ಮಂಗಳೂರು ಉತ್ತರದತ್ತ ಬಂಟರ ಚಿತ್ತ. ಮುಸ್ಲಿಮರಿಗೆ ಗೂಟ.! ರಾಜಕೀಯದಾಟ ಬಲ್ಲವರಾರು.?

ಕೆಟ್ಟ ಮೇಲೆ ಬುದ್ಧಿ ಬರುವ ಕಾಂಗ್ರೆಸ್ಸಿನ ನಾಯಕರು ಅರ್ಥ ಮಾಡಿಕೊಳ್ಳಬೇಕಿದೆ. ದಕ್ಷಿಣ ಕನ್ನಡ ಜಿಲ್ಲಾ ರಾಜಕಾರಣದಲ್ಲಿ ಬಿರುಸಿನ ರಾಜಕಾರಣ ತೆರೆಮರೆಯಲ್ಲಿ ನಡೆಯುತ್ತಿರುವುದಂತೂ ಸುಳ್ಳಲ್ಲ. ಅದರಲ್ಲೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಲೆಕ್ಕಾಚಾರಗಳು ಭರ್ಜರಿಯಾಗಿ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ದಕ್ಷಿಣ ಕನ್ನಡ, ಉಡುಪಿ ರಾಜಕಾರಣದ ಬಗ್ಗೆ ಅಷ್ಟೊಂದು ತಲೆಕೆಡಿಸಿಕೊಂಡಂತೆ ಕಾಣುತ್ತಿಲ್ಲ. ಆದರೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರಾವಳಿ ರಾಜಕಾರಣದ ಬಗ್ಗೆ ಹೆಚ್ಚು ಗಂಭೀರ ಚಿಂತನೆಯಲ್ಲಿ ತೊಡಗಿಸಿಕೊಂಡಂತೆ ಕಾಣುತ್ತಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭ ಪುತ್ತೂರಿನಲ್ಲಿ ಬಿಜೆಪಿಯ ಅಶೋಕ್ […]

Continue Reading

ಬೆಳ್ತಂಗಡಿ: ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕುಖ್ಯಾತ ಆರೋಪಿಯ ಸೆರೆ.

ಬೆಳ್ತಂಗಡಿ ಮಾಲಾಡಿಯಲ್ಲಿ ಮನೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ಕುಖ್ಯಾತ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.ಮಾಲಾಡಿ ಗ್ರಾಮದ ನಿವಾಸಿ ಪ್ರಕಾಶ್‌ ಶೆಟ್ಟಿ (53) ಎಂಬವರ ದೂರಿನಂತೆ, ಸದ್ರಿಯವರ ಮನೆಯ ಸಮೀಪ ಶ್ರೀಮತಿ ಪ್ರೇಮಾ ಶೆಟ್ಟಿ ಎಂಬವರ ಮನೆಯಿದ್ದು, ಸದ್ರಿ ಪ್ರೇಮಾ ಶೆಟ್ಟಿರವರು ಕೆಲ ಸಮಯದಿಂದ ವಿದೇಶದಲ್ಲಿದ್ದು, ಮನೆಯಲ್ಲಿ ಯಾರೂ ಇಲ್ಲದ ಕಾರಣ ಮನೆಗೆ ಸಿ.ಸಿ ಟಿ.ವಿ ಅಳವಡಿಸಿರುತ್ತಾರೆ. ನವೆಂಬರ್ 9 ರಂದು ಬೆಳಿಗ್ಗೆ ಪ್ರೇಮಾರವರ ಮಗಳು ಪ್ರಕಾಶ್ ಶೆಟ್ಟಿ ಅವರಿಗೆ ಕರೆ ಮಾಡಿ ಅವರ ತಾಯಿಯ ಮನೆಯಲ್ಲಿ ಯಾರೋ […]

Continue Reading

BIG iMPACT ಮಳಲಿ ಅಣೆಕಟ್ಟಿನ ಬಳಿ ರೂಲ್ಸ್ ಬ್ರೇಕ್ ಮಾಡಿ ಅಕ್ರಮ ಮರಳುಗಾರಿಕೆ; ಸ್ಥಳಕ್ಕೆ ತಹಶೀಲ್ದಾರ್ ಭೇಟಿ, ಪರಿಶೀಲನೆ

ನಿನ್ನೆಯಷ್ಟೇ ಸ್ಪೆಷಲ್ ನ್ಯೂಸ್ ಮೀಡಿಯಾ ಸಮಗ್ರ ವರದಿ ಪ್ರಕಟಿಸಿತ್ತು ಗಂಜಿಮಠ ಪಂಚಾಯಿತಿ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿಯಲ್ಲಿ ಅಣೆಕಟ್ಟಿನ ಬುಡದಲ್ಲೇ ಅಕ್ರಮ ಮರಳುಗಾರಿಕೆ ನಡೆಸಿ , ಅಣೆಕಟ್ಟು ಕುಸಿಯುವ ಭೀತಿ ಎದುರಾಗಿದ್ದು ಸ್ಥಳೀಯ ನಾಗರೀಕರು ಆತಂಕಕ್ಕೆ ಒಳಗಾಗಿದ್ದರು. ಯಾವುದೇ ಸೇತುವೆ ಅಥವಾ ಅಣೆಕಟ್ಟಿನಿಂದ 500 ಮೀಟರ್ ಅಂತರದಲ್ಲಿ ಮರಳುಗಾರಿಕೆ ಅಥವಾ ಇನ್ನಿತರ ನಿರ್ಮಾಣ ಚಟುವಟಿಕೆ ನಡೆಸಬಾರದು ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮವಿದೆ. ಇಲಾಖೆಯು ಈಗಾಗಲೇ ಗುರುತಿಸಿರುವ ಗಡಿ ಗುರುತು ಉಲ್ಲಂಘಿಸಿ ಅಣೆಕಟ್ಟಿನ ಎರಡೂ […]

Continue Reading

ಮಳಲಿ: ಅಣೆಕಟ್ಟಿನ ಬಳಿ ರೂಲ್ಸ್ ಬ್ರೇಕ್; ಅಕ್ರಮ ಮರಳುಗಾರಿಕೆ ಅಣೆಕಟ್ಟು ಕುಸಿಯುವ ಆತಂಕ.!

ಗಂಜಿಮಠ ಗ್ರಾಮ ಸಭೆ ನಿರ್ಣಯಕ್ಕೆ ಇಲ್ಲ ಬೆಲೆ; ಗ್ರಾಮಸ್ಥರಿಂದ ಜಿಲ್ಲಾಡಳಿತಕ್ಕೆ ದೂರು ಗಂಜಿಮಠ ಪಂಚಾಯಿತಿ ವ್ಯಾಪ್ತಿಯ ತೆಂಕುಳಿಪಾಡಿ ಗ್ರಾಮದ ಮಳಲಿಯಲ್ಲಿ ಆಣೆಕಟ್ಟಿನ ಬುಡದಲ್ಲೇ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ಅಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ತಕ್ಷಣ ಮರಳುಗಾರಿಕೆ ನಿಷೇಧಿಸುವಂತೆ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ನೀಡಿದ್ದಾರೆ. ಗಂಜಿಮಠ ಪಂಚಾಯಿತಿ ಗ್ರಾಮ ಸಭೆಯಲ್ಲಿ ಈ ಬಗ್ಗೆ ಹಲವು ಬಾರಿ ವಿಷಯ ಪ್ರಸ್ತಾಪಗೊಂಡಿದ್ದವು. ಜನವರಿ 8 ರಂದು ಗ್ರಾಮ ಸಭೆಯಲ್ಲಿ ಮರಳುಗಾರಿಕೆ ನಿಷೇಧಿಸುವಂತೆ ನಿರ್ಣಯ ಕೂಡ ಮಾಡಲಾಗಿತ್ತು. ಆದರೆ ಅವೆಲ್ಲವೂ ಕಸದ ಬುಟ್ಟಿ ಸೇರಿದೆ. […]

Continue Reading

ಕರಾವಳಿಯ ಪಾತಕ ಜಗತ್ತಿನಲ್ಲಿ ನಡೆದಿದೆ ಸಾಲು ಸಾಲು ಮೋಸದ ಮರ್ಡರ್!

ವಾಮಂಜೂರು ರೋಹಿ ಯಿಂದ ಉಡುಪಿಯ ಸೈಪುದ್ದೀನ್ ವರೆಗಿನ ಹತ್ಯೆಯ ಕಹಾನಿ ಬಜಾಲ್ ನೌಫಲ್ ಚಾಪ್ಟರ್ ಕ್ಲೋಸ್ ಹಿಂದಿದೆ ಇಂತಹ ಅನುಮಾನ.! ಇವತ್ತಿನ ಹಾಗೆ ಚಿಲ್ಟು ಪಲ್ಟುಗಳಲ್ಲ. ಬಲಾಢ್ಯ ರೌಡಿಗಳು ಮಂಗಳೂರು ಭೂಗತ ಲೋಕವನ್ನು ಆಳುತ್ತಿದ್ದರು. ಒಬ್ಬೊಬ್ಬರ ಹೆಸರು ಕೇಳಿದಾಗಲೇ ಗಡಗಡ ನಡುಗುವಂತಹ ರೌಡಿಗಳು ಮಂಗಳೂರಿನಲ್ಲಿ ವಿಜೃಂಭಿಸುತ್ತಿದ್ದ ಕಾಲವೊಂದಿತ್ತು. ಆದರೆ ಅವರು ಕಟುಕರು, ರೌಡಿಗಳಾದರೂ ಸ್ವಲ್ಪ ಮಟ್ಟಿನ ಮಾನವೀಯತೆ, ಕರುಣೆ ಎಂಬುದು ಅವರಲ್ಲಿ ಇತ್ತು. ತಮ್ಮ ವಿರೋಧಿ ಗುಂಪಿನವನನ್ನು ಕೊಲ್ಲಲು ಬಂದಾಗ ಆತನ ಜೊತೆ ಹೆಂಡತಿ, ಮಕ್ಕಳು, ತಾಯಿ […]

Continue Reading

ಅಡ್ಡೂರು: ಗರೋಡಿ ಮನೆ ಅಂಗಳದಲ್ಲಿ ಯಶಸ್ವಿಯಾಗಿ ಜರುಗಿದ ‘ನಿಲಾವುರೋ ಬೆಳ್ಕ್ ರ್ಲ್ ಒರು ಕೂಟ ಚೋರು’ ಕಾರ್ಯಕ್ರಮ

ಬ್ಯಾರಿ ಕಲಾರಂಗ ಮೈಕಾಲ ಇದರ ವತಿಯಿಂದ ಬೆಳ್ಳಿಹಬ್ಬ ಆಚರಣೆಯ ಅಂಗವಾಗಿ ಅಡ್ಡೂರು ಗರೋಡಿ ಮನೆ ಅಂಗಳದಲ್ಲಿ ‘ನಿಲಾವುರೋ ಬೆಳ್ಕ್ ರ್ಲ್ ಒರು ಕೂಟ ಚೋರು’ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರುಗಿತು. ಈ ಕಾರ್ಯಕ್ರಮದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು. ಪೂರ್ವಜರ ಕಾಲದ ನೆನಪುಗಳನ್ನು ಇಂದಿನ ಯುವ ಪೀಳಿಗೆಗೆ ಪರಿಚಯಿಸುವ ಒಂದು ವಿಶಿಷ್ಟ ಕಾರ್ಯಕ್ರಮವಾಗಿ ‘ನಿಲಾವುರೋ ಬೆಳ್ಕ್ ರ್ಲ್ ಒರು ಕೂಟ ಚೋರು’ ಕಾರ್ಯಕ್ರಮ ಮೂಡಿಬಂತು. ಮದ್ರಸ ಮ್ಯಾನೇಜ್ ಮೆಂಟ್ ಕಮಿಟಿ ಅಧ್ಯಕ್ಷರಾದ […]

Continue Reading

ಶುಲ್ಕ ಪಾವತಿಗೆ ದಂಡ ವಸೂಲಿ ಶ್ರೀದೇವಿ ಕಾಲೇಜಿನ ವಿರುದ್ಧ ಕ್ರಮ ಕೈಗೊಳ್ಳಲು ಎಸ್ ಎಫ್ ಐ, ಆಗ್ರಹ

ಮಂಗಳೂರು: ನಗರದ ಶ್ರೀ ದೇವಿ ಕಾಲೇಜಿನ ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಪಾವತಿಗೆ ವರ್ಷಾಂತ್ಯಕ್ಕೂ ಮೊದಲೇ ವಿಳಂಬ ಪಾವತಿಯ ಹೆಸರಿನಲ್ಲಿ ದಿನಕ್ಕೆ 100 ರೂಪಾಯಿಯಂತೆ ದಂಡ ವಸೂಲಿ ಮಾಡುತ್ತಿದ್ದು, ವಿಪರೀತ ದಂಡ ಕಟ್ಟಲು ಕಾಲೇಜು ಮಂಡಳಿ ವಿದ್ಯಾರ್ಥಿಗಳಿಗೆ ಒತ್ತಡ ಹೇರುತ್ತಿರುವುದು ಶಿಕ್ಷಣ ನೀತಿಗೆ ವಿರುದ್ಧವಾದುದು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್(SFI) ಆರೋಪಿಸಿದೆ. ವಿದ್ಯಾರ್ಥಿಗಳು ಶ್ರೀದೇವಿ ಕಾಲೇಜಿನ ದಂಡ ಪಾವತಿ ನೀತಿಯ ವಿರುದ್ಧ ತರಗತಿ ಬಹಿಷ್ಕರಿಸಿ ನಡೆಸಿರುವ ಹೋರಾಟವನ್ನು ಎಸ್ ಎಫ್ ಐ ಮತ್ತು ಡಿವೈಎಫ್ಐ ಬೆಂಬಲಿಸಿದ್ದು ಮಂಗಳೂರು […]

Continue Reading

ನ್ಯಾಯಾಲಯದಲ್ಲಿ ಜಾಮೀನು ಪಡೆಯಲು ನಕಲಿ ದಾಖಲೆ ಸೃಷ್ಠಿಸಿ ವಂಚಿಸಿದ ಪ್ರಕರಣ, ಆರೋಪಿಯ ಬಂಧನ.

ಪುತ್ತೂರು: ನ್ಯಾಯಾಲಯಕ್ಕೆ ನಕಲಿ ದಾಖಲೆ ಪತ್ರಗಳನ್ನು ನೀಡಿ, ಆರೋಪಿಯೊಬ್ಬನಿಗೆ ಜಾಮೀನು ಪಡೆಯಲು ವಂಚನೆ ಮಾಡಿದಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಪುತ್ತೂರು ನಿವಾಸಿಯೊಬ್ಬರ ಮಾಲಿಕತ್ವದಲ್ಲಿರುವ ಜಮೀನಿನ ಆರ್‌ಟಿಸಿಯನ್ನು ತನ್ನ ಹೆಸರಿನಲ್ಲಿರುವ ಜಮೀನಿನ ಆರ್‌ಟಿಸಿಯೆಂದು ನಂಬಿಸಿ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ನೀಡಿ ಆರೋಪಿಗೆ ಜಾಮೀನು ನೀಡುವಂತೆ ಮಾಡಿ, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅ.ಕ್ರ 84/2025 ಪ್ರಕರಣ ದಾಖಲಾತ್ತು. ಪ್ರಕರಣದಲ್ಲಿ ನಕಲಿ ದಾಖಲೆ ಪತ್ರ ಸೃಷ್ಟಿಸಿ ಪಿರ್ಯಾದುದಾರರೆಂದು ಹೇಳಿಕೊಂಡು, ನಕಲಿ ಸಹಿ ಮಾಡಿ ನ್ಯಾಯಾಲಯಕ್ಕೆ […]

Continue Reading

ಕಂಬಳ ಪ್ರೇಮಿ, ಉದ್ಯಮಿ ವಾಮಂಜೂರು ತಿರುವೈಲ್ ಗುತ್ತು ನವೀನ್ ಚಂದ್ರ ಆಳ್ವ ಪುತ್ರ ಅಭಿಷೇಕ್ ಮೃತದೇಹ ನದಿ ಕಿನಾರೆಯಲ್ಲಿ ಪತ್ತೆ; ಆತ್ಮಹತ್ಯೆ ಶಂಕೆ?

ಕಳೆದೆರಡು ದಿನಗಳಿಂದ ನಿಗೂಢವಾಗಿ ನಾಪತ್ತೆಯಾಗಿದ್ದ, ಕಂಬಳ ಪ್ರೇಮಿ, ಉದ್ಯಮಿ ತಿರುವೈಲ್ ಗುತ್ತು ನವೀನ್ ಚಂದ್ರ ಆಳ್ವ ಅವರ ಸುಪುತ್ರ ಅಭಿಷೇಕ್ ಆಳ್ವ ಅವರ ಮೃತದೇಹ ಇಂದು ಮೂಲ್ಕಿ ಬಪ್ಪನಾಡು ನದಿ ತೀರದಲ್ಲಿ ಪತ್ತೆಯಾಗಿದೆ. ಎರಡು ದಿನಗಳ ಹಿಂದಷ್ಟೇ ತನ್ನ ಸ್ನೇಹಿತರ ಜೊತೆ ಪಾರ್ಟಿ ಮಾಡಿಕೊಂಡಿದ್ದ ಅಭಿಷೇಕ್ ಆಳ್ವ ಆ ನಂತರ ಡಿಢೀರಾಗಿ ನಾಪತ್ತೆಯಾಗಿದ್ದರು. ಮೂಲ್ಕಿ ಬಪ್ಪನಾಡು ಬಳಿ ಕಾರು ಪತ್ತೆಯಾಗಿತ್ತು. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಾರಿನಲ್ಲಿ ಆತ ಬಳಸುತ್ತಿದ್ದ ವಾಚ್ ಪತ್ತೆಯಾಗಿತ್ತು. […]

Continue Reading

ಹಳೇ ಹುಲಿಗಳು ಕಾಂಗ್ರೆಸ್ ತೆಕ್ಕೆಗೆ.! ಅಧಿಕಾರಿ, ಬಾವಾ ಬ್ರದರ್ಸ್ ಕಾಂಗ್ರೆಸ್ ಸೇರ್ಪಡೆಗೆ ಕೌಂಟ್ ಡೌನ್.!

ಕರಾವಳಿಯ ಕಾಂಗ್ರೆಸ್ ರಾಜಕಾರಣದಲ್ಲಿ ಭಾರೀ ಬದಲಾವಣೆಯ ಗಾಳಿ ಬೀಸುವ ಮುನ್ಸೂಚನೆ ಸಿಕ್ಕಿದೆ. ಹಿಂದುತ್ವದ ತವರು ನೆಲದಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಮಾಸ್ಟರ್ ಪ್ಲ್ಯಾನ್ ಈಗಿಂದಲೇ ಸಿದ್ಧಗೊಂಡಂತಿದೆ. ಖುದ್ದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅಖಾಡಕ್ಕೆ ಇಳಿದಿರುವ ಲಕ್ಷಣ ಗೋಚರಿಸುತ್ತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿ ಡಿಕೆಶಿ ಮುಖ್ಯಮಂತ್ರಿಯಾಗಲು ರಣತಂತ್ರಕ್ಕೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ನಂತರ ಮುಖ್ಯಮಂತ್ರಿ ಗಾದಿಗೇರಲು ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಂ ಬಿ ಪಾಟೀಲ್ ಹೀಗೆ ಡಜನ್ ಗಟ್ಟಲೆ ನಾಯಕರು ಕ್ಯೂನಲ್ಲಿ ನಿಂತಿದ್ದಾರೆ. ಕಾಂಗ್ರೆಸ್ಸಿನಲ್ಲಿ ಸಿಎಂ […]

Continue Reading