ಅನಿವಾಸಿ ಕನ್ನಡಿಗರಿಗೊಂದು ಸಚಿವಾಲಯ; ಸೂಟು-ಬೂಟು ಕಾಕಾಗಳ ಆರತಿ ಮಂತ್ರ.!

ಸಾಮಾನ್ಯ ಕನ್ನಡಿಗರ ಸಂಕಷ್ಟಕ್ಕೆ ಮಿಡಿಯುವ ಸಚಿವಾಲಯ ರಚನೆಯಾಗಲಿ ಕಾರ್ಮಿಕರ ಬೆವರಿನ ಮೂಲಕವೇ ಕೋಟ್ಯಾಧಿಪತಿಗಳಾದ ಕೆಲವು ಅನಿವಾಸಿ ಉದ್ಯಮಿಗಳು ಸೂಟು ಬೂಟು ಧರಿಸಿ ಅನಿವಾಸಿ ಕನ್ನಡಿಗರಿಗೆ ಹೊಸ ಸಚಿವಾಲದ ಬೇಡಿಕೆಗಳನ್ನು ಇಟ್ಟಿದ್ದು, ಸಚಿವಾಲಯಕ್ಕೆ ಆರತಿ ಮಾಡಿ, ಗೂಟದ ಕಾರು ಕೊಡಿಸಲು ಪ್ರಯತ್ನ ಪಡುತ್ತಿದ್ದಾರೆ. ಅನಿವಾಸಿ ಕನ್ನಡಿಗರಿಗೆ ಸಚಿವಾಲಯ ಖಂಡಿತ ಬೇಕು. ಅದಕ್ಕೆ ಆರತಿ ಬೇಕೇ.? ಎಂಬುದೇ ಈಗಿನ ಪ್ರಶ್ನೆ. ದೀರ್ಘ ಕಾಲ ಅನಿವಾಸಿ ಕನ್ನಡಿಗರ ಉಸ್ತುವಾರಿಯಾಗಿ ಬಡ ಹಾಗೂ ಮಧ್ಯಮ ವರ್ಗದ ಅನಿವಾಸಿಗಳ ಉದ್ಧಾರಕ್ಕಾಗಿ ಏನು ಕೆಲಸ ಮಾಡಿದ್ದಾರೆ. […]

Continue Reading

ಅಲ್ರೀ, ಬಿಕೆ-ಪಿಕೆ ಚಿಂತೆ ನಿಮಗೇಕ್ರೀ.?, ಆಪರೇಷನ್ ವಿಜಯೇಂದ್ರ ಮುಂದಕ್ಕೆ?

ಧನ್ಯವಾದ ಹೇಳಿದ್ರು ಕುಮಾರದ್ವಾಮಿ.?, ಡಿಕೆ ಮುಂದಿದೆ ರಿಯಲ್ ಸವಾಲು ✍️. ಆರ್.ಟಿ.ವಿಠ್ಢಲಮೂರ್ತಿ ಕಳೆದ ವಾರ ಬಿಜೆಪಿಯ ಪ್ರಮುಖರನ್ನು ಕರೆಸಿಕೊಂಡಿದ್ದ ರಾಜ್ಯದ ಆರೆಸ್ಸೆಸ್ ನಾಯಕರು ಹಲವು ವಿಷಯಗಳ ಬಗ್ಗೆ ಆಕ್ಷೇಪ ಎತ್ತಿದ್ದಾರೆ. ಈ ಪೈಕಿ ಮುಖ್ಯವಾದುದು ಬಿಕೆ-ಪಿಕೆ ಚಿಂತೆ ನಿಮಗೇಕೆ.? ಎಂಬುದು. ಇದೇ ರೀತಿ ಅವರು ಆಕ್ಷೇಪ ವ್ಯಕ್ತಪಡಿಸಿದ ಎರಡನೇ ಸಂಗತಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ್ದು.ಅಂದ ಹಾಗೆ ಆರೆಸ್ಸೆಸ್ ನಾಯಕರ ಆಕ್ಷೇಪಕ್ಕೆ ಕಾರಣವಾದ ಮೊದಲ ವಿಷಯವಿದೆಯಲ್ಲ? ಆ್ಯಕ್ಚುವಲಿ, ಈ ವಿಷಯದ ಬಗ್ಗೆ ಬಿಜೆಪಿಯ ರಾಜ್ಯ ನಾಯಕರು […]

Continue Reading

ಸ್ವಪಕ್ಷೀಯರಿಂದಲೇ ವಿರೋಧ; ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಬೆಂಗಳೂರಿಗೆ ಒಳ್ಳೆಯದಾಗುತ್ತದೆ ಎಂದರೆ ವಿರೋಧ ಕಟ್ಟಿಕೊಳ್ಳಲು ಸಿದ್ಧ: ಕೃಷ್ಣ ಬೈರೇಗೌಡ

ಪಾದಚಾರಿ ಮಾರ್ಗಗಳ ಮೇಲೆ ಬೆಳೆದು ನಿಂತಿರುವ ಅಕ್ರಮ ಕಟ್ಟಡಗಳು ಮತ್ತು ಒತ್ತುವರಿಗಳನ್ನು ತೆರವುಗೊಳಿಸಲು ರಾಜ್ಯ ಸರ್ಕಾರ ಭರ್ಜರಿ ಕಾರ್ಯಾಚರಣೆಗೆ ಇಳಿದಿದೆ. ಈ ಪ್ರಕ್ರಿಯೆಯಲ್ಲಿ ರಾಜಕೀಯ ಒತ್ತಡಗಳು ಮತ್ತು ಸ್ವಪಕ್ಷೀಯರಿಂದಲೇ ವಿರೋಧಗಳು ವ್ಯಕ್ತವಾಗುತ್ತಿದ್ದರೂ ಸಹ, ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ತಮ್ಮ ನಿಲುವಿನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಖಡಕ್ಕಾಗಿ ತಿಳಿಸಿದ್ದಾರೆ. ಜಿಬಿಎ ಕೇಂದ್ರ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ನಗರದ ಸುಧಾರಣೆಗಾಗಿ ನಾನು ಎಷ್ಟೇ ನಿಷ್ಠುರವಾದಿಯಾಗಲು ಸಿದ್ಧ ಎಂದು ಘೋಷಿಸಿದರು. ಫುಟ್ಪಾತ್ ತೆರವು […]

Continue Reading

ಮಕ್ಕಳು ಶಾಲಾ ಬಸ್ ಹತ್ತಿದ ಮೇಲೆ ಮನೆ ತಲುಪುವವರೆಗೂ ಶಾಲೆಯೇ ಹೊಣೆ. ಶಾಲಾ ಬಸ್ಸಿನಲ್ಲಿ ಮಕ್ಕಳ ಸುರಕ್ಷತೆ ಎನ್ನುವುದು ದಾಕ್ಷಿಣ್ಯ ವಿಷಯವಲ್ಲ: ಹೈಕೋರ್ಟ್

ಶಾಲಾ ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಅತ್ಯಂತ ಮಹತ್ವದ ತೀರ್ಪೊಂದನ್ನು ನೀಡಿದೆ. ಶಾಲಾ ಬಸ್ ಕೇವಲ ಶಾಲಾ ಆವರಣದಲ್ಲಿದ್ದಾಗ ಮಾತ್ರವಲ್ಲ, ಮಗು ಬಸ್ ಹತ್ತಿದಾಗಿನಿಂದ ಹಿಡಿದು ಸಂಜೆ ಸುರಕ್ಷಿತವಾಗಿ ಪೋಷಕರ ಕೈ ಸೇರುವವರೆಗೂ ಮಗುವಿನ ಸಂಪೂರ್ಣ ರಕ್ಷಣೆಯ ಜವಾಬ್ದಾರಿ ಶಾಲಾ ಆಡಳಿತ ಮಂಡಳಿಯದ್ದೇ ಆಗಿರುತ್ತದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಶಾಲಾ ಬಸ್‌ನಲ್ಲಿ ನಡೆದ ಅಪಘಾತವೊಂದರಲ್ಲಿ ನಾಲ್ಕನೇ ತರಗತಿಯ ವಿದ್ಯಾರ್ಥಿ ಕಣ್ಣು ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಖಾಸಗಿ ಶಾಲೆಯೊಂದರ ಆಡಳಿತ ಮಂಡಳಿ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು […]

Continue Reading

ರಾಜ್ಯದಲ್ಲಿ ಅರ್ಹ ವ್ಯಕ್ತಿಗಳಿಗೆ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಿಸಿರುವ ಸಂಬಂಧ ಕಂದಾಯ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಅರ್ಹ ವ್ಯಕ್ತಿಗಳಿಗೆ ಕರ್ನಾಟಕ ಶಾಶ್ವತ ವಾಸಸ್ಥಳ ಪ್ರಮಾಣಪತ್ರ ವಿತರಿಸಿರುವ ಸಂಬಂಧ ಪ್ರತ್ಯೇಕ ಮಾರ್ಗಸೂಚಿ ಹಾಗೂ ನಿರ್ವಹಣಾ ಚೌಕಟ್ಟು ಪ್ರಕಟಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ಜಿಲ್ಲಾಧಿಕಾರಿಯಿಂದ ಅಧಿಕೃತಗೊಳಿಸಲಾದ ಉಪ ತಹಸಿಲ್ದಾರ್‌ ಅಥವಾ ತಹಸೀಲ್ದಾರ್‌, ಇತರೆ ಯಾವುದೇ ಅಧಿಕಾರಿಯನ್ನು ಶಾಶ್ವತ ನಿವಾಸ ಪ್ರಮಾಣಪತ್ರ ಹಾಗೂ ಡೊಮಿಸೈಲ್‌ ಪ್ರಮಾಣ ಪತ್ರ ನೀಡುವ ಪ್ರಾಧಿಕಾರವನ್ನಾಗಿ ನಿಯೋಜಿಸಲಾಗಿದೆ. ಸಹಾಯಕ ಆಯುಕ್ತರಿಗೆ ಮೇಲ್ಮನವಿ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿ-ಪುನರ್‌ ಪರಿಶೀಲನಾ ಪ್ರಾಧಿಕಾರ ಆಗಿ ವ್ಯವಹರಿಸಲಿದ್ದಾರೆ. ಪ್ರಮಾಣಪತ್ರ ನೀಡುವ ಪ್ರಾಧಿಕಾರವು ಅಗತ್ಯ ವಿಚಾರಣೆ ಹಾಗೂ ಪರಿಶೀಲನೆ […]

Continue Reading

ಜುಲಾಯಿ ಒಂದರಿಂದ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯ

2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆಗಳಲ್ಲೊಂದಾದ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ-ಮನೆ ಪರಿಶೀಲನೆ ಕಾರ್ಯವನ್ನು ಎಲ್ಲಾ ಎಸ್ಕಾಂಗಳ ಸಿಬ್ಬಂದಿಗಳು ಜುಲಾಯಿ ಒಂದರಿಂದ ಕೈಗೊಳ್ಳಲಿದ್ದಾರೆ. 2023ರ ಜುಲೈ ತಿಂಗಳಲ್ಲಿ ಜಾರಿಗೆ ಬಂದಿರುವ ಗೃಹ ಜ್ಯೋತಿ ಯೋಜನೆಯ ಪುನರ್ ಪರಿಶೀಲನಾ ಕಾರ್ಯ ನಡೆಯಲಿದ್ದು, ಎಸ್ಕಾಂಗಳ ಮೀಟರ್ ರೀಡರ್ ಗಳು ಹಾಗೂ ಎಸ್ಕಾಂ ಸಿಬ್ಬಂದಿಗಳು ಪ್ರತಿ ಗ್ರಾಹಕರ ಮನೆಗಳಿಗೆ ಭೇಟಿ ನೀಡಿ, ಫಲಾನುಭವಿಗಳ ದಾಖಲೆ ಪರಿಶೀಲನೆ […]

Continue Reading

ಜುಲೈ ಹತ್ತಕ್ಕೆ ಪುಲ್ ಆಗಲಿದೆ ಡಿಕೆ ಫ್ಲೈಟು; ಬಿಜೆಪಿಯಲ್ಲಿ ಸಡನ್ ಆಪರೇಷನ್.?, ಡಿಕೆ ಲಿಂಗಾಯತ ಲೀಡರ್ ಆಗ್ತಾರಾ.?

“ಖುದಾ ಕೀ ಕಸಂ, ನಾನು ನಿಮಗೆ ದ್ರೋಹ ಬಗೆದಿಲ್ಲ’ ಜಮೀರ್ ಅಹ್ಮದ್ ಕನ್ವಿನ್ಸು ✍️. ಆರ್.ಟಿ.ವಿಠ್ಠಲಮೂರ್ತಿ ಜುಲೈ ಹತ್ತರ ಹೊತ್ತಿಗೆ ರಾಜ್ಯ ಸಚಿವ ಸಂಪುಟ ವಿಸ್ರರಣೆಯಾಗಲಿದೆ. ಆ ಮೂಲಕ ಟೇಕಾಫ್ ಆಗಿರುವ ಡಿಕೆ-26 ಫ್ಲೈಟು ಫುಲ್ಲಾಗಲಿದೆ. ಅಂದ ಹಾಗೆ ಜುಲೈ ಮಧ್ಯ ಭಾಗದಲ್ಲಿ ವಿಧಾನಮಂಡಲ ಅಧಿವೇಶನ ನಡೆಸುವ ಲೆಕ್ಕಾಚಾರ ಸಿಎಂ ಡಿ.ಕೆ.ಶಿವಕುಮಾರ್ ಅವರಲ್ಲಿದ್ದು, ಈ ವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಧಿವೇಶನದ ಡೇಟು ಫಿಕ್ಸಾಗಲಿದೆ. ಹೀಗೆ ಅಧಿವೇಶನದ ಡೇಟು ಫಿಕ್ಸಾದ ನಂತರ ಲಿಮಿಟೆಡ್ ಸಂಪುಟದೊಂದಿಗೆ ಅಧಿವೇಶನ […]

Continue Reading

ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆ; ಅಕ್ಷೇಪಾರ್ಹ ಕಮೆಂಟ್ಸ್, ಆರೋಪಿಯ ಬಂಧನ .

ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದ್ದ ಪೋಸ್ಟ್ ಒಂದಕ್ಕೆ, ‘ಸನಾತನಿ ಸಿಂಹ’ ಎಂಬ ಪೇಸ್‌ಬುಕ್‌ ಪೇಜ್‌ ಮೂಲಕ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಆಕ್ಷೇಪಾರ್ಹ ಕಮೇಂಟ್ ಮಾಡಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದಿನಾಂಕ:18-09-2025 ರಂದು ಅ.ಕ್ರ.ಸಂ:131/2025ರಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಿದ ವಿಟ್ಲ ಠಾಣಾ ಪೊಲೀಸರು ಬೆಂಗಳೂರು ವಿದ್ಯಮಾನ್ಯ ನಗರದ ನಿವಾಸಿ, ಆನಂದ.ಎ ಎಂಬಾತನನ್ನು ದಿನಾಂಕ: 27/06/2026 ರಂದು ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ. ಆರೋಪಿ ಆನಂದ ಎಂಬಾತನ ವಿರುದ್ದ ಈ ಹಿಂದೆ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಸುದ್ದಿ ಪ್ರಸಾರ […]

Continue Reading

ರಾಜ್ಯ ವಕೀಲರ ಪರಿಷತ್ತಿಗೆ AILU ಅಭ್ಯರ್ಥಿ ಬಸವರಾಜ್ ವಿ. ಕೋರಿಮಠ ಆಯ್ಕೆ

ಬಸವರಾಜ್ ವಿ.ಕೋರಿಮಠ ರವರ ಗೆಲುವು ನ್ಯಾಯಕ್ಕೆ ಸಂದ ಗೌರವ: ಅಖಿಲ ಭಾರತ ವಕೀಲರ ಒಕ್ಕೂಟ, ದ.ಕ.ಜಿಲ್ಲಾ ಘಟಕ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ 2026ರ ಚುನಾವಣೆಯಲ್ಲಿ ಅಖಿಲ ಭಾರತ ವಕೀಲರ ಒಕ್ಕೂಟದ ರಾಜ್ಯ ಮುಖಂಡರಾದ ಹುಬ್ಬಳ್ಳಿಯ ಬಸವರಾಜ್ ವಿ.ಕೋರಿಮಠ ಗೆಲುವು ಸಾಧಿಸಿದ್ದು, ಅಖಿಲ ಭಾರತ ವಕೀಲರ ಒಕ್ಕೂಟ, ದ.ಕ ಜಿಲ್ಲಾ ಸಮಿತಿ ಅಭಿನಂದನೆಗಳನ್ನು ಸಲ್ಲಿಸಿದೆ. ಹುಬ್ಬಳ್ಳಿಯಲ್ಲಿ ವಕೀಲ ವೃತ್ತಿ ನಡೆಸುತ್ತಿರುವ ಬಸವರಾಜ್ ವಿ. ಕೋರಿಮಠರವರು AILU ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡು, ಸಿವಿಲ್ ನ್ಯಾಯಾಧೀಶರ ಹುದ್ದೆಯ ಆಕಾಂಕ್ಷಿಗಳಿಗೆ ಹಾಗೂ […]

Continue Reading

ರಾಜ್ಯದಲ್ಲಿ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ; ಸರ್ಕಾರ ಮಾರ್ಗಸೂಚಿ ಪ್ರಕಟ

ಮೇ 31, 2026ರ ಒಳಗಾಗಿ ನಿರ್ಮಾಣ ಪೂರ್ಣಗೊಂಡಿರುವ ವಸತಿ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ಸಾಮಾನ್ಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇಂಧನ ಇಲಾಖೆಯ ಅಪರ ಕಾರ್ಯದರ್ಶಿ ಈ ಕುರಿತು ರಾಜ್ಯದ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪಾಲಿಸಬೇಕಾದ ಕಾರ್ಯವಿಧಾನಗಳ ಆದೇಶವನ್ನು ರವಾನಿಸಿದ್ದಾರೆ. ಮೇ 31, 2026ರ ಒಳಗಾಗಿ ನಿರ್ಮಾಣ ಪೂರ್ಣಗೊಂಡು, ಈಗಾಗಲೇ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿರುವ ವಸತಿ ಕಟ್ಟಡಗಳ ವಿವರಗಳನ್ನು ವಿದ್ಯುತ್ ಇಲಾಖೆ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು. ವಿದ್ಯುತ್ […]

Continue Reading