ಜಾತಿ ಪ್ರಮಾಣ ಪತ್ರ ಮೋಸ: ಎಳವ ಜಾತಿಗೆ ಸೇರಿದ ಮಾಜಿ ಶಾಸಕರ ಪತ್ನಿ; ಕ್ರಿಮಿನಲ್ ಕೇಸ್ ದಾಖಲಿಸಲು ಸೂಚನೆ

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಭಡ್ತಿ ಪಡೆಯಲು ಮಾಜಿ ಶಾಸಕರ ಪತ್ನಿಯೂ ಆಗಿರುವ ಡಾ. ಸುಜಾ ಕೆ. ಶ್ರೀಧರ್ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿರುವುದು ಸಾಬೀತಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯವು ನಿರ್ದೇಶನ ನೀಡಿದೆ. ಈ ಕುರಿತು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕ ಎಚ್.ಡಿ ಆನಂದ್ ಕುಮಾರ್ ಅವರ ಸುತ್ತೋಲೆ ಮಾಧ್ಯಮಗಳಿಗೆ ದೊರಕಿದೆ. ತ್ಯಾಮಗೊಂಡ್ಲು ಹೋಬಳಿಯ ಓಬಳಾಪುರ ಗ್ರಾಮದ ಡಾ. ಕೆ ಶ್ರೀನಿವಾಸ ಮೂರ್ತಿ ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿ […]

Continue Reading

ರಾಜ್ಯದ ಬಡ ದೇವಸ್ಥಾನಗಳಿಗೂ ಉಚಿತ ಗೃಹಜ್ಯೋತಿ ಯೋಜನೆ ವಿಸ್ತರಣೆ

ರಾಜ್ಯದಲ್ಲಿ ಈಗಾಗಲೇ ಫಲಾನುಭವಿಗಳಿಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ದೊರೆಯುತ್ತಿದ್ದು ಶ್ರೀಘ್ರದಲ್ಲಿ ಈ ಯೋಜನೆ ಸಿ ಗ್ರೇಡ್ ನ ಬಡ ದೇವಸ್ಥಾನಗಳಿಗೂ ವಿಸ್ತರಣೆಯಾಗಲಿದೆ ಎಂದು ಮುಜುರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. 5 ಲಕ್ಷ ರೂಪಾಯಿಗಿಂತ ಕಡಿಮೆ ಆದಾಯ ಪಡೆಯುತ್ತಿರುವ 34,700 ದೇಗುಲಗಳಿಗೆ ಇದರ ಪ್ರಯೋಜನ ಪಡೆದುಕೊಳ್ಳಲಿದೆ ಎಂದು ಅಂದಾಜಿಸಲಾಗಿದೆ. ಈ ಮೂಲಕ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ‘ಸಿ’ ಗ್ರೇಡ್‌ ದೇವಸ್ಥಾನಗಳಿಗೂ ಉಚಿತ ವಿದ್ಯುತ್‌ ಪೂರೈಸಲು ರಾಜ್ಯ ಸರಕಾರ ಮುಂದಾಗಿದೆ. ಇಲಾಖೆಯ ವ್ಯಾಪ್ತಿಯಲ್ಲಿ’ಎ’ ಗ್ರೇಡ್‌ನ 175, ‘ಬಿ’ […]

Continue Reading

ಬೈಯಪ್ಪನಹಳ್ಳಿ ಪೊಲೀಸರು ಭರ್ಜರಿ ಕಾರ್ಯಾಚರಣೆ; ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಬಳಿಕ ಗರ್ಭಪಾತ ಮಾಡಿಸುತ್ತಿದ್ದ ಜಾಲ ಪತ್ತೆ.

ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ಹೆಣ್ಣು ಭ್ರೂಣ ಲಿಂಗ ಪತ್ತೆ ಹಚ್ಚಿ ಬಳಿಕ ಗರ್ಭಪಾತ ಮಾಡಿಸುತ್ತಿದ್ದ ಜಾಲವೊಂದನ್ನು ಭೇದಿಸಿದ್ದಾರೆ. ಈ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಮೈಸೂರಿನ ಬನ್ನೂರು ರಸ್ತೆ ವಸಂತನಗರದ ಶಿವಲಿಂಗೇಗೌಡ, ಮಂಡ್ಯ ಜಿಲ್ಲೆ ಕೂಳೇನಹಳ್ಳಿಯ ನಯನ್‌ಕುಮಾರ್, ಪಾಂಡವಪುರ ತಾಲೂಕಿನ ಸುಂಕದನ್ನೂರು ಗ್ರಾಮದ ನವೀನ್‌ಕುಮಾರ್, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಟಿ.ಎಂ.ವೀರೇಶ್ ಬಂಧಿತರು. ಈ ದಂಧೆಯಲ್ಲಿ ವೈದ್ಯರು ಸಹ ಇದ್ದು, 15 ರಿಂದ 20 ಸಾವಿರ ರೂಪಾಯಿ ಪಡೆದುಕೊಂಡು ಈ ದಂಧೆಗೆ […]

Continue Reading

ಕಾಂಗ್ರೆಸ್‌ ಮುಖಂಡನ ಹತ್ಯೆ: ಆರೋಪಿಗಳ ಕಾಲಿಗೆ ಗುಂಡೇಟು

ಕೋಲಾರದಲ್ಲಿ ನಡೆದ ಕಾಂಗ್ರೆಸ್‌ ನಾಯಕ ಎಮ್‌ ಶ್ರೀನಿವಾಸ್‌ ಅವರ ಹತ್ಯೆ ಆರೋಪಿಗಳ ಪೈಕಿ ಮೂವರ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಾಂಗ್ರೆಸ್‌ ಮುಖಂಡ ಶ್ರೀನಿವಾಸ್‌ ಅವರು ನಿನ್ನೆ ಶ್ರೀನಿವಾಸಪುರದ ಹೊರವಲಯದಲ್ಲಿ ಹೊಸದಾಗಿ ಕಟ್ಟಿಸುತ್ತಿದ್ದ ಬಾರ್‌ ಒಂದರ ಕೆಲಸ ನೋಡಲೆಂದು ಹೋಗಿದ್ದ ಸಂದರ್ಭದಲ್ಲಿ ಅವರಿಗೆ ಆರು ಜನ ಅಪರಿಚಿತ ದುಷ್ಕರ್ಮಿಗಳ ಗುಂಪು ಹಲ್ಲೆ ಮಾಡಿದ್ದರು. ನಂತರ ಅವರನ್ನು ಆರ್‌ ಜಾಲಪ್ಪ ಆಸ್ಪತ್ರೆಗೆ ಸೇರಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಶ್ರೀನಿವಾಸ್‌ ಮರಣ ಹೊಂದಿದ್ದರು. ಬಾರ್‌ ಕೆಲಸದ ಪ್ರಗತಿ ನೋಡಿಕೊಂಡು ತೋಟದ ಮನೆಗೆ […]

Continue Reading

ನಾನು ನಂಬಿ ಬಿಜೆಪಿ ಟಿಕೆಟ್ ಕೊಡಿಸ್ತಾರೆ ಅಂತ ಹಣ ಕೊಟ್ಟೆ; ನನಗೂ ಬೆದರಿಕೆ ಹಾಕಿದ್ದಾರೆ

ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲುಗೆ ನಾನೇ ಟಿಕೆಟ್ ಕೊಡಿಸಿದ್ದೆ. ನಾವು ಇಲ್ಲಾ ಅಂದ್ರೆ ಶ್ರೀರಾಮುಲು ಎಲ್ಲಿ ಬೆಳೆಯುತ್ತಿದ್ದ. ನಂಬಿಸಿ ನನಗೆ ರೇವಣಸಿದ್ದಪ್ಪ ವಂಚಸಿದ್ರು. ಹೀಗಾಗಿ, ನಾನು ನಂಬಿ ಬಿಜೆಪಿ ಟಿಕೆಟ್ ಕೊಡಿಸ್ತಾರೆ ಅಂತ ಹಣ ಕೊಟ್ಟೆ ಎಂದು ವಂಚನೆಗೊಳಗಾದ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಸ್ಫೋಟಕ ಹೇಳಿಕೆ ನೀಡಿದ್ದಾರೆ ಬಳ್ಳಾರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಹಗರಿಬೊಮ್ಮನಹಳ್ಳಿ ಬಿಜೆಪಿ ಟಿಕೆಟ್ ಕೊಡಿಸ್ತಿನಿ ಅಂತ ಮೋಸ ಮಾಡಿದ್ರು. ನಾನು ಹಣ ಕೊಟ್ಟೆ, ನನಗೆ ಟಿಕೆಟ್ ಮಿಸ್ […]

Continue Reading

ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅವಕಾಶ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ನಿಗಮ ಮಂಡಳಿಗಳ ಹುದ್ದೆಗಳ ಭರ್ತಿ ಪರೀಕ್ಷೆಗಳಿಗೆ ಹಿಜಾಬ್ ಧರಿಸಿ ಬರಬಹುದು ಎಂದಿದೆ. ಹಿಜಾಬ್ ಧರಿಸಿ ಪರೀಕ್ಷೆಗೆ ಅವಕಾಶ ನೀಡಿರುವ ಕೆಇಎ ಕೆಲವು ಷರತ್ತು ಹಾಕಿದೆ. ಪರೀಕ್ಷೆಗೆ ಅಭ್ಯರ್ಥಿಗಳು ಒಂದು ಗಂಟೆ ಮೊದಲು ಪರೀಕ್ಷಾ ಕೇಂದ್ರದಲ್ಲಿ ಹಾಜರಾಗಿರಬೇಕು. ಅವರನ್ನು ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಲಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಗಲಾಟೆ ತಪ್ಪಿಸಲು ಈ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ತಿಳಿಸಿದೆ. ರಾಜ್ಯದಲ್ಲಿ ಕಳೆದ ವರ್ಷ […]

Continue Reading

ಕಾಲುದಾರಿ ಗಳಿಗೆ ಬೇಲಿ ಹಾಕಿದರೆ ಕೂಡಲೇ ತೆರವುಗೊಳಿಸಿ: ತಹಶೀಲ್ದಾರ್ ಗಳಿಗೆ ಕಂದಾಯ ಇಲಾಖೆ ಸೂಚನೆ

‘ರೈತರು ವ್ಯವಸಾಯದ ಉದ್ದೇಶಗಳಿಗಾಗಿ ತಿರುಗಾಡಲು ಬಳಸುವ ಖಾಸಗಿ ಜಮೀನುಗಳಲ್ಲಿ ಗ್ರಾಮ ನಕಾಶೆ ಪ್ರಕಾರ ಇರುವ ಕಾಲುದಾರಿ, ಬಂಡಿ ದಾರಿ ಅಥವಾ ಇತರೆ ದಾರಿಗಳನ್ನು ಯಾವುದೇ ಜಮೀನಿನ ಮಾಲೀಕ ಮುಚ್ಚುವುದು ಕಾನೂನು ಬಾಹಿರ. ಇಂತಹ ಪ್ರಕರಣಗಳಲ್ಲಿ ಅಗತ್ಯ ಕ್ರಮ ಕೈಗೊಂಡು ರೈತರು ಓಡಾಡಲು ಅನುವು ಮಾಡಿಕೊಡಬೇಕು’ ಎಂದು ಎಲ್ಲಾ ತಹಶೀಲ್ದಾರ್ ಗಳಿಗೆ ಕಂದಾಯ ಇಲಾಖೆ ಸೂಚಿಸಿದೆ. ರಾಜ್ಯದಲ್ಲಿ ರೈತರು ಕೃಷಿ ಉದ್ದೇಶಕ್ಕೆ ಬಳಸುವ ಕೃಷಿ ಸಲಕರಣೆ ಸಾಗಿಸಲು, ಬೆಳೆ ಸಾಗಿಸಲು ಅನ್ಯ ಭೂ ಮಾಲೀಕರ ಖಾಸಗಿ ಜಮೀನುಗಳಲ್ಲಿ ತಿರುಗಾಡಲು […]

Continue Reading

ಬಿಜೆಪಿ ಟಿಕೆಟ್ ಡೀಲ್: ಪುತ್ತೂರು ಮೂಲದ ರಾಜ್ ಶೇಖರ್ ತನ್ನ ಖಾತೆಗೆ 2.5 ಕೋಟಿಗೂ ಅಧಿಕ ಹಣ ವರ್ಗಾವಣೆ ಮಾಡಿಸಿ ವಂಚನೆ

ರಾಜ್ಯಾದ್ಯಂತ ಸುದ್ದಿ ಮಾಡಿದ್ದ ಚೈತ್ರ ಕುಂದಾಪುರ ಟಿಕೆಟ್ ಡೀಲ್ ಪ್ರಕರಣದ ಬಿಸಿ ಆರುವ ಮುನ್ನವೇ ಮತ್ತೊಂದು ಕೋಟಿ ರೂಪಾಯಿ ಟಿಕೆಟ್ ಡೀಲ್ ನಡೆದಿರುವ ಆರೋಪ ಕೇಳಿಬಂದಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2.3 ಕೋಟಿ ವಂಚನೆ ಮಾಡಿರುವ ಆರೋಪದಡಿ ಪುತ್ತೂರು ಮೂಲದ ಬಿಜೆಪಿಯ ಸ್ಥಳೀಯ ಮುಖಂಡನ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೆಸರು ಹೇಳಿಕೊಂಡು ಟಿಕೆಟ್ ಕೊಡಿಸೋದಾಗಿ ವಂಚನೆ ಮಾಡಿದ್ದಾರೆ. ವಿಜಯಪುರದ ರೇವಣ್ಣ ಸಿದ್ದಪ್ಪ, ಪುತ್ತೂರಿನ ಶೇಖರ್ ಎನ್.ಪಿ ವಿರುದ್ಧ ಕೊಟ್ಟೂರು […]

Continue Reading

ಧರ್ಮಸ್ಥಳ ದೇಗುಲ ಹಿಂದೂ ಧಾರ್ಮಿಕ ದತ್ತಿ ನಿಯಮದ ಅಡಿಯಲ್ಲಿ ನೋಂದಾವಣೆಯಾಗಿಲ್ಲ: ಆರ್ ಟಿ ಐ ನಲ್ಲಿ ಸ್ಪೋಟಕ ವಿವರ ಬಹಿರಂಗ

ಸೌಜನ್ಯ ಪ್ರಕರಣದಿಂದ ರಾಜ್ಯದಾದ್ಯಂತ ಭಾರೀ ಸುದ್ಧಿಯಲ್ಲಿರುವ ಧರ್ಮಸ್ಥಳ ಇದೀಗ ಮತ್ತೊಮ್ಮೆ ಸುದ್ಧಿಗೆ ಗ್ರಾಸವಾಗಿದೆ. ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಧರ್ಮಸ್ಥಳ ಕ್ಷೇತ್ರವನ್ನು ಎಳೆದು ತರಬೇಡಿ ಎಂದು ಭಕ್ತವೃಂದ ಒಂದು ಕಡೆ ಹೇಳಿಕೊಳ್ಳುತ್ತಿದ್ದರೆ, ಇತ್ತ ಸೌಜನ್ಯ ಪ್ರಕರಣದ ಹೋರಾಟಗಾರರು ಧರ್ಮಸ್ಥಳ ಕ್ಷೇತ್ರದ ಪ್ರಭಾವಿಗಳೇ ಇದರ ಹಿಂದೆ ಇದ್ದಾರೆ. ಅದೇ ಕಾರಣದಿಂದ ಮುಚ್ಚಿಹಾಕಲಾಗಿದೆ ಎಂದು ನೇರವಾಗಿ ಆರೋಪಿಸುತ್ತಿದ್ದಾರೆ. ತಲೆತಲಾಂತರಗಳಿಂದ ಪೂಜನೀಯ ಭಾವನೆ ಹೊಂದಿದ್ದ ನಂಬಿಕಸ್ಥರು ಇದೀಗ ಧರ್ಮಸ್ಥಳದ ಪ್ರಭಾವಿಗಳ ಬಗ್ಗೆಯೇ ಅಪನಂಬಿಕೆ ಹುಟ್ಟಿಸುವಷ್ಟರ ಮಟ್ಟಿಗೆ ಈ ಕೇಸ್ ಸಾಗುತ್ತಿದೆ ಅನ್ನುವುದು […]

Continue Reading

15 ಪರ್ಸೆಂಟ್ ಲಂಚ ಕೇಳಿದ ಮಹಿಳಾ ಅಧಿಕಾರಿ,ಒಂದು ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ

ಬಿಲ್ ಪಾವತಿಗೆ ಬಿಲ್ ಮೊತ್ತದ 15 ಪರ್ಸೆಂಟ್ ಕಮಿಷನ್ ಲಂಚ ಕೇಳಿದ ಮಹಿಳಾ ಅಧಿಕಾರಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮಂಗಳೂರು ವಿಭಾಗದ ಉಪ ಕೃಷಿ ನಿರ್ದೇಶಕಿ ಭಾರತಮ್ಮ ಲೋಕಾಯುಕ್ತ ಬಲೆಗೆ ಬಿದ್ದ ಮಹಿಳಾ ಅಧಿಕಾರಿ. 2022-23ನೇ ಸಾಲಿನಲ್ಲಿ ಕೃಷಿ ಇಲಾಖೆಯ ಅಧೀನದಲ್ಲಿ ಬರುವ ಜಲಾನಯನ ಅಭಿವೃದ್ಧಿ ವಿಭಾಗದ “ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ WDC 20” ಯೋಜನೆಯಡಿ ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಸರಕಾರದ ವತಿಯಿಂದ ಉಚಿತವಾಗಿ ವಿವಿಧ ಜಾತಿ […]

Continue Reading