ಮಂಗಳೂರಿನ ಹೃದಯಬಾಗದಲ್ಲಿ ದಿನದ ಅತ್ಯಮೂಲ್ಯ (ಪ್ರೈಮ್ ಟೈಮ್) ವೇಳೆಯಲ್ಲಿ “ತಲಾ 15 ನಿಮಿಷದಂತೆ ಒಟ್ಟು 11 ಬಾರಿ ಸಂಚಾರ ದಿಗ್ಬಂಧನ! ” ರೈಲ್ವೆ ಕಾರ್ಯಾಚರಣೆಯ ಹೆಸರಿನಲ್ಲಿ ನಗರಕ್ಕೆ ದಿಗ್ಬಂಧನ!

✍️. ಇಸ್ಮಾಯಿಲ್ ಸುನ್ನಾಲ್, ವಕೀಲರು ಮಂಗಳೂರು. ಮಂಗಳೂರು: ಒಂದು ಕಡೆ ‘ಸ್ಮಾರ್ಟ್ ಸಿಟಿ’ಯ ಕನಸು, ಇನ್ನೊಂದು ಕಡೆ ದಶಕಗಳಷ್ಟು ಹಳೆಯದಾದ ರೈಲ್ವೆ ಗೇಟ್ ಸಮಸ್ಯೆ. ಮಂಗಳೂರಿನ ಹೃದಯಭಾಗದಲ್ಲಿರುವ ರೈಲ್ವೆ ಲೆವೆಲ್ ಕ್ರಾಸಿಂಗ್ (LC Gate) ಈಗ ನಗರದ ಸಂಚಾರ ವ್ಯವಸ್ಥೆಯ ಪಾಲಿಗೆ ಕಂಠಕವಾಗಿ ಪರಿಣಮಿಸಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ನಾಗರಿಕರು ತಮ್ಮ ಅಮೂಲ್ಯ ಸಮಯವನ್ನು ರಸ್ತೆಯಲ್ಲೇ ಕಳೆಯುವಂತಾಗಿದೆ. ಅಂಕಿಅಂಶಗಳ ಆಘಾತಕಾರಿ ಸತ್ಯರೈಲ್ವೆ ಇಲಾಖೆ ಪ್ರಕಟಿಸಿದ ವೇಳಾ ಪಟ್ಟಿ ಪ್ರಕಾರವೇ, ಈ ರೈಲ್ವೆ ಗೇಟ್‌ ಕೇವಲ ಹನ್ನೆರಡು (12) […]

Continue Reading

ಬೆಳ್ತಂಗಡಿ: ಯಾವುದೆ ಪರವಾನಿಗೆ ಪಡೆಯದೆ ಅಕ್ರಮ ಕಟ್ಟಡ ನಿರ್ಮಾಣ; ದ. ಕ ಜಿಲ್ಲಾ ಉಸ್ಸುವಾರಿ ಸಚಿವರಿಗೆ ದೂರು

ಬೆಳ್ತಂಗಡಿ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸರ್ಕಾರಕ್ಕೆ ವಂಚಿಸಿ, ಸಂಬಂಧ ಪಟ್ಟ ಇಲಾಖೆಯಿಂದ ಯಾವುದೇ ಪರವಾನಿಗೆ ಪಡೆಯದೆ ಅನಧಿಕೃತವಾಗಿ ಬಹು ಮಹಡಿ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿದ್ದು, ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಾಮಾಜಿಕ ಕಾರ್ಯಕರ್ತ ಶೇಖರ್. ಲಾಯಿಲ ಮನವಿ ಸಲ್ಲಿಸಿದ್ದಾರೆ. ಇಂದು ಕುಕ್ಕೇಡಿ ಡಾ.ಬಿ.ಆರ್ ಅಂಬೇಡ್ಕರ್ ಭವನದ ನವೀಕೃತ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಸಲ್ಲಿಸಿದರು. ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಭ್ಯಾಸ್ ಕಾಲೇಜ್, […]

Continue Reading

ಉಡುಪಿ: ಶಾಲಾ ಆವರಣದಲ್ಲಿ ಅನೈತಿಕ ಚಟುವಟಿಕೆ; ಸೂಕ್ತ ಕ್ರಮಕ್ಕೆ ಕರವೇ ಪ್ರವೀಣ್ ಶೆಟ್ಟಿ ಬಣದ ಮನವಿ, ಸ್ಪಂದಿಸಿದ ಉಡುಪಿ ಜಿಲ್ಲಾ ಪೊಲೀಸ್

ಉಡುಪಿ : ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣ ಅನೈತಿಕ ಚಟುವಟಿಕೆಯ ತಾಣವಾಗಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರಿಗೆ ಮನವಿಯನ್ನು ನೀಡಲಾಗಿತ್ತು. ಉಡುಪಿ ನಗರದ ಹೃದಯ ಭಾಗದಲ್ಲಿರುವ ಸರಸ್ವತಿ ಕನ್ನಡ ಮಾಧ್ಯಮ ಶಾಲೆಯ ಆವರಣದಲ್ಲಿ ರಾತ್ರಿಯ ಹೊತ್ತು ಕುಡುಕರು ಹಾಗೂ ತೃತೀಯ ಲಿಂಗಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಶಾಲೆಯ […]

Continue Reading

ಡಾ. ತಲ್ಲೂರು ಅವರಿಗೆ ಸ್ವಾಮಿ ವಿವೇಕಾನಂದ ಸದ್ಭಾವನ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಉಡುಪಿ : ಯಕ್ಷಗಾನ, ಜಾನಪದ, ರಂಗಭೂಮಿ ಸೇರಿದಂತೆ ಸಾಂಸ್ಕೃತಿಕ ರಂಗ ಹಾಗೂ ಸಮಾಜ ಸೇವೆಯಲ್ಲಿ ತಮ್ಮದೇ ಛಾಪನ್ನು ಮೂಡಿಸಿರುವ ಉಡುಪಿಯ ಉದ್ಯಮ ರತ್ನ, ಪ್ರಸ್ತುತ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷರೂ ಆಗಿರುವ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ನಾಟ್ಯಮಯೂರಿ ನೃತ್ಯ ಟ್ರಸ್ಟ್ ವಿರಾಜಪೇಟೆ, ಕೊಡಗು ಇವರ ಜಂಟಿ ಆಶ್ರಯದಲ್ಲಿ ಹಾಸನದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜ.18ರಂದು ನಡೆದ ಸ್ವಾಮಿ ವಿವೇಕಾನಂದ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ‘ಸ್ವಾಮಿ ವಿವೇಕಾನಂದ ಸದ್ಭಾವನಾ ರಾಷ್ಟ್ರೀಯ […]

Continue Reading

29 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ “ದಂಡುಪಾಳ್ಯ ಗ್ಯಾಂಗ್” ಸದಸ್ಯನನ್ನು ಅಂದ್ರಪ್ರದೇಶದಲ್ಲಿ ಬಂಧಿಸಿದ ಉರ್ವ ಪೊಲೀಸರು.

1997 ರ ಸಾಲಿನ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣದ ಆರೋಪಿ. ಉರ್ವಾ ಪೊಲೀಸ್ ಠಾಣಾ ಅ.ಕ್ರ ನಂಬ್ರ 113/1997, ಪ್ರಕರಣದಲ್ಲಿ 29 ವರ್ಷಗಳಿಂದ ತಲೆಮರೆಸಿಕೊಂಡಿದ್ದ, “ದಂಡುಪಾಳ್ಯ ಗ್ಯಾಂಗ್” ಎಂದೇ ಕುಖ್ಯಾತಿ ಪಡೆದಿರುವ ಗ್ಯಾಂಗ್ ನ ಸಹಚರ ಚಿಕ್ಕ ಹನುಮ @ ಚಿಕ್ಕ ಹನುಮಂತಪ್ಪ @ ಕೆ. ಕೃಷ್ಣಪ್ಪ @ ಕೃಷ್ಣ ಪ್ರಾಯ: 55 ವರ್ಷ, ತಂದೆ: ವೆಂಕಟಪ್ಪ ವಾಸ: ದಂಡುಪಾಳ್ಯ ಗ್ರಾಮ, ಹೊಸಕೋಟೆ ತಾಲೂಕು. ಬೆಂಗಳೂರು ಜಿಲ್ಲೆ. ಹಾಲಿ ವಾಸ: ವಿಜಯನಗರ […]

Continue Reading

ಕೋಮುಧ್ವೇಶ, ಹಿಂಸೆಗೆ ಪ್ರಚೋದಿಸುವಂತೆ ಭಾಷಣ; ಕಲ್ಲಡ್ಕ ಪ್ರಭಾಕರ್ ಭಟ್, ವಿಕಸನ ಟಿ. ವಿ, ಆಯೋಜಕರ ವಿರುದ್ದ ಪ್ರಕರಣ ದಾಖಲು

ಪುತ್ತೂರು ನಿವಾಸಿ ರಾಮಚಂದ್ರ ಕೆ ಎಂಬವರ ದೂರಿನಂತೆ, ದಿನಾಂಕ 12.01.2026ರಂದು ಪುತ್ತೂರಿನ ಖಾಸಗಿ ಕಾಲೇಜಿನ ಆವರಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ, ಆರೋಪಿತರಾದ ಡಾ.ಕಲ್ಲಡ ಪ್ರಭಾಕರ ಭಟ್ ರವರು, ಕಾರ್ಯಕ್ರಮದಲ್ಲಿ ನೆರೆದಿದ್ದ ಕಾಲೇಜಿನ ವಿದ್ಯಾರ್ಥಿಗಳು, ಪೋಷಕರನ್ನು ಉದ್ದೇಶಿಸಿ ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆಯಾಗುವಂತಹ, ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿರುತ್ತಾರೆ. ಸದ್ರಿ ಭಾಷಣವನ್ನು “VIKASANA TV” (ವಿಕಸನ ಟಿವಿ) ಎಂಬ ಹೆಸರಿನಲ್ಲಿ ಯೂಟ್ಯೂಬ್ ಚಾನಲ್ ನಲ್ಲಿ ಪ್ರಸಾರ ಮಾಡಿರುತ್ತಾರೆ. ಸದ್ರಿ ಕಾರ್ಯಕ್ರಮದಲ್ಲಿ ಕೋಮುಧ್ವೇಶದ ಹಾಗೂ ಹಿಂಸೆಗೆ ಪ್ರಚೋದಿಸುವಂತೆ ಭಾಷಣ ಮಾಡಿದ […]

Continue Reading

ನಕಲಿ ದಾಖಲೆ ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್‌ ಕೈವಶ; ಕೆನರಾ ಲೈಟಿಂಗ್ ವಿರುದ್ದ ಕ್ರಿಮಿನಲ್ ಪ್ರಕರಣ

ಮಂಗಳೂರು: ನಕಲಿ ಸರ್ಕಾರಿ ದಾಖಲೆಗಳನ್ನು ಸೃಷ್ಟಿಸಿ, ಕೋಟಿ ಕೋಟಿ ರೂಪಾಯಿ ಮೌಲ್ಯದ ಸಾರ್ವಜನಿಕ ಟೆಂಡರ್‌ಗಳನ್ನು ವಂಚನೆಯ ಮೂಲಕ ಕೈವಶ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಮೂಡಬಿದ್ರಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜೆಎಂಎಫ್‌ಸಿ ನ್ಯಾಯಾಲಯವು ಕೆನರಾ ಲೈಟಿಂಗ್ ಇಂಡಸ್ಟ್ರಿಯಲ್ ಖಾಸಾಗಿ ಲಿಮಿಟೆಡ್ ಕಂಪೆನಿಯ ಹಾಗೂ ಅದರ ನಿರ್ದೇಶಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಸಮ್ಮತಿ ನೀಡಿದೆ. RTI Activists for Justice ಸಂಸ್ಥೆ ಸಲ್ಲಿಸಿದ ಖಾಸಗಿ ದೂರನ್ನು ಪರಿಶೀಲಿಸಿದ ನ್ಯಾಯಾಲಯ, ಸಾರ್ವಜನಿಕ ಟೆಂಡರ್ ಪ್ರಕ್ರಿಯೆಯಲ್ಲಿ ನಕಲಿ ದಾಖಲೆಗಳನ್ನು […]

Continue Reading

ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಹತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಚನ್ನರಾಯಪಟ್ಟಣದ ಬೆಳಗಿಹಳ್ಳಿಯ ಚಂದ್ರೆಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 60/2009, ರಂತೆ ದಾಖಲಾದ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿ ವಂಚಿಸಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ಮೂಲದ ನಿವಾಸಿ S. N ಚಂದ್ರೆಗೌಡ ಎಂಬಾತನನ್ನು, ಹಾಸನ ಚನ್ನರಾಯಪಟ್ಟಣದ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿ ದಿನಾಂಕ 20/01/2026 ರಂದು […]

Continue Reading

ಪುತ್ತೂರು ಗ್ರಾಮಾಂತರ ಪೊಲೀಸರ ಬೃಹತ್ ಕಾರ್ಯಾಚರಣೆ; 106 ಕೆ.ಜಿ ಗಾಂಜಾ ವಶ, ಆರೋಪಿಗಳ ಬಂಧನ

ಒಂದು ಕಾರು ಮತ್ತು ಒಂದು ಅಶೋಕ್‌ ಲೈಲ್ಯಾಂಡ್‌ ವಾಹನದಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರು ಸಿಬ್ಬಂದಿಗಳೊಂದಿಗೆ ದಿನಾಂಕ: 19-01-2026 ರಂದು ಸಂಜೆ, ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಎಂಬಲ್ಲಿ, ಕಾರು ಹಾಗೂ ಗೂಡ್ಸ್ ವಾಹವನ್ನು ತಪಾಸಣೆಗಾಗಿ ತಡೆದು ನಿಲ್ಲಿಸಿ, ಕಾರಿನ ಚಾಲಕನನ್ನು ವಿಚಾರಣೆಗೆ ಒಳಪಡಿಸಿದಾಗ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್‌ ಎಂಬುದಾಗಿ ತಿಳಿದು ಬಂದಿದ್ದು, ಸಂಶಯಗೊಂಡು ಕಾರನ್ನು ತಪಾಸಣೆ ನಡೆಸಿದಾಗ […]

Continue Reading

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) – ಒಂದು ಸಮಗ್ರ ಪ್ರಾಯೋಗಿಕ ಮಾರ್ಗದರ್ಶಿ

ಪಟ್ಟಿಯಲ್ಲಿ ಹೆಸರಿಲ್ಲದಿದ್ದರೆ ಏನು ಮಾಡಬೇಕು.? ದಾಖಲೆಗಳ ಬಗ್ಗೆ ಮಾಹಿತಿ, ಯಾವಾಗ ದಾಖಲೆಗಳು ಬೇಕು? ✍️. ಇಸ್ಮಾಯಿಲ್ ಸುನ್ನಾಲ್. ವಕೀಲರು, ಮಂಗಳೂರು

Continue Reading