ಮಗನ ಸಾಲ ಬಾಕಿ.. ತಾಯಿಯ ಗೃಹಲಕ್ಷ್ಮಿ ಹಣ ಕೊಡಲು ಸತಾಯಿಸಿದ ಬ್ಯಾಂಕ್ ಮ್ಯಾನೇಜರ್.

ಕೊಳ್ನಾಡು ಗ್ರಾಮಸಭೆಯಲ್ಲಿ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಭಾರಿ ಆಕ್ರೋಶ.. ಸಾಲಗಾರ ಪುತ್ರನ ತಾಯಿಯ ಗೃಹಲಕ್ಷ್ಮಿ ಹಣವನ್ನು ಖಾತೆಯಿಂದ ತೆಗೆಯಲು ಬಿಡದೆ ಸಾಲೆತ್ತೂರು ಕೆನರಾ ಬ್ಯಾಂಕ್ ಮ್ಯಾನೇಜರ್ ಹಿಡಿದಿಟ್ಟ ವಿಚಾರ ಕೊಳ್ನಾಡು ಗ್ರಾಮಸಭೆಯಲ್ಲಿ ಕೋಲಾಹಲವನ್ನೇ ಎಬ್ಬಿಸಿದೆ.‌ ಕೊಳ್ನಾಡು ಗ್ರಾಮಸಭೆ ಆರಂಭವಾದ ಕೆಲಹೊತ್ತಿನಲ್ಲಿ ಕೆನರಾ ಬ್ಯಾಂಕ್ ಸಾಲೆತ್ತೂರು ಶಾಖೆಯ ಮ್ಯಾನೇಜರ್ ಬ್ಯಾಂಕ್ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು. ಬಳಿಕ ಗ್ರಾಮಸ್ಥರಿಗೆ ಮಾತನಾಡಲು ಅವಕಾಶ ಕೊಟ್ಟರು. ಕೊಳ್ನಾಡು ಗ್ರಾಮದ ಕಲ್ಲಮಜಲು ನಿವಾಸಿ ದೃಷ್ಟಿ ಹೀನ ಮಹಿಳೆ ನೆಬಿಸ ಮಹಮ್ಮದ್ ಅವರ ಪುತ್ರ […]

Continue Reading

ವಕ್ಫ್ ತಿದ್ದುಪಡಿ ಮಸೂದೆಯನ್ನು ಸದನದಲ್ಲಿ ಸರ್ವಾನುಮತದಿಂದ ತಿರಸ್ಕರಿಸಿರುವುದು ಸ್ವಾಗತಾರ್ಹ : ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ದ.ಕ

ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿರುವುದು ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ. ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ. ಏಕೆಂದರೆ ಇದು ದೇಶದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ ಸಂಪೂರ್ಣವಾಗಿ ವಿರುದ್ಧವಾದ ಕಾಯ್ದೆಯಾಗಿದೆ ಎಂದರು. ಈ ಹಿನ್ನೆಲೆಯಲ್ಲಿ, ವಕ್ಫ್ (ತಿದ್ದುಪಡಿ) ಮಸೂದೆ, 2024 ಅನ್ನು ತಕ್ಷಣ ಕೇಂದ್ರ ಸರಕಾರ ಹಿಂತೆಗೆದುಕೊಳ್ಳುವ ಮೂಲಕ ದೇಶದ […]

Continue Reading

ವಕ್ಪ್ ಮಸೂದೆ 2024, ಜನರ ಆಕಾಂಕ್ಷೆಗಳಿಗೆ ವಿರುದ್ಧವಾಗಿದೆ. ಸರ್ವಾನುಮತದಿಂದ ತಿರಸ್ಕರಿಸಿ, ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ ಒತ್ತಾಯ

ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಕರ್ನಾಟಕ ವಿಧಾನಸಭೆ ಬುಧವಾರ ನಿರ್ಣಯವನ್ನು ಅಂಗೀಕರಿಸಿದೆ. ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿದೆ ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸಿದೆ ಎಂದು ಎಚ್.ಕೆ.ಪಾಟೀಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ. ವಕ್ಫ್ ಕಾಯ್ದೆಯ ತಿದ್ದುಪಡಿಯನ್ನು ಈ ಸದನವು ಸರ್ವಾನುಮತದಿಂದ ತಿರಸ್ಕರಿಸುತ್ತದೆ. ಏಕೆಂದರೆ ಇದು ಕರ್ನಾಟಕದ ಜನರ ಸಾರ್ವತ್ರಿಕ ಆಕಾಂಕ್ಷೆಗಳು ಮತ್ತು ಜಾತ್ಯತೀತ ತತ್ವಗಳಿಗೆ […]

Continue Reading

2028 ರ ಚುನಾವಣೆಯಲ್ಲಿ ಬಿಜೆಪಿಗೆ ಕಂಟಕವಾಗಲಿದ್ದರಾ ಯತ್ನಾಳ್.?

ಹಿಂದುತ್ವದ ಫೈರ್ ಬ್ರ್ಯಾಂಡ್ ಕಟ್ಟುತ್ತಾರಂತೆ ಹೊಸ ಪ್ರಾದೇಶಿಕ ಪಕ್ಷ..ಧರ್ಮ ಸಂಕಟದಲ್ಲಿ ಬಿಜೆಪಿ ಹೈಕಮಾಂಡ್.! ಹಿಂದೂತ್ವದ ಫೈರ್ ಬ್ರ್ಯಾಂಡ್ ಬಸವನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಪಾಲಿಗೆ ಭಸ್ಮಾಸುರರಾಗಿ ರೂಪಾಂತರಗೊಂಡಿದ್ದಾರೆ. ಯತ್ನಾಳ್ ತಂಡದ ಭಿನ್ನಮತಕ್ಕೆ ಕುಮ್ಮಕ್ಕು ಕೊಟ್ಟ ಬಿಜೆಪಿ ಪ್ರಭಾವಿಗಳೇ ಶೇಕ್ ಆಗಿದ್ದಾರೆ. ಅದಕ್ಕೆ ಕಾರಣ ಯತ್ನಾಳ್ ಪ್ರಾದೇಶಿಕ ಪಕ್ಷ ಕಟ್ಟುತ್ತಾರೆ ಅನ್ನುವ ಸುದ್ದಿ. ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪ ಕುಟುಂಬದ ಪ್ರಭಾವವನ್ನು ಕುಗ್ಗಿಸಲು ಯತ್ನಾಳ್ ಆಂಡ್ ಟೀಮನ್ನು ಬಿಜೆಪಿಯ ಕೆಲವು ಪ್ರಭಾವಶಾಲಿಗಳೇ ಮುನ್ನೆಲೆಗೆ ತಂದಿದ್ದರು. ಸಂಘಪರಿವಾರ ಕೂಡ ಪರೋಕ್ಷವಾಗಿ ಯತ್ನಾಳ್ […]

Continue Reading

ಅಮಿತ್ ಷಾ ಪರೀಕ್ಷೆಯಲ್ಲಿ ವಿಜಯೇಂದ್ರ ಪಾಸಾದರು. ಕೂಡ್ಲಿಗಿಯಲ್ಲಿ ಸೆಟ್ಲಾದರು ಶ್ರೀರಾಮುಲು

ಇಫ್ತಿಕಾರ್ ಅಲಿ ಎಂದರೆ ಸಾಕು. ಕಾಂಗ್ರೆಸ್, ಬಿಜೆಪಿ, ಸಂಘ ಪರಿವಾರ ಸೇರಿದಂತೆ ಎಲ್ಲರ ಜತೆಗೂ ಲಿಂಕಿದೆ. ✍️. ಆರ್.ಟಿ.ವಿಠ್ಠಲಮೂರ್ತಿ ಕಳೆದ ಗುರುವಾರ ಬಿಜೆಪಿ ನಾಯಕರಾದ ಯತ್ನಾಳ್, ರಮೇಶ್ ಜಾರಕಿಹೊಳಿ ಮತ್ತಿತರರು ರಹಸ್ಯ ಸಭೆ ನಡೆಸಿದ್ದಾರೆ. ವಿಧಾನಸಬೆಯ ಮೊಗಸಾಲೆಯಲ್ಲಿರುವ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ ನಡೆದ ಈ ಸಭೆ ಆರೆಸ್ಸೆಸ್ ನಾಯಕರು ತಮಗೆ ನೀಡಿದ ಸಂದೇಶದ ಬಗ್ಗೆ ಚರ್ಚಿಸಿದೆ.ಅಂದ ಹಾಗೆ ರಾಜ್ಯ ಬಿಜೆಪಿಯಲ್ಲಿ ನಡೆಯುತ್ತಿರುವ ಅಂತರ್ಯುದ್ದದ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ನಾಯಕರು ಸ್ಥಳೀಯ ಆರೆಸ್ಸೆಸ್ ನಾಯಕರಿಗೆ ಒಂದು ಸಂದೇಶ ನೀಡಿದ್ದಾರೆ. […]

Continue Reading

ಮೂರು ದಿನಗಳಿಂದ ಹೊತ್ತಿ ಉರಿಯುತ್ತಿದೆ ಕಳೆಂಜಿಮಲೆ ರಕ್ಷಿತಾರಣ್ಯ. ಸತತ ಏಳು ಗಂಟೆಗಳಿಂದ ಎರಡು ಅಗ್ನಿಶಾಮಕ ವಾಹನಗಳು, ಸ್ಥಳೀಯರಿಂದ ಹರಸಾಹಸ.

ಮೂರು ದಿನಗಳಿಂದ ಕಳೆಂಜಿಮಲೆ ರಕ್ಷಿತಾರಣ್ಯ ಹೊತ್ತಿ ಉರಿಯುತ್ತಿದ್ದು ಬೆಂಕಿಯನ್ನು ಹತೋಟಿಗೆ ತರಲು ಎರಡು ಅಗ್ನಿಶಾಮಕ ವಾಹನಗಳು ಸಾರ್ವಜನಿಕರ ಸಹಕಾರದೊಂದಿಗೆ ಸತತ ಏಳು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿವೆ.‌ ಕೊಳ್ನಾಡು ಗ್ರಾಮದ ಕಳೆಂಜಿಮಲೆ ರಕ್ಷಿತಾರಣ್ಯ ಕಳೆದ ಮೂರು ದಿನಗಳಿಂದ ಕಿಡಿಗೇಡಿಗಳ ವಕ್ರದೃಷ್ಟಿಗೆ ಹೊತ್ತಿ ಉರಿಯುತ್ತಿದೆ.‌ ಭಾನುವಾರ ಮತ್ತು ಸೋಮವಾರ ಸತತ ಮೂರು ಗಂಟೆಗಳ ಕಾಲ ಸ್ಥಳೀಯರ ಜೊತೆ ಅಗ್ನಿಶಾಮಕ ಸಿಬ್ಬಂದಿಗಳು ಹರಸಾಹಸದಲ್ಲಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ಜರು. ಮಂಗಳವಾರ ಮಧ್ಯಾಹ್ನ ಇದ್ದಕ್ಕಿದ್ದಂತೆ ಮತ್ತೆ ರಕ್ಷಿತಾರಣ್ಯದ ಕುಂಟ್ರಕಳ ಪರಿಶಿಷ್ಟ ಪಂಗಡ ಪರಿಸರದ […]

Continue Reading

ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25 ರಿಂದ 45 ವರ್ಷಗಳ ವಯೋಮಿತಿ ನಿಗದಿ, ನಿವೃತ್ತಿ ವಯೋಮಿತಿ 60ಕ್ಕೆ ಸೀಮಿತಗೊಳಿಸಿ ಆದೇಶ

ರಾಜ್ಯದ ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿ 60 ಕ್ಕೆ ನಿಗದಿಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿದ್ದು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯದಾದ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಆಶಾನಿಧಿ ತಂತ್ರಾಂಶದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವಿವರಗಳು ನಮೂದಾಗಿರುತ್ತವೆ. ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, […]

Continue Reading

ವಂಶವೃಕ್ಷ ಪಡೆಯಲು ಇನ್ನು ಮುಂದೆ ಎಲ್ಲಾ ಜಿಲ್ಲೆಗಳಲ್ಲಿ ಒಂದೇ ಮಾದರಿಯ ಮಾನದಂಡ: ಕಂದಾಯ ಸಚಿವ

ವಂಶವೃಕ್ಷ ಪಡೆಯಲು ಒಂದೊಂದು ಜಿಲ್ಲೆಯಲ್ಲಿ ಬೇರೆ ಬೇರೆ ದಾಖಲೆಗಳನ್ನು ಕೇಳುತ್ತಿದ್ದಾರೆ ಎಂದು ಮೇಲ್ಮನೆ ಸದಸ್ಯ ವೈ.ಎಂ. ಸತೀಶ್‌ ಕೇಳಿದ ಪ್ರಶ್ನೆಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಪ್ರತಿಕ್ರಿಯಯಿಸಿ, ವಂಶವೃಕ್ಷ ಪಡೆಯುವ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ವಂಶವೃಕ್ಷ ಪಡೆಯಲು ಒಂದೇ ಮಾದರಿಯ ಮಾನದಂಡ ಅನುಸರಿಸಲಾಗುತ್ತಿದೆ. ಅದರಂತೆ ಪಡಿತರ ಚೀಟಿ ಅಥವಾ ಮತದಾರರ ಚೀಟಿ ಅಥವಾ ಆಧಾರ್‌ ಕಾರ್ಡ್‌ ನೀಡಬೇಕು. ಅರ್ಜಿ ನಮೂನೆಯಲ್ಲಿ ಸ್ವಯಂಘೋಷಿತ ಪತ್ರ ನೀಡಬೇಕು. ಈ ದಾಖಲೆಗಳೊಂದಿಗೆ ಗ್ರಾಮ ಲೆಕ್ಕಿಗರು ಕ್ಷೇತ್ರ […]

Continue Reading

ಅಕ್ರಮ ಮರಳುಗಾರಿಕೆ ಮತ್ತು ಗಣಿಗಾರಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌

ಅನಧಿಕೃತ ಮತ್ತು ವಿವೇಚನೆರಹಿತ ಮರಳು ಗಣಿಗಾರಿಕೆಯು ನದಿಗಳ ಬತ್ತುವಿಕೆಗೆ, ನದಿಯ ಸಾವಿಗೂ ಕಾರಣವಾಗಿದೆ ನದಿ ತಟದಲ್ಲಿ ಅಕ್ರಮ ಮರಳು, ಗಣಿಗಾರಿಕೆಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಕರ್ನಾಟಕ ಹೈಕೋರ್ಟ್‌, ನದಿ ಪಾತ್ರದಲ್ಲಿನ ಬದಲಾವಣೆಗಳ ಬಗ್ಗೆ ವಾಸ್ತವ ಕಾಲದ ಮಾಹಿತಿ ನೀಡುವ ವ್ಯವಸ್ಥೆ ಅಳವಡಿಸಿ ಕೊಳ್ಳುವಂತೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ. ನದಿಗಳ ಗಡಿ, ಮರಳಿನ ದಿಬ್ಬಗಳನ್ನು ಉಪಗ್ರಹ ಚಿತ್ರಗಳ ಮೂಲಕ ಗುರುತಿಸಬೇಕು, ಮತ್ತು ಇದರಲ್ಲಿ ಏನೇ ಬದಲಾವಣೆಯಾದರೂ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಿತ ಇಲಾಖೆಗಳಿಗೆ ತಿಳಿಸುವ ವ್ಯವಸ್ಥೆ […]

Continue Reading

ಕೈ ಕಮಾಂಡ್ ಗೆ ಅಕ್ಟೋಬರ್ 31 ಡೆಡ್ ಲೈನ್.. ಡಿಕೆಶಿ ಕೊಟ್ರು ಬಿಗ್ ಟಾಸ್ಕ್..ಇತ್ತ ಮೊಯ್ಲಿ ಅಭಯ.!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸುನಾಮಿಯ ಮುನ್ಸೂಚನೆ ಕಾಣಿಸುತ್ತಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾಂಗ್ರೆಸ್ ಹೈಕಮಾಂಡ್ ಗೆ ಅಕ್ಟೋಬರ್ 31 ಡೆಡ್ ಲೈನ್ ನೀಡಿರುವ ಮಾಹಿತಿಯೊಂದು ಹೊರಬಿದ್ದಿದೆ. ಅಕ್ಟೋಬರ್ 31 ರೊಳಗೆ ಮುಖ್ಯಮಂತ್ರಿ ಆಗಬೇಕು ಎಂದು ಡಿಕೆಶಿ ಖಡಕ್ ಡೆಡ್ ಲೈನ್ ಜೊತೆ ವಾರ್ನಿಂಗ್ ನೀಡಿದ್ದಾರೆ ಅನ್ನುವ ಸುದ್ದಿಯಿದೆ. ಈವರೆಗೂ ಡಿಕೆಶಿ ವಿರುದ್ಧ ಸಿದ್ದರಾಮಯ್ಯ ಬಣದ ಕೆಲವು ಶಾಸಕರು ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರೆ, ಇದೀಗ ಕಾಂಗ್ರೆಸ್ ನಲ್ಲೂ ಡಿಕೆಶಿ ಪರ ಬಹಿರಂಗವಾಗಿ ಅವರ ಬೆಂಬಲಿಗರು ಬ್ಯಾಟಿಂಗ್ ನಡೆಸಲು ಆರಂಭಿಸಿದ್ದಾರೆ. […]

Continue Reading