಷಂಪ್ರತಿ ಗಡು ಸ್ಥಳದಲ್ಲಿ ಆರಾಧನೆ ನಡೆಯುತ್ತಿರುವ ಶಕ್ತಿಗಳ ಪ್ರಧಾನ ಗರ್ಭಗುಂಡವು ಸಂಪೂರ್ಣವಾಗಿ ಶಿಥಿಲಗೊಂಡಿದ್ದು ಕ್ಷೇತ್ರದ ದೈವ, ದೇವರುಗಳ ಅಪ್ಪಣೆಯಂತೆ ಕ್ಷೇತ್ರವನ್ನು ಊರ ಹಾಗೂ ಪರವೂರ […]

Continue Reading