ರಾಜ್ಯಾದ್ಯಂತ ಡಿಸೆಂಬರ್ 10 ರಿಂದ 12 ರ ವರೆಗೆ ಮೂರು ದಿನಗಳ ಶೋಕಾಚರಣೆ; ಮೂಡಬಿದ್ರೆಯ ಆಳ್ವಾಸ್ ವಿರಾಸತ್ ಗೆ ಅನ್ವಯವಲ್ಲವೇ.?

ಶೇಖರ್ ಲಾಯಿಲ ಸಾಮಾಜಿಕ ಹೋರಾಟಗಾರ ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ, ರಾಜ್ಯಪಾಲರಾಗಿ ಜನಾನುರಾಗಿದ್ದ ಎಸ್. ಎಂ ಕೃಷ್ಣರವರು ನಿಧನರಾಗಿದ್ದು, ಮೃತರ ಗೌರವಾರ್ಥ ಕರ್ನಾಟಕ ರಾಜ್ಯ ಸರ್ಕಾರ ಇಡೀ ರಾಜ್ಯಾದ್ಯಂತ ಡಿಸೆಂಬರ್ 10 ರಿಂದ 12 ರ ವರೆಗೆ ಮೂರು ದಿನಗಳ ಶೋಕಾಚರಣೆ ಘೋಷಿಸಿದೆ. ಈ ಸಂದರ್ಭದಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ಆದರೆ ಮೂಡಬಿದಿರೆಯ ಮೋಹನ್ ಆಳ್ವರ ನೇತೃತ್ವದ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಆಳ್ವಾಸ್ ವಿರಾಸತ್ ಎಂಬ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆಳ್ವಾಸ್ […]

Continue Reading

ರಾಜ್ಯದಲ್ಲಿ ಕಳೆದ 6 ವರ್ಷಗಳಲ್ಲಿ ಒಟ್ಟೂ 3364 ಬಾಣಂತಿಯರ ಸಾವು

ಮುಖ್ಯಮಂತ್ರಿ ಕಚೇರಿಯಿಂದಲೇ ಅಧಿಕೃತ ಅಂಕಿ ಅಂಶ ಬಿಡುಗಡೆ ರಾಜ್ಯದಲ್ಲಿ ಆರು ವರ್ಷಗಳಲ್ಲಿ ಒಟ್ಟೂ 3364 ಬಾಣಂತಿಯರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಬಾಣಂತಿಯರು ಹಾಗೂ ಶಿಶು ಮರಣ ಪ್ರಮಾಣ ವಿಚಾರವಾಗಿ ವಿರೋಧ ಪಕ್ಷಗಳ ಆರೋಪದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ. ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಕಚೇರಿಯಿಂದ ಬಾಣಂತಿಯರ ಸಾವಿನ ಬಗ್ಗೆ ಅಂಕಿ- ಅಂಶಗಳನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಬಾಣಂತಿಯರ ಸಾವಿನ ಪ್ರಮಾಣದಲ್ಲಿ ಹೆಚ್ಚಳ ಆಗುತ್ತಿದೆ […]

Continue Reading

ಬಿಜೆಪಿ ಬೆಕ್ಕಿಗೆ ಗಂಟೆ ಕಟ್ಟುವುದು ಹೇಗೆ.?ಯಡಿಯೂರಪ್ಪ ಕುದಿಯುತ್ತಿರುವುದು ಏಕೆ.?

ಸೋಮಣ್ಣ ಹೆಸರು ರೇಸಿಗೆ ಬಂದಿದೆ. ಬಿಜೆಪಿ ವರಿಷ್ಟರಿಗೆ ಡಿಕೆಶಿ ಸಂದೇಶ ಕಳೆದ ವಾರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರನ್ನು ರಾಜ್ಯ ಬಿಜೆಪಿಯ ನಾಯಕರೊಬ್ಬರು ಭೇಟಿಯಾಗಿದ್ದಾರೆ. ಈ ಸಂದರ್ಭದಲ್ಲಿ ಯತ್ನಾಳ್ ವರ್ಸಸ್ ವಿಜಯೇಂದ್ರ ನಡುವಣ ಬಿಕ್ಕಟ್ಟಿನ ಬಗ್ಗೆ ಅವರು ಪ್ರಾಕ್ಟಿಕಲ್ ವರದಿ ನೀಡಿದರಂತೆ.ಅಂದ ಹಾಗೆ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿರುವ ವಿಜಯೇಂದ್ರ ಮತ್ತು ಯತ್ನಾಳ್ ಗ್ಯಾಂಗಿನ ಸಂಘರ್ಷದ ಬಗ್ಗೆ ನಡ್ಡಾ ಅವರಿಗೆ ಗೊತ್ತಿಲ್ಲ ಅಂತೇನಲ್ಲ. ಆದರೆ ಏನೇ ಮಾಡಿದರೂ ವಿಜಯೇಂದ್ರ ವರ್ಸಸ್ ಯತ್ನಾಳ್ ಗ್ಯಾಂಗಿನ ಮಧ್ಯೆ […]

Continue Reading

ಕರ್ನಾಟಕದ ಮಾಜಿ ಸಿ.ಎಂ ಎಸ್ ಎಂ ಕೃಷ್ಣ ಇನ್ನಿಲ್ಲ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಮಂಗಳವಾರ ಮುಂಜಾನೆ ಅವರ ನಿವಾಸದಲ್ಲಿ ನಿಧನರಾದರು ಎಂದು ಅವರ ಕುಟುಂಬ ತಿಳಿಸಿದೆ. 92 ವರ್ಷದ ಹಿರಿಯ ರಾಜಕಾರಣಿ ಸ್ವಲ್ಪ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಅವರು ಮುಂಜಾನೆ 2:45 ಕ್ಕೆ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಪಾರ್ಥಿವ ಶರೀರವನ್ನು ಇಂದು ಮದ್ದೂರಿಗೆ ಕೊಂಡೊಯ್ಯುವ ಸಾಧ್ಯತೆಯಿದೆ” ಎಂದು ಮೂಲಗಳು ತಿಳಿಸಿವೆ.

Continue Reading

ಸಿಸಿಬಿ ಪೊಲೀಸರಿಂದ 3,500 ಕೊರಿಯರ್‌ಗಳ ಪರಿಶೀಲನೆ, 606 ಕೊರಿಯರ್‌ಗಳಲ್ಲಿ ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆ.

ಹೊಸ ವರ್ಷದ ಹಿನ್ನೆಲೆಯಲ್ಲಿ ಮಾದಕ ವಸ್ತುಗಳ ಬಗ್ಗೆ ಸಾಕಷ್ಟು ವಿಷಯಗಳು ಹೊರ ಬರುತ್ತಿದ್ದು, ಆಶ್ಚರ್ಯ ಹಾಗೂ ಆತಂಕ ಎರಡೂ ವ್ಯಕ್ತವಾಗುತ್ತಿವೆ. ಬೆಂಗಳೂರು ಸಿಸಿಬಿ ಪೊಲೀಸರು ಕಳೆದ ಅಕ್ಟೋಬರ್ ತಿಂಗಳಲ್ಲಿ ಚಾಮರಾಜಪೇಟೆಯ ಫಾರಿನ್ ಪೋಸ್ಟ್ ಆಫೀಸ್ ಮೇಲೆ ದಾಳಿ ಮಾಡಿದ್ದರು. ದಾಳಿ ವೇಳೆ ಅನುಮಾನಾಸ್ಪದ 3,500 ಕೊರಿಯರ್‌ಗಳನ್ನು ಪರಿಶೀಲಿಸಿದ ವೇಳೆ 606 ಕೊರಿಯರ್‌ಗಳಲ್ಲಿ ಬರೋಬ್ಬರಿ 21 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಈ ಪ್ರಕರಣ ಬೆನ್ನಟ್ಟಿದ್ದ ಪೊಲೀಸರಿಗೆ ಮಾತ್ರ ಶಾಕ್ ಮೇಲೆ ಶಾಕ್ ಎದುರಾಗುತ್ತಿದೆ. ಈ ಕೊರಿಯರ್ […]

Continue Reading

ಬಿಜೆಪಿಯಲ್ಲಿ ಉನ್ನತ ಹುದ್ದೆಗಳು ಬಿಕರಿ; ವಿವಾದಿತ ಆಡಿಯೋ ಸೃಷ್ಟಿಸಿದ ಸಂಚಲನ, ಆಡಿಯೋ ವೈರಲ್ ಬಗ್ಗೆ ಪತ್ರಕರ್ತನಿಗೆ ಆರೆಸ್ಸೆಸ್ ನಾಯಕನಿಂದ ಬೆದರಿಕೆ; ಪೊಲೀಸ್ ಆಯುಕ್ತರಿಗೆ ದೂರು

ಬೆಂಗಳೂರು: ಬಿಜೆಪಿಯಲ್ಲಿ ಹುದ್ದೆ ಗಿಟ್ಟಿಸಿಕೊಳ್ಳಲು ಆರೆಸ್ಸೆಸ್ ನಾಯಕರಿಂದ ಭಾರೀ ಮೊತ್ತದ ವಸೂಲಿ ನಡೆದಿದೆ ಎಂಬ ಆಡಿಯೋ ವೈರಲ್ ವಿಚಾರದಲ್ಲಿ ಪತ್ರಕರ್ತರಿಗೆ ಬೆದರಿಕೆ ಹಾಕಿರುವ ಪ್ರಕರಣ ಇದೀಗ ಪೊಲೀಸ್ ಆಯುಕ್ತರ ಕಚೇರಿ ಮೆಟ್ಟಿಲೇರಿದೆ. ಪತ್ರಕರ್ತನಿಗೆ RSS ಧುರೀಣನ ಹೆಸರಲ್ಲಿ ಬೆದರಿಕೆ ಒಡ್ಡಲಾಗಿದೆ ಎಂಬ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಶುಕ್ರವಾರ (ಡಿ.6) ದೂರು ಸಲ್ಲಿಕೆಯಾಗಿದೆ. ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದಕ್ಷಿಣ ಪ್ರಾಂತ ಸಹಕಾರ್ಯವಾಹ ಪಿ.ಎಸ್.ಪ್ರಕಾಶ್ ಅವರು ತಮಗೆ ನಿರಂತರ ಕರೆ ಮಾಡಿ ಬೆದರಿಕೆ ಒಡ್ಡಿದ್ದಾರೆ ಎಂದು […]

Continue Reading

ಮಣಿಪಾಲ: ಬಿಯರ್ ಬಾಟಲಿಯಿಂದ ಇರಿದು ಹೊಟೇಲ್ ಕಾರ್ಮಿಕನ ಕೊಲೆ..!

ಮಣಿಪಾಲ: ಲಕ್ಷ್ಮೀಂದ್ರನಗರದ ಬಳಿಯ ಮುಖ್ಯ ರಸ್ತೆಯ ಅನಂತ ಕಲ್ಯಾಣ ಮಾರ್ಗದಲ್ಲಿ ಹೊಟೇಲ್ ಕಾರ್ಮಿಕನನ್ನು ಬಿಯರ್ ಬಾಟಲಿಯಿಂದ ಇರಿದು ಹತ್ಯೆಗೈದ ಘಟನೆ ಡಿ. 6 ರಂದು ಶುಕ್ರವಾರ ನಡೆದಿದೆ. ಕೊಲೆಯಾದ ಹೋಟೆಲ್ ಕಾರ್ಮಿಕನನ್ನು ಕೇರಳದ ಕಾಸರಗೋಡು ನಿವಾಸಿ ಶ್ರೀಧರ ನಾಯಕ್ (38) ಎಂದು ಗುರುತಿಸಲಾಗಿದೆ. ಈತ ಮಣಿಪಾಲ ಈಶ್ವರನಗರದ ಹೊಟೇಲ್ ಒಂದರ ಕುಕ್ ಎಂದು ತಿಳಿದುಬಂದಿದೆ. ಬೆಳಿಗ್ಗೆ 6ಗಂಟೆ ಸುಮಾರಿಗೆ ಮೂರರಿಂದ ನಾಲ್ಕು ಮಂದಿಯ ತಂಡ ಹೊಡೆದಾಟ ನಡೆಸುತ್ತಿದ್ದರು. ಗಲಾಟೆ ವಿಕೋಪಕ್ಕೆ ತಿರುಗಿದಾಗ ಶ್ರೀಧರ್ ಅವರ ಕುತ್ತಿಗೆಗೆ ಬಿಯರ್ […]

Continue Reading

ಉಪಚುನಾವಣೆಯಲ್ಲಿ ಕೈ ಹಿಡಿದ ಮುಸ್ಲಿಂ ಸಮುದಾಯಕ್ಕೆ ಸಿಗುತ್ತಾ ಮಂತ್ರಿ ಭಾಗ್ಯ.?

ಕ್ಯೂ ನಲ್ಲಿದ್ದಾರೆ ಆಸೀಫ್ ಸೇಠ್..ಕೈ ಹಿಡಿಯುತ್ತಾ.? ಕೈ ಕೊಡುತ್ತಾ.? ವಿಧಾನಸಭಾ ಚುನಾವಣೆಯಲ್ಲಿ ಸಂಪೂರ್ಣವಾಗಿ ಕಾಂಗ್ರೆಸ್ ಕೈ ಹಿಡಿದ ಮುಸ್ಲಿಂ ಸಮುದಾಯ, ಮೊನ್ನೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಮುಸ್ಲಿಂ ಸಮುದಾಯ ಸಂಪೂರ್ಣ ಕೈ ಜೋಡಿಸಿತ್ತು. ರಾಜ್ಯದಲ್ಲಿ ಕಾಂಗ್ರೆಸ್ ನಿಂದ ಒಂಭತ್ತು ಮುಸ್ಲಿಂ ಶಾಸಕರು ಆಯ್ಕೆಯಾದರೂ,ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಜೋಡೆತ್ತಿನ ಸರ್ಕಾರದಲ್ಲಿ ಈಗಾಗಲೇ ಮುಸ್ಲಿಂ ಸಮುದಾಯದ ಇಬ್ಬರಿಗೆ ಕ್ಯಾಬಿನೆಟ್ ಸ್ಥಾನ ನೀಡಲಾಗಿದೆ. ಬೇರೆ ಸಮುದಾಯಕ್ಕೆ ಮಂತ್ರಿ ಪಟ್ಟ ನೀಡಿದ ಪ್ರಾತಿನಿಧ್ಯಕ್ಕೆ ಹೋಲಿಸಿದರೆ […]

Continue Reading

ಕೆಪಿಸಿಸಿ ಪಟ್ಟ ಯಾರಿಗೂ ಬೇಕಿಲ್ಲ.

ಸುರ್ಜೇವಾಲ ಬಗ್ಗೆ ಅನುಮಾನ ಯಾಕೆ.? ಸುರ್ಜೇವಾಲ ಮೂಲಕ ಆಟವಾಡಿದ ನಾಯಕ ಯಾರು.? ಈ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ವಿಷಯದಲ್ಲಿ ಕುತೂಹಲಕಾರಿ ಮಾಹಿತಿಗಳು ಹೊರಬರುತ್ತಿವೆ. ಅದರ ಪ್ರಕಾರ, ಈ ಪಟ್ಟಕ್ಕೇರುವ ವಿಷಯದಲ್ಲಿ ತುಂಬ ನಾಯಕರು ಹಿಂದೇಟು ಹೊಡೆಯುತ್ತಿದ್ದಾರೆ. ಕೆಲವೇ ಕಾಲದ ಹಿಂದೆ ಡಿಕೆಶಿ ನಂತರ ಈ ಪಟ್ಟಕ್ಕೆ ಬರುವವರು ಯಾರು?ಎಂಬ ಪ್ರಶ್ನೆ ಕೇಳಿದಾಗ ಹಲ ನಾಯಕರು ಉತ್ಸಾಹ ತೋರಿಸಿದ್ದರು. ಆದರೆ ಇತ್ತೀಚೆಗೆ ದಿಲ್ಲಿಗೆ ಹೋದ ಡಿಸಿಎಂ ಡಿಕೆಶಿ: ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೊಣೆಗಾರಿಕೆಯಿಂದ ನನ್ನನ್ನು ಬಿಡುಗಡೆ […]

Continue Reading

ನಿಯಮಬಾಹಿರವಾಗಿ ಅಕ್ರಮ ಸಾಗುವಳಿ ಚೀಟಿ ವಿತರಣೆ ಆರೋಪ; ಶಿರಸ್ತೇದಾರ್ ಹೇಮಂತ್ ಕುಮಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ನಿಯಮಬಾಹಿರವಾಗಿ ಅಕ್ರಮ ಸಾಗುವಳಿ ಚೀಟಿ ವಿತರಣೆ ಮಾಡಿದ ಆರೋಪದ ಮೇಲೆ ಶಿರಸ್ತೇದಾರ್ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಶಿರಸ್ತೇದಾರ್ ಹೇಮಂತ್‌ ಕುಮಾರ್‌ ಕಳಸ ತಾಲ್ಲೂಕಿನ ಕಛೇರಿಯಲ್ಲಿ ಪ್ರಭಾರಿ ಶಿರಸ್ತೆದಾರರಾಗಿ ಕಾರ್ಯನಿರ್ವಹಿಸುವಾಗ 50 ಕ್ಕೂ ಹೆಚ್ಚು ಸಾಗುವಳಿ ಚೀಟಿ ಅಕ್ರಮವಾಗಿ ನೀಡಿದ್ದಾರೆಂದು ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. 2022 ರ ಫೆಬ್ರವರಿ ತಿಂಗಳಲ್ಲಿ ಕಳಸ ತಾಲೂಕು ಪ್ರಭಾರ ತಹಶೀಲ್ದಾರ್ ಆಗಿ ಒಂದು ತಿಂಗಳು ಕರ್ತವ್ಯ ನಿರ್ವಹಿಸಿದ ಸಂದರ್ಭದಲ್ಲಿ ಈ ಅಕ್ರಮ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಆಡಳಿತಾತ್ಮಕ […]

Continue Reading