ಗ್ರಾಮ ಪಂಚಾಯತ್ ಗಳ ಸದಸ್ಯತ್ವ ನಿಗದಿ; 2026 ಮೇ 8ರ ವರೆಗೆ ಸಾರ್ವಜನಿಕ ಆಕ್ಷೇಪಣೆಗೆ ಅವಧಿ ವಿಸ್ತರಣೆ.

ಕರ್ನಾಟಕ ರಾಜ್ಯದ ಗ್ರಾಮ ಪಂಚಾಯಿತ್ ಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ಪ್ರಕರಣ 5(1) ರಂತೆ ನಿಗದಿಪಡಿಸಿ ಹೊರಡಿಸಲಾದ ಕರಡು ಪ್ರಕಟಣೆಗೆ ಸಾರ್ವಜನಿಕರು ಆಕ್ಷೇಪಣೆಯನ್ನು ಸಲ್ಲಿಸುವ ಅವಧಿಯನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ 2026ರ ಮೇ 08 ರ ಸಂಜೆ 5:30ರವರೆಗೆ ವಿಸ್ತರಿಸಲಾಗಿದೆ. ಸಾರ್ವಜನಿಕರು ಆನ್ ಲೈನ್ ಮೂಲಕ ತಮ್ಮ ಮನವಿಗಳನ್ನು https://rdpr.karnataka.gov.in/rdc/public/ ಈ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದಾಗಿದೆ. ಖುದ್ದಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, […]

Continue Reading

ಮದಕರಿ ನಾಯಕ ಫ್ರಂಟ್ ಲೈನಿಗೆ ಬಂದಿದ್ದೇಕೆ.?, ಇದು ವಿಜಯೇಂದ್ರ ವೈಭವಂ

ರಾಹುಲ್ ಅಪ್ ಸೆಟ್; ಸಧ್ಯದಲ್ಲೇ ಎಐಸಿಸಿಗೆ ಮೇಜರ್ ಸರ್ಜರಿ ✍️. ಆರ್.ಟಿ.ವಿಠ್ಠಲಮೂರ್ತಿ ಮೇ ಒಂಭತ್ತರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಯಡಿಯೂರೋತ್ಸವ ದಿಲ್ಲಿಯ ಕಾಂಗ್ರೆಸ್ ನಾಯಕರಿಗೆ ಆತಂಕ ಮೂಡಿಸಿದೆ. ಕಾರಣ? ಈ ಉತ್ಸವ ಕರ್ನಾಟಕದ ಜಾತಿ ರಾಜಕೀಯದ ಚಿತ್ರವನ್ನು ಬದಲಿಸಲಿದೆ ಎಂಬ ಮಾಹಿತಿ. ಅಂದ ಹಾಗೆ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಅಭಿನಂದಿಸುವ ಈ ಉತ್ಸವ ಕೇವಲ ಬಲ ಪ್ರದರ್ಶನದ ಉದ್ದೇಶವನ್ನಷ್ಟೇ ಹೊಂದಿದ್ದರೆ ಅದು ಕಾಂಗ್ರೆಸ್ ನಾಯಕರಿಗೆ ಅಷ್ಟೇನೂ ಆತಂಕ ಮೂಡಿಸುತ್ತಿರಲಿಲ್ಲ. ಆದರೆ ಈ ಉತ್ಸವದ ತಯಾರಿ ಹೇಗೆ ನಡೆದಿದೆ […]

Continue Reading

ರಾಜ್ಯದ ಜನತೆಗೆ ವಿದ್ಯುತ್ ಬರೆ.! ಮೇ ತಿಂಗಳಿನಿಂದಲೇ ಹೊಸ ದರ ಜಾರಿ, 91 ಪೈಸೆ ಹೆಚ್ಚಳ

ವಿದ್ಯುತ್ ಸರಬರಾಜು ನಿಗಮವು ಗೃಹ ಬಳಕೆದಾರರಿಗೆ ಪ್ರತಿ ಯೂನಿಟ್‌ಗೆ 91 ಪೈಸೆ ದರ ಹೆಚ್ಚಳ ಮಾಡಿದ್ದು, ಮೇ ತಿಂಗಳಿನಿಂದಲೇ ಹೊಸ ದರ ಜಾರಿಗೆ ಬರಲಿದೆ. ಈಗಾಗಲೇ ಏಪ್ರಿಲ್ ತಿಂಗಳಿನಿಂದ ಪ್ರತಿ ಯೂನಿಟ್‌ಗೆ 35 ಪೈಸೆ ಏರಿಕೆ ಮಾಡಲಾಗಿತ್ತು.ಪ್ರಸ್ತುತ ಮೇ ತಿಂಗಳಿನಿಂದ ‘ಟ್ರೂ ಅಪ್ ಚಾರ್ಜ್’ ಹೆಸರಿನಲ್ಲಿ ಹೆಚ್ಚುವರಿಯಾಗಿ 56 ಪೈಸೆ ದರ ವಿಧಿಸಲಾಗುತ್ತಿದೆ. ಒಟ್ಟಾರೆಯಾಗಿ ಗ್ರಾಹಕರು ಪ್ರತಿ ಯೂನಿಟ್‌ಗೆ 91 ಪೈಸೆ ಹೆಚ್ಚಿನ ಹಣ ಪಾವತಿಸಬೇಕಾಗುತ್ತದೆ. ಗೃಹ ಬಳಕೆದಾರರಿಗಿಂತಲೂ ವಾಣಿಜ್ಯ ಮತ್ತು ಕೈಗಾರಿಕಾ ಬಳಕೆದಾರರಿಗೆ ಈ ಬೆಲೆ […]

Continue Reading

ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿಯುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ; ಸಿದ್ದು ಪಟ್ಟ ಭದ್ರ.?

ರಾಜ್ಯದ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಗೊಂದಲ ಬಗೆಹರಿಯುವ ಲಕ್ಷಣ ಸದ್ಯಕ್ಕೆ ಕಾಣುತ್ತಿಲ್ಲ. ನಾಯಕತ್ವ ಬದಲಾವಣೆಗೆ ಪಟ್ಟು ಹಿಡಿದಿರುವ ಡಿ.ಕೆ. ಶಿವಕುಮಾರ್‌ ಅವರು ದೆಹಲಿಯಲ್ಲಿ ಹೈಕಮಾಂಡ್‌ ನಾಯಕರ ಭೇಟಿಗೆ ಕಸರತ್ತು ನಡೆಸಿದರೆ, ಇತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಲ ಪ್ರದರ್ಶನದ ತಂತ್ರ ಹೆಣೆದಿದ್ದಾರೆ. ಸಿಎಂ ಹಾಗೂ ಡಿಸಿಎಂ ನಡುವಿನ ನಾಯಕತ್ವ ಬಿಕ್ಕಟ್ಟು ತೀವ್ರಗೊಂಡಿರುವ ಬೆನ್ನಲ್ಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗೊಂದಲಗಳಿಗೆ ತೆರೆ ಎಳೆಯುವಂತೆ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ. ಹೀಗಾಗಿ ನಾಯಕತ್ವ […]

Continue Reading

ರಾಜ್ಯ ನಾಯಕತ್ವದ ಕುರಿತ ಸ್ವಷ್ಟ ನಿರ್ಧಾರದ ಅನಿವಾರ್ಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್

ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಇನ್ನು ಮುಂದೆ ಕಾಂಗ್ರೆಸ್‌‍ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯದ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಲೇಬೇಕಾದ ಅನಿವಾರ್ಯತೆ ಎದುರಾಗಿದೆ. ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಚುನಾವಣಾ ಪ್ರಚಾರದ ಕಾರ್ಯದಲ್ಲಿ ನಿರತರಾಗಿದ್ದ ಕಾರಣ ರಾಜ್ಯದಿಂದ ತೆರಳುವ ಶಾಸಕರು, ಸಚಿವರ ನಿಯೋಗಕ್ಕೆ ಸಮಯ ನೀಡಲು ಸಾಧ್ಯವಾಗಿರಲಿಲ್ಲ. ಈಗ ಎಲ್ಲಾ ಚುನಾವಣೆಗಳು ಮುಕ್ತಾಯವಾಗಿವೆ. ರಾಹುಲ್‌ ಗಾಂಧಿ ದೆಹಲಿಗೆ ಮರಳಿದ್ದಾರೆ. ಕರ್ನಾಟಕದ ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟ ಪುನರ್ರಚನೆ ಕುರಿತಂತೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳಬೇಕಿದೆ. ನಾಯಕತ್ವ […]

Continue Reading

ಸಮಾಜ ಕಲ್ಯಾಣ ಇಲಾಖೆ ಅಧೀನದ ವಸತಿ ಶಾಲೆಗಳಲ್ಲಿ 3 ವರ್ಷಗಳಲ್ಲಿ 23 ವಿದ್ಯಾರ್ಥಿಗಳ ಅಸಹಜ ಸಾವು; ಪೋಷಕರಲ್ಲಿ ಆತಂಕ

ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳಲ್ಲಿ ಕಳೆದ 3 ವರ್ಷಗಳಲ್ಲಿ 23 ವಿದ್ಯಾರ್ಥಿಗಳು ವಿವಿಧ ಕಾರಣಗಳಿಗಾಗಿ ಮೃತಪಟ್ಟಿದ್ದಾರೆ. ಇದಲ್ಲದೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘದ (ಕ್ರೈಸ್) ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಲ್ಲಿ 21 ವಿದ್ಯಾರ್ಥಿಗಳು ಮೃತರಾಗಿದ್ದಾರೆ. ಇದು ವಿದ್ಯಾರ್ಥಿಗಳ ಪೋಷಕರಲ್ಲಿ ಸಹಜವಾಗಿಯೇ ಆತಂಕ ಮೂಡಿಸಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿನ ಹಲವಾರು ವಸತಿ ಶಾಲೆ -ಕಾಲೇಜುಗಳಲ್ಲಿ […]

Continue Reading

ಸತ್ಯಾಂಶಕ್ಕೆ ದೂರವಿರುವ ವಿಷಯಗಳನ್ನು ಹರಡುತ್ತಿರುವುದು ಆರೋಗ್ಯ ಸಚಿವರೇ ಹೊರತು ಸಂಘಟನೆಗಳಲ್ಲ; ಡಿವೈಎಫ್ಐ ತಿರುಗೇಟು

ಜನರ ಧಿಕ್ಕು ತಪ್ಪಿಸುತ್ತಿರುವುದು ಯಾರು.? ಸುಳ್ಳು ಹೇಳಿಕೆಗಳನ್ನು ನೀಡಿ ಜನರ ಬೇಡಿಕೆಗಳನ್ನು ಕಡೆಗಣಿಸುತ್ತಿರುವುದು ಯಾರು.? ಬೆಳ್ತಂಗಡಿ, ಬಂಟ್ವಾಳದ ತಾಲೂಕು ಆಸ್ಪತ್ರೆ, ಮೂಡಬಿದ್ರೆ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ವಿಟ್ಲ ಸಮುದಾಯ ಆಸ್ಪತ್ರೆಯನ್ನು ಖಾಸಗೀ ಸಂಸ್ಥೆಗಳೊಂದಿಗೆ ಕರಾರು ಒಪ್ಪಂದ ಮಾಡಿರುವ ಆರೋಗ್ಯ ಇಲಾಖೆಯ ನಡೆಯನ್ನು ಡಿವೈಎಫ್ಐ ವಿರೋಧಿಸಿದ್ದು ಮತ್ತು ಈ ಒಪ್ಪಂದ ರದ್ದುಗೊಳಿಸಲು ಜನ ಚಳುವಳಿಗಳನ್ನು ಕೈಗೆತ್ತಿಕೊಂಡಿರುವ ವೇಳೆ ಸರಕಾರ ಜಿಲ್ಲಾ ಆರೋಗ್ಯಾಧಿಕಾರಿಗಳ ಮೂಲಕ ” ಕೆಲವು ಸಂಘಟನೆಗಳು ಈ ಕುರಿತು ನಕರಾತ್ಮಕ ವಿಷಯಗಳನ್ನು ಹರಡುತ್ತಿದ್ದು ಇದು ಸತ್ಯಾಂಶಕ್ಕೆ […]

Continue Reading

ರಾಜ್ಯ ಚುನಾವಣಾ ಆಯೋಗದ ಮಹತ್ವದ ಆದೇಶ; ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಅಭ್ಯರ್ಥಿಗಳು ನಾಮಪತ್ರದೊಂದಿಗೆ ಸಲ್ಲಿಸಬೇಕಾದ ಪ್ರಮಾಣಪತ್ರದ ನಮೂನೆಯಲ್ಲಿ ಕೆಲವು ಪ್ರಮುಖ ಅಂಶಗಳನ್ನು ಸೇರ್ಪಡೆಗೊಳಿಸಿ ಆಯೋಗವು ಈ ಹೊಸ ತಿದ್ದುಪಡಿ ಆದೇಶವನ್ನು ನೀಡಿದೆ. ಆಯೋಗದ ಆದೇಶ ಸಂಖ್ಯೆ: SECK/ULB/OTHR/1/2026-ULB ರನ್ವಯ, ನಾಮಪತ್ರದ ಪ್ರಮಾಣಪತ್ರದ ಭಾಗ-ಎ ಮತ್ತು ಭಾಗ-ಬಿ ನಲ್ಲಿ ಹೊಸ ಅಂಶಗಳನ್ನು ಅಳವಡಿಸಲಾಗಿದೆ. ಯಾವುದೇ ಶಾಸನಬದ್ಧ ಪ್ರಾಧಿಕಾರ ಅಥವಾ ಸ್ಥಳೀಯ ಪ್ರಾಧಿಕಾರವು ಅಭ್ಯರ್ಥಿಯನ್ನು ಈ ಹಿಂದೆ ಅನರ್ಹಗೊಳಿಸಿದ್ದರೆ, ಆ ಬಗ್ಗೆ ಸಂಪೂರ್ಣ ವಿವರಗಳನ್ನು […]

Continue Reading

ರಾಜ್ಯದಲ್ಲಿ ಇನ್ನು ಭೂ ಪರಿವರ್ತನೆಗೆ ಕಾಯಬೇಕಾಗಿಲ್ಲ; 30 ದಿನಗಳೊಳಗೆ ‘ಪರಿಭಾವಿತ ಭೂ ಪರಿವರ್ತನೆ’ ಎಂದು ಪರಿಗಣಿಸಿ ಸ್ವಯಂಚಾಲಿತವಾಗಿ ಅನುಮೋದನೆ: ಕಂದಾಯ ಇಲಾಖೆ

ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗಾಗಿ ಬಳಸಲು ಸಲ್ಲಿಸುವ ‘ಅಫಿಡವಿಟ್ ಆಧಾರಿತ ಭೂ ಪರಿವರ್ತನೆ’ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ಸರಳಗೊಳಿಸಿದೆ. ನಿಗದಿತ 30 ದಿನಗಳೊಳಗೆ ಜಿಲ್ಲಾಧಿಕಾರಿಗಳು ಯಾವುದೇ ತೀರ್ಮಾನ ಕೈಗೊಳ್ಳದಿದ್ದಲ್ಲಿ, ಅದನ್ನು ‘ಪರಿಭಾವಿತ ಭೂ ಪರಿವರ್ತನೆ’ ಎಂದು ಪರಿಗಣಿಸಿ ಸ್ವಯಂಚಾಲಿತವಾಗಿ ಅನುಮೋದನೆ ನೀಡಲು ಕಂದಾಯ ಇಲಾಖೆ ಆದೇಶಿಸಿದೆ. ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ಕಲಂ 95ರ ಅಡಿಯಲ್ಲಿ ಭೂ ಪರಿವರ್ತನೆ ಪ್ರಕ್ರಿಯೆಯನ್ನು ಸುಲಭಗೊಳಿಸಲು ಸರ್ಕಾರ ಈ ಮಹತ್ವದ ಕ್ರಮ ಕೈಗೊಂಡಿದೆ. ಮಾಸ್ಟರ್ ಪ್ಲಾನ್ ವ್ಯಾಪ್ತಿಯ […]

Continue Reading

ಭಾರತವು ಈಗ ‘ವಿಶ್ವಗುರು’ ಆಗಿ ಉಳಿದಿಲ್ಲ; ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ

ಭಾರತವು ಈಗ ‘ವಿಶ್ವಗುರು’ ಆಗಿ ಉಳಿದಿಲ್ಲ. ಆ ಪದವನ್ನು ಬಳಸಬಾರದು ಎಂದು ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಸೋಮವಾರ ಹೇಳಿದ್ದಾರೆ. ಸಂಸ್ಕೃತದ ಹೆಚ್ಚಿನ ಪ್ರಚಾರ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿಯೂ ಸಂಸ್ಕೃತ ಬಳಕೆಯ ಕುರಿತು ಪ್ರತಿಪಾದಿಸಿ ಅವರು ಈ ಮಾತನ್ನು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಸ್ಕೃತವನ್ನು ಭಾರತದ ಅಧಿಕೃತ ಭಾಷೆಯನ್ನಾಗಿ ಮಾಡಬೇಕು ಎಂದು ಒತ್ತಾಯಿಸಿದರು. ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕರು ಈ ಹಿಂದೆ ಇದಕ್ಕಾಗಿ ಪ್ರಯತ್ನಿಸಿದ್ದರು, ಆದರೆ ಆ ಪ್ರಸ್ತಾವನೆಗಳು ಅಂಗೀಕಾರವಾಗಲಿಲ್ಲ […]

Continue Reading