ರೋಶನ್ ಬೇಗ್ ನನ್ನ ಬಳಿ ಕಾಡಿ-ಬೇಡಿಕೊಂಡಾಗ ಅವರ ಒತ್ತಾಯಕ್ಕೆ ಮಣಿದು ನಾನು ವಕ್ಫ್ ಖಾತೆಯನ್ನು ಅವರಿಗೆ ಬಿಟ್ಟುಕೊಟ್ಟಿದ್ದೆ ನಾನು ಮಾಡಿದ ಬಹಳ ದೊಡ್ಡ ತಪ್ಪು

ಬಿ.ಎ.ಮೊಯಿದಿನ್ ಅವರ ಆತ್ಮಕಥೆ “ನನ್ನೊಳಗಿನ ನಾನು” ಎಂಬ ಪುಸ್ತಕದಿಂದ ನನಗೆ ಪ್ರಥಮ ಬಾರಿಗೆ ಸಣ್ಣ ಕೈಗಾರಿಕಾ ಸಚಿವ ಹುದ್ದೆ ನೀಡುವಾಗ ಮುಖ್ಯಮಂತ್ರಿ ಜೆ.ಎಚ್. ಪಟೇಲ್ ಅವರು ಹೆಚ್ಚುವರಿಯಾಗಿ ವಕ್ಫ್ ಖಾತೆಯನ್ನೂ ನೀಡಿದ್ದರು. ಆ ಸಂದರ್ಭದಲ್ಲಿ ರೋಶನ್ ಬೇಗ್ ಅವರು ನನ್ನ ಬಳಿ ಕಾಡಿ-ಬೇಡಿಕೊಂಡಾಗ ಅವರ ಒತ್ತಾಯಕ್ಕೆ ಮಣಿದು ನಾನು ವಕ್ಫ್ ಖಾತೆಯನ್ನು ರೋಶನ್ ಬೇಗ್ ಅವರಿಗೆ ಬಿಟ್ಟುಕೊಟ್ಟಿದ್ದೆ. ಇದು ನಾನು ಮಾಡಿದ ಬಹಳ ದೊಡ್ಡ ತಪ್ಪು ಎಂದು ಅನಂತರ ಹಾಗೂ ಈಗಲೂ ನನಗೆ ಅನಿಸುತ್ತಿದೆ. ಕರ್ನಾಟಕ ರಾಜ್ಯ […]

Continue Reading

ನಕಲಿ ವೀಸಾ ಮಾರಾಟ ಮಾಡುತ್ತಿದ್ದ ಜಾಲವನ್ನು ಬೇಧಿಸಿದ ದೆಹಲಿ ಪೊಲೀಸರು

5 ಸಾವಿರ ನಕಲಿ ವೀಸಾ ಮಾರಾಟ ಮಾಡಿ, ಬರೋಬ್ಬರಿ 300 ಕೋಟಿ ರೂ. ಸಂಪಾದನೆ ನಕಲಿ ವೀಸಾಗಳನ್ನು ತಯಾರಿಸಿ, ಎಂಟರಿಂದ ಹತ್ತು ಲಕ್ಷ ರೂಪಾಯಿಗಳಿಗೆ ಒಂದೊಂದು ನಕಲಿ ವೀಸಾ ಮಾರಾಟ ಮಾಡುತ್ತಿದ್ದ ಗ್ಯಾಂಗ್ ವೊಂದರ ಜಾಲವನ್ನು ದೆಹಲಿ ಪೊಲೀಸರು ಬೇಧಿಸಿದ್ದಾರೆ. ಸರಿ-ಸುಮಾರು ಐದು ವರ್ಷಗಳಿಂದ ಹೊಸದಿಲ್ಲಿಯಲ್ಲಿ ನಕಲಿ ವೀಸಾ ದಂಧೆ ನಡೆಸಿದ ಖದೀಮರು, 5 ಸಾವಿರ ನಕಲಿ ವೀಸಾ ಮಾರಾಟ ಮಾಡಿ ಬರೋಬ್ಬರಿ 300 ಕೋಟಿ ಸಂಪಾದಿಸಿದ್ದಾರೆ. ವಿದೇಶಗಳಿಗೆ ಹೋಗಿ ಉತ್ತಮ ಆದಾಯದೊಂದಿಗೆ ಐಷಾರಾಮಿ ಜೀವನ ನಡೆಸಬೇಕು […]

Continue Reading

ದಕ್ಷಿಣ ಕನ್ನಡ: ಕೆಪಿಎಸ್ ಸಿ ನೇಮಕಾತಿಗೆ ಕೋಟಿ ಕೋಟಿ ಡೀಲ್..! ದ.ಕ ಜಿಲ್ಲಾ ಕಾಂಗ್ರೆಸ್ ಸಭೆಯಲ್ಲಿ ಅಲ್ಲೋಲ ಕಲ್ಲೋಲ.!

BIG POLITICAL EXCLUSIVE ಕಾರ್ಯಕರ್ತರ ಪ್ರಶ್ನೆಗೆ ತಬ್ಬಿಬ್ಬಾಗಿ ಸೋತು ಸುಣ್ಣಾದ ಮಾಜಿ ಶಾಸಕ.. ಕಾಂಗ್ರೆಸ್ ನಾಯಕರ ನಡೆಗೆ ಕಾರ್ಯಕರ್ತರು ಫುಲ್ ಗರಂ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ ಸಿ) ಸದಸ್ಯ ಹುದ್ದೆ ಕೋಟಿ, ಕೋಟಿಗೆ ಬಿಕರಿಯಾಂತೆ.! ಇನ್ನೇನೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಶವಪೆಟ್ಟಿಗೆಗೆ ಮೊಳೆ ಹೊಡೆಯುವುದೊಂದೇ ಬಾಕಿ ಇದೆ. ಸಾಲು ಸಾಲು ಚುನಾವಣೆಯಲ್ಲಿ ಕಾಂಗ್ರೆಸ್ ಫುಲ್ ಡಮಾರ್ ಆಗಿದೆ. ಆದರೆ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿಯುವ ಕಾರ್ಯಕರ್ತರಿಂದ ಜಿಲ್ಲೆಯಲ್ಲಿ ಪಕ್ಷ ಅಲ್ಪಸ್ವಲ್ಪ ಉಸಿರಾಡುತ್ತಿದೆ. ನಾಯಕರಾದವರೂ ಪಕ್ಷವನ್ನು ಬೆಳೆಸುತ್ತಿಲ್ಲ. […]

Continue Reading

ನ್ಯಾಯಾದೀಶರ ಸಹಿ ನಕಲು ಮಾಡಿ ವಂಚನೆ ಆರೋಪದಡಿ ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ಪ್ರಕರಣ ದಾಖಲು

ನ್ಯಾಯಾಲಯದಲ್ಲಿ ಕೆಲಸ ಕೊಡಿಸೋದಾಗಿ ನಂಬಿಸಿ, ನ್ಯಾಯಾದೀಶರ ಸಹಿಯನ್ನು ನಕಲು ಮಾಡಿ ವಂಚನೆ ಮಾಡುತ್ತಿದ್ದ ಆರೋಪದಡಿ ಸಿದ್ದಲಿಂಗಯ್ಯ ಹಿರೇಮಠ ಎಂಬವನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಸಿದ್ದಲಿಂಗಯ್ಯ ಹಿರೇಮಠ ಎಂಬವ ನ್ಯಾಯಾಲಯದಲ್ಲಿ ಪ್ರೋಸೆಸ್ ಸರ್ವರ್, ಜವಾನ ಹುದ್ದೆ ಖಾಲಿ ಇದೆ ಎಂದು ಜನರಿಗೆ ನಂಬಿಸಿ, ಉದ್ಯೋಗ ಕೊಡಿಸುತ್ತೇನೆ ಎಂದು ಪ್ರತಿಯೊಬ್ಬರ ಬಳಿ 7 ಲಕ್ಷ ರೂ. ಹಣ ವಸೂಲಿ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಹಣ ಪಡೆದವರಿಗೆ ನಕಲಿ ನೇಮಕಾತಿ ಪತ್ರ ಕೊಟ್ಟಿದ್ದಾನೆ. ಅಲ್ಲದೇ ನೇಮಕಾತಿ ಪತ್ರದಲ್ಲಿ ನ್ಯಾಯಮೂರ್ತಿಗಳ […]

Continue Reading

ಹಲವು ವರ್ಷಗಳಿಂದ ಠಿಕಾಣಿ ಹೂಡಿರುವ ಪಿಡಿಓ, ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಿದ್ಧತೆ

ಒಂದೇ ಗ್ರಾಮ ಪಂಚಾಯಿತ್ ಅಥವಾ ತಾಲ್ಲೂಕಿನಲ್ಲಿ ಸಚಿವರು, ಶಾಸಕರ ಶಿಫಾರಸು ಬಳಸಿಕೊಂಡು ಹಲವು ವರ್ಷಗಳಿಂದ ಠಿಕಾಣಿ ಹೂಡಿದ್ದ ಎಲ್ಲಾ ಪಿಡಿಒ, ಕಾರ್ಯದರ್ಶಿಗಳನ್ನು ಎತ್ತಂಗಡಿ ಮಾಡಲು ಗ್ರಾಮೀಣಾಭಿವೃದ್ಧಿ ಇಲಾಖೆ ಸಿದ್ಧತೆ ನಡೆಸಿದೆ. ಗ್ರಾಮೀಣ ಪ್ರದೇಶದ ಆಡಳಿತದಲ್ಲಿ ತ್ವರಿತ ಸೇವೆ ಒದಗಿಸುವುದು, ಪಂಚಾಯಿತಿಗಳಲ್ಲಿನ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವುದು, ಅಧಿಕಾರಿಗಳು ಮತ್ತು ಸಿಬ್ಬಂದಿಯ ದಕ್ಷತೆ ಹೆಚ್ಚಿಸುವ ಉದ್ದೇಶ ಇಟ್ಟುಕೊಂಡು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಗ್ರೇಡ್‌-1, ಕಾರ್ಯದರ್ಶಿ ಗ್ರೇಡ್‌-2, ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಇದೇ ಮೊದಲ ಬಾರಿಗೆ […]

Continue Reading

ಬೆಂಗಳೂರು ಹಿಟ್ ಆ್ಯಂಡ್ ರನ್ ಗೆ ಮೂವರು ವಿದ್ಯಾರ್ಥಿಗಳು ಬಲಿ

ರಾಜಧಾನಿ ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಹಿಟ್ ಆ್ಯಂಡ್ ರನ್ ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ತಾಲೂಕಿನ ಚಿಕ್ಕಜಾಲ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ರೋಹಿತ್ (22), ಸುಚಿತ್ (22) ಹಾಗೂ ಹರ್ಷ (22) ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ವಾಹನ ಚಾಲಕ […]

Continue Reading

ವಿವಾಹವೇ ದಂಧೆ.! ಚಾಲಾಕಿ ಮಹಿಳೆ ಬಗ್ಗೆ ಜಾಗ್ರತೆ ವಹಿಸಲು ಕೋರ್ಟ್ ಸೂಚನೆ

ಹತ್ತು ಪ್ರಕರಣ ದಾಖಲು, ಹನ್ನೊಂದನೇ ಪ್ರಕರಣ ದಾಖಲಾಗುವುದನ್ನು ತಡೆಯಬೇಕಿದೆ: ಹೈಕೋರ್ಟ್ ಹಲವಾರು ಪುರುಷರ ವಿರುದ್ಧ ಕ್ರಿಮಿನಲ್‌ ಪ್ರಕರಣ ಹೂಡಿರುವ ಮಹಿಳೆಯ ಕುರಿತಾದ ಮಾಹಿತಿ ಒಳಗೊಂಡ ದತ್ತಾಂಶವನ್ನು ರಾಜ್ಯದ ಎಲ್ಲಾ ಪೊಲೀಸ್‌ ಠಾಣೆಗಳು ರವಾನಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ಕ್ರಮಕೈಗೊಳ್ಳುವಂತೆ ನಿರ್ದೇಶಿಸಿರುವ ಕರ್ನಾಟಕ ಹೈಕೋರ್ಟ್‌, ಮತ್ತೊಬ್ಬ ಪುರುಷನ ವಿರುದ್ಧ ಆಕೆ ದೂರು ನೀಡಲು ಬಂದಾಗ ಠಾಣೆಯ ಅಧಿಕಾರಿ ಎಚ್ಚರವಹಿಸಲು ಅನುಕೂಲವಾಗುತ್ತದೆ ಎಂದು ಅಭಿಪ್ರಾಯಪಟ್ಟಿದೆ. ದೂರುದಾರೆಯಾಗಿರುವ ಕೊಡಗಿನ ಕುಶಾಲನಗರದ ದೀಪಿಕಾಳಿಂದ ನೊಂದ ಹತ್ತನೇ ಪತಿ ಹಾಸನ ಜಿಲ್ಲೆಯ ಸಕಲೇಶಪುರದ ಪಿ.ಕೆ […]

Continue Reading

ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಆರೋಪಿ ಸಂಜಯ್ ರಾಯ್‌ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೊಗಳು ಆತನ ಮೊಬೈಲ್‌ನಲ್ಲಿ ಪತ್ತೆ

ಆರ್‌.ಜಿ ಕರ್‌ ವೈದ್ಯಕೀಯ ಕಾಲೇಜಿನಲ್ಲಿ ನಡೆದಿರುವ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ತನಿಖೆಯನ್ನು ಸಿಬಿಐ ಅಧಿಕಾರಿಗಳು ತೀವ್ರಗೊಳಿಸಿದ್ದಾರೆ.ಪ್ರಕರಣದ ಪ್ರಮುಖ ಆರೋಪಿ ಸಂಜಯ್ ರಾಯ್‌ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ವಿಡಿಯೊಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಜಯ್ ರಾಯ್‌ ವೈದ್ಯಕೀಯ ಕಾಲೇಜಿನ ಶವಾಗಾರದಲ್ಲಿರುವ ಇತರೆ ಶವಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಪತ್ತೆಯಾಗಿವೆ ಎಂದು ತನಿಖಾಧಿಕಾರಿಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಆಗಸ್ಟ್‌ 9ರಂದು ಆರ್‌.ಜಿ ಕರ್‌ ವೈದ್ಯಕೀಯ […]

Continue Reading

2028 ಕ್ಕೆ ದ.ಕ ಜಿಲ್ಲೆಯಲ್ಲಿ 10 ವಿಧಾನಸಭಾ ಕ್ಷೇತ್ರಗಳು.!

ಮೂಲ್ಕಿ, ಕಡಬ ಹೊಸ ವಿಧಾನಸಭಾ ಕ್ಷೇತ್ರಗಳು.? ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ 8 ವಿಧಾನಸಭಾ ಕ್ಷೇತ್ರಗಳಿದ್ದು, 2028 ರ ವಿಧಾನಸಭಾ ಚುನಾವಣೆ ವೇಳೆಗೆ ಈ ಸಂಖ್ಯೆ 10 ಕ್ಕೇರಳಿದೆ ಎಂಬ ಮಾಹಿತಿಯೊಂದು ಅಧಿಕಾರಿ ವಲಯಗಳಲ್ಲಿ ಹರಿದಾಡುತ್ತಿದ್ದು, ‌ಶಾಸಕರ ಎದೆಗಳಲ್ಲಿ ಢವ ಢವ ಉಂಟು ಮಾಡಿದೆ. ಮುಂದಿನ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ ಸಂದರ್ಭ ಬಹುತೇಕ ಕ್ಷೇತ್ರಗಳು ಪುನರ್ವಿಂಗಡನೆಯಾಗಲಿದ್ದು, ಹಲವು ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಹೊಸದಾಗಿ ಸೇರ್ಪಡೆಯಾಗಲಿದೆ. ಇದರ ಜೊತೆಗೆ ಮುಂದಿನ ವಿಧಾನಸಭಾ ಚುನಾವಣೆ ಹೊತ್ತಿಗೆ ಕ್ಷೇತ್ರ […]

Continue Reading

ಎತ್ತಿನಹೊಳೆ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಸಚಿವಾಲಯಗಳ ತಕರಾರು

ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲ ಹಂತ ಸಾಕಾರಗೊಂಡ ಬೆನ್ನಲ್ಲೇ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ತಕರಾರು ಎತ್ತಿದೆ.ಯೋಜನೆಯ ಅನುಷ್ಠಾನದ ಸಂದರ್ಭದಲ್ಲಿ ಪಶ್ಚಿಮ ಘಟ್ಟಕ್ಕೆ ಹಾನಿಯಾದ ಬಗ್ಗೆ ವರದಿಗಳಿದ್ದು, ಈ ಬಗ್ಗೆ ವಾಸ್ತವಾಂಶದ ಹಾಗೂ ಇಡೀ ಯೋಜನೆ ಕಾರ್ಯಸಾಧ್ಯತೆಯ ವರದಿ ಸಲ್ಲಿಸಬೇಕು ಎಂದು ತಾಕೀತು ಮಾಡಿದೆ. ಬರಪೀಡಿತ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ದೇವನಹಳ್ಳಿ ಕೈಗಾರಿಕಾ ಪ್ರದೇಶದ ಕುಡಿಯುವ ನೀರು ಒದಗಿರುವ ಉದ್ದೇಶದ ಈ ಯೋಜನೆಗೆ ಈವರೆಗೆ […]

Continue Reading