ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಆರೋಪ ಹೊತ್ತ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಗ್ರೇಡ್ -1 ತಹಶೀಲ್ದಾರ್ ವೆಂಕಟೇಶಪ್ಪ ಅವರು ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿದ್ದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್ ಜಿ ಪಂಡಿತ್ ಮತ್ತು ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ. […]

Continue Reading

ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕ ದುಪ್ಪಟ್ಟು, ಆಗಸ್ಟ್ 31 ರಿಂದ ಜಾರಿ; ಕಂದಾಯ ಇಲಾಖೆ ಆದೇಶ

ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕವನ್ನೂ ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ಆ.31ರಿಂದ ಅನ್ವಯವಾಗುವಂತೆ ನೋಂದಣಿ ಶುಲ್ಕ ಶೇ.1ರಿಂದ ಶೇ.2ಕ್ಕೆ ಹೆಚ್ಚಳ ಆಗಲಿದೆ. ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ, ಸ್ವಾಧೀನ ಭೋಗ್ಯ ಪತ್ರ, ಕ್ರಯ ಉದ್ದೇಶದ ಜಿಪಿಎ ಸೇರಿ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ. ಈವರೆಗೆ ರಾಜ್ಯದಲ್ಲಿ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿ ಯಾವುದೇ ಸ್ಥಿರಾಸ್ತಿ ಖರೀದಿ ವೇಳೆ ಶೇ.1 ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6 ರಷ್ಟು ಮುದ್ರಾಂಕ […]

Continue Reading

ಒತ್ತುವರಿ ಮಾಡಿರುವ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಲು ವಕ್ಫ್ ಮಂಡಳಿ ಸಿಇಒ ಅವರಿಗೆ ಅಧಿಕಾರವಿಲ್ಲ: ಹೈಕೋರ್ಟ್‌ (ದಾರವಾಡ ಪೀಠ)

ಒತ್ತುವರಿಯಾಗಿರುವ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಲು ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO)ಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್‌ (ದಾರವಾಡ ಪೀಠ) ಸ್ಪಷ್ಟಪಡಿಸಿದೆ. ವಕ್ಫ್ ಮಂಡಳಿಗೆ ಸೇರಿದ ಜಮೀನಿನ ಒತ್ತುವರಿ ತೆರವುಗೊಳಿಸಲು ಮಂಡಳಿಯ ಸಿಇಒ ಆದೇಶ ಪ್ರಶ್ನಿಸಿ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿ ನಗರದ ಸಹೇಬಲಾಲ್‌ ಮತ್ತು ಮುನೋರುದ್ದೀನ್‌ ಎಂಬುವರು ಸಲ್ಲಿಸಿದ್ದ ಅರ್ಜಿ ಕುರಿತು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, […]

Continue Reading

ಬೆಂಗಳೂರಿನಲ್ಲಿ ಟಿನೇಜ್ ಪ್ರಗ್ನೆನ್ಸಿ ಪ್ರಕರಣ ಏರಿಕೆ. ಮೂರು ವರ್ಷಗಳಲ್ಲಿ ರಾಜ್ಯಾದ್ಯಂತ 3,36,000 ಕ್ಕೂ ಹೆಚ್ಚು ಪ್ರಕರಣಗಳು ದಾಖಲು

ಕರ್ನಾಟಕದಲ್ಲಿ ಹದಿನೆಂಟು ವರ್ಷ ತುಂಬುವುದಕ್ಕಿಂತ ಮೊದಲೇ ಗರ್ಭಿಣಿ ಆಗುತ್ತಿರುವವರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದೆ. ಬೆಂಗಳೂರಿನಲ್ಲಿಯೂ ವರ್ಷದಿಂದ ವರ್ಷಕ್ಕೆ ಟಿನೇಜ್ ಪ್ರಗ್ನೆನ್ಸಿ ಏರಿಕೆ ಕಾಣುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕರ್ನಾಟಕದಾದ್ಯಂತ ಒಟ್ಟಾರೆಯಾಗಿ 3,36,000 ಕ್ಕೂ ಹೆಚ್ಚು ಟಿನೇಜ್ ಪ್ರಗ್ನೆನ್ಸಿ ಪ್ರಕರಣಗಳು ವರದಿಯಾಗಿದ್ದರೆ, ಬೆಂಗಳೂರು ಅರ್ಬನ್​ನಲ್ಲಿ 8891 ದಾಖಲಾಗಿವೆ. ಆರೋಗ್ಯ ಇಲಾಖೆ ನೀಡಿರುವ ಅಂಕಿ ಅಂಶಗಳು ಆಘಾತಕಾರಿಯಾಗಿವೆ. ಕಳೆದ ಆರು ತಿಂಗಳಲ್ಲಿ ರಾಜ್ಯದಲ್ಲಿ 22,000 ಸಾವಿರ ಹಾಗೂ ಬೆಂಗಳೂರು ಅರ್ಬನ್​​ನಲ್ಲಿ 8891 ಟೀನೇಜ್ ಪ್ರಗ್ನೆನ್ಸಿ ಪ್ರಕರಣಗಳು ಕಂಡು ಬಂದಿವೆ. […]

Continue Reading

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು: ಬಸವಲಿಂಗಪ್ಪ ಹಿಂದೆ ಸರಿದಿದ್ದರು, ರೇಸಿನಲ್ಲಿದ್ದರು ಬಿ.ರಾಚಯ್ಯ, ರಂಗನಾಥ್ ವಂಚಿತರಾಗಿದ್ದು ಹೇಗೆ.? ಪರಮೇಶ್ವರ್ ಲಕ್ಕು ಕುದುರಲಿಲ್ಲ

✍️ ಆರ್.ಟಿ.ವಿಠ್ಠಲಮೂರ್ತಿ ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ ದಲಿತ ಸಿಎಂ ಕೂಗು ಮೇಲೇಳಲಿದೆ.ಅಂದ ಹಾಗೆ ಈ ವಿಷಯವನ್ನು ಆಪ್ತರೊಡನೆ ಹಂಚಿಕೊಂಡ ಪವರ್ ಫುಲ್ ನಾಯಕರೊಬ್ಬರು:’ಸಿದ್ಧರಾಮಯ್ಯ ಸಿಎಂ ಆಗಿರುವವರೆಗೆ ದಲಿತರು ಈ ಹುದ್ದೆಗಾಗಿ ಪಟ್ಟು ಹಿಡಿಯುವುದಿಲ್ಲ.ಯಾಕೆಂದರೆ ರಾಜ್ಯದ ಅಹಿಂದ ವರ್ಗಗಳಿಗೆ ಅವರು ನಿರ್ವಿವಾದ ನಾಯಕ.ಆದರೆ ಅಧಿಕಾರ ಹಂಚಿಕೆಯ ಮಾತಿಗೆ ಬ್ರೇಕ್ ಬಿದ್ದಿಲ್ಲವಲ್ಲ?ಹೀಗಾಗಿ ದಲಿತರು ತಮ್ಮ ಹಕ್ಕಿಗಾಗಿ ಪೂರ್ವ ತಯಾರಿ ಮಾಡಿಕೊಳ್ಳುವುದು ಅನಿವಾರ್ಯವಾಗಿದೆ’ ಎನ್ನುತ್ತಿದ್ದರು.ಅವರ ಪ್ರಕಾರ:’ಇಂತಹ ಪೂರ್ವ ತಯಾರಿಯ […]

Continue Reading

ಬಡ, ಮಧ್ಯಮ ವರ್ಗದರಿಗೆ ಅನುಕೂಲವಾಗಲು 30 x 40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ ಸಿಸಿ, ಒಸಿ ಪಡೆಯುವುದಕ್ಕೆ ವಿನಾಯಿತಿ: ಸಚಿವ ಬೈರತಿ ಸುರೇಶ್

ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಅನುಕೂಲವಾಗಲು 30 x 40 ಅಡಿ ನಿವೇಶನದವರೆಗಿನ ಕಟ್ಟಡಗಳಿಗೆ ಪ್ರಾರಂಭಿಕ ಪ್ರಮಾಣಪತ್ರ (ಸಿಸಿ) ಮತ್ತು ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಪಡೆಯುವುದಕ್ಕೆ ವಿನಾಯಿತಿ ನೀಡಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ‘ಕರ್ನಾಟಕ ಪಾಲಿಕೆಗಳ ತಿದ್ದುಪಡಿ ಮಸೂದೆ- 2025’ ಮಂಡಿಸಿದ ಸಚಿವರು, ‘ಕಡಿಮೆ ಅಪಾಯವಿರುವ ಕಟ್ಟಡಗಳಿಗೆ ಒಸಿ ಮತ್ತು ಸಿಸಿ ಪಡೆಯುವುದನ್ನು ತೆಗೆದುಹಾಕಲಾಗಿದೆ. 50 x 80 ಅಡಿಯವರೆಗಿನ ನಿವೇಶನದಲ್ಲಿರುವ ಕಟ್ಟಡಗಳಿಗೆ ಒಸಿ, ಸಿಸಿ ಬೇಡ ಎಂಬುದು […]

Continue Reading

ಬಿ.ಎಲ್ ಸಂತೋಷ ಯಾರು.?ಕಾಂಗ್ರೆಸ್ ನೇತ್ರತ್ವದ ರಾಜ್ಯ ಸರ್ಕಾರವನ್ನು RSS ನಿಯಂತ್ರಿಸುತ್ತದೆಯೇ.‌?

ರಾಜ್ಯದ ಮುಖ್ಯಮಂತ್ರಿಯನ್ನು ಟೀಕಿಸಬಹುದು. RSS ನಾಯಕರನ್ನು ಟೀಕಿಸಿದರೆ ಜೈಲುಭಾಗ್ಯ ಗ್ಯಾರಂಟಿ: ಶೇಖರ್ ಲಾಯಿಲ ನನಗೂ, ಮಹೇಶ್ ಶೆಟ್ಟಿ ತಿಮಾರೋಡಿ ಅವರಿಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಆದರೆ ಬಿ.ಎಲ್ ಸಂತೋಷ್ ಎಂಬ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿಯನ್ನು ನಿಂದಿಸಿದ ಏಕೈಕ ಕಾರಣಕ್ಕಾಗಿ ಬೆಳ್ಳಂಬೆಳಗೆ ಮನೆಗೆ ನುಗ್ಗಿ, ಪೋಲಿಸ್ ಠಾಣೆಗೆ ಕರೆದೊಯ್ದು, ಬಂಧಿಸಿ, ಜೈಲಿಗಟ್ಟಿರುವ ಘಟನೆ ಅತ್ಯಂತ ಖಂಡನೀಯವಾದುದು. ಇಲ್ಲಿ ಮುಖ್ಯ ಪ್ರಶ್ನೆ ಬಿ.ಎಲ್ ಸಂತೋಷ ಯಾರು ಎಂಬುದು. ಆತ RSS ನ ನಾಯಕನಾಗಿ, ಬಿಜೆಪಿ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ […]

Continue Reading

ರಾಜ್ಯದಲ್ಲಿ ಮಸಾಜ್, ಸ್ಪಾ ನಿಯಂತ್ರಣಕ್ಕೆ ಸೂಕ್ತ ಕಾಯ್ದೆ ಜಾರಿಗೆ ವಕೀಲರ ಆಗ್ರಹ

ಹೆಲ್ತ್ ಕೇರ್ ಉದ್ಯಮ; ಕೇರಳ ಮಾದರಿಯಲ್ಲಿ ನಿಯಂತ್ರಣ ಕಾಯ್ದೆ ಜಾರಿಗೆ ವಕೀಲ ಮನೋರಾಜ್ ಆಗ್ರಹ ಮಸಾಜ್, ಸ್ಪಾ ನಿಯಂತ್ರಣ; ಹೆಲ್ತ್ ಕೇರ್ ಉದ್ಯಮ ಸಂಬಂಧ ಸೂಕ್ತ ಕಾಯ್ದೆ ಜಾರಿಗೆ ಕಾನೂನು ತಜ್ಞರ ಆಗ್ರಹ ಕಾನೂನೇ ಇಲ್ಲದಿರುವಾಗ ‘ಅನೈತಿಕ’ ಎನ್ನಲು ಸಾಧ್ಯವೇ? ಮಸಾಜ್, ಸ್ಪಾ ಕೇಂದ್ರಗಳ ಮೇಲಿನ ಖಾಕಿ ದಾಳಿ ಬಗ್ಗೆ ವಕೀಲರ ಅಭಿಪ್ರಾಯ ಮಂಗಳೂರು: ರಾಜ್ಯದಲ್ಲಿ ಮಸಾಜ್ ಹಾಗೂ ಸ್ಪಾ ಹೆಸರಿನಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಸೂಕ್ತ ಕಾನೂನು ರೂಪಿಸಬೇಕೆಂಬ ಆಗ್ರಹ ಹೆಚ್ಚಿದೆ. ಕೇರಳದಲ್ಲಿ ಅಸ್ತಿತ್ವದಲ್ಲಿರುವಂತೆಯೇ ಕರ್ನಾಟಕದಲ್ಲೂ […]

Continue Reading

ವಾಹನ ಸವಾರರಿಗೆ ಶುಭ ಸುದ್ದಿ. ಸಂಚಾರ ನಿಯಮ ಉಲ್ಲಂಘನೆಗೆ ದಂಡಕಟ್ಟಲು ಶೇ.50 ರಿಯಾಯಿತಿ

ವಾಹನ ಸವಾರರಿಗೆ ಶುಭ ಸುದ್ದಿ. ಸಂಚಾರ ನಿಯಮ ಉಲ್ಲಂಘನೆಗೆ ದಂಡಕಟ್ಟಲು ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶ ಹೊರಡಿಸಿದೆ.ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ. ಈ ರಿಯಾಯಿತಿಯು 23.08.2025 ರಿಂದ 12.09.2025ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.ಈ ಆದೇಶವನ್ನು ಆರ್ಥಿಕ ಇಲಾಖೆಯು ಅನಧಿಕೃತ ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 […]

Continue Reading

ಖಾಸಗಿ ಶಾಲೆಗಳ ಕಳ್ಳಾಟಆರ್ ಟಿಇ ಕಾಯ್ದೆ ಕಸದ ಬುಟ್ಟಿಗೆ

11,454 ಸೀಟುಗಳ ಪೈಕಿ ಬರೀ 2491 ಸೀಟುಗಳು ಭರ್ತಿ ಆರ್ ಟಿ ಇ ಅರ್ಥಾತ್ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಆರ್ ಟಿ ಇ ಕಾಯ್ದೆ ಉದ್ದೇಶವೇ ದುರ್ಬಲ ವರ್ಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣವನ್ನು ಖಾತರಿಪಡಿಸುವುದು ಇದು ವಿಫಲಗೊಳ್ಳದಂತೆ ಸರಕಾರ, ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ತಜ್ಞರು ನೋಡಿಕೊಳ್ಳಬೇಕಾಗಿದೆ. ಪ್ರಸ್ತುತ 2025-26 ನೇ ಸಾಲಿಗೆ ರಾಜ್ಯದ ಖಾಸಗಿ ಶಾಲೆಗಳಲ್ಲಿ ಶೇಕಡಾ 25 ರಷ್ಟು […]

Continue Reading