ವಖ್ಫ್ ಆಸ್ತಿ ಸೇರಿದಂತೆ ಆಗಸ್ಟ್‌ನಿಂದ ರಾಜ್ಯದಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಸರ್ಕಾರಿ ಜಮೀನು ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಕಟ್ಟುನಿಟ್ಟಿನ ಸೂಚನೆ ರಾಜ್ಯದಲ್ಲಿ 1.40 ಕೋಟಿ ಎಕರೆ ಸರ್ಕಾರಿ ಜಮೀನು ಇದ್ದು, ಲ್ಯಾಂಡ್ ಬೀಟ್ ಮೊಬೈಲ್ ತಂತ್ರಾಂಶದ ಮೂಲಕ ದತ್ತಾಂಶ ಸಂಗ್ರಹಿಸಲಾಗಿದೆ. 14.32 ಲಕ್ಷ ಸರ್ಕಾರಿ ಜಮೀನುಗಳ ಸ್ಥಳ ಪರಿಶೀಲನೆಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಪೈಕಿ 10.78 ಲಕ್ಷ ಜಮೀನುಗಳಿಗೆ ಗ್ರಾಮಲೆಕ್ಕಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದರಲ್ಲಿ ಕಂದಾಯ ಇಲಾಖೆಯ 1.93 ಲಕ್ಷ ಜಮೀನುಗಳು ಇದ್ದು, ವಿವಿಧ 20 ಇಲಾಖೆಗಳ ಜಮೀನುಗಳನ್ನೂ ಗುರುತಿಸಲಾಗಿದೆ. ಕೆರೆ ಮತ್ತು […]

Continue Reading

ಅಧಿಕಾರ ದುರುಪಯೋಗ, ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ರದ್ದು: ಕರ್ನಾಟಕ ಹೈಕೋರ್ಟ್

ಭ್ರಷ್ಟಾಚಾರ ನಿಗ್ರಹ ದಳದಲ್ಲಿ ಅಧಿಕಾರ ದುರುಪಯೋಗ ಮತ್ತು ಸುಲಿಗೆ ಆರೋಪಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿ ಸೀಮಂತ್ ಕುಮಾರ್ ಸಿಂಗ್ ಹಾಗೂ ಇತರ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣಾ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್ ಈಚೆಗೆ ರದ್ದುಪಡಿಸಿದೆ. ಹಿಂದಿನ ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಏಳು ಅಧಿಕಾರಿಗಳು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅರ್ಜಿದಾರ ಅಧಿಕಾರಿಗಳ ವಿರುದ್ಧ ವಿಚಾರಣೆ […]

Continue Reading

9/11 ಸಮಸ್ಯೆ ಪರಿಹಾರಕ್ಕೆ ಉಸ್ತುವಾರಿ ಸಚಿವರಿಗೆ ಮನವಿ.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ಸುಭಾಶ್ಚಂದ್ರ ಶೆಟ್ಟಿಯವರು ದಕ್ಷಿಣ ಕನ್ನಡದ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರನ್ನು ಭೇಟಿಯಾಗಿ ಗ್ರಾಮ ಪಂಚಾಯತ್ ನಲ್ಲಿ ನೀಡಲಾಗುತ್ತಿದ್ದ 9&11 ಗಳಿಗೆ ಮಂಗಳೂರಿನ ಮೂಡ ಕಛೇರಿಗೆ ಅನುಮತಿಗಾಗಿ ಹೋಗಬೇಕಾಗಿದ್ದು,ಇದು ದೂರದ ಗ್ರಾಮಗಳಿಂದ ಬರುವವರು 100 ಕಿ.ಲೋ ಗಿಂತ ಹೆಚ್ಚು ಸಂಚಾರ ಮಾಡಬೇಕಾದ ಅನಿವಾರ್ಯತೆ ಇದೆ. ಇದರ ಜೊತೆಗೆ ಸಾವಿರಾರು ಕಡತಗಳನ್ನು ವಿಲೇವಾರಿ ಮಾಡುವುದು ಮೂಡ ಸಿಬ್ಬಂದಿಗಳಿಗೂ ಅಸಾಧ್ಯವಾಗಿದ್ದು, ಇದರಿಂದ ಕಟ್ಟಡ ನಿರ್ಮಾಣ, ಸಾಲ ವ್ಯವಹಾರಕ್ಕೆ 9&11 ಸಕಾಲದಲ್ಲಿ ದೊರೆಯದೇ […]

Continue Reading

ವಿಧಾನಪರಿಷತ್ ಸದಸ್ಯರಾಗುತ್ತಾರಾ ಕಟೀಲು.? ಕೋಟಾ ತೆರವಿನ ಸ್ಥಾನ ಯಾರಿಗೆ.?

ವಿಧಾನಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಸಂಸದರಾಗಿ ಆಯ್ಕೆಗೊಳ್ಳುವ ಮೂಲಕ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರಿಂದ ತೆರವಾದ ಸ್ಥಾನಕ್ಕೆ ಶ್ರೀಘ್ರದಲ್ಲೇ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇರುವುದರಿಂದ ಬಿಜೆಪಿ ಪಾಳಯದಲ್ಲಿ ಬಿರುಸಿನ ಚಟುವಟಿಕೆ ಆರಂಭವಾಗಿದೆ. ಕರಾವಳಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿರೋಧದಿಂದ ಸಂಸದ ಟಿಕೆಟ್ ಕಳೆದುಕೊಂಡಿದ್ದ ಹ್ಯಾಟ್ರಿಕ್ ಸಂಸದ ನಳಿನ್ ಕುಮಾರ್ ಕಟೀಲ್ ಪಕ್ಷದೊಂದಿಗೆ ಮುನಿಸಿಕೊಳ್ಳದೆ ಕಾಸರಗೋಡು ಭಾಗದ ಉಸ್ತುವಾರಿಯನ್ನು ವಹಿಸಿಕೊಂಡಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯಿಂದ ಈ ಬಾರಿ ಹೊಸ ಅಭ್ಯರ್ಥಿ ಬ್ರಿಜೇಶ್ […]

Continue Reading

ಕರ್ನಾಟಕ ಬ್ಯಾರಿ ಅಭಿವೃದ್ಧಿ ನಿಗಮ ಸ್ಥಾಪನೆಗೆ ಹೆಚ್ಚಿದ ಬೇಡಿಕೆ

ಬ್ಯಾರಿ ಸಮುದಾಯದ ನಾಯಕರಿಂದ ವಿಧಾನಸಭಾಧ್ಯಕ್ಷರಲ್ಲಿ ಒತ್ತಾಯ ಕರ್ನಾಟಕ ರಾಜ್ಯದಾದ್ಯಂತ 25 ಲಕ್ಷಕ್ಕಿಂತಲೂ ಅಧಿಕ ಜನಸಂಖ್ಯೆ ಹೊಂದಿರುವ ಬ್ಯಾರಿ ಭಾಷಿತರ ಸಮಗ್ರ ಔದ್ಯೋಗಿಕ, ಸಾಂಸ್ಕೃತಿಕ, ಸಾಮಾಜಿಕ, ಸಮುದಾಯಿಕ, ಶೈಕ್ಷಣಿಕ ಶ್ರೇಯೋಭಿವೃದ್ಧಿಗೆ ಕರ್ನಾಟಕ ಬ್ಯಾರಿ ಅಭಿವೃದ್ಧಿ ನಿಗಮದ ಅವಶ್ಯಕತೆಯಿದ್ದು ಮಂಜೂರುಗೊಳಿಸುವಂತೆ ಆಗ್ರಹಿಸಿ ನಗರದ ಓಶಿಯನ್ ಪರ್ಲ್ ಹೋಟೆಲ್ ಸಭಾಂಗಣದಲ್ಲಿ ಅಖಿಲ ಭಾರತ ಬ್ಯಾರಿ ಮಹಾಸಭಾ ಮಂಗಳೂರು ವತಿಯಿಂದ ಗೌರವ ಸಲಹೆಗಾರರು ಹಾಗೂ ಅತಿಥಿಗಳ ಸಮಾಲೋಚನಾ ಸಭೆಯು ಜರುಗಿತು. ರಾಜ್ಯದಲ್ಲಿ ಪ್ರತಿಯೊಂದು ಸಮುದಾಯಕ್ಕೂ ಒಂದೊಂದು ಅಭಿವೃದ್ಧಿ ನಿಗಮಗಳಿವೆ. ಆದರೆ ಬ್ಯಾರಿ ಸಮುದಾಯಕ್ಕೆ […]

Continue Reading

ರಾಜ್ಯ ಶಿಕ್ಷಣ ನೀತಿ (SEP) ಕುರಿತು ಇಂದು ಮುಸ್ಲಿಂ ಮುಖಂಡರ ಸಮಾಲೋಚನಾ ಸಭೆ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಗಾಂಧಿನಗರ, ಫ್ರೀಡಂ ಪಾರ್ಕ್ ಹಿಂಭಾಗ, ಬೆಂಗಳೂರು. ಜುಲೈ 6 ರಂದು ಬೆಳಿಗ್ಗೆ 10 ರಿಂದ 1 ಗಂಟೆಯ ವರೆಗೆ ನಡೆಯಲಿದೆ ಕರ್ನಾಟಕ ಸರ್ಕಾರ ರೂಪಿಸುತ್ತಿರುವ ರಾಜ್ಯ ಶಿಕ್ಷಣ ನೀತಿಗಳ ನಿರೂಪಣೆಯ ಸಂದರ್ಭದಲ್ಲಿ ಮುಸ್ಲಿಂ ಸಮುದಾಯಗಳ ಮಕ್ಕಳು ಶಿಕ್ಷಣದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಸವಾಲುಗಳನ್ನು ಕುರಿತು ಚರ್ಚಿಸಲು ಸಮುದಾಯದ ಪ್ರತಿನಿದಿಗಳೊಂದಿಗೆ ಚರ್ಚಿಸಲು ಇದೇ ಜುಲೈ 6 ರಂದು ಸಮಾಲೋಚನಾ ಸಭೆ ನಡೆಯಲಿದೆ ಎಂದು ಖಾಸಿಂ ಸಾಬ್. ಎ ಮತ್ತು ಸಂಶೋಧಕರಾದ ಡಾ. […]

Continue Reading

ಪಾವೂರು ಉಳಿಯ ದ್ವೀಪದಲ್ಲಿ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

ಪಾವೂರು ಉಳಿಯ ದ್ವೀಪದಲ್ಲಿ ನಿರಂತರವಾಗಿ ನಡೆಯುತ್ತಿರುವ ಅಕ್ರಮ ಮರಳುಗಾರಿಕೆಯನ್ನು ಶಾಶ್ವತವಾಗಿ ತಡೆಗಟ್ಟಬೇಕು, ಅಲ್ಲಿನ ದ್ವೀಪವಾಸಿಗಳ ಬದುಕನ್ನು ರಕ್ಷಿಸಬೇಕು ಹಾಗೂ ವಾಸ್ತವ ಚಿತ್ರಣವನ್ನು ಮರೆಮಾಚಿ ಅಕ್ರಮ‌ ಮರಳುಗಾರಿಕೆಯಲ್ಲಿ ತೊಡಗಿರುವ ವ್ಯಕ್ತಿಗಳ ಜೊತೆಗೆ ಕೈಜೋಡಿಸಿ ಜಿಲ್ಲಾಡಳಿತಕ್ಕೆ ಸುಳ್ಳು ಮಾಹಿತಿ ನೀಡಿದ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆ ಹಾಗೂ ಕೆಥೊಲಿಕ್ ಸಭಾ ಮಂಗಳೂರು ಪ್ರದೇಶ್(ರಿ) ಇವುಗಳ ಜಂಟಿ ಆಶ್ರಯದಲ್ಲಿ ಇಂದು(05-07-2024) ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ […]

Continue Reading

ಪೊಲೀಸರ ಕರ್ತವ್ಯವನ್ನು ಸಾಮಾಜಿಕ ಜಾಲತಾಣದಲ್ಲಿ ನೇರಪ್ರಸಾರ ಮಾಡಿದರೆ ಕರ್ತವ್ಯಕ್ಕೆ ಅಡ್ಡಿಯಲ್ಲ: ಹೈಕೋರ್ಟ್‌

ಪೊಲೀಸರ ಕರ್ತವ್ಯವನ್ನು ನೇರಪ್ರಸಾರ ಮಾಡಿದರೆ ಕರ್ತವ್ಯಕ್ಕೆ ಅಡ್ಡಿಯಾಗದು.‌ ಸಂಚಾರಿ ಪೊಲೀಸರು ಸೇರಿದಂತೆ ಕರ್ತವ್ಯ ನಿರತ ಪೊಲೀಸರ ಕ್ರಮವನ್ನು ಫೇಸ್‌ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ನೇರ ಪ್ರಸಾರ ಮಾಡಿದರೆ ಅದು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಎನ್ನಲಾಗದು ಎಂದು ಹಿಮಾಚಲ ಪ್ರದೇಶದ ಹೈಕೋರ್ಟ್ ತೀರ್ಪು ನೀಡಿದೆ. ವಾಹನ ತಪಾಸಣೆ ಮಾಡುತ್ತಿದ್ದ ಸಂಚಾರಿ ವಿಭಾಗದ ಪೊಲೀಸರು ಕರ್ತವ್ಯ ನಿರತರಾಗಿದ್ದಾಗ ದಾಖಲೆ ತೋರಿಸಲು ಹೇಳಿಸಿಕೊಂಡ ವ್ಯಕ್ತಿಯೊಬ್ಬರು ಫೇಸ್ ಬುಕ್ ಲೈವ್ ಮಾಡಿದ್ದರು. ಲೈವ್ ಸಂದರ್ಭದಲ್ಲಿ ಕೆಲ ಟೀಕೆಗಳನ್ನು ಮಾಡಿದ್ದ ಚಾಲಕರೊಬ್ಬರ ವಿರುದ್ಧ ಪ್ರಕರಣ […]

Continue Reading

ಸತ್ಸಂಗ ಕಾಲ್ತುಳಿತಕ್ಕೆ ಮಡಿದ ಭಕ್ತರು.. ಸ್ವಯಂ ಘೋಷಿತ ದೇವಮಾನವ ಬೋಲೆ ಬಾಬಾ ಎಸ್ಕೇಪ್.!

ಪೊಲೀಸ್ ಇಲಾಖೆಯಲ್ಲಿ ಗುಪ್ತಚರ ಘಟಕದಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಬೋಲೆ ಬಾಬಾ ಅತ್ರಾಸ್ ದುರಂತಕ್ಕೆ ಇಡೀ ದೇಶವೇ ಮಮ್ಮಲ ಮರಗುತ್ತಿದೆ. ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 116 ಜನರು ಸಾವನ್ನಪ್ಪಿದ್ದಾರೆ. ಕೆಲವರು ಇನ್ನೂ ಸಾವು- ನೋವಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಜನರು ಸೇರಿದ್ದರಿಂದ ಗದ್ದಲ ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಈ ಸತ್ಸಂಗ ಕಾರ್ಯಕ್ರಮದ ಸ್ವಯಂ ಘೋಷಿತ ಗುರು ಭೋಲೆ ಬಾಬಾ ನಾರಾಯಣ್ ಸಾಕರ್ ಹರಿ. ಈ ವ್ಯಕ್ತಿ ಹಿಂದೆ ಗುಪ್ತಚರ […]

Continue Reading

ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರುತ್ತಿದೆ. 6,900ಕ್ಕೂ ಹೆಚ್ಚು ಜನ ಟೆಸ್ಟ್​ಗೆ ಒಳಗಾಗಿದ್ದಾರೆ. 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ.

ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ಮಿತಿ ಮೀರುತ್ತಿದ್ದು, ಪ್ರತಿ 2 ಗಂಟೆಗೆ ಇಬ್ಬರಲ್ಲಿ ಡೆಂಗ್ಯೂ ಲಕ್ಷಣಗಳು ಪತ್ತೆಯಾಗುತ್ತಿವೆ. ಕಳೆದ 6 ತಿಂಗಳಲ್ಲಿ 6 ಸಾವಿರದ 900ಕ್ಕೂ ಹೆಚ್ಚು ಜನ ಡೆಂಗ್ಯೂ ಟೆಸ್ಟ್​ಗೆ ಒಳಗಾಗಿದ್ದಾರೆ. ಈ ಪೈಕಿ 2457 ಜನರಲ್ಲಿ ಡೆಂಗ್ಯೂ ದೃಢಪಟ್ಟಿದೆ. ಬೆಂಗಳೂರು ಪೂರ್ವ ವಲಯದಲ್ಲಿ ಓರ್ವ ವೃದ್ಧ ಹಾಗೂ ಓರ್ವ ಯುವಕನನ್ನು ಡೆಂಗ್ಯೂ ಬಲಿ ಪಡೆದಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಶಂಕಿತ ಡೆಂಗ್ಯೂ ಪ್ರಕರಣಗಳ ಹೆಚ್ಚಳ ಆತಂಕ ಮೂಡಿಸಿದೆ. ರೋಗವನ್ನು ತ್ವರಿತವಾಗಿ ಪತ್ತೆ ಹಚ್ಚಲು […]

Continue Reading