ಬೆಂಗಳೂರು ಸನ್‌ರೂಫ್ ಘಟನೆ: ರಸ್ತೆ ಸುರಕ್ಷತೆಯ ಎಚ್ಚರಿಕೆ ಗಂಟೆ.

ರಸ್ತೆಯಲ್ಲಿ ರೋಮಾಂಚಕ್ಕೆ ಬದಲು, ಸುರಕ್ಷತೆ ಯಾವಾಗಲೂ ಮೊದಲ ಆದ್ಯತೆ ಆಗಬೇಕು. “ಸನ್‌ರೂಫ್ ಬೆಳಕು ಮತ್ತು ಗಾಳಿ ಒಳಗೆ ಬಿಡಲು ಮಾತ್ರ, ಮನರಂಜನೆಗಾಗಿ ಅಲ್ಲ” ✍️. ಇಸ್ಮಾಯಿಲ್ ಸುನಾಲ್ ವಕೀಲರು, ಮಂಗಳೂರು 2025ರ ಸೆಪ್ಟೆಂಬರ್ 6ರಂದು, ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದ ಸನ್‌ರೂಫ್ ಅಪಘಾತ ಘಟನೆ ಈಗ ರಸ್ತೆ ಸುರಕ್ಷತೆ ಕುರಿತ ಚರ್ಚೆಗೆ ದಾರಿ ಮಾಡಿಕೊಟ್ಟಿದೆ. ಕಾರಿನ ಸನ್‌ರೂಫ್ ಮೂಲಕ ತಲೆ ಹೊರಗೆ ಹಾಕಿ ದೃಶ್ಯವನ್ನು ಆನಂದಿಸುತ್ತಿದ್ದ ಆರು ವರ್ಷದ ಬಾಲಕನ ತಲೆ ಕಡಿಮೆ ಎತ್ತರದ ಕಬ್ಬಿಣದ ಬಾರಿಯರ್‌ಗೆ ಬಡಿದು […]

Continue Reading

ವಿಜಯೇಂದ್ರ-ನಿಖಿಲ್ ಈಗ ಜೋಡೆತ್ತುಗಳು; ಸಕ್ಸಸ್ ಆಗುತ್ತಿದ್ದಾರೆ ನಿಖಿಲ್

ದಿಲ್ಲಿಗೆ ನುಗ್ಗಲಿದ್ದಾರೆ ಜಾರಕಿಹೊಳಿ, ಶಾಸಕ ಸ್ಥಾನಕ್ಕೆ ರಾಜಣ್ಣ ರಾಜೀನಾಮೆ? ✍️. ಅರ್.ಟಿ.ವಿಠ್ಠಲಮೂರ್ತಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಳೆದ ವಾರ ಪದ್ಮನಾಭನಗರಕ್ಕೆ ಹೋದರು.ಹೀಗೆ ಹೋದವರು ಜೆಡಿಎಸ್ ವರಿಷ್ಟ,ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದರು.ಅಂದ ಹಾಗೆ ಮೊನ್ನೆ ಮೊನ್ನೆಯವರೆಗೆ ಜೆಡಿಎಸ್ ಜತೆಗಿನ ಮೈತ್ರಿಯ ವಿಷಯದಲ್ಲಿ ವಿಜಯೇಂದ್ರ ಉತ್ಸುಕರಾಗಿರಲಿಲ್ಲ.ಕಾರಣ?ಈ ಮೈತ್ರಿ ವಿಧಾನಸಭಾ ಚುನಾವಣೆಯಲ್ಲಿ ಮುಂದುವರಿದರೆ,ಮತ್ತು ಬಿಜೆಪಿ ಮಿತ್ರಕೂಟ ಗೆದ್ದು ಅಧಿಕಾರ ಹಿಡಿದರೆ ಧರ್ಮ ಸಂಕಟ ಶುರುವಾಗಬಹುದು ಎಂಬುದು.ಅರ್ಥಾತ್,ಅಧಿಕಾರ ಹಿಡಿಯುವ ಮೈತ್ರಿಕೂಟ ಸರ್ಕಾರಕ್ಕೆ ಕುಮಾರಸ್ವಾಮಿ ನಾಯಕರಾಗಬಹುದು ಎಂಬ ಆತಂಕ ವಿಜಯೇಂದ್ರ ಅವರಿಗಿತ್ತು.ಹೀಗಾಗಿ ಸಿದ್ಧರಾಮಯ್ಯ […]

Continue Reading

ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ, 4,346 ಹುದ್ದೆಗಳ ಭರ್ತಿಗೆ ಸಿದ್ದತೆ

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ನೇರ ನೇಮಕಾತಿ ವೇಳೆ ಅನುಸರಿಸಬೇಕಾದ ‘ಪರಿಷ್ಕೃತ ಮೀಸಲಾತಿ ರೋಸ್ಟರ್’ ನಿಗದಿಪಡಿಸಲಾಗಿದ್ದು, ಪೊಲೀಸ್ ಇಲಾಖೆಯಲ್ಲಿ 4,346 ಹುದ್ದೆಗಳ ಭರ್ತಿಗೆ ಸಿದ್ದತೆಗಳು ಆರಂಭವಾಗಿವೆ. ಪೊಲೀಸ್‌ ಇಲಾಖೆಯಲ್ಲಿ ವಿವಿಧ ಹಂತದ ಸಿಬ್ಬಂದಿ ಒಳಗೊಂಡು ಒಟ್ಟು 1,11,330 ಮಂಜೂರಾದ ಹುದ್ದೆಗಳಿವೆ. ಆ ಪೈಕಿ 18,581 ಹುದ್ದೆಗಳು ಖಾಲಿ ಇವೆ. ಹೀಗಾಗಿ, ಕರ್ತವ್ಯದಲ್ಲಿರುವ ಸಿಬ್ಬಂದಿ ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಸೃಷ್ಟಿಯಾಗಿದೆ. ತಕ್ಷಣವೇ ಕೆಲವು ಹುದ್ದೆಗಳನ್ನಾದರೂ ನೇರ ನೇಮಕಾತಿ ಮೂಲಕ […]

Continue Reading

ತುರ್ತು ಚಿಕಿತ್ಸೆಗೆ ಮುಂಗಡ ಹಣ ಬೇಡಿಕೆ ಇಡುವಂತಿಲ್ಲ , ಉಲ್ಲಂಘಿಸಿದರೆ ದಂಡ ವಿಧಿಸಲಾಗುವುದು: ಆರೋಗ್ಯ ಇಲಾಖೆ

ಅಪಘಾತ ಸಂದರ್ಭದಲ್ಲಿ ಮುಂಗಡ ಹಣ ಪಾವತಿಸುವಂತೆ ಬೇಡಿಕೆಯಿಡದೆ ಸಂತ್ರಸ್ತರಿಗೆ ತುರ್ತು ಚಿಕಿತ್ಸೆ ನೀಡುವ ಕಾನೂನುಬದ್ಧ ಬಾಧ್ಯತೆಯನ್ನು ರಾಜ್ಯ ಸರಕಾರ ಪುನರುಚ್ಚರಿಸಿದೆ. ವೈದ್ಯಕೀಯ ಸಂಸ್ಥೆ ಅಥವಾ ವೈದ್ಯರು ಚಿಕಿತ್ಸೆಗೂ ಮೊದಲು ಹಣದ ಬೇಡಿಕೆ ಇಡುವಂತಿಲ್ಲ. ವಿಳಂಬ ಮಾಡದೇ ಚಿಕಿತ್ಸೆ ನೀಡುವುದು ಕಡ್ಡಾಯವಾಗಿದೆ. ಉಲ್ಲಂಘನೆ ಮಾಡಿದಲ್ಲಿ ಒಂದು ಲಕ್ಷ ರೂಪಾಯಿ ಗಳವರೆಗೆ ದಂಡ ವಿಧಿಸಲಾಗುತ್ತದೆ ಎಂದು ಆರೋಗ್ಯ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಎಚ್ಚರಿಸಲಾಗಿದೆ. 2025 ರ ರಸ್ತೆ ಅಪಘಾತ ಸಂತ್ರಸ್ತರ ನಗದು ರಹಿತ ಚಿಕಿತ್ಸೆ ಯೋಜನೆಯನ್ನು ಉಲ್ಲೇಖಿಸಿ ‘ರಸ್ತೆ ಅಪಘಾತದ […]

Continue Reading

60-70 ಶಾಸಕರಿದ್ದಾರೆ ಎಂದು ನಂಬಿ ಡಿಕೆಶಿಗೆ ಸಿಎಂ ಕೊಡಲು ಮುಂದಾಗಿತ್ತು.! ಅಸಲಿ ಸತ್ಯ ಗೊತ್ತಾದಾಗ ಯೂಟರ್ನ್ ಹೊಡೆದಿತ್ತು ಬಿಜೆಪಿ.!

ರಾಜ್ಯ ರಾಜಕಾರಣದಲ್ಲಿ ಧೂಳೆಬ್ಬಿಸಿದ ಯತ್ನಾಳ್ ಸಿಡಿಸಿದ ಬಾಂಬ್ ರಾಜ್ಯ ರಾಜಕಾರಣದಲ್ಲಿ ಆ ಒಂದು ಹೇಳಿಕೆ ಮಿಂಚಿನ ಸಂಚಾರಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ ಡಿಕೆಶಿ ಬಿಜೆಪಿ ಸೇರ್ಪಡೆ ಬಗ್ಗೆ ಕೆಲವು ತಿಂಗಳ ಹಿಂದೆಯೇ ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆದಿತ್ತು. ಬಿಜೆಪಿ ಸೇರ್ಪಡೆಗೆ ಡಿಕೆಶಿ ತುದಿಗಾಲಲ್ಲಿ ನಿಂತಿದ್ದರು ಎಂದು ಬಿಜೆಪಿ ಉಚ್ಛಾಟಿತ ನಾಯಕ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ಸುದ್ಧಿಗಾರರೊಂದಿಗೆ ಮಾತನಾಡಿದ ಯತ್ನಾಳ್ ಡಿಕೆಶಿಯವರು ಒಂದು ಕಾಲು ಕಾಂಗ್ರೆಸ್ಸಿನಲ್ಲಿ, ಮತ್ತೊಂದು ಕಾಲು ಬಿಜೆಪಿಯಲ್ಲಿ ಇಟ್ಟಿದ್ದಾರೆ. ಕೆಲವು ತಿಂಗಳುಗಳ ಹಿಂದೆ […]

Continue Reading

ನಕಲಿ ಇನ್ ವಾಯ್ಸ್ ಗಳನ್ನು ಸೃಷ್ಟಿಸಿ, 45 ಕೋಟಿ ರೂಪಾಯಿ ವಂಚನೆ; ಜಿ.ಎಸ್.ಟಿ. ಗುಪ್ತಚರ ನಿರ್ದೇಶನಾಲಯದಿಂದ ವ್ಯಕ್ತಿಯ ಬಂಧನ

145 ಕೋಟಿ ರೂಪಾಯಿ ಮೌಲ್ಯದ ನಕಲಿ ಇನ್ ವಾಯ್ಸ್ ಗಳನ್ನು ಸೃಷ್ಟಿಸಿ ಅಂದಾಜು 45 ಕೋಟಿ ರೂಪಾಯಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ವ್ಯಕ್ತಿಯನ್ನು ಜಿ.ಎಸ್.ಟಿ. ಗುಪ್ತಚರ ನಿರ್ದೇಶನಾಲಯದ ಬೆಳಗಾವಿ ವಲಯ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಗಳ ಪ್ರಕಾರ, ನಕಲಿ ದಾಖಲೆಗಳನ್ನು ಬಳಸಿಕೊಂಡು ಸುಸಜ್ಜಿತ ಗುಂಪೊಂದು ನಕಲಿ ಜಿ ಎಸ್ ಟಿ ನೋಂದಣಿಗಳನ್ನು ಸೃಷ್ಟಿಸಿ ನಕಲಿ ಐಟಿಸಿಯನ್ನು ಪಡೆದುಕೊಂಡು ರವಾನಿಸುವ ಚಟುವಟಿಕೆಯಲ್ಲಿ ನಿರತವಾಗಿತ್ತು. ಶೋಧದ ಸಮಯದಲ್ಲಿ ಆರೋಪಿಯಿಂದ ಅಧಿಕಾರಿಗಳು ಮೊಬೈಲ್ ಫೋನ್, ನಕಲಿ ದಾಖಲೆಗಳು, […]

Continue Reading

ಕರ್ನಾಟಕದಲ್ಲಿ GPA ಕಡ್ಡಾಯ ನೋಂದಣಿ – ಮತ್ತು ಜೀವಿತ ಪ್ರಮಾಣಪತ್ರ ಜನತೆಗೆ ಬಂದಿರುವ ಸಂಕಷ್ಟಗಳು

✍️. ಇಸ್ಮಾಯಿಲ್ ಸುನಾಲ್, ವಕೀಲರು ಮಂಗಳೂರು ಸರ್ಕಾರದ ಉದ್ದೇಶ ಪಾರದರ್ಶಕತೆ ಮತ್ತು ಮೋಸ ತಡೆಯುವುದಾದರೂ, ಈ ತಿದ್ದುಪಡಿ ಸಾಮಾನ್ಯ ಜನತೆಗೆ, ರೈತರಿಗೆ, ಖರೀದಿದಾರರಿಗೆ, ಹೂಡಿಕೆದಾರರಿಗೆ ಮತ್ತು ವಕೀಲ ಸಮುದಾಯಕ್ಕೆ ಅಸಹನೀಯ ಸಂಕಷ್ಟಗಳನ್ನು ತಂದಿದೆ. ಸರ್ಕಾರವು ತಕ್ಷಣ ಸ್ಪಷ್ಟನೆ ನೀಡದಿದ್ದರೆ, ಇದು ಆಸ್ತಿ ವ್ಯವಹಾರಗಳ ಮೇಲೆ ಭಾರಿ ಹೊಡೆತ ನೀಡುವುದಲ್ಲದೆ, ಕರ್ನಾಟಕದ ಆರ್ಥಿಕ ಚಟುವಟಿಕೆಗೂ ಹಾನಿ ತರುವ ಸಾಧ್ಯತೆ ಇದೆ. ಆದ್ದರಿಂದ, ಈ ತಿದ್ದುಪಡಿಗೆ ಸೂಕ್ತ ನಿಯಮಗಳನ್ನು ಜಾರಿ ಮಾಡಿ, ಜನರ ಹಿತಾಸಕ್ತಿಯನ್ನು ಕಾಯ್ದುಕೊಳ್ಳುವುದು ಸರ್ಕಾರದ ಕರ್ತವ್ಯವಾಗಿದೆ. ಕರ್ನಾಟಕದಲ್ಲಿ […]

Continue Reading

ಜನರ ಸಮಸ್ಯೆಗಳಿಗೆ ಸ್ಪಂದಿಸದ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ: ಕರ್ನಾಟಕ ಹೈಕೋರ್ಟ್

ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸದ ಆರೋಪ ಹೊತ್ತ ಸರ್ಕಾರಿ ಅಧಿಕಾರಿಗಳನ್ನು ಸ್ಥಳೀಯ ಶಾಸಕರ ಸಲಹೆ, ಶಿಫಾರಸ್ಸಿನ ಮೇರೆಗೆ ವರ್ಗಾವಣೆ ಮಾಡುವುದು ತಪ್ಪಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಗ್ರೇಡ್ -1 ತಹಶೀಲ್ದಾರ್ ವೆಂಕಟೇಶಪ್ಪ ಅವರು ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿದ್ದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್ ಜಿ ಪಂಡಿತ್ ಮತ್ತು ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಜಾಗೊಳಿಸಿದೆ. […]

Continue Reading

ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕ ದುಪ್ಪಟ್ಟು, ಆಗಸ್ಟ್ 31 ರಿಂದ ಜಾರಿ; ಕಂದಾಯ ಇಲಾಖೆ ಆದೇಶ

ರಾಜ್ಯದಲ್ಲಿ ಆಸ್ತಿಗಳ ನೋಂದಣಿ ಶುಲ್ಕವನ್ನೂ ದುಪ್ಪಟ್ಟು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದ್ದು, ಆ.31ರಿಂದ ಅನ್ವಯವಾಗುವಂತೆ ನೋಂದಣಿ ಶುಲ್ಕ ಶೇ.1ರಿಂದ ಶೇ.2ಕ್ಕೆ ಹೆಚ್ಚಳ ಆಗಲಿದೆ. ಸ್ಥಿರಾಸ್ತಿ ಶುದ್ಧ ಕ್ರಯ ಪತ್ರ, ಸ್ವಾಧೀನ ಭೋಗ್ಯ ಪತ್ರ, ಕ್ರಯ ಉದ್ದೇಶದ ಜಿಪಿಎ ಸೇರಿ ವಿವಿಧ ಆಸ್ತಿ ಖರೀದಿ ನೋಂದಣಿಗೆ ಈ ಶುಲ್ಕ ಅನ್ವಯವಾಗಲಿದೆ. ಈವರೆಗೆ ರಾಜ್ಯದಲ್ಲಿ ನಿವೇಶನ, ಭೂಮಿ, ಫ್ಲ್ಯಾಟ್, ಮನೆ ಸೇರಿ ಯಾವುದೇ ಸ್ಥಿರಾಸ್ತಿ ಖರೀದಿ ವೇಳೆ ಶೇ.1 ರಷ್ಟು ನೋಂದಣಿ ಶುಲ್ಕ ಹಾಗೂ ಶೇ.5.6 ರಷ್ಟು ಮುದ್ರಾಂಕ […]

Continue Reading

ಒತ್ತುವರಿ ಮಾಡಿರುವ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಲು ವಕ್ಫ್ ಮಂಡಳಿ ಸಿಇಒ ಅವರಿಗೆ ಅಧಿಕಾರವಿಲ್ಲ: ಹೈಕೋರ್ಟ್‌ (ದಾರವಾಡ ಪೀಠ)

ಒತ್ತುವರಿಯಾಗಿರುವ ವಕ್ಫ್ ಆಸ್ತಿಗಳನ್ನು ತೆರವುಗೊಳಿಸಲು ವಕ್ಫ್ ಮಂಡಳಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO)ಗೆ ಅಧಿಕಾರವಿಲ್ಲ ಎಂದು ಹೈಕೋರ್ಟ್‌ (ದಾರವಾಡ ಪೀಠ) ಸ್ಪಷ್ಟಪಡಿಸಿದೆ. ವಕ್ಫ್ ಮಂಡಳಿಗೆ ಸೇರಿದ ಜಮೀನಿನ ಒತ್ತುವರಿ ತೆರವುಗೊಳಿಸಲು ಮಂಡಳಿಯ ಸಿಇಒ ಆದೇಶ ಪ್ರಶ್ನಿಸಿ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕುಡಚಿ ನಗರದ ಸಹೇಬಲಾಲ್‌ ಮತ್ತು ಮುನೋರುದ್ದೀನ್‌ ಎಂಬುವರು ಸಲ್ಲಿಸಿದ್ದ ಅರ್ಜಿ ಕುರಿತು ಧಾರವಾಡ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜು ಅವರಿದ್ದ ಏಕಸದಸ್ಯ ಪೀಠ, ಈ ಆದೇಶ ನೀಡಿದೆ. ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, […]

Continue Reading