ಡಿಐಜಿ ಆತ್ಮಹತ್ಯೆ: ಮಾನಸಿಕ ಖಿನ್ನತೆಯೇ ಕಾರಣ, ಪ್ರಾಥಮಿಕ ತನಿಖೆಯಲ್ಲಿ ಬಹಿರಂಗ
ಕೊಯಮತ್ತೂರು ವೃತ್ತದ ಪೊಲೀಸ್ ಉಪ ಮಹಾನಿರೀಕ್ಷಕ ಸಿ.ವಿಜಯಕುಮಾರ್ ಅವರು ಇಂದು ಬೆಳಗ್ಗೆ ನಗರದ ರೆಡ್ಫೀಲ್ಡ್ಸ್ನಲ್ಲಿರುವ ತಮ್ಮ ಮನೆಯಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಕೊಯಮತ್ತೂರು ನಗರದ ರೆಡ್ ಫೀಲ್ಡ್ಸ್ನಲ್ಲಿರುವ ಅವರ ಕ್ವಾರ್ಟರ್ಸ್ನಲ್ಲಿ ತಮ್ಮ ಕುಟುಂಬದೊಂದಿಗೆ ವಾಸಿಸುತ್ತಿದ್ದ ಅವರು,ಬೆಳಗ್ಗೆ 6.15ರ ಸುಮಾರಿಗೆ ತಮ್ಮ ಸರ್ವಿಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೊಯಮತ್ತೂರು ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.2009ರ ಬ್ಯಾಚ್ನ […]
Continue Reading