ಬ್ಯಾಂಕ್‌ವೊಂದರ ವ್ಯವಸ್ಥಾಪಕರು ಗ್ರಾಹಕನ ಖಾತೆಯಿಂದ ಬರೋಬ್ಬರಿ 18.41 ಕೋಟಿ ವಂಚಿಸಿರುವ ಪ್ರಕರಣ; ಸಿಸಿಬಿ ಪೊಲೀಸರಿಂದ ತನಿಖೆ

ಸೈಬರ್ ವಂಚಕರು ಗ್ರಾಹಕರ ಖಾತೆಗಳಿಂದ ಕೋಟ್ಯಂತರ ರೂ. ವರ್ಗಾವಣೆ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇದೀಗ ಖಾಸಗಿ ಬ್ಯಾಂಕ್‌ವೊಂದರ ವ್ಯವಸ್ಥಾಪಕರು ಬರೋಬ್ಬರಿ 18.41 ಕೋಟಿ ರೂ. ಹಣ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಈ ಬಗ್ಗೆ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವ್ಯವಸ್ಥಾಪಕ ವಿ. ಕೃಷ್ಣಮೂರ್ತಿ, ಅಪರಿಚಿತರಾದ ಹರೀಶ್, ಸಚಿನ್ ಸೇರಿ ವಿವಿಧ ಸಹಕಾರಿ ಬ್ಯಾಂಕುಗಳ ವ್ಯವಸ್ಥಾಪಕರು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಾಗಿದೆ. ಬ್ಯಾಂಕಿನ ಗ್ರಾಹಕರು, ರಿಯಲ್ ಎಸ್ಟೇಟ್ ಉದ್ಯಮಿ ಸಿ.ಕೆ ನವೀನ್ ಎಂಬವರ ಗಮನಕ್ಕೆ ಬರದಂತೆ ಅವರ ಖಾತೆಯಿಂದ […]

Continue Reading

ವಿಜಯೇಂದ್ರ ಅವರ ರಿಯಲ್ ಪ್ರಾಬ್ಲಮ್ಮು; ಡಾ.ಮಹದೇವಪ್ಪ ಜಪಿಸಿದ ಮಂತ್ರ

✍️. ಆರ್.ಟಿ.ವಿಠ್ಠಲಮೂರ್ತಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕೆಲ ದಿನಗಳ ಹಿಂದೆ ಜೆಡಿಎಸ್ ನಾಯಕ, ಕೇಂದ್ರ ಸಚಿವ ಹೆಚ್.ಡಿ.ಕುಮಾತಸ್ವಾಮಿ ಅವರನ್ನು ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಅವರು ಉಭಯ ಪಕ್ಷಗಳ ಮಧ್ಯೆ ಸಮನ್ವಯ ಸಾಧಿಸುವ ಕುರಿತು ಉತ್ಸಾಹ ತೋರಿಸಿದ್ದಾರೆ. ‘ಸಾರ್, ಇದುವರೆಗೆ ಸಮನ್ವಯದ ಕೊರತೆಯಿಂದ ನಾವು ಒಗ್ಗೂಡಿ ಹೋರಾಟ ಮಾಡಲು ಸಾಧ್ಯವಾಗಿಲ್ಲ. ಆದರೆ ಇನ್ನು ಮುಂದೆ‌ ಇಂತಹ ಸಮಸ್ಯೆ ಆಗಬಾರದು.ಹೀಗಾಗಿ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಪಕ್ಷಗಳು ಒಗ್ಗೂಡಿ ಹೋರಾಟ ನಡೆಸಬೇಕು. ಅಂದ ಹಾಗೆ ಇದುವರೆಗೆ […]

Continue Reading

ಲಾಭಾಂಶ ನೀಡುವುದಾಗಿ ನಂಬಿಸಿ ನೂರಾರು ಜನರಿಗೆ ಲಕ್ಷಾಂತರ ರೂ. ವಂಚನೆ; ದಂಪತಿಗಳ ಬಂಧನ

ತಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ನೀಡುವುದಾಗಿ ನಂಬಿಸಿ ನೂರಾರು ಜನರಿಗೆ ಲಕ್ಷಾಂತರ ರೂ. ವಂಚಿಸಿದ್ದ ದಂಪತಿಯನ್ನು ದೇವನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಜಾಲದ ಕಿರಣ್ ಕುಮಾರ್‌ ಹಾಗೂ ಆರತಿ ಬಂಧಿತರಾಗಿದ್ದು, ತಪ್ಪಿಸಿಕೊಂಡಿರುವ ಇನ್ನೂ ಕೆಲವು ಆರೋಪಿಗಳ ಪತ್ತೆಗೆ ತನಿಖೆ ಮುಂದುವರೆದಿದೆ. ಚಿಕ್ಕಜಾಲದಲ್ಲಿ ‘ಕಾಳಿಕಾ ಎಂಟರ್ ಪ್ರೈಸಸ್’ ಹೆಸರಿನ ಸಂಸ್ಥೆಯನ್ನು ಸ್ಥಾಪಿಸಿ, ತಮ್ಮ ಕಂಪನಿ ಮೂಲಕ ಮನೆಯಲ್ಲೇ ಕುಳಿತು ಲಕ್ಷ ಲಕ್ಷ ಸಂಪಾದಿಸಬಹುದು ಎಂದು ದಂಪತಿ ಜಾಹೀರಾತು ಪ್ರಕಟಿಸಿದ್ದರು. ಅಲ್ಲದೆ ಈ ಬಗ್ಗೆ ಚಿಕ್ಕಜಾಲ ಹಾಗೂ […]

Continue Reading

ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ತಂದೆ ಸೇರಿದಂತೆ ಏಳು ಮಂದಿಯಿಂದ ನಿರಂತರ ಲೈಂಗಿಕ ದೌರ್ಜನ್ಯ ಪ್ರಕರಣ; ಇಬ್ಬರ ಬಂಧನ

ಹತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳ ಮೇಲೆ ಆಕೆಯ ತಂದೆ ಸೇರಿದಂತೆ ಏಳು ಮಂದಿಯಿಂದ ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣ ಪತ್ತನತಿಟ್ಟ ಎಂಬಲ್ಲಿ ನಡೆದಿದೆ. ಈ ಸಂಬಂಧ ಕೇರಳ ರಾಜ್ಯದ ಪತ್ತನಂತಿಟ್ಟ ಜಿಲ್ಲೆಯಲ್ಲಿ ಏಳು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸಂತ್ರಸ್ತೆ ಬಾಲಕಿಯು ಐದನೇ ತರಗತಿಯಲ್ಲಿದ್ದಾಗಿನಿಂದಲೇ ಈ ದೌರ್ಜನ್ಯಗಳು ಆರಂಭಗೊಂಡಿದ್ದು, ಬಾಲಕಿಯು ತಾನು ಎದುರಿಸುತ್ತಿದ್ದ ನರಕಯಾತನೆಯನ್ನು ಶಾಲೆಯಲ್ಲಿ ತನ್ನ ಸಹಪಾಠಿಗಳೊಂದಿಗೆ ಹಂಚಿಕೊಂಡಾಗ ಈ ಕೃತ್ಯ ಬೆಳಕಿಗೆ ಬಂದಿದೆ. ಇದನ್ನು ತಿಳಿದ […]

Continue Reading

ಲಂಚ ಪ್ರಕರಣ: ಎ.ಸಿ ಕಾವ್ಯಾರಾಣಿ, ಆಪ್ತಸಹಾಯಕ ಶಿವಕುಮಾರ್‌ ಲೋಕಾಯುಕ್ತ ಪೊಲೀಸರ ಬಲೆಗೆ

ಮೈಸೂರು: ಹುಣಸೂರು ಉಪವಿಭಾಗಾಧಿಕಾರಿ ಕಾವ್ಯಾರಾಣಿ ಮತ್ತು ಅವರ ಆಪ್ತಸಹಾಯಕ ಶಿವಕುಮಾರ್‌ ಸೋಮವಾರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಉಪವಿಭಾಗಾಧಿಕಾರಿ ನ್ಯಾಯಾಲಯದಲ್ಲಿ ಒಂದು ವರ್ಷದಿಂದ ಎಚ್.ಡಿ.ಕೋಟೆ ತಾಲ್ಲೂಕಿನ ಸ.ನಂ.17/26ರ 4 ಎಕರೆ 31 ಗುಂಟೆ ಭೂಮಿಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಯುತಿತ್ತು. ಇದಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ನಿವಾಸಿ ಡಾ.ರೂಪಾ ಅವರ ಬಳಿ ಉಪವಿಭಾಗಧಿಕಾರಿ 15 ಲಕ್ಷಕ್ಕೆ ರೂಪಾಯಿ ಬೇಡಿಕೆ ಇಟ್ಟಿದ್ದರು. ತದ ನಂತರ 10.50 ಲಕ್ಷಕ್ಕೆ ಒಪ್ಪಂದವಾಗಿತ್ತು. ಈ ಪೈಕಿ ಮೊದಲ ಕಂತಾಗಿ 5 ಲಕ್ಷ […]

Continue Reading

ರಾಹುಲ್ ಗಾಂಧಿ ಅವರಿಗೆ ಭಿನ್ನರ ಚಿಂತೆ.!, ಸಂಪುಟ ಸರ್ಕಸ್ಸು ಹೇಗಿತ್ತು, ಡಿಕೆಶಿ ಲಕ್ಕು ಚೆನ್ನಾಗಿದೆ. ಬಿಜೆಪಿ ಭಿನ್ನರಿಗೆ ‘ಕಾಕ್ರೋಚ್’ ಅಡ್ಡಿ

✍️. ಆರ್.ಟಿ.ವಿಠ್ಠಲಮೂರ್ತಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಂಪುಟಕ್ಕೆ ಯಾರ್ಯಾರು ಸೇರಬೇಕು ಎಂಬ ವಿಷಯ ರಾಹುಲ್ ಗಾಂಧಿ ಸುಸ್ತಾಗುವಂತೆ ಮಾಡಿದೆಯಂತೆ. ಕಾರಣ? ಡಿ.ಕೆ.ಶಿವಕುಮಾರ್ ಅವರ ಸಂಪುಟದಲ್ಲಿ ಇಪ್ಪತ್ತು ಸ್ಥಾನಗಳು ಖಾಲಿ ಇದ್ದರೆ, ಅದಕ್ಕೆ ಕನಿಷ್ಟ ಎಪ್ಪತ್ತು ಮಂದಿ ಲಗ್ಗೆ ಹಾಕಿದ್ದು. ಹೀಗಾಗಿ ಮೊನ್ನೆ ಸಂಜೆ, ಮಂತ್ರಿ ಮಂಡಲದ ಪಟ್ಟಿ ಒಂದು ರೂಪ ತಳೆಯುವ ಹೊತ್ತಿಗೆ ರಾಹುಲ್ ಗಾಂಧಿ ಸುಸ್ತಾಗಿದ್ದಷ್ಟೇ ಅಲ್ಲ, ಚಿಂತೆಗೂ ಒಳಗಾಗಿದ್ದರಂತೆ. ಅವರ ಈ ಚಿಂತೆಗೆ ಮುಂದೇನು?ಎಂಬ ಪ್ರಶ್ನೆಯೇ ಕಾರಣ. ಯಾಕೆಂದರೆ ಈ ಬಾರಿ ಮಂತ್ರಿಗಿರಿ ಸಿಗದವರು […]

Continue Reading

ಕಾವೇರಿ ವಿವಾದ: ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿರುವ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು (ಆಗಸ್ಟ್ 2): ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿರುವ ನಿರ್ದೇಶನದ ಹಿನ್ನೆಲೆಯಲ್ಲಿ, ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯದ ಕಾನೂನು ಮತ್ತು ರಾಜಕೀಯ ಕಾರ್ಯತಂತ್ರವನ್ನು ರೂಪಿಸಲು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭಾನುವಾರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವಿಷಯದಲ್ಲಿ ಕರ್ನಾಟಕದ ನಿಲುವಿನ ಕುರಿತು ಚರ್ಚಿಸಲು ನಡೆಯಲಿರುವ ಈ ಸಭೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ […]

Continue Reading

ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚು

ಅಸುರಕ್ಷಿತ ನಡೆನುಡಿಗೆ ಒಳಗಾಗಿ 22 ವರ್ಷ ಒಳಗಿನ ಯುವ ಜನತೆ ಎಚ್‌ಐವಿ ಬಲೆಗೆ ಬೀಳುತ್ತಿದ್ದಾರೆ ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚಾಗುತ್ತಿರುವ ಆತಂಕಕಾರಿ ಸಂಗತಿಯೊಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಿಂದ ಬೆಳಕಿಗೆ ಬಂದಿದೆ. ರಾಜ್ಯದ ಯುವಜನತೆಯಲ್ಲಿ ಹೆಚ್‌ಐವಿ ಸೋಂಕು ದಿನೇ ದಿನೇ ಆತಂಕಕಾರಿ ರೀತಿಯಲ್ಲಿ ಹೆಚ್ಚಾಗುತ್ತಿದ್ದು, ಇದನ್ನು ಆರಂಭಿಕ ಹಂತದಲ್ಲೇ ತಡೆಯಲು ರಾಜ್ಯ ಸರ್ಕಾರಿ ನಿರ್ಧಾರಿಸಿದೆ. ದೇಶದಲ್ಲೇ ಮೊದಲ ಬಾರಿಗೆ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆಯನ್ನು ಕಡ್ಡಾಯಗೊಳಿಸಲು ಆರೋಗ್ಯ ಇಲಾಖೆ […]

Continue Reading

ಗೃಹಜ್ಯೋತಿ ಯೋಜನೆ: ಜುಲೈ 31 ಅಂತಿಮ ಗಡುವಲ್ಲ; ಆಗಸ್ಟ್ 31 ವರೆಗೆ ಅವಕಾಶ

ಪಂಚ ಗ್ಯಾರಂಟಿಗಳಲ್ಲಿ ಒಂದಾದ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಪುನರ್ ಪರಿಶೀಲನೆ ಪ್ರಕ್ರಿಯೆ ರಾಜ್ಯಾದ್ಯಂತ ಚುರುಕಿನಿಂದ ಸಾಗಿದೆ. ಈ ನಡುವೆ, ಪರಿಶೀಲನೆಗೆ ಜುಲೈ 31 ಕೊನೆಯ ದಿನಾಂಕ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿತ್ತು. ಆದರೆ, ಈ ವದಂತಿಗಳಿಗೆ ತೆರೆ ಎಳೆದಿರುವ ಬೆಸ್ಕಾಂ ಹಿರಿಯ ಅಧಿಕಾರಿಗಳು, ಜುಲೈ 31 ಅಂತಿಮ ಗಡುವಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿ ಮನೆಗೆ ತೆರಳುತ್ತಿರುವ ಮೀಟರ್ ರೀಡರ್ ಹಾಗೂ ಲೈನ್ ಮ್ಯಾನ್‌ಗಳು ಪ್ರಸ್ತುತ ವಾಸವಿರುವವರ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಯೋಜನೆಯು ಅರ್ಹರಿಗೆ […]

Continue Reading

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ: ರಾಜ್ಯದಲ್ಲಿ ಬರೋಬ್ಬರಿ 84 ಲಕ್ಷಕ್ಕೂ ಅಧಿಕ ದೋಷಪೂರಿತ ಮತದಾರರು ಪತ್ತೆ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಭರದಿಂದ ಸಾಗಿದ್ದು, ರಾಜ್ಯದಲ್ಲಿ ಬರೋಬ್ಬರಿ 84 ಲಕ್ಷಕ್ಕೂ ಅಧಿಕ ದೋಷಪೂರಿತ ಮತದಾರರು ಪತ್ತೆಯಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್, ಪರಿಶೀಲನೆ ವೇಳೆ ರಾಜ್ಯಾದ್ಯಂತ ಗೈರಾದ, ಸ್ಥಳಾಂತರಗೊಂಡ, ಮೃತಪಟ್ಟ, ನಕಲಿ ಮತ್ತು ಇತರೆ ವರ್ಗಕ್ಕೆ ಸೇರಿದ ಒಟ್ಟು 84,31,612 ಮತದಾರರನ್ನು ಪತ್ತೆಹಚ್ಚಲಾಗಿದೆ ಎಂದು ಅಂಕಿ-ಅಂಶಗಳ ವಿವರ ನೀಡಿದ್ದಾರೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 5,54,32,314 ಎನ್ಯುಮರೇಷನ್ ಅರ್ಜಿಗಳನ್ನು ವಿತರಿಸಲಾಗಿದ್ದು, ಈ ಪೈಕಿ 4,26,75,861 ಫಾರಂಗಳು ಯಶಸ್ವಿಯಾಗಿ ಡಿಜಿಟಲೀಕರಣಗೊಂಡಿವೆ. […]

Continue Reading