ರಾಷ್ಟ್ರೀಯ ಹೆದ್ದಾರಿ 169 ಅಗಲೀಕರಣ ಕಾಮಗಾರಿ; ಚರಂಡಿ, ಸರ್ವಿಸ್ ರಸ್ತೆ, ಮೂಲಭೂತ ಸೌಕರ್ಯಕ್ಕೆ ಕಂಟಕ.!

ಸೂಚನಾ ಪಲಕವಿಲ್ಲ. ಮುಂಜಾಗ್ರತಾ ಕ್ರಮ ವಹಿಸಿಲ್ಲ. ಎಲ್ಲಿ ನೋಡಿದರೂ ಮರಣ ಗುಂಡಿ.! ಕೈಕಂಬ: ರಾಷ್ಟ್ರೀಯ ಹೆದ್ದಾರಿ ಬಿಕರ್ನಕಟ್ಟೆ- ಸಾಣೂರು 169 ರ ರಸ್ತೆ ಅಗಲೀಕರಣ ಕಾಮಗಾರಿ ಕಳೆದ ಕೆಲವು ತಿಂಗಳಿನಿಂದ ನಡೆಯುತ್ತಿದ್ದು, ಕಾಮಗಾರಿಯೂ ಆಮೆಗತಿಯಲ್ಲಿ ಸಾಗುತ್ತಿದೆ. ಈ ನಡುವೆ ಗಂಜಿಮಠ, ಸೂರಲ್ಪಾಡಿ, ಕೈಕಂಬ ಸಮೀಪದಿಂದ ಹಾದು ಹೋಗುವ ರಸ್ತೆಗೆ ಮಣ್ಣು ಹಾಕಲಾಗಿದ್ದು ಪರಿಸರ ಕೆಸರುಮಯವಾಗುತ್ತಿದೆ. ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುವ ವೇಳೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ವ್ಯವಸ್ಥಿತವಾಗಿ ಮಾಡಬೇಕಾಗಿರುವುದು ಸಂಬಂಧಿಸಿದವರ ಜವಾಬ್ದಾರಿಯಾಗಿರುತ್ತದೆ. ಆದರೆ ಈ ಪರಿಸರದಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ […]

Continue Reading

ಗುರುಪುರ-ಕೈಕಂಬದ ಅಣೆ ಬರಿ ಎಂಬಲ್ಲಿ ಹೊರ ರಾಜ್ಯಕ್ಕೆ ಕೆಂಪು ಕಲ್ಲಿನ ಮಣ್ಣು ಸಾಗಿಸುತ್ತಿದ್ದ ಬೃಹತ್ ಗಾತ್ರದ ಲಾರಿ ಪಲ್ಟಿ, ಸಂಚಾರ ಅಸ್ತವ್ಯಸ್ತ

ರಾಷ್ಟ್ರೀಯ ಹೆದ್ದಾರಿ 169 ಗುರುಪುರ ಕೈಕಂಬದ ಅಣೆ ಬರಿ ಎಂಬಲ್ಲಿ ಹೊರ ರಾಜ್ಯಕ್ಕೆ ಕೆಂಪು ಕಲ್ಲಿನ ಮಣ್ಣು ಸಾಗಿಸುತ್ತಿದ್ದ ಬೃಹತ್ ಗಾತ್ರದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಗುರುವಾರ ಸಂಜೆ ನಡೆದಿರುತ್ತದೆ. ಓವರ್ ಲೋಡ್ ಕಾರಣ ಗುರುಪುರ ಅಣೆ ಬಳಿಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿರುತ್ತದೆ. ಕೆಲವು ತಿಂಗಳ ಹಿಂದೆ ಇದೇ ತಿರುವಿನಲ್ಲಿ ಎರಡು ಮಣ್ಣು ಸಾಗಾಟದ ಲಾರಿಗಳು ಮಗುಚಿ ಬಿದ್ದು ಪ್ರಾಣಹಾನಿಯೂ ಸಂಭವಿಸಿರುತ್ತದೆ. ಕೆಂಪುಕಲ್ಲಿನ ಮಣ್ಣಿನ ದಂಧೆ […]

Continue Reading

ಮಂಗಳೂರು-ಮೂಡಬಿದ್ರೆ ರೂಟಿನಲ್ಲಿ ಖಾಸಗಿ ಬಸ್ ಗಳದ್ದೇ ದರ್ಬಾರ್.! ಸರ್ಕಾರಿ ಬಸ್ ಓಡಾಟಕ್ಕೆ ಕೂಡಿಬಂದಿದೆ ಕಾಲ

ರಾಜ್ಯಾದ್ಯಂತ ಕಾಂಗ್ರೆಸ್ ಗ್ಯಾರಂಟಿ ಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಜೂ.11 ರಿಂದ ಕೆಎಸ್ಆರ್ ಟಿಸಿ ಬಸ್ಸ್ ಗಳಲ್ಲಿ ಜಾರಿಗೆ ಬಂದಿದ್ದು, ರಾಜ್ಯದ ಬಹುತೇಕ ಮಹಿಳೆಯರು, ವಿದ್ಯಾರ್ಥಿನಿಗಳು ಇದರ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ. ಆದರೆ ದಕ್ಷಿಣ ಕನ್ನಡ, ಉಡುಪಿಗಳಲ್ಲಿ ಬೆರೆಳೆಣಿಕೆಯ ಮಂದಿಗೆ ಮಾತ್ರ ಇದರ ಪ್ರಯೋಜನ ಸಿಗುವಂತಾಗಿದೆ. ಧರ್ಮಸ್ಥಳ, ಪುತ್ತೂರು, ಬೆಳ್ತಂಗಡಿ ಈ ಭಾಗದಲ್ಲಿ ಯಥೇಚ್ಛವಾಗಿ ಕೆಎಸ್ಸಾರ್ಟಿಸಿ ಬಸ್ ಓಡಾಡುದರಿಂದ ಈ ಉಚಿತ ಸೇವೆ ಮಹಿಳೆಯರಿಗೆ ದೊರಕುವಂತಾಗಿದೆ. ಆದರೆ ಇತರ ಕಡೆಗಳಲ್ಲಿ ಖಾಸಗಿ ಬಸ್ ದರ್ಬಾರಿನ ಮುಂದೆ ಕೆಎಸ್ಸಾರ್ಟಿಸಿ […]

Continue Reading

ಮಂಗಳೂರು: ಮಾಜಿ ಶಾಸಕರ ಒಡೆತನದ ಮಶ್ರೂಮ್ ಫ್ಯಾಕ್ಟರಿಗೆ ಬೀಗ: ಡಿ.ಸಿ ಎತ್ತಂಗಡಿಗೆ ಸಂಚು.?

ಮಂಗಳೂರು: ವಾಮಂಜೂರು ತಿರುವೈಲ್ ವಾರ್ಡ್ ನ ಓಂಕಾರ ನಗರದಲ್ಲಿ ಕಳೆದ ಎರಡು ವರ್ಷಗಳಿಂದ ಕಾರ್ಯಾಚರಿಸುತ್ತಿರುವ ‘ವೈಟ್ ಗ್ರೋ ಎಗ್ರಿ ಎಲ್ ಎಲ್ ಪಿ’ ಹೆಸರಿನ ಮಶ್ರೂಮ್ ಫ್ಯಾಕ್ಟರಿಯನ್ನು ಸ್ಥಳೀಯರ ವಿರೋಧಕ್ಕೆ ಮಣಿದ ಜಿಲ್ಲಾಧಿಕಾರಿ ಬಂದ್ ಮಾಡುವಂತೆ ಸೂಚಿಸಿದ್ದಾರೆ ಅನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ ಸ್ಥಳೀಯರು ಮಶ್ರೂಮ್ ಕಾರ್ಖಾನೆ ಸ್ಥಳಾಂತರಕ್ಕೆ ಬೀದಿಗಿಳಿದು ಹೋರಾಟ ನಡೆಸಿದರೂ, ದೂರು ನೀಡಿದ್ದರೂ ಯಾವುದೇ ರೀತಿಯ ಪ್ರಯೋಜನವಾಗಿಲ್ಲ. ಕಾರ್ಖಾನೆಯಿಂದ ಸಂಜೆ ಹೊತ್ತಿಗೆ ಸಹಿಸಲಸಾಧ್ಯವಾದ ಗಬ್ಬುನಾತ ಸ್ಥಳೀಯ ಬಾಣಂತಿಯರು, ಮಕ್ಕಳು, ವಯೋವೃದ್ಧರು ಸೇರಿದಂತೆ ಎಲ್ಲರ ಆರೋಗ್ಯದ […]

Continue Reading

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ರಂಜಿತ್ ಮದ್ದಡ್ಕ ಬಂಧನ.

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿಗಳಾದ ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಕುಲಾಲ್ ಎಂಬಿಬ್ಬರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕಾಗಿ ಪೋಲೀಸರಿಗೆ ಒಪ್ಪಿಸಿದ್ದಾರೆ. ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ ರವರು ನೀಡಿದ ದೂರಿನಂತೆ ಬೆಳ್ತಂಗಡಿ […]

Continue Reading

ವಾಮಂಜೂರು ಅಣಬೆ ಫ್ಯಾಕ್ಟರಿಯನ್ನು ತಕ್ಷಣ ಬಂದ್‌ ಮಾಡುವಂತೆ ಜಿಲ್ಲಾಧಿಕಾರಿ ಆದೇಶ

:ಮಂಗಳೂರು ನಗರದ ಹೊರವಲಯದ ಆಶ್ರಯ ನಗರದ ಬಳಿ ಕಾರ್ಯಾಚರಿಸುತ್ತಿರುವ ಅಣಬೆ ಫ್ಯಾಕ್ಟರಿಯನ್ನು ತಕ್ಷಣ ಬಂದ್‌ ಮಾಡುವಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ.  ಅಣಬೆ ಪ್ಯಾಕ್ಟರಿಯ ದುರ್ವಾಸನೆಯಿಂದ ಸ್ಥಳೀಯ ಜನರಿಗೆ ಬದುಕಲು ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶ್ವಾಸಕೋಶ ನೋವು, ತಲೆನೋವು, ವಾಂತಿ ಸೇರಿದಂತೆ ಹಲವು ಸಮಸ್ಯೆಗಳನ್ನು ಜನರು ಎದುರಿಸುವಂತಾಗಿದೆ. ಜಿಲ್ಲಾಧಿಕಾರಿಯವರು ಘಟಕ ಮುಚ್ಚುವ ಕುರಿತಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಭಾನುವಾರ ವಾಮಂಜೂರಿನ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿಗಳು ಧರಣಿ ನಿರತರನ್ನು ಕಂಡು ಮಾತನಾಡಿ, ಇಲ್ಲಿನ ಪರಿಸ್ಥಿತಿಯನ್ನು ಮನಗಂಡು ಸಾರ್ವಜನಿಕರಿಗೆ […]

Continue Reading

ಅನೈತಿಕ ಪೊಲೀಸ್ ಗಿರಿ ತಡೆಗೆ ಮಂಗಳೂರು ನಗರದಲ್ಲಿ ಆ್ಯಂಟಿ ಕಮ್ಯುನಲ್‌ ವಿಂಗ್: ಗೃಹ ಸಚಿವ ಡಾ.ಜಿ ಪರಮೇಶ್ವರ್

ಮಂಗಳೂರು ನಗರದಲ್ಲಿ ಇಂದು ದಕ್ಷಿಣ ಕನ್ನಡ,ಉತ್ತರ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಪೊಲೀಸ್ ಅಧಿಕಾರಿಗಳ ಸಭೆಯ ಬಳಿಕ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್,ಮಂಗಳೂರಿನಲ್ಲಿ ಶಾಂತಿ-ಸಾಮರಸ್ಯವನ್ನು ಸ್ಥಾಪಿಸಲು ವಿದ್ಯಾರ್ಥಿಗಳು ಯುವಕರು ನಮ್ಮ ಜೊತೆ ಕೈ ಜೋಡಿಸಿಬೇಕು. ಮಂಗಳೂರು ಕಮಿಷನರ್ ವ್ಯಾಪ್ತಿಯಲ್ಲಿ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ. ಕರಾವಳಿ ಮಾತ್ರವಲ್ಲ ಕೋಮು ವೈಷಮ್ಯ ಇರುವ ಕಡೆ ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆ ಮಾಡುತ್ತೇವೆ ಎಂದು ಹೇಳಿದ್ದಾರೆ. ನೈತಿಕ ಪೊಲೀಸ್ ಗಿರಿ ಮಾಡುವವರ ವಿರುದ್ಧ ಕಠಿಣ ಕ್ರಮ […]

Continue Reading

ಗಂಜಿಮಠ: ರಸ್ತೆಯಲ್ಲೇ ಹರಿಯುತ್ತಿದೆ ಕೊಳಚೆ ನೀರು; ರೋಗದ ಭೀತಿಯಲ್ಲಿ ನಾಗರಿಕರು, ಗಂಜಿಮಠ ಪಿಡಿಓ ಮೌನ

ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಳಲಿ ಕ್ರಾಸ್ ಎದುರುಗಡೆ ಇರುವ ಝಾರಾ ಕಲ್ಯಾಣ ಮಂಟಪದ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನ ತೊಂದರೆ ಪಡುತ್ತಿದ್ದಾರೆ. ಮಾತ್ರವಲ್ಲದೆ ರೋಗ ಹರಡುವ ಸಾಧ್ಯತೆ ಇರುವ ಬಗ್ಗೆ ಜನ ಆತಂಕ ವ್ಯಕ್ತಪಡಿಸಿದ್ದಾರೆ.ಝಾರಾ ಕನ್ವೆನ್ಷನ್ ಹಾಲ್ ಇದರ ಮುಂಭಾಗದ ರಸ್ತೆಯಲ್ಲಿ ತ್ಯಾಜ್ಯದಿಂದ ತುಂಬಿದ ಕೊಳಚೆ ನೀರು ಸರಾಗವಾಗಿ ರಸ್ತೆಯ ಮೇಲೆ ಹರಿಯುತ್ತಿದೆ. ಕೊಳಚೆ ನೀರು ದುರ್ವಾಸನೆ ಬೀರುತ್ತಿದ್ದು, ಸಾರ್ವಜನಿಕರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಆದರೆ ಗಂಜಿಮಠ ಗ್ರಾಮ ಪಂಚಾಯತ್ ಅಧಿಕಾರಿಗಳು ಇತ್ತ […]

Continue Reading

ಸೋತಿನಾಯೆ ನಿಕ್ಕ್ ದಾಯೆಗ್. ಪಂಚಾಯತ್ ಸದಸ್ಯನ ಮೇಲಿನ ಹಲ್ಲೆಗೆ ತಿರುವು. ಏನಿದು ಹಕೀಕತ್ತು..!

ನೂರ್ ಸಾಬ್ರ ನೂರೊಂದು ಕತೆ.!! ಪಡುಪೆರಾರ ಗ್ರಾಮ ಪಂಚಾಯತ್ ಸದಸ್ಯ ನೂರ್ ಅಹಮದ್ ಎಂಬವರ ಮೇಲೆ ಗುತ್ತಿಗೆದಾರ ಮತ್ತು ಸ್ಥಳೀಯ ಬಿಜೆಪಿ ಮುಖಂಡನೊಬ್ಬ ಕಬ್ಬಿಣದ ರಾಡ್ ನಿಂದ ಗಂಭೀರ ಹಲ್ಲೆ ನಡೆಸಿದ್ದಾರೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯವಾಗಿ ವ್ಯಾಪಕ ತಿರುವು ದೊರೆಯುತ್ತಿದ್ದು, ವೈಯಕ್ತಿಕ ಕಾರಣಕ್ಕಾಗಿ ನಡೆದ ಗಲಾಟೆಯನ್ನು ಕಾಂಗ್ರೆಸ್-ಬಿಜೆಪಿ, ಭಜರಂಗದಳ ಎಂಬ ರೀತಿಯಲ್ಲಿ ತಿರುಚಲು ಹುನ್ನಾರ ನಡೆದಿದೆ ಅನ್ನುವ ಅಭಿಪ್ರಾಯ ಇದೀಗ ಸ್ಥಳೀಯರಿಂದ ಪ್ರಬಲವಾಗಿ ಕೇಳಿ ಬರುತ್ತಿದೆ.ಒಟ್ಟಾರೆ ಪಡುಪೆರಾರ ಗ್ರಾಮ ಪಂಚಾಯತ್ ಸದಸ್ಯರ ಮೇಲೆ ನಡೆದ ಹಲ್ಲೆಯ […]

Continue Reading

ರುಚಿ ಗೋಲ್ಡ್ ಗೆ ಬೀಗ ಜಡಿಯಿರಿ, ಭ್ರಷ್ಟ ಪರಿಸರ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಿ, ಜೀವ ನದಿ ಪಲ್ಗುಣಿ, ತುಳುನಾಡ ಪರಿಸರ ಉಳಿಸಿ

ಇದು ಜೋಕಟ್ಟೆ ಸಮೀಪ ಇರುವ ರುಚಿ ಗೋಲ್ಡ್ (ಬಾಬಾ ರಾಮ್ ದೇವ್ ಮಾಲಕತ್ವದ) ಕಂಪೆನಿ ಪಲ್ಗುಣಿ ನದಿಗೆ ಕೈಗಾರಿಕಾ ತ್ಯಾಜ್ಯದ ವಿಷ ಹರಿಸುತ್ತಿರುವುದಕ್ಕೆ ಸಾಕ್ಷ್ಯ ಒದಗಿಸುವ ಚಿತ್ರ. ನಾಗರಿಕ ಹೋರಾಟ ಸಮಿತಿಯ ಸತತ ದೂರು, ಪ್ರತಿಭಟನೆಗಳು, ಕೆಲವು ಮಾಧ್ಯಮಗಳ ಜವಾಬ್ದಾರಿಯುತ ವರದಿ ಕಾರಣಕ್ಕೆ ಪಲ್ಗುಣಿ ನದಿ ಹಾಗೂ ತೋಕೂರು ಹಳ್ಳಕ್ಕೆ MRPL, Sez, ಅದಾನಿ ವಿಲ್ಮರ್, ರುಚಿಗೋಲ್ಡ್ ಸೇರಿದಂತೆ ಹಲವು ಉದ್ಯಮಗಳು ಕೈಗಾರಿಕಾ ತ್ಯಾಜ್ಯ ಹರಿಸಿ ನದಿ ಹಾಗೂ ಪರಿಸರವನ್ನು ವಿಷಮಯಗೊಳಿಸುವ ವಿಷಯ ಹಸಿರು ಪೀಠದ ಗಮನಕ್ಕೆ […]

Continue Reading