ಅಕ್ಟೋಬರ್ 5 ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನಿಗಮ ನೌಕರರ ಬೃಹತ್ ಪ್ರತಿಭಟನೆ

ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮ ನೌಕರರು ಅಕ್ಟೋಬರ್ 5 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೆ.ಎಸ್.ಆರ್.ಟಿ.ಸಿ ನಿಗಮಗಳ ಒಕ್ಕೂಟದ (CITU) ಅಧ್ಯಕ್ಷ ಎಚ್.ಡಿ. ರೇವಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. 2020 ಜನವರಿ 1 ರ ನಂತರ ವೇತನವನ್ನು ಶೇಕಡಾ 5 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್ ಗಳಿಗೆ ನಮ್ಮ ನೌಕರರೇ ಚಾಲಕರಾಗಬೇಕು. ಈ […]

Continue Reading

ರಾಜ್ಯದಲ್ಲಿ ಡೆಂಗ್ಯೂ ಜ್ವರದ ಅಬ್ಬರ.. ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟ

ರಾಜ್ಯದಲ್ಲಿ ಡೆಂಗಿ ಜ್ವರದ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಡೆಂಗಿ ಜ್ವರದ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಲು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕುರಿತು ಆರೋಗ್ಯ ಇಲಾಖೆ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಪ್ರಸ್ತುತ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆಗಾಗ್ಗೆ ಬರುತ್ತಿರುವ ಮಳೆಯಿಂದ ಹಾಗೂ ನೀರು ಸರಬರಾಜಿನ ಕೊರತೆಯಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಏರಿಕೆಯನ್ನು ಗಮನಿಸಲಾಗಿದ್ದು, ಡೆಂಗಿ ಜ್ವರ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖೆಯು ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳು ಯಶಸ್ವಿಯಾಗುವಲ್ಲಿ ಸಮುದಾಯ/ ಸಾರ್ವಜನಿಕರ ಪಾತ್ರವು ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಡೆಂಗಿ ಜ್ವರದ ಲಕ್ಷಣಗಳು, […]

Continue Reading

‘ಅಭಿನಯ’ದಲ್ಲಿ ಎತ್ತಿದ ಕೈ..ವಂಚಕ ಅಭಿನವ ಹಾಲಶ್ರೀ ಸ್ವಾಮಿ ಪೊಲೀಸ್ ಬಲೆಗೆ ಬಿದ್ದಿದ್ದೆ ರೋಚಕ ಕಹಾನಿ..!

ಕೇಸರಿ ಬಿಟ್ಟು ಬರ್ಮುಡಾ ತೊಟ್ಟು ವೇಷ ಮರೆಸಿದ್ದ ಸ್ವಾಮಿ ಸಿಸಿಬಿ ಖೆಡ್ಡಾಕ್ಕೆ.! ಕುಂದಾಪುರದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ 7 ಕೋಟಿ ವಂಚಿಸಿದ ಚೈತ್ರಾ ಆಂಡ್ ಟೀಮಿನಲ್ಲಿ ಪ್ರಮುಖರಾಗಿ ಗುರುತಿಸಿಕೊಂಡಿದ್ದ ಹೊಸಪೇಟೆಯ ಸಂಸ್ಥಾನ ಮಠದ ಹಿರೇಹಡಗಲಿಯ ಅಭಿನವ ಹಾಲಶ್ರೀ ಸ್ವಾಮೀಜಿ ಈ ಪ್ರದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಯವರ ಅತ್ಯಂತ ಆಪ್ತ, ಟಿಕೆಟ್ ಹಂಚಿಕೆಯಲ್ಲಿ ಕರ್ನಾಟಕದ ಜವಾಬ್ದಾರಿ ಹೊತ್ತ ಪಾತ್ರಧಾರಿಯಾಗಿದ್ದರು. ಈ ವಂಚನೆ ಪ್ರಕರಣದಲ್ಲಿ 1.5 ಕೋಟಿ ರೂಪಾಯಿ ಉದ್ಯಮಿಯಿಂದ ಹಾಲಶ್ರೀ ಸ್ವಾಮಿ […]

Continue Reading

ರಾಜ್ಯದಲ್ಲಿ ಆಪರೇಷನ್ ಹಸ್ತ; ಹಂತ ಹಂತವಾಗಿ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯುವ ಕಾರ್ಯಾಚರಣೆ

ಆಪರೇಷನ್ ಹಸ್ತ ಮುಂದುವರಿಯುತ್ತಿದೆ. ರಾಜ್ಯದಲ್ಲಿ ಹಂತ ಹಂತವಾಗಿ ಎಲ್ಲಾ ಜಿಲ್ಲೆಗಳ ವಿವಿಧ ಪಕ್ಷಗಳ ನಾಯಕರನ್ನು ಕಾಂಗ್ರೆಸ್‌ಗೆ ಸೆಳೆಯುವ ಕಾರ್ಯಾಚರಣೆಗಳು ತೀವ್ರಗೊಂಡಿವೆ. ಮಧ್ಯ ಕರ್ನಾಟಕ ಭಾಗದ ಮೂವರು ಮಾಜಿ ಶಾಸಕರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವ ಕುರಿತು ಮಾತುಕತೆ ಮುಂದುವರೆದಿದೆ.ಮಧ್ಯ ಕರ್ನಾಟಕ ಭಾಗದ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಬೇಕು ಎಂದು ಹಠಕ್ಕೆ ಬಿದ್ದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೊನ್ನಾಳಿಯ ಎಂ.ಪಿ.ರೇಣುಕಾಚಾರ್ಯ, ಚೆನ್ನಗಿರಿ ಮಾಡಾಳ್ ವಿರುಪಾಕ್ಷಪ್ಪ, ಜಗಳೂರು ಕ್ಷೇತ್ರದ ಗುರುಸಿದ್ದನಗೌಡರೊಂದಿಗೆ ಮಾತುಕತೆ ನಡೆಸಿದರು. ದಾವಣಗೆರೆಯಲ್ಲಿ ಹಿರಿಯ ನಾಯಕ ಶಾಮನೂರು […]

Continue Reading

ಪುನೀತ್‌ ಕೆರೆಹಳ್ಳಿ ವಿರುದ್ಧ ದಾಖಲಾದ ಗೂಂಡಾ ಕಾಯ್ದೆ ಪ್ರಕರಣ ರದ್ದು; ಜೈಲಿನಿಂದ ಬಿಡುಗಡೆ

ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ದಾಖಲಿಸಿದ್ದ ಪ್ರಕರಣವನ್ನು ರದ್ದುಪಡಿಸಲಾಗಿದ್ದು, ಅತನನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿದೆ.ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಕೆರೆಹಳ್ಳಿಯ ಪುನೀತ್, ನಗರದ ಜೆ.ಪಿ.ನಗರ 7ನೇ ಹಂತದಲ್ಲಿ ವಾಸವಿದ್ದ. ಪುನೀತ್ ವಿರುದ್ಧ ರಾಜ್ಯದ 11 ಠಾಣೆಗಳಲ್ಲಿ‌ ಎಫ್ಐಆರ್ ದಾಖಲಾಗಿತ್ತು. ಕೆಲವು ಪ್ರಕರಣಗಳಲ್ಲಿ ಶಿಕ್ಷೆಯೂ ಆಗಿತ್ತು. ಅಪರಾಧ ಪ್ರಕರಣಗಳಲ್ಲಿ‌ ಪದೇ ಪದೇ ಭಾಗಿಯಾಗುತ್ತಿರುವುದರಿಂದ ಪುನೀತ್‌ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಪುನೀತ್ ಬಂಧಿಸುವಂತೆ ಕಮಿಷನರ್ ಆದೇಶ ಹೊರಡಿಸಿದ್ದರು. ನಂತರ, ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಪರಪ್ಪನ […]

Continue Reading

ಪತಿ-ಪತ್ನಿಯರ ಜಗಳದಲ್ಲಿ, ಕ್ಷುಲ್ಲಕ ವಿಚಾರಕ್ಕೂ, 504 ಅಥವಾ 506 ಅಡಿ ಕೇಸ್ ದಾಖಲಿಸುವುದು ತಮಾಷೆಯ ವಿಚಾರ ಅಲ್ಲ: ಕರ್ನಾಟಕ ಹೈಕೋರ್ಟ್

ಪತಿ-ಪತ್ನಿಯರ ಜಗಳದಲ್ಲಿ ಮತ್ತು ಕ್ಷುಲ್ಲಕ ವಿಚಾರಗಳಿಗೂ ಐಪಿಸಿ ಸೆಕ್ಷನ್ 504 ಮತ್ತು 506 ಅನ್ವಯಿಸುವುದು ಅಭ್ಯಾಸವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಶುಕ್ರವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ತನಿಖಾಧಿಕಾರಿಗಳು ಎರಡು ವರ್ಷ ಜೈಲು ಶಿಕ್ಷೆ ವಿಧಿಸಬಹುದಾದ ಅಪರಾಧಗಳಿಗೆ ನಿಬಂಧನೆಗಳನ್ನು ಹಾಕುವಾಗ ಎಚ್ಚರಿಕೆ ವಹಿಸಬೇಕು. ಪತಿ-ಪತ್ನಿಯರ ನಡುವೆ ವಿವಾದವಿದ್ದರೆ ಅದು ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತದೆ ಎಂದು ಕಲ್ಪಿಸಿಕೊಳ್ಳಲಾಗದು ಎಂದು ಹೈಕೋರ್ಟ್ ಹೇಳಿದೆ. ಪತಿ-ಪತ್ನಿಯರ ಕಲಹ ಪ್ರಕರಣದಲ್ಲಿ ಸೆಕ್ಷನ್ 506(ಜೀವ ಬೆದರಿಕೆ) ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ ನೀಡುತ್ತದೆ. ಆದರೆ […]

Continue Reading

ಇನ್ನು ಮುಂದಕ್ಕೆ ವಾಹನಗಳಿಗೆ ಅತೀ ಸುರಕ್ಷಿತ ನೋಂದಣಿ ಫಲಕ ಅಳವಡಿಸುವುದು ಕಡ್ಡಾಯ.

ರಾಜ್ಯದಲ್ಲಿ ಎಲ್ಲಾ ವಾಹನಗಳಿಗೆ ಅತಿ ಸುರಕ್ಷಿತ ನೋಂದಣಿ ಫಲಕ-HSRP ನಂಬರ್ ಪ್ಲೇಟ್ ಅಳವಡಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ವಾಹನಗಳ ಮಾಲೀಕರು ಸಾರಿಗೆ ಇಲಾಖೆಯ ವೆಬ್ ಸೈಟ್ ನಲ್ಲಿ ನೋಂದಣಿ ಮಾಡಿಕೊಂಡು ಹೆಚ್ ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 2019 ರ ಏಪ್ರಿಲ್ 1 ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯ ಮಾಡಲಾಗಿದೆ. ನವೆಂಬರ್ 17 ಈ ಪ್ರಕ್ರಿಯೆಗೆ ಕೊನೆಯ ದಿನವಾಗಿದೆ. ಕೆಲವು ಕಡೆ ನಕಲಿಯಾಗಿ HSRP ಅಳವಡಿಸುತ್ತಿದ್ದು, ಇದನ್ನು ತಡೆಯುವ […]

Continue Reading

ರಾಜ್ಯದಲ್ಲಿ ಕಾನೂನು ಬಾಹಿರ ಚಟುವಟಿಕೆ ಸಂಭವಿಸಿದರೆ ಡಿಸಿಪಿ-ಎಸ್ಪಿಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇವೆ: ಸಿ.ಎಂ ಎಚ್ಚರಿಕೆ

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೇ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ನಮ್ಮ ಸರ್ಕಾರ ಕೇವಲ‌ ಕೆಳಹಂತದ ಅಧಿಕಾರಿಗಳು, ಸಿಬ್ಬಂದಿಗಳ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದುಕೊಳ್ಳು ವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು. ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ ಐ ಆರ್ ದಾಖಲಿಸಿಕೊಂಡು […]

Continue Reading

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಫಿಕ್ಸ್..ಅಂಜುಮನ್ ಅರ್ಜಿ ವಜಾ ಮಾಡಿದ ಕೋರ್ಟ್.!

ಬಹಳಷ್ಟು ಕುತೂಹಲ ಕೆರಳಿಸಿದ್ದ ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಈ ಬಾರಿಯೂ ಅದ್ದೂರಿ ಗಣೇಶೋತ್ಸವ ಆಚರಿಸಲು ಧಾರವಾಡ ಹೈಕೋರ್ಟ್ ಪೀಠ ಗ್ರೀನ್ ಸಿಗ್ನಲ್ ನೀಡಿದೆ. ಮೂರು ದಿನಗಳ ಕಾಲ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಪಾಲಿಕೆ ನೀಡಿದ್ದ ಅನುಮತಿಯನ್ನು ಪ್ರಶ್ನಿಸಿ ಅಂಜುಮನ್ ಇಸ್ಲಾಂ ಸಂಸ್ಥೆಯು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾಗೊಳಿಸಿದೆ. ಹುಬ್ಬಳ್ಳಿ ಈದ್ಗಾ ಮೈದಾನ ಮುಸ್ಲಿಮರಿಗೆ ಪ್ರಾರ್ಥನೆ ಮಾಡುವುದಕ್ಕೆ ಮಾತ್ರ ಇರುವ ಮೈದಾನ. ಇಲ್ಲಿ ಬೇರೆ ಧರ್ಮದ ಆಚರಣೆಗೆ ಅವಕಾಶ ನೀಡಬಾರದು ಎಂದು ಹುಬ್ಬಳ್ಳಿ ಅಂಜುಮನ್ […]

Continue Reading

ಸ್ಮಶಾನ, ಖಬರಸ್ಥಾನಗಳಿಗೆ 3 ತಿಂಗಳೊಳಗೆ ಜಾಗ ನೀಡಿ: ಡಿಸಿ, ಸಿಇಒಗಳಿಗೆ ಸಿಎಂ ಖಡಕ್ ವಾರ್ನಿಂಗ್

ವಿಧಾನ ಸೌಧದಲ್ಲಿ ಬುಧವಾರ ಡಿಸಿ ಮತ್ತು ಸಿಇಒಗಳ ಸಭೆ ನಿರಂತರ 8 ಗಂಟೆಗಳ ಕಾಲ ನಡೆದಿದ್ದು ಇದರಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಖಡಕ್ ಸೂಚನೆಗಳನ್ನು ನೀಡಿದ್ದಾರೆ. ರಾಜ್ಯದಲ್ಲಿರುವ ಸ್ಮಶಾನ ಮತ್ತು‌ ಖಬರ್ ಸ್ಥಾನಗಳಿಗೆ ಮೂರು ತಿಂಗಳಲ್ಲಿ ಜಾಗ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ‌ ಸಭಾಂಗಣದಲ್ಲಿ ನಡೆಯುತ್ತಿರುವ ಎರಡನೇ ದಿನದ ಡಿಸಿ ಮತ್ತು ಸಿಇಒ ಗಳ ಸಭೆಯಲ್ಲಿ ಈ ಸೂಚನೆ ನೀಡಿದರು. ಬುಧವಾರವೂ […]

Continue Reading