ಬಜೆಟ್ ಮಂಡಿಸಲು ಸಿದ್ದು-ಡಿಕೆಶಿ ರೆಡಿ; ಡಿಕೆಶಿಯ ವೈಬ್ರೆಂಟ್ ಕರ್ನಾಟಕದ ಕನಸು

ಯುದ್ಧಕ್ಕೆ ಸಜ್ಜಾದ ಮಿತ್ರರು; ಯಡಿಯೂರಪ್ಪ ಶಿಕಾರಿಪುರದಲ್ಲೇ ಸೆಟ್ಲ್ ✍️ .ಆರ್. ಟಿ. ವಿಠ್ಠಲಮೂರ್ತಿ ಮೊನ್ನೆ ದಿಲ್ಲಿಯಿಂದ ಬಂದ ವರ್ತಮಾನದ ಪ್ರಕಾರ ಕಾಂಗ್ರೆಸ್ ವರಿಷ್ಟರು ಚಿಂತೆಗೆ ಬಿದ್ದಿದ್ದಾರೆ. ಈ ಮುಂಚೆ ರಾಹುಲ್ ಗಾಂಧಿ ಅವರಿಗಷ್ಟೇ ಸೀಮಿತವಾಗಿದ್ದ ಈ ಚಿಂತೆ ಈಗ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನೂ ಸುತ್ತಿಕೊಂಡಿದೆ.ಅಂದ ಹಾಗೆ ಒಪ್ಪಂದದ ಪ್ರಕಾರ, ಎರಡೂವರೆ ವರ್ಷಗಳ ನಂತರ ನನಗೆ ಸಿಎಂ ಹುದ್ದೆ‌ ಕೊಡಿಸಬೇಕು ಅಂತ ಡಿಸಿಎಂ ಡಿ.ಕೆ. ಶಿವಕುಮಾರ್‌ ಹಾಕಿದ ಪಟ್ಟು ರಾಹುಲ್ ಗಾಂಧಿಯವರ ಚಿಂತೆಗೆ ಕಾರಣವಾಗಿತ್ತು. ಯಾಕೆಂದರೆ […]

Continue Reading

ಕಟ್ಟಡ ಲೈಸೆನ್ಸ್, ಭೂ ಪರಿವರ್ತನೆಗಾಗಿ ಜನಸಾಮಾನ್ಯ ಆರು ಸರಕಾರಿ ಕಚೇರಿ ಅಲೆದಾಡುವಂತಾಗಿದೆ..

ಸರಕಾರ ಕಾನೂನನ್ನು ಸರಳೀಕರಣ ಗೊಳಿಸಲಿ.. ನಿವೇಶನ ವಿನ್ಯಾಸದ ಅನುಮೋದನೆ ಗ್ರಾಮ ಪಂಚಾಯತ್ ಗೆ ನೀಡಲಿ.. ಸರಕಾರದ ಗಮನ ಸೆಳೆದ ಎಂಎಲ್ಸಿ ಕಿಶೋರ್ ಕುಮಾರ್ ಪುತ್ತೂರು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಜನತೆ ತನ್ನ ಸ್ವಂತ ಜಮೀನಿನಲ್ಲಿ ಮನೆ ನಿರ್ಮಿಸಲು ಮುಂದಾದಾಗ ಸರ್ಕಾರದ ವಿವಿಧ ಇಲಾಖೆಗಳ ಅನುಮೋದನೆ ಪಡೆಯಲು ಕಷ್ಟ ಪಡಬೇಕಾಗಿದೆ. ಭೂ ಅಭಿವೃದ್ಧಿ ಹಾಗೂ ಕಟ್ಟಡ ಲೈಸೆನ್ಸ್ ಪಡೆಯುವ ಸಂದರ್ಭದಲ್ಲೂ ಗಂಭೀರ ಸಮಸ್ಯೆ ಎದುರಿಸುವಂತಾಗಿದೆ ಎಂದು ಬೆಳಗಾವಿ ಅಧಿವೇಶನದ ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ […]

Continue Reading

ಡಿಜಿಟಲ್ ಅರೆಸ್ಟ್ ಮಹಾ ವಂಚಕರಿಗೆ ತನ್ನ ಸ್ವಂತ ನಿವೇಶನವನ್ನೇ ಮಾರಿ ಎರಡು ಕೋಟಿ ಕೊಟ್ಟ ಸಾಫ್ಟವೇರ್ ಇಂಜನಿಯರ್.!, ಶಿಕ್ಷಿತ ವರ್ಗವೇ ಗುಂಡಿಗೆ ಬೀಳುತ್ತಿದ್ದಾರೆ.. ಜೋಕೆ

ಅನಕ್ಷರಸ್ಥರು, ಹೆಬ್ಬೆಟ್ಟು ದಾಸರು ಮೋಸದ ಜಾಲಕ್ಕೆ ಬಲಿಯಾಗುವ ಮುನ್ನ ಹತ್ತಾರು ಬಾರಿ ಯೋಚಿಸುತ್ತಾರೆ. ಇದರಲ್ಲಿ ನಿಜ ಯಾವುದು? ಸುಳ್ಳು ಯಾವುದು? ಎಂಬ ಬಗ್ಗೆ ಅವರಿಗೆ ಕನಿಷ್ಠ ಜ್ಞಾನವಂತೂ ಇದೆ. ಆದರೆ ನಾವು ಮಹಾ ಬುದ್ಧಿವಂತರು, ಶಿಕ್ಷಿತರು ಅನ್ನುವ ಕೆಲವರಂತೂ ಲೋಕ ಜ್ಞಾನ ಇಲ್ಲದೆ ಮಹಾ ವಂಚನೆಗೆ ಸುಲಭವಾಗಿ ತುತ್ತಾಗುತ್ತಿದ್ದಾರೆ. ಹೆಸರಿಗೆ ಇಂಜಿನಿಯರ್, ಡಾಕ್ಟರ್, ಅನ್ನುವ ಮಾಸ್ಟರ್ ಡಿಗ್ರಿ ಅಂತೂ ಇದೆ. ಅಕ್ಷರ ಜ್ಞಾನವಿಲ್ಲದ ಅನಕ್ಷರಸ್ಥರಿಗಿಂತಲೂ ಶಿಕ್ಷಿತ ವರ್ಗ ಕಡೆಯಾಗಿ ಹೋದರಲ್ಲ.. ಇಲ್ಲೊಬ್ಬರು ಸಾಫ್ಟ್ ವೇರ್ ಇಂಜಿನಿಯರ್ ಡಿಜಿಟಲ್ […]

Continue Reading

ವಕ್ಫ್ ಅಧ್ಯಕ್ಷ ರೇಸ್‍ನಲ್ಲಿ ಯಾರ್ಯಾರು?, ಎಲ್ಲರ ಚಿತ್ತ.. ವಕ್ಫ್ ಇಲಾಖೆಯತ್ತ..

ಪ್ರಭಾವೀ ಬ್ಯಾರಿ ನಾಯಕನ ಒಲವು ಯಾರ ಕಡೆ? ನಿಗಮ ಮಂಡಳಿಗಳ ಗಡಿಬಿಡಿ ಬಹುತೇಕ ಮುಗಿದಿದೆ. ಈಗ ಏನಿದ್ದರೂ ರಾಜ್ಯದಲ್ಲಿ ಸಿಎಂ ಸಿದ್ಧರಾಮಯ್ಯ ಪೂರ್ಣಾವಧಿ ಸಿಎಂ ಆಗುತ್ತಾರೋ? ಡಿಕೆಶಿ ಸಿಎಂ ಆಗುತ್ತಾರೋ ಅನ್ನುವ ಕುತೂಹಲ ಗರಿಗೆದರಿದೆ. ಈ ಮಧ್ಯೆ ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅವಧಿ ಮುಗಿದು ಎರಡು ತಿಂಗಳಾಗುತ್ತಾ ಬಂದಿದೆ. ಜಿಲ್ಲಾ ವಕ್ಫ್ ಸಮಿತಿಗೆ ಅಧ್ಯಕ್ಷರಾಗುವ ಕನಸಿನಲ್ಲಿ ಹಲವರು ತೆರೆಮರೆಯ ಲಾಬಿ ನಡೆಸುತ್ತಿದ್ದಾರೆ ಅನ್ನುವ ಸಮಾಚಾರಗಳು ಸಿಗತೊಡಗಿದೆ. ಈ ಹಿಂದೆ ಬಿಜೆಪಿ ಸರಕಾರದ ಅವಧಿಯಲ್ಲಿ ಜಿಲ್ಲಾ […]

Continue Reading

ನಿಖಿಲ್ ಪತ್ತೆ ಮಾಡಿದ ಚಿದಂಬರ ರಹಸ್ಯ…!!

ಬಿಜೆಪಿ ಭಿನ್ನರ ಲೇಟೆಸ್ಟು ಚಿಂತೆ; ನಡ್ಡಾಗೆ ತಲುಪಿದ ಕಂಪ್ಲೇಂಟು ಪಟ್ಟಿ ಆರ್.ಟಿ.ವಿಠ್ಟಲಮೂರ್ತಿ* ಇತ್ತೀಚೆಗೆ ದಿಲ್ಲಿಯ ಎಐಸಿಸಿ ಪಡಸಾಲೆಯಿಂದ ಬರುತ್ತಿರುವ ಒಂದು ವರ್ತಮಾನ ಸಿಎಂ ಸಿದ್ದರಾಮಯ್ಯ ಅವರ ಪಾಳಯಕ್ಕೆ ಹಿತಕರವಾಗಿ ಕೇಳಿಸುತ್ತಿಲ್ಲ‌.ಹಾಗಂತ ಸಿಎಂ ಬದಲಾವಣೆ ಆಗಿ ಬಿಡುತ್ತದೆ ಅಂತಲೂ ಅವರು ಭಾವಿಸಿಲ್ಲ. ಯಾಕೆಂದರೆ, ಪಕ್ಷದ ವರಿಷ್ಟ ರಾಹುಲ್ ಗಾಂಧಿ ಅವರ ಇದುವರೆಗಿನ ಹೆಜ್ಜೆಗಳಲ್ಲಿ ಸಣ್ಣ ಅನುಮಾನವೂ ಅವರಿಗೆ ಗೋಚರಿಸಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಕೆಲ ಕಾಲದ ಹಿಂದೆ ದಿಲ್ಲಿಯಲ್ಲಿ ನಡೆದ ಪಕ್ಷದ ಸಮಾವೇಶವೊಂದರಲ್ಲಿ ಸಿಎಂ ಸಿದ್ಧರಾಮಯ್ಯ ಅವರ ಬಗ್ಗೆ ರಾಹುಲ್ […]

Continue Reading

ಅನ್ನದಾತರ ಆತ್ಮಹತ್ಯೆಯಲ್ಲಿ ಕರ್ನಾಟಕಕ್ಕೆ ಎರಡನೇ ಸ್ಥಾನ. 30 ತಿಂಗಳಲ್ಲಿ 2809 ರೈತರು ಆತ್ಮಹತ್ಯೆ

ದೇಶದಲ್ಲಿ ಅತೀ ಹೆಚ್ಚು ರೈತರ ಆತ್ಮಹತ್ಯೆ ಪಟ್ಟಿಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿ ಮುಂದುವರೆದಿದೆ. ಕಳೆದ ಎರಡೂವರೆ ವರ್ಷದಲ್ಲಿ ಒಟ್ಟು 2809 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೃಷಿ ಇಲಾಖೆ ಪ್ರಕಾರ 2023-24 ರಲ್ಲಿ 1,254 ರೈತರು, 2024-25 ರಲ್ಲಿ 1178 ರೈತರು, 2025 ನವೆಂಬರ್ ವರೆಗೆ 377 ರೈತರ ಆತ್ಮಹತ್ಯೆ ಕೇಸು ವರದಿಯಾಗಿದೆ. ದೇಶದಲ್ಲಿ ಇದೀಗ ಕರ್ನಾಟಕ ರಾಜ್ಯ ಅನ್ನದಾತರ ಆತ್ಮಹತ್ಯೆಯಲ್ಲಿ ಎರಡನೇ ಸ್ಥಾನ ಪಡೆದಿರುವುದು ಆತಂಕಕ್ಕೆ ಕಾರಣವಾಗಿದೆ. ಜಿಲ್ಲಾವಾರು ನೋಡುವುದಾದರೆ ಕಳೆದ ಎರಡೂವರೆ ವರ್ಷಗಳಲ್ಲಿ ಹಾವೇರಿ ಜಿಲ್ಲೆ […]

Continue Reading

ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚು

ಅಸುರಕ್ಷಿತ ನಡೆನುಡಿಗೆ ಒಳಗಾಗಿ 22 ವರ್ಷ ಒಳಗಿನ ಯುವ ಜನತೆ ಎಚ್‌ಐವಿ ಬಲೆಗೆ ಬೀಳುತ್ತಿದ್ದಾರೆ ವೈದ್ಯಕೀಯ ಲೋಕಕ್ಕೆ ಸವಾಲಾಗಿರುವ ಎಚ್‌ಐವಿ ಸೋಂಕಿಗೆ ಒಳಗಾಗುತ್ತಿರುವವರಲ್ಲಿ ಯುವ ಜನರ ಸಂಖ್ಯೆಯೇ ಹೆಚ್ಚಾಗುತ್ತಿರುವ ಆತಂಕಕಾರಿ ಸಂಗತಿಯೊಂದು ಆರೋಗ್ಯ ಇಲಾಖೆಯ ಅಂಕಿ-ಅಂಶಗಳಿಂದ ಬೆಳಕಿಗೆ ಬಂದಿದೆ. ಉತ್ತರ ಕನ್ನಡ ತಾಲೂಕಿನಲ್ಲಿ 2025ನೇ ಸಾಲಿನ ಶೇ.66.33 ರಷ್ಟು ಪ್ರಕರಣದಲ್ಲಿ ಯುವ ಜನತೆಯಲ್ಲೆ ಎಚ್‌ಐವಿ ಸೋಂಕು ದೃಢಪಟ್ಟಿದೆ. ಇದರಲ್ಲಿ 22 ವರ್ಷದ ಒಳಗಿನ ವಯಸ್ಸಿನ ಯುವ ಜನತೆ ಎನ್ನುವುದು ವಿಶೇಷವಾಗಿ ಗಮನ ಸೆಳೆದಿದೆ. ಅಂಕೋಲಾ ತಾಲೂಕಿನಲ್ಲಿ ಒಟ್ಟು […]

Continue Reading

ರಾಜ್ಯಾದ್ಯಂತ ಏಕರೂಪದ ರಿಯಾಯಿತಿ. ಅನಧಿಕೃತ ವಸತಿ ಕಟ್ಟಡಗಳಿಗೆ ಪಂಚಾಯತ್ ವ್ಯಾಪ್ತಿಯಲ್ಲೂ ‘ಓಸಿ’ ನಿಯಮದಿಂದ ವಿನಾಯಿತಿ; ಸಚಿವ ಸಂಪುಟ ತೀರ್ಮಾನ

ನಗರ ಪ್ರದೇಶಗಳ ಮಾದರಿಯಲ್ಲಿಯೇ ಇದೀಗ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಅನಧಿಕೃತ ವಸತಿ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಪಡೆಯಲು ಕಡ್ಡಾಯವಾಗಿದ್ದ ‘ಸ್ವಾಧೀನಾನುಭವ ಪ್ರಮಾಣಪತ್ರ’ (OC) ನಿಯಮದಿಂದ ವಿನಾಯಿತಿ ನೀಡಲು ರಾಜ್ಯ ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದ್ದು, ಇದರಿಂದ ಲಕ್ಷಾಂತರ ಗ್ರಾಮೀಣ ಕುಟುಂಬಗಳಿಗೆ ಅನುಕೂಲವಾಗಲಿದೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 1200 ಚದರ ಅಡಿ (30×40 ಅಡಿ) ವಿಸ್ತೀರ್ಣದವರೆಗಿನ ನಿವೇಶನಗಳಲ್ಲಿ ನಿರ್ಮಿಸಲಾಗಿರುವ ವಸತಿ […]

Continue Reading

ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ 2026ರ ಏಪ್ರಿಲ್ ತಿಂಗಳಲ್ಲಿ ಚುನಾವಣೆ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ತಿರ್ಮಾನ

ರಾಜ್ಯದಲ್ಲಿ ಜಿಲ್ಲಾ ಪಂಚಾಯಿತ್, ತಾಲೂಕು ಪಂಚಾಯಿತ್ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಗ್ರಾಮ ಪಂಚಾಯತ್, ತಾಲೂಕು ಮತ್ತು ಜಿಲ್ಲಾ ಪಂಚಾಯತ್, ವಿವಿಧ ಪುರಸಭೆ ಹಾಗೂ ನಗರಸಭೆ ಸೇರಿ ದಂತೆ 6500ಕ್ಕೂ ಹೆಚ್ಚು ನಗರ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 2026ರ ಏಪ್ರಿಲ್ ತಿಂಗಳಲ್ಲಿ ನಡೆಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಳೆದ ನಾಲ್ಕು ವರ್ಷಗಳಿಂದ ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಚುನಾವಣೆ ನಡೆದಿರಲಿಲ್ಲ. […]

Continue Reading

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಮಧ್ಯವರ್ತಿಗಳು ಕಂಡುಬಂದರೆ, ಸಂಬಂಧಪಟ್ಟ ಅಧಿಕಾರಿಗಳು ಸಸ್ಪೆಂಡ್: ಸಾರಿಗೆ ಸಚಿವರು

ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ (ಆರ್​​ಟಿಒ) ಮಧ್ಯವರ್ತಿಗಳು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಹೊಣೆಯಾಗಿಸಿ ಅವರನ್ನು ಸಸ್ಪೆಂಡ್ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದ್ದಾರೆ. ವಿಧಾನ ಪರಿಷತ್​ ಸದಸ್ಯ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆರ್​ಟಿಒನಲ್ಲಿ ಸಾಕಷ್ಟು ಸುಧಾರಣಾ ಕ್ರಮಗಳನ್ನ ಕೈಗೊಳ್ಳಲಾಗುತ್ತಿದೆ. ಪರವಾನಗಿ, ಕಲಿಕಾ ಪರವಾನಗಿ ಸೇರಿದಂತೆ 24 ಸೇವೆಗಳನ್ನು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸುವಂತೆ ಅವಕಾಶ ಕಲ್ಪಿಸುವಂತೆ ಮಾಡಲಾಗಿದೆ. ಆದಾಗ್ಯೂ ಆರ್​ಟಿಒ ಕಚೇರಿಗಳಲ್ಲಿ ಮಧ್ಯವರ್ತಿಗಳು ಇರುವುದು ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಯನ್ನು ಜವಾಬ್ದಾರಿಯನ್ನಾಗಿ ಮಾಡಿ […]

Continue Reading