ಬುಸುಗುಟ್ಟಿದ ಬಣ ರಾಜಕೀಯ, ಕಾಂಗ್ರೆಸ್ ಕಛೇರಿಯಲ್ಲಿ ಭಾರಿ ತಮ್ಮಣ.!

ಮಾರಾಮಾರಿಗೆ ಸಾಕ್ಷಿಯಾಯಿತು ಜಿಲ್ಲಾ ಕಾಂಗ್ರೆಸ್ ಕಚೇರಿ ಕರಾವಳಿಯಲ್ಲಿ ಕಾಂಗ್ರೆಸ್ ಸೀಟು ಪಡೆಯಲು ಹರಸಾಹಸ ಪಡೆಯುತ್ತಿದ್ದರೂ, ಸೋತು ಸುಣ್ಣವಾಗಿದ್ದರೂ ಕಾಂಗ್ರೆಸ್ ನಾಯಕರ ಮಧ್ಯೆ ಹೊಡೆದಾಟಕ್ಕೇನೂ ಕಮ್ಮಿಯಿಲ್ಲ. ಹಲವಾರು ವರ್ಷಗಳಿಂದ ಜಿಲ್ಲಾ ಕಾಂಗ್ರೆಸ್ ನಾಯಕರ ಮಧ್ಯೆ ಹತ್ತಾರು ಬಣಗಳಾಗಿ ಹಂಚಿಹೋಗಿದ್ದು, ಚುನಾವಣಾ ಸಮಯದಲ್ಲಿ ಕೆಲವೊಂದು ಕಾಂಗ್ರೆಸ್ ನಾಯಕರು ಬೆಳಿಗ್ಗೆ ಕಾಂಗ್ರೆಸ್, ರಾತ್ರಿ ಹೊತ್ತಿನಲ್ಲಿ ಬಿಜೆಪಿ ಆಗಿ ಪರಿವರ್ತನೆಗೊಳ್ಳುತ್ತಾರೆ. ಇದೇ ಕಾರಣದಿಂದ ಕಾಂಗ್ರೆಸ್ ಹಲವು ಚುನಾವಣೆಯಲ್ಲಿ ಸೋತು ಮೂಲೆ ಸೇರಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಹರೀಶ್ ಕುಮಾರ್ ಆಯ್ಕೆಯಾದ ನಂತರ ಸೋಲೇ […]

Continue Reading

‘ಜೀಟಿಗೆ’ ಸಿನೆಮಾ ನಿರ್ಮಾಪಕನಿಂದ ಬಂಟ್ವಾಳ ಉದ್ಯಮಿಗೆ 9 ಕೋಟಿ ಉಂಡೆನಾಮ.!

ಬಣ್ಣ ಬಣ್ಣದ ಮಾತುಗಾರ..ತುಳು ಸಿನೆಮಾ ನಿರ್ಮಾಪಕನ ಮಕ್ಮಲ್ ಟೋಪಿ ಕಥೆ.! ಸಿನಿಮಾ ಅಂದ್ರೇನೇ ಮಾಯಾ ಲೋಕ. ಇದಕ್ಕೆ ಎಲ್ಲರೂ ಮಾರಿ ಹೋದವರೇ. ಇಲ್ಲಿ ಅನೇಕರು ಮುಖವಾಡದ ಬದುಕನ್ನು ಬದುಕುತ್ತಿರುತ್ತಾರೆ. ಬಣ್ಣ ಬಣ್ಣದ ಮಾತುಗಳಿಂದ ನಂಬಿಸುತ್ತಾರೆ. ಚೂರು ಯಾಮಾರಿದರೂ ತಲೆಗೆ ಮಕ್ಮಲ್ ಟೋಪಿ ಹಾಕಿ ಹಣೆಗೆ ತುಪ್ಪ ಸವರುತ್ತಾರೆ. ಇದ್ದ ಬದ್ದ ಹಣವನ್ನೆಲ್ಲ ದೋಚಿ ಕೈಗೆ ಸಿಗದಂತೆ ಕಣ್ಮರೆಯಾಗಿರುತ್ತಾರೆ ಇದಕ್ಕೆ ಮತ್ತೊಂದು ಉದಾಹರಣೆ ಎನ್ನುವಂತೆ ನಿರ್ಮಾಪಕ ಅರುಣ್ ರೈ ವಿರುದ್ಧ ವಂಚನೆ ಪ್ರಕರಣ ದಾಖಲಾಗಿದೆ. ರಾಷ್ಟ್ರ ಪ್ರಶಸ್ತಿ ವಿಜೇತ […]

Continue Reading

ಕೋಣಾಜೆ ಪೊಲೀಸರಿಂದ ಮಾದಕ ದ್ರವ್ಯ ದ ವಿರುದ್ಧ ಭರ್ಜರಿ ಕಾರ್ಯಾಚರಣೆ;

ಅಲ್ಪಾಝ್, ಗಣೇಶ್, ಕಾರ್ತಿಕ್, ನಿಖಿಲ್ ಆರೆಸ್ಟ್ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಪಜೀರು ಎಂಬಲ್ಲಿ ನಿರ್ಜನ ಕೈಗಾರಿಕಾ ಪ್ರದೇಶದಲ್ಲಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲದ ಮೂವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸ ಲಾಗಿದೆ. ಒಟ್ಟು 1.5ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿ ಮೂಲದ ಕಿಂಗ್ ಪಿನ್ ಇಂದಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ಅಲ್ಫಾಝ್ ಯಾನೆ ಅಲ್ಪಾ ಪ್ಯಾಬ್ಲೋ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಆರೋಪಿಯಿಂದ 53 ಗ್ರಾಂ ಎಂಡಿಎಂಎ ಮಾದಕ ವಸ್ತು, ಸ್ಕೋಕ್ ಪಾಟ್, ಸ್ವಿಝ್ […]

Continue Reading

ಮಂಗಳೂರು ಕಮಿಷನರ್ ವರ್ಗಾವಣೆ ಒತ್ತಾಯಿಸಿ ಪ್ರತಿಭಟನೆ, ಬಂಧನ; ಕಮಿಷನರ್ ವರ್ಗಾವಣೆ ಆಗುವವರೆಗೆ ಹೋರಾಟ ಮುಂದುವರಿಸಲು ಡಿವೈಎಫ್ಐ ನಿರ್ಧಾರ

ಸುರತ್ಕಲ್ : ಹೆದ್ದಾರಿ ದುರಸ್ಥಿಗೆ ಒತ್ತಾಯಿಸಿ ನಡೆದ ಪ್ರತಿಭಟಗೆ ಅನುಮತಿ ನಿರಾಕರಿಸಿ ಹೋರಾಟಗಾರ ಮುನೀರ್ ಕಾಟಿಪಳ್ಳ, ಮತ್ತಿತರರ ಮೇಲೆ ಕೇಸು ದಾಖಲಿಸಿ ಪ್ರಜಾಪ್ರಭುತ್ವವನ್ನು ದಮನಿಸುತ್ತಿರುವ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಡಿವೈಎಫ್ಐ ನೇತೃತ್ವದಲ್ಲಿ ಇಂದು ಸುರತ್ಕಲ್ ಜಂಕ್ಷನ್ ಬಳಿ ಪ್ರತಿಭಟನೆ ನಡೆಯಿತು. ಬಿಗು ಪೊಲೀಸ್ ಬಂದೋಬಸ್ತಿನ ನಡುವೆ ಸುರತ್ಕಲ್ ಪೇಟೆಯಲ್ಲಿ ಜಮಾಯಿಸಿದ ಡಿವೈಎಫ್ಐ ಕಾರ್ಯಕರ್ತರು ಕಮಿಷನರ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಘೋಷಣೆ ಕೂಗಿದರು. ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಅವರು ಭಾಷಣ ಆರಂಭಿಸುತ್ತಿದ್ದಂತೆ […]

Continue Reading

ಅಕ್ರಮ ಮರಳುಗಾರಿಕೆಗೆ, ಕಾಪು ಉಪ-ನಿರೀಕ್ಷಕ ಅಮಾನತು

ಉಡುಪಿ: ಅಕ್ರಮ ಮರಳುಗಾರಿಕೆಗೆ ಸಹಕಾರ ಮಾಡಿರುವ ಆರೋಪದಲ್ಲಿ ಕಾಪು ಪೊಲೀಸ್‌ ಠಾಣೆಯ ಉಪ-ನಿರೀಕ್ಷಕ ಅಬ್ದುಲ್‌ ಖಾದರ್‌ ಅವರನ್ನು ಅಮಾನತು ಮಾಡಲಾಗಿದೆ. ಕಾಪು ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಕಾಪು ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ ಮರಳು ದಂಧೆಕೋರರೊಂದಿಗೆ ಪಿಎಸ್‌ಐ ಅಬ್ದುಲ್‌ ಖಾದರ್‌ ಸಹಕರಿಸಿದ್ದಾರೆ ಎನ್ನುವುದನ್ನು ತಿಳಿಸುವ ಆಡಿಯೋವೊಂದರ ಬಗ್ಗೆ ಮೇಲಧಿಕಾರಿಗಳಿಗೆ ದೂರು ನೀಡಲಾಗಿತ್ತು. ಪ್ರಾಥಮಿಕ ತನಿಖೆ ನಡೆಸಿದ ವೇಳೆ ಕಾಪು ಠಾಣಾಧಿಕಾರಿ ವಿರುದ್ಧದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಲಾಗಿದೆ.

Continue Reading

ಬಂಟ್ವಾಳ: ಅರಣ್ಯ ಇಲಾಖೆ ಸಿಬ್ಬಂದಿ ಹಠಾತ್ ಕುಸಿದು ಬಿದ್ದು ಮೃತ್ಯು

ಬಂಟ್ವಾಳ ಅರಣ್ಯ ಇಲಾಖೆಯಲ್ಲಿ ಸಿಬ್ಬಂದಿಯಾಗಿದ್ದ ವೀರಕಂಭ ನಿವಾಸಿ ಜಯರಾಮ ಮೂಲ್ಯ ಕರ್ತವ್ಯನಿರತರಾಗಿದ್ದ ಸಂದರ್ಭ ಕಚೇರಿಯಲ್ಲಿ ಹಠಾತ್ ಕುಸಿದು ಬಿದ್ದು ಮೃತಪಟ್ಟ ಘಟನೆ ಬಿಸಿ ರೋಡಿನಲ್ಲಿ ನಡೆದಿದೆ. ಸುಮಾರು 30 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದರು. ನ.29ರಂದು ರಾತ್ರಿ ಪಾಳಿಯಲ್ಲಿ ಅರಣ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸಂಜೆ ವೇಳೆ ಇವರಿಗೆ ತಲೆಸುತ್ತು ಬರುವ ವಿಚಾರ ಇಲಾಖೆಯ ಜೊತೆ ಕೆಲಸಗಾರರಲ್ಲಿ ಹೇಳಿಕೊಂಡಿದ್ದರು ಎನ್ನಲಾಗಿದೆ. ಕಚೇರಿಯಲ್ಲಿ ಒಬ್ಬನೇ ಕರ್ತವ್ಯದಲ್ಲಿದ್ದು, ಮುಂಬಾಗಿಲ ಚಿಲಕ ಹಾಕಿಕೊಂಡು ಕೋಣೆಯೊಳಗೆ ಮಲಗಲು ಹೋಗುವ […]

Continue Reading

ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ನಿಯೋಗದಿಂದ ಗೃಹ ಸಚಿವರ ಭೇಟಿ, ಪೊಲೀಸ್ ಕಮೀಷನರ್ ಅಗ್ರವಾಲ್ ವಿರುದ್ಧ ದೂರು, ವರ್ಗಾವಣೆಗೆ ಆಗ್ರಹಿಸಿ ಮನವಿ

ಸಿಪಿಐಎಂ ಪಕ್ಷದ ದ‌.ಕ. ಜಿಲ್ಲಾ ಸಮಿತಿಯ ನಿಯೋಗ ಮಂಗಳೂರು ಪ್ರವಾಸದಲ್ಲಿರುವ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರನ್ನು ಭೇಟಿ ಮಾಡಿ ಮಂಗಳೂರು ಪೊಲೀಸ್ ಕಮೀಷನರ್ ವಿರುದ್ಧ ಲಿಖಿತ ದೂರು ನೀಡಿತು. ಶಿಸ್ತು ಕ್ರಮ ಕೈಗೊಂಡು ವರ್ಗಾಯಿಸುವಂತೆ ಆಗ್ರಹಿಸಿತು. ಜನಪರ ಸಂಘಟನೆಗಳು ನಡೆಸುವ ಪ್ರತಿಭಟನೆ, ಧರಣಿಗಳಿಗೆ ವಿನಾಕಾರಣ ಅನುಮತಿ ನಿರಾಕರಿಸುವುದು, ಪ್ರತಿಭಟನಾಕಾರರ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡುತ್ತಿರುವುದು ಮಂಗಳೂರಿನಲ್ಲಿ ಜನಾಕ್ರೋಶಕ್ಕೆ ಕಾರಣವಾಗಿದೆ. ಸಿಪಿಐಎಂ ಪಕ್ಷವು ಕಮೀಷನರ್ ಅನುಪಮ್ ಅಗ್ರವಾಲ್, ಡಿಸಿಪಿ ಸಿದ್ದಾರ್ಥ ಗೋಯಲ್ ರ ಸರ್ವಾಧಿಕಾರಿ ಧೋರಣೆಯ […]

Continue Reading

ಸಂತ್ರಸ್ತೆ ಪರ ಆರೋಪಿಗಳಿಂದ ಮನೆಗೆ ನುಗ್ಗಿ ದಾಂಧಲೆ, ಸೊತ್ತು ಹಾನಿ. ಬೆಂಕಿ ಹಚ್ಚಿ ಸಜೀವದಹನದ ಬೆದರಿಕೆ; ಬಂಟ್ವಾಳ ಠಾಣೆಯಲ್ಲಿ ದೂರು ದಾಖಲು.

ಮದುವೆಯಾಗಿ ಕೈಕೊಟ್ಟು ಬೀದಿಪಾಲು ಮಾಡಿದ್ದಾನೆಂದು ಮಾಣಿ ರಫೀಕ್ ವಿರುದ್ಧ ಬಂಟ್ವಾಳ ಠಾಣೆಗೆ ಪತ್ನಿ ಮಂಜನಾಡಿ ನಿವಾಸಿ ನಸೀಮಾ ಎಂಬವರು ದೂರು ನೀಡಿದ್ದರು. ಇದೀಗ ದೂರು ನೀಡಿದ್ದ ಸಂತ್ರಸ್ತೆ ಪರ ತಂಡದ ವಿರುದ್ಧ ರಫೀಕ್ ಪುತ್ರಿ ಬಂಟ್ವಾಳ ಠಾಣೆಗೆ ದೂರು ನೀಡಿದ್ದಾರೆ. ಮನೆಗೆ ನುಗ್ಗಿ ದಾಂಧಲೆ ನಡೆಸಿದ ತಂಡದ ದುಷ್ಕೃತ್ಯ ಸಿಸಿ ಟೀವಿಯಲ್ಲಿ ದಾಖಲಾಗಿದ್ದು ವೀಡಿಯೋ, ಫೊಟೋಗಳು ಸಾಮಾಜಿಕ ತಾಣಗಳಲ್ಲಿ ವೈರಲಾಗಿವೆ. ಮದುವೆಯಾಗಿ ತ್ರಿವಳಿ ತಲಾಖ್ ನೀಡಿ ಜೀವನ ನಡೆಸದೇ ಕೈಕೊಟ್ಟನೆಂದೂ, ಮನೆಗೆ ಮಗುವಿನ ಜೊತೆ ಬಂದಾಗ ಚಿನ್ನಾಭರಣ […]

Continue Reading

ಮಂಗಳೂರು: ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ದಲಿತ ಸಂಘರ್ಷ ಸಮಿತಿ ಆಗ್ರಹ

ಸುರತ್ಕಲ್ -ನಂತೂರ್ ಹೆದ್ದಾರಿ ದುರಸ್ತಿ, ಕೂಳೂರು ಸೇತುವೆ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ ನಂತೂರು ಮೆಲ್ಸೇತುವೆ ನಿರ್ಮಿಸುವಂತೆ ಒತ್ತಾಯಿಸಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ಕೂಳೂರಿನ ಸೇತುವೆ ಸಮೀಪ ನಡೆಸಿದ್ದ ಶಾಂತಿಯುತ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಸಮಿತಿಯ ಸಂಚಾಲಕರಾದ ಮುನೀರ್ ಕಾಟಿಪಳ್ಳ ಇವರ ಮೇಲೆ ಕಾವೂರು ಪೊಲೀಸ್ ಠಾಣೆ ಯಲ್ಲಿ ವಿನಾಃ ಕಾರಣ ಎಫ್. ಐ. ಆರ್. ದಾಖಲಿಸಿರುವ ಪೋಲೀಸರ ಕ್ರಮವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ ) ಸ್ವಾಭಿಮಾನಿ ಪ್ರೊ. ಬಿ. […]

Continue Reading

ಮಂಗಳೂರು ಪೊಲೀಸ್ ಕಮೀಷನರ್ ವರ್ಗಾವಣೆಗೆ ಆಗ್ರಹಿಸಿ ರಸ್ತೆ ತಡೆಗೆ ಪ್ರಯತ್ನ; ಡಿವೈಎಫ್ಐ ಕಾರ್ಯಕರ್ತರ ಬಂಧನ

ಜನಪರ ಪ್ರತಿಭಟನೆಗಳನ್ನು ನಿರಾಕರಿಸಿ ಪ್ರಜಾಪ್ರಭುತ್ವದ ಹಕ್ಕುಗಳನ್ನು ದಮನಿಸುತ್ತಿರುವ ಪೊಲೀಸ್ ಕಮೀಷನರ್ ಅನುಪಮ್ ಅಗ್ರವಾಲ್ ವರ್ಗಾವಣೆಗೆ ಒತ್ತಾಯಿಸಿ ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಇಂದು ನಗರದ ರಾವ್ ಆಂಡ್ ರಾವ್ ವೃತ್ತದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾಯಿತು. ಕಮೀಷನರ್ ಅಗ್ರವಾಲ್ ಹಟಾವೋ ಮಂಗಳೂರು ಭಚಾವೋ ಎಂದು ಘೋಷಣೆಗಳನ್ನು ಕೂಗಿ ರಸ್ತೆ ತಡೆ ನಡೆಸಲು ಮುಂದಾದ ಡಿವೈಎಫ್ಐ ಕಾರ್ಯಕರ್ತರನ್ನು ಅಪಾರ ಸಂಖ್ಯೆಯಲ್ಲಿ ನಿಯೋಜಿಸಿದ್ದ ಪೊಲೀಸರು ತಡೆಯಲು ಯತ್ನಿಸಿದರು ಡಿವೈಎಫ್ಐ ಕಾರ್ಯಕರ್ತರನ್ನು ಬಂಧಿಸುವ ವೇಳೆ ಪೊಲೀಸರ ನಡುವೆ ತಿಕ್ಕಾಟ […]

Continue Reading